Connect with us

ಎಪ್ರಿಲ್ 20 ರಿಂದ ಕೇರಳದಲ್ಲಿ ಹೋಟೆಲ್, ಬಸ್ ಸಂಚಾರಕ್ಕೆ ಅನುಮತಿ

Published

on

ಎಪ್ರಿಲ್ 20 ರಿಂದ ಕೇರಳದಲ್ಲಿ ಹೋಟೆಲ್, ಬಸ್ ಸಂಚಾರಕ್ಕೆ ಅನುಮತಿ

ತಿರುವನಂತಪುರಂ: ಮಹತ್ವದ ನಿರ್ಧಾರವೊಂದರಲ್ಲಿ ಕೇರಳ ಸರ್ಕಾರ ರಾಜ್ಯದಲ್ಲಿ ಹೋಟೆಲ್, ರೆಸ್ಟೋರೆಂಟ್‍ಗಳ ಓಪನ್‍ಗೆ ಅನುಮತಿ ನೀಡುವುದರ ಜೊತೆಗೆ ಬಸ್‍ಗಳ ಓಡಾಟಕ್ಕೂ ಲಾಕ್‍ಡೌನ್‍ನಿಂದ ವಿನಾಯಿತಿ ನೀಡಿದೆ.

ಈ ಮೂಲಕ ನಾಳೆಯಿಂದ (ಎಪ್ರಿಲ್ 20 ) ಕೇರಳದ 14 ಜಿಲ್ಲೆಗಳಲ್ಲಿ ಜನ ಜೀವನ ಸಹಜ ಸ್ಥಿತಿಗೆ ಮರಳಲಿದೆ. 21 ದಿನಗಳ ಲಾಕ್‍ಡೌನ್ ಬಳಿಕ ವಿನಾಯಿತಿ ನೀಡುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಕೇರಳ ಪ್ರಸ್ತಾವನೆಯನ್ನು ಸಲ್ಲಿಸಿತ್ತು.

ಆ ಪ್ರಸ್ತಾವನೆಯನ್ನು ಶುಕ್ರವಾರ ಪ್ರಧಾನಿ ಮೋದಿ ಸರ್ಕಾರ ಒಪ್ಪಿಕೊಂಡಿದೆ. ಲಾಕ್‍ಡೌನ್‍ನಿಂದ ವಿನಾಯಿತಿ ನೀಡುವ ಸಲುವಾಗಿ ಕೇರಳದಲ್ಲಿರುವ ಒಟ್ಟು 14 ಜಿಲ್ಲೆಗಳನ್ನು ಕೆಂಪು ವಲಯ, ಹಳದಿ ವಲಯ(ಎ), ಹಳದಿ ವಲಯ(ಬಿ), ಹಸಿರುವ ವಲಯವಾಗಿ ವಿಂಗಡಿಸಲಾಗಿತ್ತು.

ಶನಿವಾರ ಕೇರಳದಲ್ಲಿ ಕೇವಲ ಮೂರು ಕೊರೊನಾ ಪಾಸಿಟಿವ್ ಪ್ರಕರಣ ವರದಿಯಾಗಿತ್ತು. ಕೊರೊನಾ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ಈಗ ಕೇಂದ್ರ ಸರ್ಕಾರ ಅಸ್ತು ಎಂದಿದೆ.

ಕೆಂಪು ವಲಯ:

ಕಾಸರಗೋಡು, ಕಣ್ಣೂರು, ಕೋಯಿಕ್ಕೋಡ್, ಮಲ್ಲಪುರಂ ಮೇ 3ರ ವರೆಗೆ ಸಂಪೂರ್ಣ ಲಾಕ್‍ಡೌನ್ ಆಗಿರಲಿದೆ.

ಕೊರೊನಾ ಹಾಟ್ ಸ್ಪಾಟ್ ಜಾಗದಲ್ಲಿ ಅಗತ್ಯವಸ್ತು ಸಾಗಾಟಕ್ಕೆ ಎರಡು ಎಂಟ್ರಿ ಮತ್ತು ಎಕ್ಸಿಟ್ ಪಾಯಿಂಟ್ ಇರಲಿದೆ. ಇಲ್ಲಿ ಯಾವುದೇ ವಿನಾಯಿತಿ ಇಲ್ಲ.

