Connect with us

DAKSHINA KANNADA

ಗಾಯದೊಳಗಿದ್ದ ಕಲ್ಲುಗಳ ಸಮೇತ ಸ್ಟಿಚ್‌ ಹಾಕಿದ ಕಡಬದ ಬೋದಾಳ ಸರ್ಕಾರಿ ವೈದ್ಯರು

Published

on

ಪುತ್ತೂರು: ಅಪಘಾತದಲ್ಲಿ ದೇಹದೊಳಗೆ ಸೇರಿದ್ದ ಕಲ್ಲು-ಮಣ್ಣನ್ನು ಶುಚಿಗೊಳಿಸಿ ಹೊರತೆಗೆಯದೆ ಅದರ ಮೇಲೆಯೇ ಸ್ಟಿಚ್‌ ಹಾಕಿದ ಕಡಬ ಸರ್ಕಾರಿ ಆಸ್ಪತ್ರೆಯ ಸಿಬ್ಬಂದಿ ಬೇಜಾವಾಬ್ದಾರಿ ತೋರಿದ ಪರಿಣಾಮ ಗಾಯ ಉಲ್ಬಣಗೊಂಡು ಇದೀಗ ಶಸ್ತ್ರಚಿಕಿತ್ಸೆ ಮೂಲಕ ಕಲ್ಲು ಹೊರತೆಗೆದಿದ್ದಾರೆ.

ಈ ಮೂಲಕ ಸರ್ಕಾರಿ ಸಂಬಳ ಪಡೆದು ತಿಂದು ತೇಗಿ ಪ್ರಾಣದ ಜೊತೆ ಚೆಲ್ಲಾಟವಾಡುವ ಸಿಬ್ಬಂದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.


ಕಡಬದ ಕೋಡಿಂಬಾಳ ಗ್ರಾಮದ ಕಲ್ಪುರೆ ನಿವಾಸಿ, ಪುರುಷೋತ್ತಮ ಎಂಬುವರು ಏ. 25 ರಂದು ರಾತ್ರಿ ಪತ್ನಿಯೊಂದಿಗೆ ಸಂಬಂಧಿಕರ ಮನೆಗೆಂದು ಹೊರಟಿದ್ದರು. ದಾರಿ ಮಧ್ಯೆ ಅವರ ಸ್ಕೂಟಿ ಸ್ಕಿಡ್ ಆಗಿ ಬಿದ್ದು, ಅವರ ಮೊಣಕಾಲಿಗೆ ಗಾಯವಾಗಿತ್ತು.

ಕೂಡಲೇ ಗಾಯಾಳುವನ್ನು ಸ್ಥಳೀಯರು ಸೇರಿ ಕಡಬ ಸಮುದಾಯ ಆಸ್ಪತ್ರೆಗೆ ಕರೆ ತಂದಿದ್ದರು. ಈ ವೇಳೆ ಆಸ್ಪತ್ರೆಯ ವೈದ್ಯರು ಪರಿಶೀಲಿಸಿ ಗಾಯಕ್ಕೆ ಸ್ಟಿಚ್ ಹಾಕುವಂತೆ ಸೂಚಿಸಿದ್ದರು.

ತಕ್ಷಣ ದಾದಿಯರು ಹಾಗೂ ಸಿಬ್ಬಂದಿ ಗಾಯಕ್ಕೆ ಸ್ಟಿಚ್ ಹಾಕಿ ಮನೆಗೆ ಕಳುಹಿಸಿದ್ದರು.


ಇದಾದ ವಾರದ ಬಳಿಕವೂ ಪುರುಷೋತ್ತಮ ಅವರ ಗಾಯ ಗುಣವಾಗದೆ, ಉಲ್ಬಣಗೊಂಡಿತ್ತು. ಇದರಿಂದ ಅನುಮಾನಗೊಂಡ ಪುರುಷೋತ್ತಮ ಅವರು ಮೇ. 4ರಂದು ಡಯಾಗ್ನಸ್ಟಿಕ್ ಸೆಂಟರ್‌ನಲ್ಲಿ ಗಾಯದ ಎಕ್ಸ್‌ರೇ ತೆಗೆಸಿದ್ದರು.

ನಂತರ ಕ್ಲಿನಿಕ್‌ನಲ್ಲಿದ್ದ ವೈದ್ಯರು ಎಕ್ಸರೇ ಪರಿಶೀಲಿಸಿ ಕೂಡಲೇ ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಿದ್ದರು.

ಈ ಹಿನ್ನೆಲೆಯಲ್ಲಿ ಪುರುಷೋತ್ತಮ ಅವರು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.


ಆಸ್ಪತ್ರೆಯಲ್ಲಿ ಮೇ 4 ರಂದು ರಾತ್ರಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಈ ವೇಳೆ ವೈದ್ಯರಿಗೆ ಬರೋಬ್ಬರಿ 14 ಕಲ್ಲುಗಳು ದೊರೆತಿದೆ.

