Connect with us

LATEST NEWS

2028ರ ಆ ಒಂದು ಪಂದ್ಯಕ್ಕಾಗಿ ಟಿ20 ನಿವೃತ್ತಿಯನ್ನು ಹಿಂಪಡೆಯುತ್ತೇನೆ ಎಂದ ಕಿಂಗ್ ಕೊಹ್ಲಿ!

Published

on

ಮಂಗಳೂರು/ಬೆಂಗಳೂರು: ಟೀಂ ಇಂಡಿಯಾ 2024ರ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ದೊಡ್ಡ ಇತಿಹಾಸ ನಿರ್ಮಿಸಿತ್ತು. ಆದರೆ ಭಾರತ ತಂಡದ ಅಭಿಮಾನಿಗಳಿಗೆ ಬೇಸರ ಮೂಡಿಸಿದ ಸಂಗತಿ ಎಂದರೆ ಟೀಂ ಇಂಡಿಯಾದ ತ್ರಿವಳಿಗಳು ಟಿ20ಗೆ ನಿವೃತ್ತಿ ಘೋಷಣೆ ಮಾಡಿದ್ದು. ಅದರಲ್ಲೂ ಕಿಂಗ್ ಕೊಹ್ಲಿಯ ವಿದಾಯ ಅಭಿಮಾನಿಗಳಿಗೆ ಆಘಾತ ಉಂಟುಮಾಡಿತ್ತು. ಆದರೆ ಇದೀಗ ರನ್ ಮೆಷಿನ್ 2028ರಲ್ಲಿ ನಡೆಯುವ ಆ ಒಂದು ಪಂದ್ಯಕ್ಕಾಗಿ ತಮ್ಮ ನಿವೃತ್ತಿಯನ್ನು ವಾಪಾಸ್ ಪಡೆಯುವುದಾಗಿ ಹೇಳಿದ್ದಾರೆ.


ಹೌದು, ನಿನ್ನೆ (ಮಾ.15) ರಾಹುಲ್ ದ್ರಾವಿಡ್-ಪ್ರಕಾಶ್ ಪಡುಕೋಣೆ ಅಕಾಡೆಮಿಯಲ್ಲಿ ಇನೋವೆಟಿವ್ ಲ್ಯಾಬ್ ಆಯೋಜಿಸಿದ್ದ ಇಂಡಿಯನ್ ಸ್ಪೋರ್ಟ್ಸ್ ಸಮಿಟ್‌ನಲ್ಲಿ ವಿರಾಟ್ ಕೊಹ್ಲಿ ತಮ್ಮ ನಿವೃತ್ತಿಯ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸಂದರ್ಶನದಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ ನಾನು ಮತ್ತೊಂದು ಆಸ್ಟ್ರೇಲಿಯಾ ಪ್ರವಾಸದಲ್ಲಿ ಕಾಣಿಸಿಕೊಳ್ಳದೇ ಇರಬಹುದು. ಈ ಹಿಂದಿನ ಫಲಿತಾಂಶ ಏನೇ ಆಗಿದ್ದರೂ ಅದರಲ್ಲಿ ನನಗೆ ತೃಪ್ತಿ ಇದೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಕಾಣಿಸಿಕೊಳ್ಳದೇ ಇರಬಹುದು. ಈ ಹಿಂದಿನ ಫಲಿತಾಂಶ ಏನೇ ಆಗಿದ್ದರೂ ಅದರಲ್ಲಿ ನನಗೆ ತೃಪ್ತಿ ಇದೆ. ಹೀಗಾಗಿ ನಾನು ಮತ್ತೆ ಬಾರ್ಡರ್-ಗವಾಸ್ಕರ್ ಸರಣಿ ಆಡುವ ಬಗ್ಗೆ ಖಚಿತತೆ ಇಲ್ಲ ಎಂದಿದ್ದಾರೆ.

