Connect with us

LATEST NEWS

ಒಂದು ಎಪಿಸೋಡ್‌ಗೆ ಲಕ್ಷ ಸಂಭಾವನೆ ಪಡೆಯುವ ನಿರೂಪಕರು..!!!

Published

on

ನಿರೂಪಣೆ ಎಂದರೆ ಮಲ್ಲಿಗೆ ಹೂವಿನ ದಾರದಂತೆ, ಹಡಗಿನ ಲಂಗರಿನಂತೆ, ದಾರಿಯ ಸೇತುವೆಯಂತೆ ಎನ್ನುವ ಮಾತಿದೆ. ಇಡೀ ಕಾರ್ಯಕ್ರಮದ ಜವಾಬ್ದಾರಿಯನ್ನ ನಿರೂಪಕರು ತಮ್ಮ ತಲೆಯ ಮೇಲೆ ಹೊತ್ತಿರುತ್ತಾರೆ. ನಾವು ಕನ್ನಡ ಚಾನೆಲ್‌ಗಳಲ್ಲಿ ಹಲವಾರು ನಿರೂಪಕರನ್ನು ನೋಡಿರುತ್ತೇವೆ. ಅದರಲ್ಲೂ ಕೆಲವು ನಿರೂಪಕರು ಜನರ ಮನಸ್ಸಿನಲ್ಲಿ ಅಚ್ಚೆಯಾಗಿ ಉಳಿದಿದ್ದಾರೆ. ತಮ್ಮ ಬಣ್ಣ ಬಣ್ಣದ ಮಾತಿನಿಂದಲೇ ಜನರನ್ನು ಮೋಡಿ ಮಾಡಿ ಇದೀಗ ಕರ್ನಾಟಕದೆಲ್ಲೆಡೆ ಮನೆಮಾತಾಗಿದ್ದಾರೆ. ಅದರಲ್ಲೂ ಒಂದು ಎಪಿಸೋಡ್‌ಗೇ ಲಕ್ಷ ಲಕ್ಷ ಸಂಭಾವನೆ ಪಡೆಯುವ ನಿರೂಪಕರು ಇದ್ದಾರೆ. ಆ ನಿರೂಪಕರು ಯಾರು ? ಅವರ ಸಂಬಳ ಎಷ್ಟಿದೆ ಎಂಬ ಡಿಟೇಲ್ಸ್ ಇಲ್ಲಿದೆ.

ನಿರಂಜನ್‌ ದೇಶಪಾಂಡೆ

ನಿರಂಜನ್ ದೇಶಪಾಂಡೆ ಕನ್ನಡ ಚಿತ್ರರಂಗದ ಉದಯೋನ್ಮುಖ ನಟ. ತನ್ನ ನಟನೆ ಮೂಲಕವೇ ಹೆಸರುವಾಸಿಯಾದ ಇವರು ಕನ್ನಡ ಬಿಗ್‌ಬಾಸ್ ನಲ್ಲೂ ಭಾಗವಹಿಸಿದ್ದರು. ಇವರು ಕಿರುತೆರೆಯ ಖ್ಯಾತ ನಿರೂಪಕರು ಆಗಿದ್ದಾರೆ. ನಿರೂಪಕರಾಗಿ ಪ್ರತಿ ಎಪಿಸೋಡ್‌ಗೆ 75 ಸಾವಿರ ಸಂಭಾವನೆಯನ್ನು ಪಡೆಯುತ್ತಾರೆ ಎನ್ನಲಾಗಿದೆ.

