Connect with us

LATEST NEWS

ಮಗಳ ಮನೆಗೆ ಮೊಮ್ಮಗಳ ಜೊತೆ ಹೊರಟ ತಾಯಿ ಸ್ಮಶಾನಕ್ಕೆ..!

Published

on

ಮಗಳ ಮನೆಗೆ ಮೊಮ್ಮಗಳ ಜೊತೆ ಹೊರಟ ತಾಯಿ ಸ್ಮಶಾನಕ್ಕೆ..!

ಯಾದಗಿರಿ: ಮಗಳ ಮನೆಗೆ ಮೊಮ್ಮಗಳ ಜೊತೆ ತಾಯಿ ಹೊರಟಾಗ ಆಟೋ ಪಲ್ಟಿಯಾಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ತಾಲೂಕಿನ ಕ್ಯಾತಪ್ಪನಳ್ಳಿ ಗ್ರಾಮದ ಬಳಿ ನಡೆದಿದೆ.

ಘಟನೆಯಲ್ಲಿ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಕೊನ್ನೂರಿನ 55 ವರ್ಷದ ಶರಣಮ್ಮ ಸ್ಥಳದಲ್ಲೇ ಸಾವನ್ನಪ್ಪಿದರೆ , ಮೊಮ್ಮಗಳು ಭಾಗ್ಯಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾಳೆ.

ಮೃತ ಶರಣಮ್ಮ ತನ್ನ ಮಗಳ ಮನೆ ಅಚ್ಚೋಲಗೆ ಮೊಮ್ಮಗಳು ಭಾಗ್ಯ ಜೊತೆ ಆಟೋದಲ್ಲಿ ತೆರಳುತ್ತಿದ್ದರು.

ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿಯಾಗಿ ಅಪಘಾತ ಸಂಭವಿಸಿದೆ. ಅವಘಡದಲ್ಲಿ ಶರಣಮ್ಮ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದು, ಬಾಲಕಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಶರಣಮ್ಮನ್ನ ಪ್ರಾಣ ತಮ್ಮ ಕಣ್ಣೆದರು ಹೋಗುತ್ತಿದ್ದರು ಸ್ಥಳೀಯರು ಕಟುಕರಂತೆ ನೋಡುತ್ತಾ ನಿಂತಿದ್ದು ಜನ ಮಾತ್ರ ಸಹಾಯಕ್ಕೆ ಬರಲೇ ಇಲ್ಲ ಎಂದು ಆರೋಪಗಳು ಕೇಳಿ ಬಂದಿವೆ .

ಕೊನೆ ಉಸಿರು ಹೋಗುವ ತನಕ ಅವರಿಬ್ಬರನ್ನು ನೋಡುತ್ತಾ ಮೊಬೈಲ್ ನಲ್ಲಿ ವಿಡಿಯೋ ತೆಗೆಯುತ್ತಿದ್ದರು. . ಯಾದಗಿರಿ ಗ್ರಾಮೀಣ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.

LATEST NEWS

ಮಣಿಪಾಲದ ಪಂಪ್‌ಹೌಸ್‌ ಬಳಿ ಹೊಂಡಕ್ಕೆ ಬಿದ್ದ ಕಾರು

Published

on

ಉಡುಪಿ: ಕಾರೊಂದು ಮಣಿಪಾಲದ ಪಂಪ್‌ಹೌಸ್‌ ಬಳಿ ದಿಕ್ಕು ತಪ್ಪಿ ಹೊಂಡಕ್ಕೆ ಬಿದ್ದ ಘಟನೆ ಶನಿವಾರ ಮಧ್ಯರಾತ್ರಿ ಮಣಿಪಾಲದಲ್ಲಿ ನಡೆದಿದೆ.

ವೀಕೆಂಡ್ ವೇಳೆ ನಗರ ಸಭೆಗೆ ಸೇರಿದ ಕುಡಿಯುವ ನೀರಿನ ಪಂಪ್‌ಹೌಸ್ ಬಳಿ ಅಪಘಾತದ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಮತ್ತೊಂದು ಕಾರು ಅಪಘಾತವಾಗಿದೆ.

