Connect with us

BELTHANGADY

ಬೆಳ್ತಂಗಡಿ ಸಮೀಪ ಅಲ್ಲದ ಕಾಡು ಎಂಬಲ್ಲಿ 4 ಎಕ್ರೆ ಅರಣ್ಯ ಪ್ರದೇಶದಲ್ಲಿ ಭೂಕುಸಿತ

Published

on

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಕೊಲ್ಲಿ ಸಮೀಪದ ನಡ್ತಿಕಲ್ಲು ಅಲ್ಲದ ಕಾಡು ಎಂಬಲ್ಲಿ ಕಾಡಿನ ನಡುವೆ ಭೂ ಕುಸಿತ ಉಂಟಾಗಿದೆ. ಸುಮಾರು 4 ಎಕ್ರೆ ಪ್ರದೇಶದ ಮಣ್ಣು ಕುಸಿತಗೊಂಡಿದೆ.


ಈ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭೂ ಕುಸಿತವುಂಟಾಗಿದೆ. ಈ ಪ್ರದೇಶವು ಮೀಸಲು ಅರಣ್ಯ ಪ್ರದೇಶವಾಗಿದ್ದು, ಜನ ವಸತಿ ಪ್ರದೇಶದಿಂದ ಸುಮಾರು 3 ಕಿ.ಮೀ ಗಿಂತಲೂ ಹೆಚ್ಚು ದೂರದಲ್ಲಿದೆ. ಈ ಘಟನೆ ಬಗ್ಗೆ ತಾಲೂಕು ಆಡಳಿತಕ್ಕೆ ಸ್ಥಳೀಯರು ಮಾಹಿತಿ ನೀಡಿದ್ದಾರೆ.


ಕೇವಲ ಒಂದು ವಾರದ ಮಳೆಗೆ ಜಿಲ್ಲೆಯ ಹಲವೆಡೆ ಭೂಕುಸಿತದ ವರದಿಯಾಗುತ್ತಿದೆ. ಕಷ್ಟಪಟ್ಟು ದುಡಿದು ಕಟ್ಟಿದ ಮನೆಗಳು ನಿರ್ನಾಮವಾಗುತ್ತಿವೆ. ಆದರೆ ಸರಕಾರ ಮಾತ್ರ ಈ ಸರಣಿ ಭೂಕುಸಿತಕ್ಕೆ ಕಾರಣ ಹುಡುಕುವಲ್ಲಿ ಯಾವುದೇ ಆಸಕ್ತಿ ತೊರಿಸುತ್ತಿಲ್ಲ. ನೇತ್ರಾವತಿ ನದಿ ತಿರುವು ಯೋಜನೆಯ ಫಲವೇ ಈ ಭೂಕುಸಿತಗಳಿಗೆ ಕಾರಣ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರ.

BELTHANGADY

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಮಾಯವಾದ ಭೂತ

Published

on

ಬೆಳ್ತಂಗಡಿ: ಸಾಕಷ್ಟು ಸುದ್ದಿ ಮಾಡಿರುವ ಬೆಳ್ತಂಗಡಿ ತಾಲೂಕಿನ ಮಾಲಾಡಿ ಮನೆಯಲ್ಲಿನ ಭೂತದ ಕಾಟ ನಿಂತು ಹೋಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಉಮೇಶ್ ಶೆಟ್ಟಿ ಎಂಬವರ ಮನೆಯಲ್ಲಿ ಕಳೆದ ಮೂರು ತಿಂಗಳಿನಿಂದ ಮನೆಯಲ್ಲಿ ಭೂತದ ಕಾಟದಿಂದ ಮನೆಯವರು ನಿದ್ದೆ ಕಳೆದುಕೊಂಡಿದ್ದರು. ಮನೆಯಲ್ಲಿ ಬಟ್ಟೆಗಳಿಗೆ ಬೆಂಕಿ ಬೀಳುವುದು, ಪಾತ್ರಗಳ ಉರುಳಿ ಬೀಳುವುದು ಹಾಗೂ ಮನೆಯಲ್ಲಿ ಯಾರೋ ಅಡ್ಡಾಡಿದಂತ ಅನುಭವದಿಂದ ಮನೆಯವರು ಭಯಭೀತರಾಗಿದ್ದರು.

