Connect with us

FILM

ದಕ್ಷಿಣದ ಯುವ ಸಂಗೀತ ನಿರ್ದೇಶಕನನ್ನು ಮದುವೆಯಾಗಲಿದ್ದಾರೆ ಎಸ್‌ಆರ್‌ಎಚ್ ಒಡತಿ ಕಾವ್ಯಾ ಮಾರನ್?

Published

on

ಸನ್ ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಹಾಗೂ ದೇಶದ ಬಲು ಜನಪ್ರಿಯ ಯುವ ಉದ್ಯಮಿಗಳಲ್ಲಿ ಒಬ್ಬರಾಗಿರುವ ಕಾವ್ಯಾ ಮಾರನ್, ದಕ್ಷಿಣದ ಸ್ಟಾರ್ ಯುವ ಸಂಗೀತ ನಿರ್ದೇಶಕನೊಂದಿಗೆ ಮದುವೆಯಾಗಲಿದ್ದಾರೆ ಎಂಬ ವಿಷಯ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.

ಪ್ರತಿ ಬಾರಿಯೂ ಐಪಿಎಲ್‌ನಲ್ಲಿ ಸನ್‌ ರೈಸರ್ಸ್ ಹೈದರಾಬಾದ್ ತಂಡದ ಮಾಲಕಿ ಕಾವ್ಯಾ ಮಾರನ್ ಹೆಚ್ಚಾಗಿ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದು, ಇವರು ಕೊಡುತ್ತಿದ್ದ ಸಿಂಪ್ಲಿಸಿಟಿ ಸ್ಟೈಲಿಗೆ. ತಮ್ಮ ತಂಡ ಎಸ್‌ಆರ್‌ಎಚ್ ಪಂದ್ಯ ನಡೆಯುವಾಗಲೆಲ್ಲಾ ಇವರು ಸ್ಟೇಡಿಯಂನಲ್ಲಿ ಕುಳಿತುಕೊಂಡು ಎಂಜಾಯ್ ಮಾಡುತ್ತಾರೆ. ಕಾವ್ಯಾ ಅವರ ಮುದ್ದಾದ ನಗುವಿಗೆ ಹಲವಾರು ಯುವಕರ ಹೃದಯಗಳು ಮಿಡಿದಿದ್ದವು. ಆದರೆ ಇದೀಗ ಕಾವ್ಯಾ ಮಾರನ್, ದಕ್ಷಿಣ ಭಾರತದ ಜನಪ್ರಿಯ ಯುವ ಸಂಗೀತ ನಿರ್ದೇಶಕನ ವಿವಾಹವಾಗಲಿದ್ದಾರೆ ಎನ್ನಲಾಗುತ್ತಿದೆ.

ಹೌದು, ಕಾಲಿವುಡ್‌ನ ಬ್ಯುಸಿ ಸಂಗೀತ ನಿರ್ದೇಶಕ ಅನಿರುದ್ಧ್, ಸನ್ ಟಿವಿ ಮಾಲೀಕರ ಕುಟುಂಬದ ಕಾವ್ಯಾ ಮಾರನ್ ಅವರನ್ನು ವಿವಾಹ ಆಗಲಿದ್ದಾರೆ ಎಂಬ ಸುದ್ದಿ ಇದೀಗ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಆದರೆ ಈ ಬಗ್ಗೆ ಎರಡೂ ಕುಟುಂಬಗಳು ಮೌನವಾಗಿವೆ.

ಇದನ್ನೂಓದಿ: ಅಹಮದಾಬಾದ್ ವಿಮಾನ ದುರಂತದ ಬೆನ್ನಲ್ಲೇ ಮಹತ್ವದ ನಿರ್ಧಾರ ತೆಗೆದುಕೊಂಡ ಡೇವಿಡ್ ವಾರ್ನರ್

