Connect with us

LATEST NEWS

ಪ್ರೀತಿಸಿದ ಹುಡುಗಿಗೆ ಚೂರಿ ಇರಿದ ಪ್ರಿಯಕರ..!

Published

on

ಹಾವೇರಿ: ಯುವಕನೋರ್ವ ತಾನು ಪ್ರೀತಿಸಿದ ಹುಡುಗಿ ಬೇರೊಂದು ಯುವಕನ ಜೊತೆ ಸಂಪರ್ಕದಲ್ಲಿ ಇದ್ದಾಳೆ ಎಂದು ಪ್ರೇಯಸಿಗೆ ಚೂರಿ ಇರಿದ ಘಟನೆ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ನಡೆದಿದೆ.


ಮಹೇಶ್ ಮೈಸೂರು ಎಂಬಾತ ಪ್ರೇಯಸಿ ಲಕ್ಷ್ಮಿ ಪವಾರ್ ಎಂಬಾಕೆಗೆ ಚಾರಿ ಇರಿದಿದ್ದಾನೆ. ಲಕ್ಷ್ಮಿ ಪವಾರ್ ಖಾಸಗಿ ಮೆಡಿಕಲ್ ಶಾಪ್ ಒಂದರಲ್ಲಿ ಕೆಲಸ ಮಾಡುತ್ತಿದ್ದಳು. ಆಕೆಯನ್ನು ಮಹೇಶ್ 2 ವರ್ಷಗಳಿಂದ ಪ್ರೀತಿಸುತ್ತಿದ್ದನು. ಆದರೆ ಇತ್ತೀಚೆಗೆ ಆಕೆ ಬೇರೊಬ್ಬ ಹುಡುಗನೊಂದಿಗೆ ಸಲುಗೆಯಿಂದ ಇದ್ದಾಳೆ ಎಂಬ ವಿಚಾರ ತಿಳಿದು ಕೋಪಗೊಂಡ ಆರೋಪಿ ಮಹೇಶ್ ಲಕ್ಷ್ಮಿ ಪವಾರ್ ಗೆ ಚೂರಿ ಇರಿದಿದ್ದಾನೆ. ಚಾಕು ಇರಿತದಿಂದ ಯುವತಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಘಟನಾ ಸ್ಥಳಕ್ಕೆ ಬಂದ ಶಿಗ್ಗಾವಿ ಪೊಲೀಸರು ಪ್ರೇಮಿ ಮಹೇಶ್‌ನನ್ನ ಬಂಧಿಸಿದ್ದಾರೆ.

DAKSHINA KANNADA

ಬಸ್ಸಿನಲ್ಲಿ ಕುಳಿತ ಸೀಟಿನಲ್ಲೇ ಸಾವನ್ನಪ್ಪಿದ ಪ್ರಯಾಣಿಕ

Published

on

ಶಿರ್ವ : ಕೆಎಸ್‌ಆರ್‌ಟಿಸಿ ಐರಾವತ ಬಸ್ಸಿನಲ್ಲಿ ಕುಳಿತಿದ್ದ ಪ್ರಯಾಣಿಕರೊಬ್ಬರು ಬಸ್ಸಿನ ಸೀಟಿನಲ್ಲಿ ಕುಳಿತಲ್ಲಿಯೇ ಮೃತಪಟ್ಟ ಘಟನೆ ಶಿರ್ವ – ಮುಂಬೈನಿಂದ ಉಡುಪಿ-ಶಿರ್ವ-ಮೂಡುಬಿದಿರೆಯಾಗಿ ಮಂಗಳೂರಿಗೆ ತೆರಳುತ್ತಿದ್ದ ಬಸ್ಸಿನಲ್ಲಿ  ಎ. 21 ರಂದು ಮುಂಜಾನೆ ನಡೆದಿದೆ.

