Connect with us

DAKSHINA KANNADA

ಜನಾಕರ್ಷಣೆಯ ಕೇಂದ್ರವಾಗಿದೆ ಸ್ಮಾರ್ಟ್ ಸಿಟಿ ಮಂಗಳೂರಿನ ಕಿರೀಟ ‘ಕದ್ರಿ ಪಾರ್ಕ್’..!

Published

on

                                                                    ವರದಿ : ಗಣೇಶ್ ಪೂಜಾರಿ

ಮಂಗಳೂರು : ಬಂದರು ನಗರಿ ಮಂಗಳೂರು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದಲ್ಲಿ ಸ್ಮಾರ್ಟ್ ಸಿಟಿಯಾಗಿ ಅಭಿವೃದ್ದಿಯಾಗುತ್ತಿದೆ. 

ಜೊತೆಗೆ ಸುಂದರ ನಗರವಾಗಿಯೂ ರೂಪುಗೊಳ್ಳುತ್ತಿದೆ. ಇಲ್ಲಿನ ರಸ್ತೆ, ಒಳ ಚರಂಡಿ, ವಿದ್ಯುತ್ ಎಲ್ಲವೂ ಮೇಲ್ದರ್ಜೆಗೆ ಏರಿರುವ ಕಾರ್ಯ ಭರದಿಂದ ನಡೆಯುತ್ತಿದ್ದು ಇದರ ಜೊತೆಗೆ ಮುಖ್ಯವಾಗಿ ಬೇಕಾಗಿರುವ ಮತ್ತು ನಗರದ ಅಂದವನ್ನು ಹೆಚ್ಚಿಸಲಿರುವ ಉದ್ಯಾನವನಗಳನ್ನು ಸುಂದರೀಕರಣಗೊಳಿಸುವ ಕಾರ್ಯವೂ ವೇಗವಾಗಿ ನಡೆಯುತ್ತಿದೆ, ಇವುಗಳಲ್ಲಿ ಒಂದು ಹೃದಯಭಾಗದಲ್ಲಿರುವ ಕದ್ರಿ ಉದ್ಯಾನವನ.

2025 ರ ಗುರಿಯನ್ನಿಟ್ಟು ಈ ವಿಶಾಲವಾದ ಪಾರ್ಕನ್ನು ಅಭಿವೃದ್ದಿ ಮಾಡುವ ಯೋಜನೆಯನ್ನು ಆರಂಭಿಸಲಾಗಿದ್ದು ಕಾಮಗಾರಿ ಭರದಿಂದ ಸಾಗುತ್ತಿದೆ. ಈಗಾಗಲೇ ಒಂದು ಹಂತದ ಕಾಮಗಾರಿ ನಡೆದಿದ್ದು ಪಾರ್ಕ್‌ ಪರಿಸರ ಒಂದು ಹೊಸ ನೋಟದಲ್ಲಿ ಕಂಗೊಳಿಸುತ್ತಿದೆ.

ಜನಾರ್ಷಣೆಯ ಕೇಂದ್ರ ಗಂಗನಪಳ್ಳ:

ಕದ್ರಿ ಪಾರ್ಕಿನ ಒಳಗಡೆ ಇರುವ ಗಂಗನಪಳ್ಳ ಮತ್ತು ಸಂಗೀತ ಕಾರಂಜಿಯನ್ನು ಸರಿ ಸುಮಾರು ಒಂದು ಕೋಟಿ ರೂಪಾಯಿ ವೆಚ್ಚಲ್ಲಿ ಅಭಿವೃದ್ದಿ ಪಡಿಸಲಾಗಿದ್ದು  ಈಗಾಗಲೇ ಲೋಕಾರ್ಪಣೆಗೊಂಡಿದೆ.

ಉದ್ಘಾಟನೆಗೊಂದ ದಿನದಿಂದಲೇ ಈ ಕದ್ರಿ ಪಾರ್ಕ್ ಜನಾಕರ್ಷಣೆಯ ಕೇಂದ್ರ ಬಿಂದುವಾಗಿದೆ,

ಮಂಗಳೂರು ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ರವಿಶಂಕರ್ ಮಿಜಾರ್ ನೇತ್ರತ್ವದಲ್ಲಿ ಇಲ್ಲಿನ ಗಂಗನಪಳ್ಳ ಕೆರೆಯನ್ನು ಒಂದು ವಿಶೇಷ ವಿನ್ಯಾಸದಲ್ಲಿ ರೂಪಿಸಿದ್ದು ಇದಕ್ಕೆ ಅಗತ್ಯ ಇರುವ ಹಣಕಾಸಿನ ನೆರವನ್ನೂ ಪ್ರಾಧಿಕಾರದಿಂದ ನೀಡಿದ್ದಾರೆ.