ಕಿತ್ತಳೆ (ಎ) ವಲಯ:

ಪತನಂತಿಟ್ಟ, ಎರ್ನಾಕುಲಂ, ಕೊಲ್ಲಂ ಜಿಲ್ಲೆಗಳಲ್ಲಿ ಏಪ್ರಿಲ್ 24ರ ಬಳಿಕ ಲಾಕ್‍ಡೌನ್ ಸಡಿಲಿಕೆ ಆಗಲಿದೆ.

ಕಿತ್ತಳೆ (ಬಿ) ವಲಯ:

ಅಲಪ್ಪುಜ, ತ್ರಿಶೂರ್, ಪಾಲಕ್ಕಾಡ್, ತಿರುವನಂತಪುರಂ, ವಯನಾಡಿನಲ್ಲಿ ಏಪ್ರಿಲ್ 20ರ ಬಳಿಕ ಕೆಲವೆಡೆ ವಿನಾಯಿತಿ.

ಹಸಿರು ವಲಯ:

ಕೊರೊನಾ ಪ್ರಕರಣಗಳು ಬಾರದೇ ಇರುವ ಕೊಟ್ಟಾಯಂ, ಇಡುಕ್ಕಿಯಲ್ಲಿ ಏಪ್ರಿಲ್ 20ರಿಂದ ವಿನಾಯಿತಿ ಸಿಗಲಿದೆ.

ಕೆಂಪು ವಲಯ ಹೊರತುಪಡಿಸಿ ಉಳಿದ ಕಡೆಗಳಲ್ಲಿ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ.

ಸೋಮವಾರ, ಬುಧವಾರ, ಶುಕ್ರವಾರ ಬೆಸ ಸಂಖ್ಯೆಯೊಂದಿಗೆ ಕೊನೆ ಆಗುವ ವಾಹನಗಳು ಸಂಚರಿಸಬಹುದು.

ಮಂಗಳವಾರ, ಗುರುವಾರ ಶನಿವಾರ – ಸಮ ಸಂಖ್ಯೆಯೊಂದಿಗೆ ಅಂತ್ಯವಾಗುವ ವಾಹನಗಳ ಓಡಾಟಕ್ಕೆ ಅನುಮತಿ ಸಿಕ್ಕಿದೆ.

ಕೆಂಪುವಲಯ ಹೊರತುಪಡಿಸಿ ಉಳಿದ ಕಡೆಗಳಲ್ಲಿ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಸೋಮವಾರ, ಬುಧವಾರ, ಶುಕ್ರವಾರ ಬೆಸ ಸಂಖ್ಯೆಯೊಂದಿಗೆ ಕೊನೆ ಆಗುವ ವಾಹನಗಳು ಸಂಚರಿಸಬಹುದು.

ಮಂಗಳವಾರ, ಗುರುವಾರ ಶನಿವಾರ – ಸಮ ಸಂಖ್ಯೆಯೊಂದಿಗೆ ಅಂತ್ಯವಾಗುವ ವಾಹನಗಳ ಓಡಾಟಕ್ಕೆ ಅನುಮತಿ ಸಿಕ್ಕಿದೆ.

ಬೈಕ್ ಸವಾರರು ತಮ್ಮ ಸಂಬಂಧಿಕರೊಂದಿಗೆ ಡಬಲ್ ರೈಡಿಂಗ್‍ಗೆ ಅವಕಾಶವಿದ್ದು, ಜಿಲ್ಲೆಯ ಒಳಗಷ್ಟೇ 50 ರಿಂದ 60 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಬಸ್‍ಗಳು ಓಡಾಡಬಹುದು.

ಮೂರು ಸೀಟ್‍ಗಳಿದ್ದರೆ ಮಧ್ಯದ ಒಂದು ಸೀಟು ಖಾಲಿ ಬಿಡಬೇಕು, ಎರಡು ಆಸನಗಳಿದ್ದರೆ ಒಂದು ಆಸನದಲ್ಲಿ ಮಾತ್ರ ಕೂರಬೇಕು.