ಮೂಲಗಳ ಪ್ರಕಾರ, ಕಾವ್ಯಾ ಮಾರನ್ ಮತ್ತು ಅನಿರುದ್ಧ್ ರವಿಚಂದ್ರನ್ ಅವರುಗಳು ಕಳೆದ ಒಂದೆರಡು ವರ್ಷದಿಂದಲೂ ಡೇಟಿಂಗ್​​ನಲ್ಲಿದ್ದು, ಇದೀಗ ಮದುವೆಗೆ ಮನಸ್ಸು ಮಾಡಿದ್ದಾರಂತೆ. ಅನಿರುದ್ಧ್ ರವಿಚಂದ್ರನ್ ಗೆ ಈಗ ವಯಸ್ಸು 34, ಕಾವ್ಯಾ ವಯಸ್ಸು 32. ಇಬ್ಬರದ್ದೂ ಒಳ್ಳೆಯ ಜೋಡಿ ಆಗುತ್ತದೆ ಎನ್ನುತ್ತಿದ್ದಾರೆ ಅಭಿಮಾನಿಗಳು. ಇತ್ತೀಚೆಗೆ ಈ ಇಬ್ಬರೂ ಡಿನ್ನರ್ ಮಾಡಲು ಹೊರಗೆ ಹೋಗಿದ್ದಾಗ ಕ್ಯಾಮೆರಾ ಕಣ್ಣಿಗೆ ಸಿಕ್ಕಿದ್ದಾರಂತೆ.

 

FILM

ರಾಕ್ ಸ್ಟಾರ್ ರೂಪೇಶ್ ಶೆಟ್ಟಿಯ ‘ಜೈ’ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್

Published

on

ಮಂಗಳೂರು: ನಟ, ನಿರ್ದೇಶಕ ರಾಕ್ ಸ್ಟಾರ್ ರೂಪೇಶ್ ಶೆಟ್ಟಿಯವರ ಬಹುನಿರೀಕ್ಷಿತ ಸಿನಿಮಾ ‘ಜೈ’. ಗಿರಿಗಿಟ್, ಗಮ್ಜಾಲ್, ಸರ್ಕಸ್ ನಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ರೂಪೇಶ್ ಶೆಟ್ಟಿ ಇದೀಗ ‘ಜೈ’ ಮೂಲಕ ಎಂಟ್ರಿ ಕೊಡುತ್ತಿದ್ದಾರೆ.

ಬಿಗ್ ಬಜೆಟ್ ಸಿನಿಮಾವಾಗಿರುವ ‘ಜೈ’ ಚಿತ್ರ ಯಾವಾಗ ತೆರೆಗೆ ಬರುತ್ತೋ ಎಂದು ಕಾದವರಿಗೆ ಸಿಹಿ ಸುದ್ದಿ ಕೊಟ್ಟಿದೆ ಚಿತ್ರತಂಡ. ಚಿತ್ರದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರಿಲೀಸ್ ಡೇಟ್ ಅನೌನ್ಸ್ ಮಾಡಿದ್ದಾರೆ.

ನವೆಂಬರ್ 14 ರಂದು ಚಿತ್ರ ತುಳು ಹಾಗೂ ಕನ್ನಡ ಎರಡೂ ಭಾಷೆಗಳಲ್ಲೂ ತೆರೆಗೆ ಅಪ್ಪಳಿಸಲಿದೆ. ಅಂದಹಾಗೆ, ಈ ಚಿತ್ರದಲ್ಲಿ ರೂಪೇಶ್ ಶೆಟ್ಟಿ ನಟನಾಗಿದ್ದು, ಜೊತೆಗೆ ನಿರ್ದೇಶನದ ಹೊಣೆಯನ್ನೂ ಹೊತ್ತಿದ್ದು, ಅದ್ವಿತಿ ಶೆಟ್ಟಿ ನಾಯಕಿಯಾಗಿ ಮಿಂಚಿದ್ದಾರೆ. ಇನ್ನು ಬಾಲಿವುಡ್ ನಟ ಸುನಿಲ್ ಶೆಟ್ಟಿ ಈ ಚಿತ್ರದ ಮೂಲಕ ಕೋಸ್ಟಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದು ಸುದ್ದಿಯಾಗಿತ್ತು. ಇವರೊಂದಿಗೆ ದೇವದಾಸ್ ಕಾಪಿಕಾಡ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ ಪಡೀಲ್, ಅರವಿಂದ್ ಬೋಳಾರ್, ಭೋಜರಾಜ ವಾಮಂಜೂರ್ ಮೊದಲಾದವರು ಪಾತ್ರವಾಗಿದ್ದಾರೆ.

