Connect with us

LATEST NEWS

ಹೈಕೋರ್ಟ್ ಆದೇಶಕ್ಕೂ ಕ್ಯಾರೆ ಅನ್ನದ ಜಿಲ್ಲಾಡಳಿತಗಳು…ಕೇರಳ ಗಡಿ ತೆರೆದಿದ್ದರೂ ಆರಂಭವಾಗದ ಅಂತರರಾಜ್ಯ ಬಸ್ ಸೇವೆ

Published

on

ಮಂಗಳೂರು : ಕೇಂದ್ರ ಸರಕಾರ, ಕೇರಳ ಹೈಕೋರ್ಟ್ ಆದೇಶಗಳ ನಂತರವೂ ದಕ್ಷಿಣಕನ್ನಡ ಹಾಗೂ ಕಾಸರಗೋಡು ನಡುವೆ ಕೆಲವು ನಿರ್ಬಂಧಗಳು ಇನ್ನು ಮುಂದುವರೆದಿದೆ. ಆರು ತಿಂಗಳಿನಿಂದ ಬಂದ್ ಆಗಿರುವ ಸರಕಾರಿ ಬಸ್ ಸಂಚಾರ ಇನ್ನೂ ಆರಂಭವಾಗಿಲ್ಲ.


ಕೊರೊನಾ ಹಿನ್ನಲೆ ಗಡಿಗಳನ್ನು ಬಂದ್ ಮಾಡಿಕೊಂಡಿದ್ದ ದಕ್ಷಿಣಕನ್ನಡ ಹಾಗೂ ಕಾಸರಗೋಡು ಜಿಲ್ಲಾಡಳಿತ, ಕೇಂದ್ರ ಸರಕಾರ ಅನ್ಲಾಕ್ ಮಾರ್ಗ ಸೂಚಿಗಳನ್ನು ಬಿಡುಗಡೆ ಮಾಡಿ ಅಂತರ ರಾಜ್ಯ ಸಂಚಾರಕ್ಕೆ ಇರುವ ನಿರ್ಬಂಧವನ್ನು ತೆಗೆದು ಹಾಕಿತ್ತು. ಆದರೂ ಕಾಸರಗೋಡು ಜಿಲ್ಲಾಡಳಿತ ಮಾತ್ರ ಕೇಂದ್ರ ಸರಕರಾದ ಆದೇಶನ್ನು ತಿರಸ್ಕರಿಸಿ ಜನರ ಸಂಚಾರಕ್ಕೆ ನಿರ್ಬಂಧ ಹೇರಿತ್ತು, ನಂತರ ಬಿಜೆಪಿ ಮುಖಂಡರು ಕೇರಳ ಹೈಕೋರ್ಟ್ ಮೆಟ್ಟಿಲೇರಿ ಮುಕ್ತ ಸಂಚಾರಕ್ಕೆ ಆದೇಶ ತಂದರೂ ಸರಕಾರಿ ಬಸ್ ಸೇವೆ ಪ್ರಾರಂಭಿಸಲು ಮೀನಮೇಷ ಎಣಿಸುತ್ತಿದೆ.


ಕೇರಳ ಸರಕಾರ ರಸ್ತೆ ಸಂಚಾರಕ್ಕೆ ಮುಕ್ತ ಅವಕಾಶ ನೀಡದ ಹಿನ್ನೆಲೆಯಲ್ಲಿ ಕಾಸರಗೋಡು ಬಿಜೆಪಿ ಜಿಲ್ಲಾಧ್ಯಕ್ಷ ಶ್ರೀಕಾಂತ್‌ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದ್ದರು. ಇತ್ತೀಚೆಗಷ್ಟೇ ಹೈಕೋರ್ಟ್‌ ತೀರ್ಪು ಪ್ರಕಟಿಸಿ ರಸ್ತೆ ಸಂಚಾರವನ್ನು ಮುಕ್ತಗೊಳಿಸಬೇಕು ಎಂದು ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಸಂಚಾರಕ್ಕೆ ಇದ್ದ ನಿರ್ಬಂಧ ತೆರವುಗೊಂಡು ಎಲ್ಲ ರಸ್ತೆಗಳಲ್ಲಿ ಸಂಚಾರಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ.


