Connect with us

DAKSHINA KANNADA

ಎಂಆರ್ ಪಿಎಲ್ ನಲ್ಲಿ ಸ್ಥಳೀಯರ ಕಡೆಗಣನೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆಕ್ರೋಶ..!

Published

on

ಮಂಗಳೂರು: ರಾಜ್ಯದ ಯುವಜನತೆ ನಿರುದ್ಯೋಗದ ಸಂಕಷ್ಟದಲ್ಲಿರುವಾಗ ಮಂಗಳೂರಿನ ಎಂಆರ್ ಪಿ ಎಲ್ ಸಂಸ್ಥೆಯ ನೇಮಕಾತಿಯಲ್ಲಿ ಸ್ಥಳೀಯರಿಗೆ ಅವಕಾಶ ನೀಡದೆ ತಾರತಮ್ಯ ನೀತಿ ಎಸಗಿದೆ. ಪರರಾಜ್ಯದವರಿಗೆ ಮಣೆ ಹಾಕಿದ ಕ್ರಮವನ್ನು ತಕ್ಷಣವೇ ಕೇಂದ್ರ ಸಚಿವರಾದ ಡಿ ವಿ ಸದಾನಂದ ಗೌಡ ಮತ್ತು ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ತಡೆಹಿಡಿದು ಕನ್ನಡಿಗರಿಗೆ ನ್ಯಾಯ ಒದಗಿಸಬೇಕೆಂದು  ಕೆಪಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.ಕುಟುಂಬ ಸಮೇತರಾಗಿ ನಿನ್ನೆ  ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.         ಸರೋಜಿನಿ ಮಹಿಷಿ ವರದಿಯಂತೆ ಸ್ಥಳೀಯರಿಗೆ ಆದ್ಯತೆ ನೀಡಬೇಕಾದ ನಿಯಮವನ್ನು ಮಂಗಳೂರು ರಿಫೈನರಿ & ಪೆಟ್ರೋಕೆಮಿಕಲ್ಸ್ ಸಂಸ್ಥೆಯ ನೇಮಕಾತಿಯಲ್ಲಿ ನಿಯಮಗಳನ್ನು ಗಾಳಿಗೆ ತೂರಲಾಗಿದೆ.

400ರಲ್ಲಿ ಕೇವಲ 10 ಮಂದಿ ಕನ್ನಡಿಗರಿಗೆ ಮಾತ್ರ ನೇಮಕಾತಿ ಮಾಡಿಕೊಳ್ಳಲಾಗಿದೆ,ಇದು ಖಂಡನೀಯ. ಎಂದ ಅವರು  ಬ್ಲ್ಯಾಕ್ ಫಂಗಸ್ ಬಗ್ಗೆ ಮಂತ್ರಿಗಳಲ್ಲೇ ಗೊಂದಲ ಇದೆ.ಒಬ್ಬರು ಇದೆ ಅಂತಾರೆ, ಮತ್ತೊಬ್ಬರು ಇಲ್ಲ ಎಂದು ಹೇಳುತ್ತಾರೆ.

ಫಂಗಸ್‍ಗೆ ಔಷಧಗಳು ಇಲ್ಲ ಎಂದು ಮಾಧ್ಯಮಗಳು ವರದಿ ಮಾಡಿದೆ. ಆದರೆ ಕೇಂದ್ರ ಸರ್ಕಾರ ಗುಜರಾತಿಗೆ ಔಷಧ ಕಳಿಸಿಕೊಟ್ಟಿದೆ. ಹಾಗಾಗಿ ನಮ್ಮ ರಾಜ್ಯ ಸರ್ಕಾರ ಗುಜರಾತಿನಿಂದಾದರೂ ಔಷಧ ತರಬೇಕಾಗಿದೆ. ಈಗಾಗಲೇ ಭಯಗೊಂಡಿರುವ ಜನರನ್ನು ರಾಜ್ಯ ಸರ್ಕಾರ ಗೊಂದಲಕ್ಕೀಡು ಮಾಡುವ ಕೆಲಸ ಮಾಡುತ್ತಿದೆ ಎಂದರು.