ಶ್ವೇತಾ ಚೆಂಗಪ್ಪ

ಕಳೆದ ಇಪ್ಪತ್ತು ವರ್ಷಗಳಿಂದ ಶ್ವೇತಾ ಚೆಂಗಪ್ಪ ಕನ್ನಡ ಕಿರುತೆರೆಯಲ್ಲಿ ಧಾರಾವಾಹಿಗಳ ನಟಿಯಾಗಿ, ನಿರೂಪಕಿಯಾಗಿ ಮನೆಮಾತಾಗಿದ್ದಾರೆ. ಕುಣಿಯೋಣ ಬಾರಾ, ಡ್ಯಾನ್ಸ್ ಜ್ಯೂನಿಯರ್ಸ್ ಡ್ಯಾನ್ಸ್, ಮಜಾಟಾಕೀಸ್, ಕನ್ನಡದ ಬಿಗ್ ಬಾಸ್ ಸೀಸನ್ 2, ನಮ್ಮಮ್ಮ ಸೂಪರ್ ಸ್ಟಾರ್, ಛೋಟಾ ಚಾಂಪಿಯನ್ ಮೊದಲಾದ ಕಾರ್ಯಕ್ರಮಗಳಲ್ಲಿ ನಿರೂಪಕಿಯಾಗಿ, ಸ್ಪರ್ಧಿಯಾಗಿ ಮಿಂಚಿದ್ದು, ಇಂದಿಗೂ ಕಿರುತೆರೆಯಲ್ಲಿ ಬಹು ಬೇಡಿಕೆಯ ನಿರೂಪಕಿಯಾಗಿದ್ದಾರೆ. ಇವರು ಎಪಿಸೋಡ್‌ವೊಂದಕ್ಕೆ 75 ಸಾವಿರ ರೂ. ಜಾರ್ಜ್ ಮಾಡುತ್ತಾರೆ ಎನ್ನಲಾಗಿದೆ.

ಅನುಪಮಾ ಗೌಡ

ಅನುಪಮಾ ಗೌಡ ಕನ್ನಡ ಕಿರುತೆರೆಯಾ ಜನಪ್ರಿಯ ನಟಿ ಹಾಗೂ ನಿರೂಪಕಿ. ಹಲವು ಧಾರಾವಾಹಿಗಳ ಮೂಲಕ ಕಿರುತೆರೆಗೆ ಪರಿಚಯವಾದರು. ನಂತರ ಮಜಾ ಭಾರತ, ರಾಜ-ರಾಣಿ, ನನ್ನಮ್ಮ ಸೂಪರ್ ಸ್ಟಾರ್ ಕಾರ್ಯಕ್ರಮಗಳಲ್ಲಿ ನಿರೂಪಕಿಯಾಗಿ ವೀಕ್ಷಕರ ಗಮನ ಸೆಳೆದಿದ್ದಾರೆ. ಇವರು ಪ್ರತಿ ಎಪಿಸೋಡ್‌ಗೆ 1 ಲಕ್ಷ ರೂಪಾಯಿ ಸಂಭಾವನೆ ಪಡೆಯುತ್ತಾರೆ ಎಂದು ಹೇಳಲಾಗುತ್ತದೆ.

ಮಾಸ್ಟರ್‌ ಆನಂದ್‌

ಬಾಲ ನಟರಾಗಿದ್ದಾಗಿನಿಂದಲೂ ಮಾಸ್ಟರ್ ಆನಂದ್ ಬಹಳ ಫೇಮಸ್. ಇನ್ನು ಇವರ ಬಗ್ಗೆ ಹೇಳುವುದಾದರೆ ಹೇಳುವುದಾದರೆ, ನಟನಾಗಿ, ನಿರ್ದೇಶಕನಾಗಿ, ನಿರೂಪಕನಾಗಿ ಬೆಳೆದವರು. ನಿರೂಪಣೆಯಲ್ಲಿ ವೀಕ್ಷಕರನ್ನು ರಂಜಿಸುವುದರಲ್ಲಿ ಎಕ್ಸ್‌ಪರ್ಟ್ ಆದ ಮಾಸ್ಟರ್ ಆನಂದ್ ಅವರು ಪ್ರತಿ ಎಪಿಸೋಡ್‌ಗೆ 1.5 ಲಕ್ಷ ರೂ. ಸಂಭಾವನೆ ಪಡೆಯುತ್ತಾರೆ ಎಂದು ಮೂಲಗಳು ಹೇಳುತ್ತವೆ.