ಆದರೆ ಮುಕ್ತ ಸಂಚಾರಕ್ಕೆ ಅವಕಾಶ ಸಿಕ್ಕರೂ ಕೇರಳದ ಕಾಸರಗೋಡು ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ನಡುವೆ ಬಸ್‌ ಸಂಚಾರ ಆರಂಭಿಸುವ ಬಗ್ಗೆ ಉಭಯ ರಾಜ್ಯಗಳು ಇದುವರೆಗೂ ಯಾವುದೇ ತೀರ್ಮಾನಕ್ಕೆ ಬಂದಿಲ್ಲ. ಕಾಸರಗೋಡಿನಿಂದ ಮಂಗಳೂರಿಗೆ ಸೆ.21ರಿಂದ ಬಸ್‌ ಆರಂಭಿಸಲಾಗುವುದು ಎಂದು ಕೇರಳ ಸಾರಿಗೆ ಸಂಸ್ಥೆ ತಿಳಿಸಿದ್ದರೂ ಬಸ್‌ ಸಂಚಾರ ಆರಂಭವಾಗಿಲ್ಲ.


ದಕ್ಷಿಣ ಕನ್ನಡ ಹಾಗೂ ಕೇರಳದ ಕಾಸರಗೋಡು ಜಿಲ್ಲೆಗಳ ನಡುವೆ 21 ಅಂತಾರಾಜ್ಯ ಸಂಪರ್ಕಿಸುವ ರಸ್ತೆಗಳಿದ್ದು, ಅವುಗಳಲ್ಲಿ 12 ಮಾರ್ಗಗಳಲ್ಲಿ ಅಂತಾರಾಜ್ಯ ಬಸ್‌ ಸಂಚಾರವಾಗುತ್ತಿದೆ. ಮಾರ್ಚ್ ತಿಂಗಳ ಅಂತ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದಲೇ ಈ ಎಲ್ಲ ರಸ್ತೆಗಳ ಸಂಚಾರ ನಿರ್ಬಂಧಿಸಲಾಗಿತ್ತು. ಆ ಬಳಿಕ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿರ್ಬಂಧ ಸಡಿಲಿಸಿದ್ದರೂ ಕೇರಳ ಸರಕಾರ ಸಂಚಾರಕ್ಕೆ ಅನುವು ಮಾಡಿರಲಿಲ್ಲ. ಒಟ್ಟಾರೆ ಕಳೆದ ಆರು ತಿಂಗಳಿನಿಂದ ಬಸ್‌ ಸಂಚಾರ ಇಲ್ಲದೆ ಉಭಯ ರಾಜ್ಯದ ಸಾವಿರಾರು ಮಂದಿ ಪ್ರಯಾಣಿಕರು ಸಮಸ್ಯೆಯಲ್ಲಿ ಸಿಲುಕಿದ್ದಾರೆ.

LATEST NEWS

ವಿಶ್ವದ ಅತ್ಯಂತ ಸಂತೋಷದಾಯಕ ದೇಶ ಯಾವುದು? ಭಾರತಕ್ಕೆ ಎಷ್ಟನೇ ಸ್ಥಾನ ?

Published

on

ಮಂಗಳೂರು: ವಿಶ್ವದ ಅತ್ಯಂತ ಸಂತೋಷದಾಯಕ ದೇಶ ಯಾವುದು? ಅಮೆರಿಕ, ಚೀನಾ ಅಥವಾ ರಷ್ಯಾ ಅಲ್ಲ. 2025 ರ ವಿಶ್ವದ ಅತ್ಯಂತ ಸಂತೋಷದಾಯಕ ದೇಶಗಳ ಸೂಚ್ಯಂಕ ಪಟ್ಟಿ ಬಿಡುಗಡೆ ಮಾಡಿದೆ.


