Connect with us

ಕರ್ನಾಟಕ ಬಜೆಟ್ 2020 ಹೈಲೈಟ್ಸ್: ಯಾವುದು ಏರಿಕೆ ಯಾವುದು ಇಳಿಕೆ, ಕ್ವಿಕ್ ರೌಂಡಪ್

Published

on

ಕರ್ನಾಟಕ ಬಜೆಟ್ 2020: ಬಜೆಟ್ ಓದುವುದರಲ್ಲಿ ಯಡಿಯೂರಪ್ಪ ಹೊಸ ಇತಿಹಾಸ

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ ಮಾರ್ಚ್.05ರ ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಜೆಟ್ ಮಂಡಿಸಿದರು.

2020-21 ನೇ ಸಾಲಿನ ಕರ್ನಾಟಕ ಆಯವ್ಯಯವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಇಂದು ವಿಧಾನಸಭೆಯಲ್ಲಿ ಯಶಸ್ವಿಯಾಗಿ ಮಂಡಿಸಿದರು.

ಬಜೆಟ್ ಓದುವುದರಲ್ಲಿ ಯಡಿಯೂರಪ್ಪ ಹೊಸ ಇತಿಹಾಸ ಸೃಷ್ಟಿಸಿದರು.

ಯಡಿಯೂರಪ್ಪ ಅವರು ಇಂದು ಓದಿದ ಬಜೆಟ್ ರಾಜ್ಯದ ಆಯವ್ಯಯ ಇತಿಹಾಸದಲ್ಲೇ ಅತಿ ಕಡಿಮೆ ಅವಧಿಯಲ್ಲಿ ಓದಿ ಮುಗಿಸಿದ ಬಜೆಟ್ ಎಂದು ದಾಖಲೆ ಬರೆಯಿತು.

ಒಟ್ಟು 112 ಪುಟಗಳ ಬಜೆಟ್ ಪ್ರತಿಯನ್ನು ಸಿಎಂ ಯಡಿಯೂರಪ್ಪ ಅವರು 1.40 ಗಂಟೆಯಲ್ಲಿ ಓದಿ ಮುಗಿಸಿದರು.

ಈ ಮೂಲಕ ಅತಿ ಕಡಿಮೆ ಅವಧಿಯಲ್ಲಿ ಬಜೆಟ್ ಭಾಷಣ ಮಂಡಿಸಿದರು. ಒಟ್ಟು 2.38 ಲಕ್ಷ ಕೋಟಿ ರುಪಾಯಿ ಗಾತ್ರದ ಬಜೆಟ್‌ನ್ನು ಸಿಎಂ ಮಂಡಿಸಿದರು.

ಈ ಹಿಂದೆ 2018 ರಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ್ದ ಬಜೆಟ್ ಅತಿ ದೀರ್ಘಾವಧಿಯ ಬಜೆಟ್ ಎನಿಸಿಕೊಂಡಿತ್ತು.

ಕರಾವಳಿಗೆ ಬಜೆಟ್ ಕೊಡುಗೆ ಏನು.?

ಉಡುಪಿ ಜಿಲ್ಲೆ ಹೆಜಮಾಡಿಕೋಡಿಯಲ್ಲಿ ಅಂದಾಜು ವೆಚ್ಚ 181 ಕೋಟಿ ರೂ.ಗಳಲ್ಲಿ ಮೀನುಗಾರಿಕೆ ಬಂದರು ನಿರ್ಮಾಣ.

ಉಡುಪಿ ಜಿಲ್ಲೆಯ ಹಂಗಾರಕಟ್ಟೆ ಬಂದರು ಅಭಿವೃದ್ಧಿಗೆ 130 ಕೋಟಿ ರೂ. ಮೀಸಲಿಡಲಾಗಿದೆ.

ಮುಲ್ಕಿಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ಹಿನ್ನೀರು ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆ.

ಮಂಗಳೂರು ತಾಲೂಕು ಕುಳಾಯಿಯಲ್ಲಿ ನಿರ್ಮಿಸಲಾಗುತ್ತಿರುವ ಹೊಸ ಮೀನುಗಾರಿಕೆ ಬಂದರಿನಲ್ಲಿ 12.5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಕರಾವಳಿ ಮೀನು ರಫ್ತು ಸ್ಥಾವರ ಸ್ಥಾಪನೆ.

