Connect with us

ಮಹಾಕುಂಭ ಮೇಳ 2025: ಗಮನ ಸೆಳೆಯುತ್ತಿರುವ ನಾಗಾ ಸಾಧ್ವಿಗಳು

Published

on

ಮಂಗಳೂರು/ಪ್ರಯಾಗ್‌ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳ-2025 ಜನವರಿ 13 ಕ್ಕೆ ಆರಂಭವಾಗಿದ್ದು, ಫೆಬ್ರುವರಿ 26ರ ತನಕ ನಡೆಯಲಿದೆ. ಮಹಾ ಕುಂಭಮೇಳ ಐತಿಹಾಸಿಕ ಹಿನ್ನಲೆಯನ್ನು ಹೊಂದಿದ್ದು, ಅಪಾರವಾದ ನಂಬಿಕೆ, ಶ್ರದ್ಧೆಯು ಸಂಕೇತವಾಗಿದೆ. ಉತ್ತರ ಪ್ರದೇಶ ಸರ್ಕಾರ ಮಹಾ ಕುಂಭಮೇಳಕ್ಕಾಗಿ ಅಚ್ಚುಕಟ್ಟಾದ ವ್ಯವಸ್ಥೆಯನ್ನು ಮಾಡಿದೆ. ಪ್ರಯಾಗ್‌ರಾಜ್‌ನಲ್ಲಿ ಆರಂಭವಾಗಿರುವ ಮಹಾ ಕುಂಭಮೇಳ ಬಹಳ ವಿಶೇಷವಾಗಿದ್ದು, 114 ವರ್ಷಗಳ ಬಳಿಕ ಈ ಮಹಾ ಕುಂಭಮೇಳ ನಡೆಯುತ್ತಿದೆ. ಇಲ್ಲಿ ದೇಶದ ನಾಗಾಸಾಧುಗಳು ಆಗಮಿಸಿದ್ದು, ಇದೀಗ ಮಹಿಳಾ ನಾಗಾಸಾಧುಗಳು ಬಹಳ ವಿಶೇಷವಾಗಿ ಆಕರ್ಷಣೀಯರಾಗಿ ಗುರುತಿಸಿಕೊಳ್ಳುತ್ತಿದ್ದಾರೆ.

ಪುರುಷ ನಾಗಾ ಸಾಧುಗಳಂತೆ ಸ್ತ್ರೀ ನಾಗಾ ಸಾಧುಗಳೂ ಇದ್ದು, ಅವರು ಕುಟುಂಬ ಮತ್ತು ಭೌತಿಕ ಆಸ್ತಿಗಳ ಜೊತೆಗೆ ತಮ್ಮ ಎಲ್ಲಾ ಬಾಂಧವ್ಯಗಳನ್ನು ಕಡಿದು, ತಪಸ್ಸಿನ ಜೀವನವನ್ನು ಸ್ವೀಕರಿಸುತ್ತಾರೆ. ನಾಗಾ ಸಾಧ್ವಿಗಳಿಗೆ ನೀಡುವ ದೀಕ್ಷಾ ಪ್ರಕ್ರಿಯೆಯೂ ಪುರುಷರಿಗೆ ನೀಡುವುದರಷ್ಟೇ ಕಠಿಣವಾಗಿದೆ. ಅವರು ತಮ್ಮ ಗುರುಗಳಿಗೆ ಅಚಲವಾದ ಬದ್ಧತೆಯನ್ನು ಪ್ರದರ್ಶಿಸಬೇಕು. ಗುರು ಆಕೆಯನ್ನು ಒಪ್ಪಿಕೊಳ್ಳುವ ಮೊದಲು ತೀವ್ರವಾದ ಆಧ್ಯಾತ್ಮಿಕ ಪರೀಕ್ಷೆಗಳು ಮತ್ತು ತರಬೇತಿಗಳಿಗೆ ಒಳಗಾಗಬೇಕು. ಆಧ್ಯಾತ್ಮಿಕ ಅನ್ವೇಷಣೆಗಾಗಿ ತಮ್ಮ ಲೌಕಿಕ ಜೀವನವನ್ನು ಸಂಪೂರ್ಣವಾಗಿ ತ್ಯಜಿಸಿರುತ್ತಾರೆ. ಅವರು ತಮ್ಮ ಹಿಂದಿನ ಜೀವನದಿಂದ ಎಲ್ಲವನ್ನೂ ಬಿಟ್ಟು ಆಧ್ಯಾತ್ಮಿಕ ಮಾರ್ಗಕ್ಕೆ ತಮ್ಮನ್ನು ಸಂಪೂರ್ಣವಾಗಿ ಅರ್ಪಿಸಿಕೊಳ್ಳುತ್ತಾರೆ. ಸಾಮಾನ್ಯವಾಗಿ ಸ್ತ್ರೀ ನಾಗಾಸಾಧುಗಳು ವಿರಕ್ತ ಹಿನ್ನೆಲೆಯಿಂದ ಬಂದವರಾಗಿರುತ್ತಾರೆ. ಸಂಸಾರ, ದಾಂಪತ್ಯದ ಕಡೆಗೆ ಇವರು ಹೊರಳುವಂತಿಲ್ಲ. ಹಾಗೆ ಹೋದರೆ ಅವರನ್ನು ನಾಗಾ ಪಂಥದಿಂದ ತೆಗೆಯುಲಾಗುತ್ತದೆ.