ಸದ್ಯಕ್ಕಂತೂ ಕ್ರಿಕೆಟ್‌ನಿಂದ ನಿವೃತ್ತಿ ಇಲ್ಲ
ನಾನು ಕ್ರಿಕೆಟ್ ಅನ್ನು ತುಂಬಾ ಪ್ರೀತಿಸುತ್ತಿದ್ದೇನೆ. ಅದನ್ನು ಆಡುವುದರ ಜೊತೆಗೆ ಆನಂದಿಸುತ್ತಿದ್ದೇನೆ. ಕ್ರಿಕೆಟ್‌ನಿಂದ ನಿವೃತ್ತಿ ಎನ್ನುವುದು ಸದ್ಯಕ್ಕಂತೂ ಇಲ್ಲವೇ ಇಲ್ಲ. ಇನ್ನು ಕೆಲವು ವರ್ಷಗಳ ಕಾಲ ಕ್ರಿಕೆಟ್ ಆಡುತ್ತ ಆನಂದಿಸುತ್ತೇನೆ ಎಂದು ರಿಟೈರ್‌ಮೆಂಟ್ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ಟಿ20ಗೆ ಕೊಹ್ಲಿ ಕಂಬ್ಯಾಕ್ ?
ಇನ್ನೂ 2028ರಲ್ಲಿ ನಡೆಯುವ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಕೂಡ ಸೇರ್ಪಡೆಯಾಗಲಿದೆ. ಇದರಲ್ಲಿ ಟೀಮ್ ಇಂಡಿಯಾ ಫೈನಲ್‌ಗೆ ಲಗ್ಗೆ ಇಟ್ಟರೆ, ಅಂತಿಮ ಪಂದ್ಯಕ್ಕಾಗಿ ನಿವೃತ್ತಿಯನ್ನು ಹಿಂಪಡೆಯುವುದಾಗಿ ಕೊಹ್ಲಿ ತಿಳಿಸಿದ್ದಾರೆ. ಅಂದರೆ ಭಾರತ ತಂಡವು ಒಲಿಂಪಿಕ್ಸ್‌ ಟಿ20 ಟೂರ್ನಿಯಲ್ಲಿ ಫೈನಲ್‌ಗೆ ತಲುಪಿದರೆ ವಿರಾಟ್ ಕೊಹ್ಲಿ ಕೊನೆಯ ಪಂದ್ಯದಲ್ಲಿ ಮಾತ್ರ ಕಣಕ್ಕಿಳಿಯಬಹುದು.

ಇದನ್ನೂ ಓದಿ: 2ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಮುಂಬೈ; ಸಿಕ್ಕ ಬಹುಮಾನ ಮೊತ್ತ ಎಷ್ಟು?

ಹಣಕ್ಕಾಗಿ ನನ್ನಲ್ಲಿನ ಮೌಲ್ಯ ಬಿಟ್ಟುಕೊಡಲ್ಲ
ಇನ್ನು ಕೊಹ್ಲಿ ನಿವೃತ್ತಿ ನಂತರ ಏನು ಮಾಡುತ್ತಾರೆ ಎಂದು ಅಭಿಮಾನಿಗಳನ್ನು ಕಾಡುತ್ತಿತ್ತು. ಈ ಬಗ್ಗೆ ಮಾತನಾಡಿದ ಕೊಹ್ಲಿ, ಕ್ರಿಕೆಟ್‌ನಿಂದ ನಿವೃತ್ತಿ ಆದ ಮೇಲೆ ಏನು ಮಾಡಬೇಕು ಎಂದು ಯಾವುದೇ ಯೋಜನೆ ರೆಡಿ ಮಾಡಿಕೊಂಡಿಲ್ಲ. ಆ ಸಮಯದಲ್ಲೇ ಅದನ್ನು ನಿರ್ಧಾರ ಮಾಡಲಾಗುತ್ತದೆ. ನಿವೃತ್ತಿ ನಂತರ ಏನು ಮಾಡಬೇಕು ಅಂತನೂ ನನಗೆ ಗೊತ್ತಿಲ್ಲ. ನನಗೆ ಎಷ್ಟು ಬೇಕು ಅಷ್ಟೇ ಹಣ ಸಂಪಾದನೆ ಮಾಡೋದು. ಹೆಚ್ಚಿಗೆ ಬೇಕಿಲ್ಲ, ಆಸೆನೂ ಇಲ್ಲ. ಹಣಕ್ಕಾಗಿ ನನ್ನಲ್ಲಿನ ಮೌಲ್ಯ ಬಿಟ್ಟುಕೊಡಲ್ಲ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ವಿರಾಟ್ ಕೊಹ್ಲಿ ಮುಂದಿನ ಎರಡು ಐಸಿಸಿ ಟೂರ್ನಿಗಳಾದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು ಏಕದಿನ ವಿಶ್ವಕಪ್ ಮೇಲೆ ಕಣ್ಣಿಟ್ಟಿದ್ದಾರೆ. ಈ ಎರಡು ಟೂರ್ನಿಗಳು ನಡೆಯುವುದು 2027ರಲ್ಲಿ. ಅಂದರೆ ಈ ಎರಡು ಟೂರ್ನಿಗಳ ಬಳಿಕ ಕಿಂಗ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಹೇಳುವ ಸಾಧ್ಯತೆಯಿದೆ. ಅಲ್ಲದೆ 2028ರಲ್ಲಿ ನಡೆಯುವ ಒಲಿಂಪಿಕ್ಸ್ ಟಿ20 ಟೂರ್ನಿಯ ಫೈನಲ್ ಪಂದ್ಯಕ್ಕಾಗಿ ಮತ್ತೆ ಕಂಬ್ಯಾಕ್ ಮಾಡುವ ಸಣ್ಣ ಸುಳಿವು ಕೂಡ ನೀಡಿದ್ದಾರೆ.