ಸೃಜನ್‌ ಲೋಕೇಶ್‌

ಕನ್ನಡ ಚಿತ್ರರಂಗದಲ್ಲಿ ಟಾಕಿಂಗ್ ಸ್ಟಾರ್ ಎಂದೇ ಗುರುತಿಸಿಕೊಂಡಿರುವ ಸೃಜನ್ ಲೋಕೇಶ್ ನಟ, ನಿರೂಪಕ ಹಾಗೂ ನಿರ್ಮಾಪಕ. ಮಜಾ ಟಾಕೀಸ್, ಛೋಟಾ ಚಾಂಪಿಯನ್, ಮಜಾ ವಿತ್ ಸೃಜಾ, ಫ್ಯಾಮಿಲಿ ಗ್ಯಾಂಗ್ ಸ್ಟಾರ್ಸ್ ಹೀಗೆ ಹಲವು ಶೋಗಳ ನಿರೂಪಣೆ ಮಾಡಿ ಆ ಮೂಲಕ ಸಿಕ್ಕಾಪಟ್ಟೆ ಯಶಸ್ಸು ಕಂಡರು. ಇವರು ಕಾರ್ಯಕ್ರಮದ ಎಪಿಸೋಡ್‌ವೊಂದಕ್ಕೆ 2 ಲಕ್ಷ ರೂಪಾಯಿ ಚಾರ್ಜ್‌ ಮಾಡುತ್ತಾರೆ ಎನ್ನಲಾಗಿದೆ.

ಅಕುಲ್ ಬಾಲಾಜಿ

ಕನ್ನಡ ಜನಪ್ರಿಯ ನಿರೂಪಕ ಅಕುಲ್‌ ಬಾಲಾಜಿ ಎಂತಹ ಮಾತಿನ ಮಲ್ಲ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಎಂತಹದ್ದೇ ಕಾರ್ಯಕ್ರಮಗಳನ್ನು ಕೊಟ್ಟರೂ ಅದನ್ನು ಯಶಸ್ವಿಯಾಗಿ ಮುಗಿಸಿಕೊಡುವ ಚತುರತೆ ಅಕುಲ್‌ ಬಾಲಾಜಿಗೆ ಇದೆ. ಒಂದು ಸಮಯದಲ್ಲಿ ರಿಯಾಲಿಟಿ ಶೋ ಎಂದಾಕ್ಷಣ ಥಟ್ ಅಂತಾ ನೆನಪಿಗೆ ಬರುತ್ತಿದ್ದ ಹೆಸರೇ ಅಕುಲ್‌ ಬಾಲಾಜಿ. ಅಷ್ಟರ ಮಟ್ಟಿಗೆ ಕಿರುತೆರೆ ಲೋಕದಲ್ಲಿ ಅಕುಲ್‌ ಮಿಂಚಿದ್ದರು. ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್, ಪ್ಯಾಟೆ ಮಂದಿ ಕಾಡಿಗ್‌ ಬಂದ್ರು, ಹಳ್ಳಿ ಹೈದ ಪ್ಯಾಟೆಗ್‌ ಬಂದ ರಿಯಾಲಿಟಿ ಶೋ ಮೂಲಕ ಯಶಸ್ಸು ಕಂಡಿದ್ದ ಅಕುಲ್‌, ಕನ್ನಡ ಮಾತ್ರವಲ್ಲದೆ ಬೇರೆ ಭಾಷೆಗಳ ಸಿನಿಮಾದಲ್ಲೂ ನಟನೆ ಮಾಡಿದ್ದಾರೆ. ಇವರು ಪ್ರತಿ ಪ್ರತಿ ಎಪಿಸೋಡ್‌ಗೆ 3 ಲಕ್ಷ ಸಂಭಾವನೆ ಪಡೆಯುತ್ತಾರೆ ಎನ್ನಲಾಗಿದೆ.

ಅನುಶ್ರೀ

ಕನ್ನಡ ಕಿರುತೆರೆಯ ಈ ಮಾತಿನ ಮಲ್ಲಿಯನ್ನು ಮೆಚ್ಚಿಕೊಂಡಿರುವ ಅಭಿಮಾನಿಗಳಿಗೇನು ಕಮ್ಮಿಯಿಲ್ಲ. ನಿರೂಪಣೆ ಅಂತ ಬಂದರೆ ಮೊದಲು ನೆನಪಾಗುವುದೇ ಅನುಶ್ರೀ. ಇನ್ನು ಕೆಲವು ವರ್ಷಗಳಿಂದ ಜೀ ಕನ್ನಡದಲ್ಲಿ ಕೆಲವು ಶೋಗಳನ್ನು ಅನುಶ್ರೀಯೇ ನಡೆಸಿಕೊಡುತ್ತಾರೆ. ಈಕೆ ಯಾವುದೇ ಕಾರ್ಯಕ್ರಮಕ್ಕೆ ಬಂದರೂ ಸಾಕು ಅಲ್ಲಿ ಮಜಾ ಇದ್ದೇ ಇರುತ್ತದೆ. ಇವರು ಎಪಿಸೋಡ್‌ವೊಂದಕ್ಕೆ 2.5 ರಿಂದ 3 ಲಕ್ಷ ರೂ. ಸಂಭಾವನೆ ಪಡೆಯುತ್ತಾರೆ ಎಂದು ಹೇಳಲಾಗುತ್ತದೆ.

