Connect with us

LATEST NEWS

ಕೊಟ್ಟಿಯೂರು: ಭಾರೀ ಜನಸಂದಣಿ; ಮಗು ಸಾ*ವು, ಹೊಳೆ ನೀರಲ್ಲಿ ಕೊಚ್ಚಿ ಹೋದ ಯುವಕರು

Published

on

ಮಂಗಳೂರು/ಕಣ್ಣೂರು: ಕೇರಳದ ಕಣ್ಣೂರಿನ ಕೊಟ್ಟಿಯೂರ್ ದೇವಾಲಯದ ದರ್ಶನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿದೆ ಪರಿಣಾಮ ಆಂಬ್ಯುಲೆನ್ಸ್ ಒಂದು ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿಕೊಂಡಿದ್ದರಿಂದ ಮೂರು ವರ್ಷದ ಮಗು ಸಾವನ್ನಪ್ಪಿದೆ. ಮತ್ತೊಂದೆಡೆ ದೇವಾಸ್ಥಾನದ ವೈಶಾಖ ಮಹೋತ್ಸವಕ್ಕೆ ಆಗಮಿಸಿದ್ದ ಯುವಕರಿಬ್ಬರು ಹೊಳೆಯಲ್ಲಿ ಕೊಚ್ಚಿ ಹೋಗಿದ್ದಾರೆ.

ಕೊಟ್ಟಿಯೂರ್ ವಾರ್ಷಿಕ ಉತ್ಸವ ನಡೆಯುತ್ತಿದ್ದು, ಭಾರೀ ಸಂಚಾರ ದಟ್ಟಣೆ ಉಂಟಾಗಿದೆ. ಹೀಗಾಗಿ ಕೊಟ್ಟಿಯೂರು ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಬಂದ ಆಂಬ್ಯುಲೆನ್ಸ್‌ ಮಗುವಿನ ಮನೆ ತಲುಪಲು ಸುಮಾರು ಮೂರುವರೆ ಗಂಟೆಗಳನ್ನು ತೆಗೆದುಕೊಂಡಿದೆ. ಈ ಮಾರ್ಗವು ಸಾಮಾನ್ಯವಾಗಿ ಕೇವಲ 10 ನಿಮಿಷಗಳನ್ನು ತೆಗೆದುಕೊಳ್ಳುತ್ತದೆ. ಮನಂದವಾಡಿ ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಿದರೂ, ವಾಹನವು ಮತ್ತೆ ಪಾಲ್ಚುರಂನಲ್ಲಿ ದೀರ್ಘ ಸಂಚಾರ ದಟ್ಟಣೆಯಲ್ಲಿ ಸಿಲುಕಿಕೊಂಡಿತು, ಇದರ ಪರಿಣಾಮವಾಗಿ ಎರಡು ಗಂಟೆಗಳು ಹೆಚ್ಚುವರಿಯಾಗಿ ವಿಳಂಬವಾಗಿದೆ. ಪರಿಣಾಮ ವಯನಾಡ್‌ ಜಿಲ್ಲೆಯ ಮಣಂಥವಾಡಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ತಲುಪುವ ಮೊದಲೇ ಪಾಲ್ಚುರಾಮ್ ಉನ್ನತಿಯ ಮೂರು ವರ್ಷದ ಮಗು ಪ್ರಜುಲ್ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಕೊರೋನಾ ಏರಿಕೆ: ನಿನ್ನೆ ಒಂದೇ ದಿನ 208 ಜನರಿಗೆ ಪಾಸಿಟಿವ್

ಮತ್ತೊಂದೆಡೆ ಇಬ್ಬರು ಯುವಕರು ಹೊಳೆಯಲ್ಲಿ ಕೊಚ್ಚಿಹೋಗಿದ್ದಾರೆ. ಹೊಸದುರ್ಗ ಚಿತ್ತಾರಿ ನಿವಾಸಿ ಅಭಿಜಿತ್ (30) ಮತ್ತು ಕೋಯಿಕೋಡ್ ಅನ್ನೋಳಿ ನಿವಾಸಿ ನಿಶಾದ್ (40) ಎಂದು ಹೇಳಲಾಗುತ್ತಿದೆ. ಪೊಲೀಸರು ಹುಡುಕಾಟ ನಡೆಸಿದ್ದರೂ ಸುಳಿವು ಲಭಿಸಿಲ್ಲ. ನಿಶಾದ್ ಅವರು ಕುಟುಂಬ ಸಮೇತ ಭಾನುವಾರ ಕೊಟ್ಟಿಯೂರಿಗೆ ತೆರಳಿದ್ದರು. ಹೊಳೆಗಿಳಿದು ಸ್ನಾನಮಾಡುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