LATEST NEWS

ನಾಲ್ವರು ಪಾಕ್‌ ಪ್ರಜೆಗಳು ಕರ್ನಾಟಕದಿಂದ ಗಡಿಪಾರು

Published

on

ಬೆಂಗಳೂರು: ಪಹಲ್ಗಾಮ್‌ ದಾಳಿ ಬಳಿಕ ಕರ್ನಾಟಕದಲ್ಲಿದ್ದ ನಾಲ್ವರು ಪಾಕ್‌ ಪ್ರಜೆಗಳನ್ನು ರಾಜ್ಯದಿಂದ ಗಡಿಪಾರು ಮಾಡಲಾಗಿದೆ.

ದೀರ್ಘಾವಧಿ ವೀಸಾ ಹೊಂದಿರುವವರ ಗಡಿಪಾರಿಗೆ ಕೇಂದ್ರ ಸೂಚಿಸದ ಕಾರಣ ದೀರ್ಘಾವಧಿ ವೀಸಾ ಹೊಂದಿರುವ 91 ಮಂದಿ ಪಾಕ್‌ ಪ್ರಜೆಗಳು ಇನ್ನೂ ಕರ್ನಾಟಕದಲ್ಲೇ ಇದ್ದಾರೆ. ಈ ನಾಲ್ಕು ಜನ ಪ್ರಜೆಗಳು ಅಲ್ಪಾವಧಿ ವೀಸಾ ಹೊಂದಿದ್ದರು.

ವಿವಿಧ ಜಿಲ್ಲೆಗಳಲ್ಲಿ 91 ಮಂದಿ ವಾಸವಾಗಿದ್ದಾರೆ. 5 ಪಾಕಿಸ್ತಾನಿ ಪ್ರಜೆಗಳು ವೈದ್ಯಕೀಯ ವೀಸಾದಡಿ ರಾಜ್ಯದಲ್ಲಿದ್ದಾರೆ. ಇವರಿಗೆ ಏ.29ರವರೆಗೆ ಮಾತ್ರ ದೇಶದಲ್ಲಿರಲು ಕೇಂದ್ರವು ವಿನಾಯಿತಿ ನೀಡಿದೆ. ಇದಲ್ಲದೆ ಬೆಂಗಳೂರು, ಕಲಬುರಗಿ, ಮಂಗಳೂರು, ಮೈಸೂರು ಸೇರಿದಂತೆ ರಾಜ್ಯದ ಹಲವು ಕಡೆ ಪಾಕ್‌ ಪ್ರಜೆಗಳು ನೆಲೆಸಿದ್ದಾರೆ.