ವಲ್ಡ್ ಹ್ಯಾಪಿನೆಸ್ ರಿಪೋರ್ಟ್ 2025 ರ ಪ್ರಕಾರ ಫಿನ್‌ಲ್ಯಾಂಡ್ ಸತತ ಎಂಟನೇ ವರ್ಷವೂ ವಿಶ್ವದ ಅತ್ಯಂತ ಸಂತೋಷದಾಯಕ ದೇಶ ಎಂಬ ಕೀರ್ತಿ ಗಳಿಸಿದೆ. ಆಕ್ಸ್ಫರ್ಡ್ ವಿಶ್ವವಿದ್ಯಾನಿಲಯದ ಯೋಗಕ್ಷೇಮ ಕೇಂದ್ರವು ಪ್ರಕಟಿಸಿದ ವಾರ್ಷಿಕ ವರದಿಯಲ್ಲಿ 10 ದೇಶಗಳು ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿವೆ.

ಫಿನ್‌ಲ್ಯಾಂಡ್ ಮೊದಲ ಸ್ಥಾನವನ್ನು ಹೊಂದಿದೆ. ಡೆನ್ಮಾರ್ಕ್, ಐಸ್ಲ್ಯಾಂಡ್ ಮತ್ತು ಸ್ವೀಡನ್ ನಂತರದ ಸ್ಥಾನವನ್ನು ಹೊಂದಿದೆ. ಡೆನ್ಮಾರ್ಕ್, ಐಸ್ಲ್ಯಾಂಡ್ ಮತ್ತು ಸ್ವೀಡನ್ ನಂತರದ ಸ್ಥಾನಗಳಲ್ಲಿವೆ. ಮತ್ತೊಂದೆಡೆ ಭೀಕರ ಅಂತರ್ಯುದ್ಧದಲ್ಲಿ ಕಾದಾಡುತ್ತಿರುವ ಅಫ್ಘಾನಿಸ್ತಾನ ಮತ್ತೊಮ್ಮೆ ಸಂತೋಷದ ರಾಷ್ಟ್ರಗಳ ಪಟ್ಟಿಯಲ್ಲಿ ಕೊನೆಯ ಸ್ಥಾನ ಸೇರಿದ್ದು, 147ನೇ ಸ್ಥಾನದಲ್ಲಿದೆ. ಮತ್ತೊಂದೆಡೆ ಪಶ್ಚಿಮ ಆಫ್ರಿಕಾದ ಸಿಯೆರಾ ಲಿಯೋನ್ (146) ಮತ್ತು ಲೆಬನಾನ್ (145) ಹಿಂದಿನ ಸ್ಥಾನದಲ್ಲಿದೆ.

ವಿಚಿತ್ರ ಎಂಬಂತೆ ಹಮಾಸ್ ಜೊತೆ ಭೀಕರ ಯುದ್ದ ನಡೆಸಿದ ಇಸ್ರೇಲ್ ದೇಶವು ಎಂಟನೇ ಸ್ಥಾನದಲ್ಲಿದೆ. ಕೋಸ್ಟಾ ರಿಕಾ ಮತ್ತು ಮೆಕ್ಸಿಕೊ ಕೂಡ ಮೊದಲ ಬಾರಿಗೆ ಅಗ್ರ ಹತ್ತು ಸ್ಥಾನಗಳಲ್ಲಿದ್ದು, ಈ ದೇಶಗಳು ಕ್ರಮವಾಗಿ 6 ​​ಮತ್ತು 10ನೇ ಶ್ರೇಯಾಂಕದಲ್ಲಿವೆ.

