Connect with us

LATEST NEWS

ಪ್ರೇಮ ನಿವೇದನೆ ದಿನ : ಮನದ ಪ್ರೀತಿ ಹೇಳುವ ಮುನ್ನ ಅದರ ಮಹತ್ವ ಅರಿಯಿರಿ…

Published

on

ಈಗಾಗಲೇ ಫೆ.7 ರಿಂದ ಫೆ.14ರವರೆಗಿನ ‘ವ್ಯಾಲೆಂಟೈನ್ಸ್ ವೀಕ್’ ಆರಂಭವಾಗಿದೆ, ಪ್ರೇಮಿಗಳ ವಾರದ ಎರಡನೇ ದಿನವಾದ ಇಂದು (ಫೆಬ್ರವರಿ 8) ಪ್ರೇಮ ನಿವೇದನೆ ದಿನ. ಮನದಾಳದ ಪ್ರೀತಿಯನ್ನು ವಿಶೇಷ ರೀತಿಯಲ್ಲಿ ಪ್ರಸ್ತಾಪಿಸುವ ಮೂಲಕ ಪ್ರೀತಿಯನ್ನು ಅಧಿಕೃತಗೊಳಿಸುವ ದಿನ. ಹಾಗಾದರೆ ಈ ದಿನದ ಇತಿಹಾಸ, ಮಹತ್ವ ಹಾಗೂ ಆಚರಣೆಯ ಸಂಪೂರ್ಣ ಮಾಹಿತಿ ಇಲ್ಲಿದೆ.

ಪ್ರೇಮ ನಿವೇದನೆ ಎನ್ನುವುದು ಪ್ರತಿಯೊಬ್ಬರ ಬದುಕಿನಲ್ಲಿ ವಿಶೇಷವಾಗಿರುತ್ತದೆ. ಜೀವನ ಪರ್ಯಂತ ಸದಾ ನೆನಪಿನಲ್ಲಿ ಉಳಿಯುವ ಕಾರಣ ವಿಭಿನ್ನವಾಗಿ ನಿವೇದನೆ ಮಾಡಲು ಬಯಸುತ್ತಾರೆ. ಪ್ರೇಮ ಪಯಣಕ್ಕೆ ಹೊಸ ಹೆಜ್ಜೆ ಇಡಲು ಬಯಸುವವರಿಗೆ ಈ ದಿನ ಬೆಸ್ಟ್.

ಪ್ರೇಮ ನಿವೇದನೆ ದಿನದ ಇತಿಹಾಸ :

ವ್ಯಾಲೆಂಟೈನ್ಸ್ ವೀಕ್ ಆಚರಣೆಯ ಭಾಗವಾಗಿ ಎರಡನೇ ದಿನವನ್ನು ಪ್ರಪೋಸ್ ಡೇ ಎಂದು ಶತಮಾನಗಳಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಈ ದಿನದ ಆಚರಣೆಯೂ ಮೊದಲಿಗೆ ಪಾಶ್ಚಿಮಾತ್ಯ ದೇಶಗಳಲ್ಲಿ ಪ್ರಾರಂಭವಾಯಿತು, ತದನಂತರದಲ್ಲಿ ಭಾರತ ಸೇರಿದಂತೆ ಇತರ ದೇಶಗಳಿಗೂ ಹರಡಿತು. ಆದರೆ ಈ ದಿನದ ಆಚರಣೆ ಯಾವಾಗ ಶುರುವಾಯಿತು ಎನ್ನುವ ಬಗ್ಗೆ ನಿಖರವಾದ ಇತಿಹಾಸವಿಲ್ಲ. ಆದರೆ ಕೆಲ ಮಾಹಿತಿಯ ಪ್ರಕಾರ 1477ರಲ್ಲಿ ಆಸ್ಟಿಯನ್ ರಾಜಕುಮಾರ ಮ್ಯಾಕ್ಸಿಮಿಲಿಯನ್ ಬರ್ಗಂಡಿಯ ಮೇರಿಗೆ ವಜ್ರದ ಉಂಗುರವನ್ನು ತೊಡಿಸುವ ಮೂಲಕ ಪ್ರಪೋಸ್ ಮಾಡಿದ್ದನು ಎನ್ನಲಾಗಿದೆ. 1816ರಲ್ಲಿ ತನ್ನ ಭಾವಿ ಪತಿಯೊಂದಿಗೆ ರಾಜಕುಮಾರಿ ಷಾರ್ಲೆಟ್ ಅವರ ನಿಶ್ವಿತಾರ್ಥವು ಮಹತ್ವದ ಚರ್ಚೆಯಲ್ಲಿತ್ತು. ಹೀಗಾಗಿ ಈ ದಿನವನ್ನು ವ್ಯಾಲೆಂಟೈನ್ಸ್ ವೀಕ್‌ನ ಪ್ರಪೋಸ್ ಡೇ ಆಗಿ ಆಚರಿಸಲಾಯಿತು. ಇತ್ತೀಚಿನ ವರ್ಷಗಳಲ್ಲಿ ಪ್ರಪೋಸ್ ಡೇ ಆಚರಣೆ ಹೆಚ್ಚು ಜನಪ್ರಿಯವಾಗಿದ್ದು, ಜಗತ್ತಿನದಾದಂತ್ಯ ಈ ದಿನವನ್ನು ಆಚರಿಸಲಾಗುತ್ತದೆ.