ಮಹಿಳಾ ಮೀನುಗಾರರ ಸಬಲೀಕರಣ ಯೋಜನೆಯಡಿ 1,000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು ನೀಡಲು ಐದು ಕೋಟಿ ರೂ. ಅನುದಾನ.

ಯಾವುದು ಏರಿಕೆ? ಯಾವುದು ಇಳಿಕೆ

ಕರ್ನಾಟಕ ಸರ್ಕಾರಕ್ಕೆ ಆದಾಯಕ್ಕೆ ತಂದು ಕೊಡುವ ಅಬಕಾರಿ ಇಲಾಖೆ ಪ್ರಸ್ತಾವನೆಗೆ ಮಣಿದು ನಿರೀಕ್ಷೆಯಂತೆ ಮದ್ಯದ ಮೇಲಿನ ತೆರಿಗೆ ಹೆಚ್ಚಿಸಲಾಗಿದೆ.

ಮಿಕ್ಕಂತೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡಾ ಏರಿಕೆಯಾಗಿದೆ.

ಸರ್ಕಾರದ ಬೊಕ್ಕಸಕ್ಕೆ ಆಗುವ ಹೊರೆ ತಪ್ಪಿಸಲು, ಆದಾಯ ಸಂಗ್ರಹಕ್ಕೆ ಹೆಚ್ಚಿನ ಒತ್ತು ನೀಡುವುದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಅನಿವಾರ್ಯವಾಗಿದೆ.

ಕಾರಣ, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾಗಿರುವ ತೆರಿಗೆ ಅನುದಾನ ಈ ಬಾರಿ ಸಾವಿರಾರು ಕೋಟಿ ರುಗಳಷ್ಟು ಕಡಿಮೆಯಾಗಿದೆ.

ಜಿಎಸ್ಟಿ ನಷ್ಟ ಭರಿಸಲು ಹಾಗೂ ರಾಜಸ್ವ ಸಂಗ್ರಹಕ್ಕೆ ಸರ್ಕಾರ ಮುಂದಾಗಿದೆ.

ಯಾವುದು ಏರಿಕೆ?

* ಮದ್ಯದ ಮೇಲಿನ ಅಬಕಾರಿ ಸುಂಕ ಶೇ 6 ರಷ್ಟು ಹೆಚ್ಚಳ.

* ಅಬಕಾರಿ ಸುಂಕ 18 ಸ್ಲ್ಯಾಬ್ ಗಳಿಗೆ ಶೇ 15 ರಿಂದ ಶೇ 34ಕ್ಕೆ ಏರಿಕೆ

* ಮದ್ಯ, ತಂಬಾಕು ಉತ್ಪನ್ನಗಳು, ಸಿಗರೇಟು, ಬೀಡಿ ಬೆಲೆ ಏರಿಕೆ

* ಡೀಸೆಲ್ ಮೇಲಿನ 32 ರಿಂದ 35 ರಷ್ಟು ಸೆಸ್ ಏರಿಕೆ, ಡೀಸೆಲ್ ಪ್ರತಿ ಲೀಟರ್ ಬೆಲೆ 1.60 ರು ಏರಿಕೆ

* ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ಶೇ 32ರಿಂದ 35ಕ್ಕೇರಿಕೆ

* ಖಾಸಗಿ ಸೇವಾ ವಾಹನ ತೆರಿಗೆ: 12ಕ್ಕಿಂತ ಹೆಚ್ಚು 20 ಕ್ಕಿಂತ ಕಡಿಮೆ ಆಸನವುಳ್ಳ ಪ್ರಯಾಣಿಕರ ಒಪ್ಪಂದ ವಾಹನದ ತ್ರೈಮಾಸಿಕ ಪ್ರತಿ ಆಸನಕ್ಕೆ 900 ರು ನಿಗದಿ.

