Connect with us

LATEST NEWS

ಕಾರ್ಕಳ : ಉದ್ಯಮದಲ್ಲಿ ಆರ್ಥಿಕ ನಷ್ಟ- ಉದ್ಯಮಿ ನಕುಲದಾಸ್ ಪೈ ಆತ್ಮಹತ್ಯೆ..!

Published

on

ಉದ್ಯಮದಲ್ಲಿ ತೀವ್ರ ಆರ್ಥಿಕ ನಷ್ಟ ಉಂಟಾದ ಕಾರಣ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಉದ್ಯಮಿಯೋರ್ವರು ಜೀವಾಂತ್ಯ ಮಾಡಿಕೊಂಡಿದ್ದಾರೆ.

ಕಾರ್ಕಳ : ಉದ್ಯಮದಲ್ಲಿ ತೀವ್ರ ಆರ್ಥಿಕ ನಷ್ಟ ಉಂಟಾದ ಕಾರಣ ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಉದ್ಯಮಿಯೋರ್ವರು ಜೀವಾಂತ್ಯ ಮಾಡಿಕೊಂಡಿದ್ದಾರೆ.

ಹೆರ್ಮುಂಡೆ ಪದ್ಮಾವತಿ ಕ್ಯಾಶ್ಯೂ ಇಂಡಸ್ಟ್ರೀಸ್ ಮಾಲಕ ಅಜೆಕಾರು ನಿವಾಸಿ ನಕುಲ್ ದಾಸ್ ಪೈ (52) ಆತ್ಮಹತ್ಯೆಗೆ ಶರಣಾದ ಉದ್ಯಮಿಯಾಗಿದ್ದಾರೆ.

ತನ್ನ ಫ್ಯಾಕರಿಯಲ್ಲಿ ನೇಣು ಬಿಗಿದು ನಕುಲ್ ದಾಸ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಹೆರ್ಮುಂಡೆಯಲ್ಲಿರುವ ತಮ್ಮ ಫ್ಯಾಕ್ಟರಿಯ ಹಿಂಭಾಗದಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ವ್ಯವಹಾರದಲ್ಲಿ ಆದ ನಷ್ಟವೇ ಆತ್ಮಹತ್ಯೆಗೆ ಕಾರಣ ಎಂದು ತಿಳಿದು ಬಂದಿದೆ.

ಈ ಬಗ್ಗೆ ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

LATEST NEWS

Watch video: ಆಲಿಕಲ್ಲು ಮಳೆ, ಗುಡುಗು, ಮಿಂಚಿನಿಂದ ಇಂಡಿಗೋ ವಿಮಾನ ಜಸ್ಟ್​ ಮಿಸ್

Published

on

ಮಂಗಳೂರು/ನವದೆಹಲಿ: ದೆಹಲಿಯಿಂದ ಶ್ರೀನಗರಕ್ಕೆ 227 ಜನರನ್ನು ಹೊತ್ತೊಯ್ಯುತ್ತಿದ್ದ ಇಂಡಿಗೋ ವಿಮಾನವು ಗಾಳಿಯಲ್ಲಿ ತೀವ್ರ ಪ್ರಕ್ಷುಬ್ಧತೆಯನ್ನು ಎದುರಿಸಿದ್ದು, ದೊಡ್ಡ ಅನಾಹುತದಿಂದ ಪಾರಾಗಿದೆ.

ಹೌದು, ಇಂಡಿಗೋ ವಿಮಾನ 6E2142 ದೆಹಲಿಯಿಂದ ಜಮ್ಮುಕಾಶೀರದ ಶ್ರೀನಗರಕ್ಕೆ 200 ಪ್ರಯಾಣಿಕರನ್ನು ಹೊತ್ತು ಆಕಾಶದಲ್ಲಿ ಪ್ರಯಾಣಿಸುತ್ತಿತ್ತು. ವಿಮಾನ ಆಕಾಶದಲ್ಲಿ ಇರುವಾಗಲೇ ಬಲವಾದ ಆಲಿಕಲ್ಲು ಮಳೆ ಆರಂಭವಾಗಿದೆ. ಆಲಿಕಲ್ಲುಗಳು ವಿಮಾನದ ಮೇಲೆ ಬೀದ್ದಿದ್ದರಿಂದ ಶಬ್ಧ ಕೂಡ ಭಯ ಮೂಡಿಸಿದೆ. ಆಲಿಕಲ್ಲು ಮಳೆ ಜೊತೆಗೆ ಗುಡುಗು, ಮಿಂಚು, ಗಾಳಿಯೂ ಜೋರಾಗಿ ಬೀಸುತ್ತಿದ್ದರಿಂದ ಇಡೀ ವಿಮಾನವೇ ಆಕಾಶದಲ್ಲಿ ಅಲುಗಾಡಿದ್ದು ಭಾರೀ ಆತಂಕಕ್ಕೆ ಕಾರಣವಾಗಿತ್ತು.