ಕತೆ, ಸಂಭಾಷಣೆ ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದು, ವಿನುತ್ ಕೆ. ಕ್ಯಾಮರಾ ವರ್ಕ್, ಲೊಯ್ ವೆಲೆಂಟಿನ್ ಸಲ್ದಾನ ಸಂಗೀತ ಚಿತ್ರಕ್ಕಿದೆ. ಆರ್. ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಡಿ ಚಿತ್ರ ನಿರ್ಮಾಣವಾಗಿದೆ.

Continue Reading

FILM

ಕುಂದಾಪುರದಲ್ಲಿ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡ ನಟ ರಿಷಬ್ ಶೆಟ್ಟಿ

Published

on

ಕುಂದಾಪುರ: ಕಾಂತಾರ’ ಸಿನಿಮಾದ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಎನಿಸಿಕೊಂಡಿರುವ ರಿಷಬ್ ಶೆಟ್ಟಿ ಅವರು ಇಂದು (ಜುಲೈ 7) ತಮ್ಮ 42ನೇ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಂಡಿದ್ದಾರೆ.

‘ಕಾಂತಾರ ಅಧ್ಯಾಯ-1 ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿ ಇರುವ ಅವರು, ಸದ್ಯ ಕುಂದಾಪುರದಲ್ಲೇ ಬೀಡುಬಿಟ್ಟಿದ್ದಾರೆ. ಅಲ್ಲಿಯೇ ಅವರು ಹುಟ್ಟುಹಬ್ಬ ಆಚರಣೆಯನ್ನು ಮಾಡಿಕೊಂಡಿದ್ದಾರೆ. ಪ್ರೀತಿಯ ಮಡದಿ ಪ್ರಗತಿ ಶೆಟ್ಟಿ ಅವರು ಪತಿ ರಿಷಬ್ ಕೇಕ್ ತಿನ್ನಿಸಿ, ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಹುಟ್ಟುಹಬ್ಬ ಆಚರಿಸಿಕೊಂಡ ರಿಷಬ್ ಅವರಿಗೆ ದುರ್ಗಾಸ್ತಮಾನ ಮತ್ತು ಸೀತಾ ಪುಸ್ತಕಗಳನ್ನು ಗಿಫ್ಟ್ ನೀಡಲಾಯಿತು.

ಇದನ್ನೂ ಓದಿ: ಮದುವೆಯಾದ 6 ತಿಂಗಳಿಗೆ ಪೊಲೀಸ್ ಪೇದೆ ಹಣದಾಸೆಗೆ ಬಲಿಯಾದ್ಲು ಪತ್ನಿ?

ನಟ ರಿಷಬ್ ಶೆಟ್ಟಿ ಬರ್ತ್ ಡೇಯಲ್ಲಿ ವಿಜಯ್ ಕಿರಗಂದೂರು, ಚೆಲುವೇಗೌಡ ಸೇರಿದಂತೆ ಟೀಮ್ ಸದಸ್ಯರು ಭಾಗಿಯಾಗಿದ್ದಾರೆ. ಅಲ್ಲದೇ ನಟ ರಿಷಬ್ ಶೆಟ್ಟಿ ಹುಟ್ಟು ಹಬ್ಬದ ನಿಮಿತ್ತ ಹೊಂಬಾಳೆ ಸಂಸ್ಥೆಯು ಕಾಂತಾರ ಚಾಪ್ಟರ್ 1 ಸ್ಪೆಷಲ್ ಪೋಸ್ಟರ್ ರಿಲೀಸ್ ಮಾಡಿ ಅಭಿಮಾನಿಗಳಿಗೆ ಸರ್‌ಪ್ರೈಸ್ ಕೊಟ್ಟಿದ್ದಾರೆ.