ಸುದ್ದಿ ತಿಳಿದು ಈ ಮನೆಗೆ ಅನೇಕ ಮಂದಿ ಭೇಟಿ ನೀಡುತ್ತಿದ್ದ ಕಾರಣದಿಂದ ಎರಡು ದಿನಗಳ ಹಿಂದೆ ಇಡೀ ಕುಟುಂಬ ಮನೆ ಬಿಟ್ಟು ಸಂಬಂಧಿಕರ ಮನೆಗೆ ತೆರಳಿದ್ದರು. ಫೆ. 8 ರಂದು ಶನಿವಾರ ಮತ್ತೆ ಮನೆಗೆ ಆಗಮಿಸಿದ್ದು, ಮನೆಯಲ್ಲಿ ಪರಿಹಾರ ಕಾರ್ಯಗಳನ್ನು ಮಾಡಿದ್ದಾಗಿ ಮಾಹಿತಿ ಇದೆ. ಇದು ಕುಟುಂಬ ದೈವದ ತೊಂದರೆಯಿಂದ ಆಗಿದ್ದ ಸಮಸ್ಯೆ ಎಂಬ ಮಾಹಿತಿ ಲಭ್ಯವಾಗಿದ್ದು, ಮನೆಯಲ್ಲಿ ಕಳೆದು ಹೋಗಿದ್ದ ಚಿನ್ನ ಕೂಡಾ ಸಿಕ್ಕಿದೆ.

ಮನೆಯಲ್ಲಿನ ದೇವರ ಫೋಟೋದ ಹಿಂಭಾಗದಲ್ಲಿ ಚಿನ್ನಾಭರಣ ಪತ್ತೆಯಾಗಿದ್ದು, ಈ ಹಿಂದೆ ಭೂತವೇ ಚಿನ್ನವನ್ನು ಅಡಗಿಸಿಟ್ಟಿದೆ ಎನ್ನಲಾಗಿತ್ತು. ಭಾನುವಾರ ಈ ಮನೆಗೆ ಪವಾಡ ರಹಸ್ಯ ತಜ್ಞ ಹುಲಿಕಲ್ ನಟರಾಜ್ ಅವರು ಬರುವುದಾಗಿ ಹೇಳಿದ್ದು ಅವರಿಗೆ ಎಲ್ಲಾ ಸಮಸ್ಯೆ ಪರಿಹಾರ ಆಗಿದೆ ಎಂಬ ಮಾಹಿತಿಯನ್ನು ಉಮೇಶ್ ಶೆಟ್ಟಿ ಕುಟುಂಬದವರು ನೀಡಿದ್ದಾರೆ.

Continue Reading

BELTHANGADY

ಭೂತದ ಮನೆಯಲ್ಲಿ ನೀರವ ಮೌನ…! ಮನೆಬಿಟ್ಟು ಹೋದ ಕುಟುಂಬ

Published

on

ಬೆಳ್ತಂಗಡಿ: ಬಹಳಷ್ಟು ಚರ್ಚೆಗೆ ಗ್ರಾಸವಾಗಿದ್ದ ಬೆಳ್ತಂಗಡಿಯ ಮಾಲಾಡಿ ಗ್ರಾಮದ ಭೂತದ ಮನೆಯಲ್ಲಿ ಸದ್ಯ ನೀರವ ಮೌನ ಆವರಿಸಿದೆ. ಕಳೆದ ಮೂರು ತಿಂಗಳಿನಿಂದ ಭೂತದ ಉಪಟಳದಿಂದ ಬಳಲಿ ಬೆಂಡಾಗಿರುವ ಕುಟುಂಬ ಮನೆಯನ್ನೇ ಖಾಲಿ ಮಾಡಿ ಹೋಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅಸಲಿಗೆ ಕಳೆದೆರಡು ದಿನಗಳಿಂದ ಈ ಮನೆಯಲ್ಲಿನ ಭೂತದ ಉಪಟಳ ಸಾರ್ವಜನಿಕವಾಗಿ ಚರ್ಚೆಗೆ ಗ್ರಾಸವಾಗಿತ್ತು. ಹೀಗಾಗಿ ಈ ಮನೆಗೆ ಪ್ರತಿ ನಿತ್ಯ ರಾತ್ರಿಯಾಗುತ್ತಿದ್ದಂತೆ ನೂರಾರು ಜನ ಬಂದು ಭೂತದ ಹುಡುಕಾಟ ನಡೆಸಿದ್ದರು. ಭೂತದ ಇರುವಿಕೆಯ ವಿಚಾರವಾಗಿ ಪರ ವಿರೋಧದ ಚರ್ಚೆಗಳು ಆರಂಭವಾಗಿ ಹಲವರು ಮನೆಯವರ ಕಥೆಯೇ ಸುಳ್ಳು ಎಂದು ಅನುಮಾನ ವ್ಯಕ್ತಪಡಿಸಿದ್ದರು.