 

LATEST NEWS

ಯೆಮನ್‌ನಲ್ಲಿ ಮರಣದಂಡನೆಗೆ ಗುರಿಯಾಗಿರುವ ಕೇರಳದ ನರ್ಸ್ ನಿಮಿಷಾ ಪ್ರಿಯಾ ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್

Published

on

ಮಂಗಳೂರು/ನವದೆಹಲಿ: ಯೆಮನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಕೇರಳದ 37 ವರ್ಷದ ನರ್ಸ್ ನಿಮಿಷಾ ಪ್ರಿಯಾಗೆ ಸಹಾಯ ಮಾಡುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.


ನಿಮಿಷಾ ಪ್ರಿಯಾ ಮರಣದಂಡನೆಗೂ ಕೇವಲ 2 ದಿನಗಳ ಮೊದಲು ಸುಪ್ರೀಂ ಕೋರ್ಟ್ ಈ ಪ್ರಕರಣವನ್ನು ವಿಚಾರಣೆ ನಡೆಸಲಿದೆ. ಜುಲೈ 16ರಂದು ಯೆಮೆನ್​ನಲ್ಲಿ ನಿಮಿಷಾ ಗಲ್ಲಿಗೇರಲಿದ್ದಾರೆ. ಹೀಗಾಗಿ, ರಾಜತಾಂತ್ರಿಕ ಮಾರ್ಗಗಳನ್ನು ಆದಷ್ಟು ಬೇಗ ಪರಿಶೀಲಿಸಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಪೀಠವು ಜುಲೈ 14ರಂದು ಈ ಪ್ರಕರಣದ ವಿಚಾರಣೆ ನಡೆಸಲಿದೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಜೋಯ್ಮಲ್ಯ ಬಾಗ್ಚಿ ಅವರ ಪೀಠವು ಈ ಪ್ರಕರಣವನ್ನು ಜುಲೈ 14ರಂದು ವಿಚಾರಣೆಗೆ ನಿಗದಿಪಡಿಸಿದೆ. ನಿಮಿಷಾ ಅವರಿಗೆ 2017ರಲ್ಲಿ ತಮ್ಮ ಬ್ಯುಸಿನೆಸ್ ಪಾರ್ಟನರ್ ಅನ್ನು ಕೊಂದ ಆರೋಪದಲ್ಲಿ ಗಲ್ಲು ಶಿಕ್ಷೆ ವಿಧಿಸಲಾಗಿತ್ತು. ಕೇರಳದ ಪಾಲಕ್ಕಾಡ್ ಜಿಲ್ಲೆಯ ನರ್ಸ್ ಆಗಿರುವ ನಿಮಿಷಾ ಪ್ರಿಯಾ (38) ಅವರು 2017ರಲ್ಲಿ ಯೆಮೆನ್​ಗೆ ಉದ್ಯೋಗಕ್ಕೆ ತೆರಳಿದ್ದರು. ಅವರಿಗೆ 2020ರಲ್ಲಿ ಮರಣದಂಡನೆ ವಿಧಿಸಲಾಯಿತು. ಅವರ ಅಂತಿಮ ಮೇಲ್ಮನವಿಯನ್ನು 2023ರಲ್ಲಿ ತಿರಸ್ಕರಿಸಲಾಗಿತ್ತು.

ಇದನ್ನೂ ಓದಿ: ಕೇರಳದ ನರ್ಸ್ ಗೆ ಯೆಮೆನ್ ನಲ್ಲಿ ಮರಣದಂಡನೆ; ಏನಿದು ಪ್ರಕರಣ ?