* 1988ನೇ ಮೋಟಾರು ವಾಹನ ಕಾದ್ಯೆ ಕಲಂ 88(9) ಅನ್ವಯ ರಹದಾರಿ ಪಡೆದು ಚಾಲನೆಯಲ್ಲಿರುವ ಹೊಸ ಮಾದರಿ ಸ್ಲೀಪರ್ ಕೋಚ್ ವಾಹನಗಳ ನೋಂದಣಿ ಸಮಯದಲ್ಲಿ ತ್ರೈಮಾಸಿಕ ತೆರಿಗೆ ಪ್ರತಿ ಸ್ಲೀಪರ್ ಗೆ 4,000 ರು

* ವಿದ್ಯುತ್ ದರ ಹೆಚ್ಚಳ ಪ್ರತಿ ಯೂನಿಟ್ ಮೇಲೆ 10ರಿಂದ 20 ಪೈಸೆ ಏರಿಕೆ ಮುಂದುವರಿಕೆ.

* ವಿದ್ಯುತ್ ಮೇಲಿನ ತೆರಿಗೆ ಶೇ.6ರಿಂದ ಶೇ.9ಕ್ಕೆ ಏರಿಕೆ ಮುಂದುವರಿಕೆ

 ಯಾವುದು ಇಳಿಕೆ?

* ಮನೆ ಖರೀದಿದಾರರಿಗೆ ಶುಭ ಸುದ್ದಿ, ನೋಂದಣಿ ಶುಲ್ಕ ಕಡಿತ.

* ಸಿರಿಧಾನ್ಯಗಳಾದ ನವಣೆ, ಸಾಮೆ, ಅರಕ ಹಾಗೂ ಬರಗು ಮೇಲಿನ ಹಿಟ್ಟುಗಳಿಗೆ ತೆರಿಗೆ ವಿನಾಯ್ತಿ, ರೈತರಿಗೆ ಹೆಕ್ಟೇರಿಗೆ 10 ಸಾವಿರ ರು ಅನುದಾನ.

* ದ್ವಿದಳ ಧಾನ್ಯ, ತೆಂಗಿನ ಕಾಯಿ ಸಿಪ್ಪೆಯ ಮೇಲಿನ ತೆರಿಗೆ ವಿನಾಯಿತಿ ಮುಂದುವರಿಕೆ.

ಸಿರಿ ಧಾನ್ಯಗಳ ಪಟ್ಟಿಗೆ ಟೆಫ್, ಚಿಯಾ ಮತ್ತು ಕ್ವಿನೋವಾ ಸಿರಿಧಾನ್ಯಗಳ ಸೇರ್ಪಡೆ.

* ಒಂದು ಲಕ್ಷ ಮಹಿಳಾ ಕಾರ್ಮಿಕರಿಗೆ ಉಚಿತ ಬಸ್ ಪಾಸ್.

* ಅಡಿಕೆ ಬೆಳೆಗಾರರಿಗೆ 2 ಲಕ್ಷ ರುವರೆಗಿನ ಸಾಲಕ್ಕೆ ಶೇ 5 ರಷ್ಟು ಬಡ್ಡಿ ವಿನಾಯಿತಿ.

* ಮಹಿಳಾ ಮೀನುಗಾರರ ಸಬಲೀಕರಣ ಯೋಜನೆಯಡಿ 1000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು ನೀಡಲು

5 ಕೋಟಿ ರು ಅನುದಾನ.

* ಕೃಷಿ ಪತ್ತಿನ ಸಹಕಾರ ಸಂಘ ಗಳಿಂದ ನೀಡಿದ ಮಧ್ಯಮಾವಧಿ ಹಾಗೂ ದೀರ್ಘಾವಧಿ ಕೃಷಿ ಸುಸ್ತಿ ಸಾಲಗಳ ಮೇಲಿನ ಬಡ್ಡಿ ಮನ್ನಾ.

92 ಸಾವಿರ ರೈತರಿಗೆ ಪ್ರಯೋಜನ.

ಯಡಿಯೂರಪ್ಪ ಸುಧೀರ್ಘ ಬಜೆಟ್ ಮಂಡಿಸಿದ ಬಳಿಕ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ಬೆಳಗ್ಗೆ 10.30ಕ್ಕೆ ಅಧಿವೇಶನವನ್ನು ಮುಂದೂಡಿದರು.

