Connect with us

DAKSHINA KANNADA

ತಿರುವು ಪಡೆದ ನಾ*ಪತ್ತೆ ಪ್ರಕರಣ..! ಕೊ*ಲೆಯಾದ ಸ್ಥಿತಿಯಲ್ಲಿ ಮೃ*ತ*ದೇಹ ಪತ್ತೆ..!

Published

on

ಮಂಗಳೂರು : ನವೆಂಬರ್ 27 ರಂದು ನಾಪತ್ತೆಯಾಗಿದ್ದ ಬಿಳಿನೆಲೆಯ ಸಂದೀಪ್ ಎಂಬ ಯುವಕನ ಮೃ*ತ ದೇಹ ಪತ್ತೆಯಾಗಿದೆ. ನಾಪತ್ತೆಯಾಗಿ ವಾರಗಳ ಬಳಿಕ ಗ್ರಾಮಸ್ಥರ ಒತ್ತಡಕ್ಕೆ ಮಣಿದ ಪೊಲೀಸರು ತನಿಖೆ ಆರಂಭಿಸಿ ಪ್ರಕರಣವನ್ನು ಬೇಧಿಸಿದ್ದಾರೆ. ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಈ ಪ್ರಕರಣದ ದೂರು ಸ್ವೀಕರಿಸಲು ಪೊಲೀಸರು ಮುಂದಾಗಿರಲಿಲ್ಲ. ಬಳಿಕ ರಾತೋರಾತ್ರಿ ಗ್ರಾಮಸ್ಥರು ಠಾಣೆಯ ಮುಂದೆ ಪ್ರತಿಭಟನೆ ನಡೆಸಿದ ಬಳಿಕ ಶಂಕಿತ ಆ*ರೋಪಿಯನ್ನು ವಶಕ್ಕೆ ಪಡೆಯಲಾಗಿತ್ತು.

                        ಆ*ರೋಪಿ ಪ್ರತೀಕ್‌

ಡಿಸೆಂಬರ್ 2 ರಂದು ಗ್ರಾಮಸ್ಥರ ಜೊತೆ ಠಾಣೆಗೆ ಆಗಮಿಸಿದ ಬಿಜೆಪಿ ನಾಯಕರು ತನಿಕೆಗೆ ಪೊಲೀಸರನ್ನು ಒತ್ತಾಯಿಸಿದ್ದರು. ಶಂಕಿತ ಆ*ರೋಪಿಯಾಗಿದ್ದ ಪ್ರತೀಕ್ ಎಂಬಾತನ್ನು ಪೊಲೀಸರು ತೀವ್ರ ವಿಚಾರಣೆ ನಡೆಸಿದಾಗ ಕೊ*ಲೆ ರಹಸ್ಯ ಬಯಲಾಗಿದೆ. ಬಳಿಕ ಆ*ರೋಪಿಯನ್ನು ಘಟನಾ ಸ್ಥಳಕ್ಕೆ ಕರೆದೊಯ್ದ ಪೊಲೀಸರು ಸಂದೀಪ್ ಮೃ*ತದೇಹ ಪತ್ತೆ ಹಚ್ಚಿದ್ದಾರೆ. ಕಡಬ ಸುಬ್ರಹ್ಮಣ್ಯ ರಸ್ತೆಯ ನಾರಡ್ಕ ಎಂಬ ಪ್ರದೇಶದಲ್ಲಿ ಸಂದೀಪ್‌ ಮೃ*ತದೇಹ ಪತ್ತೆಯಾಗಿದೆ. ಸಂದೀಪ್‌ನನ್ನು ಹ*ತ್ಯೆ ಮಾಡಿದ್ದ ಪ್ರತೀಕ್ ಪೆಟ್ರೋಲ್ ಸುರಿದು ಮೃ*ತದೇಹಕ್ಕೆ ಬೆಂಕಿ ಹಚ್ಚಿದ್ದ ಎಂಬುದು ಗೊತ್ತಾಗಿದೆ.

                         ಮೃ*ತ ಸಂದೀಪ್

 

ಮಳೆಯ ನಡುವೆಯೂ ಹ*ತ್ಯೆ ನಡೆದ ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸ್ಥರು ಜಮಾಯಿಸಿದ್ದು, ಇದರಲ್ಲಿ ಇನ್ನೂ ಅನೇಕ ಆ*ರೋಪಿಗಳು ಇರುವ ಶಂಕೆ ವ್ಯಕ್ತಪಡಿಸಿದ್ದಾರೆ. ಇದೊಂದು ಗಾಂ*ಜಾ ಅಮಲಿನಲ್ಲಿ ಅಥವಾ ಗಾಂ*ಜಾ ವ್ಯವಹಾರದಲ್ಲಿ ನಡೆದ ಕೊ*ಲೆಯಾಗಿರಬಹದು ಎಂದು ಆರೋಪ ಕೇಳಿ ಬಂದಿದೆ.

DAKSHINA KANNADA

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ನಟ ಪ್ರಭುದೇವ

Published

on

ಕಡಬ : ಇತ್ತೀಚೆಗೆ ಕರಾವಳಿಯ ದೇಗುಲಗಳಿಗೆ ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ. ಇತ್ತೀಚೆಗಷ್ಟೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಇಂದು (ಮಾ.15) ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.

ಪತ್ನಿ ಹಾಗೂ ಕುಟುಂಬ ವರ್ಗದವರ ಜೊತೆಗೂಡಿ ಆಗಮಿಸಿದ್ದ ಪ್ರಭುದೇವ ಮಹಾಭಿಷೇಕ ಪೂಜೆಯನ್ನು ನೆರವೇರಿಸಿ, ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ಸಂಪುಟ ನರಸಿಂಹಸ್ವಾಮಿ ಮಠಕ್ಕೆ ಭೇಟಿ ನೀಡಿದರು.

