Connect with us

BANTWAL

ನಾಲಗೆ ಇದೆ ಎಂದು ಅಸಂಬದ್ಧ ಮಾತನಾಡಬೇಡಿ-ಕಲ್ಲಡ್ಕ ಪ್ರಭಾಕರ್ ಭಟ್

Published

on

ಬಂಟ್ವಾಳ: ನಾಲಗೆ ಇದೆ ಎಂದು ಅಸಂಬದ್ಧವಾದ ರೀತಿಯಲ್ಲಿ ಮಾತನಾಡುವುದು ಸರಿಯಲ್ಲ. ದೇಶದ್ರೋಹ ಹಾಗೂ ನಪುಂಸಕತೆಯ ನಡುವಿರುವ ವ್ಯತ್ಯಾಸ ಏನು ಅಂತ ಹೇಳಲಿ ಎಂದು ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಎಚ್ಚರಿಕೆ ನೀಡಿದ್ದಾರೆ.

ಆರ್‌ಎಸ್‌ಎಸ್‌ ಬಗ್ಗೆ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ನ ಹೇಳಿಕೆಗೆ ನಿನ್ನೆ ಕಲ್ಲಡ್ಕದಲ್ಲಿ ಮೊದಲ ಬಾರಿಗೆ ಪ್ರತಿಕ್ರಿಯಿಸಿದ, ಕಳೆದ 97 ವರ್ಷಗಳಿಂದ ದೇಶಕ್ಕಾಗಿ ಬದುಕುತ್ತಿರುವ, ಸೇವೆಯ ಕಣ್ಣ ಮುಂದೆ ಇಟ್ಟುಕೊಂಡು, ಕೋಟಿ ಕೋಟಿ ಜನರಿಗೆ ದೇಶಕ್ಕೋಸ್ಕರ ಬದುಕುವ ಚಿಂತನೆ ನಡೆಸುತ್ತಿರುವ ಏಕೈಕ ಸಂಸ್ಥೆ ಅದು ಆರ್‌ಎಸ್‌ಎಸ್ ಇದರ ಬಗ್ಗೆ ಮಾತನಾಡಲು ಇವರಲ್ಲಿ ಏನಿದೆ ನೈತಿಕತೆ ಎಂದು ಅವರು ಗುಡುಗಿದ್ದಾರೆ.


ಸುಮಾರು ವರ್ಷಗಳ ಹಿಂದೆ ಮುಸ್ಲಿಂ ದೇಶಕ್ಕೆ ಹೊರಟ ಎರಡು ವಿಮಾನಗಳು ರಾಜಸ್ಥಾನದಲ್ಲಿ ಅಪಘಾತ ನಡೆದ ಸಂದರ್ಭದಲ್ಲಿ ತಕ್ಷಣ ಅಲ್ಲಿ ಹೋಗಿದ್ದು ಆರ್.ಎಸ್.ಎಸ್.ಸಂಘಟನೆ, ಅಲ್ಲಿ ಹೋಗಿ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಗಳ ಶವ ಹಾಗೂ ಚಿನ್ನಾಭರಣಗಳನ್ನು ಅವರ ಅವರ ಕುಟುಂಬಕ್ಕೆ ಹಸ್ತಾಂತರ ಮಾಡಿದ ಬಳಿಕ ಮಾಜಿ ಕೇಂದ್ರ ಸಚಿವ ಸಿ.ಎಂ.ಇಬ್ರಾಹಿಂ ಅವರು ಅಲ್ಲಿಗೆ ಭೇಟಿ ನೀಡಿ ಮೊತ್ತಮೊದಲ ಬಾರಿಗೆ ಆರ್.ಎಸ್.ಎಸ್.ಬಗ್ಗೆ ಹೊಗಳಿ ಮಾತನಾಡಿದರು.


ಸರ್ವೇ ಸಾಮಾನ್ಯರಿಗೋಸ್ಕರ ಬದುಕುವುದು ಸಂಘದ ಮೂಲ ಉದ್ದೇಶ. ದಿನ ನಿತ್ಯ ಭಾರತ್ ಮಾತ ಕೀ ಜೈ ಅಂತ ಹೇಳಿದರೆ ಅದು ಸಂಘದ ಕಾರ್ಯಕರ್ತರು ಮಾತ್ರ. ಇವರು ಇಟಲಿಯವರಿಗೆ ಜೈ ಕಾರ ಹಾಕಿದವರು. ದೇಶ ವಿಭಜನೆ ಮಾಡಿದ್ದು ಯಾರು? ಸಮಾಜ ವಿಭಜನೆ ಮಾಡಿದ್ದು ಯಾರು?

