Connect with us

LATEST NEWS

ಮಹಿಳೆಯ ಬೆತ್ತಲೆ ವೀಡಿಯೋ ಮಾಡಿ ಬ್ಲ್ಯಾಕ್ ಮೇಲ್: ಅರ್ಚಕ ಅರೆಸ್ಟ್..!

Published

on

ಮಂಗಳೂರು/ಬೆಂಗಳೂರು: ಕೇರಳದ ತ್ರಿಶೂರ್‌ನ ಪೆರಿಗೊಟ್ಟುಕ್ಕಾರ ದೇವಾಲಯದ ಅರ್ಚಕ ಅರುಣ್‌ನನ್ನು ಬೆಳ್ಳಂದೂರು ಪೊಲೀಸರು ಬಂಧಿಸಿದ್ದಾರೆ. ಮಹಿಳೆಯೊಬ್ಬರ ಬೆತ್ತಲೆ ವಿಡಿಯೋ ರೆಕಾರ್ಡ್‌ ಮಾಡಿಕೊಂಡು ಬ್ಲ್ಯಾಕ್‌ಮೇಲ್‌ ಮಾಡಿದ ಆರೋಪದ ಮೇಲೆ ಈ ಬಂಧನ ನಡೆದಿದೆ. ಆದರೆ, ಪ್ರಕರಣದ ಮುಖ್ಯ ಆರೋಪಿ, ದೇವಾಲಯದ ಮುಖ್ಯ ಅರ್ಚಕ ಉನ್ನಿ ದಾಮೋದರನ್‌ ಪರಾರಿಯಾಗಿದ್ದು, ಆತನಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ.


ಬೆಂಗಳೂರಿನ ಮಹಿಳೆಯೊಬ್ಬರು ಕುಟುಂಬದಲ್ಲಿ ನಾನಾ ಸಮಸ್ಯೆ ಆಗ್ತಿದೆ. ಯಾರೋ ಮಾಟಮಂತ್ರ ಮಾಡಿದ್ದಾರೆ ಅಂತ ನಿವಾರಣೆ ಪೂಜೆ ಮಾಡಿಸಲು ಕೇರಳದ ತ್ರಿಶೂರ್​ನ ಪೆರಿಗೊಟ್ಟುಕ್ಕಾರ ದೇವಸ್ಥಾನಕ್ಕೆ ತೆರಳಿದ್ರು. ಇನ್ಸ್ಟಾಗ್ರಾಂ ನೋಡಿ ಈ ದೇವಾಲಯಕ್ಕೆ ಹೋಗಿದ್ರಂತೆ ಈ ಮಹಿಳೆ, ಆಗ ದೇವಾಲಯದ ಅರ್ಚಕ ಅರುಣ್ ಪರಿಚಯ ಆಗಿದೆ. ಆಕೆಗೆ ಗಂಡ ಇಲ್ಲ ಅನ್ನೋದನ್ನು ಅರಿತ ಅರ್ಚಕರು ತಮ್ಮ ಕಳ್ಳಾಟ ಶುರು ಮಾಡಿದ್ದಾರೆ ಎನ್ನಲಾಗ್ತಿದೆ.

24 ಸಾವಿರ ಹಣ ಕೊಟ್ಟರೇ ಪೂಜೆ ಮಾಡೋದಾಗಿ ಅರುಣ್ ಹೇಳಿದ್ದರಂತೆ. ಬಳಿಕ ಮಹಿಳೆ ನಂಬರ್ ಪಡೆದು ಹೇಳಿದ ದಿನ ಬರುವಂತೆ ಸೂಚನೆ ನೀಡಿದ್ದ. ಇದಾದ ಬಳಿಕ ಅರ್ಚಕ ಮಹಿಳೆಗೆ ತಡರಾತ್ರಿಯಲ್ಲಿ ನಿರಂತರ ವಾಟ್ಸಾಪ್ ಕರೆ ಮಾಡಿದ್ದಾರೆ. ತಾನು ಬೆತ್ತಲಾಗಿ, ಮಹಿಳೆಯನ್ನು ಬೆತ್ತಲಾಗುವಂತೆ ಬಲವಂತ ಮಾಡಿದ್ದಾನೆ ಎಂದು ಮಹಿಳೆ ಆರೋಪ ಮಾಡಿದ್ದಾರೆ.