DAKSHINA KANNADA

ಕಲ್ಲರ್ಪೆಯಲ್ಲಿ ಮತ್ತೊಂದು ಅಪಘಾತ; ಕಾರು ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ

Published

on

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಕಾರು ಬೈಕ್ ಮುಖಾಮುಖಿ ಡಿಕ್ಕಿಯೂ ಆ ಭಾಗದಲ್ಲಿನ ರಸ್ತೆ ಸುರಕ್ಷ ತಾ ಕ್ರಮಗಳ ವೈಫಲ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ಈ ದುರ್ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರನ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿಯೂ ಇದೇ ಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾಗಿತ್ತು. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ: ಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುವವರೇ ಎಚ್ಚರ; ಗದ್ದೆಗೆ ಬಿತ್ತು ಟಿಟಿ

ಇದೀಗ ಮತ್ತೊಂದು ಘಟನೆ ನಡೆದಿದ್ದು, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಲ್ಲರ್ಪೆ ವಲಯವು ಅಪಘಾತಗಳ ಕೇಂದ್ರಬಿಂದುವಾಗಿ ಪರಿವರ್ತನೆಯಾಗುತ್ತಿರುವುದು ಸ್ಥಳಿಯರಲ್ಲಿ ಆತಂಕ ಮೂಡಿಸಿದೆ.

Continue Reading

DAKSHINA KANNADA

ಆಕಾಂಕ್ಷ ನಿಗೂಢ ಸಾವು ಪ್ರಕರಣ; ಸಮಗ್ರ ತನಿಖೆ ನಡೆಸುವಂತೆ ಶಾಸಕ ಹರೀಶ್‌ ಪೂಂಜಾ ಒತ್ತಾಯ

Published

on

ಬೆಳ್ತಂಗಡಿ: ಪಂಜಾಬ್ ನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಬೆಳ್ತಂಗಡಿಯ ವಿದ್ಯಾಥಿಧನಿ ಆಕಾಂಕ್ಷ ಮೃತದೇಹ ಇಂದು ಬೆಳಗ್ಗೆ ಆಕೆಯ ಬೊಳಿಯಾರ್ ಮನೆಗೆ ತಲುಪಿದೆ. ಸ್ಥಳಕ್ಕೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ.

 

ಈ ವೇಳೆ ಮಾತನಾಡಿದ ಶಾಸಕ ಹರೀಶ್ ಪೂಂಜಾ, ಈ ಪ್ರಕರಣವನ್ನು ಸಮಗ್ರವಾಗಿ ತನಿಖೆ ನಡೆಸ ಬೇಕು. ಆಕಾಂಕ್ಷಳ ಸಾವಿಗೆ ನ್ಯಾಯ ಸಿಗ ಬೇಕು. ಕರ್ನಾಟಕದ ಗೃಹ ಸಚಿವರಿಗೆ ಆಗ್ರಹ ಮಾಡ್ತೇನೆ ಎಂದರು. ಪ್ರಕರಣದ ಸಮಗ್ರ ತನಿಖೆ ನಡೆಸಿ ಇದರ ಹಿಂದೆ ಯಾರೆಲ್ಲಾ ಇದ್ದಾರೆ ಎನ್ನುವುದನ್ನು ಪತ್ತೆ ಮಾಡುವಂತೆ ಕರ್ನಾಟಕ ಸರಕಾರವು ಪಂಜಾಬ್ ಸರಕಾರವನ್ನು ಆಗ್ರಹಿಸ ಬೇಕೆಂದು ಒತ್ತಾಯಿಸಿದರು.

 

Continue Reading

DAKSHINA KANNADA

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ರಿಕ್ಷಾ

Published

on

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾದ ಘಟನೆ ಪುತ್ತೂರಿನಲ್ಲಿ ಸಂಭವಿಸಿದೆ. ಅದೃಷ್ಟವಶಾತ್ ರಿಕ್ಷಾ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ನಿನ್ನೆ ರಾತ್ರಿ ರಾತ್ರಿ 10.30ರ ವೇಳೆಗೆ ಪರ್ಪುಂಜ ಭಾಗದಿಂದ ಆಗಮಿಸಿದ ರಿಕ್ಷಾ ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿತ್ತು. ಪಲ್ಟಿಯಾದ ರಿಕ್ಷಾ, ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಉರುಳಿ ಬಿದ್ದಿದೆ.

ಇದನ್ನೂ ಓದಿ: ಕಂಡೆಕ್ಟರ್ ಜೊತೆಗೂಡಿ ಹೈವೇಯಲ್ಲಿ ನಿಂತ ಸಾರಿಗೆ ಬಸ್ಸನ್ನು ತಳ್ಳಿದ ಮಹಿಳೆಯರು

ವಿದ್ಯುತ್ ತಂತಿಗಳು ಪರಸ್ಪರ ಸ್ಪರ್ಶಿಸಿ ಬೆಂಕಿಯ ಕಿಡಿ ಕಾಣಿಸಿಕೊಂಡಿದೆ. ಈ ಸಂದರ್ಭದಲ್ಲಿ ವಿದ್ಯುತ್ ಕಂಬ ಸ್ವಲ್ಪವಾಲಿದೆ. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page