ನಾಗಾ ಸಾಧ್ವಿಗಳು ಆಂತರಿಕವಾಗಿ ಹೆಚ್ಚಿನ ಸಾಧನೆ ಮಾಡುತ್ತಾರೆ. ಯಾಕೆಂದರೆ ಪುರುಷರಿಗಿಂತ ಇವರ ಹಾರ್ಮೋನುಗಳು ದೇಹದಲ್ಲಿ ಈ ಕಠಿಣ ವ್ರತಗಳ ಸಂದರ್ಭದಲ್ಲಿ ಯದ್ವಾತದ್ವಾ ವರ್ತಿಸುತ್ತವೆ. ಜೊತೆಗೆ, ಇವರು ಆಕರ್ಷಕವಾಗಿದ್ದರೆ, ಇತರ ಪುರುಷರ ಅಥವಾ ನಾಗಾ ಸಾಧುಗಳ ವೇಷದಲ್ಲಿರುವ ದುರುಳರ ಕಣ್ಣು ಕೂಡ ಇವರ ಮೇಲೆ ಬಿದ್ದು ಅನಾಹುತ ಆಗುವ ಸಾಧ್ಯತೆಗಳಿರುತ್ತವೆ. ಆದರೆ ಪರಿಪಕ್ವ ನಾಗಾ ಸಾಧ್ವಿಗಳು ತಮ್ಮ ಕಠೋರವಾದ ದೃಷ್ಟಿ ಮಾತ್ರದಿಂದಲೇ ದುಷ್ಟರನ್ನು ಹಿಮ್ಮೆಟ್ಟಿಸಬಲ್ಲರು. ದೀಕ್ಷೆಗೆ ಮುನ್ನ ನಾಗಾ ಸಾಧ್ವಿಗಳು ಆರರಿಂದ ಹನ್ನೆರಡು ವರ್ಷಗಳ ಕಾಲ ಕಟ್ಟುನಿಟ್ಟಾದ ಬ್ರಹ್ಮಚರ್ಯವನ್ನು ಪಾಲಿಸಬೇಕಾಗುತ್ತದೆ. ಅವರು ತಮ್ಮ ಸಾಧನೆ ಅಥವಾ ತೀವ್ರವಾದ ತಪಸ್ಸಿನ ಸಮಯದಲ್ಲಿ ಸಾಮಾನ್ಯವಾಗಿ ಗುಹೆಗಳು, ಕಾಡುಗಳು ಅಥವಾ ಪರ್ವತಗಳಂತಹ ಪ್ರತ್ಯೇಕ ಸ್ಥಳಗಳಲ್ಲಿ ವಾಸವಿರಬೇಕಾಗುತ್ತದೆ. ಸಾಮಾನ್ಯವಾಗಿ ನಾಗಾ ಸಾಧ್ವಿಗಳು ಅಖಾಡಗಳು ಅಥವಾ ಸನ್ಯಾಸಿಗಳಿರುವ ಆಶ್ರಮಗಳಲ್ಲಿ ವಾಸಿಸುತ್ತಾರೆ. ಪುರುಷ ನಾಗಾ ಸಾಧುಗಳು ಮೈಮೇಲೆ ಒಂದೆಳೆ ಬಟ್ಟೆಯಿಲ್ಲದೆ ಓಡಾಡಬಲ್ಲರು. ಆದರೆ ಸಾಧ್ವಿಗಳು ಹಾಗೆ ಮಾಡಲಾರರು. ಯಾಕೆಂದರೆ ಸಮಾಜ ಅವರನ್ನು ಹಾಗೆ ಒಪ್ಪಿಕೊಳ್ಳಲಾರದು. ಬದಲಾಗಿ ಅವರು “ಗಂಟಿ” ಎಂದು ಕರೆಯಲ್ಪಡುವ ಕುಂಕುಮ ಬಣ್ಣದ ಬಟ್ಟೆಯನ್ನು ಧರಿಸಬೇಕು. ತಲೆಕೂದಲು ಕತ್ತರಿಸದೆ ಜಟೆ ಬಿಟ್ಟಿರಬೇಕು. ಹಣೆಯ ಮೇಲಿನ ವಿಶಿಷ್ಟ ತಿಲಕದಿಂದ ಸಾಧ್ವಿಗಳೆಂದು ಗುರುತಿಸಲ್ಪಡುತ್ತಾರೆ.

