Connect with us

LATEST NEWS

ಕೋಟ ಶ್ರೀನಿವಾಸ ಪೂಜಾರಿಯನ್ನ ಸಿಎಂ ಮಾಡಿ: ಪ್ರಣವಾನಂದ ಶ್ರೀ ಒತ್ತಾಯ

Published

on

ಕೊಪ್ಪಳ: ಸಿಎಂ ಯಡಿಯೂರಪ್ಪರನ್ನು ಬದಲಾವಣೆ ಮಾಡಿದರೆ ಕೋಟ ಶ್ರೀನಿವಾಸ ಪೂಜಾರಿಯನ್ನ ಸಿಎಂ ಮಾಡಬೇಕು ಅಂತ ಪ್ರಣವಾನಂದ ಶ್ರೀ ಹೇಳಿದ್ದಾರೆ.


ಆರ್ಯ ಈಡಿಗ ಸಮಾಜಕ್ಕೆ ಸಾಕಷ್ಟು ಅನ್ಯಾಯವಾಗಿದೆ. ಸರ್ಕಾರ ಇದುವರೆಗೂ ನಮ್ಮ ಸಮಾಜಕ್ಕೆ ನಿಗಮ ಮಂಡಳಿ ಘೋಷಣೆ ಮಾಡಿಲ್ಲ. ಸಣ್ಣ ಸಣ್ಣ ಸಮಾಜಕ್ಕೆ ನಿಗಮ ಮಂಡಳಿ ಘೋಷಣೆ ಮಾಡಿದ್ದಾರೆ. ಕೂಡಲೇ ಸರ್ಕಾರ ಬ್ರಹ್ಮಶ್ರೀ ನಾರಾಯಣಸ್ವಾಮಿ ನಿಗಮ ಮಂಡಳಿ ಸ್ಥಾಪನೆ ಮಾಡಬೇಕು. ನಮ್ಮ ಸಮಾಜವನ್ನ ಚುನಾವಣೆಯಲ್ಲಿ ಮಾತ್ರ ಉಪಯೋಗಿಸಿಕೊಳುತ್ತಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆಯಾದರೆ ಮುಖ್ಯಮಂತ್ರಿ ಸ್ಥಾನವನ್ನು ಕೋಟ ಶ್ರೀನಿವಾಸ ಪೂಜಾರಿಗೆ ಕೊಡಬೇಕು ಅಂತ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪ್ರಣವಾನಂದ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.
ಇದು ನಮ್ಮ ಸಮಾಜದ ಆಗ್ರಹ ಎಂದು ಹೇಳಿದ ಸ್ವಾಮೀಜಿ, ನಾವು ತುಂಬಾ ಸೈಲೆಂಟ್, ವೈಲೆಂಟ್ ಆದರೆ ನಮ್ಮ ಸಮಾಜವನ್ನು ಹಿಡಿಯೋಕಾಗಲ್ಲ. ನಿಗಮ ಮಂಡಳಿ ಮಾಡದೆ ಹೋದರೆ ಮುಂದಿನ ದಿನದಲ್ಲಿ ಸಿಗಂಧೂರ ಚಲೋ ಮಾಡುತ್ತೀವಿ ಎಂದು ಪ್ರಣವಾನಂದ ಸ್ವಾಮೀಜಿ ಹೇಳಿದ್ದಾರೆ.

LATEST NEWS

ಇನ್ನು ಮುಂದೆ 3 ಸಾವಿರಕ್ಕೆ ವಾರ್ಷಿಕ ಟೋಲ್‌ ಪಾಸ್‌!

Published

on

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಬುಧವಾರ ಹೆದ್ದಾರಿಯಲ್ಲಿ ತೊಂದರೆಯಿಲ್ಲದೆ ಪಯಾಣಕ್ಕೆ ಅನುಕೂಲವಾಗುವಂತೆ ಫಾಸ್‌ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಅನ್ನು ಪರಿಚಯಿಸುತ್ತಿರುವುದಾಗಿ ಘೋಷಿಸಿದೆ.