ಕಾರಿನಲ್ಲಿ ನಾಲ್ಕು ಪ್ರಯಾಣಿಕರಿದ್ದು ಅವರಿಗೆ ಚಿಕ್ಕ ಪುಟ್ಟ ಗಾಯಗಳಾಗಿವೆ. ಮಧ್ಯರಾತ್ರಿ ಪೊಲೀಸರು ಬಂದು ಹೊಂಡಕ್ಕೆ ಬಿದ್ದ ಕಾರನ್ನು ತೆಗೆಯುವಲ್ಲಿ ಸಹಕರಿಸಿದರು.

Continue Reading

LATEST NEWS

2028ರ ಆ ಒಂದು ಪಂದ್ಯಕ್ಕಾಗಿ ಟಿ20 ನಿವೃತ್ತಿಯನ್ನು ಹಿಂಪಡೆಯುತ್ತೇನೆ ಎಂದ ಕಿಂಗ್ ಕೊಹ್ಲಿ!

Published

on

ಮಂಗಳೂರು/ಬೆಂಗಳೂರು: ಟೀಂ ಇಂಡಿಯಾ 2024ರ ಟಿ20 ವಿಶ್ವಕಪ್ ಗೆಲ್ಲುವ ಮೂಲಕ ದೊಡ್ಡ ಇತಿಹಾಸ ನಿರ್ಮಿಸಿತ್ತು. ಆದರೆ ಭಾರತ ತಂಡದ ಅಭಿಮಾನಿಗಳಿಗೆ ಬೇಸರ ಮೂಡಿಸಿದ ಸಂಗತಿ ಎಂದರೆ ಟೀಂ ಇಂಡಿಯಾದ ತ್ರಿವಳಿಗಳು ಟಿ20ಗೆ ನಿವೃತ್ತಿ ಘೋಷಣೆ ಮಾಡಿದ್ದು. ಅದರಲ್ಲೂ ಕಿಂಗ್ ಕೊಹ್ಲಿಯ ವಿದಾಯ ಅಭಿಮಾನಿಗಳಿಗೆ ಆಘಾತ ಉಂಟುಮಾಡಿತ್ತು. ಆದರೆ ಇದೀಗ ರನ್ ಮೆಷಿನ್ 2028ರಲ್ಲಿ ನಡೆಯುವ ಆ ಒಂದು ಪಂದ್ಯಕ್ಕಾಗಿ ತಮ್ಮ ನಿವೃತ್ತಿಯನ್ನು ವಾಪಾಸ್ ಪಡೆಯುವುದಾಗಿ ಹೇಳಿದ್ದಾರೆ.


ಹೌದು, ನಿನ್ನೆ (ಮಾ.15) ರಾಹುಲ್ ದ್ರಾವಿಡ್-ಪ್ರಕಾಶ್ ಪಡುಕೋಣೆ ಅಕಾಡೆಮಿಯಲ್ಲಿ ಇನೋವೆಟಿವ್ ಲ್ಯಾಬ್ ಆಯೋಜಿಸಿದ್ದ ಇಂಡಿಯನ್ ಸ್ಪೋರ್ಟ್ಸ್ ಸಮಿಟ್‌ನಲ್ಲಿ ವಿರಾಟ್ ಕೊಹ್ಲಿ ತಮ್ಮ ನಿವೃತ್ತಿಯ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸಂದರ್ಶನದಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ ನಾನು ಮತ್ತೊಂದು ಆಸ್ಟ್ರೇಲಿಯಾ ಪ್ರವಾಸದಲ್ಲಿ ಕಾಣಿಸಿಕೊಳ್ಳದೇ ಇರಬಹುದು. ಈ ಹಿಂದಿನ ಫಲಿತಾಂಶ ಏನೇ ಆಗಿದ್ದರೂ ಅದರಲ್ಲಿ ನನಗೆ ತೃಪ್ತಿ ಇದೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಕಾಣಿಸಿಕೊಳ್ಳದೇ ಇರಬಹುದು. ಈ ಹಿಂದಿನ ಫಲಿತಾಂಶ ಏನೇ ಆಗಿದ್ದರೂ ಅದರಲ್ಲಿ ನನಗೆ ತೃಪ್ತಿ ಇದೆ. ಹೀಗಾಗಿ ನಾನು ಮತ್ತೆ ಬಾರ್ಡರ್-ಗವಾಸ್ಕರ್ ಸರಣಿ ಆಡುವ ಬಗ್ಗೆ ಖಚಿತತೆ ಇಲ್ಲ ಎಂದಿದ್ದಾರೆ.