ಇದನ್ನೂ ಓದಿ : “ಗೋಲ್ಡನ್ ಮ್ಯಾಜಿಷಿಯನ್” ರಾಷ್ಟ್ರೀಯ ಜಾದೂ ಪ್ರಶಸ್ತಿ ಪಡೆದ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್‌

ಈ ಸಂದರ್ಭ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ  ಸುತಗುಂಡಿ ಅವರು ಪ್ರಭುದೇವ ದಂಪತಿಯನ್ನು ಶಾಲು ಹೊಂದಿಸಿ ಫಲಪುಷ್ಪ ನೀಡಿ ಗೌರವಿಸಿದರು. ಈ ವೇಳೆ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಮುಂತಾದವರು ಉಪಸ್ಥಿತರಿದ್ದರು.

Continue Reading

DAKSHINA KANNADA

“ಗೋಲ್ಡನ್ ಮ್ಯಾಜಿಷಿಯನ್” ರಾಷ್ಟ್ರೀಯ ಜಾದೂ ಪ್ರಶಸ್ತಿ ಪಡೆದ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್‌

Published

on

ಮಂಗಳೂರು: ಕರ್ನಾಟಕದ ಜಾದೂ ಕಲಾವಿದ ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್ ಅವರಿಗೆ ಆಂಧ್ರಪ್ರದೇಶದ ಇಂಡಿಯನ್ ಮ್ಯಾಜಿಕ್ ಅಸೋಶಿಯೇಶನ್ ಸಂಸ್ಥೆಯು ‘ಗೋಲ್ಡನ್ ಮ್ಯಾಜಿಷಿಯನ್’ ರಾಷ್ಟ್ರೀಯ ಜಾದೂ ಪ್ರಶಸ್ತಿ ನೀಡಿ ಗೌರವಿಸಿದೆ.

ಈ ಪ್ರಶಸ್ತಿಯು ಭಾರತದ ಅಗ್ರಗಣ್ಯ ಜಾದೂಗಾರ ಪಿ.ಸಿ.ಸೊರ್ಕಾರ್ ಜೂನಿಯರ್ ಸೇರಿದಂತೆ ದೇಶ-ವಿದೇಶದ ಹತ್ತು ಜಾದೂ ಸಾಧಕರಿಗೆ ಪ್ರಶಸ್ತಿಯನ್ನು ನೀಡಿದೆ. ವಿಶಾಖಪಟ್ಟಣದ ಲೋಕಸಭಾ ಸದಸ್ಯ ಭರತ್ ಮುತ್ತುಕುಮುಲಿ ಅವರು ಕುದ್ರೋಳಿ ಗಣೇಶ್‌ಗೆ ಪ್ರಶಸ್ತಿ ಪ್ರದಾನ ಮಾಡಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಕುದ್ರೋಳಿ ಗಣೇಶ್, ಬದಲಾಗುತ್ತಿರುವ ಅಭಿರುಚಿಗೆ ಹೊಂದುವಂತೆ ಪ್ರದರ್ಶನದಲ್ಲಿ ಹೊಸತನವನ್ನು ಜೋಡಿಸಿಕೊಳ್ಳೋಣ ಎಂದು ಭಾರತೀಯ ಜಾದೂಗಾರರಿಗೆ ಕರೆ ನೀಡಿದರು. ಜಾದೂ ಕಲೆಯ ಅಭಿವೃದ್ಧಿಗಾಗಿ ಜಾದೂ ಕಲೆಗೆ ಸಾಂಸ್ಥಿಕ ರೂಪ ದೊರೆಯಬೇಕಾಗಿದೆ ಎಂದರು.

ಕುದ್ರೋಳಿ ಗಣೇಶ್ ಅವರು ಮೂವತ್ತಕ್ಕೂ ಅಧಿಕ ವರ್ಷಗಳಿಂದ ಜಾದೂರಂಗದಲ್ಲಿದ್ದು, ದೇಶದಾದ್ಯಂತ ಹಾಗೂ ವಿದೇಶದ 15 ರಾಷ್ಟ್ರಗಳಲ್ಲಿ 2,300 ಕ್ಕೂ ಹೆಚ್ಚು ಜಾದೂ ಪ್ರದರ್ಶನ ನೀಡಿದ್ದಾರೆ.

Continue Reading

DAKSHINA KANNADA

ಅಕ್ರಮ ಗೋ ಸಾಗಾಟ; ಸ್ಕೂಟರ್ ಬಿಟ್ಟು ಆರೋಪಿ ಪರಾರಿ

Published

on

ಮಂಗಳೂರು: ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿದ್ದ ಘಟನೆ ಇಂದು (ಮಾ.15) ಮುಂಜಾನೆ ಮಂಗಳೂರಿನ ಕುಲಶೇಖರ ಕೈಕಂಬ ಬಳಿ ನಡೆದಿದೆ.

ಭಜರಂಗದಳ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ಸ್ಕೂಟರ್‌ನಲ್ಲಿದ್ದ 100ಕೆ.ಜಿ.ಗೂ ಅಧಿಕ ದನದ ಮಾಂಸ ಸಾಗಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ್ದಾರೆ.

ಭಜರಂಗದಳ ಕಾರ್ಯಕರ್ತರು ಸ್ಕೂಟರನ್ನು ತಡೆಯುತ್ತಿದ್ದಂತೆ ಸ್ಕೂಟ‌ರ್ ಸವಾರ ಗಾಡಿ ಬಿಟ್ಟು ಪರಾರಿಯಾಗಿದ್ದಾನೆ. ಘಟನೆ ಬಳಿಕ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page