Connect with us

bangalore

ಸದ್ದು ಮಾಡ್ತಾ ಇದೆ ‘ಕಾಂತಾರ ಚಾಪ್ಟರ್‌ 1’…! ಚಿತ್ರೀಕರಣಕ್ಕೂ ಮೊದಲೇ ಫುಲ್ ಡಿಮ್ಯಾಂಡ್‌..!

Published

on

ಮುಂಬೈ : ರಿಷಬ್ ಶೆಟ್ಟಿ ( Rishab Shetty ) ನಿರ್ದೇಶನ ಮಾಡಿ ಅಭಿನಯಿಸಿರುವ ‘ಕಾಂತಾರ ಚಾಪ್ಟರ್‌ 1’ ( Kanthara Chapter 1 ) ಚಿತ್ರೀಕರಣ ಇನ್ನೂ ಆರಂಭವಾಗಿಲ್ಲ.  ಆದ್ರೆ ಈ  ಸಿನೆಮಾ ಚಿತ್ರೀಕರಣ ಆರಂಭಕ್ಕೂ ಮೊದಲೇ ಭಾರಿ ಸದ್ದು ಮಾಡಿದೆ. ಮುಂದಿನ ತಿಂಗಳು ಚಿತ್ರೀಕರಣ ಆರಂಭವಾಗಲಿದ್ದು ಭಾರೀ ನಿರೀಕ್ಷೆ ಹೊಂದಿದೆ. ವಿಶೇಷ ಅಂದ್ರೆ ಈ ಚಿತ್ರದ ಒಟಿಟಿ ಹಕ್ಕು ಕೋಟ್ಯಾಂತರ ರೂಪಾಯಿಗಳಿಗೆ ಮಾರಾಟವಾಗಿದೆ.

ಕಾಂತಾರ ಸೀನ್

 

 

 

 

 

 

2022 ರಲ್ಲಿ ಕನ್ನಡ ಫಿಲ್ಮ ಇಂಡಸ್ಟ್ರೀ ಮಾತ್ರವಲ್ಲದೆ ಇಡೀ ದೇಶದಲ್ಲಿ ‘ಕಾಂತಾರ’ (Kanthara ) ಸದ್ದು ಮಾಡಿತ್ತು.  ಬಾಕ್ಸ್‌ ಆಫೀಸ್ ದಾಖಲೆಯನ್ನು ಚಿಂದಿ ಉಡಾಯಿಸಿ ‘ಕಾಂತಾರ’ ಯಶಸ್ಸು ಗಳಿಸಿತ್ತು.  ಈ ಯಶಸ್ಸಿನ ಬಳಿಕ ಪಾರ್ಟ್‌ 2 ತೆರೆಗೆ ಬರಲಿದೆ ಅನ್ನೋ ಸುದ್ದಿ ಅಭಿಮಾನಿಗಳು ಹಾಗೂ ಸಿನಿರಂಗದಲ್ಲೂ ಹರಿದಾಡಿತ್ತು. ನಿರೀಕ್ಷೆ ಹುಸಿಯಾಗದಂತೆ ರಿಶಬ್‌ ಶೆಟ್ಟಿ ‘ಕಾಂತಾರ ಚಾಪ್ಟರ್‌ 1’ ಪೋಸ್ಟರ್‌ ಬಿಡುಗಡೆ ಮಾಡಿದ್ದರು. ಕರಾವಳಿಯ ಪೌರಾಣಿಕ ಹಿನ್ನಲೆಯನ್ನು ಇಟ್ಟುಕೊಂಡು ‘ಕಾಂತಾರ ಚಾಪ್ಟರ್‌ 1’ ತೆರೆಗೆ ಬರಲಿದೆ ಅನ್ನೋದು ಪೋಸ್ಟರ್‌ ( poster )ನೋಡಿದ ಹಲವು ಫ್ಯಾನ್ಸ್‌ ಚರ್ಚೆ ಮಾಡಿದ್ದರು. ‘ಕಾಂತಾರ’ ಕಥೆ ನಡೆಯುವುದಕ್ಕೆ ಮುನ್ನ ಏನಾಗಿತ್ತು ಎನ್ನುವುದನ್ನು ರಿಷಬ್‌ ಶೆಟ್ಟಿ ಈ ಭಾಗದಲ್ಲಿ ವಿವರಿಸಲಿದ್ದಾರೆ. ಕ್ರಿ.ಶ. 301-400ರ ಕಾಲಘಟ್ಟದ ಕಥೆ ತೆರೆ ಮೇಲೆ ಅನಾವರಣಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ. ಈ ಸಿನಿಮಾ ಪಂಜುರ್ಲಿ ದೈವ ಮತ್ತು ಗುಳಿಗ ದೈವಗಳ ಮೂಲದ ಕಥೆಯನ್ನು ಒಳಗೊಂಡಿದೆ ಎನ್ನಲಾಗುತ್ತಿದೆ.  ‘ಕಾಂತಾರ’ ಸಿನೆಮಾದ ಒಟಿಟಿ ಹಕ್ಕನ್ನು ಅಮೇಜಾನ್ ಪ್ರೈಮ್‌ ಪಡೆದುಕೊಂಡಿತ್ತು.  ಇದೀಗ ‘ಕಾಂತಾರ ಚಾಪ್ಟರ್‌ 1’ ಶೂಟಿಂಗ್ ಆರಂಭಕ್ಕೂ ಮೊದಲೇ ಅಮೇಜಾನ್ ಪ್ರೈಮ್ ಕೋಟ್ಯಾಂತರ ರೂಪಾಯಿಗಳಿಗೆ ಒಟಿಟಿ ಹಕ್ಕು ಪಡೆದುಕೊಂಡಿದೆ.