ಸದ್ಯಕ್ಕಂತೂ ಕ್ರಿಕೆಟ್‌ನಿಂದ ನಿವೃತ್ತಿ ಇಲ್ಲ
ನಾನು ಕ್ರಿಕೆಟ್ ಅನ್ನು ತುಂಬಾ ಪ್ರೀತಿಸುತ್ತಿದ್ದೇನೆ. ಅದನ್ನು ಆಡುವುದರ ಜೊತೆಗೆ ಆನಂದಿಸುತ್ತಿದ್ದೇನೆ. ಕ್ರಿಕೆಟ್‌ನಿಂದ ನಿವೃತ್ತಿ ಎನ್ನುವುದು ಸದ್ಯಕ್ಕಂತೂ ಇಲ್ಲವೇ ಇಲ್ಲ. ಇನ್ನು ಕೆಲವು ವರ್ಷಗಳ ಕಾಲ ಕ್ರಿಕೆಟ್ ಆಡುತ್ತ ಆನಂದಿಸುತ್ತೇನೆ ಎಂದು ರಿಟೈರ್‌ಮೆಂಟ್ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ಟಿ20ಗೆ ಕೊಹ್ಲಿ ಕಂಬ್ಯಾಕ್ ?
ಇನ್ನೂ 2028ರಲ್ಲಿ ನಡೆಯುವ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್‌ ಕೂಡ ಸೇರ್ಪಡೆಯಾಗಲಿದೆ. ಇದರಲ್ಲಿ ಟೀಮ್ ಇಂಡಿಯಾ ಫೈನಲ್‌ಗೆ ಲಗ್ಗೆ ಇಟ್ಟರೆ, ಅಂತಿಮ ಪಂದ್ಯಕ್ಕಾಗಿ ನಿವೃತ್ತಿಯನ್ನು ಹಿಂಪಡೆಯುವುದಾಗಿ ಕೊಹ್ಲಿ ತಿಳಿಸಿದ್ದಾರೆ. ಅಂದರೆ ಭಾರತ ತಂಡವು ಒಲಿಂಪಿಕ್ಸ್‌ ಟಿ20 ಟೂರ್ನಿಯಲ್ಲಿ ಫೈನಲ್‌ಗೆ ತಲುಪಿದರೆ ವಿರಾಟ್ ಕೊಹ್ಲಿ ಕೊನೆಯ ಪಂದ್ಯದಲ್ಲಿ ಮಾತ್ರ ಕಣಕ್ಕಿಳಿಯಬಹುದು.

ಇದನ್ನೂ ಓದಿ: 2ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಮುಂಬೈ; ಸಿಕ್ಕ ಬಹುಮಾನ ಮೊತ್ತ ಎಷ್ಟು?

ಹಣಕ್ಕಾಗಿ ನನ್ನಲ್ಲಿನ ಮೌಲ್ಯ ಬಿಟ್ಟುಕೊಡಲ್ಲ
ಇನ್ನು ಕೊಹ್ಲಿ ನಿವೃತ್ತಿ ನಂತರ ಏನು ಮಾಡುತ್ತಾರೆ ಎಂದು ಅಭಿಮಾನಿಗಳನ್ನು ಕಾಡುತ್ತಿತ್ತು. ಈ ಬಗ್ಗೆ ಮಾತನಾಡಿದ ಕೊಹ್ಲಿ, ಕ್ರಿಕೆಟ್‌ನಿಂದ ನಿವೃತ್ತಿ ಆದ ಮೇಲೆ ಏನು ಮಾಡಬೇಕು ಎಂದು ಯಾವುದೇ ಯೋಜನೆ ರೆಡಿ ಮಾಡಿಕೊಂಡಿಲ್ಲ. ಆ ಸಮಯದಲ್ಲೇ ಅದನ್ನು ನಿರ್ಧಾರ ಮಾಡಲಾಗುತ್ತದೆ. ನಿವೃತ್ತಿ ನಂತರ ಏನು ಮಾಡಬೇಕು ಅಂತನೂ ನನಗೆ ಗೊತ್ತಿಲ್ಲ. ನನಗೆ ಎಷ್ಟು ಬೇಕು ಅಷ್ಟೇ ಹಣ ಸಂಪಾದನೆ ಮಾಡೋದು. ಹೆಚ್ಚಿಗೆ ಬೇಕಿಲ್ಲ, ಆಸೆನೂ ಇಲ್ಲ. ಹಣಕ್ಕಾಗಿ ನನ್ನಲ್ಲಿನ ಮೌಲ್ಯ ಬಿಟ್ಟುಕೊಡಲ್ಲ ಎಂದು ಹೇಳಿದ್ದಾರೆ.