ಈ ನಡುವೆ ರಾಜ್ಯ ಬಜೆಟ್ ನಲ್ಲಿ ಸಂಪನ್ಮೂಲ ಕೊರತೆ ಎದ್ದು ಕಾಣುತ್ತಿದ್ದು, ಕೇಂದ್ರ ಸರ್ಕಾರದಿಂದ ಅನುದಾನ ಸಿಕ್ಕಿಲ್ಲ.

ಇದನ್ನು ಸ್ವತಃ ಬಿಎಸ್ ವೈ ಒಪ್ಪಿಕೊಂಡಿದ್ದಾರಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಕಲಾಯಿ ಅಶ್ರಫ್ ಹತ್ಯೆಗೆ ರಿವೇಂಜ್ ಪೋಸ್ಟ್..! 16 ಇನ್ಸ್ಟಾಗ್ರಾಂ ಖಾತೆ ವಿರುದ್ಧ FIR

Published

on

ಮಂಗಳೂರು: ಕೋಮು ಸೂಕ್ಷ್ಮ ಪ್ರದೇಶವಾದ ಕರಾವಳಿಯಲ್ಲಿ ಧರ್ಮ ದಂಗಲ್ ಸ್ವಲ್ಪ ಮಟ್ಟಿಗೆ ತಣ್ಣಗಾಗಿದೆ ಎನ್ನುವಷ್ಟರಲ್ಲಿ ಮತ್ತೆ ಹತ್ಯೆಗೆ ಪ್ರಚೋದನೆ ನೀಡುವ ಉದ್ದೇಶದಲ್ಲಿ ಹಾಕಿರುವಂತಹ ಪೋಸ್ಟ್ ಗಳು ಸೋಷಿಯಲ್ ಮೀಡಿಯಾದಲ್ಲಿ ಭಯ ಹುಟ್ಟಿಸಿದೆ.

2017ರಲ್ಲಿ ನಡೆದ ಎಸ್​ಡಿಪಿಐ ಮುಖಂಡ ಕಲಾಯಿ ಅಶ್ರಫ್ ಹತ್ಯೆ ಪ್ರಮುಖ ಆರೋಪಿ, ಹಿಂದೂ ಸಂಘಟನೆಯ ಮುಖಂಡ ಭರತ್ ಕುಮ್ಡೇಲ್​​​ಗೆ ಎಚ್ಚರಿಕೆ ನೀಡುವ ರೀತಿಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಬಗ್ಗೆ ಸಂದೇಶಗಳು ರವಾನೆಯಾಗುತ್ತಿದೆ.

Target 900, Team Target Boys, Immu Bai ಇನ್ಸ್ಟಾಗ್ರಾಮ್ ಪೇಜ್​​ಗಳಲ್ಲಿ ಭಯ ಹುಟ್ಟಿಸುತ್ತಿರುವ ರೀತಿಯಲ್ಲಿ ಪೋಸ್ಟ್ ಮಾಡಲಾಗಿದೆ. Revange Is Loading , Target Set One By One ಎಂಬ ಸಂದೇಶ ಇರುವ ಪೋಸ್ಟ್​​ ಮಾಡಲಾಗಿದ್ದು, ಕೈಯಲ್ಲಿ ತಲವಾರು ಮತ್ತು ಪಿಸ್ತೂಲ್ ಹಿಡಿದು ಮುಖ ಮರೆಮಾಚಿ ಮಾಡಿರುವ ರೀಲ್ಸ್ ಕೂಡ ಪೋಸ್ಟ್​​ ಮಾಡಲಾಗಿದೆ. ಇತ್ತೀಚೆಗೆ ಕೇರಳದಲ್ಲಿ ಹತ್ಯೆಯಾದ ರೌಡಿಶೀಟರ್ ನೌಫಾಲ್ ಸಾವಿಗೂ ಪ್ರತೀಕಾರದ‌ ಎಚ್ಚರಿಕೆ ನೀಡಲಾಗಿದೆ. ಭರತ್ ಕುಮ್ಡೇಲ್ ಸದ್ಯ ಮಂಗಳೂರು ಜೈಲಿನಲ್ಲಿದ್ದು, ಪ್ರಚೋದನಾಕಾರಿ ಇನ್ಸ್ಟಾಗ್ರಾಮ್​​ ಪೋಸ್ಟ್​ಗಳ ಮೇಲೆ ಮಂಗಳೂರು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಈ ಬಗ್ಗೆ ಸುಮೋಟೊ ಕೇಸ್​​ ದಾಖಲಿಸಿರುವ ಖಾಕಿ, 16 ಇನ್ಸ್ಟಾಗ್ರಾಮ್​​ ಖಾತೆಗಳ ವಿರುದ್ಧ ಎಫ್​ಐಆರ್​ ಮಾಡಿದೆ. ಜೊತೆಗೆ ಆಯಕಟ್ಡಿನ ಜಾಗಗಳ ಮೇಲೆ ಹದ್ದಿನ ಕಣ್ಣಿಡಲಾಗಿದ್ದು, ನಟೋರಿಯಸ್ ಗ್ಯಾಂಗ್​​ಗಳ ಚಲನವಲನಗಳನ್ನೂ ಗಮನಿಸಲಾಗುತ್ತಿದೆ.