ಮಹಿಳೆಯರು ಸನ್ಯಾಸ ಸ್ವೀಕಾರ ಆಚರಣೆಯ ಭಾಗವಾಗಿ ತಮ್ಮದೇ ‘ಪಿಂಡದಾನ’ವನ್ನು ಮಾಡಬೇಕು. ಸಾಮಾನ್ಯವಾಗಿ ಇದು ಮರಣದ ನಂತರ ನಡೆಸಲಾಗುವ ಸಾಂಪ್ರದಾಯಿಕ ಆಚರಣೆ. ಇದು ಅವರ ಹಿಂದಿನ ಜೀವನದ ಅಂತ್ಯ ಮತ್ತು ಸನ್ಯಾಸಿಗಳಾಗಿ ಅವರ ಪುನರ್ಜನ್ಮವನ್ನು ಸಂಕೇತಿಸುತ್ತದೆ. ನಾಗಾ ಸಾಧ್ವಿಗಳು ನಾಗಾ ಸಮುದಾಯದಲ್ಲಿ ಗೌರವಾನ್ವಿತ ಸ್ಥಾನ ಹೊಂದಿರುತ್ತಾರೆ. ಅವರನ್ನು “ಮಾತಾ” (ತಾಯಿ) ಎಂದು ಸಂಬೋಧಿಸಲಾಗುತ್ತದೆ. ನಾಗಾ ಸಾಧ್ವಿಗಳು ತಮ್ಮ ಅಸಾಧಾರಣ ಆಧ್ಯಾತ್ಮಿಕ ಶಕ್ತಿ ಮತ್ತು ಕಠಿಣವಾದ ವ್ರತಗಳಿಗಾಗಿ ಖ್ಯಾತರಾಗಿದ್ದಾರೆ. ಮಹಾ ಕುಂಭಮೇಳದಲ್ಲಿ ಅವರ ಉಪಸ್ಥಿತಿಯನ್ನು ಆಶೀರ್ವಾದವೆಂದು ಪರಿಗಣಿಸಲಾಗುತ್ತದೆ. ಇವರು ಎಲ್ಲರ ಆಧ್ಯಾತ್ಮಿಕ ಬೆಳವಣಿಗೆ ಮತ್ತು ಸ್ವಯಂ-ಸಾಕ್ಷಾತ್ಕಾರದ ಪ್ರಾಮುಖ್ಯತೆಯನ್ನು ನೆನಪಿಸುವವರಂತೆ ಕಾರ್ಯನಿರ್ವಹಿಸುತ್ತಾರೆ.

Advertisement
Click to comment

Leave a Reply

Your email address will not be published. Required fields are marked *

LATEST NEWS

ಇನ್ನು ಮುಂದೆ ಕೆ.ಪಿ.ಎಸ್.ಸಿ ಪರೀಕ್ಷೆ ಬರೆಯಲು ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್ ಕಡ್ಡಾಯ

Published

on

ಬೆಂಗಳೂರು: ಫೆ.16ರಿಂದ ಕರ್ನಾಟಕ ಲೋಕ ಸೇವಾ ಆಯೋಗವು(ಕೆಪಿಎಸ್‍ಸಿ) ನಡೆಸುವ ಮುಂದಿನ ಎಲ್ಲಾ ಪರೀಕ್ಷೆಗಳನ್ನು ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್‍ಗಳನ್ನು ಮಾತ್ರ ಬಳಸಬೇಕು ಎಂದು ಆಯೋಗದ ಸಹಾಯಕ ಕಾರ್ಯದರ್ಶಿ ಟಿ. ಪ್ರಕಾಶ್ ಆದೇಶಿಸಿದ್ದಾರೆ.