ಬಣ್ಣ ಬಣ್ಣದ ವಿದ್ಯುತ್ ದೀಪಗಳ ಅಲಂಕಾರದೊಂದಿಗೆ ಉದ್ಯಾನವನ ಕಂಗೊಳಿಸುತ್ತಿದೆ.

ಇದರ ಜೊತೆಗೆ ಜಲಸಸ್ಯೆ ತಜ್ಞೆ ಸ್ನೇಹ ಉಳ್ಳಾಲರ ಮಾರ್ಗದರ್ಶನದಲ್ಲಿ ಗಂಗನಪಳ್ಳದಲ್ಲಿ ಆಕರ್ಷಕ ಜಲಸಸ್ಯಗಳನ್ನು ಬೆಳೆಸಲು ಯೋಜನೆ ರೂಪಿಸಲಾಗಿದೆ.

ಕೋಮಲೆ, ನೈದಿಲೆ, ತಾವರೆಗಳೊಂದಿಗೆ ವಾಟರ್ ಲಿಲ್ಲಿ ಹಿಗೇ ನೂರಕ್ಕೂ ಅಧಿಕ ಜಲಸಸ್ಯಗಳನ್ನು ಬೆಳೆಸಲಾಗುತ್ತಿದೆ.

ಜಲಚರಗಳೊಂದಿಗೆ, ಜಲಸಸ್ಯಗಳೊಂದಿಗೆ ದೋಣಿ ವಿಹಾರ ಕೂಡ ಆರಂಭಿಸಿದರೆ  ಇನ್ನಷ್ಟು  ಮೆರುಗು ಬರಲಿದೆ ಕದ್ರಿ ಉದ್ಯಾನವನಕ್ಕೆ ಅನ್ನುತ್ತಾರೆ ಪರಿಸರ ಪ್ರಿಯರು.

ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾದ ವೇದವ್ಯಾಸ್ ಕಾಮತ್ ಅವರು ವಿಶೇಷ ಮುತುವರ್ಜಿ ವಹಿಸಿ ಪಾರ್ಕನ್ನು ಸಮಗ್ರ ಅಭಿವೃದ್ದಿ ಮಾಡಲು ಪಣತೊಟ್ಟಿದ್ದಾರೆ.

” ಸ್ಮಾರ್ಟ್‌ ಸಿಟಿ ಮೂಲಕ ದೊಡ್ಡ ಮಟ್ಟದಲ್ಲಿ ಕದ್ರಿ ಪಾರ್ಕ್‌ ಅಭಿವೃದ್ಧಿ ಪಡಿಸಲಾಗುತ್ತಿದೆ.

ತಿಂಡಿತಿನಸುಗಳ ಅಂಗಡಿ ಫುಡ್ ಕೋರ್ಟ್ ಶೀಘ್ರದಲ್ಲೇ ಪ್ರಾರಂಭವಾಗಲಿದೆ. ಕದ್ರಿ ಪಾರ್ಕಿನ ಒಳಗಡೆ ಇರುವ ಗಂಗನಪಳ್ಳ , ಸಂಗೀತ ಕಾರಂಜಿಯನ್ನು 97 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ.

ಆಸುಪಾಸಿನಲ್ಲಿ ಬಿಎಸ್‌ಎನ್‌ಎಲ್ 2 ಎಕರೆ ಜಾಗ ಮನಪಾಕ್ಕೆ ಪಾರ್ಕಿಂಗ್‌ಗೆ ಬಳಸಲು ನಾವು ಯೋಜನೆ ರೂಪಿಸಿದ್ದೇವೆ.

ಸಂಗೀತ ಕಾರಂಜಿ ಮತ್ತೆ ಚಾಲನೆ ನೀಡಲಿದ್ದೇವೆ.ಲೇಸರ್‌ ಶೋ ಕೂಡ ಮಾಡಲಿದ್ದೇವೆ.  ಮೂಡಾದ ವತಿಯಿಂದ ಪಾರ್ಕಿನ ಒಳಭಾಗದಲ್ಲಿ ನೇಶನಲ್ ಹೈವೇಯಿಂದ ಅಂಡರ್‌ ಪಾರ್ಕಿಂಗ್‌ ವ್ಯವಸ್ಥೇ ಮಾಡಿ ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸುವ ವ್ಯವಸ್ಥೆ ಮಾಡುವ ನನ್ನ ಕನಸಿದೆ.