ಮುಂಬೈಯಲ್ಲಿ ಮಂಗಳವಾರ (ಮಾರ್ಚ್‌ 19) ನಡೆದ ಅಮೇಜಾನ್‌ ಪ್ರೈಂನ ಕಾರ್ಯಕ್ರಮವೊಂದರಲ್ಲಿ ಈ ವಿಚಾರವನ್ನು ಬಹಿರಂಗವಾಗಿದೆ. ಐಷಾರಾಮಿ ಆಸೆಗಳಿಗಿಂತ ದೊಡ್ಡ ವಿಪತ್ತು ಇನ್ನೊಂದಿಲ್ಲ. ಒಬ್ಬ ಕ್ಷುಲ್ಲಕ ರಾಜನಿಂದ ಉಂಟಾಗುವ ಇಂತಹ ವಿಪತ್ತು, ದೇವರು ಆಯ್ಕೆ ಮಾಡಿದ ಬುಡಕಟ್ಟು ನಾಯಕನ ಹೃದಯದಲ್ಲಿ ಕ್ರೋಧವನ್ನು ಪ್ರಚೋದಿಸುತ್ತದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ನಂತರ ಇಲ್ಲಿ ಪ್ರಸಾರವಾಗಲಿದೆʼʼ ಎಂದು ಪ್ರೈಂ ತನ್ನ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದೆ.
‘ಕಾಂತಾರ ಚಾಪ್ಟರ್‌ 1’ ಸಿನಿಮಾ ತೆರೆಕಂಡು ಒಂದೂವರೆ ತಿಂಗಳ ಬಳಿಕ ಅಮೇಜಾನ್ ಪ್ರೈಂನಲ್ಲಿ ಸ್ಟ್ರೀಮಿಂಗ್ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಪ್ಯಾನ್ ಇಂಡಿಯಾ ಸಿನೆಮಾ ಅಲ್ಲದೇ ಇದ್ರೂ ‘ಕಾಂತಾರʼ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಿತ್ತು. ಇದೀಗ ‘ಕಾಂತಾರ ಚಾಪ್ಟರ್ 1’ ಕನ್ನಡ ಜೊತೆಗೆ ವಿವಿಧ ಭಾಷೆಯಲ್ಲಿ ತೆರೆಗೆ ಬರಲಿದ್ದು, ಅಂದಾಜು 125 ಕೋಟಿ ಬಜೆಟ್‌ನಲ್ಲಿ ಸಿನೆಮಾ ತಯಾರಾಗುತ್ತಿದೆ.

