Connect with us

LATEST NEWS

ಮಂಡ್ಯ : ಚಾರ್ಜ್‌ ಹಾಕಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ ಸ್ಫೋಟಗೊಂಡು 5 ಲಕ್ಷ ರೂ. ನಷ್ಟ..!

Published

on

ಮನೆಯಲ್ಲಿ ಚಾರ್ಜಿಂಗ್‌ ಮಾಡಲು ಹಾಕಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ ಸ್ಪೋಟಗೊಂಡು ಬೈಕ್‌ ಸೇರಿದಂತೆ, ಮನೆಯಲ್ಲಿನ ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವಳೆಗೆರೆಹಳ್ಳಿಯಲ್ಲಿ ನಡೆದಿದೆ. 

ಮಂಡ್ಯ : ಮನೆಯಲ್ಲಿ ಚಾರ್ಜಿಂಗ್‌ ಮಾಡಲು ಹಾಕಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ ಸ್ಪೋಟಗೊಂಡು ಬೈಕ್‌ ಸೇರಿದಂತೆ, ಮನೆಯಲ್ಲಿನ ಹಲವು ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ವಳೆಗೆರೆಹಳ್ಳಿಯಲ್ಲಿ ನಡೆದಿದೆ. 

ಮದ್ದೂರು ತಾಲೂಕಿನ ಮುತ್ತುರಾಜ್ ಎಂಬುವವರ ಮನೆಯಲ್ಲಿ ಪ್ರತಿನಿತ್ಯ ಸ್ಕೂಟರ್‌ ಅನ್ನು ಚಾರ್ಜಿಗೆ ಹಾಕುವಂತೆ ನಿನ್ನೆಯೂ ಕೂಡ ಎಲೆಕ್ಟ್ರಿಕ್‌ ಬ್ಯಾಟರಿಚಾಲಿತ ಸ್ಕೂಟರ್‌ ಅನ್ನು ಮನೆಯಲ್ಲಿ ಚಾರ್ಜಿಂಗ್‌ ಮಾಡಲು ಹಾಕಲಾಗಿದೆ.

ಆದರೆ, ರಾತ್ರಿವೇಳೆ ಚಾರ್ಜ್ ಹಾಕಿದ್ದ ಸ್ಕೂಟರ್‌ ಕೆಲವೇ ಗಂಟೆಗಳಲ್ಲಿ ಸ್ಫೋಟಗೊಂಡಿದೆ. ಈ ಸ್ಫೋಟದಿಂದ‌ ಬೈಕ್‌ ಸಂಪೂರ್ಣ ಹಾನಿಯಾಗಿದ್ದು, ಮನೆಯಲ್ಲಿದ್ದ ಇತರೆ ಗೃಹೋಪಯೋಗಿ ವಸ್ತುಗಳೂ ಕೂಡ ಸುಟ್ಟು ಕರಕಲಾಗಿವೆ.

ಇದರಿಂದ ಮನೆಯ ನಿವಾಸಿಗಳು ಆತಂಕಕ್ಕೆ ಒಳಗಾಗಿದ್ದಾರೆ.ಇನ್ನು ಎಲೆಕ್ಟ್ರಿಕ್‌ ಬ್ಯಾಟರಿ ಹೊಂದಿದ ಬೈಕ್‌ ಅನ್ನು ಮನೆಯ ಒಳಗಡೆ ನಿಲ್ಲಿಸಲಾಗುತ್ತಿತ್ತು.

ಮನೆಯ ಒಳಗೆ ಒಂದು ಮೂಲೆಯಲ್ಲಿ ಚಾರ್ಜಿಂಗ್‌ ಪಾಯಿಂಟ್‌ ಬಳಿ ಬೈಕ್‌ ನಿಲ್ಲಿಸಿ ಮುತ್ತುರಾಜ್‌ ಚಾರ್ಜ್‌ಗೆ ಹಾಕಿದ್ದನು.

ಇದಕ್ಕಿದ್ದ ಹಾಗೆ ಸ್ಕೂಟರ್ ಸ್ಫೋಟಗೊಂಡಿದೆ. ಇನ್ನು ಈ ಬೈಕ್‌ ಸ್ಪೋಟಗೊಂಡ ಸಂದರ್ಭದಲ್ಲಿ ಮನೆಯೊಳಗೆ ಕುಟುಂಬದ ಐವರು ಸದಸ್ಯರು ಇದ್ದರು.

ಆದರೆ, ಸ್ಪೋಟದ ಪರಿಣಾಮ ಒಮದು ಕೋಣೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳನ್ನು ಮಾತ್ರ ಹಾನಿಗೊಳಿಸಲು ಸೀಮಿತವಾಗಿದೆ.