ಪ್ರಪೋಸ್ ಡೇ ಮಹತ್ವ :

ಪ್ರಪೋಸ್ ಡೇ ಪ್ರೇಮಿಗಳ ವಾರದ ಅತ್ಯಂತ ಅರ್ಥಪೂರ್ಣ ದಿನಗಳಲ್ಲಿ ಒಂದಾಗಿದೆ. ಪ್ರೀತಿಯ ಭಾವನೆಗಳನ್ನು ವ್ಯಕ್ತಪಡಿಸುವುದು ಸುಲಭದ ಮಾತಲ್ಲ ಏಕೆಂದರೆ ಅಲ್ಲಿ ನಿರಾಕರಣೆಯ ಭಯವಿರುತ್ತದೆ, ಆದರೂ ಈ ದಿನ ಏನೋ ಧೈರ್ಯ ಮಾಡಿ ಪ್ರೇಮಿಯು ಪ್ರೇಮ ನಿವೇದನೆ ಮಾಡುತ್ತಾನೆ. ಇಲ್ಲಿಂದ ಹೊಸ ಸಂಬಂಧವು ಪ್ರಾಮಾಣಿಕತೆ ಮತ್ತು ಧೈರ್ಯದಿಂದ ಪ್ರಾರಂಭವಾಗುತ್ತವೆ. ನವ ಪ್ರೇಮ ಪ್ರಯಾಣವನ್ನು ಪ್ರಾರಂಭಿಸುವುದು ಅಥವಾ ತಮಗೆ ತಾವೇ ಹೃತ್ತೂರ್ವಕ ಭರವಸೆಗಳನ್ನು ನೀಡುವಂತಹ ದಿಟ್ಟ ಹೆಜ್ಜೆಗಳನ್ನು ಇಡಲು ಪ್ರೇರೇಪಿಸುವುದೇ ಪ್ರಪೋಸ್ ಡೇ ಮಹತ್ವ.

LATEST NEWS

ಭಾರತದಲ್ಲೇ ಶ್ರೀಮಂತ ಹಾಸ್ಯ ನಟ ಬ್ರಹ್ಮಾನಂದಂ ಅವರ ಆಸ್ತಿ ಕೇಳಿದ್ರೆ ಶಾಕ್ ಆಗ್ತೀರಾ !

Published

on

‘ಟಾಲಿವುಡ್‌ ಕಾಮಿಡಿ ಕಿಂಗ್’ ಎಂದೇ ಖ್ಯಾತರಾಗಿರುವ ತೆಲುಗು ನಟ ಬ್ರಹ್ಮಾನಂದಂ ಭಾರತದ ಅತ್ಯಂತ ಶ್ರೀಮಂತ ಹಾಸ್ಯನಟ ಎಂದು ಅನೇಕ ವರದಿಗಳು ತಿಳಿಸಿವೆ.


