Connect with us

LATEST NEWS

38 ಹೆಂಡ್ತಿಯರ ಮುದ್ದಿನ ಗಂಡ ಇನ್ನಿಲ್ಲ :ಮಿಜೋರಾಂ ಜಿಯೋನಾ ಚನಾ ನಿಧನ..!

Published

on

ಮಿಜೋರಾಂ :  ಬರೋಬ್ಬರಿ 38 ಮಹಿಳೆಯರನ್ನು ಮದುವೆ ಆಗಿದ್ದ, 89 ಮಕ್ಕಳಿಗೆ ಜನ್ಮ ನೀಡಿದ್ದ, 33 ಮೊಮ್ಮಕ್ಕಳ ಅಜ್ಜ ಜಿಯೋನಾ ಚನಾ ನಿನ್ನೆ ನಿಧನರಾಗಿದ್ದಾರೆ.

ಜಗತ್ತಿನ ಅತಿದೊಡ್ಡ ಕುಟುಂಬದ ವಾರಸ್ದಾರ ಎಂದೇ ಗುರುತಿಸಿಕೊಂಡಿದ್ದ ಜಿಯೋನಾ ಚನಾ(76) ರ ವೈವಾಹಿಕ ಬದುಕೇ ಎಲ್ಲರಿಗೂ ಕುತೂಹಲ ಮೂಡಿಸಿತ್ತು.

ಪತ್ನಿ, ಮಕ್ಕಳು, ಮೊಮ್ಮಕ್ಕಳು ಸೇರಿ 181 ಸದಸ್ಯರನ್ನ ಹೊಂದಿತ್ತು ಜಿಯೋನಾ ಕುಟುಂಬ. ಮಿಜೋರಾಂನ ಬಕ್ತಾಂಗ್​ನಲ್ಲಿ ಜಿಯಾನ್​ರ ನಾಲ್ಕಂತಸ್ತಿನ ಆಕರ್ಷಕ ಬಂಗಲೆ ಇದೆ.

ಅಲ್ಲಿಯೇ ಜಿಯೋನಾ ವಾಸವಿದ್ದರು. ಇದು ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿತ್ತು.ಜಿಯೋನ್​ರ ಅಜ್ಜ 1942ರಲ್ಲಿ ಹಮಾಂಗ್‌ಕಾವ್​​ನ ಹಳ್ಳಿಯಿಂದ ಬಂದು ಐಜಾಲ್​​ನಲ್ಲಿ ನೆಲೆಸಿದ್ದರು.

ಅಂದಿನಿಂದ ಇವರ ಕುಟುಂಬ ಅಲ್ಲೇ ನೆಲೆಸಿದೆ. ಖುವಾಂಗ್ತುಹಾ ಎಂಬ ಪಂಥದಲ್ಲಿ ಬಹುಪತ್ನಿತ್ವ ಪದ್ಧತಿಯಿದೆ. ಹಾಗಾಗಿ ಜಿಯೋನ್​ 39 ಮಹಿಳೆಯರನ್ನು ಮದುವೆ ಆಗಿದ್ದರು.

ಇದು ಭಾರಿ ಸುದ್ದಿಯಾಗಿತ್ತು. ಒಬ್ಬರನ್ನ ಮದುವೆ ಆಗಿ ಸಂಬಾಳಿಸೋದೆ ಸಾಕು ಸಾಕು ಅನ್ನಿಸುತ್ತೆ ಎಂದು ಬಹುತೇಕು ಮೂದಲಿಸುತ್ತಿದ್ದಾರೆ. ಆದರೆ ಜಿಯೋನಾ ಮಾತ್ರ ಅದ್ಹೇಗೆ 38 ಹೆಂಡ್ತಿಯರನ್ನ ಸಂಬಾಳಿಸಿ ಇಷ್ಟು ವರ್ಷ ಜೀವನ ನಡೆಸಿದ್ರು!

ಎಂದು ಹಲವರು ಆಶ್ವರ್ಯ ವ್ಯಕ್ತಪಡಿಸಿದ್ದರು.ಮಧುಮೇಹ​ ಮತ್ತು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಜಿಯೋನ್​ರ ಆರೋಗ್ಯ ಇತ್ತೀಚಿಗೆ ಹದಗೆಟ್ಟಿತ್ತು.

ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ನಿನ್ನೆ ಭಾನುವಾರ ಕೊನೆಯುಸಿರೆಳೆದಿದ್ದಾರೆ. ಇವರ ನಿಧನಕ್ಕೆ ಮಿಜೋರಾಂನ ಸಿಎಂ ಸಂತಾಪ ಸೂಚಿಸಿದ್ದಾರೆ.

DAKSHINA KANNADA

ಕಲ್ಲರ್ಪೆಯಲ್ಲಿ ಮತ್ತೊಂದು ಅಪಘಾತ; ಕಾರು ಬೈಕ್ ಮುಖಾಮುಖಿ ಡಿಕ್ಕಿ, ಬೈಕ್‌ ಸವಾರ ಗಂಭೀರ

Published

on

ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಕಲ್ಲರ್ಪೆ ಪ್ರದೇಶದಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಕಾರು ಬೈಕ್ ಮುಖಾಮುಖಿ ಡಿಕ್ಕಿಯೂ ಆ ಭಾಗದಲ್ಲಿನ ರಸ್ತೆ ಸುರಕ್ಷ ತಾ ಕ್ರಮಗಳ ವೈಫಲ್ಯವನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ.

ಈ ದುರ್ಘಟನೆಯಲ್ಲಿ ದ್ವಿಚಕ್ರ ವಾಹನ ಸವಾರನ ತಲೆಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ರಾತ್ರಿಯೂ ಇದೇ ಭಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾವೊಂದು ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾಗಿತ್ತು. ಅದೃಷ್ಟವಶಾತ್‌ ರಿಕ್ಷಾ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದರು.

ಇದನ್ನೂ ಓದಿ: ಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುವವರೇ ಎಚ್ಚರ; ಗದ್ದೆಗೆ ಬಿತ್ತು ಟಿಟಿ

ಇದೀಗ ಮತ್ತೊಂದು ಘಟನೆ ನಡೆದಿದ್ದು, ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಕಲ್ಲರ್ಪೆ ವಲಯವು ಅಪಘಾತಗಳ ಕೇಂದ್ರಬಿಂದುವಾಗಿ ಪರಿವರ್ತನೆಯಾಗುತ್ತಿರುವುದು ಸ್ಥಳಿಯರಲ್ಲಿ ಆತಂಕ ಮೂಡಿಸಿದೆ.

Continue Reading

LATEST NEWS

ಪೂಜಾ ಖೇಡ್ಕರ್‌ಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ ಸುಪ್ರೀಂ ಕೋರ್ಟ್

Published

on

ಮಂಗಳೂರು/ನವದೆಹಲಿ: ನಕಲಿ ಪ್ರಮಾಣಪತ್ರ ಬಳಸಿ ನಾಗರಿಕ ಸೇವಾ ಪರೀಕ್ಷೆಯ ಲಾಭ ಪಡೆದುಕೊಂಡ ಆರೋಪ ಎದುರಿಸುತ್ತಿರುವ ಮಾಜಿ ಐಎಎಸ್ ಪ್ರೊಬೇಷನರಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ.

2022ರ ನಾಗರಿಕ ಸೇವೆಗಳ ಪರೀಕ್ಷೆಗೆ ಅರ್ಹತೆ ಪಡೆಯಲು ದಾಖಲೆಗಳನ್ನು ನಕಲಿ ಮಾಡಿದ ಆರೋಪ ಹೊತ್ತಿರುವ ಮಾಜಿ ಐಎಎಸ್ ತರಬೇತಿ ಅಧಿಕಾರಿ ಪೂಜಾ ಖೇಡ್ಕರ್ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ನಿರೀಕ್ಷಣಾ ಜಾಮೀನು ನೀಡಿದೆ.

ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಸತೀಶ್ ಚಂದ್ರ ಶರ್ಮಾ ಅವರಿದ್ದ ಸುಪ್ರೀಂ ಕೋರ್ಟ್ ಪೀಠವು, ವಂಚನೆ ಪ್ರಕರಣದ ತನಿಖೆಗೆ ಸಹಕರಿಸುವಂತೆ ಖೇಡ್ಕರ್ ಅವರಿಗೆ ನಿರ್ದೇಶನ ನೀಡಿದೆ. ಆದಾಗ್ಯೂ, ದೆಹಲಿ ಪೊಲೀಸರ ವಕೀಲರು ಖೇಡ್ಕರ್ ಅವರಿಗೆ ನಿರೀಕ್ಷಣಾ ಜಾಮೀನು ನೀಡುವುದನ್ನು ತೀವ್ರವಾಗಿ ವಿರೋಧಿಸಿದರು. ತನಿಖೆಯಲ್ಲಿ ಅವರು ಸಹಕರಿಸದಿರುವುದು ಮತ್ತು ಅವರ ವಿರುದ್ಧದ ಆರೋಪಗಳು ಗಂಭೀರವಾಗಿವೆ ಎಂದು ಹೇಳಿದರು.

ಆಕೆ ಮಾದಕ ದ್ರವ್ಯ ವ್ಯಸನಿಯಲ್ಲ..!
ಇದನ್ನು ಆಲಿಸಿದ ಪೀಠ ಖೇಡ್ಕರ್ ಅಂತದ್ದೇನು ಗಂಭೀರ ಅಪರಾಧ ಮಾಡಿದ್ದಾರೆ “ಆಕೆ ಮಾದಕ ದ್ರವ್ಯ ವ್ಯಸನಿಯಲ್ಲ ಅಥವಾ ಭಯೋತ್ಪಾದಕಿ ಅಲ್ಲ. ಆಕೆ ಕೊಲೆ ಮಾಡಿಲ್ಲ. ಆಕೆ ಎನ್‌ಡಿಪಿಎಸ್ ಅಪರಾಧಿಯೂ ಅಲ್ಲ. ನಿಮಗೆ ಒಂದು ವ್ಯವಸ್ಥೆ ಅಥವಾ ಸಾಫ್ಟ್‌ವೇರ್ ಇರಬೇಕು. ನೀವು ತನಿಖೆಯನ್ನು ಪೂರ್ಣಗೊಳಿಸಿ. ಆಕೆ ಎಲ್ಲವನ್ನೂ ಕಳೆದುಕೊಂಡಿದ್ದಾಳೆ ಇನ್ನು ಎಲ್ಲಿಯೂ ಆಕೆಗೆ ಸಿಗುವುದಿಲ್ಲ” ಎಂದು ನ್ಯಾಯಪೀಠ ಮೌಖಿಕವಾಗಿ ಹೇಳಿದೆ. “ಪ್ರಕರಣದ ವಾಸ್ತವಾಂಶ ಮತ್ತು ಸನ್ನಿವೇಶಗಳನ್ನು ಪರಿಗಣಿಸಿ, ದೆಹಲಿ ಹೈಕೋರ್ಟ್ ಅರ್ಜಿದಾರರಿಗೆ ಜಾಮೀನು ನೀಡಬೇಕಾಗಿದ್ದ ಸೂಕ್ತ ಪ್ರಕರಣ ಇದು ಎಂದು ಪೀಠ ಹೇಳಿದೆ.

ಇದನ್ನೂ ಓದಿ: ಕನ್ನಡ ಮಾತನಾಡುವುದಿಲ್ಲ ಎಂದಿದ್ದ ಬ್ಯಾಂಕ್ ಮ್ಯಾನೇಜರ್ ರಾತ್ರೋರಾತ್ರಿ ಎತ್ತಂಗಡಿ

2023ರ ಬ್ಯಾಚ್‌ನ ಐಎಎಸ್ ಪ್ರೊಬೇಷನರಿ ಅಧಿಕಾರಿಯಾಗಿದ್ದ ಪೂಜಾ ತನ್ನ ಆಯ್ಕೆಗಾಗಿ ಒಬಿಸಿ ಕೋಟಾ ಮತ್ತು ಅಂಗವಿಕಲರ ಕೋಟಾವನ್ನು ದುರುಪಯೋಗಪಡಿಸಿಕೊಂಡು ಸೌಲಭ್ಯಗಳನ್ನು ಪಡೆದಿದ್ದರು ಎಂದು ಆರೋಪಿಸಲಾಗಿದೆ.

