Connect with us

LATEST NEWS

ಪ್ರೀತಿಸಿದವಳನ್ನೇ ಪಾಳು ಬಾವಿಗೆ ದೂಡಿ ಕೊಲ್ಲಲು ಯತ್ನಿಸಿ ಜೈಲು ಸೇರಿದ ಅಶೋಕ…!

Published

on

ಪ್ರೀತಿಸಿದವಳನ್ನೇ ಪಾಳು ಬಾವಿಗೆ ದೂಡಿ ಕೊಲ್ಲಲು ಯತ್ನಿಸಿ ಜೈಲು ಸೇರಿದ ಅಶೋಕ…!

ಬೆಂಗಳೂರು :  ಪ್ರಿಯಕರನ ಮಾತಿಗೆ ಮರುಳಾಗಿ ಗಂಡನ ಮನೆ ಬಿಟ್ಟು ಪರಾರಿಯಾಗಿದ್ದ ಗೃಹಿಣಿ 100 ಅಡಿ ಆಳದ ಪಾಳು ಬಾವಿಯಲ್ಲಿ 4 ರಾತ್ರಿ ಮತ್ತು 4 ಹಗಲುಗಳನ್ನು ಕಳೆದ ಘಟನೆ ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ನಡೆದಿದೆ.

ನಾಪತ್ತೆಯಾದ ಗೃಹಿಣಿಯನ್ನು ಹುಡುಕಾಡಿದ ಪೊಲೀಸರಿಗೆ ಗೊನೆಗೂ ಪಾಳುಬಾವಿಯಲ್ಲಿ ಬಿದ್ದು ನರಳಾಡುತ್ತಿದ್ದ ಗೃಹಿಣಿ ಸಿಕ್ಕಿದ್ದಾಳೆ.

ಬಳಿಕ ಆಕೆಯನ್ನು ಅಗ್ನಿಶಾಮಕ ದಳದವರು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಸಾವು ಬದುಕಿನ ನಡುವೆ ಹೋರಾಡುತ್ತಿರುವ ಆಕೆಯನ್ನ ಪ್ರಿಯಕರನೇ ಬಾವಿಗೆ ತಳ್ಳಿ, ಕೊಲ್ಲುವ ಯತ್ನ ನಡೆಸಿರುವ ಶಂಕೆ ವ್ಯಕ್ತವಾಗಿದ್ದು ಪೊಲೀಸರು ಇದೀಗ ಪ್ರಿಯಕರನ್ನು ಹಿಡಿದು ಲಾಕಪ್‌ ಗೆ ತಳ್ಳಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಎ. ರಂಗನಾಥಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಮಾಲೂರು ತಾಲೂಕಿನ ಸೊಣ್ಣಹಳ್ಳಿ ಗ್ರಾಮದ 23 ವರ್ಷದ ಗೃಹಿಣಿ ಅಮೃತಾ ಎಂಬಾಕೆಯನ್ನು ಪಾಳು ಬಾವಿಯಿಂದ ರಕ್ಷಣೆ ಮಾಡಲಾಗಿದೆ.

ಅಮೃತಾಳಿಗೆ ಸೊಣ್ಣಹಳ್ಳಿಯ ಅಶೋಕ್ ಎಂಬ ಯುವಕನೊಂದಿಗೆ ಎರಡು ವರ್ಷಗಳ ಹಿಂದೆ ಮದುವೆಯಾಗಿತ್ತು.

ಇವರಿಗೆ ಒಂದು ಗಂಡು ಮಗು ಸಹ ಇದೆ.

ಆದರೆ ಪ್ರಿಯಕರ ಇವರ ದಾಂಪತ್ಯ ಜೀವನದ ಮಧ್ಯೆ ಬಂದು  ಹುಳಿ ಹಿಂಡಿ ಬಳಿಕ ಅಮೃತಾಳನ್ನು ಪಾಳುಬಾವಿಯಲ್ಲಿ ನರಳುವಂತೆ ಮಾಡಿದ್ದಾನೆ.

 ಘಟನೆ ಹೇಗಾಯಿತು..!?

ಕಳೆದ ಶನಿವಾರ ಎಂದಿನಂತೆ ಅಮ್ರತಾಳ ಗಂಡ ಅಶೋಕ್ ಕೆಲಸಕ್ಕೆ ತೆರಳಿದ್ದಾನೆ. ಅತ್ತೆ- ಮಾವ ಹೊಲಕ್ಕೆ ಹೋಗಿದ್ದಾರೆ.