ಮಾರ್ಚ್​ನಲ್ಲಿ ನಡೆದಿದ್ದ ಅಧಿವೇಶನದಲ್ಲಿ ಗೃಹ ಸಚಿವ ಪರಮೇಶ್ವರ್‌ ಅವರು ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿದ್ದ 25 ಮಂದಿ ಪಾಕಿಸ್ತಾನಿ ಪ್ರಜೆಗಳನ್ನು ಅಧಿಕೃತವಾಗಿ ಬಂಧಿಸಿ ಕಾನೂನು ಕ್ರಮ ಕೈಗೊಂಡಿರುವುದಾಗಿ ತಿಳಿಸಿದ್ದರು.

Continue Reading

DAKSHINA KANNADA

ಯುವಕನ ಬರ್ಬರ ಹತ್ಯೆ ಬಗ್ಗೆ ಅಪಪ್ರಚಾರ ಸಲ್ಲದು : ಅನುಪಮ್ ಅಗರ್ವಾಲ್

Published

on

ಮಂಗಳೂರು : ಅಪರಿಚಿತ ಯುವಕನ ಮೃತದೇಹ ಪತ್ತೆಯಾದ ಘಟನೆಯು ಮಂಗಳೂರು ಹೊರವಲಯದ ಕುಡುಪು ಸಮೀಪ ನಿನ್ನೆ (ಏ.27) ಸಂಜೆ ನಡೆದಿದೆ. ಮೇಲ್ನೋಟಕ್ಕೆ ಇದೊಂದು ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ಯಾವುದೇ ರೀತಿಯಿಂದನೂ ಮೃತ ಯುವಕನ ಗುರುತು ಪತ್ತೆಯಾಗಿಲ್ಲ. ಸುಮಾರು 35 ರಿಂದ 40 ವರ್ಷ ಪ್ರಾಯದ ಹೊರ ರಾಜ್ಯದ ಈ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆಗೈಯಲಾಗಿದೆ ಎಂದು ಹೇಳಲಾಗುತ್ತಿದೆ.

ಕುಡುಪು ಕಟ್ಟೆ ಸಮೀಪದ ಗದ್ದೆಯಲ್ಲಿ ಯುವಕರ ಗುಂಪೊಂದು 6 ತಂಡಗಳ ಕ್ರಿಕೆಟ್ ಮ್ಯಾಚ್ ಆಯೋಜಿಸಿತ್ತು. ಸಂಜೆ ವೇಳೆ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಗದ್ದೆಗೆ ಅಪರಿಚಿತ ಯುವಕನೊಬ್ಬ ತೆರಳಿದ್ದು, ಯಾವುದೋ ಕಾರಣಕ್ಕೆ ಈ ಯುವಕ ಮತ್ತು ಕ್ರಿಕೆಟ್ ಆಟಗಾರರ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಆಕ್ರೋಶಗೊಂಡ ಯುವಕರ ತಂಡವು ಈ ಯುವಕನಿಗೆ ಹಲ್ಲೆಗೈದಿದ್ದು, ಗಂಭೀರ ಗಾಯಗೊಂಡ ಯುವಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತಪಟ್ಟ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಆತನ ಗುರುತು ಪತ್ತೆಗಾಗಿ ಪ್ರಯತ್ನ ಸಾಗಿಸಿದ್ದಾರೆ. ಪ್ರಾಥಮಿಕ ವರದಿಯ ಬಳಿಕ ಸಾವಿಗೆ ಕಾರಣ ಏನು ಎಂದು ತಿಳಿಯಬಹುದಾಗಿದೆ. ಈ ಬಗ್ಗೆ ಹರಡುತ್ತಿರುವ ವದಂತಿಗಳಿಗೆ ಕಿವಿಗೊಡದಿರಿ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮನವಿ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ನಗರ ಉಪ ಆಯುಕ್ತ ಸಿದ್ದಾರ್ಥ್ ಗೋಯಲ್, ನಗರ ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತೆ ಧನ್ಯಾ ನಾಯಕ್, ಮಂಗಳೂರು ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈತ ಕೂಲಿ ಕಾರ್ಮಿಕ ಎಂದು ಹೇಳಲಾಗುತ್ತಿದೆ. ಘಟನೆಯ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Continue Reading