ಇದನ್ನೂ ಓದಿ:  ಐಪಿಎಲ್ 2025: ಕೆಕೆಆರ್-ಆರ್ಸಿಬಿ ಉದ್ಘಾಟನಾ ಪಂದ್ಯವೇ ರದ್ದಾಗುವ ಸಾಧ್ಯತೆ?

ದೇಶ ಪ್ರತಿಯಿಂದ ಒಂದರಿಂದ ಮೂರು ಸಾವಿರ ಜನರ ಮಾದರಿ ಗಾತ್ರವನ್ನು ಆಯ್ಕೆ ಮಾಡಲಾಗಿದೆ. ಕೇಳಲಾದ ಪ್ರಶ್ನೆಗಳ ಆಧಾರದ ಮೇಲೆ ಅವರಿಗೆ ರಚಿಸಲಾಗಿದೆ. ಈ ಪ್ರಶ್ನೆಗಳಿಗೆ 0 ರಿಂದ 10 ರ ರೇಟಿಂಗ್‌ನಲ್ಲಿ ಉತ್ತರಿಸಬೇಕು. 0 ಎಂದರೆ ಕೆಟ್ಟದು, 10 ಎಂದರೆ ಅತ್ಯುತ್ತಮ ಅನುಭವ. ಸಂಪತ್ತು ಮತ್ತು ಅಭಿವೃದ್ಧಿ, ಸಂಬಂಧಗಳು, ಜನರ ನಡುವಿನ ನಂಬಿಕೆ, ಆತ್ಮತೃಪ್ತಿ, ಸಾಮಾಜಿಕ ಬೆಂಬಲ, ಜೀವಿತಾವಧಿ, ಸ್ವಾತಂತ್ರ್ಯ, ಔದಾರ್ಯ ಮತ್ತು ಭ್ರಷ್ಟಾಚಾರ ಎಲ್ಲಾ ಈ ಅಂಶಗಳನ್ನು ಪರಿಗಣಿಸಿ ದೇಶಗಳಿಗೆ ಸ್ಥಾನ ನಿಗದಿಪಡಿಸಲಾಗಿದೆ.

ಅಗ್ರ 10 ಅಗ್ರ ಸ್ಥಾನದಲ್ಲಿರುವ ದೇಶಗಳು
1. ಫಿನ್ಲ್ಯಾಂಡ್

2. ಡೆನ್ಮಾರ್ಕ್

3. ಐಸ್ಲ್ಯಾಂಡ್

4. ಸ್ವೀಡನ್

5. ನೆದರ್ಲ್ಯಾಂಡ್

6. ಕೋಸ್ಟಾ ರಿಕಾ

7. ನಾರ್ವೆ

8. ಇಸ್ರೇಲ್

9. ಲಕ್ಷಂಬರ್ಗ್

೧೦. ಮೆಕ್ಸಿಕೋ

ಭಾರತಕ್ಕೆ ಎಷ್ಟನೇ ಸ್ಥಾನ?
2025ರ ಸಂತೋಷದ ವರದಿಯಲ್ಲಿ 147 ದೇಶಗಳನ್ನು ಪರಿಗಣಿಸಿ ವರದಿ ಸಿದ್ದಪಡಿಸಲಾಗಿದೆ. ಇದರಲ್ಲಿ ಭಾರತವು 118ನೇ ಸ್ಥಾನವನ್ನು ಹೊಂದಿದೆ. ಕಳೆದ ವರ್ಷಕ್ಕಿಂತ ಕೊಂಚ ಸುಧಾರಿಸಿದೆ ಎಂದು ಹೇಳಬಹುದು. ಏಕೆಂದರೆ 2024ರ ಹ್ಯಾಪಿನೆಸ್ ರಿಪೋರ್ಟ್‌ನಲ್ಲಿ ಭಾರತವು 126ನೇ ಸ್ಥಾನದಲ್ಲಿತ್ತು. ಆದರೆ 2025ರಲ್ಲಿ ಭಾರತವು 8 ಸ್ಥಾನ ಮೇಲಕ್ಕೇರಿದೆ.