ನಮ್ಮ ಕುಡ್ಲ ವಾಹಿನಿ ಈ ಬಗ್ಗೆ ತಜ್ಞರ ಅಭಿಪ್ರಾಯ ಸಂಗ್ರಹಿಸಿದಾಗಲೂ ಇದು ಭೂತದ ಕಾಟ ಇರಲಾರದು ಎಂಬ ಅಭಿಪ್ರಾಯ ವ್ಯಕ್ತವಾಗಿತ್ತು. ಖ್ಯಾತ ಮನೋರೋಗ ತಜ್ಞರು ಹಾಗೂ ಪವಾಡ ರಹಸ್ಯ ಬಯಲು ತಜ್ಞ ಡಾ. ಹುಲಿಕಲ್ ನಟರಾಜ್ ಅವರೂ ಕೂಡಾ ಮನೆಯವರ ಮಾನಸಿಕ ಸ್ಥಿತಿಯ ಬಗ್ಗೆ ತಿಳಿದುಕೊಳ್ಳುವ ಅಗತ್ಯ ಇದೆ ಎಂದು ಹೇಳಿದ್ದರು.

ಇದೀಗ ಉಮೇಶ್ ಶೆಟ್ಟಿ ಅವರ ಇಡೀ ಕುಟುಂಬ ಭೂತದ ಭಯದಿಂದ ಮನೆಯನ್ನು ಬಿಟ್ಟು ಹೋಗಿದ್ದು, ಸಂಬಂಧಿಕರ ಮನೆ ಸೇರಿಕೊಂಡಿದ್ದಾರೆ ಎನ್ನಲಾಗಿದೆ.

Continue Reading

BELTHANGADY

ಬೆಳ್ತಂಗಡಿ : ಏಕಕಾಲದಲ್ಲಿ ಒಂಬತ್ತು ಗುಳಿಗ ದೈವಗಳ ನರ್ತನ ಕಂಡು ಕಣ್ತುಂಬಿಸಿಕೊಂಡ ಭಕ್ತರು

Published

on

ಬೆಳ್ತಂಗಡಿ : ದೈವಾರಾಧನೆಯನ್ನು ಕರಾವಳಿ ಜನತೆ ಅತ್ಯಂತ ಶ್ರದ್ಧಾ ಭಕ್ತಿಯಿಂದ ಮಾಡುವ ಕಾರಣಕ್ಕಾಗಿಯೇ ಇಲ್ಲಿ ದೈವಾರಾಧನೆಗೆ ವಿಶಿಷ್ಟ ಸ್ಥಾನಮಾನವಿದೆ. ಹಾಗಾಗಿ ಇಂದಿಗೂ ಸುಮಾರು 500 ಕ್ಕೂ ಹೆಚ್ಚು ದೈವಗಳನ್ನು ಆರಾಧಿಸಲಾಗುತ್ತದೆ. ಇದೀಗ ಬೆಳ್ತಂಗಡಿ ತಾಲೂಕಿನ ಬರ್ಕಜೆ ಗ್ರಾಮದಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವಗುಳಿಗ ದೈವಗಳಿಗೆ ಏಕಕಾಲದಲ್ಲಿ ನಡೆದ ನರ್ತನ ಸೇವೆ ಭಕ್ತರಿಗೆ ಒಂದು ವಿಶಿಷ್ಟ ಅನುಭವವನ್ನು ನೀಡಿದ್ದು, ಈ ಅಪರೂಪದ ಸೇವೆ ಇಡೀ ಕರಾವಳಿಯಲ್ಲಿಯೇ ಒಂದೇ ಸ್ಥಳದಲ್ಲಿ ನಡೆಯುತ್ತಿರುವುದು ವಿಶೇಷವಾಗಿದೆ.