ಈ ಹಿಂದೆಯೂ ಭರತ್ ಕುಮ್ಡೇಲ್​​ಗೆ ಸಾಮಾಜಿಕ ತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿತ್ತು. ಬ್ಯಾರಿ ರಾಯಲ್ ನವಾಬ್ ,  ಬ್ಯಾರಿ ಟ್ರೋಲರ್, ಮಂಗಳೂರು ಕಿಂಗ್ ಎಂಬ ಹೆಸರಿನ ಪೇಜ್​ಗಳ ಮುಖಾಂತರ ಎಚ್ಚರಿಕೆಯ ಸಂದೇಶ ಬಂದಿತ್ತು. ಭರತ್‌ ಕುಮ್ಡೇಲ್​​​ ರಕ್ತ ಈ ಭೂಮಿಗೆ ಹರಿಸದೆ ನಮಗೆ ಸಮಾಧಾನವಿಲ್ಲ. ನಮ್ಮ ಸಹೋದರ ಶಾಹಿದ್ ಅಶ್ರಫ್ ಕಲಾಯಿಯನ್ನು ಮರೆತಿಲ್ಲ, ಪ್ರತಿರೋಧ ಅಪರಾಧವಲ್ಲ ಎಂದು ಪೋಸ್ಟ್​​ ಮಾಡಲಾಗಿತ್ತು. ಇದೀಗ ಇಂತಹ ಪ್ರಚೋದನಾಕಾರಿ ಪೋಸ್ಟ್ ಹಾಕುವವರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

Continue Reading

STATE

ಬೆಳಗಾವಿ ಅಧಿವೇಶನದಲ್ಲಿ ಕಬಡ್ಡಿ ಆಟಗಾರ್ತಿ ಧನಲಕ್ಷ್ಮಿ ಪೂಜಾರಿಗೆ 50 ಲಕ್ಷ ರೂ. ನೀಡಲು ಶಾಸಕರ ಮನವಿ

Published

on

ಬೆಳಗಾವಿ: ಢಾಕಾದಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಪಂದ್ಯಾಟದಲ್ಲಿ ಭಾರತವನ್ನು ಪ್ರತಿನಿಧಿಸಿ ಚಿನ್ನದ ಗೆದ್ದ ಕಾರ್ಕಳ್ ಮಿಯ್ಯಾರಿನ ಧನಲಕ್ಷ್ಮಿ ಪೂಜಾರಿ ಅವರು ಇಂದು ತನ್ನ ಕೋಚ್‌ ತೇಜಸ್ವಿನಿ ಪೈ ಅವರ ಜತೆಗೆ ಬೆಳವಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದಅಧಿವೇಶನದ ಕಲಾಪ ವೀಕ್ಷಿಸಿದರು.

 

ಈ ಸಂದರ್ಭದಲ್ಲಿ ಧನ ಲಕ್ಷ್ಮಿ ಅವರನ್ನು ಸರಕಾರದ ವತಿಯಿಂದ ಸನ್ಮಾನಿಸಲಾಯಿತು. ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿ ಧನಲಕ್ಷ್ಮಿ ಅದರ ಸಾಧನೆಯನ್ನು ಗುರುತಿಸಿ ಸರಕಾರದ ವತಿಯಿಂದ ಈಗಾಗಲೇ 5 ಲಕ್ಷ ರೂಪಾಯಿ ಬಹುಮಾನ ನೀಡಲಾಗಿದೆ ಎಂದು ತಿಳಿಸಿದರು.