ಇದರಿಂದ ಗಾಬರಿಯಾದ ಪ್ರಯಾಣಿಕರು ವಿಮಾನದೊಳಗೆ ಕುಳಿತು ಕಿರುಚಾಡುತ್ತಾ, ದೇವರಲ್ಲಿ ಪ್ರಾರ್ಥನೆ ಮಾಡುತ್ತಾ ಗೋಳಾಡುವ ವಿಡಿಯೋಗಳನ್ನು ಪ್ರಯಾಣಿಕರೇ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಪ್ರಕ್ಷುಬ್ಧ ಹವಾಮಾನದಿಂದಾಗಿ ವಿಮಾನ ಪೈಲಟ್ ತಕ್ಷಣ ಶ್ರೀನಗರದ ವಾಯು ಸಂಚಾರ ನಿಯಂತ್ರಣಕ್ಕೆ ತುರ್ತು ವರದಿ ಮಾಡಿದ್ದಾರೆ. ತುರ್ತು ವರದಿ ಬೆನ್ನಲ್ಲೇ ಸಂಜೆ 6:30ಕ್ಕೆ ಸುರಕ್ಷಿತವಾಗಿ ವಿಮಾನ ಶ್ರೀನಗರದಲ್ಲಿ ಲ್ಯಾಂಡ್ ಆಗಿದೆ.

ಆಗಸದಲ್ಲೇ ಇರುವಾಗಲೇ ಆಲಿಕಲ್ಲು ಬಿದ್ದಿದ್ದರಿಂದ ವಿಮಾನದ ಮುಂದಿನ ಭಾಗ ಅಥವಾ ವಿಮಾನದ ಮೂಗಿನ ಭಾಗ ಹಾನಿಯಾಗಿದೆ. ಆದರೆ ಸುರಕ್ಷಿತವಾಗಿ ವಿಮಾನ ಲ್ಯಾಂಡ್ ಆಗಿದ್ದರಿಂದ ಪ್ರಯಾಣಿಕರೆಲ್ಲ ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ: ಪೂಜಾ ಖೇಡ್ಕರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್

ಹಠಾತ್ ಆಲಿಕಲ್ಲು ಮಳೆ ಬೀಳುವಾಗ ವಿಮಾನದ ಕ್ಯಾಬಿನ್ ಸಿಬ್ಬಂದಿ ಶಿಷ್ಟಾಚಾರ ಕಟ್ಟುನಿಟ್ಟಾಗಿ ಪಾಲಿಸಿದ್ದರಿಂದ ವಿಮಾನ ಶ್ರೀನಗರವನ್ನು ಸುರಕ್ಷಿತವಾಗಿ ತಲುಪಿತು ಎಂದು ಹೇಳಲಾಗಿದೆ. ಈ ಭಯಾನಕ ಘಟನೆಯ ವೀಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

Watch video

Continue Reading

LATEST NEWS

ಬಾತ್‌ರೂಂನಲ್ಲಿ ಹೃದಯಾಘಾತವಾಗಿ ಯುವತಿ ಸಾವು

Published

on

ಹಾಸನ : ಬಾತ್‌ರೂಂನಲ್ಲಿ ಹೃದಯಾಘಾತವಾಗಿ ಕುಸಿದು ಬಿದ್ದು ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಹಾಸನದ ಹೊಳೆನರಸೀಪುರ ಪಟ್ಟಣದಲ್ಲಿ ನಡೆದಿದೆ.

ಸಂಧ್ಯಾ (19) ಸಾವನ್ನಪ್ಪಿದ ಯುವತಿ ಎಂದು ತಿಳಿದುಬಂದಿದೆ. ವೆಂಕಟೇಶ್ ಮತ್ತು ಪೂರ್ಣಿಮ ದಂಪತಿಗಳ ಪುತ್ರಿಯಾದ ಸಂಧ್ಯಾ ಅಂತಿಮ ವರ್ಷದ ಡಿಪ್ಲೊಮಾ ಮುಗಿಸಿದ್ದಳು.

