Connect with us

FILM

ಮತ್ತೊಂದು ಮೈಲಿಗಲ್ಲು ಸೃಷ್ಟಿಸಲು ‘ಕಾಂತಾರ’ ಸ್ಟಾರ್ ರೆಡಿ- ಹನುಮಂತನ ಪಾತ್ರದಲ್ಲಿ ರಿಷಬ್ ಶೆಟ್ಟಿ ಮೋಡಿ

Published

on

‘ಕಾಂತಾರ’ ಕಣಕ್ಕಿಳಿದಿರುವ ಕಾಡುಬೆಟ್ಟ ಶಿವನ ಲುಕ್ಕು ಕಣ್ತುಂಬಿಕೊಳ್ಳುವುದ್ದಕ್ಕೆ ಅಖಂಡ ಸಿನಿಮಾ ಪ್ರೇಮಿಗಳು ಕಾತರದಿಂದ ಕಾಯ್ತಿದ್ದಾರೆ. ಕುಂದಾಪುರದ ಕೆರಾಡಿ ಹುಡ್ಗ ‘ಕಾಂತಾರ’ ಪ್ರೀಕ್ವೆಲ್ ಮೂಲಕ ಕದಂಬರ ಕಥೆ ಹರವಿಡೋದಿಕ್ಕೆ ರೆಡಿಯಾಗಿರುವುದರ ಜೊತೆಗೆ ಪುರಾತನ ಸಮರ ಕಲೆ ಕಳರಿಪಯಟ್ಟು ಕಲೆಯನ್ನ ಕಟ್ಟಿಕೊಡಲು ಕಸರತ್ತು ನಡೆಸಿದ್ದಾರೆ. ಇದರ ನಡುವೆ ಹನುಮಾನ್ ಪಾತ್ರದಲ್ಲಿ ಮಿಂಚಲು ರಿಷಬ್ ಶೆಟ್ಟಿ ರೆಡಿಯಾಗಿದ್ದಾರೆ. ಈ ಮೂಲಕ ತೆಲುಗಿಗೆ ನಟ ಎಂಟ್ರಿ ಕೊಟ್ಟಿದ್ದಾರೆ.

ಟಾಲಿವುಡ್ ಅಂಗಳದಲ್ಲಿ ಮೂಡಿಬಂದಿದ್ದ ‘ಜೈ ಹನುಮಾನ್’ ಸಿನಿಮಾ ಸಕ್ಸಸ್‌ ಕಂಡಿತ್ತು. ಗಲ್ಲಾಪೆಟ್ಟಿಗೆಯಲ್ಲಿ ಕಮಾಲ್ ಮಾಡಿದ್ದ ಹನುಮಾನ್ ಸಿನಿಮಾದ ಸೀಕ್ವೆಲ್ ಮೂಡಿಬರುತ್ತಿದ್ದು, ಇದೀಗ ಪ್ಯಾನ್‌ ಇಂಡಿಯಾ ಹಿಟ್ ಸೀಕ್ವೆಲ್‌ನಲ್ಲಿ ‘ಕಾಂತಾರ’ (Kantara) ಶಿವ ನಟಿಸುವುದು ಅಧಿಕೃತವಾಗಿದೆ. ನಿರ್ದೇಶಕ ಪ್ರಶಾಂತ್ ವರ್ಮಾ ಡೈರೆಕ್ಷನ್ ಅಡಿಯಲ್ಲಿ ಮೂಡಿ ಬರುತ್ತಿರುವ ‘ಹನುಮಾನ್’ ಸಿನಿಮಾದ ಸೀಕ್ವೆಲ್‌ನಲ್ಲಿ ರಿಷಬ್ ಶೆಟ್ಟಿ ಹನುಮಂತನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದೀಪಾವಳಿಯ ವಿಶೇಷ ಸಂದರ್ಭದಲ್ಲಿ ಫಸ್ಟ್ ಲುಕ್ ಬಿಡುಗಡೆ ಮಾಡಲಾಗಿದೆ.