ಶ್ರೇಯಾಂಕದಲ್ಲಿ ಕುಸಿತಕಂಡ ಅಮೆರಿಕ
ಸಂತೋಷ ಸೂಚ್ಯಂಕ ವರದಿಯಲ್ಲಿ ಕಳೆದ ವರ್ಷ 23ನೇ ಸ್ಥಾನದಲ್ಲಿದ್ದ ಅಮೆರಿಕ ಈ ಬಾರಿ ಒಂದು ಸ್ಥಾನ ಕುಸಿದಿದೆ. 2012ರಲ್ಲಿ 11ನೇ ಸ್ಥಾನದಲ್ಲಿದ್ದ ಅಮೆರಿಕ ಈಗ 24ನೇ ಸ್ಥಾನಕ್ಕೆ ಕುಸಿದಿರುವುದು ಗಮನಾರ್ಹ.

Continue Reading

LATEST NEWS

ಫಿನಾಯಿಲ್ ಕುಡಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

Published

on

ಗದಗ: ಪ್ರೀತಿ ಪ್ರೇಮದ ಕಾರಣದಿಂದ ಪುರುಷನ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಫಿನಾಯಿಲ್ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಂಡರಗಿ ತಾಲೂಕಿನ ಬೆಟಗೇರಿ ಬಾಲಕಿಯರ ವೃತ್ತಿಪರ ಹಾಸ್ಟೆಲ್‌ನಲ್ಲಿ ನಡೆದಿದೆ.

ವಿರಪಾಪೂರ ತಾಂಡಾದ ನಿವಾಸಿ ವಂದನಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. 19 ವರ್ಷದ ವಂದನಾಗೆ ಅದೇ ಗ್ರಾಮದ 42 ವರ್ಷದ ಕಿರಣ್ ಕಾರಬಾರಿ ಎಂಬಾತ ಪ್ರೀತಿಸುತ್ತಿದ್ದ. ಬಳಿಕ ಮದುವೆಯಾಗು ಅಂತ ಒತ್ತಾಯಿಸುತ್ತಿದ್ದ. ಪ್ರತಿದಿನ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದ. ಮದುವೆ ಆಗದಿದ್ದರೆ ಫೋಟೋ ಎಡಿಟ್ ಮಾಡಿ ಸೋಷಿಯಲ್ ಮೀಡಿಯಾಗೆ ಹಾಕುವುದಾಗಿ ಹೆದರಿಸಿದ್ದ. ಇದರಿಂದ ಮನನೊಂದ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ವಂದನಾ ಪೋಷಕರು ಆರೋಪಿಸಿದ್ದಾರೆ.

ಗುರುವಾರ ಹಾಸ್ಟೆಲ್‌ನಲ್ಲಿ ಪಿನಾಯಿಲ್ ಸೇವಿಸಿದ್ದಾಳೆ, ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾಳೆ.

ಆರೋಪಿಗೆ ತಕ್ಕ ಶಿಕ್ಷೆ ಆಗಬೇಕೆಂದು ಕುಟುಂಬಸ್ಥರ ಆಗ್ರಹವಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಆರೋಪಿ ಕಿರಣ್ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈ ಕುರಿತು ಗದಗನ ಬೆಟಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಸದನದಲ್ಲಿ ಗದ್ದಲ; 18 ಬಿಜೆಪಿ ಶಾಸಕರು 6 ತಿಂಗಳು ಅಮಾನತು!