ಅದನ್ನು 2025 ರೊಳಗೆ ಪೂರ್ಣಗೊಳಿಸುತ್ತೇನೆಂಬ ವಿಶ್ವಾಸವಿದೆ ಎನ್ನುತ್ತಾರೆ ಶಾಸಕ ವೇದವ್ಯಾಸ್ ಕಾಮತ್.

ಒಟ್ಟಿನಲ್ಲಿ ಪುಟ್ಟ ಮಕ್ಕಳಿಂದ ಹಿಡಿದು ವಯೋವೃದ್ಧರಾದಿಯಾಗಿ ಎಲ್ಲರಿಗೂ ಮನಸ್ಸನ್ನು ಉಲ್ಲಸಿತರನ್ನಾಗಿಡುವ ನಿಟ್ಟಿನಲ್ಲಿ  ಕದ್ರಿ ಪಾರ್ಕಿನ ಅಭಿವೃದ್ಧಿ ಆಗುತ್ತಿರುವುದು ಸಂತಸದ ವಿಚಾರ.

ಕದ್ರಿ ಪಾರ್ಕ್‌ನ ಇನ್ನೂ ಹಲವು ಅಭಿವೃದ್ಧಿ ಕೆಲಸಗಳ ತ್ವರಿತಗತಿಯಲ್ಲಿ ಮುಗಿದು ಇನ್ನಷ್ಟು ಪ್ರವಾಸಿಗರು ಆಗಮಿಸಿ ತುಳುನಾಡಿನ ಸೌಂದರ್ಯದ ವೀಕ್ಷಣೆಯೊಂದಿಗೆ ಮಂಗಳೂರು ನಗರ ಅಭಿವೃದ್ದಿಯಾಗಲಿ ಅನ್ನುವುದೇ ಮಂಗಳೂರಿಗರ ಆಶಯ..

 

DAKSHINA KANNADA

ಡಿ.6ರಂದು ಸಹಕಾರ ರತ್ನ ಭಾಸ್ಕರ್ ಎಸ್. ಕೋಟ್ಯಾನ್‌ ಅವರಿಗೆ ನಾಗರಿಕ ಪೌರ ಸನ್ಮಾನ

Published

on

ಮಂಗಳೂರು: ಕರ್ನಾಟಕ ಸರಕಾರದ 2025 ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್. ಕೋಟ್ಯಾನ್‌ ಅವರಿಗೆ ನಾಗರಿಕ ಪೌರ ಸನ್ಮಾನ ಡಿಸೆಂಬರ್ 6 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಭಾಸ್ಕರಾಭಿನಂದನಾ ಸಮಿತಿ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಭಾಸ್ಕರ್ ಎಸ್. ಕೋಟ್ಯಾನ್‌ ಅವರು ಸಹಕಾರ, ಕಂಬಳ, ಕೃಷಿ, ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಕೊಡುಗೆ ನೀಡಿದ ದಕ್ಷಿಣ ಕನ್ನಡ ಜಿಲ್ಲೆಯ ಅಪರೂಪದ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಈ ವರ್ಷ ರಾಜ್ಯ ಸರಕಾರ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳೆಲ್ಲ ಸೇರಿ ಸಾರ್ವಜನಿಕವಾಗಿ ಅವರನ್ನು ಅಭಿನಂದಿಸಲು ತೀರ್ಮಾನಿಸಿದ್ದಾರೆ ಎಂದು ಭಾಸ್ಕರಾಭಿನಂದನಾ ಸಮಿತಿಯ ಸಂಚಾಲಕ ಚಿತ್ತರಂಜನ್ ಬೋಳಾರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪುರಭವನದಲ್ಲಿ ಡಿಸೆಂಬರ್ 6 ರಂದು ಅಪರಾಹ್ನ 3 ಗಂಟೆಗೆ ಚಿತ್ರನಟ ಮಂಜು ರೈ ಮೂಳೂರು ಅವರ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಸಮಾರಂಭಕ್ಕೆ ಚಾಲನೆ ಸಿಗಲಿದೆ. 3.45 ಕ್ಕೆ ಸಭಾ ಕಾರ್ಯಕ್ರಮ ಆರಂಭವಾಗಲಿದೆ.

 

ಸೋಲೂರು ಮಠದ ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡುವರು. ಶಾಸಕ ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ  ಸಂಸದ ಬ್ರಿಜೇಶ್ ಚೌಟ ದೀಪ ಬೆಳಗಿಸುವರು. ಸ್ಪೀಕರ್ ಯು.ಟಿ. ಖಾದರ್ ಭಾಸ್ಕರಾಭಿನಂದನೆಯನ್ನು ನೆರವೇರಿಸಲಿದ್ದಾರೆ. ಜಿಲ್ಲೆಯ ಜನ ಪ್ರತಿನಿಧಿಗಳು ಮತ್ತು ಗಣ್ಯರು ಅತಿಥಿಗಳಾಗಿ ಉಪಸ್ಥಿತರಿರುವರು ಎಂದು ವಿವರಿಸಿದರು.