ಮೃತರನ್ನು ಕುಮಟಾ ಮೂಲದ ಪ್ರಯಾಣಿಕ ಸುಮಾರು 45 ವರ್ಷ ಪ್ರಾಯದ ಸತ್ಯ ಭಂಡಾರಿ ಎಂದು ಗುರುತಿಸಲಾಗಿದೆ. ಮೃತದೇಹವನ್ನು ಅಂಬುಲೆನ್ಸ್‌ನಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.

ಸತ್ಯ ಭಂಡಾರಿ ಪ್ರಯಾಣದ ಸಂಧರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರಬೇಕೆಂದು ಶಂಕಿಸಲಾಗಿದೆ.

Continue Reading

BELTHANGADY

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಮೂವರು ಗಂಭೀರ

Published

on

ಬೆಳ್ತಂಗಡಿ : ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ಸಮಿಪದ ಗುರುವಾಯನಕೆರೆ-ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ನಿನ್ನೆ (ಏ.21) ಸಂಜೆ ನಡೆದಿದೆ.

ಅಳದಂಗಡಿಯಿಂದ ಗುರುವಾಯನಕೆರೆ ಕಡೆ ಹೋಗುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳದತ್ತ ಪ್ರಯಾಣ ಮಾಡುತ್ತಿದ್ದ ಕಾರುಗಳು ಪರಸ್ಪರ ಡಿಕ್ಕಿ ಹೊಡೆದಿದೆ.

ಈ ಘಟನೆಯಲ್ಲಿ ಗೇರುಕಟ್ಟೆಯ ಕುಸುಮಾವತಿ (75), ಭಾಗ್ಯವತಿ (50), ವೈಭವ್‌ (23) ಎಂಬುವವರು ಗಂಭೀರ ಗಾಯಗೊಂಡಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Continue Reading

LATEST NEWS

ಕಾಣಿಕೆ ಡಬ್ಬಿ ಒಡೆದು ಕಳ್ಳತನ; ಕಿಡಿಗೇಡಿಗಳು ಪರಾರಿ

Published

on

ಮಲ್ಪೆ : ಕರಾವಳಿ ದೈವ, ದೇವರ ಆರಾಧನೆಗೆ ಹೆಸರಾದ ನಾಡು. ಆದರೆ ಇಂತಹ ಪುಣ್ಯ ಭೂಮಿಯಲ್ಲೂ ದುಷ್ಕೃತ್ಯಗಳು ಹೆಚ್ಚಾಗುತ್ತಿದೆ. ಇದೀಗ ದೈಸ್ಥಾನದ ಡಬ್ಬಿಯನ್ನೇ ಹೊಡೆದು , ಕಳ್ಳತ ಮಾಡಿ, ಕಿಡಿಗೇಡಿಗಳು ಪರಾರಿಯಾಗಿರುವ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ.

ಮಲ್ಪೆಯ ಕೊಡವೂರು ಪಾಳೆಕಟ್ಟೆ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ದೇವರಬೆಟ್ಟು ಆವರಣ ಗೋಡೆಯ ಹೊರಭಾಗದಲ್ಲಿ ಇಟ್ಟಿದಂತಹ ಕಾಣಿಕೆ ಡಬ್ಬಿಯನ್ನು ಒಡೆದು ಅದರಲ್ಲಿರುವ ಹಣವನ್ನು ಕಳವು ಮಾಡಿ ಖದೀಮರು ಪರಾರಿಯಾಗಿದ್ದಾರೆ.

ಎ.19 ರಂದು ಸಂಜೆ 6 ರಿಂದ 8.45 ರ ಸುಮಾರಿಗೆ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಕಾಣಿಕೆ ಡಬ್ಬಿಯಲ್ಲಿದ್ದ 15ಸಾವಿರ ಹಣ ಕಳವು ಮಾಡಲಾಗಿರುವ ಕುರಿತು ಮಲ್ಪೆ ಠಾಣೆಯಲ್ಲಿ ದಾಖಲಾದ ದೂರಿನಲ್ಲಿ ತಿಳಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page