ಬಸ್‍ಗೆ ಹತ್ತುವ ಮೊದಲು ಸ್ಯಾನಿಟೈಸರ್, ಮಾಸ್ಕ್ ಕಡ್ಡಾಯ, ಯಾರೂ ನಿಂತು ಪ್ರಯಾಣಿಸುವಂತಿಲ್ಲ.

ಶನಿವಾರ ಮತ್ತು ಭಾನುವಾರ ಸಲೂನ್ ಅಂಗಡಿ ತೆರೆಯಬಹುದು. ಸಂಜೆ 7 ಗಂಟೆವರೆಗೆ ಹೋಟೆಲ್-ರೆಸ್ಟೋರೆಂಟ್ ತೆರೆಯಬಹುದು, 8 ಗಂಟೆವೆರೆಗೆ ಪಾರ್ಸೆಲ್‍ಗೆ ಅವಕಾಶ ಸಿಕ್ಕಿದೆ.

ಕಟ್ಟಡ ನಿರ್ಮಾಣ ಕಾಮಗಾರಿಗೆ ಒಪ್ಪಿಗೆ ಸಿಕ್ಕಿದ್ದು, ಹಸಿರು ವಲಯದಲ್ಲಿ ಬಟ್ಟೆ ಅಂಗಡಿ ತೆರೆಯಬಹುದು.

ವಾರದಲ್ಲಿ ಎರಡು ದಿನ ಮೊಬೈಲ್, ಆಟೋ ವರ್ಕ್‍ಶಾಪ್, ಕಂಪ್ಯೂಟರ್ ಸೆಂಟರ್, ಬುಕ್‍ ಸ್ಟೋರ್ ಗಳನ್ನು ತೆರೆಯಲು ಅನುಮತಿ ಸಿಕ್ಕಿದೆ

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಪಚ್ಚನಾಡಿ ಎಸ್.ಟಿ.ಪಿ. ಗೆ ಅನುದಾನ ಒದಗಿಸಿದ್ದು ಕೇಂದ್ರ ಸರಕಾರ: ಸಚಿವ ದಿನೇಶ್ ಗುಂಡೂ ರಾವ್ ವಿರುದ್ಧ ಶಾಸಕ ಕಾಮತ್ ಗರಂ

Published

on

ಮಂಗಳೂರು: ನಗರದ ಪಚ್ಚನಾಡಿ ಎಸ್.ಟಿ.ಪಿ. ಗೆ ಅನುದಾನ ಒದಗಿಸಿದ್ದು ಕೇಂದ್ರ ಸರಕಾರ. ರಾಜ್ಯ ಸರಕಾರ ಈ ಯೋಜನೆಗೆ ಚಿಕ್ಕಾಸು ನೀಡದಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ದಿನೇಶ್ ಗುಂಡೂ ರಾವ್ ಅವರು ಶಿಲಾನ್ಯಾಸ ನೆರವೇರಿಸಿದ ಬಗ್ಗೆ ಶಾಸಕ ವೇದವ್ಯಾಸ ಕಾಮತ್ ಗರಂ ಆಗಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ ಪಚ್ಚನಾಡಿ ಎಸ್.ಟಿ.ಪಿ ಆವರಣದಲ್ಲಿ ಮಂಗಳೂರು ನಗರದ ಒಳಚರಂಡಿ ವ್ಯವಸ್ಥೆಯ ನಿರ್ಮಾಣ ಮತ್ತು ಉನ್ನತೀಕರಣ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂ ರಾವ್ ಗುದ್ದಲಿ ಪೂಜೆ ನಡೆಸಿ, ಮಂಗಳೂರು ನಗರದ ಮೂಲಸೌಕರ್ಯ ಅಭಿವೃದ್ಧಿಗೆ ನಮ್ಮ ಸರಕಾರ ಬದ್ಧವಾಗಿದೆ ಎಂದು ಹೇಳಿಕೆ ನೀಡಿದ್ದಾರೆ.