ನಿರ್ದೇಶಕ ಪ್ರಶಾಂತ್ ವರ್ಮಾ ‘ಜೈ ಹನುಮಾನ್’ ಚಿತ್ರದ ಸೀಕ್ವೆಲ್‌ನಲ್ಲಿ ಹನುಮಾನ್ ಪಾತ್ರಧಾರಿಗೆ ಬಹಳಷ್ಟು ಅಳೆದೂ ತೂಗಿ ರಿಷಬ್ ಶೆಟ್ಟಿ ಅವರನ್ನು ಆಯ್ಕೆ ಮಾಡಿದ್ದಾರೆ. ಕಾಂತಾರ ಸೀಕ್ವೆಲ್‌ಗಾಗಿ ನ್ಯಾಷನಲ್ ಅವಾರ್ಡ್‌ ಮುಡಿಗೇರಿಸಿಕೊಂಡಿರುವ ಡಿವೈನ್ ಸ್ಟಾರ್ ಕೇವಲ ನಟರಾಗಿ ಅಷ್ಟೇ ಅಲ್ಲದೆ, ನಿರ್ದೇಶಕರಾಗಿಯೂ ಪ್ಯಾನ್ ಇಂಡಿಯಾದಾದ್ಯಂತ ಮೋಡಿ ಮಾಡಿದ್ದಾರೆ. ಇದೇ ಕಾರಣಕ್ಕೆ ಯಾವುದೇ ಪಾತ್ರವನ್ನಾದರೂ ರಿಷಬ್ ನಿಭಾಯಿಸಬಲ್ಲರು. ಜೊತೆಗೆ ಕಥೆ-ಚಿತ್ರಕಥೆ ಹಾಗೂ ಸಂಭಾಷಣೆ ವಿಭಾಗಗಳಲ್ಲೂ ರಿಷಬ್ ಶೆಟ್ಟಿಗೆ ಕಂಟ್ರೋಲ್ ಇರೋದ್ರಿಂದ ‘ಹನುಮಾನ್’ ಸಿನಿಮಾದ ಸೀಕ್ವೆಲ್‌ಗೆ ಪ್ಲಸ್ ಪಾಯಿಂಟ್ಸ್ ಆಗಲಿದೆ.

ಕೈಯಲ್ಲಿ ರಾಮನ ವಿಗ್ರಹ ಹಿಡಿದು ರಿಷಬ್ ಶೆಟ್ಟಿ ಹನುಮಾನ್ ಪಾತ್ರದಲ್ಲಿ ಪವರ್‌ಫುಲ್ ಪೋಸ್ಟ್ ಕೊಟ್ಟಿದ್ದಾರೆ. ಫಸ್ಟ್ ಲುಕ್ ಪೋಸ್ಟರ್ ಬಹಳ ಆಕರ್ಷಕವಾಗಿದೆ. ‘ಜೈ ಹನುಮಾನ್’ ಸಿನಿಮಾವನ್ನು ಪ್ರಶಾಂತ್ ವರ್ಮಾ ಸಿನಿಮಾಟಿಕ್ ಯೂನಿವರ್ಸ್‌ನ ಭಾಗವಾಗಿ ತಯಾರಾಗಲಿದೆ. ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್‌ ನಿರ್ಮಾಣ ಮಾಡಲಿದ್ದಾರೆ.

FILM

ಸಿನಿಮಾ ಶೂಟಿಂಗ್ ವೇಳೆ ಕುಸಿದು ಬಿದ್ದು ಕನ್ನಡದ ನಿರ್ದೇಶಕ ಸಾವು

Published

on

ಶಿವಮೊಗ್ಗ: ಸಾವು ಅನ್ನೋದು ಯಾವಾಗ ಹೇಗೆ ಬರುತ್ತದೆ ಎಂದು ಊಹಿಸೋದು ತುಂಬಾನೇ ಕಷ್ಟ. ಅದೆಷ್ಟೋ ಕಲಾವಿದರು ಅಭಿನಯ ಮಾಡುತ್ತಿರುವಾಗಲೇ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇದೀಗ ಕನ್ನಡದ ನಿರ್ದೇಶಕರೊಬ್ಬರು ಸಿನಿಮಾ ಚಿತ್ರೀಕರಣದ ವೇಳೆಯೇ ಕುಸಿದು ಬಿದ್ದ ಪರಿಣಾಮ ಬುಧವಾರ (ಡಿ.03) ಮೃತಪಟ್ಟಿದ್ದಾರೆ. ಸಂಗೀತ್ ಸಾಗರ್ ಮೃತಪಟ್ಟ ನಿರ್ದೇಶಕ.


ಸಂಗೀತ್ ಸಾಗರ್ ಶಿವಮೊಗ್ಗ ಕೊಪ್ಪದಲ್ಲಿ ಪಾತ್ರಧಾರಿ ಸಿನಿಮಾ ಶೂಟಿಂಗ್ ಮಾಡುತ್ತಿದ್ದರು. ಇಡೀ ತಂಡ ಅಲ್ಲಿ ಬೀಡು ಬಿಟ್ಟಿತ್ತು. ಆ ವೇಳೆ ನಿರ್ದೇಶಕ ಸಾಗರ್ ಕುಸಿದು ಬಿದ್ದಿದ್ದಾರೆ. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಏನೂ ಪ್ರಯೋಜನ ಆಗಿಲ್ಲ.