‘ಕಾಂತಾರ ಚಾಪ್ಟರ್ 1’  ರಿಷಬ್ ಶೆಟ್ಟಿ ಹೇಳಿದ್ದೇನು?

ಅಮೇಜಾನ್‌ ಪ್ರೈಂನ (amazon prime ) ಕಾರ್ಯಕ್ರಮದಲ್ಲಿ ಮಾತನಾಡಿದ ರಿಷಬ್‌ ಶೆಟ್ಟಿ, ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇಂತಹ ಒಂದು ಸಿನೆಮಾ ನೀಡಬೇಕು ಅನ್ನೋದು ನನ್ನ ಕಾಲೇಜು ದಿನಗಳ ಕನಸಾಗಿತ್ತು. ‘ಕಾಂತಾರ’ ಸಿನೆಮಾಗೆ ಜನರು ಅಭೂತಪೂರ್ವ ಬೆಂಬಲ ನೀಡಿದ ಕಾರಣ ಈಗ ‘ಕಾಂತಾರ ಚಾಪ್ಟರ್‌ 1’ ಮಾಡಲು ಹೊರಟಿದ್ದೇವೆ. ನಮ್ಮ ಊರಿನಲ್ಲಿ ( ಕುಂದಾಪುರ ) ದೊಡ್ಡ ಸೆಟ್ಟ ಹಾಕುತ್ತಿದ್ದು, ಅಲ್ಲಿ ಶೀಘೃ ಚಿತ್ರೀಕರಣ ( shooting ) ಆರಂಭವಾಗಲಿದೆ ಎಂದು ಹೇಳಿದ್ದಾರೆ. ಚಿತ್ರದಲ್ಲಿ ಯಾರೆಲ್ಲಾ ನಟಿಸಲಿದ್ದಾರೆ ಅನ್ನೋದು ಇನ್ನೂ ಬಹಿರಂಗವಾಗಿಲ್ಲ. ‘ಕಾಂತಾರ’ದಲ್ಲಿ ನಟಿ ಸಪ್ತಮಿ ಗೌಡ (Sapthami Gowda ) ನಟಿಸಿದ್ದು ಇದರಲ್ಲೂ ಇರ್ತಾರಾ ಅನ್ನೋ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

bangalore

ಟಿಆರ್‌ಪಿಯಲ್ಲಿ ಬಿಗ್‌ಬಾಸನ್ನು ಹಿಂದಿಕ್ಕಿದ ಸರಿಗಮಪ

Published

on

By

ಮಂಗಳೂರು/ಬೆಂಗಳೂರು : ಬೇಟೆಗಾರನನ್ನು ಬೇಟೆ ಆಡುವ ರಣ ಬೇಟೆಗಾರ ಬಂದ ಎಂಬ ಡೈಲಾಗ್​​ನಂತೆ ‘ಬಿಗ್ ಬಾಸ್’ ದಾಖಲೆಯನ್ನು ‘ಸರಿಗಮಪ’ ಹಿಂದಿಕ್ಕಿದೆ. ಇಷ್ಟು ದಿನಗಳ ಕಾಲ ಟಿಆರ್​ಪಿಯಲ್ಲಿ ಬಿಗ್ ಬಾಸ್ ಪಾರುಪತ್ಯ ಸಾಧಿಸುತ್ತಾ ಬರುತ್ತಿತ್ತು. ಎಲ್ಲಾ ಧಾರಾವಾಹಿಗಳ ಟಿಆರ್​ಪಿಯನ್ನು ಬೀಟ್ ಮಾಡಿ ಬಿಗ್ ಬಾಸ್ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆದರೆ, ಭರ್ಜರಿ ಟಿಆರ್​ಪಿ ಪಡೆಯುವ ಮೂಲಕ ಈ ಶೋ ಮೊದಲ ಸ್ಥಾನ ಪಡೆದಿದೆ.