ನೆಹರು, ಗಾಂಧೀಜಿಯವರು ಎಂಬುದು ಇವರಿಗೆ ನೆನಪಿದೆಯಾ? ಅ ಮೂರೇ ಜನ ಇದ್ದದ್ದು, ಮುಸ್ಲಿಂ ಲೀಗ್, ಕಾಂಗ್ರೆಸ್, ಬ್ರಿಟಿಷರು. ಇವರು ದೇಶ ವಿಭಜನೆ ಮಾಡಿ ಇಷ್ಟು ದೊಡ್ಡ ಆಪತ್ತು ಬಂದಿದೆ ಅಲ್ವಾ ಅದನ್ನು ನಾವು ಒಪ್ಪಿಕೊಳ್ಳಬೇಕಾಲ್ವ ಎಂದು ಅವರು ಪ್ರಶ್ನಿಸಿದರು.

ದೇಶ ವಿಭಜನೆಯ ಕಾರಣ ನಿತ್ಯ ನಿರಂತರ ತಲೆ ಬಿಸಿ ಆಗುವಂತೆ ಮಾಡಿದ್ದು ಕಾಂಗ್ರೇಸ್ ಅಲ್ವಾ, ಹೊರಗಿನಿಂದ ಆಕ್ರಮಣ, ಒಳಗಿನಿಂದ ಅಕ್ರಮಣ, ಪಾಕಿಸ್ತಾನ್ ಜಿಂದಾಬಾದ್ ಎಂದು ಹೇಳಲು ಅವಕಾಶ ನೀಡಿದ್ದು ಕಾಂಗ್ರೇಸ್ ಅಲ್ವವೇ ಎಂದು ಪ್ರಶ್ನೆ ಮಾಡಿದರು.

ಮಳಲಿಯನ್ನು ಬಿಟ್ಟುಕೊಡುವ ಪ್ರಶ್ನೆಯಿಲ್ಲ: ಡಾ!ಭಟ್
ಮಳಲಿಯ ಮಸೀದಿಯಲ್ಲಿ ಹಿಂದೂ ಧಾರ್ಮಿಕ ಕೇಂದ್ರಕ್ಕೆ ಸಂಬಂಧಿಸಿದ ಕುರುಹುಗಳು ಸಿಕ್ಕಿದ ಕಾರಣಕ್ಕಾಗಿ ಅದನ್ನು ಒಪ್ಪಂದ ಮಾಡಿಕೊಂಡು ಹಿಂದೂಗಳಿಗೆ ಬಿಟ್ಟು ಕೊಡಬೇಕು ಎಂದು ಕಲ್ಲಡ್ಕ ಡಾ! ಪ್ರಭಾಕರ್ ಭಟ್ ಹೇಳಿದ್ದಾರೆ. ಇಂತಹ ಅನೇಕ ಕೇಂದ್ರಗಳು ಇವೆ. ಎಲ್ಲವನ್ನೂ ಬಿಟ್ಟುಕೊಡುವ ಒಪ್ಪಂದಕ್ಕೆ ತಯಾರಿರಬೇಕು ಎಂದರು.

ದೇವಸ್ಥಾನಕ್ಕೆ ಮತ್ತು ಮಸೀದಿ, ಚರ್ಚ್‌ಗೆ ವ್ಯತ್ಯಾಸ ಇದೆ. ಅದು ಎರಡೂ ಕೂಡ ಪ್ರಾರ್ಥನಾ ಮಂದಿರಗಳು.ಅದು ಎಲ್ಲಿ ಬೇಕಾದರೂ ಮಾಡಬಹುದು. ಆದರೆ ದೇವಸ್ಥಾನ, ದೈವಸ್ಥಾನಗಳಿಗೆ ಇತಿಹಾಸ ಇರುವುದರಿಂದ ಅದೇ ಸ್ಥಳದಲ್ಲಿ ನಿರ್ಮಾಣವಾಗಬೇಕಾಗಿದೆ ಎಂದು ಅವರು ಹೇಳಿದರು.