ಇದನ್ನೂ ಓದಿ: ಕುಮಟಾ ಬಳಿ ಗುಡ್ಡ ಕುಸಿತ; ರಸ್ತೆ ಸಂಚಾರ ಬಂದ್

ಬಾತ್‌ರೂಂಗೆ ತೆರಳಿದ್ದ ವೇಳೆ ಸಂಧ್ಯಾ ಕುಸಿದು ಬಿದ್ದಿದ್ದಾಳೆ. ಕೂಡಲೇ ಬಾತ್‌ರೂಂ ಬಾಗಿಲು ಒಡೆದು ಪೋಷಕರು ಆಸ್ಪತ್ರೆಗೆ ದಾಖಲಿಸುವ ಪ್ರಯತ್ನ ಮಾಡಿದ್ದರು. ಆದರೆ ಅಷ್ಟರಲ್ಲೇ ಸಂಧ್ಯಾಳ ಪ್ರಾಣ ಪಕ್ಷಿ ಹಾರಿ ಹೋಗಿತ್ತು.

Continue Reading

LATEST NEWS

ಕುಮಟಾ ಬಳಿ ಗುಡ್ಡ ಕುಸಿತ; ರಸ್ತೆ ಸಂಚಾರ ಬಂದ್

Published

on

ಕಾರವಾರ: ಕಳೆದೆರಡು ದಿನಗಳಿಂದ ಸುರಿದ ಭಾರೀ ಮಳೆಯಿಂದಾಗಿ ಕುಮಟಾದ ರಾಷ್ಟ್ರೀಯ ಹೆದ್ದಾರಿಯಿಂದ ಮಿರ್ಜಾನ-ಕತಗಾಲ ರಸ್ತೆಯಲ್ಲಿ  ತೆರಳುವ ದೇವಿಮನೆ ಪ್ರದೇಶದಲ್ಲಿ ಗುಡ್ಡ ಕುಸಿತವಾಗಿದೆ. ಇದರಿಂದಾಗಿ ರಸ್ತೆ ಸಂಚಾರ ಬಂದ್ ಕೂಡ ಆಗಿದೆ.

ಈ ರಸ್ತೆಯಲ್ಲಿ ಅನೇಕ ವಾಹನಗಳು ಸಂಚರಿಸುವ ಕಾರಣ ಗುಡ್ಡ ಕುಸಿತವಾದರೆ ಪ್ರಾಣಾಪಾಯವಾಗುವ ಸಾಧ್ಯತೆಯು ಹೆಚ್ಚಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ತಾತ್ಕಾಲಿಕವಾಗಿ ರಸ್ತೆಯನ್ನು ಬಂದ್ ಮಾಡಲಾಗಿದೆ.

ಕುಮಟಾ ರಾಷ್ಟ್ರೀಯ ಹೆದ್ದಾರಿ 766E ಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ. ರಸ್ತೆ ಅಗಲೀಕರಣಕ್ಕಾಗಿ ಪಕ್ಕದ ಬಂಡೆಗಲ್ಲನ್ನು ಒಡೆಯಲಾಗಿತ್ತು. ಈಗ ಮಳೆಯ ಪರಿಣಾಮ ಹೆಚ್ಚಾಗಿದ್ದರಿಂದ ಈ ಪ್ರದೇಶದಲ್ಲಿ ಭೂಕುಸಿತವಾಗಿದೆ.

ಇದನ್ನೂ ಓದಿ: ಶಿರಾಡಿ ಕೊಡ್ಯಕಲ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ; ಚಾಲಕನಿಗೆ ಗಂಭೀರ ಗಾಯ

ಗುಡ್ಡ ಕುಸಿತವಾದ್ದರಿಂದ ಬಂಡೆಗಳು ರಸ್ತೆಯ ಮೇಲೆ ಬಿದ್ದಿದೆ. ಕಳೆದ ವರ್ಷವು ಇದೇ ಜಾಗದಲ್ಲಿ ಗುಡ್ಡ ಕುಸಿತವಾಗಿತ್ತು. ಈ ವರ್ಷ ಮಳೆಯ ಪ್ರಮಾಣ ಹೆಚ್ಚಾದರೆ ಕುಸಿತದ ಭೀತಿಯು ಮತ್ತಷ್ಟು ಹೆಚ್ಚಾಗಲಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page