52ನೇ ವಾರದ ಟಿಆರ್​ಪಿ ಪ್ರಕಾರ, ಬಿಗ್ ಬಾಸ್​ಗೆ ಗ್ರಾಮಾಂತರ ಹಾಗೂ ನಗರ ಭಾಗದಲ್ಲಿ ವಾರದ ದಿನ 8 ಟಿವಿಆರ್, ಶನಿವಾರ 9.1 ಟಿವಿಆರ್ ಹಾಗೂ ಭಾನುವಾರ 10 ಟಿವಿಆರ್​ ಸಿಕ್ಕಿದೆ. ವಾರಾಂತ್ಯದಲ್ಲಿ ಸುದೀಪ್ ಅವರು ಇರುವ ಕಾರಣ ಶೋಗೆ ಭರ್ಜರಿ ಟಿಆರ್​ಪಿ ದೊರೆಯುತ್ತಿದೆ. ‘ಸರಿಗಮಪ’ ಆಡಿಷನ್ ಇತ್ತೀಚೆಗೆ ಪೂರ್ಣಗೊಂಡಿದೆ. ಶನಿವಾರ ಹಾಗೂ ಭಾನುವಾರ ಸಂಜೆ 7.30ರಿಂದ 9 ಗಂಟೆವರೆಗೆ ಈ ಶೋ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ಆಡಿಷನ್ ಎಪಿಸೋಡ್ ಉತ್ತಮ ಟಿಆರ್​ಪಿ ಪಡೆದುಕೊಂಡಿದೆ. ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ 11.1 ಟಿವಿಆರ್ ಹಾಗೂ ಗ್ರಾಮೀಣ ಭಾಗದಲ್ಲಿ 13.1 ಟಿವಿಆರ್ ಈ ಶೋಗೆ ಸಿಕ್ಕಿದೆ. ಈ ಮೂಲಕ ಬಿಗ್ ಬಾಸ್​ನ ಶೋ ಹಿಂದಿಕ್ಕಿದೆ. ‘ಸರಿಗಮಪ’ ಶೋನಲ್ಲಿ ಅನುಶ್ರೀ ಅವರು ಆ್ಯಂಕರಿಂಗ್ ಮಾಡುತ್ತಿದ್ದಾರೆ. ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್ ಹಾಗೂ ಅರ್ಜುನ್ ಜನ್ಯ ಜಡ್ಜ್ ಸ್ಥಾನದಲ್ಲಿ ಇದ್ದಾರೆ.

ಸೀರಿಯಲ್‌ಗಳ ಟಿಆರ್​ಪಿ

ಸೀರಿಯಲ್‌ಗಳ ಟಿಆರ್​ಪಿ ವಿಚಾರಕ್ಕೆ ಬರೋದಾದರೆ, ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಎರಡನೇ ಸ್ಥಾನದಲ್ಲಿ ‘ಅಮೃತಧಾರೆ’ ಹಾಗೂ ‘ಅಣ್ಣಯ್ಯ’ ಧಾರಾವಾಹಿಗಳು ಇವೆ. ಮೂರನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’, ನಾಲ್ಕನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಹಾಗೂ ಐದನೇ ಸ್ಥಾನದಲ್ಲಿ ‘ಭಾಗ್ಯ ಲಕ್ಷ್ಮೀ’ ಧಾರಾವಾಹಿ ಇದೆ.

Continue Reading

bangalore

ಸರಿಗಮಪ ಜ್ಯೂರಿ ಎಸ್ ಬಾಲಿ ವಿಧಿವಶ

Published

on

By

ಮಂಗಳೂರು/ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸರಿಗಮಪ ಸಂಗೀತ ರಿಯಾಲಿಟಿ ಶೋನಲ್ಲಿ ಜ್ಯೂರಿ ಪ್ಯಾನೆಲ್‌ನಲ್ಲಿ ಇರುತ್ತಿದ್ದ ಬಹುವಾದ್ಯ ಪರಿಣಿತರಾಗಿ ಎಸ್. ಬಾಲಿ ಎಂದೇ ಪ್ರಖ್ಯಾತರಾಗಿರುವ ಎಸ್ ಬಾಲಸುಬ್ರಹ್ಮಣ್ಯಂ ಅವರು ನಿಧನರಾಗಿದ್ದಾರೆ.