ಏ. 25 ರಂದು ಸರ್ಕಾರದಿಂದ ಸಂಬಳ ಪಡೆಯುವ ಆಸ್ಪತ್ರೆಯ ಸಿಬ್ಬಂದಿ ಕಾಟಾಚಾರಕ್ಕೆ ಗಾಯ ಶುಚಿಗೊಳಿಸದೆ ಸ್ಟಿಚ್‌ ಹಾಕಿ ಪ್ರಾಣದ ಜೊತೆ ಚೆಲ್ಲಾಟವಾಡಿದ್ದರು.

ಇವರ ಬೇಜಾಬ್ದಾರಿತನದಿಂದ ಒಂದು ವೇಳೆ ಗಾಯ ಮತ್ತಷ್ಟು ಉಲ್ಬಣಗೊಂಡಿದ್ದರೆ ಕಾಲನ್ನೇ ಕತ್ತರಿಸುವ ಮಟ್ಟಕ್ಕೆ ಹೋಗುತ್ತಿತ್ತು ಅನ್ನುತ್ತಾರೆ ಗಾಯಾಳು ಸಂಬಂಧಿಗಳು.

ಘಟನೆ ಬಗ್ಗೆ ಪುತ್ತೂರು ತಾಲೂಕು ಆರೋಗ್ಯಾಧಿಕಾರಿ ಡಾ. ದೀಪಕ್ ರೈ, ಕಡಬ ಪ್ರತಿಕ್ರಿಯಿಸಿ ಪ್ರಕರಣದ ಕುರಿತು ಸ್ಥಳೀಯ ವೈದ್ಯಾಧಿಕಾರಿಯಿಂದ ಮಾಹಿತಿ ಪಡೆದುಕೊಂಡು ಅಗತ್ಯ ಕ್ರಮಕ್ಕಾಗಿ ಇಲಾಖೆಯ ಉನ್ನತಾಧಿಕಾರಿಗಳಿಗೆ ವರದಿ ಕಳುಹಿಸಿಕೊಡಲಾಗುವುದು ಎಂದಿದ್ದಾರೆ.

DAKSHINA KANNADA

‘ಯತೀಮ್’ ಬ್ಯಾರಿ ಕಾದಂಬರಿ ಬಿಡುಗಡೆ; ‘ಮಾರ್ದನಿ’ ವೆಬ್‌ಸೈಟ್ ಲೋಕಾರ್ಪಣೆ

Published

on

ಮಂಗಳೂರು : ಯೆನೆಪೋಯ ಇನ್ಸಿಟ್ಯೂಟ್ ಆಫ್ ಆರ್ಟ್ಸ್ ಸೈನ್ಸ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್‌ನ ಸಹಾಯಕ ಪ್ರಾಧ್ಯಾಪಕ ನಿಯಾಝ್ ಪಡೀಲ್ ರಚಿಸಿದ ಕನ್ನಡ ಕಾದಂಬರಿಯ ಬ್ಯಾರಿ ಅನುವಾದಿತ ‘ಯತೀಮ್ಕೃತಿ ಬಿಡುಗಡೆ ಕಾರ್ಯಕ್ರಮ ಕೂಳೂರಿನಲ್ಲಿರುವ ಯೆನೆಪೋಯ ಕಾಲೇಜಿನ ವೈ.ಎಂ.ಕೆ ಸಭಾಂಗಣದಲ್ಲಿ  ನಡೆಯಿತು.

ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಯು.ಎಚ್. ಉಮರ್ ಕನ್ನಡ ಕಾದಂಬರಿಯ ಬ್ಯಾರಿ ಅನುವಾದಿತ ‘ಯತೀಮ್ ಕೃತಿ ಬಿಡುಗಡೆಗೊಳಿಸಿದರು‌.

ಯೆನೆಪೋಯ ಇನ್ಸಿಟ್ಯೂಟ್ ಆಫ್ ಆರ್ಟ್ಸ್ ಸೈನ್ಸ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್‌ನ ‘ಮಾರ್ದನಿ’  ಕನ್ನಡ ಜರ್ನಲ್ ವೆಬ್‌ಸೈಟ್‌ ಅನ್ನು ಉಜಿರೆ ಎಸ್‌ಡಿಎಂ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ರಾಜಶೇಖರ ಹಳೆಮನೆ ಲೋಕಾರ್ಪಣೆಗೊಳಿಸಿದರು. ಯೆನೆಪೋಯ ಇನ್ಸಿಟ್ಯೂಟ್ ಆಫ್ ಆರ್ಟ್ಸ್ ಸೈನ್ಸ್ ಕಾಮರ್ಸ್ ಆ್ಯಂಡ್ ಮ್ಯಾನೇಜ್‌ಮೆಂಟ್‌ನ ಪ್ರಾಂಶುಪಾಲ ಡಾ. ಅರುಣ್ ಎ. ಭಾಗವತ್ ಅಧ್ಯಕ್ಷತೆ ವಹಿಸಿದ್ದರು.