ಇದನ್ನೂ ಓದಿ: ಪ್ರೀತಿಸುತ್ತಿದ್ದವಳನ್ನೇ ಕೊ*ಲೆ ಮಾಡಿದ ಪ್ರಿಯಕರ 6 ತಿಂಗಳ ಬಳಿಕ ಸಿಕ್ಕಿಬಿದ್ದ

ಆದರೆ ಸಂತ್ರಸ್ತೆ ಅದಕ್ಕೆ ಒಪ್ಪಿರಲಿಲ್ಲ. ಇದರಿಂದ ಕೋಪಗೊಂಡಿದ್ದ ಆತ, ಮಕ್ಕಳ ಮೇಳೆ ಮಾಟ ಮಂತ್ರ ಮಾಡಿಸುವೆ ಎಂದು ಬೆದರಿಕೆ ಹಾಕಿ, ಮಹಿಳೆ ನಗ್ನಳಾಗುವಂತೆ ಮಾಡಿದ್ದ. ಅದಾದ ನಂತರ ಮತ್ತೆ ವಿಶೇಷ ಪೊಜೆಗೆಂದು ದೇವಸ್ಥಾನಕ್ಕೆ ಬರುವಂತೆ ತಿಳಿಸಿದ್ದ. ಬ್ಲ್ಯಾಕ್​ಮೇಲ್​​ಗೆ ಹೆದರಿ ಮಹಿಳೆ ದೇಗುಲಕ್ಕೆ ತೆರಳಿದ್ದರು. ಆಕೆಯ ಬಳಿ ಪೂಜೆ ಮಾಡಿಸಿದ್ದ ಅರುಣ್ ಹಾಗೂ ಮುಖ್ಯ ಅರ್ಚಕ, ಧಾರ್ಮಿಕ ಕ್ರಿಯೆ ಇದೆ ಎಂದು ಬಲವಂತವಾಗಿ ಕಾರಿನಲ್ಲಿ ಕಾಡಿಗೆ ಕರೆದುಕೊಂಡು ಹೋಗಿ ಅಸ್ವಾಭಾವಿಕ ಲೈಂಗಿಕ ಕ್ರಿಯೆಗೆ ಮುಂದಾಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇಬ್ಬರು ಅರ್ಚಕರ ಕಿರುಕುಳಕ್ಕೆ ಬೇಸತ್ತ ಮಹಿಳೆ ಬೆಳ್ಳಂದೂರು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ. ಸದ್ಯ ಅರ್ಚಕ ಅರುಣ್ ಬಂಧನವಾಗಿದ್ದು, ಮುಖ್ಯ ಅರ್ಚಕ ಉನ್ನಿ ದಾಮೋದರನ್ ಪರಾರಿ ಆಗಿದ್ದಾರೆ. ತಡರಾತ್ರಿ ಅರುಣ್ ಮಾಡ್ತಾ ಇದ್ದ ಮೆಸೇಜ್ ಸ್ಕ್ರೀನ್ ಶಾಟ್ ಗಳನ್ನು ಮಹಿಳೆ ಪೊಲೀಸರಿಗೆ ನೀಡಿದ್ದಾರೆ.

DAKSHINA KANNADA

ಸುಳ್ಳು ಸುದ್ದಿ, ದ್ವೇಷ ಭಾಷಣಗಳ ವಿರುದ್ದ ಮಸೂದೆ ಮಂಡನೆ ಮಾಡ್ತೇವೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

Published

on

ಮಂಗಳೂರು: ಸುಳ್ಳು ಸುದ್ದಿ ಹರಡುವುದು ಹಾಗೂ ದ್ವೇಷ ಭಾಷಣ ಮಾಡುವವರ ವಿರುದ್ದ ಮುಂದಿನ ಅಧಿವೇಶನದಲ್ಲಿ ಮಸೂದೆ ಮಂಡನೆ ಮಾಡುವುದಾಗಿ ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.