ಮೃದಂಗ, ತಬಲಾ, ಢೋಲಕ್‌ , ಢೋಲ್ಕಿ, ಖಂಜರಿ, ಕೋಲ್‌ ಹೀಗೆ ಹತ್ತು ಹಲವು ಲಯವಾದ್ಯಗಳನ್ನು ನುಡಿಸುವಲ್ಲಿ ಪರಿಣಿತರಾಗಿದ್ದ ಅಪರೂಪದ ವಿದ್ವಾಂಸ ಎಸ್ ಬಾಲಸುಬ್ರಹ್ಮಣ್ಯಂ ಅವರಿಗೆ 71 ವರ್ಷವಾಗಿತ್ತು.

ಕನ್ನಡ ಚಿತ್ರರಂಗದ ಅನೇಕ ಸಂಗೀತ ಸಾಧಕರು ಬಾಲಿ ಅವರನ್ನು ರಿದಂ ಕಿಂಗ್‌ ಎಂದೇ ಕರೆಯುತ್ತಿದ್ದರು. ಸುಗಮ ಸಂಗೀತದಲ್ಲೂ ಇವರು ಮಾಸ್ಟರ್‌. ದಕ್ಷಿಣ ಭಾರತದ ಏಕೈಕ ರಿದಂ ಕಂಪೋಸರ್‌, ಆಯೋಜಕರು ಮತ್ತು ನಿರ್ದೇಶಕರು ಎಂಬ ಹೆಗ್ಗಳಿಕೆ ಇವರದು.

ಇದನ್ನೂ ಓದಿ: ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಗಂಡು ಮಕ್ಕಳು ಸಾವು

ಬಯಾಲಜಿ ಸುಂದರೇಶನ್ ಎಂದೇ ಖ್ಯಾತರಾಗಿದ್ದ ಎಂ.ವಿ. ಸುಂದರೇಶನ್ ಮತ್ತು ಸಾವಿತ್ರಿ ದಂಪತಿಯ ಮಗನಾಗಿ 1953ರ ಜನವರಿ 9ರಂದು ಬೆಂಗಳೂರಿನಲ್ಲಿ ಬಾಲಿ ಅವರು ಜನಿಸಿದರು. ಮನೆಯಲ್ಲಿ ಸಂಗೀತದ ವಾತಾವರಣವಿತ್ತು. ಚಿಕ್ಕಂದಿನಿಂದಲೇ ಸಂಗೀತದತ್ತ ಒಲವು ಮೂಡಿಸಿಕೊಂಡ ಬಾಲಿ ಪಾಲಕ್ಕಾಡು ಶ್ರೀ ರವೀಂದ್ರನಾಥ ವಾರಿಯರ್ ಬಳಿ ಮೃದಂಗ ಕಲಿತರು. ಮುಂದೆ ಅವರು ಹಲವಾರು ಶಾಸ್ತ್ರೀಯ ಸಂಗೀತಗಾರರಿಗೆ ಮೃದಂಗ ಪಕ್ಕವಾದ್ಯ ಸಹಕಾರದಲ್ಲಿ ಬಾಗಿಯಾಗಿದ್ದಾರೆ.

ದಕ್ಷಿಣ ಭಾರತದ ಏಕೈಕ ರಿದಂ ಕಂಪೋಸರ್-ಅರೇಂಜರ್-ಕಂಡಕ್ಟರ್ ಎಂಬ ಹೆಗ್ಗಳಿಕೆ ಎಸ್. ಬಾಲಿ ಅವರದ್ದಾಗಿದೆ. ಶಂಕರನಾಗ್‌ ಅವರ ಸಂಕೇತ್‌ ಸ್ಟುಡಿಯೊ ಆರಂಭದ ದಿನಗಳಲ್ಲಿ ಎದುರಾದ ಸವಾಲುಗಳನ್ನು ಎದುರಿಸಲು ಬಾಲಿ ಹೆಗಲು ನೀಡಿದರು.