ಕೃತಿಯ ಅನುವಾದಕ ಅಬ್ದುಲ್ ರಹಿಮಾನ್ ಕುತ್ತೆತ್ತೂರು, ಅಖಿಲ ಭಾರತ ಬ್ಯಾರಿ ಪರಿಷತ್ ಮಹಿಳಾ ಘಟಕದ ಅಧ್ಯಕ್ಷೆ ಶಮೀಮಾ ಕುತ್ತಾರ್, ಉಪಪ್ರಾಂಶುಪಾಲೆ ಡಾ. ಶರೀನಾ ಪಿ.,ಮೊದಲಾದವರು ಉಪಸ್ಥಿತರಿದ್ದರು. ಬ್ಯಾರಿ ಅಧ್ಯಯನ ಪೀಠದ ಸದಸ್ಯ ಹಂಝ ಮಲಾರ್ ಕೃತಿ ಪರಿಚಯ ಮಾಡಿದರು. ಸಹಾಯಕ ಪ್ರಾಧ್ಯಾಪಕ ಡಾ. ದಿನಕರ ಪಚ್ಚನಾಡಿ ‘ಮಾರ್ದನಿಯ ಬಗ್ಗೆ ಮಾಹಿತಿ ನೀಡಿದರು.

ಇದನ್ನೂ ಓದಿ : Watch Video: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಸ್ ನಿರ್ವಾಹಕನ ಅಸಭ್ಯ ವರ್ತನೆ

ವಿದ್ಯಾರ್ಥಿ ಸಲ್ವಿತ್ ಅಹ್ಮದ್ ಪ್ರಾರ್ಥಿಸಿದರು. ಕೃತಿಯ ಲೇಖಕ ನಿಯಾಝ್ ಪಡೀಲ್ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ರಝೀನಾ ವಂದಿಸಿದರು. ಶಹ್ಲಾ ಅಬ್ದುಲ್ ರಹ್ಮಾನ್ ಕಾರ್ಯಕ್ರಮ ನಿರೂಪಿಸಿದರು.

Continue Reading

BELTHANGADY

ಬೆಳ್ತಂಗಡಿ: ಮನೆಗೆ ನುಗ್ಗಿ ಚಿನ್ನಾಭರಣ ಸಹಿತ ನಗದನ್ನು ದೋಚಿ ಪರಾರಿಯಾದ ಕಳ್ಳ

Published

on

ಬೆಳ್ತಂಗಡಿ: ರಾತ್ರಿಯ ವೇಳೆ ಮನೆಮಂದಿ ಎಲ್ಲಾ ನಿದ್ದೆಗೆ ಜಾರಿದ ಸಂದರ್ಭದಲ್ಲಿ ಮನೆಗೆ ನುಗ್ಗಿ ಕಳ್ಳತನ ನಡೆಸಿ ಚಿನ್ನಾಭರಣ ಸಹಿತ ನಗದುಗಳನ್ನು ದೋಚಿಕೊಂಡು ಹೋಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರುವಿನ ಮನೆಯಲ್ಲಿ ಏ.23ರಂದು ರಾತ್ರಿ ನಡೆದಿದೆ.

ಗುತ್ತು ಮನೆ ನಿವಾಸಿ ಮುಸ್ತಫಾ ರವರ ಮನೆಗೆ ಕಳ್ಳರು ಹಿಂಬದಿ ಬಾಗಿಲಿನಿಂದ ಬೀಗ ಮುರಿದು ಮನೆಯೊಳಗೆ ಬಂದದ್ದು ಮಾತ್ರವಲ್ಲದೇ ಸುಮಾರು 5 ಪವನ್ ನಷ್ಟು ಚಿನ್ನ, ಮೂರು ಸಾವಿರ ರೂಪಾಯಿ ನಗದುಗಳನ್ನು ಕಳವುಗೈದು ಪರಾರಿಯಾಗಿದ್ದಾರೆ.

ನಿನ್ನೆ ಸುಮಾರು ಮೂರರಿಂದ ನಾಲ್ಕುಗಂಟೆ ಹೊತ್ತಿಗೆ ಈ ಘಟನೆ ನಡೆದಿದೆ ಎಂದು ಮನೆಯವರು ತಿಳಿಸಿದ್ದಾರೆ. ಅಲ್ಲದೇ ಮನೆಯ ಬ್ಯಾಗ್‌ಗಳನ್ನು ಕದ್ದುಕೊಂಡು ಹೋಗಿದ್ದು, ಬಳಿಕ ಅದರಲ್ಲಿ ಏನೂ ಇಲ್ಲದ್ದನ್ನು ನೋಡಿ ಪಕ್ಕದ ಅಂಗಳದಲ್ಲಿ ಬಿಸಾಕಿ ಹೋಗಿದ್ದಾರೆ.