ಧನಲಕ್ಷ್ಮಿ ಮತ್ತು ಆಕೆಯ ತರಬೇತುದಾರರಾದ ತೇಜಸ್ವಿನಿ ಪೈ ಅವರನ್ನು ಅಭಿನಂದಿಸುತ್ತೇನೆ ಎಂದರು. ಧನಲಕ್ಞ್ಮಿ ಅವರಿಗೆ  ಕನಿಷ್ಟ 50 ಲಕ್ಷ ರೂಪಾಯಿ ಬಹುಮಾನ ನೀಡ ಬೇಕೆಂದು ಶಾಸಕ ವೇದವ್ಯಾಸ ಕಾಮತ್ ಒತ್ತಾಯಿಸಿದರು.ಆಕೆಗೆ ಸರಕಾರಿ ಉದ್ಯೋಗ ಕೊಡಿಸಬೇಕೆಂದು ವಿ ಸುನಿಲ್ ಕುಮಾರ್ ಮನವಿ ಮಾಡಿದರು.

Continue Reading

DAKSHINA KANNADA

ಡಿ. 13, 14 ರಂದು ಮಂಗಳೂರಿನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವ

Published

on

ಮಂಗಳೂರು: ಮಂಗಳೂರಿನ ಮದರ್ ತೆರೆಸಾ ವಿಚಾರ ವೇದಿಕೆ ಮತ್ತು ಕ್ಯಾಥೊಲಿಕ್ ಸಭಾ ಮಂಗಳೂರು ಪ್ರದೇಶ್‌ ಇವುಗಳ ಜಂಟಿ ಆಶ್ರಯದಲ್ಲಿ ಡಿಸೆಂಬರ್ 13 ಮತ್ತು 14 ರಂದು ಕದ್ರಿ ಪಾರ್ಕ್‌ ನಲ್ಲಿ ಸೌಹಾರ್ದ ಕ್ರಿಸ್ಮಸ್ ಉತ್ಸವವನ್ನು ಆಯೋಜಿಸಲಾಗಿದೆ.

ಎರಡು ದಿನಗಳ ಈ ಉತ್ಸವದ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳು ಮಧ್ಯಾಹ್ನ 2.30 ರಿಂದ ರಾತ್ರಿ 9.30 ರ ತನಕ ನಡೆಯಲಿವೆ ಎಂದು ಮದರ್ ತೆರೆಸಾ ವಿಚಾರ ವೇದಿಕೆಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್‌ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕ್ರಿಸ್ಮಸ್‌ ಖೇಲ್‌ ಸ್ಪರ್ಧೆಗಳು, ಕ್ರಿಸ್ಮಸ್ ಕ್ಯಾರಲ್‌ಗಳ ಗಾಯನ ಸ್ಪರ್ಧೆ, ಕೇಕ್ ಸ್ಪರ್ಧೆ, ಸ್ಟಾರ್ ಸ್ಪರ್ಧೆ, ವೈನ್‌ ಮೇಳ, ಆಹಾರ ಮಳಿಗೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಇದನ್ನೂ ಓದಿ: ‘ನಶೆ ಮುಕ್ತ ಮಂಗಳೂರು’ ಅಭಿಯಾನ-ಸ್ಪೀಕರ್ ಯು.ಟಿ ಖಾದರ್ ಅವರಿಂದ ಉದ್ಘಾಟನೆ

ವೇದಿಕೆಯ ಅಧ್ಯಕ್ಷ ರೋಯ್ ಕ್ಯಾಸ್ಟಲಿನೊ, ಕ್ಯಾಥೊಲಿಕದ ಸಭಾ ಅಧ್ಯಕ್ಷ ಸಂತೋಷ್ ಡಿ’ಸೋಜಾ, ಕಾರ್ಯಕ್ರಮದ ಸಂಚಾಲಕ ಸ್ಟ್ಯಾನಿ ಲೋಬೊ ಮತ್ತು ಇತರರು ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page