3 ಸಾವಿರ ರೂಪಾಯಿಗೆ ವಾರ್ಷಿಕ ಟೋಲ್‌ ಪಾಸ್‌ ನೀಡಲು ಸರ್ಕಾರ ಮುಂದಾಗಿದ್ದು, ಆಗಸ್ಟ್ 15 ರಿಂದ ಜಾರಿಗೆ ಬರಲಿದೆ ಎಂದು ಕೇಂದ್ರ ಹೆದ್ದಾರಿ ಖಾತೆಯ ಸಚಿವ ನಿತಿನ್‌ ಗಡ್ಕರಿ ಘೋಷಿಸಿದ್ದಾರೆ.

ಈ ಪಾಸ್ ಅನ್ನು ಕಾರುಗಳು, ಜೀಪ್‌ಗಳು ಮತ್ತು ವ್ಯಾನ್‌ಗಳಂತಹ ವಾಣಿಜ್ಯೇತರ ಖಾಸಗಿ ವಾಹನಗಳಿಗೆ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾಗಿದೆ. ನವೀಕರಣಕ್ಕಾಗಿ ಮೀಸಲಾದ ಲಿಂಕ್ ಅನ್ನು ಶೀಘ್ರದಲ್ಲೇ ರಾಜ್‌ಮಾರ್ಗ್ ಯಾತ್ರಾ ಅಪ್ಲಿಕೇಶನ್‌ನಲ್ಲಿ ಹಾಗೂ NHAI ಮತ್ತು MoRTH ನ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತದೆ.

ಇದನ್ನೂ ಓದಿ: 6 ವರ್ಷದ ಮಗುವಿನ ಸಾವಿಗೆ ಕಾರಣವಾಯಿತೇ ಆನ್‌ಲೈನ್‌ನಲ್ಲಿ ತರಿಸಿದ್ದ ಕೇಕ್!?

ಈ ಪಾಸ್‌ನಿಂದ 60 ಕಿ.ಮೀ ವ್ಯಾಪ್ತಿಯೊಳಗೆ ಇರುವ ಟೋಲ್ ಪ್ಲಾಜಾಗಳಿಗೆ ಸಂಬಂಧಿಸಿದ ದೀರ್ಘಕಾಲದ ಸಮಸ್ಯೆಗಳು ಪರಿಹಾರವಾಗಲಿದೆ. ಟೋಲ್‌ಗಳಲ್ಲಿ ಕಾಯುವ ಸಮಯ ಮತ್ತು ದಟ್ಟಣೆ ಕಡಿಮೆ ಯಾಗಲಿದೆ.

Continue Reading

LATEST NEWS

ಉಡುಪಿ: ಶಾಲಾ ಬಸ್ ಗೆ ಲಾರಿ ಡಿ*ಕ್ಕಿ; ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯ

Published

on

ಉಡುಪಿ: ಖಾಸಗಿ ಶಾಲಾ ಬಸ್ಸಿಗೆ ಹಿಂಬದಿಯಿಂದ ಲಾರಿ ಡಿ*ಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಗಳು ಸಣ್ಣಪುಟ್ಟ ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬುಧವಾರ ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ತಾಲೂಕಿನ ಧರ್ಮವರ ಆಡಿಟೋರಿಯಂ ಬಳಿ ನಡೆದಿದೆ.