LATEST NEWS

ಒಬ್ಬರಿಗೊಬ್ಬರು ತಾಳಿಕಟ್ಟಿಕೊಂಡ ಯುವತಿಯರು; ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಯ್ತು ಸ್ನೇಹಿತೆಯರ ಮದುವೆ ವೀಡಿಯೋ

Published

on

ಯವತಿಯರಿಬ್ಬರು ಒಬ್ಬರಿಗೊಬ್ಬರು ತಾಳಿ ಕಟ್ಟಿ ಹಾರ ಬದಲಾಯಿಸಿ ಹಸೆಮಣೆ ಏರಿದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದಕ್ಷಿಣ ಭಾರತದ ಕೇರಳ ಅಥವಾ ತಮಿಳುನಾಡಿನಲ್ಲಿ ಈ ಮದುವೆ ನಡೆದಿರುವುದಾಗಿ ವಿಡಿಯೋ ವೀಕ್ಷಿಸಿದ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಇಬ್ಬರು ಯುವತಿಯರು ಮದುವೆ ಮಂಟಪದಲ್ಲಿ ತಾಳಿಯನ್ನು ಪ್ರದರ್ಶಿಸಿ ಒಬ್ಬರಿಗೊಬ್ಬರು ತಾಳಿ ಕಟ್ಟಿಕೊಂಡು ಪ್ರತಿಯಾಗಿ ಆಶೀರ್ವಾದ ಪಡೆದುಕೊಂಡಿದ್ದಾರೆ. ಬಳಿಕ ಹಾರ ಬದಲಾಯಿಸಿಕೊಂಡು ಮದುವೆಯಾಗಿದ್ದಾರೆ.

ಇದು ನಿಜ ಮದುವೆಯಾ ಅಥವಾ ರೀಲ್ಸ್ ಗಾಗಿ ಮಾಡಿರೋದಾ ಎಂದು ಜನರು ಪ್ರಶ್ನೆ ಮಾಡಿದ್ದಾರೆ. ಕೆಲವರು ಈ ವಿಡಿಯೋಗೆ ಕೆಟ್ಟದಾಗಿ ಕಮೆಂಟ್ ಮಾಡಿದ್ದು, ನಮ್ಮ ದೇಶದ ಸಂಸ್ಕೃತಿಯನ್ನು ಹಾಳು ಮಾಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಐವರು ಮಡದಿಯರ ಮುದ್ದಿನ ಗಂಡ.. ಇಂದು 11 ಮಕ್ಕಳ ತಂದೆ..! ಈತನ ಐದು ಮದುವೆಗೆ ಕಾರಣ ಏನು ಗೊತ್ತಾ?

ಸಲಿಂಗಿಗಳ ಮದುವೆಗೆ ಸುಪ್ರೀಂ ಕೋರ್ಟ್ ಮಾನ್ಯತೆ ನೀಡಿಲ್ಲವಾಗಿದ್ದರೂ, ಲೀವ್ ಇನ್ ರಿಲೇಷನ್ ಶಿಪ್ ನಲ್ಲಿ ಇರಲು ಅವಕಾಶ ನೀಡಿದೆ. ಹಾಗೊಂದು ವೇಳೆ ಮದುವೆ ಆದರೆ ಅದನ್ನು ಮಾನ್ಯಗೊಳಿಸುವ ವಿಚಾರವನ್ನು ಶಾಸಕಾಂಗದ ಜವಾಬ್ದಾರಿಗೆ ಬಿಟ್ಟಿದೆ. ಈ ವಿಡಿಯೋ ವೈರಲ್ ಆದ ಬಳಿಕ ಭಾರತದಲ್ಲಿ ಸಲಿಂಗಿಗಳ ಮದುವೆ ವಿಚಾರವಾಗಿ ಸಾಕಷ್ಟು ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page