ಹೌದು, ಪದ್ಮಶ್ರೀ ಪುರಸ್ಕೃತ ಹಾಸ್ಯ ನಟ ಬ್ರಹ್ಮಾನಂದಂ ಇದುವರೆಗೂ ಬರೀ ನಟರಾಗಿ ಎಲ್ಲರಿಗೂ ಪರಿಚಯಗೊಂಡಿದ್ದರು. ಆದ್ರೆ ಅವರು ಕೇವಲ ನಟನಲ್ಲದೇ ಒಬ್ಬ ಅದ್ಭುತ ಚಿತ್ರ ಕಲಾವಿದ ಕೂಡ ಆಗಿದ್ದಾರೆ. ತೆಲುಗು ಚಿತ್ರರಂಗದ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ತೆರೆ ಮೇಲೆ ಎಲ್ಲರನ್ನೂ ನಗಿಸುತ್ತಾರೆ. ಒಂದು ಸಾವಿರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಪಡೆದುಕೊಂಡಿದ್ದಾರೆ.

ಸಾವಿರಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ (ವಿಶ್ವ ದಾಖಲೆ) ಬ್ರಹ್ಮಾನಂದಂ ತಮ್ಮ ವೃತ್ತಿಜೀವನದಲ್ಲಿ ಸುಮಾರು 500 ಕೋಟಿಗೂ ಹೆಚ್ಚು ಆಸ್ತಿಯನ್ನು ಸಂಪಾದಿಸಿದ್ದಾರೆ. ಇದು ಭಾರತದ ಸ್ಟಾರ್​ ನಟರಾದ ರಣಬೀರ್ ಕಪೂರ್ (350 ಕೋಟಿ), ಪ್ರಭಾಸ್ ( 300 ಕೋಟಿ) ಮತ್ತು ರಜನಿಕಾಂತ್ (400 ಕೋಟಿ) ಗಿಂತ ಹೆಚ್ಚು ಶ್ರೀಮಂತನನ್ನಾಗಿ ಮಾಡಿದೆ.

ಭಾರತದ ಇತರ ಪ್ರಮುಖ ಹಾಸ್ಯನಟರು ಯಾರೂ ಬ್ರಹ್ಮಾನಂದಂ ಅವರ ಹತ್ತಿರಕ್ಕೂ ಸುಳಿದಿಲ್ಲ. ಕಪಿಲ್ ಶರ್ಮಾ ಅವರ ನಿವ್ವಳ ಮೌಲ್ಯ 300 ಕೋಟಿ ರೂ. ಎಂದು ವರದಿಯಾಗಿದೆ. ದೇಶದ ಇತರ ಯಾವುದೇ ಹಾಸ್ಯನಟರು ತಮ್ಮ ನಿವ್ವಳ ಮೌಲ್ಯದಲ್ಲಿ 100 ಕೋಟಿ ರೂ.ಗಳನ್ನು ದಾಟಿಲ್ಲ. ಆದರೆ, ಬ್ರಹ್ಮಾನಂದಂ 500 ಕೋಟಿ ಗೂ ಹೆಚ್ಚು ಆಸ್ತಿಯನ್ನು ಹೊಂದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಟ್ರೆಂಡ್ ಬದಿಗಿಟ್ಟು ಮಗಳಿಗೆ ಅರ್ಥಗರ್ಭಿತ ಹೆಸರಿಟ್ಟ ನಟಿ ನೇಹಾ ಗೌಡ; ವ್ಹಾವ್ ಅಂದ್ರು ಫ್ಯಾನ್ಸ್!