ವಾಸ್ತವದಲ್ಲಿ ರಾಜ್ಯ ಕಾಂಗ್ರೆಸ್ ಸರಕಾರವು ಕ್ಷೇತ್ರದ ಅಭಿವೃದ್ಧಿಗೆ ಕಳೆದ ಎರಡೂ ವರ್ಷಗಳಿಂದ ನಯಾ ಪೈಸೆ ನೀಡಿಲ್ಲ. ಮೊದಲು ಆ ಅನುದಾನ ಬಿಡುಗಡೆಗೊಳಿಸಿ ತನ್ನ ಬದ್ಧತೆಯನ್ನು ಪ್ರದರ್ಶಿಸಲಿ. ಸ್ವಚ್ಛ ಭಾರತ ಮಿಷನ್ 2.0 ಮತ್ತು ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಪರಿಸರ ಪರಿಹಾರ ನಿಧಿಯಡಿ, ಸುಮಾರು 40 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಎಸ್.ಟಿ.ಪಿ. ಯೋಜನೆಯನ್ನು ಕೈಗೆತ್ತಿಕೊಳ್ಳಲಾಗಿದ್ದು ಇದು ಸಂಪೂರ್ಣ ಕೇಂದ್ರ ಸರಕಾರದ ಅನುದಾನವಾಗಿದೆ.

ಇದನ್ನೂ ಓದಿ: ಸಿದ್ಧರಾಮಯ್ಯ ದಾಖಲೆ ಬಜೆಟ್ ಬಿಟ್ಟರೆ ನ್ಯಾಯ ಸಿಕ್ಕಿಲ್ಲ: ಸಂಸದ ಕೋಟ

ಈ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳಾದ ಮಂಗಳೂರು ಉತ್ತರ ಹಾಗೂ ದಕ್ಷಿಣದ ಶಾಸಕರ ಸಹಿತ ಇಲ್ಲಿನ ಸಂಸದರಿಗೆ ಸರಿಯಾಗಿ ಮಾಹಿತಿ ನೀಡದಿರುವುದು ಮಂಗಳೂರಿಗೆ ಹಾಗೂ ಇಲ್ಲಿನ ಜನತೆಗೆ ಮಾಡುವ ಅವಮಾನವಾಗಿದೆ ಎಂದರು.

Continue Reading

DAKSHINA KANNADA

ಮಾ.7 ರಿಂದ 10: ಸೂಟರ್ ಪೇಟೆ ಶ್ರೀ ಕೋರ್ದಬ್ಬು ದೈವಸ್ಥಾನದಲ್ಲಿ ವಾರ್ಷಿಕ ನೇಮೋತ್ಸವ

Published

on

ಮಂಗಳೂರು: ಮಂಗಳೂರಿನ ಸೂಟರ್ ಪೇಟೆ ಶ್ರೀ ಕೋರ್ದಬ್ಬು ದೈವಸ್ಥಾನದಲ್ಲಿ ಭಗವಾನ್ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ ಮಾರ್ಚ್ 7ರಿಂದ ಮಾ.10ರವರೆಗೆ ನಡೆಯಲಿದೆ.

ಆ ಪ್ರಯುಕ್ತ ಇಂದು ಧರ್ಮದರ್ಶಿ ಭಾಸ್ಕರ ಐತಾಳ್ ಕೊಲ್ಯ ಇವರ ಪೌರೋಹಿತ್ಯದಲ್ಲಿ ನಾಗದೇವರಿಗೆ ಪಂಚಾಮೃತ ಅಭಿಷೇಕ, ನಾಗತಂಬಿಲ, ಆಶ್ಲೇಷ ಬಲಿಪೂಜೆ, ಪ್ರಸನ್ನ ಪೂಜೆ, ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮುಂತಾದ ಧಾರ್ಮಿಕ ವಿಧಿ ವಿಧಾನಗಳು ನಡೆದು ಬಳಿಕ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಿತು.