BANTWAL

ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾ*ವು

Published

on

ಬಂಟ್ವಾಳ : ಫ್ಯಾನ್ ರಿಪೇರಿ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೋರ್ವ ಮೃ*ತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಗ್ರಾಮದಲ್ಲಿ ನಡೆದಿದೆ.

ಅರಳ ನಿವಾಸಿ ಭವಾನಿ ಶಂಕರ ಯಾನೆ ರಾಜೇಶ್ ಮೃತಪಟ್ಟವರು. ಸಜೀಪ ಮುನ್ನೂರು ಗ್ರಾಮದ ಮಾರ್ನಬೈಲು ಎಂಬಲ್ಲಿ ರಾಜೇಶ್ ತನ್ನ ತಂಗಿ ಮನೆಯಲ್ಲಿ ಫ್ಯಾನ್ ರಿಪೇರಿ ಕಾರ್ಯದಲ್ಲಿ ತೊಡಗಿದ್ದ ವೇಳೆ ಕರೆಂಟ್ ಶಾಕ್ ಹೊಡೆದು ಬಿದ್ದಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಆನ್ಲೈನ್ ವಂಚನೆ ; ಕೊನೆಗೂ ಪೊಲೀಸರ ಕೈವಶವಾದ ಖದೀಮ

ತಕ್ಷಣ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Continue Reading

BANTWAL

ಬಂಟ್ವಾಳ: ಕಾಂಗ್ರೆಸ್ ನಾಯಕನೊರ್ವನ ಕಾಲಿಗೆ ಗುಂಡೇಟು.!

Published

on

ಬಂಟ್ವಾಳ: ಗುಂಡೇಟಿನಿಂದ ಕಾಂಗ್ರೆಸ್ ಮುಖಂಡರೊಬ್ಬರು ಗಾಯ ಗೊಂಡಿದ್ದಾರೆ. ಇಂಟಕ್ ನಲ್ಲಿ ಸಕ್ರೀಯವಾಗಿದ್ದ ಚಿತ್ತರಂಜನ್ ಶೆಟ್ಟಿ ಗಾಯಗೊಂಡವರಾಗಿದ್ದಾರೆ.

ಬಂಟ್ವಾಳ ‌ತಾಲೂಕಿನ‌ ವಿಟ್ಲ ಪೋಲಿಸ್ ಠಾಣಾ ವ್ಯಾಪ್ತಿಯ ಅನಂತಾಡಿ ಎಂಬಲ್ಲಿ ಗುಂಡು ಹಾರಿದ್ದು, ಅಸಲಿಗೆ ಚಿತ್ತರಂಜನ್ ಶೆಟ್ಟಿ ಅವರ ಕಿಸೆಯಲ್ಲಿದ್ದ ಪಿಸ್ತೂಲ್ ನಿಂದಲೇ ಈ ಫೈರಿಂಗ್ ಆಗಿದೆ ಎಂಬ ಮಾಹಿತಿ ಸಿಕ್ಕಿದೆ. ಸ್ವಂತ ಭದ್ರತೆಗಾಗಿ ಇರಿಸಿಕೊಂಡಿದ್ದ ಪಿಸ್ತೂಲ್ ಸರಿಯಾಗಿ ಲಾಕ್ ಮಾಡದ ಕಾರಣ ಈ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದ್ದು. ಗಾಯಗೊಂಡ ಚಿತ್ತರಂಜನ್ ಶೆಟ್ಟಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