ನಿಮಿಷಾ ಪ್ರಿಯಾ ಪ್ರಸ್ತುತ ಯೆಮೆನ್‌ನ ರಾಜಧಾನಿ ಸನಾದಲ್ಲಿರುವ ಜೈಲಿನಲ್ಲಿದ್ದಾರೆ. ರಾಜತಾಂತ್ರಿಕ ಮಾರ್ಗಗಳ ಮೂಲಕ ನಿಮಿಷಾ ಪ್ರಿಯಾ ಅವರಿಗೆ ಸಹಾಯ ಮಾಡಲು ಕಾನೂನು ಬೆಂಬಲ ನೀಡುವ “ಸೇವ್ ನಿಮಿಷಾ ಪ್ರಿಯಾ – ಇಂಟರ್ನ್ಯಾಷನಲ್ ಆಕ್ಷನ್ ಕೌನ್ಸಿಲ್” ಎಂಬ ಸಂಸ್ಥೆ ಸುಪ್ರೀಂ ಕೋರ್ಟ್​ನಲ್ಲಿ ಅರ್ಜಿಯನ್ನು ಸಲ್ಲಿಸಿತ್ತು. ನಿಮಿಷಾ ಪ್ರಿಯಾಳ ಮರಣದಂಡನೆಗೆ ತಾತ್ಕಾಲಿಕ ದಿನಾಂಕವನ್ನು ಯೆಮೆನ್ ಆಡಳಿತವು ಜುಲೈ 16 ರಂದು ನಿಗದಿಪಡಿಸಿದೆ ಎಂದು ಹೇಳುವ ಮಾಧ್ಯಮ ವರದಿಯನ್ನು ಅರ್ಜಿಯಲ್ಲಿ ಉಲ್ಲೇಖಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ತುರ್ತಾಗಿ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

Continue Reading

LATEST NEWS

IND vs ENG: ಮೂರನೇ ಟೆಸ್ಟ್ ಪಂದ್ಯಕ್ಕೆ ಪ್ಲೆಯಿಂಗ್ 11 ಪ್ರಕಟ

Published

on

ಮಂಗಳೂರು/ಲಂಡನ್: ಭಾರತ ಮತ್ತು ಇಂಗ್ಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಲಂಡನ್​ನ ಲಾರ್ಡ್ಸ್​ ಮೈದಾನದಲ್ಲಿ ಜರುಗಲಿರುವ ಈ ಪಂದ್ಯಕ್ಕಾಗಿ ಎರಡು ತಂಡಗಳು ಈಗಾಗಲೇ ಪ್ಲೇಯಿಂಗ್​ ಇಲೆವೆನ್ ಘೋಷಿಸಿದೆ.


ಮೂರನೇ ಟೆಸ್ಟ್ ಪಂದ್ಯದಲ್ಲಿ ಪ್ರಮುಖ ಬದಲಾವಣೆಯಾಗಿದೆ. ಎರಡನೇ ಪಂದ್ಯದಲ್ಲಿ ವಿಶ್ರಾಂತಿಯಲ್ಲಿದ್ದ ವೇಗಿ ಬುಮ್ರಾ ತಂಡಕ್ಕೆ ವಾಪಸ್ಸಾಗಿದ್ದು, ಪ್ರಸಿದ್ದ್ ಕೃಷ್ಣ ಅವರು ಜಾಗ ಬಿಟ್ಟಿದ್ದಾರೆ. ಕನ್ನಡಿಗ ಕರುಣ್ ನಾಯರ್‌ಗೆ ಈ ಬಾರಿಯೂ ಅವಕಾಶ ದೊರೆತಿದ್ದು, ಸವಾಲಿನ ಪಿಚ್‌ನಲ್ಲಿ ರನ್‌ ಮಳೆ ಸುರಿಸಬೇಕಾದ ಒತ್ತಡದಲ್ಲಿದ್ದಾರೆ. ಇಂಗ್ಲೆಂಡ್ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಜೋಶ್ ಟಂಗ್ ಬದಲಿಗೆ ವೇಗಿ ಜೋಫ್ರಾ ಆರ್ಚರ್ ತಂಡಕ್ಕೆ ಆಗಮಿಸಿದ್ದಾರೆ.