ಈ ಮೊದಲು ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯಲು ಅಭ್ಯರ್ಥಿಗಳಿಗೆ ಕಪ್ಪು ಬಾಲ್ ಪೆನ್ ಅನ್ನು ಬಳಸಲಾಗುತ್ತಿತ್ತು. ಇದೀಗ ಈ ಸೂಚನೆಯನ್ನು ಮಾರ್ಪಡಿಸಲಾಗಿದೆ. ಕಪ್ಪು ಬಾಲ್ ಪಾಯಿಂಟ್ ಪೆನ್ ಬದಲು ನೀಲಿ ಬಣ್ಣದ ಬಾಲ್ ಪಾಯಿಂಟ್ ಪೆನ್‍ಗಳನ್ನು ಮಾತ್ರ ಬಳಸಬೇಕು ಎಂದು ಅವರು ಶುಕ್ರವಾರ ಪ್ರಕಟನೆ ಹೊರಡಿಸಿದ್ದಾರೆ.

Continue Reading

LATEST NEWS

ಬೀದರ್ ನಲ್ಲಿ ಮರ್ಯಾದಾ ಹತ್ಯೆ..! ಮಗಳನ್ನೇ ಕೊಂದ ತಂದೆ

Published

on

ಬೀದರ್: ಪ್ರೀತಿ ಮಧುರ ತ್ಯಾಗ ಅಮರ ಎನ್ನುವ ಮಾತಿದೆ. ಅಲ್ಲದೇ ಪ್ರೇಮಿಗಳ ದಿನ ಬರಲು ಇನ್ನೇನು ಸಮೀಪದಲ್ಲಿದೆ. ಇತ್ತೀಚಿನ ದಿನಗಳಲ್ಲಿ ಪ್ರೀತಿ ಮಾಡಿ ಮದುವೆ ಆಗುವವರ ಸಂಖ್ಯೆಯೇ ಹೆಚ್ಚಾಗಿದೆ. ಮಕ್ಕಳು ಪ್ರೀತಿ ಮಾಡುತ್ತಿದ್ದಾರೆ ಎಂದರೆ ಪೋಷಕರಿಗೆ ಸ್ವಲ್ಪ ಭಯ ಇದ್ದೇ ಇರುತ್ತದೆ. ಯಾಕೆಂದರೆ ಹೊತ್ತು, ಹೆತ್ತು ಸಾಕಿ ಸಲಹಿದ ಮಗಳ ಕಾಳಜಿ ಬೆಟ್ಟದಷ್ಟಿರುತ್ತದೆ. ಪ್ರೀತಿಯಿಂದ ಸಾಕಿದ ಮಕ್ಕಳನ್ನು ಒಂದು ಒಳ್ಳೆಯ ಮನೆಗೆ ಕೊಡಬೇಕು ಎಂದು ಹೆತ್ತವರು ಆಸೆ ಪಡುತ್ತಾರೆ. ಕೆಲವರು ಮನೆಯವರ ಒಪ್ಪಿಗೆಯ ಮೇಲೆ ಪ್ರೀತಿ ಮಾಡಿ ಮದುವೆ ಆಗುತ್ತಾರೆ. ಆದರೆ ಇಲ್ಲೊಬ್ಬ ತಂದೆ ತನ್ನ ಮಗಳನ್ನೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.

ಹೌದು ಇಂತಹದೊಂದು ಘಟನೆ ನಡೆದಿರುವುದು ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾ ಎನ್ನುವ ಗ್ರಾಮದಲ್ಲಿ. ಮಗಳು ತಂದೆಯ ಬಳಿ ನಾನು ಒಬ್ಬನನ್ನು ಇಷ್ಟ ಪಡುತ್ತಿದ್ದೇನೆ. ಅವನೊಂದಿಗೆ ನನ್ನ ವಿವಾಹ ಮಾಡಿಕೊಡಿ ಎಂದು ಹೇಳಿದ್ದಕ್ಕೆ ತಂದೆ ಮಗಳನ್ನೇ ಕೊಲೆ ಮಾಡಿ ಬಳಿಕ ಪರಾರಿಯಾಗಿದ್ದಾನೆ.