ಈ ಸಂದರ್ಭ ಕ್ಷೇತ್ರ ಸಮಿತಿಯ ಅಧ್ಯಕ್ಷ ಎಸ್. ರಾಘವೇಂದ್ರ ಮಾತನಾಡಿ ಭಂಡಾರವೇರಿದ ಬಳಿಕ ಪರಿವಾರ ದೈವಗಳ ನೇಮೋತ್ಸವ ನಡೆಯಲಿದೆ. ಮಾ.10ರವರೆಗೆ ದಿನಂಪ್ರತಿ ರಾಹು ಗುಳಿಗ, ಗುಳಿಗ ಪಂಜುರ್ಲಿ, ಕೊರಗಜ್ಜ, ತನ್ನಿಮಾನಿಗ ದೈವದ ನೇಮ ನಡೆಯಲಿದೆ. ನೇಮೋತ್ಸವದ ನಾಲ್ಕು ದಿನವೂ ಅನ್ನಸಂತರ್ಪಣೆ ನಡೆಯಲಿದೆ ಎಂದು ಹೇಳಿದರು.

ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಬಜೆಟ್‌ನಲ್ಲಿ ಭರ್ಜರಿ ಗಿಫ್ಟ್!

ಇನ್ನು ಪ್ರಧಾನ ಕಾರ್ಯದರ್ಶಿ ಎಸ್. ಜಗದೀಶ್ಚಂದ್ರ ಮಾತನಾಡಿ, ಈ ಕ್ಷೇತ್ರಕ್ಕೆ 160 ವರ್ಷಗಳ ಇತಿಹಾಸವಿದೆ. ವಿಶೇಷ ಅಂದ್ರೆ ಇದು ಪಂಚ ಗುಳಿಗನ ಸಾನಿಧ್ಯವಾಗಿದೆ. ವಾರ್ಷಿಕ ನೇಮೋತ್ಸವಕ್ಕೆ ಭಕ್ತರು ಸರ್ವ ರೀತಿಯಲ್ಲಿ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. ಈ ಸಂದರ್ಭ ಪ್ರದಾನ ಪಾತ್ರಿ ಎಸ್. ಗಣೇಶ್, ಖಜಾಂಚಿ ಎಸ್. ನವೀನ್ ಮತ್ತು ಸಮಿತಿಯ ಸರ್ವ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.

ಇಂದು ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಮಾ.10ರವರೆಗೆ ನಿರಂತರವಾಗಿ ದೈವಗಳ ನೇಮ, ಕುಣಿತ ಭಜನೆ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.

Continue Reading

LATEST NEWS

ಉಡುಪಿ: 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Published

on

ಉಡುಪಿ: ನಗರ ಠಾಣೆಯಲ್ಲಿ ಸುಮಾರು 10 ಕ್ಕಿಂತಲೂ ಅಧಿಕ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಇಆಗಿದ್ದ , ತಲೆಮರೆಸಿಕೊಂಡಿದ್ದ ಆರೋಪಿ ಕುಂದಾಪುರ ಕುಂಭಾಶಿ ಕೊರವಾಡಿ ಹರಂತುಬೆಟ್ಟುವಿನ ನಿವಾಸಿ ವಿಘ್ನೇಶ್ವರ ಐತಾಳ್‌(56) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ವಿರುದ್ಧ ಪ್ರಕರಣ ದಾಖಲಾದ ಬಳಿಕ ಅಂದರೆ 2011 ರಿಂದ ನ್ಯಾಯಾಲಯಕ್ಕೆ ಹಾಜರಾಗದೇ 15 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಸುಮಾರು 10 ಕ್ಕಿಂತಲೂ ಹೆಚ್ಚು ಬಾರಿ ವಾರೆಂಟ್ ಹೊರಡಿಸಿದ್ದು, ನ್ಯಾಯಾಲಯವು ಆತನ ವಿರುದ್ಧ ತಲೆ ಮರೆಸಿಕೊಂಡ ಆರೋಪಿ ಎಂದು ಘೋಷಿಸಿತ್ತು.

ಇದನ್ನೂ ಓದಿ: 6 ವರ್ಷಗಳಿಂದ ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಆರೋಪಿ ವಿಘ್ನೇಶ್ವರ ಐತಾಳನನ್ನು ಉಡುಪಿ ನಗರ ಪೊಲೀಸ್ ಠಾಣಾ ಪ್ರಭಾರ ನಿರೀಕ್ಷಕರಾದ ಮಹೇಶ ಪ್ರಸಾದ್ ರವರ ಮಾರ್ಗದರ್ಶನದಲ್ಲಿ ಬೆಂಗಳೂರಿನ ತಲಘಟ್ಟಪುರದಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page