ಒಟ್ಟಿನಲ್ಲಿ ವಿರಾಟ್ ಕೊಹ್ಲಿ ಮುಂದಿನ ಎರಡು ಐಸಿಸಿ ಟೂರ್ನಿಗಳಾದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು ಏಕದಿನ ವಿಶ್ವಕಪ್ ಮೇಲೆ ಕಣ್ಣಿಟ್ಟಿದ್ದಾರೆ. ಈ ಎರಡು ಟೂರ್ನಿಗಳು ನಡೆಯುವುದು 2027ರಲ್ಲಿ. ಅಂದರೆ ಈ ಎರಡು ಟೂರ್ನಿಗಳ ಬಳಿಕ ಕಿಂಗ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಬದುಕಿಗೆ ವಿದಾಯ ಹೇಳುವ ಸಾಧ್ಯತೆಯಿದೆ. ಅಲ್ಲದೆ 2028ರಲ್ಲಿ ನಡೆಯುವ ಒಲಿಂಪಿಕ್ಸ್ ಟಿ20 ಟೂರ್ನಿಯ ಫೈನಲ್ ಪಂದ್ಯಕ್ಕಾಗಿ ಮತ್ತೆ ಕಂಬ್ಯಾಕ್ ಮಾಡುವ ಸಣ್ಣ ಸುಳಿವು ಕೂಡ ನೀಡಿದ್ದಾರೆ.

Continue Reading

LATEST NEWS

ಮಧ್ಯ ಅಮೇರಿಕ: ಚಂಡಮಾರುತದ ಹೊಡೆತಕ್ಕೆ 33 ಜನ ಸಾವು

Published

on

ವಾಷಿಂಗ್ಟನ್‌: ಭೀಕರ ಚಂಡಮಾರುತಕ್ಕೆ 33 ಮಂದಿ ಬಲಿಯಾದ ಘಟನೆ ಮಧ್ಯ ಅಮೇರಿಕಾದಲ್ಲಿ ನಡೆದಿದೆ.

ಚಂಡಮಾರುತದ ರಭಸಕ್ಕೆ ದೊಡ್ಡ ಟ್ರಕ್‌ಗಳು ಉರುಳಿ ಬಿದ್ದಿದ್ದು, ಮನೆಯ ಮೇಲ್ಛಾವಣಿಗಳೆಲ್ಲಾ ಹಾರಿಹೋಗಿವೆ. ಮರಗಳು ಮತ್ತು ವಿದ್ಯುತ್ ತಂತಿಗಳು ಉರುಳಿಬಿದ್ದಿವೆ. ಕಟ್ಟಡಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಪೊಲೀಸರು ವರದಿ ಮಾಡಿದ್ದಾರೆ.

ಕೆಲವು ಪ್ರದೇಶಗಳು ಬಿರುಗಾಳಿ, ಗುಡುಗು ಸಹಿತ ಮಳೆ ಮತ್ತು ದೊಡ್ಡ ಆಲಿಕಲ್ಲು ಮಳೆಯಿಂದಾಗಿ ತೀವ್ರ ಹಾನಿಗೊಳಗಾಗಿವೆ. ಚಂಡಮಾರುತದಿಂದಾಗಿ 33 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೇ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯು ಇದೆ.

Continue Reading
Advertisement

Trending

Copyright © 2025 Namma Kudla News

You cannot copy content of this page