ಸುದ್ದಿಗೋಷ್ಟಿಯಲ್ಲಿ ಭಾಸ್ಕರಾಭಿನಂದನಾ ಸಮಿತಿಯ ಪ್ರಧಾನ ಸಂಚಾಲಕ ಸದಾನಂದ ಪೂಜಾರಿ, ಸಂಚಾಲಕ ಕೆ.ಟಿ. ಸುವರ್ಣ ಮತ್ತಿತರರು ಇದ್ದರು.

 

Continue Reading

DAKSHINA KANNADA

ಡಿ.7ರಂದು ಶಾರದಾ ವಿದ್ಯಾಲಯದಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ, ಸಾಂಸ್ಕೃತಿಕ ವೈಭವ

Published

on

ಮಂಗಳೂರು: ಮಕ್ಕಳಲ್ಲಿ ಶಿಸ್ತು, ಧೈರ್ಯ ಹಾಗೂ ಸಾಹಸ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಸಾಹಸ ಕ್ರೀಡೆ, ನೃತ್ಯ, ಸಂಗೀತ ಇವೆಲ್ಲವುಗಳನ್ನೊಳಗೊಂಡ ಹೊನಲು ಬೆಳಕಿನ ಕ್ರೀಡೋತ್ಸವ ಡಿ7ರ ಭಾನುವಾರದದಂದು ಶಾರದಾ ವಿದ್ಯಾಲಯದ ಭೂವರಾಹ ಬಯಲು ಸಭಾಂಗಣದಲ್ಲಿ ನಡೆಯಲಿದೆ ಎಂದು ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ ಪುರಾಣಿಕ್ ಹೇಳಿದರು.

ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಈ ಬಾರಿಯ ಕ್ರೀಡೋತ್ಸವ ಸಮಾರಂಭವನ್ನು ಮೈಸೂರಿನ ಸಂಸದ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರು ಆಗಮಿಸಲಿದ್ದಾರೆ. ಸಾಹಸ ಕ್ರೀಡೆ, ಸಾಂಸ್ಕೃತಿಕ ಪ್ರದರ್ಶನದಲ್ಲಿ ಸುಮಾರು 2000 ಮಂದಿ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಸಿಇಒ ಸಮೀರ್ ಪುರಾಣಿಕ್ ಮಾತನಾಡಿ 4ನೇ ತರಗತಿಯಿಂದ ಪಿಯುಸಿವರೆಗಿನ ವಿದ್ಯಾರ್ಥಿಗಳು ಈ ಕ್ರೀಡೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಲ್ಲಕಂಬ, ಫೈರ್ ಜಂಪ್, ಯೋಗಾಸನ ಸೇರಿದಂತೆ ಪಿರಮಿಡ್ ರಚನೆಯ ಕ್ರೀಡಾ ಪ್ರದರ್ಶನ ಪ್ರೇಕ್ಷಕರನ್ನು ರಂಜಿಸಲಿದೆ ಎಂದು ಹೇಳಿದರು.

ಇದನ್ನೂ ಓದಿ: WATCH : ಉಡುಪಿ: ಶಾಲೆಯ ರೋಡ್ ಸರಿ ಇಲ್ಲ…ನಗರಸಭೆ ಆಯುಕ್ತರಿಗೆ ದೂರು ಕೊಟ್ಟ ಪುಟ್ಟ ವಿದ್ಯಾರ್ಥಿ

ಸಂಸ್ಥೆಯ ಪ್ರಾಂಶುಪಾಲ ದಯಾನಂದ ಕಟೀಲ್ ಶೋಭಾಯಾತ್ರೆಯಲ್ಲಿ ಒಡೆಯರನ್ನು ಕಾರ್ಯಕ್ರಮಕ್ಕೆ ಬರಮಾಡಿಕೊಳ್ಳಲಾಗುತ್ತದೆ. ಈ ಕ್ರೀಡೋತ್ಸವಕ್ಕೆ ಮಕ್ಕಳನ್ನು ತಯಾರು ಮಾಡಲು ಯಾವುದೇ ತರಬೇತುದಾರರಿಲ್ಲ. ಶಾರದಾ ಕುಟುಂಬ ಜೊತೆಯಾಗಿ ಸೇರಿಕೊಂಡೇ ಮಕ್ಕಳನ್ನು ಸಿದ್ಧಪಡಿಸಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಟ್ರಸ್ಟಿ ಸುಧಾಕರ್ ಪೇಜಾವರ, ಶಾರದಾ ಪಿಯು ಕಾಲೇಜು ಪ್ರಾಂಶುಪಾಲ ಪ್ರಕಾಶ್ ನಾಯಕ್ ಉಪಸ್ಥಿತರಿದ್ದರು.