ಕಿಚ್ಚ ಸುದೀಪ್

ಕನ್ನಡ ಬಿಗ್‌ಬಾಸ್‌ ರಿಯಾಲಿಟಿ ಶೋಗೆ ಒಂದು ಗತ್ತು ಗಮ್ಮತ್ತು ತಂದುಕೊಟ್ಟವರು ಕಿಚ್ಚ ಸುದೀಪ್. ಬಿಗ್‌ಬಾಸ್ ಸೀಸನ್ 11 ಅನ್ನು ಯಶಸ್ವಿಯಾಗಿ ನಡೆಸಿಕೊಟ್ಟಿರುವ ಕಿಚ್ಚ ಸುದೀಪ್, ಈ ಬಾರಿ ಬಿಗ್‌ಬಾಸ್ ಶೋ ನಿರೂಪಣೆಗೆ ಕೋಟ್ಯಾಂತರ ರೂಪಾಯಿ ಸಂಭಾವನೆ ಪಡೆದಿದ್ದಾರೆ ಎನ್ನಲಾಗಿದೆ.

LATEST NEWS

ಭಾರತದಲ್ಲೇ ಶ್ರೀಮಂತ ಹಾಸ್ಯ ನಟ ಬ್ರಹ್ಮಾನಂದಂ ಅವರ ಆಸ್ತಿ ಕೇಳಿದ್ರೆ ಶಾಕ್ ಆಗ್ತೀರಾ !

Published

on

‘ಟಾಲಿವುಡ್‌ ಕಾಮಿಡಿ ಕಿಂಗ್’ ಎಂದೇ ಖ್ಯಾತರಾಗಿರುವ ತೆಲುಗು ನಟ ಬ್ರಹ್ಮಾನಂದಂ ಭಾರತದ ಅತ್ಯಂತ ಶ್ರೀಮಂತ ಹಾಸ್ಯನಟ ಎಂದು ಅನೇಕ ವರದಿಗಳು ತಿಳಿಸಿವೆ.


ಹೌದು, ಪದ್ಮಶ್ರೀ ಪುರಸ್ಕೃತ ಹಾಸ್ಯ ನಟ ಬ್ರಹ್ಮಾನಂದಂ ಇದುವರೆಗೂ ಬರೀ ನಟರಾಗಿ ಎಲ್ಲರಿಗೂ ಪರಿಚಯಗೊಂಡಿದ್ದರು. ಆದ್ರೆ ಅವರು ಕೇವಲ ನಟನಲ್ಲದೇ ಒಬ್ಬ ಅದ್ಭುತ ಚಿತ್ರ ಕಲಾವಿದ ಕೂಡ ಆಗಿದ್ದಾರೆ. ತೆಲುಗು ಚಿತ್ರರಂಗದ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ತೆರೆ ಮೇಲೆ ಎಲ್ಲರನ್ನೂ ನಗಿಸುತ್ತಾರೆ. ಒಂದು ಸಾವಿರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಪಡೆದುಕೊಂಡಿದ್ದಾರೆ.

ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ (ವಿಶ್ವ ದಾಖಲೆ) ಬ್ರಹ್ಮಾನಂದಂ ತಮ್ಮ ವೃತ್ತಿಜೀವನದಲ್ಲಿ ಸುಮಾರು 500 ಕೋಟಿಗೂ ಹೆಚ್ಚು ಆಸ್ತಿಯನ್ನು ಸಂಪಾದಿಸಿದ್ದಾರೆ. ಇದು ಭಾರತದ ಸ್ಟಾರ್​ ನಟರಾದ ರಣಬೀರ್ ಕಪೂರ್ (350 ಕೋಟಿ), ಪ್ರಭಾಸ್ ( 300 ಕೋಟಿ) ಮತ್ತು ರಜನಿಕಾಂತ್ (400 ಕೋಟಿ) ಗಿಂತ ಹೆಚ್ಚು ಶ್ರೀಮಂತನನ್ನಾಗಿ ಮಾಡಿದೆ.