ಭಾರತ ಮತ್ತು ಇಂಗ್ಲೆಂಡ್ ತಂಡಗಳು
ಇಂಗ್ಲೆಂಡ್ : ಜಾಕ್ ಕ್ರಾಲಿ, ಬೆನ್ ಡಕೆಟ್, ಓಲೀ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮಿ ಸ್ಮಿತ್, ಕ್ರಿಸ್ ವೋಕ್ಸ್, ಡನ್ ಕಾರ್, ಜೋಫ್ರಾ ಆರ್ಚರ್, ಶೋಯಿಬ್ ಬಶೀರ್.

ಭಾರತ :ಯಶಸ್ವಿ ಜೈಸ್ವಾಲ್, ಕೆ.ಎಲ್. ರಾಹುಲ್, ಕರುಣ್ ನಾಯರ್, ಶುಭಮನ್ ಗಿಲ್ (ನಾಯಕ), ರಿಷಬ್ ಪಂತ್, ರವೀಂದ್ರ ಜಡೇಜ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಜಸ್‌ಪ್ರೀತ್ ಬುಮ್ರಾ, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್.

Continue Reading

DAKSHINA KANNADA

‘ಎಲ್ಲಾ ಆದ ಮೇಲೆ ಶಾಂತಿಸಭೆ’: ಸಂಸದ ಕೋಟ

Published

on

ಉಡುಪಿ: ಚರ್ಚೆ, ವಾದ-ವಿವಾದ, ಪ್ರಕರಣಗಳು ಆದ ಬಳಿಕ ಶಾಂತಿ ಸಭೆ ಇಷ್ಟು ದಿನಗಳ ನಂತರವಾ.. ಎಂಬ ಚರ್ಚೆ ಸಮಾಜದಲ್ಲಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಉಡುಪಿಯಲ್ಲಿ ನಿನ್ನೆ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಇವತ್ತು ಎಲ್ಲಾ ಶಾಂತಿ ಸಭೆಗಳು, ಪೊಲೀಸ್ ಕ್ರಮಗಳು ಹಾಗೂ ಪೊಲೀಸ್ ಫೋರ್ಸ್‌ಗಳು ಎಲ್ಲವೂ ಕೂಡ ಈ ಸಮಾಜದ ಮುಖ್ಯ ವಾಹಿನಿಯಿಂದ ಬದುಕುತ್ತಿರುವಂತಹ ಹಿಂದೂಗಳ ಮೇಲೆ ಗಧಾ-ಪ್ರಹಾರ ಮಾಡಲು ರೂಪಿಸಿದ್ದಾರೆಯೇ ಎಂಬ ಭಾವನೆ ಮೂಡುತ್ತಿದೆ. ಇಂದು ಯಾವ ರೀತಿಯ ವಾತಾವರಣ ಇದೆ ಎಂದರೆ ಯಾರೇ ಒಬ್ಬ ಕಾರ್ಯಕರ್ತ ಅದು ಬಿಜೆಪಿ ಕಾರ್ಯಕರ್ತನೋ, ಹಿಂದೂತ್ವದ ಬಗ್ಗೆ ಮಾತನಾಡುವ ಸಾಮಾನ್ಯ ಕಾರ್ಯಕರ್ತ ಆಗಿರಬಹುದು, ಅವನ ಬದುಕಿನ ಹಕ್ಕನ್ನೇ ಮೊಟಕುಗೊಳಿಸುವಂತಹ ಪ್ರಯತ್ನಗಳು, ರೌಡಿಶೀಟರ್ ಹಾಕುವಂತಹ ಕೆಲಸಗಳು ನಡೆಯುತ್ತಿವೆ. ಪರಮೇಶ್ವರ್ ಅವರು ತಿಳುವಳಿಕೆ ಇರುವಂತಹ ಮಂತ್ರಿ. ಒಂದು ಸಮಾಜವನ್ನು ಒಡೆಯುವ, ಸಮಾಜದ ಮೇಲೆ ಗಧಾಪ್ರಹಾರ ಮಾಡುವ, ಸಮಾಜದ ಮೇಲೆ ದೌರ್ಜನ್ಯ ಮಾಡುವ ಕೆಲಸಗಳನ್ನು ಮಾಡಬಾರದು ಎಂದು ಹೇಳಿದ್ದಾರೆ.

WATCH VIDEO

Continue Reading
Advertisement

Trending

Copyright © 2025 Namma Kudla News

You cannot copy content of this page