ಬಾಲಿ ಅವರು ಕನ್ನಡದ ಮೊಟ್ಟಮೊದಲ ಧ್ವನಿಸುರಳಿ ಕವಿ ನಿಸಾರ್ ಅಹಮ್‌ದರವರ ನಿತ್ಯೋತ್ಸವದಿಂದ ಮೊದಲುಗೊಂಡು ಮೈಸೂರು ಅನಂತಸ್ವಾಮಿಯವರ ಸಂಯೋಜನೆಗಳಿಗೆ ಸಹಾಯಕರಾಗಿ ವಾದ್ಯದ ನೆರವು ನೀಡಿದವರು. ಹಲವಾರು ಧ್ವನಿಸುರುಳಿಗಳು, ಕಿರುತೆರೆ, ನಾಟಕಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ವಿಶ್ವದೆಲ್ಲೆಡೆ ಬಾಲಿ ಅವರ ಲಯ ಸಂಗೀತ ಶಾಶ್ವತವಾಗಿ ಮೊಳಗುತ್ತಲೇ ಇದೆ. 1970ರ ದಶಕದಲ್ಲಿ ಬಾಲಿ ಬಹುಬೇಡಿಕೆಯ ವ್ಯಕ್ತಿಯಾಗಿದ್ದರು. ಅವರಿಗ ರಾಜ್ಯ ಸಂಗೀತ ನೃತ್ಯ ಅಕಾಡೆಮಿ ಗೌರವ, ಕರ್ನಾಟಕ ಕಲಾಶ್ರೀ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ.

Continue Reading

bangalore

ಮಾಜಿ ಸಚಿವ ಮುನಿರತ್ನ ತಲೆಗೆ ಮೊಟ್ಟೆ ಹೊಡೆತ !

Published

on

By

ಮಂಗಳೂರು/ಬೆಂಗಳೂರು: ಜಾತಿ ನಿಂದನೆ ಹಾಗೂ ಹಲವು ಆರೋಪಗಳ ಮೇಲೆ ಜೈಲಿಗೆ ಹೋಗಿ ಜಾಮೀನಿನ ಮೇಲೆ ಆಚೆ ಬಂದಿರುವ ಮಾಜಿ ಶಾಸಕ ಹಾಗೂ ಕನ್ನಡ ಚಿತ್ರ ನಿರ್ಮಾಪಕ ಮುನಿರತ್ನ ಅವರ ತಲೆಗೆ ಮೊಟ್ಟೆ ಹೊಡೆದ ಘಟನೆ ಲಗ್ಗೆರೆ ಸಮೀಪದ ಲಕ್ಷೀದೇವಿನಗರದಲ್ಲಿ ನಡೆದಿದೆ.

ಲಕ್ಷ್ಮೀ ದೇವಿ ನಗರ ವಾರ್ಡ್ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನಾಚಾರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಶಾಸಕ ಮುನಿರತ್ನ ಹೋಗುತ್ತಿದ್ದ ವೇಳೆ ಕಂಠೀರವ ಸ್ಟುಡಿಯೋ ಬಳಿ ಕಾಂಗ್ರೆಸ್ ಕಾರ್ಯಕರ್ತರು ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಜಮ್ಮುವಿನಲ್ಲಿ ಸೇನಾ ವಾಹನ ಅಪಘಾತ; ಉಡುಪಿ ಮೂಲದ ಯೋಧ ಸೇರಿ ಐವರು ಹುತಾತ್ಮ

ಈ ವೇಳೆ ಶಾಸಕ ಮುನಿರತ್ನ ಅವರು ತಮ್ಮ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ನಂತರ ಅವರು ಅಲ್ಲಿಂದ ತೆರಳಿದ್ದಾರೆ. ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಮುನಿರತ್ನ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು 2ರಿಂದ 3 ಕಾರು ಜಖಂ ಆಗಿ ಹಲವರಿಗೆ ಗಾಯವಾಗಿದೆ ಎಂದು ಹೇಳಲಾಗುತ್ತಿದೆ. ಕಾಂಗ್ರೆಸ್ ಕಾರ್ಯಕರ್ತರ ಮೇಲೂ ಶಾಸಕ ಮುನಿರತ್ನ ಬೆಂಬಲಿಗರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page