ಬ್ರಹ್ಮಾನಂದಂ ಅವರು ಮೂಲತಃ ಆಂಧ್ರಪ್ರದೇಶದ ಕಾಲೇಜಿನಲ್ಲಿ ಉಪನ್ಯಾಸಕರಾಗಿದ್ದರು. 80ರ ದಶಕದಲ್ಲಿ ತಮ್ಮ ಮಿಮಿಕ್ರಿ ಕೌಶಲ್ಯಕ್ಕೆ ಹೆಸರುವಾಸಿಯಾದ ರಂಗಭೂಮಿ ಕಲಾವಿದರಾಗಿ ತಮ್ಮ ಶೋಬಿಜ್ ವೃತ್ತಿ ಜೀವನವನ್ನು ಪ್ರಾರಂಭಿಸಿದರು.

ಇದರಿಂದ 1985ರಲ್ಲಿ ಟಿವಿಗೆ ಪಾದಾರ್ಪಣೆ ಮಾಡಿದ್ರು. 1987ರಲ್ಲಿ ಸಿನಿಮಾಗೆ ಪಾದಾರ್ಪಣೆ ಮಾಡಿದ್ದರು. ಆಹಾ ನಾ ಪೆಲ್ಲಂಟ ಹೆಸರಿನ ಸಿನಿಮಾ ಅವರ ವೃತ್ತಿಜೀವನದಲ್ಲಿ ಹೊಸ ತಿರುವು ನೀಡಿತು. ಅಂದಿನಿಂದ, ಆಫರ್‌ಗಳು ಹರಿದು ಬಂದವು.

Continue Reading

FILM

ಟ್ರೆಂಡ್ ಬದಿಗಿಟ್ಟು ಮಗಳಿಗೆ ಅರ್ಥಗರ್ಭಿತ ಹೆಸರಿಟ್ಟ ನಟಿ ನೇಹಾ ಗೌಡ; ವ್ಹಾವ್ ಅಂದ್ರು ಫ್ಯಾನ್ಸ್!

Published

on

ಮಂಗಳೂರು/ಬೆಂಗಳೂರು : ಲಕ್ಷ್ಮೀ ಬಾರಮ್ಮ ಮೂಲಕ ಸಿಕ್ಕಾಪಟ್ಟೆ ಫೇಮಸ್ ಆಗಿದ್ದ ನಟಿ ನೇಹಾ ಗೌಡ. ಗೊಂಬೆ ಎಂದೇ ಖ್ಯಾತರಾಗಿದ್ದರು ನೇಹಾ. ಅದಾದ ಬಳಿಕ ಬಿಗ್ ಬಾಸ್ ಕನ್ನಡ ಸೀಸನ್ 9 ರ ಶೋ ಮೂಲಕನೂ ಗಮನ ಸೆಳೆದಿದ್ದರು. ಅವರ ಪತಿ ಚಂದನ್ ಕೂಡ ‘ಅಂತರಪಟ’ ಧಾರಾವಾಹಿಯಲ್ಲಿ ನಟಿಸಿ ಮನೆ ಮಾತಾಗಿದ್ದರು. ಈ ದಂಪತಿಗೆ ಹೆಣ್ಣು ಮಗು ಜನಿಸಿದ್ದು, ನಾಮಕರಣ ಶಾಸ್ತ್ರ ಅದ್ದೂರಿಯಾಗಿ ನಡೆದಿದೆ.

ಬೆಂಗಳೂರಿನಲ್ಲಿ ಅದ್ದೂರಿ ಸಮಾರಂಭ ನಡೆದಿದ್ದು, ಈ ಕಾರ್ಯಕ್ರಮಕ್ಕೆ ಕಿರುತೆರೆ, ಹಿರಿತೆರೆ ಕಲಾವಿದರು ಆಗಮಿಸಿ ಶುಭ ಹಾರೈಸಿದರು.