ಇದನ್ನೂ ಓದಿ: ಮದುವೆ ಮನೆಯಲ್ಲಿ ರಾದ್ಧಾಂತ ಮಾಡಿದ ವರನ ಕುಟುಂಬ; ಕಾರಣ ಏನು ಗೊತ್ತಾ?

ಮೃತ ನಿರ್ದೇಶಕ ಸಂಗೀತ್ ಸಾಗರ್ ಪತ್ನಿ ಮತ್ತು ಮಗಳನ್ನು ಅಗಲಿದ್ದಾರೆ.

Continue Reading

FILM

ಡೆವಿಲ್ ಸಿನಿಮಾ ಸೆಟ್‌ನಲ್ಲಿ ಮರೆಯಲಾಗದ ಕ್ಷಣಗಳು ಇವು : ಚಂದು ಗೌಡ ಪೋಸ್ಟ್

Published

on

ಮಂಗಳೂರು/ಬೆಂಗಳೂರು : ನಟ ದರ್ಶನ್ ಅಭಿನಯದ ಬಹುನಿರೀಕ್ಷಿತ ಚಿತ್ರ ದಿ ಡೆವಿಲ್.  ಡಿಸೆಂಬರ್ 11 ರಂದು ಚಿತ್ರ ತೆರೆಗಪ್ಪಳಿಸಲಿದೆ.  ನಾಳೆ(ಡಿ.05) ಡೆವಿಲ್‌ ಚಿತ್ರದ ಟ್ರೇಲರ್ ಬಿಡುಗಡೆ  ಮಾಡಲಾಗುವುದೆಂದು ಚಿತ್ರತಂಡ ಈಗಾಗಲೇ ತಿಳಿಸಿದೆ.

ಈ ಚಿತ್ರದಲ್ಲಿ ಹಿರಿತೆರೆ – ಕಿರುತೆರೆಯ ತಾರೆಯರು ಅಭಿನಯಿಸಿದ್ದಾರೆ.  ಲಕ್ಷ್ಮೀ ಬಾರಮ್ಮ ಖ್ಯಾತಿಯ ಚಂದು ಗೌಡ ಕೂಡ ಡೆವಿಲ್ ಸಿನಿಮಾದಲ್ಲಿ ಪಾತ್ರವಾಗಿದ್ದಾರೆ. ಇದೀಗ ಅವರು ಡೆವಿಲ್ ಸಿನಿಮಾ ಚಿತ್ರೀಕರಣದಲ್ಲಿ ನಟ ದರ್ಶನ್ ಜೊತೆ ಭಾಗಿಯಾಗಿದ್ದ ಫೋಟೋವನ್ನು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

‘ದಿ ಡೆವಿಲ್ ಸಿನಿಮಾ ಸೆಟ್‌ನಲ್ಲಿ ಮರೆಯಲಾಗದ ಕ್ಷಣಗಳು ಇವು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೊಂದಿಗೆ ಕೆಲಸ ಮಾಡಿದ್ದು ಜೀವಮಾನ ನೆನಪಿನಲ್ಲಿ ಉಳಿಯುತ್ತದೆ. ಡಿಸೆಂಬರ್ 11ರಂದು ಚಿತ್ರಮಂದಿರಗಳಲ್ಲಿ ‘ದಿ ಡೆವಿಲ್’ ಸಿನಿಮಾ ನೋಡುವುದನ್ನು ತಪ್ಪಿಸಿಕೊಳ್ಳಬೇಡಿ’ ಎಂದು ಬರೆದುಕೊಂಡಿದ್ದಾರೆ.

‘ಲಕ್ಷ್ಮೀ ಬಾರಮ್ಮ’, ‘ತ್ರಿನಯನಿ’ ಧಾರಾವಾಹಿ ಮೂಲಕ ನಟ ಚಂದು ಗೌಡ ಜನಪ್ರಿಯರಾಗಿದ್ದಾರೆ. ಅಟೆಂಪ್ಟ್ ಟು ಮರ್ಡರ್ , ಕೃಷ್ಣ ಗಾರ್ಮೆಂಟ್ಸ್  ಸಿನಿಮಾಗಳಲ್ಲಿ ನಟಿಸಿದ್ದಾರೆ. ಬಹುನಿರೀಕ್ಷಿತ ‘ದಿ ಡೆವಿಲ್’ ಸಿನಿಮಾದಲ್ಲಿ ನಟಿಸಿದ್ದು, ಚಿತ್ರ ಬಿಡುಗಡೆಗೆ ಕಾಯುತ್ತಿದ್ದಾರೆ.