Continue Reading

DAKSHINA KANNADA

ಕುದ್ರೋಳಿ ಭಗವತಿ ಕ್ಷೇತ್ರಕ್ಕೆ ವರ್ಕಳ ಶಿವಗಿರಿ ಮಠದ ಶ್ರೀಗಳ ಭೇಟಿ

Published

on

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧೀಜಿಯವರ ನಡುವಿನ ಐತಿಹಾಸಿಕ ವರ್ಕಳ ಶಿವಗಿರಿ ಸಂವಾದವು ಮಂಗಳೂರು ವಿವಿಯಲ್ಲಿ ನಡೆದಿದ್ದು, ಕಾರ್ಯಕ್ರಮಕ್ಕೆ ಆಶೀರ್ವಚನವನ್ನು ನೀಡಲು ಆಗಮಿಸಿದ್ದ ಶಿವಗಿರಿ ಮಠದ ಪೀಠಾಧಿಪತಿ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮಿ ಇಂದು ಕುದ್ರೋಳಿ ಶ್ರೀ ಭಗವತೀ ಕ್ಷೇತ್ರಕ್ಕೆ ಭೇಟಿ ನೀಡಿದರು.

ಈ ಸಂದರ್ಭ ಕುದ್ರೋಳಿ ಕ್ಷೇತ್ರಾಡಳಿತ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದು, ಯತಿವರೇಣ್ಯರನ್ನು ಸ್ವಾಗತಿಸಿದರು. ಮಹಿಳಾ ಸಮಿತಿ ಸದಸ್ಯರು ಅವರ ಆಗಮನದುದ್ದಕ್ಕೂ ಪೂರ್ಣಕುಂಭ ಸ್ವಾಗತಿಸಿದರು.

ಇದೇ ವೇಳೆ ಶ್ರೀಗಳು ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಆರತಿ ಬೆಳಗಿದರು. ಅಲ್ಲದೆ ಮಂತ್ರಪಠಣ ಮಾಡಿದರು. ಭಕ್ತರನ್ನು ಉದ್ದೇಶಿಸಿ ಆಶೀರ್ವಚನ ನೀಡಿದರು. ಬಳಿಕ ಭಗವತಿ ಕ್ಷೇತ್ರದಲ್ಲಿ ಶ್ರೀಗಳಿಗೆ ವಿಶೇಷ ಗೌರವಾರ್ಪಾಣೆ ಕ್ಷೇತ್ರದ ವತಿಯಿಂದ ನೀಡಲಾಯಿತು. ಪ್ರಾರ್ಥನೆ ನೆರವೇರಿಸಿದ ಪ್ರಸಾದ ವಿತರಿಸಲಾಯಿತು.

ಇದೇ ವೇಳೆ ಶ್ರೀ ಭಗವತಿ ಕ್ಷೇತ್ರಕ್ಕೆ ವರ್ಕಳ ಶಿವಗಿರಿ ಮಠದ ಶ್ರೀ ಜ್ಞಾನಾನಂದ ತೀರ್ಥ ಸ್ವಾಮೀಜಿ ಅವರೂ ಭೇಟಿ ನೀಡಿದ್ದು, ಅವರನ್ನೂ ಕ್ಷೇತ್ರಾಡಳಿತ ಮಂಡಳಿ ಸಮಿತಿ ಪದಾಧಿಕಾರಿಗಳು ಸ್ವಾಗತಿಸಿ, ಗೌರವಿಸಿದರು.

ಮೊಕ್ತೇಸರರಾದ ರವೀಂದ್ರ, ರಾಜ್ ಗೋಪಾಲ್, ವೈಬಿ ಸುಂದರ್, ಉಷಾ ಪ್ರಭಾಕರ್, ಕಾರ್ಯದರ್ಶಿ ಸುಧೀರ್ ಬಿ, ಆಶಾ ಚಂದ್ರಮೋಹನ್, ದಿನೇಶ್ ಕುಂಪಲ, ರಾಕೇಶ್, ಶಿವ ಪ್ರಸಾದ್, ಆಚಾರಪಟ್ಟವರು, ಗುರಿಕಾರರು, ಮಹಿಳಾ ಸೇವಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page