ಜುಲೈನಲ್ಲಿ ಆಕೆಯ ವಿರುದ್ಧ ದೆಹಲಿ ಪೊಲೀಸರು ಕ್ರಿಮಿನಲ್ ಪ್ರಕರಣ ದಾಖಲಿಸಿದ್ದರು. ಜುಲೈ 31ರಂದು ಆಕೆಯ ನೇಮಕಾತಿ ಆದೇಶವನ್ನು ಯುಪಿಎಸ್‌ಸಿ ರದ್ದುಗೊಳಿಸಿತ್ತು. ಜೊತೆಗೆ ಭವಿಷ್ಯದ ಎಲ್ಲ ಪರೀಕ್ಷೆಗಳು ಮತ್ತು ಆಯ್ಕೆಗಳಿಂದ ಡಿಬಾರ್ ಮಾಡಲಾಗಿದೆ.

 

 

 

Continue Reading

LATEST NEWS

ಗೂಗಲ್ ಮ್ಯಾಪ್ ನಂಬಿ ಪ್ರಯಾಣಿಸುವವರೇ ಎಚ್ಚರ; ಗದ್ದೆಗೆ ಬಿತ್ತು ಟಿಟಿ

Published

on

ಚಿಕ್ಕಮಗಳೂರು: ರಾತ್ರಿ ವೇಳೆ ಗೂಗಲ್ ಮ್ಯಾಪ್ ನೋಡಿಕೊಂಡು ಪ್ರಯಾಣಿಸುವಾಗ ಸ್ವಲ್ಪ ಜಾಗರೂಕರಾಗಿರಬೇಕು. ಮ್ಯಾಪ್ ದಾರಿ ತೋರಿಸುತ್ತದೆ ಎಂದು ಅದು ಹೇಳಿದ ದಾರಿಯಲ್ಲಿ ಹೋದರೆ ಅಪಾಯ ಕಟ್ಟಿಟ್ಟ ಬುತ್ತಿ.

ಇಂತಹದ್ದೇ ಘಟನೆ ಒಂದು ಚಿಕ್ಕಮಗಳೂರಿನ ಆಲ್ದೂರು ಬಳಿ ಬೆಳಕಿಗೆ ಬಂದಿದೆ. ಗೂಗಲ್ ಮ್ಯಾಪ್ ನಂಬಿ ಬಂದಿದ್ದ ಪ್ರವಾಸಿಗರು, ವಾಹನವನ್ನು ಗದ್ದೆಗೆ ಇಳಿಸಿಕೊಂಡು ಪರದಾಡಿದ್ದಾರೆ.

ಹೌದು.. ಬೆಂಗಳೂರು ಮೂಲದ ಪ್ರವಾಸಿಗರು ಬಾಳೆಹೊನ್ನೂರು ಕಡೆಯಿಂದ ಮೂಡಿಗೆರೆಗೆ ತೆರಳುತ್ತಿದ್ದರು. ಈ ವೇಳೆ, ಗೂಗಲ್ ಮ್ಯಾಪ್ ಕೈ ಕೊಟ್ಟಿದ್ದು, ವಾಹನ ಗದ್ದೆ ಬಳಿ ಹೋಗಿ ಸಿಕ್ಕಿ ಹಾಕಿಕೊಂಡಿದೆ. ಇದರಿಂದ ವಾಹನ ವಾಪಸ್ ತೆಗೆಯಲಾಗದೆ ಪ್ರವಾಸಿಗರು ಕೆಲವು ಕಾಲ ಅಲ್ಲೇ ಪರದಾಡಿದ್ದಾರೆ.

ಇದನ್ನೂ ಓದಿ: ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ

ಪ್ರವಾಸಿಗರ ಪರದಾಟ ನೋಡಿ, ಸ್ಥಳೀಯರು ಟ್ರ್ಯಾಕ್ಟರ್‌ಗೆ ಟಿಟಿಯನ್ನು ಕಟ್ಟಿ, ರಸ್ತೆಯ ಬಳಿ ತಂದು ಬಿಟ್ಟಿದ್ದಾರೆ. ಬಳಿಕ ಸ್ಥಳಿಯರಿಂದ ರಸ್ತೆಯ ಬಗ್ಗೆ ಮಾಹಿತಿ ಪಡೆದು, ಗೂಗಲ್ ಮ್ಯಾಪ್ ಆಫ್ ಮಾಡಿ ಪ್ರವಾಸಿಗರು ಅಲ್ಲಿಂದ ತೆರಳಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page