Published

on

ಮಂಗಳೂರು/ ಬೆಂಗಳೂರು :  ಇಂದು ನಡೆದ ವಿಧಾನ ಸಭಾ ಅಧಿವೇಶನದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಮಂಡಿಸಿರುವ  ಬಜೆಟ್ ಅಂಗೀಕಾರಗೊಂಡಿದೆ. ಈ ವೇಳೆ ವಿಪಕ್ಷ ಸದಸ್ಯರು ಬಜೆಟ್ ನಲ್ಲಿ ಸೇರಿಸಿರುವ ಕೆಲವೊಂದು ವಿಚಾರಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ. ಸದನದಲ್ಲಿ ಹನಿಟ್ರ್ಯಾಪ್ ವಿಚಾರವೂ ಸದ್ದು ಮಾಡಿದ್ದು, ಸಾರ್ವಜನಿಕ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಿಟ್ಟ ನಾಲ್ಕು ಶೇಕಡ ಮೀಸಲಾತಿ ರದ್ದು ಮಾಡುವಂತೆ ವಿಪಕ್ಷಗಳು ಪಟ್ಟು ಹಿಡಿದಿದ್ದವು. ಅಲ್ಲದೇ, ಸ್ಪೀಕರ್ ಪೀಠಕ್ಕೇರಿದ ವಿಪಕ್ಷ ಸದಸ್ಯರು
ಖಾದರ್ ಮೇಲೆ ಪೇಪರ್‌ಗಳನ್ನು ಹರಿದು ಹಾಕಿ ಗಲಾಟೆ ಮಾಡಿದ್ದರು. ಮಧ್ಯಾಹ್ನ ಭೋಜನ ವಿರಾಮದ ಬಳಿಕವೂ ಇದು ಮುಂದುವರಿದಿತ್ತು.

ಹೀಗಾಗಿ ವಿಧಾನಸಭೆಯ ಸ್ಪೀಕರ್ ಪೀಠಕ್ಕೆ ಅಗೌರವ ತೋರಿಸಿದ ಹಿನ್ನೆಲೆ ಕರಾವಳಿಯ ಮೂವರು ಸೇರಿದಂತೆ ಒಟ್ಟು 18 ಬಿಜೆಪಿ ಶಾಸಕರನ್ನು 6 ತಿಂಗಳ ವರೆಗೆ ಅಮಾನತುಗೊಳಿಸಿ ಸ್ಪೀಕರ್ ಖಾದರ್ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ : ಗದ್ದಲದ ನಡುವೆ ಅಂಗೀಕಾರವಾದ ಬಜೆಟ್; ಮುಸ್ಲಿಂ ಮೀಸಲಾತಿ ರದ್ಧಿಗೆ ಆಗ್ರಹಿಸಿ ಸ್ಪೀಕರ್ ಪೀಠಕ್ಕೇರಿದ ವಿಪಕ್ಷ ಸದಸ್ಯರು

ಯಾರೆಲ್ಲ ಅಮಾನತು?

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ, ಮೂಡುಬಿದ್ರೆ ಶಾಸಕ ಉಮಾನಾಥ್ ಕೋಟ್ಯಾನ್, ದೊಡ್ಡಣ್ಣ ಗೌಡ ಪಾಟೀಲ್, ಸಿ ಕೆ ರಾಮಮೂರ್ತಿ, ಅಶ್ವತ್ಥ ನಾರಾಯಣ, ಎಸ್ ಆರ್ ವಿಶ್ವನಾಥ್, ಬೈರತಿ ಬಸವರಾಜ, ಎಂ ಆರ್ ಪಾಟೀಲ್, ಚನ್ನಬಸಪ್ಪ, ಬಿ.ಸುರೇಶ್ ಗೌಡ, ಶರಣು ಸಲಗಾರ್, ಶೈಲೇಂದ್ರ ಬೆಲ್ದಾಳೆ, ಹರೀಶ್ ಬಿಪಿ, ಮುನಿರತ್ನ, ಬಸವರಾಜ ಮತ್ತಿಮೋಡ್, ಧೀರಜ್ ಮುನಿರಾಜು, ಡಾ. ಚಂದ್ರು ಲಮಾಣಿ.

Continue Reading
Advertisement

Trending

Copyright © 2025 Namma Kudla News

You cannot copy content of this page