ಇದೇ ಸಂದರ್ಭದಲ್ಲಿ ತೆಕ್ಕಾರುವಿನ ಕೋಡಿ ನಿವಾಸಿ ಅನ್ವರ್ ಎಂಬವರ ಮನೆಗೂ ಕಳ್ಳರು ನುಗ್ಗಿದ್ದು ಮನೆಯೊಳಗಡೆ ಕಪಾಟ್ ನ ಒಳಗಡೆಯಿದ್ದ ನಗದನ್ನು ದೋಚಿಕೊಂಡಿದ್ದು ಆದರೆ ಆಕಸ್ಮಾತ್ ಅವರ ಜೇಬಿಗೆ ಹಾಕುವ ಹಣವು ಕೆಳಗಡೆ ಬಿದ್ದಿದ್ದು ಬೆಳಿಗ್ಗೆ ಹೊತ್ತು ಮನೆಯವರು ನೀರು ಕುಡಿಯಲೆಂದು ಎದ್ದಾಗ ಕಳ್ಳತನ ನಡೆದ ಬಗ್ಗೆ ಅರಿವಾಗಿದೆ.

ಮನೆಯ ಹಿಂಬಾಗಿಲು ತೆರೆದ ಸ್ಥಿತಿಯಲ್ಲಿದ್ದು ದೋಚಿದ ಮೂರು ಸಾವಿರ ಹಣ ಅಂಗಳದಲ್ಲಿ ಬಿದ್ದು ಸಿಕ್ಕಿದೆ ಎಂದು ಅನ್ವರ್ ಮನೆಯವರು ತಿಳಿಸಿದ್ದಾರೆ. ಇದೇ ರೀತಿ ತೆಕ್ಕಾರು ವ್ಯಾಪ್ತಿಯ ಹಲವು ಮನೆಗಳಲ್ಲಿ ಕಳ್ಳತನ ನಡೆದಿದ್ದು ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ದೂರು ದಾಖಲಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Continue Reading

DAKSHINA KANNADA

ಬಸ್‌ನಲ್ಲಿ ಯುವತಿಯ ಮೈಮುಟ್ಟಿ ಅಸಭ್ಯ ವರ್ತನೆ; ಬಸ್ ನಿರ್ವಾಹಕನನ್ನು ಬಂಧಿಸಿದ ಕೊಣಾಜೆ ಪೊಲೀಸರು

Published

on

ಉಳ್ಳಾಲ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳ ಜೊತೆ ಅಸಭ್ಯವಾಗಿ ವರ್ತಿಸಿದ ಸರ್ಕಾರಿ ಬಸ್ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ.

ಮುಡಿಪು ಮಾರ್ಗವಾಗಿ ಸಂಚರಿಸುವ ಸರ್ಕಾರಿ ಬಸ್ ನಲ್ಲಿ ಯುವತಿಗೆ ಬಸ್ ನಿರ್ವಾಹಕ ಕಿರುಕುಳ ನೀಡಿದ್ದ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದರ ಆಧಾರದಲ್ಲಿ ಕೊಣಾಜೆ ಪೊಲೀಸರು ಎಫ್ ಐ ಆರ್ ದಾಖಲಿಸಿಕೊಂಡು ಆರೋಪಿ ನಿರ್ವಾಹಕನನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: Watch Video: ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಬಸ್ ನಿರ್ವಾಹಕನ ಅಸಭ್ಯ ವರ್ತನೆ

ಆರೋಪಿ ಪ್ರದೀಪ್ ಕಾಶಪ್ಪ ನಾಯ್ಕರ್ ಎಂದು ಗುರುತಿಸಲಾಗಿದ್ದು, ಆರೋಪಿಯ ವಿರುದ್ಧ ಬಿಎನ್ ಎಸ್ 75 ಮತ್ತು 76 ರಂತೆ ಲೈಂಗಿಕ ಕಿರುಕುಳದ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನೂ, ಈ ಘಟನೆ ವರದಿಯಾಗುತ್ತಿದ್ದಂತೆ ಕೆಎಸ್ಸಾರ್ಟಿಸಿ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳು ತಕ್ಷಣ ಕ್ರಮ ಕೈಗೊಂಡಿದ್ದು, ಆರೋಪಿ ನಿರ್ವಾಹಕ ಪ್ರದೀಪ್ ಕಾಶಪ್ಪ ನಾಯ್ಕ‌ರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page