ಮಗಳ ಪ್ರೀತಿಯನ್ನು ನಿರಾಕರಿಸಿದ ತಂದೆ

ಮೋನಿಕಾ ಮೋತಿರಾಮ ಜಾಧವ್ (18) ಕೊಲೆಯಾದ ಯುವತಿ. ಮೋನಿಕಾ ಒಬ್ಬ ಯುವಕನನ್ನು ತುಂಬಾ ಸಮಯದಿಂದ ಪ್ರೀತಿಸುತ್ತಿದ್ದಳು. ಇದನ್ನು ತಂದೆಯ ಬಳಿ ಹೇಳಿದಾಗ ತಂದೆ ಅದನ್ನು ನಿರಾಕರಿಸಿ, ಈ ಪ್ರೀತಿ ಪ್ರೇಮದಿಂದ ನೀನು ದೂರವಿರಬೇಕು. ಅವನನ್ನು ಮರೆತು ಬಿಡು. ನಾನು ನಿನಗೆ ಒಳ್ಳೆಯ ಹುಡುಗನನ್ನು ನೋಡುತ್ತೇನೆ ಎಂದು ಮಗಳಿಗೆ ತಿಳುವಳಿಕೆ ಹೇಳಿದ್ದರು.

ಕುತ್ತಿಗೆಗೆ ಹಗ್ಗ ಬಿಗಿದು ಕೊಲೆ

ಆದರೂ ಮೋನಿಕಾ ತನ್ನ ಹುಡುಗನನ್ನು ಬಿಡಲು ಒಪ್ಪಿರಲಿಲ್ಲವಂತೆ. ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುತ್ತೇನೆ ಎಂದು ಹಠ ಮಾಡಿದ್ದಾಳೆ. ಮಗಳ ಮೇಲೆ ಕೋಪಗೊಂಡಿದ್ದ ತಂದೆ, ಮನೆಯಲ್ಲಿ ಯಾರು ಇಲ್ಲದ ವೇಳೆ ಅಡುಗೆ ಮಾಡುತ್ತಿದ್ದ ಮಗಳ ಕುತ್ತಿಗೆಗೆ ಹಗ್ಗ ಬಿಗಿದು ಅವಳ ಕಥೆಯನ್ನು ಮುಗಿಸಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವದಿಂದ ಮೋನಿಕಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಈ ಕುರಿತು ಸಂತಪೂರ ಪೊಲೀಸ್ ಠಾಣೆಯಲ್ಲಿ ಮೃತ ಯುವತಿಯ ತಾಯಿ ಭಾಗುಬಾಯಿ ದೂರು ನೀಡಿದ್ದಾಳೆ.

Continue Reading

FILM

ಅಭಿಮಾನಿಗಳಿಗೆ ನಿರಾಸೆ…ಗೆಳತಿಯ ಆಸೆ ಈಡೇರಿಸುತ್ತೇನೆ ಎಂದ ಡಿಬಾಸ್

Published

on

ಮಂಗಳೂರು/ಬೆಂಗಳೂರು : ಇನ್ನೇನು ಕೆಲವೇ ದಿನಗಳಲ್ಲಿ ನಟ ದರ್ಶನ್ ಹುಟ್ಟುಹಬ್ಬ. ಡಿಬಾಸ್ ಅಭಿಮಾನಿಗಳು ದಿನಗಣನೆ ಮಾಡುತ್ತಿದ್ದು, ಪ್ರತಿವರ್ಷದಂತೆ ಈ ವರ್ಷವೂ ದರ್ಶನ್ ಭೇಟಿಯಾಗುವ ಆಸೆಯಲ್ಲಿದ್ದಾರೆ. ಆದರೆ, ಅಭಿಮಾನಿಗಳಿಗೆ ದರ್ಶನ್ ನಿರಾಸೆಯುಂಟು ಮಾಡಿದ್ದಾರೆ.