ಈ ಸಭೆಯನ್ನು ನಾವು ಯಾವುದೇ ದುರುದ್ದೇಶದಿಂದ ಕರೆದಿಲ್ಲ ಅಥವಾ ‌ದ.ಕ ಜಿಲ್ಲೆಗೆ ಯಾವುದೇ ಲೇಬಲ್ ಹಚ್ಚಲು ನಾವು ಕರೆದಿಲ್ಲ. ಇತಿಹಾಸ ನೋಡಿದ್ರೆ ಇಡೀ ರಾಜ್ಯದಲ್ಲಿ ದ.ಕ ಜಿಲ್ಲೆಯಂಥ ಜಿಲ್ಲೆ ಮತ್ತೊಂದಿಲ್ಲ. ನೀವು ಬುದ್ದಿವಂತರು ಮಾತ್ರವಲ್ಲ, ಬಹಳಷ್ಟು ಕ್ರಿಯಾಶೀಲರು, ಪ್ರಪಂಚದ ಯಾವುದೇ ಮೂಲೆಯಲ್ಲಿ ಬದುಕಬಹುದಾದ ಚಾಕಚಕ್ಯತೆ ಉಳ್ಳವರು. ಇಡೀ ದೇಶದ ಶಿಕ್ಷಣ ವ್ಯವಸ್ಥೆನ್ನ ನಿಯಂತ್ರಣ ಮಾಡೋರು ನೀವು, ಎಂದು ಮಂಗಳೂರು ಶಾಂತಿ ಸಭೆಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಕರಾವಳಿಯನ್ನು ಹಾಡಿ ಹೊಗಳಿದ್ದಾರೆ.

ಲಕ್ಷಾಂತರ ಜನರು ವಿದ್ಯಾರ್ಥಿಗಳು ಇಲ್ಲಿ ಕಲಿತು ಹೋಗಿ ಜೀವನ ಕಟ್ಟುಕೊಂಡಿದ್ದಾರೆ. ದೇಶದ ಮೊದಲ ಬ್ಯಾಂಕಿಂಗ್ ವ್ಯವಸ್ಥೆಗೆ ದೊಡ್ಡ ಕೊಡುಗೆ ಕೊಟ್ಟ ಜಿಲ್ಲೆ ದ.ಕ. ಸುಮಾರು‌ 38 ಜನರು ಇಂದು ತಮ್ಮ ಅಭಿಪ್ರಾಯ ಹೇಳಿದ್ದೀರಿ. ಬಹಳಷ್ಟು ಜನರು ಒಳ್ಳೆಯ ಸಲಹೆ ಕೊಟ್ಟಿದ್ದೀರಿ, ಸರ್ಕಾರದ ಜವಾಬ್ದಾರಿ ತಿಳಿಸಿದ್ದೀರಿ. ಹರೀಶ್ ಪೂಂಜಾ, ಭರತ್ ಶೆಟ್ಟಿ, ಕಾಮತ್ ಸತ್ಯ ಹೇಳಿದ್ದೀರಿ ಇದೊಂದು ಸೈದ್ದಾಂತಿಕ ಜಗಳ ಅಂತ ನಿಜವಾದ ಸತ್ಯ ಹೇಳಿದ್ದೀರಿ, ಆದರೆ ನಮ್ಮ‌‌ ಮಕ್ಕಳು ಇಂಥ ಭಯದಲ್ಲೇ ಬದುಕಬೇಕಾ? ನಾನು ನೆಹರೂ ಮೈದಾನಕ್ಕೆ ಚಿಕ್ಕಂದಿನಲ್ಲಿ ಅಥ್ಲೀಟ್ ಆಗಿ ಬಂದಿದ್ದೆ, ಆಗ ಯಾರೂ ಇಲ್ಲಿ ಹಿಂದೂ ಮುಸ್ಲಿಂ ಅಂದಿದ್ದನ್ನ ನಾನು ನೋಡಿಲ್ಲ. ಹಾಗಾಗಿ ಇತಿಹಾಸ ಸ್ಮರಿಸಿಕೊಳ್ಳಿ, ದ.ಕ ಜಿಲ್ಲೆಯ ಅವಶ್ಯಕತೆ ಇದೆ. ನಾವು ನಿಮ್ಮ ಸಲಹೆಗಳನ್ನು ತೆಗೆದುಕೊಂಡು ಚರ್ಚೆ ಮಾಡಬೇಕಿದೆ. ಆ ಬಳಿಕ ಏನೆಲ್ಲಾ ಕ್ರಮ ವಹಿಸಬೇಕೋ ಅದನ್ನ ವಹಿಸ್ತೇನೆ. ಮುಖ್ಯಮಂತ್ರಿಗಳು ಸದನದಲ್ಲೇ ಡ್ರಗ್ಸ್ ವಿರುದ್ದ ಯುದ್ದ ಸಾರಿದ್ದಾರೆ. ನಾವು ಯಾವುದೇ ಕಾರಣಕ್ಕೂ ಮತ್ತೊಂದು ಉಡ್ತಾ ಪಂಜಾಬ್ ಆಗಲು ಬಿಡಲ್ಲ. ಮಂಗಳೂರು ಕಮಿಷನರ್, ಎಸ್ಪಿಗೂ ಅದನ್ನ ಖಡಕ್ ಆಗಿ ಹೇಳಿದ್ದೇನೆ.