ಆಗ ಮಗುವನ್ನು ಪಕ್ಕದ ಮನೆಯವರಿಗೆ ಕೊಟ್ಟು ಮಾಲೂರಿಗೆ ಹೋಗುವುದ್ದಾಗಿ ಹೇಳಿದ ಅಮೃತಾ ಮಾಲೂರಿನ ಗಂಡನ ಮನೆ ಸೊಣ್ಣಹಳ್ಳಿ ಗ್ರಾಮದಿಂದ ನಾಪತ್ತೆಯಾಗಿದ್ದಳು.

ಅಂದು ನಾಪತ್ತೆಯಾಗಿದ್ದ ಅಮೃತಾಳನ್ನು ಗಂಡನ ಮನೆ ಕಡೆಯವರು ಹುಡುಕಾಟ ನಡೆಸಿದ್ದರೂ ಆಕೆಯ ಪತ್ತೆಯಾಗಿರಲಿಲ್ಲ.

ಅಮೃತಾಳನ್ನು ಶನಿವಾರವೇ ಕರೆಸಿಕೊಂಡಿದ್ದ ರಂಗನಾಥಪುರದಲ್ಲಿದ್ದ ಪ್ರಿಯಕರ ಆದರ್ಶ ಆಕೆಯನ್ನು 100 ಅಡಿ ಆಳದ ಪಾಳು ಬಾವಿಗೆ ತಳ್ಳಿ ಕೊಲೆ ಮಾಡಲು ಯತ್ನಿಸಿ ಪರಾರಿಯಾಗಿದ್ದಾನೆ.

ಕಳೆದ ನಾಲ್ಕು ದಿನಗಳಿಂದ ಬಾವಿಯಲ್ಲೆ ಬಿದ್ದಿದ್ದ ಅಮೃತಾ ಮೇಲೆ ಬರಲು ಆಗದೇ ಕಾಪಾಡಿ ಎಂದು ಕೂಗಿಕೊಂಡಿದ್ದಾಳೆ.

ಆದರೆ, ಯಾರೊಬ್ಬರೂ ಸಹಾಯಕ್ಕೆ ಬಂದಿರಲಿಲ್ಲ. ಪಾಳು ಬಾವಿಯಿಂದ ನಿರಂತರವಾಗಿ ಕೂಗಾಟದ ಶಬ್ದ ಕೇಳಿದ ಅಕ್ಕಪಕ್ಕದ ತೋಟದವರು ಭಯಗೊಂಡು ಹತ್ತಿರಕ್ಕೆ ಹೋಗದೆ ಪೊಲೀಸರಿಗೆ ಮಾಹಿತಿ ನೀಡಿದ್ದರು.

ನಿರ್ಜನ ಪ್ರದೇಶವಾದ್ದರಿಂದ‌ ಬಾವಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಅರಣ್ಯ ಸಹ ಇದ್ದು ಮರ-ಗಿಡಗಳ ಮಧ್ಯೆ ದೊಡ್ಡ ಬಾವಿಯ ಸಮೀಪಕ್ಕೆ ಯಾರೂ ಹೋಗುತ್ತಿರಲಿಲ್ಲ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಬಾವಿಯಲ್ಲಿ ಬಿದ್ದಿದ್ದ ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

ತೀವ್ರ ಅಸ್ವಸ್ಥವಾಗಿರುವ ಅಮೃತಾಳನ್ನು ದೇವನಹಳ್ಳಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಬಾವಿಗೆ ತಳ್ಳಿದ್ದ ಆದರ್ಶನ ಮಾಹಿತಿ ಪಡೆದಿರುವ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಪ್ರಕರಣವನ್ನ ದಾಖಲಿಸಿಕೊಂಡಿರುವ ವಿಜಯಪುರ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಸುಖ ಸಂಸಾರಕ್ಕೆ ಸಾಕ್ಷಿಯಾಗಿದ್ದ ಪುಟ್ಟ ಮಗು, ಗಂಡನಿಗೆ ಕೈ ಕೊಟ್ಟು ಪ್ರಿಯತಮನ ಮಾತಿಗೆ ಮರುಳಾಗಿ ಮನೆ ಬಿಟ್ಟು ಹೋದ ಅಮೃತಾ ಬಾವಿಯಲ್ಲಿ ನರಳಿ, ಜೀವನದ ಪಾಠ ಕಲಿತಿದ್ದು ಎಷ್ಟೋ ಗೊತ್ತಿಲ್ಲ.