ಭಾರತದ ಇತರ ಪ್ರಮುಖ ಹಾಸ್ಯನಟರು ಯಾರೂ ಬ್ರಹ್ಮಾನಂದಂ ಅವರ ಹತ್ತಿರಕ್ಕೂ ಸುಳಿದಿಲ್ಲ. ಕಪಿಲ್ ಶರ್ಮಾ ಅವರ ನಿವ್ವಳ ಮೌಲ್ಯ 300 ಕೋಟಿ ರೂ. ಎಂದು ವರದಿಯಾಗಿದೆ. ದೇಶದ ಇತರ ಯಾವುದೇ ಹಾಸ್ಯನಟರು ತಮ್ಮ ನಿವ್ವಳ ಮೌಲ್ಯದಲ್ಲಿ 100 ಕೋಟಿ ರೂ.ಗಳನ್ನು ದಾಟಿಲ್ಲ. ಆದರೆ, ಬ್ರಹ್ಮಾನಂದಂ 500 ಕೋಟಿ ಗೂ ಹೆಚ್ಚು ಆಸ್ತಿಯನ್ನು ಹೊಂದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಟ್ರೆಂಡ್ ಬದಿಗಿಟ್ಟು ಮಗಳಿಗೆ ಅರ್ಥಗರ್ಭಿತ ಹೆಸರಿಟ್ಟ ನಟಿ ನೇಹಾ ಗೌಡ; ವ್ಹಾವ್ ಅಂದ್ರು ಫ್ಯಾನ್ಸ್!

ಬ್ರಹ್ಮಾನಂದಂ ಅವರು ಮೂಲತಃ ಆಂಧ್ರಪ್ರದೇಶದ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು. 80ರ ದಶಕದಲ್ಲಿ ತಮ್ಮ ಮಿಮಿಕ್ರಿ ಕೌಶಲ್ಯಕ್ಕೆ ಹೆಸರುವಾಸಿಯಾದ ರಂಗಭೂಮಿ ಕಲಾವಿದರಾಗಿ ತಮ್ಮ ಶೋಬಿಜ್ ವೃತ್ತಿ ಜೀವನವನ್ನು ಪ್ರಾರಂಭಿಸಿದರು.

ಇದರಿಂದ 1985ರಲ್ಲಿ ಟಿವಿಗೆ ಪಾದಾರ್ಪಣೆ ಮಾಡಿದ್ರು. 1987ರಲ್ಲಿ ಸಿನಿಮಾಗೆ ಪಾದಾರ್ಪಣೆ ಮಾಡಿದ್ದರು. ಆಹಾ ನಾ ಪೆಲ್ಲಂಟ ಹೆಸರಿನ ಸಿನಿಮಾ ಅವರ ವೃತ್ತಿಜೀವನದಲ್ಲಿ ಹೊಸ ತಿರುವು ನೀಡಿತು. ಅಂದಿನಿಂದ, ಆಫರ್‌ಗಳು ಹರಿದು ಬಂದವು.

Continue Reading

FILM

ಟ್ರೆಂಡ್ ಬದಿಗಿಟ್ಟು ಮಗಳಿಗೆ ಅರ್ಥಗರ್ಭಿತ ಹೆಸರಿಟ್ಟ ನಟಿ ನೇಹಾ ಗೌಡ; ವ್ಹಾವ್ ಅಂದ್ರು ಫ್ಯಾನ್ಸ್!

Published

on

ಮಂಗಳೂರು/ಬೆಂಗಳೂರು : ಲಕ್ಷ್ಮೀ ಬಾರಮ್ಮ ಮೂಲಕ ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ನಟಿ ನೇಹಾ ಗೌಡ. ಗೊಂಬೆ ಎಂದೇ ಖ್ಯಾತರಾಗಿದ್ದರು ನೇಹಾ. ಅದಾದ ಬಳಿಕ ಬಿಗ್ ಬಾಸ್ ಕನ್ನಡ ಸೀಸನ್ 9 ರ ಶೋ ಮೂಲಕನೂ ಗಮನ ಸೆಳೆದಿದ್ದರು. ಅವರ ಪತಿ ಚಂದನ್ ಕೂಡ ‘ಅಂತರಪಟ’ ಧಾರಾವಾಹಿಯಲ್ಲಿ ನಟಿಸಿ ಮನೆ ಮಾತಾಗಿದ್ದರು. ಈ ದಂಪತಿಗೆ ಹೆಣ್ಣು ಮಗು ಜನಿಸಿದ್ದು, ನಾಮಕರಣ ಶಾಸ್ತ್ರ ಅದ್ದೂರಿಯಾಗಿ ನಡೆದಿದೆ.