ಇದನ್ನೂ ಓದಿ: ಸುಳ್ಯ: ಘನತ್ಯಾಜ್ಯ ಘಟಕಕ್ಕೆ ಬೆಂಕಿ; ನಾಲ್ಕು ಲಕ್ಷ ಮೌಲ್ಯದ ಯಂತ್ರ ಹಾನಿ

ಬಹಳ ಸಾಂಸ್ಕೃತಿಕವಾಗಿ ಐಶ್ವರ್ಯವಂತ ಜಿಲ್ಲೆ ದ.ಕ ಜಿಲ್ಲೆಯಲ್ಲಿ ಸೌಹಾರ್ದ ಸಮಾವೇಶ ಮಾಡುವ ಬಗ್ಗೆಯೂ ಚಿಂತನೆ ಇದ್ದು, ಶಾಂತಿಯ ವಾತಾವರಣ ಕರಾವಳಿ ಪ್ರದೇಶದಲ್ಲಿ ಬರಬೇಕು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಅವಕಾಶ ಕೊಡಬಾರದು. ಪೊಲೀಸರು ಇನ್ನೂ ಕಠಿಣವಾಗಿ ಹೋಗಲು ಅವಕಾಶ ಕೊಡಬೇಡಿ. ಸುಳ್ಳು ಸುದ್ದಿ, ದ್ವೇಷ ಭಾಷಣಗಳ ವಿರುದ್ದ ಮಸೂದೆ ಮಂಡನೆ ಮಾಡ್ತೇವೆ. ಮುಂದಿನ ಅಧಿವೇಶನದಲ್ಲಿ ಹೊಸ ಕಾನೂನು ಮಂಡನೆ ಮಾಡ್ತೇವೆ ಎಂದು ಪರಮೇಸ್ವರ್ ಇದೇ ಸಂಧರ್ಭ ತಿಳಿಸಿದ್ದಾರೆ.

 

Continue Reading

DAKSHINA KANNADA

ಉಳ್ಳಾಲ: ರಕ್ತದೊತ್ತಡದಿಂದ ಕುಸಿದು ಬಿದ್ದು ನವ ವಿವಾಹಿತ ಸಾ*ವು

Published

on

ಉಳ್ಳಾಲ: ರಕ್ತದೊತ್ತಡದಿಂದ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ವಿವಾಹಿತ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಸಾ*ವನ್ನಪ್ಪಿದ ಘಟನೆ ಬುಧವಾರ ನಡೆದಿದೆ.