ಇದನ್ನೂ ಓದಿ : ಈ ವಾರ ಕಿಚ್ಚನ ಚಪ್ಪಾಳೆ ಧ್ರುವಂತ್‌ಗೆ ಫಿಕ್ಸ್!? ಯಾಕೆ ಗೊತ್ತಾ?

ದಿ ಡೆವಿಲ್‌ ಸಿನಿಮಾಕ್ಕೆ ಮಿಲನಾ ಪ್ರಕಾಶ್  ನಿರ್ದೇಶನವಿದೆ. ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ರಚನಾ ರೈ, ಶರ್ಮಿಳಾ ಮಾಂಡ್ರೆ ಮೊದಲಾದವರು ನಟಿಸಿದ್ದಾರೆ.

Continue Reading

FILM

ಜೈ ಚಿತ್ರತಂಡದಿಂದ ಗುಡ್ ನ್ಯೂಸ್; ಮುಂಬೈನಲ್ಲಿ ನಡೆಯಲಿದೆ ಅತಿದೊಡ್ಡ ಪ್ರೀಮಿಯರ್ ಶೋ

Published

on

ಮಂಗಳೂರು : ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ನಿರ್ದೇಶನ ಮತ್ತು ಅಭಿನಯದ ತುಳು ಚಲನಚಿತ್ರ ‘ಜೈ’ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ತುಳು ಚಿತ್ರರಂಗದಲ್ಲೇ ಹೊಸ ರೆಕಾರ್ಡ್ ಕೂಡ ಮಾಡಿದೆ. ಇದೀಗ ಚಿತ್ರತಂಡದ ಕಡೆಯಿಂದ ಗುಡ್ ನ್ಯೂಸ್ ಒಂದಿದೆ. ಹೌದು, ಜೈ ಸಿನಿಮಾ ಮುಂಬೈನಲ್ಲಿ ಪ್ರೀಮಿಯರ್ ಶೋ ಕಾಣಲಿದೆ.

ವಿಶ್ವದಾದ್ಯಂತ ನವೆಂಬರ್ 14 ರಂದು ತೆರೆಗೆ ಬಂದಿರುವ ಜೈ ಸಿನಿಮಾ ಜನಮನ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ರೂಪೇಶ್ ಶೆಟ್ಟಿ ನಟನೆ, ನಿರ್ದೇಶನ ಎರಡರಲ್ಲೂ ಗೆದ್ದಿದ್ದಾರೆ. ಇದೀಗ ಡಿ.14 ರಂದು ದುಬೈನಲ್ಲಿ ಅತಿ ದೊಡ್ಡ ಪ್ರೀಮಿಯರ್ ಶೋ ನಡೆಯಲಿದೆ.

ಆರ್.ಎಸ್ ಸಿನಿಮಾಸ್, ಶೂಲಿನ್ ಫಿಲಂಸ್ ಹಾಗೂ ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಆ್ಯಕ್ಷನ್, ಡ್ರಾಮಾ ಮತ್ತು ಎಮೋಷನ್ಗಳ ಸಮನ್ವಯವಿದೆ. ಚಿತ್ರದ ಕಥೆ ಹಾಗೂ ಸಂಭಾಷಣೆ ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಕ್ಯಾಮೆರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ್ಹಾ, ಸಂಕಲನ ರಾಹುಲ್ ವಸಿಷ್ಠ ಅವರದ್ದು.

ಇದನ್ನೂ ಓದಿ : BBK12: ಗಿಲ್ಲಿಗೆ ಖಡಕ್‌ ಎಚ್ಚರಿಕೆ ನೀಡಿದ ಕಾವ್ಯ! ಕಾರಣ ಏನು?

ರೂಪೇಶ್ಗೆ ಜೋಡಿಯಾಗಿ ಅದ್ವಿತಿ ಶೆಟ್ಟಿ ನಟಿಸಿದ್ದಾರೆ. ಬಾಲಿವುಡ್ ಸ್ಟಾರ್ ಸುನೀಲ್ ಶೆಟ್ಟಿ ಚಿತ್ರದ ಪ್ರಮುಖ ಆಕರ್ಷಣೆ. ಅರವಿಂದ್ ಬೋಳಾರ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ. ಪಡೀಲ್, ದೇವದಾಸ್ ಕಾಪಿಕಾಡ್ ಮುಂತಾದವರು ನಟಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page