Continue Reading

BANTWAL

ಬಸ್ ಪ್ರಯಾಣಿಕರ ಬ್ಯಾಗ್‌ನಲ್ಲಿದ್ದ ಚಿನ್ನಾಭರಣ ಹಾಗೂ ನಗದು ಕಳವು

Published

on

ಬಂಟ್ವಾಳ: ಸರ್ಕಾರಿ ಬಸ್‌ ಪ್ರಯಾಣಿಕರೊಬ್ಬರ ಬ್ಯಾಗ್‌ನಿಂದ ಅಂದಾಜು 10.08 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ 3000 ರೂಪಾಯಿ ನಗದು ಕಳ್ಳತನವಾಗಿರುವ ಘಟನೆಯ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ನಿಯ ತವರು ಮನೆಯಾದ ಬಂಟ್ವಾಳ ತಾಲೂಕಿನ ಮಣಿನಾಲ್ಕೂರು ಗ್ರಾಮದ ಮುಲ್ಕಾಜೆ ಮಾಡ್‌ಗೆ ಖಾಸಗಿ ಕುಟುಂಬದ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬೆಂಗಳೂರಿನ ಯಲಹಂಕ ನ್ಯೂ ಟೌನ್ ನಿವಾಸಿ 68 ವರ್ಷದ ರಾಜಗೋಪಾಲ್ ಕಾರಂತ್ ಎಂಬವರು ಈ ಪ್ರಕರಣ ಸಂಬಂಧ ದೂರು ನೀಡಿದ್ದಾರೆ. ಶನಿವಾರ (ಫೆ. 1) ರಾತ್ರಿ ಬೆಂಗಳೂರಿನ ಮೆಜೆಸ್ಟಿಕ್‌ನಿಂದ ಕೆಎಸ್‌ಆರ್‌ಟಿಸಿ ಬಸ್‌ಗೆ ಪತ್ನಿ ಮತ್ತು ಅಳಿಯನೊಂದಿಗೆ ಮನೆಯಿಂದ ಚಿನ್ನವನ್ನು ಬಾಕ್ಸನಲ್ಲಿ ಇಟ್ಟುಕೊಂಡು, ಜೊತೆಯಲ್ಲಿ 3000 ರೂ ಹಣವನ್ನು ತಮ್ಮ ಲಗೇಜು ಬ್ಯಾಗ್ ನಲ್ಲಿರಿಸಿ ಹೊರಟಿದ್ದಾರೆ.

 

ಇದನ್ನೂ ಓದಿ : ಕೋಟಿಗಟ್ಟಲೆ ನೀಡಿ ‘ಮಹಾಮಂಡಲೇಶ್ವರಿ’ ಪಟ್ಟ ಪಡೆದುಕೊಂಡಿರುವ ನಟಿ ವಿರುದ್ಧ ಆಕ್ರೋಶ

 

ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ, ಕುಣಿಗಲ್ ಬಳಿ ಬಸ್ ನಿಂತಾದ್ದು, ರಾಜಗೋಪಾಲನ ಹೆಂಡತಿ ಮತ್ತು ಅಳಿಯ ಸದ್ರಿ ಚಿನ್ನಾಭರಣ ಹಾಗೂ ನಗದು ಹಣವಿದ್ದ ಬ್ಯಾಗುಗಳನ್ನು ಬಸ್ಸಿನಲ್ಲಿಯೇ ಇಟ್ಟು ಶೌಚಾಲಯಕ್ಕೆ ಹೋಗಿದ್ದರೆ. ನಿನ್ನೆ (ಫೆ. 2) ಕಾರಿಂಜಾ ಕ್ರಾಸ್ ತಲುಪಿಸ ವೇಳೆ ಬ್ಯಾಗ್ ತೆರೆದಾಗ 144 ಗ್ರಾಂ ಚಿನ್ನ ಮತ್ತು ನಗದು ನಾಪತ್ತೆಯಾಗಿರುವುದು ತಿಳಿಯಿತು. ಬಸ್ಸಿನ ಒಳಗೆ ಅಥವಾ ಕುಣಿಗಲ್‌ನ ಹೋಟೆಲ್ ಬಳಿ ಕಳ್ಳತನ ನಡೆದಿರುವ ಶಂಕೆ ವ್ಯಕ್ತಪಡಿಸಿ ರಾಜಗೋಪಾಲ್ ನೀಡಿದ ದೂರಿನ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಐಪಿಸಿ ಕಲಂ 303(2) ಮತ್ತು 305(ಬಿ) (ಬಿಎನ್‌ಎಸ್) ಅಡಿಯಲ್ಲಿ ಪ್ರಕರಣ ಸಂಖ್ಯೆ 09/ ರಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ತನಿಖೆ ನಡೆಯುತ್ತಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page