ಮೃ*ತ ಯುವಕನನ್ನು ಉಳ್ಳಾಲ ತಾಲೂಕಿನ ಮಂಜನಾಡಿ ಪೆರಡೆ ದಿ. ವೆಂಕಪ್ಪ ಹಾಗೂ ಪಾರ್ವತಿ ದಂಪತಿಯ ಪುತ್ರ 32 ವರ್ಷದ ಭರತ್ ಎಂದು ತಿಳಿದುಬಂದಿದೆ.

ನಗರದ ಮಾಲ್ ಒಂದರಲ್ಲಿ ಟೈಲರ್ ಕೆಲಸ ಮಾಡುತ್ತಿದ್ದ ಭರತ್ ನಾಲ್ಕು ದಿನದ ಹಿಂದೆ ರಕ್ತದೊತ್ತಡದಿಂದ ಕುಸಿದು ಬಿದ್ದಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾ*ವನ್ನಪ್ಪಿದ್ದಾರೆ.

ಇದನ್ನೂ ಓದಿ: ಸುಳ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಸಾವು

ಕಳೆದ ಏಪ್ರಿಲ್ 22ರಂದು ಭರತ್ ವಿವಾಹ ಸಮಾರಂಭ ನಡೆದಿದ್ದು ಪತ್ನಿ ನಗರದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೃ*ತ ಯುವಕ ಭರತ್ ತಾಯಿ, ಪತ್ನಿ ಹಾಗೂ ಮೂವರು ಸೋದರಿಯರು ಅಗಲಿದ್ದಾರೆ.

Continue Reading

LATEST NEWS

ದೆಹಲಿ ಮತ್ತು ಎನ್‌ಸಿಆರ್ ಪ್ರದೇಶದಲ್ಲಿ 4.4 ತೀವ್ರತೆಯ ಪ್ರಬಲ ಭೂಕಂಪನ

Published

on

ನವದೆಹಲಿ: ದೆಹಲಿ ಮತ್ತು ಎನ್‌ಸಿಆರ್ ಪ್ರದೇಶದಲ್ಲಿ 4.4 ತೀವ್ರತೆ ಪ್ರಬಲ ಭೂಕಂಪನ ಸಂಭವಿಸಿದ ಘಟನೆ ಇಂದು (ಜು. 10) ಮುಂಜಾನೆ ನಡೆದಿದೆ.

ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ಈ ಮಾಹಿತಿ ತಿಳಿಸಿದ್ದು, ಬೆಳಗ್ಗೆ 9:04ರ ಸುಮಾರಿಗೆ ಭೂಮಿ ಕಂಪಿಸಿದೆ ಎಂದು ಹೇಳಿದೆ.1 ನಿಮಿಷ ಕಾಲ ಭೂಕಂಪನದ ಅನುಭವವಾಗಿದೆ.

ಇದನ್ನೂ ಓದಿ: ಸುಳ್ಯ: ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಸಾವು

ಭೂಮಿ ಕಂಪಿಸಿದ್ದರಿಂದ ಜನರು ಗಾಬರಿಗೊಂಡು ಮನೆಯಿಂದ ಹೊರಗೆ ಓಡಿದ್ದಾರೆ. ಯಾವುದೇ ಹಾನಿ ಹಾಗೂ ಪ್ರಾಣಾಪಾಯ ಸಂಭವಿಸಿಲ್ಲ ಎಂದು ಮೂಲಗಳು ತಿಳಿಸಿವೆ. ಅಲ್ಲದೇ ಹರಿಯಾಣದ ಜಜ್ಜರ್‌ನಲ್ಲಿ 4.4 ತೀವ್ರತೆಯ ಭೂಕಂಪ ಸಂಭವಿಸಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page