ಸಾಂಸಾರಿಕ ಜೀವನ ಬಿಟ್ಟು ಪರ ಪುರುಷರು, ಮಹಿಳೆಯರ ಹಿಂದೆ ಬೀಳುವರಿಗೆ ಮಾತ್ರ ಈ ಘಟನೆ ಒಂದು ಪಾಠವಾಗಿದೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಉದ್ಯಮಿಯನ್ನು ‘ಹನಿಟ್ರ್ಯಾಪ್’ ಮಾಡಲು ಹೋಗಿ ತಗಲಾಕ್ಕೊಂಡ ನರ್ಸ್ & ಗ್ಯಾಂಗ್

Published

on

ಮಂಗಳೂರು/ದಾವಣಗೆರೆ : ಖಾಸಗಿ ಆಸ್ಪತ್ರೆ ನರ್ಸ್​​ ಒಬ್ಬಳು ಕಷ್ಟ ಎಂದು ಹೇಳಿಕೊಂಡು ಬಂದು ಉದ್ಯಮಿಗೆ ಗಾಳ ಹಾಕಿದ್ದಳು. ಆದರೆ, ಹಾಳು ಬುದ್ದಿ  ತೋರಿಸಿ ಇದೀಗ ಜೈಲು ಪಾಲಾಗಿದ್ದಾಳೆ. ಈ ಘಟನೆ ನಡೆದಿರೋದು ದಾವಣಗೆರೆಯಲ್ಲಿ.

ಸುಶ್ಮಿತಾ, ಬೆಕ್ಕಿನಕಣ್ಣು ಕೃಷ್ಣ, ರಾಹುಲ್, ಚನ್ನಬಸಪ್ಪ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.

ಪರಿಚಯ…ಸಲುಗೆ…ಹನಿಟ್ರ್ಯಾಪ್ :

ಉದ್ಯಮಿ ಪ್ರಭು ಎನ್ನುವರನ್ನು ಪರಿಚಯ ಮಾಡಿಕೊಂಡ ನರ್ಸ್ ಸುಶ್ಮಿತಾ, ಮಕ್ಕಳ ಶಾಲಾ ಶುಲ್ಕ ಕಟ್ಟಬೇಕು, ಸಹಾಯ ಮಾಡುವಂತೆ ಕೇಳಿಕೊಂಡಿದ್ದಳು. ಬಳಿಕ ಈ ಪರಿಚಯ ಸ್ನೇಹವಾಗಿ ಬದಲಾಗಿತ್ತು. ಸುಶ್ಮಿತಾ ಒಂದು ತಿಂಗಳ ಹಿಂದೆ ಮೊದಲ ಬಾರಿಗೆ ಪ್ರಭುರನ್ನು ಅಪಾರ್ಟ್ಮೆಂಟ್‌ಗೆ ಕರೆಯಿಸಿಕೊಂಡಿದ್ದಳು. ಹೀಗೆ ಹಲವು ಬಾರಿ ಸರ್ವಿಸ್ ಅಪಾರ್ಟ್ಮೆಂಟ್‌ನಲ್ಲಿ ಇಬ್ಬರ ಭೇಟಿ ನಡೆಯುತ್ತಿತ್ತು.

ಇದನ್ನೂ ಓದಿ : ಆದಿಲಕ್ಷ್ಮೀ ಪುರಾಣ ಸೀರಿಯಲ್‌ನಿಂದ ಹೊರನಡೆದ ನಟಿ!

ಸುಶ್ಮಿತಾ ಹಾಗೂ ಪ್ರಭು ಒಟ್ಟಿಗೆ ಇದ್ದ ವೀಡಿಯೋವನ್ನು ಇತರ ಆರೋಪಿಗಳು ಮಾಡಿಕೊಂಡಿದ್ದರು. ಬಳಿಕ ಇದನ್ನೇ ಅಸ್ತ್ರವನ್ನಾಗಿಸಿಕೊಂಡಿದ್ದಾರೆ. ರೂಮಿಗೆ ನುಗ್ಗಿ, ವೀಡಿಯೋವನ್ನು ಸೋಷಿಯಲ್ ಮೀಡಿಯಾಗೆ ಹಾಕುತ್ತೇವೆ ಎಂದು ಹೆದರಿಸಿ  25 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಕೊನೆಗೆ ಪ್ರಭು, 12 ಲಕ್ಷಕ್ಕೆ ಒಪ್ಪಿಕೊಂಡಿದ್ದು, ಎರಡು ದಿನದಲ್ಲಿ ಹಣ ಕೊಡುವುದಾಗಿ ಹೇಳಿ ಅಲ್ಲಿಂದ ತಪ್ಪಿಸಿಕೊಂಡು ಬಂದಿದ್ದಾರೆ. ಆರೋಪಿಗಳ ಬೆ*ದರಿಕೆಗೆ ಬೇಸತ್ತು ಠಾಣೆಗೆ ಪ್ರಭು ದೂರು ನೀಡಿದ್ದು,  ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Continue Reading

LATEST NEWS

ರಿಪ್ಪನ್‌ ಪೇಟೆ ಬಳಿ ಬೀಕರ ಅಗ್ನಿ ಅವಘಡ, ರಸ್ತೆ ಮಧ್ಯೆಯೇ ಬೆಂಕಿಗಾಹುತಿಯಾದ ಕಾರು

Published

on

ಶಿವಮೊಗ್ಗ: ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ನಡೆದಿದೆ.


ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ ನಿಮಿತ್ತವಾಗಿ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದೆ. ಕಾರಿನ ಎಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

ಇದನ್ನೂ ಓದಿ: ಮಲಗಿದ್ದಲ್ಲೇ ಆರೋಗ್ಯ ಇಲಾಖೆ ನೌಕರ ಹೃದಯಾ*ಘಾತಕ್ಕೆ ಬ*ಲಿ

ಚಾಲಕ ಶ್ರೀಕಾಂತ್ ಮತ್ತು ಮತ್ತೊಬ್ಬ ಪ್ರಯಾಣಿಕ ಗಂಗಾಧರ ಗೌಡ ಅವರು ಹೊಗೆ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಉರಿದು ಸಂಪೂರ್ಣವಾಗಿ ಭಸ್ಮವಾಗಿದೆ.

Continue Reading

FILM

‘ನಮ್ಮನ್ನ ಯಾಕೆ ಮದುವೆಗೆ ಕರೆದಿಲ್ಲ?’: ವಿಜಯ್-ರಶ್ಮಿಕಾ ವಿರುದ್ಧ ಮುನಿಸಿಕೊಂಡ ಪುಟ್ಟ ಅಭಿಮಾನಿ!

Published

on

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇತ್ತೀಚೆಗೆ ಉದಯಪುರದಲ್ಲಿ ವಿವಾಹವಾದರು. ಈ ಮದುವೆಗೆ ತನ್ನನ್ನು ಕರೆದಿಲ್ಲ ಎಂದು ಪುಟ್ಟ ಅಭಿಮಾನಿಯೊಬ್ಬರು ಕೋಪದಿಂದ ವಿಡಿಯೋ ಮಾಡಿದ್ದು, ಅದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಆ ಪುಟ್ಟ ಬಾಲಕಿ ವಿಡಿಯೋದಲ್ಲಿ, “ನಾನು ಕೂಡ ನಿಮ್ಮ ಅಭಿಮಾನಿಯಲ್ಲವೇ? ನಮ್ಮನ್ನು ಯಾಕೆ ಮದುವೆಗೆ ಕರೆಯಲಿಲ್ಲ?” ಎಂದು ಮುಗ್ಧವಾಗಿ ಪ್ರಶ್ನಿಸಿದ್ದಾಳೆ.
ಈ ವಿಡಿಯೋಗೆ ವಿಜಯ್ ಅವರು ತುಂಬಾ ಪ್ರೀತಿಯಿಂದ ಪ್ರತಿಕ್ರಿಯಿಸಿದ್ದಾರೆ. “ಬುಜ್ಜಿ ತಲ್ಲಿ.. ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತೇನೆ. ನಿನಗೆ ಇಷ್ಟವಾದ ಅಡುಗೆ ಮತ್ತು ಸಿಹಿತಿಂಡಿಗಳನ್ನು ಹೇಳು, ಮನೆಯಲ್ಲಿ ಎಲ್ಲವನ್ನೂ ಮಾಡಿಸಿ ಒಟ್ಟಿಗೆ ತಿನ್ನೋಣ” ಎಂದು ಕಮೆಂಟ್ ಮಾಡಿದ್ದಾರೆ.

ನಟಿ ರಶ್ಮಿಕಾ ಕೂಡ ಈ ವಿಡಿಯೋವನ್ನು ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡಿದ್ದು, ಆ ಬಾಲಕಿಗೆ ವಿಶೇಷ ಉಡುಗೊರೆ ನೀಡುವುದಾಗಿ ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ತರಗತಿಯಲ್ಲೇ ಮಲಗಿ ವಿದ್ಯಾರ್ಥಿನಿಯರಿಂದ ಮಸಾಜ್ ಮಾಡಿಸಿಕೊಂಡ ಶಿಕ್ಷಕಿ; ವಿಡಿಯೋ ವೈರಲ್!

ಈ ದಂಪತಿಗಳು ತಮ್ಮ ಮದುವೆಯ ನಂತರ ದೇವಸ್ಥಾನಗಳಲ್ಲಿ ಸಿಹಿತಿಂಡಿ ಹಂಚುವ ಮೂಲಕ ಮತ್ತು ಅಭಿಮಾನಿಗಳೊಂದಿಗೆ ವಿಶೇಷ ಊಟ ಮಾಡುವ ಮೂಲಕ ಸಂಭ್ರಮವನ್ನು ಆಚರಿಸಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page