“ಐದು ವರ್ಷಗಳ ಹಿಂದೆ ನಿಟ್ಟಡೆ ಗ್ರಾಮದ ಬರ್ಕಜೆ ಎಂಬ ಊರಿನಲ್ಲಿ ಪುನರ್ ನಿರ್ಮಾಣವಾದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವ ಗುಳಿಗ ದೈವಗಳು ಕ್ಷೇತ್ರಪಾಲಕರಾಗಿ ನೆಲೆಸಿದ್ದಾರೆ ಅನ್ನೋ ವಿಚಾರ ಗೊತ್ತಾಗಿತ್ತು. ಹೀಗಾಗಿ ಆ ಒಂಬತ್ತು ದೈವಗಳಿಗೂ ಏಕಕಾಲದಲ್ಲಿ ನರ್ತನ ಸೇವೆ ಮಾಡಲಾಗುತ್ತಿದೆ” ಎಂಬುವುದು ಆಡಳಿತ ಮುಖ್ಯಸ್ಥರ ಮಾತು. ಸಾಮಾನ್ಯವಾಗಿ ಏಕಕಾಲದಲ್ಲಿ ಒಂದೆರಡು ಗುಳಿಗ ದೈವಗಳಿಗೆ ಮಾತ್ರ ನರ್ತನ ಸೇವೆ ನಡೆಯುತ್ತವೆ. ಆದರೆ, ಬರ್ಕಜೆಯಲ್ಲಿ ಒಂಬತ್ತು ಗುಳಿಗ ದೈವಗಳಿಗೆ ನರ್ತನ ಸೇವೆ ನೆರವೇರಿದೆ.

ಇದನ್ನೂ ಓದಿ : ಮಂಗಳೂರು : ಇಂದಿನಿಂದ 3 ದಿನ ಪಾಂಡೇಶ್ವರದಲ್ಲಿ ಬೃಹತ್ ಐಸ್‌ಕ್ರೀಂ ಪರ್ಬ

ಗುಳಿಗ ದೈವದ ಆರಾಧನೆ ಕರಾವಳಿ ಭಾಗದಲ್ಲಿ ಬಹು ಆಕರ್ಷಕ. ಅದರ ರೋಷಾವೇಷ ನೋಡೋದೇ ಒಂದು ರೋಮಾಂಚಕ ಅನುಭವ. ತುಳುನಾಡಿನಾದ್ಯಂತ ಆರಾಧಿಸಲ್ಪಡುವ ಗುಳಿಗ ದೈವಗಳು, ಕ್ಷೇತ್ರಪಾಲಕರಾಗಿ ನೆಲೆಸಿ, ಜನರ ಸಂಕಷ್ಟಗಳನ್ನು ನಿವಾರಣೆ ಮಾಡುತ್ತಾನೆ ಎಂಬ ನಂಬಿಕೆ ಭಕ್ತರದ್ದು. ಒಂದೇ ದಿನ ಒಂದೇ ಬಾರಿ ಈ ನವ ಗುಳಿಗ ದೈವಗಳಿಗೆ ಗಗ್ಗರ ಸೇವೆ ನಡೆದಿದ್ದು, ಬರ್ಕಜೆ ಗ್ರಾಮದಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನದ ಈ ಬಾರಿಯ ವಾರ್ಷಿಕ ಉತ್ಸವ ಅತ್ಯಂತ ಯಶಸ್ವಿಯಾಗಿ ನಡೆಯಿತು. ಒಂಬತ್ತು ಮಂದಿ ದೈವ ನರ್ತಕರು ಏಕಕಾಲದಲ್ಲಿ ನವ ಗುಳಿಗನ ನೇಮೋತ್ಸವ ನಡೆಸಿಕೊಟ್ಟಿದ್ದು, ಈ ಅದ್ಭುತವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡರು.

Continue Reading
Advertisement

Trending

Copyright © 2025 Namma Kudla News

You cannot copy content of this page