ಬೆಂಗಳೂರಿನಲ್ಲಿ ಅದ್ದೂರಿ ಸಮಾರಂಭ ನಡೆದಿದ್ದು, ಈ ಕಾರ್ಯಕ್ರಮಕ್ಕೆ ಕಿರುತೆರೆ, ಹಿರಿತೆರೆ ಕಲಾವಿದರು ಆಗಮಿಸಿ ಶುಭ ಹಾರೈಸಿದರು.

ವಿಶೇಷ ಅಂದ್ರೆ ಟ್ರೆಂಡ್ಸ್‌ ಬದಿಗಿಟ್ಟು ನೇಹಾ ದಂಪತಿ ಚಂದದ ಹೆಸರೊಂದನ್ನು ಮಗಳಿಗಿಟ್ಟಿದ್ದಾರೆ. ಇತ್ತೀಚೆಗೆ ವಿಭಿನ್ನ ಹೆಸರುಗಳದೇ ರಾಯಭಾರವಾಗಿರುವಾಗ ನೇಹಾ – ಚಂದನ್ ಮಾತ್ರ ಅರ್ಥಪೂರ್ಣವಾಗಿರುವ ಹೆಸರಿಟ್ಟಿದ್ದಾರೆ.

ಹೌದು, ಈ ದಂಪತಿ ಮಗುವಿಗೆ ಇಟ್ಟಿರುವ ಹೆಸರು ‘ಶಾರದಾ’. ದಂಪತಿ ನಿಲುವಿಗೆ ಅಭಿಮಾನಿಗಳು ಫುಲ್ ಖುಷಿಯಾಗಿದ್ದು, ಶುಭ ಹಾರೈಸುತ್ತಿದ್ದಾರೆ.

ಇದನ್ನೂ ಓದಿ : ಸಿಕಂದರ್ ಸಿನಿಮಾದಲ್ಲಿ ಕನ್ನಡತಿ ರಶ್ಮಿಕಾ ಮಂದಣ್ಣ ಒಬ್ಬರೇ ಅಲ್ಲ..! ಟ್ರೈಲರ್‌ನಲ್ಲಿ ಕಾಣಿಸಿಕೊಂಡ ಮತ್ತೊಬ್ಬ ಕನ್ನಡಿಗ..?

ಬಾಲ್ಯದಲ್ಲೇ ಪ್ರೀತಿಯಲ್ಲಿ ಬಿದ್ದಿದ್ದ ನೇಹಾ – ಚಂದನ್ 2018ರಲ್ಲಿ ವಿವಾಹವಾಗಿದ್ದರು. ಕಳೆದ ವರ್ಷ ಅಕ್ಟೋಬರ್‌ 29ರಂದು ನೇಹಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.

Continue Reading

LATEST NEWS

ಬಾಂಗ್ಲಾ ಕ್ರಿಕೆಟ್‌ ಆಟಗಾರನಿಗೆ ಹೃದಯಾಘಾತ!

Published

on

ಮಂಗಳೂರು/ಢಾಕಾ: ಬಾಂಗ್ಲಾದೇಶ ಕ್ರಿಕೆಟ್ ಆಟಗಾರ, ಮಾಜಿ ನಾಯಕ ತಮೀಮ್ ಇಕ್ಬಾಲ್ ಅವರಿಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.