ವಿಶೇಷ ಅಂದ್ರೆ ಟ್ರೆಂಡ್ಸ್‌ ಬದಿಗಿಟ್ಟು ನೇಹಾ ದಂಪತಿ ಚಂದದ ಹೆಸರೊಂದನ್ನು ಮಗಳಿಗಿಟ್ಟಿದ್ದಾರೆ. ಇತ್ತೀಚೆಗೆ ವಿಭಿನ್ನ ಹೆಸರುಗಳದೇ ರಾಯಭಾರವಾಗಿರುವಾಗ ನೇಹಾ – ಚಂದನ್ ಮಾತ್ರ ಅರ್ಥಪೂರ್ಣವಾಗಿರುವ ಹೆಸರಿಟ್ಟಿದ್ದಾರೆ.

ಹೌದು, ಈ ದಂಪತಿ ಮಗುವಿಗೆ ಇಟ್ಟಿರುವ ಹೆಸರು ‘ಶಾರದಾ’. ದಂಪತಿ ನಿಲುವಿಗೆ ಅಭಿಮಾನಿಗಳು ಫುಲ್ ಖುಷಿಯಾಗಿದ್ದು, ಶುಭ ಹಾರೈಸುತ್ತಿದ್ದಾರೆ.

ಇದನ್ನೂ ಓದಿ : ಸಿಕಂದರ್ ಸಿನಿಮಾದಲ್ಲಿ ಕನ್ನಡತಿ ರಶ್ಮಿಕಾ ಮಂದಣ್ಣ ಒಬ್ಬರೇ ಅಲ್ಲ..! ಟ್ರೈಲರ್‌ನಲ್ಲಿ ಕಾಣಿಸಿಕೊಂಡ ಮತ್ತೊಬ್ಬ ಕನ್ನಡಿಗ..?

ಬಾಲ್ಯದಲ್ಲೇ ಪ್ರೀತಿಯಲ್ಲಿ ಬಿದ್ದಿದ್ದ ನೇಹಾ – ಚಂದನ್ 2018ರಲ್ಲಿ ವಿವಾಹವಾಗಿದ್ದರು. ಕಳೆದ ವರ್ಷ ಅಕ್ಟೋಬರ್‌ 29ರಂದು ನೇಹಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು.

Continue Reading

LATEST NEWS

ಬಾಂಗ್ಲಾ ಕ್ರಿಕೆಟ್‌ ಆಟಗಾರನಿಗೆ ಹೃದಯಾಘಾತ!

Published

on

ಮಂಗಳೂರು/ಢಾಕಾ: ಬಾಂಗ್ಲಾದೇಶ ಕ್ರಿಕೆಟ್ ಆಟಗಾರ, ಮಾಜಿ ನಾಯಕ ತಮೀಮ್ ಇಕ್ಬಾಲ್ ಅವರಿಗೆ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.


ಢಾಕಾ ಪ್ರೀಮಿಯರ್ ಲೀಗ್ ಪಂದ್ಯವಾಡುತ್ತಿರುವ ವೇಳೆ ಇಕ್ಬಾಲ್ ಅವರಿಗೆ ಎದೆ ನೋವು ಕಾಣಸಿಕೊಂಡಿದೆ. ಮೊಹಮ್ಮದನ್ ಸ್ಪೋರ್ಟ್ಸ್ ಕ್ಲಬ್ ಮತ್ತು ಶಿನೆಪುಕರ್ ಕ್ರಿಕೆಟ್ ಕ್ಲಬ್ ನಡುವೆ ಪಂದ್ಯ ನಡೆಯುತ್ತಿತ್ತು. ಈ ಪಂದ್ಯದಲ್ಲಿ ಪಾಲ್ಗೊಂಡಿದ್ದ ತಮೀಮ್ ಇಕ್ಬಾಲ್‌ಗೆ ಇದ್ದಕ್ಕಿದ್ದಂತೆಯೇ ಎದೆನೋವು ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.