ಜೈಲಿನಿಂದ ಬಿಡುಗಡೆಗೊಂಡ ಬಳಿಕ ಇದೇ ಮೊದಲ ಬಾರಿ ದರ್ಶನ್ ವೀಡಿಯೋವೊಂದನ್ನು ಹರಿಬಿಟ್ಟಿದ್ದಾರೆ.  ಈ ಬಾರಿ ಹುಟ್ಟುಹಬ್ಬಕ್ಕೆ  ಅಭಿಮಾನಿಗಳನ್ನು ಭೇಟಿಯಾಗಲು ಆಗುವುದಿಲ್ಲ ಎಂದಿದ್ದಾರೆ.  ಬೆನ್ನುನೋವಿನಿಂದ ಬಳಲುತ್ತಿರುವುದರಿಂದ ಬಹಳ ಹೊತ್ತು ನಿಲ್ಲಲಾಗುವುದಿಲ್ಲ. ಎಲ್ಲರಿಗೂ ವಿಶ್ ಮಾಡಲು ಆಗುವುದಿಲ್ಲ. ಇಂಜೆಕ್ಷನ್ ತೆಗೆದುಕೊಂಡು 10 – 20 ದಿನ ನೋವು ಕಡಿಮೆ ಇರುತ್ತದೆ. ಪವರ್ ಕಮ್ಮಿಯಾಗುತ್ತಿದ್ದಂತೆ ನೋವು ಹೆಚ್ಚಾಗುತ್ತದೆ. ಆಪರೇಷನ್ ಕಟ್ಟಿಟ್ಟ ಬುತ್ತಿ. ಅದನ್ನು ಮಾಡಿಸಬೇಕು. ಕೆಲವೇ ದಿನಗಳಲ್ಲಿ ಭೇಟಿಯಾಗುತ್ತೇನೆ ಎಂದು ಭರವಸೆ ನೀಡಿದ್ದಾರೆ.

ಸೂರಪ್ಪ ಬಾಬು ಸಿನಿಮಾ ಬಗ್ಗೆ…

ಈ ನಡುವೆ ಯಾರ್ಯಾರ ಸಿನಿಮಾ ಒಪ್ಪಿಕೊಂಡಿದ್ದೇನೆ ಅವರೆಲ್ಲಾ ಕಾದಿದ್ದಾರೆ. ಅವರಿಗೆ ತೊಂದರೆಯಾಗೋದು ಇಷ್ಟ ಇಲ್ಲ. ಸೆಲೆಬ್ರಿಟಿಗಳು ಯಾವ ಊಹಾಪೋಹಗಳಿಗೂ ಕಿವಿ ಕೊಡಬೇಡಿ. ಸೂರಪ್ಪ ಬಾಬು ಅವರು ನನ್ನ ಬಳಿಗೆ ಸಿನಿಮಾ ಮಾಡಬೇಕೆಂದು ಬಂದಿದ್ದಾಗ ಅವರಿಗೆ ಸಹ ತುಂಬಾ ಕಮಿಟ್ ಮೆಂಟ್ ಗಳಿದ್ದವು. ಹಾಗಾಗಿ ಅವರ ಜೊತೆ ಸಿನಿಮಾ ಮಾಡಲು ಒಪ್ಪಿಕೊಂಡೆ. ಈ ನಡುವೆ ತುಂಬಾ ವಿಷಯಗಳು ನಡೆದು ವಿಳಂಬವಾಯಿತು, ಸೂರಪ್ಪ ಬಾಬು ಅವರಿಗೆ ಮತ್ತಷ್ಟು ತೊಂದರೆ ಆಗಬಾರದು ಎಂದು ಅವರು ಕೊಟ್ಟ ಮುಂಗಡ ಹಣವನ್ನು ವಾಪಾಸ್ ಕೊಟ್ಟಿದ್ದೇನೆ ಮುಂದೊಂದು ದಿನ ಉತ್ತಮ ಸಬ್ಜೆಕ್ಟ್ ಸಿಕ್ಕಿದರೆ ಸೂರಪ್ಪ ಬಾಬು ಅವರ ಜೊತೆ ಸಿನಿಮಾ ಮಾಡುತ್ತೇನೆ ಎಂದರು.