Continue Reading

FILM

ಡಿವೈನ್ ಸ್ಟಾರ್ ಹುಟ್ಟುಹಬ್ಬಕ್ಕೆ ‘ಕಾಂತರ-1’ ಚಿತ್ರ ತಂಡದಿಂದ ಹೊರಬಿತ್ತು ಬಿಗ್ ಅಪ್‌ಡೇಟ್

Published

on

ಡಿವೈನ್ ಸ್ಟರ್ ರಿಷಭ್ ಶೆಟ್ಟಿ ಅವರ ಜನ್ಮದಿನದಂದೇ ‘ಕಾಂತರ: ಚಾಪ್ಟರ್1’ ಕಡೆಯಿಂದ ದೊಡ್ಡ ಅಪ್‌ಡೇಟ್ ಒಂದು ಬಂದಿದೆ. ಇದು ಅಭಿಮಾನಿಗಳಲ್ಲಿ ಭಾರಿ ಉತ್ಸಾಹ ಮೂಡಿಸಿದೆ.


ರಿಷಭ್ ಶೆಟ್ಟಿ ಅವರಿಗಿಂದು ಹುಟ್ಟುಹಬ್ಬದ ಸಂಭ್ರಮ. ಅಭಿಮಾನಿಗಳು ಹಾಗೂ ಸ್ನೇಹಿತರು ಅವರಿಗೆ ಬರ್ತ್‌ಡೇ ವಿಶ್ ಮಾಡುತ್ತಿದ್ದಾರೆ. ಈ ವಿಶೇಷ ದಿನದಂದು ‘ಕಾಂತಾರ-1’ ಕಡೆಯಿಂದ ಬಿಗ್ ಅಪ್ಡೇಟ್ ಹೊರಬಿದ್ದಿದೆ.

ನಟ ರಿಷಬ್​ ಶೆಟ್ಟಿ ಹುಟ್ಟು ಹಬ್ಬದ ನಿಮಿತ್ತ ಹೊಂಬಾಳೆ ಸಂಸ್ಥೆ ಕಾಂತಾರ ಚಾಪ್ಟರ್ 1​ ಸ್ಪೆಷಲ್ ಪೋಸ್ಟರ್ ರಿಲೀಸ್ ಮಾಡಿ ಅಭಿಮಾನಿಗಳಿಗೆ ಸರ್​ಪ್ರೈಸ್​ ಕೊಟ್ಟಿದ್ದಾರೆ. ರಿಲೀಸ್​ ಆಗಿರೋ ಪೋಸ್ಟರ್​ನಲ್ಲಿ ಕಲರಿಯಪಟ್ಟು ಲುಕ್​ನಲ್ಲಿ ರಿಷಬ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಈಗಾಗಲೇ ಅಕ್ಟೋಬರ್ 2ರಂದು ಸಿನಿಮಾ ರಿಲೀಸ್ ದಿನಾಂಕ ಫಿಕ್ಸ್ ಆಗಿದೆ.

ಇದನ್ನೂ ಓದಿ: ನಟ ದರ್ಶನ್ ಬಳಿ ಕ್ಷಮೆ ಕೇಳಿದ ಮಡೆನೂರು ಮನು

ಸಾಲು ಸಾಲು ಸರಣಿ ಅವಘಡಗಳಿಂದ ಸಿನಿಮಾ ರಿಲಿಸ್ ವಿಳಂಬ ಆಗಲಿದೆ ಎಂದು ಹೇಳಲಾಗುತ್ತಿತ್ತು. ಈ ವದಂತಿಗಳು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಹಬ್ಬಿದ್ದವು. ಆದರೆ ಸಿನಿಮಾ ತಂಡ ಇದನ್ನು ಅಲ್ಲಗಳೆದಿದೆ. ಅಂದುಕೊಂಡ ದಿನಾಂಕದಂದೇ ಸಿನಿಮಾ ಬಿಡುಗಡೆ ಆಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ಕನ್ನಡ, ಹಿಂದಿ, ತಮಿಳು, ತೆಲುಗು, ಮಲಯಾಳಂ, ಬೆಂಗಾಲಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ‘ಕಾಂತಾರ-1’ ಅದ್ದೂರಿಯಾಗಿ ಅಕ್ಟೋಬರ್-2ರಂದು ರಿಲೀಸ್ ಆಗಲಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page