ಆರಂಭದಲ್ಲಿ ಅವರನ್ನು ಹೆಲಿಕಾಪ್ಟರ್ ಮೂಲಕ ಢಾಕಾಗೆ ಏರ್‌ಲಿಫ್ಟ್ ಮಾಡಲು ವ್ಯವಸ್ಥೆ ಮಾಡಲಾಗಿತ್ತು, ಆದರೆ ಅವರನ್ನು ಬಿಕೆಎಸ್‌ಪಿ ಮೈದಾನದಿಂದ ವಿಮಾನದಲ್ಲಿ ಕರೆದೊಯ್ಯಲು ಸಾಧ್ಯವಾಗಲಿಲ್ಲ. ನಂತರ ಅವರನ್ನು ಚಿಕಿತ್ಸೆಗಾಗಿ ಫಜಿಲತುನ್ನೆಸ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ಬಾಲ್ ಟ್ಯಾಂಪರಿಂಗ್ ಮಾಡಿದ್ರಾ ಸಿಎಸ್‌ಕೆ ಆಟಗಾರರು; ವೈರಲ್ ಆಯ್ತು ವೀಡಿಯೋ

‘ಆಸ್ಪತ್ರೆಯಲ್ಲಿ ಆರಂಭಿಕ ತಪಾಸಣೆ ನಡೆಸಿದ ವೇಳೆ ತಮೀಮ್ ಅವರಿಗೆ ಸಣ್ಣ ಪ್ರಮಾಣದಲ್ಲಿ ಹೃದಯಾಘಾತವಾಗಿರುವುದು ಕಂಡುಬಂದಿತ್ತು. ಹೀಗಾಗಿ ಢಾಕಾಗೆ ಏರ್‌ಲಿಫ್ಟ್ ಮಾಡಲು ಯೋಜಿಸಲಾಗಿತ್ತು. ಆದರೆ ಹೆಲಿಪ್ಯಾಡ್‌ಗೆ ಕರೆದೊಯ್ಯುವ ವೇಳೆ ಮತ್ತೆ ತೀವ್ರವಾಗಿ ಎದೆನೋವು ಕಾಣಿಸಿಕೊಂಡಿದೆ. ಹೀಗಾಗಿ ವಾಪಸ್ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿದೆ. ತಮೀಮ್ ಅವರಿಗೆ ತೀವ್ರವಾದ ಹೃದಾಯಾಘಾತವಾಗಿದೆ. ವೈದ್ಯಕೀಯ ತಂಡ ಸಾಧ್ಯವಿರುವ ಎಲ್ಲಾ ರೀತಿಯ ಚಿಕಿತ್ಸೆ ನೀಡುತ್ತಿದೆ’ ಎಂದು ಬಾಂಗ್ಲಾದೇಶ ಕ್ರಿಕೆಟ್ ಬೋರ್ಡ್‌ ಮುಖ್ಯ ವೈದ್ಯ ಡಾ.ದೆಬಾಶಿಶ್ ಚೌಧರಿ ಹೇಳಿದ್ದಾರೆ.

ತಮಿಮ್ ಇಕ್ಬಾಲ್ ಇದೇ ಜನವರಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ್ದರು. ಬಾಂಗ್ಲಾದೇಶ ಪರ 243 ಏಕದಿನ, 70 ಟೆಸ್ಟ್ ಹಾಗೂ 78 ಟಿ20 ಪಂದ್ಯಗಳನ್ನಾಡಿ ಒಟ್ಟಾರೆ 15 ಸಾವಿರಕ್ಕೂ ಅಧಿಕ ರನ್ ಬಾರಿಸಿದ್ದಾರೆ. ಮೂರು ಮಾದರಿಯ ಕ್ರಿಕೆಟ್‌ನಿಂದ ತಮೀಮ್ ಇಕ್ಬಾಲ್ ಬರೋಬ್ಬರಿ 25 ಶತಕ ಸಿಡಿಸಿದ್ದಾರೆ. ಈ ಮೂಲಕ ಬಾಂಗ್ಲಾದೇಶ ಪರ ಗರಿಷ್ಠ ಶತಕ ಸಿಡಿಸಿದ ಬ್ಯಾಟರ್ ಎಂಬ ದಾಖಲೆ ತಮಿಮ್ ಇಕ್ಬಾಲ್ ಹೆಸರಿನಲ್ಲಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page