ಢಾಕಾ ಪ್ರೀಮಿಯರ್ ಲೀಗ್ ಪಂದ್ಯವಾಡುತ್ತಿರುವ ವೇಳೆ ಇಕ್ಬಾಲ್ ಅವರಿಗೆ ಎದೆ ನೋವು ಕಾಣಸಿಕೊಂಡಿದೆ. ಮೊಹಮ್ಮದನ್ ಸ್ಪೋರ್ಟ್ಸ್ ಕ್ಲಬ್ ಮತ್ತು ಶಿನೆಪುಕರ್ ಕ್ರಿಕೆಟ್ ಕ್ಲಬ್ ನಡುವೆ ಪಂದ್ಯ ನಡೆಯುತ್ತಿತ್ತು. ಈ ಪಂದ್ಯದಲ್ಲಿ ಪಾಲ್ಗೊಂಡಿದ್ದ ತಮೀಮ್ ಇಕ್ಬಾಲ್‌ಗೆ ಇದ್ದಕ್ಕಿದ್ದಂತೆಯೇ ಎದೆನೋವು ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಆರಂಭದಲ್ಲಿ ಅವರನ್ನು ಹೆಲಿಕಾಪ್ಟರ್ ಮೂಲಕ ಢಾಕಾಗೆ ಏರ್‌ಲಿಫ್ಟ್ ಮಾಡಲು ವ್ಯವಸ್ಥೆ ಮಾಡಲಾಗಿತ್ತು, ಆದರೆ ಅವರನ್ನು ಬಿಕೆಎಸ್‌ಪಿ ಮೈದಾನದಿಂದ ವಿಮಾನದಲ್ಲಿ ಕರೆದೊಯ್ಯಲು ಸಾಧ್ಯವಾಗಲಿಲ್ಲ. ನಂತರ ಅವರನ್ನು ಚಿಕಿತ್ಸೆಗಾಗಿ ಫಜಿಲತುನ್ನೆಸ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ಬಾಲ್ ಟ್ಯಾಂಪರಿಂಗ್ ಮಾಡಿದ್ರಾ ಸಿಎಸ್‌ಕೆ ಆಟಗಾರರು; ವೈರಲ್ ಆಯ್ತು ವೀಡಿಯೋ

‘ಆಸ್ಪತ್ರೆಯಲ್ಲಿ ಆರಂಭಿಕ ತಪಾಸಣೆ ನಡೆಸಿದ ವೇಳೆ ತಮೀಮ್ ಅವರಿಗೆ ಸಣ್ಣ ಪ್ರಮಾಣದಲ್ಲಿ ಹೃದಯಾಘಾತವಾಗಿರುವುದು ಕಂಡುಬಂದಿತ್ತು. ಹೀಗಾಗಿ ಢಾಕಾಗೆ ಏರ್‌ಲಿಫ್ಟ್ ಮಾಡಲು ಯೋಜಿಸಲಾಗಿತ್ತು. ಆದರೆ ಹೆಲಿಪ್ಯಾಡ್‌ಗೆ ಕರೆದೊಯ್ಯುವ ವೇಳೆ ಮತ್ತೆ ತೀವ್ರವಾಗಿ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ ವಾಪಸ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿದೆ. ತಮೀಮ್ ಅವರಿಗೆ ತೀವ್ರವಾದ ಹೃದಾಯಾಘಾತವಾಗಿದೆ. ವೈದ್ಯಕೀಯ ತಂಡ ಸಾಧ್ಯವಿರುವ ಎಲ್ಲಾ ರೀತಿಯ ಚಿಕಿತ್ಸೆ ನೀಡುತ್ತಿದೆ’ ಎಂದು ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್‌ ಮುಖ್ಯ ವೈದ್ಯ ಡಾ.ದೆಬಾಶಿಶ್ ಚೌಧರಿ ಹೇಳಿದ್ದಾರೆ.

ತಮಿಮ್ ಇಕ್ಬಾಲ್ ಇದೇ ಜನವರಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ್ದರು. ಬಾಂಗ್ಲಾದೇಶ ಪರ 243 ಏಕದಿನ, 70 ಟೆಸ್ಟ್ ಹಾಗೂ 78 ಟಿ20 ಪಂದ್ಯಗಳನ್ನಾಡಿ ಒಟ್ಟಾರೆ 15 ಸಾವಿರಕ್ಕೂ ಅಧಿಕ ರನ್ ಬಾರಿಸಿದ್ದಾರೆ. ಮೂರು ಮಾದರಿಯ ಕ್ರಿಕೆಟ್‌ನಿಂದ ತಮೀಮ್ ಇಕ್ಬಾಲ್ ಬರೋಬ್ಬರಿ 25 ಶತಕ ಸಿಡಿಸಿದ್ದಾರೆ. ಈ ಮೂಲಕ ಬಾಂಗ್ಲಾದೇಶ ಪರ ಗರಿಷ್ಠ ಶತಕ ಸಿಡಿಸಿದ ಬ್ಯಾಟರ್ ಎಂಬ ದಾಖಲೆ ತಮಿಮ್ ಇಕ್ಬಾಲ್ ಹೆಸರಿನಲ್ಲಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page