ಬ್ರಹ್ಮಾವರ ಜಿ.ಎಂ ವಿದ್ಯಾನಿಕೇತನ ಆಂಗ್ಲಮಾಧ್ಯಮ ಶಾಲಾ ವಿದ್ಯಾರ್ಥಿಗಳಿದ್ದ ಶಾಲಾ ಬಸ್ ಕುಂದಾಪುರದಿಂದ ಬಂದು ಧರ್ಮಾವರ ಆಡಿಟೋರಿಯಂ ಸರ್ಕಲ್ ಬಳಿ ಯೂ ಟರ್ನ್ ಮಾಡುವಾಗ ಹಿಂದಿನಿಂದ ಬಂದ ಲಾರಿ ಡಿ*ಕ್ಕಿಯಾಗಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಇದನ್ನೂ ಓದಿ: ಮಂಗಳೂರು: ಭೀಕರ ಕಾರು ಅಪಘಾತದಲ್ಲಿ NSUI ಮುಖಂಡ ಸಹಿತ ಇಬ್ಬರು ಸಾವು

ಅಪಘಾತದ ಸಂದರ್ಭದಲ್ಲಿ ವ್ಯಾನ್‌ನಲ್ಲಿ ವಿದ್ಯಾರ್ಥಿಗಳಿದ್ದು ಅದೃಷ್ಟವಶಾತ್ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

6 ವರ್ಷದ ಮಗುವಿನ ಸಾವಿಗೆ ಕಾರಣವಾಯಿತೇ ಆನ್‌ಲೈನ್‌ನಲ್ಲಿ ತರಿಸಿದ್ದ ಕೇಕ್!?

Published

on

ಬೆಂಗಳೂರು: ಆನ್‌ಲೈನ್‌ನಲ್ಲಿ ತರಿಸಿದ್ದ ಕೇಕ್ ತಿಂದು 6 ವರ್ಷದ ಮಗು ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ. ಈ ಘಟನೆ ಬೆಂಗಳೂರು ನಗರದ ಕೆಪಿ ಅಗ್ರಹಾರದಲ್ಲಿ ನಡೆದಿದೆ.

ವಿನಯ್ (6) ಸಾವನ್ನಪ್ಪಿದ ಮಗು ಎಂದು ತಿಳಿದುಬಂದಿದೆ. ಕೇಕ್ ತಿಂದು ಮಂಗಳವಾರ ತೀವ್ರವಾಗಿ ಅಸ್ವಸ್ಥಗೊಂಡು ಇಂದು ಬೆಳಗ್ಗೆ ಸಾವನ್ನಪ್ಪಿದೆ.

ಕುಟುಂಬದಲ್ಲಿ ನಾಲ್ವರು ಇದ್ದು, ಒಂದು ಹೆಣ್ಣು ಮಗು ಸಂಬಂಧಿಕರ ಮನೆಗೆ ಹೋಗಿತ್ತು. ಮನೆಯಲ್ಲಿ ಮೂವರೇ ಇದ್ದ ಕಾರಣ ಮಂಗಳವಾರ ಸಂಜೆ ಆನ್‌ಲೈನ್‌ನಲ್ಲಿ ಕೇಕ್ ತರಿಸಿದ್ದರು. ಕೇಕ್ ತಿಂದ ಬಳಿಕ ಮಗು ತೀವ್ರವಾಗಿ ಅಸ್ವಸ್ಥಗೊಂಡು, ಬೆಳಿಗ್ಗೆ ಅಷ್ಟರಲ್ಲಿ ಸಾವನ್ನಪ್ಪಿತ್ತು. ಅದಾದ ಬಳಿಕ ತಂದೆ, ತಾಯಿ ಕೂಡ ಅಸ್ವಸ್ಥಗೊಂಡಿದ್ದರು. ಸದ್ಯ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸದ್ಯ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು, ಬಳಿಕ ಎಫ್‌ಎಸ್‌ಎಲ್‌ಗೆ ರವಾನಿಸಲಿದ್ದಾರೆ. ಕಿಮ್ಸ್ ವೈದ್ಯರು ದೇಹದ ಇತರೆ ಭಾಗಗಳನ್ನು ಪರೀಕ್ಷೆಗೆ ಒಳಪಡಿಸಿ ಸಾವಿಗೆ ನಿಖರವಾದ ಕಾರಣವನ್ನು ಪತ್ತೆ ಹಚ್ಚಲಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page