 ಗೆಳತಿ ಆಸೆ ಈಡೇರಿಸುವೆ :

ನಿರ್ದೇಶಕ ಜೋಗಿ ಪ್ರೇಮ್ ಅವರ ಜೊತೆ ಖಂಡಿತ ಸಿನಿಮಾ ಮಾಡೇ ಮಾಡುತ್ತೇನೆ. ಅವರು ನನ್ನ ಗುರುಗಳು, ನನ್ನ ಪ್ರೀತಿಯ ಸ್ನೇಹಿತೆ ರಕ್ಷಿತಾ ಆಸೆ ಕೂಡ ನಾನು ಸಿನಿಮಾ ಮಾಡಬೇಕು ಅಂತ. ಕೆವಿಎನ್ ಪ್ರೊಡಕ್ಷನ್‌ನಲ್ಲಿ ಈಗಾಗಲೇ ಸಿನಿಮಾ ತಯಾರಾಗುತ್ತಿದೆ. ಅದರ ಮಧ್ಯೆ ಇನ್ನೊಂದು ಸಿನಿಮಾ ಸದ್ಯಕ್ಕೆ ಬೇಡ ಎಂದು ಮುಂದೆ ಹಾಕಿದ್ದೇವೆ. ಮುಂದೆ ಖಂಡಿತ ಮಾಡುತ್ತೇನೆ ಎಂದರು.

ವಿಶೇಷ ಥ್ಯಾಂಕ್ಸ್ ಹೇಳಿದ ಡಿಬಾಸ್ :

ವೀಡಿಯೋದ ಆರಂಭದಲ್ಲಿ ದರ್ಶನ್ ಸೆಲೆಬ್ರಿಟಿಗಳಿಗೆ(ಅಭಿಮಾನಿಗಳು) ನಮಸ್ಕಾರ ಹೇಳಬೇಕೋ, ಥ್ಯಾಂಕ್ಸ್ ಹೇಳಬೇಕೋ ಗೊತ್ತಾಗುತ್ತಿಲ್ಲ ಎಂದಿದ್ದಾರೆ. ಕೊನೆಯಲ್ಲಿ ಮತ್ತೆ ಧನ್ಯವಾದ ತಿಳಿಸಿದ್ದಾರೆ. ಅಭಿಮಾನಿಗಳ ಪ್ರೀತಿ, ಬೆಂಬಲಕ್ಕೆ ಯಾವಾಗಲೂ ಚಿರಋಣಿ ಎಂದಿದ್ದಾರೆ.

ಈ ವೇಳೆ ತನ್ನ ಕಷ್ಟ ಕಾಲದಲ್ಲಿ ಸಾಥ್ ಕೊಟ್ಟ ಮೂವರ ಹೆಸರು ಉಲ್ಲೇಖಿಸಿದ್ದಾರೆ. ನಟ ಧನ್ವೀರ್, ಬುಲ್ ಬುಲ್ ರಚಿತಾ ರಾಮ್, ಪ್ರಾಣ ಸ್ನೇಹಿತೆ ರಕ್ಷಿತಾಗೆ ತುಂಬಾ ಥ್ಯಾಂಕ್ಸ್ ಎಂದಿದ್ದಾರೆ.

ಇದನ್ನೂ ಓದಿ : ನವಗ್ರಹ ಸಿನಿಮಾ ಖ್ಯಾತಿಯ ನಟ ಗಿರಿ ದಿನೇಶ್​ ಇ*ನ್ನಿಲ್ಲ

ಇದೇ ಸಂದರ್ಭ ದರ್ಶನ್ ಬೇರೆ ಭಾಷೆಯ ಚಿತ್ರಗಳಲ್ಲಿ ನಟಿಸುತ್ತಾರೆ ಎಂಬ ಗಾಸಿಪ್ ಬಗ್ಗೆ ಮಾತಾಡಿದ ಅವರು, ಈ ವಿಷಯ ಆಗಾಗ ಸುದ್ದಿಯಾಗುತ್ತಿರುತ್ತದೆ. ನನ್ನ ಕೊನೆಯ ಉಸಿರು ಇರುವವರೆಗೂ ಬೇರೆ ಭಾಷೆಯ ಚಿತ್ರಗಳಲ್ಲಿ ನಟಿಸುವುದಿಲ್ಲ, ಕನ್ನಡದ ಜನತೆ ನನಗೆ ಪ್ರೀತಿ, ಆಶೀರ್ವಾದ ನೀಡಿದ್ದಾರೆ. ಇಲ್ಲಿ ಬಿಟ್ಟು ಬೇರೆಲ್ಲೂ ಹೋಗುವುದಿಲ್ಲ ಎಂದು  ಹೇಳಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page