ಈ ಹಿನ್ನೆಲೆಯಲ್ಲಿ ಮನೆಯಲ್ಲಿದ್ದ ಎಲ್ಲ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಎಲೆಕ್ಟ್ರಿಕ್‌ ಸಾಮಾಗ್ರಿಗಳೆಲ್ಲವೂ ನಾಶ: ಇನ್ನು ಮನೆಯಲ್ಲಿ ಎಲೆಕ್ಟ್ರಿಕ್‌ ಚಾರ್ಜಿಂಗ್‌ ಬ್ಯಾಟರಿಯ ಸ್ಕೂಟರ್‌ ಸ್ಪೋಟ ಆಗುತ್ತಿದ್ದಂತೆ, ಮನೆಯಲ್ಲಿನ ಎಲ್ಲ ವಿದ್ಯುತ್‌ ಸಂಪರ್ಕಿಸುವ ವೈರಿಂಗ್‌ ಸುಟ್ಟು ಹಾನಿಗೀಡಾಗಿದೆ.

ಇದರಿಂದ ಎಲೆಕ್ಟ್ರಿಕ್‌ ಸಾಧನಗಳಾದ ಟಿವಿ, ಫ್ರಿಡ್ಜ್, ಫ್ಯಾನ್‌ಗಳು ಹಾಘೂ ಬಲ್ಪ್‌ಗಳು ಸಂಪೂರ್ಣ ಹಾನಿಗೀಡಾಗಿವೆ.

ಇನ್ನು ಸ್ಕೂಟರ್‌ ಪಕ್ಕದಲ್ಲಿಯೇ ಇದ್ದ ಡೈನಿಂಗ್‌ ಟೇಬಲ್‌ ಸೇರಿ ಅನೇಕ ಕಟ್ಟಿಗೆಯಿಂದ ಮಾಡಲಾದ ವಸ್ತುಗಳು ಕೂಡ ಸುಟ್ಟು ಕರಕಲಾಗಿವೆ.

ಇನ್ನು ಮನೆಯಲ್ಲಿದ್ದ ಇತರೆ ವಸ್ತುಗಳು ಬೇರೆಡೆ ಇದ್ದುದರಿಂದ ದೊಡ್ಡ ಪ್ರಮಾಣದಲ್ಲಿ ಅನಾಹುತ ಆಗುವುದು ತಪ್ಪಿದಂತಾಗಿದೆ.

ಚಾರ್ಜಿಗೆ ಹಾಕಿದ್ದ ಸ್ಕೂಟರ್‌ ಸ್ಪೋಟಕ್ಕೆ ಇಡೀ ಬೀದಿಯಲ್ಲಿ ದೊಡ್ಡ ಪ್ರಮಾಣದ ಶಬ್ದ ಉಂಟಾಗಿದೆ.

ಎಲ್ಲರೂ ಬಂದು ನೋಡುವಷ್ಟರಲ್ಲಿ ಮುತ್ತುರಾಜ್‌ ಅವರ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಕಂಡುಬಂದಿದೆ.

ಕೂಡಲೇ ಮನೆಯವರು ಹಾಗೂ ಇತರೆ ನೆರೆಹೊರೆಯವರು ಸೇರಿಕೊಂಡು ನೀರಿನಿಂದ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಿದ್ದಾರೆ. ನಂತರ, ಮನೆಗೆ ಸಂಪರ್ಕ ಮಾಡಲಾಗಿದ್ದ ವಿದ್ಯುತ್‌ ಸಂಪರ್ಕವನ್ನು ಕಡಿತಗೊಳಿಸಲಾಗಿದೆ.

ಇನ್ನು ಮನೆಯಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಗ್ಯಾಸ್‌ ಹಾಗೂ ಇತರೆ ಬೆಂಕಿಯ ಜ್ವಾಲೆ ಹೆಚ್ಚಾಗುವಂತಹ ವಸ್ತುಗಳನ್ನು ಮನೆಯಿಂದ ಹೊರಗೆ ತರಲಾಗಿತ್ತು.

ಚಾರ್ಜಿಗೆ ಹಾಕಿದ್ದ ಸ್ಕೂಟರ್‌ ಸ್ಪೋಟಗೊಂಡಿದ್ದು, ಮಂಡ್ಯ ಸೇರಿ ಸುತ್ತಲಿನ ಹಳ್ಳಿಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

LATEST NEWS

WATCH : ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ ಹೃದಯಾ*ಘಾತ; ಯುವಕ ಸಾ*ವು

Published

on

ಮಂಗಳೂರು/ವಿಜಯಪುರ : ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ವಿಜಯಪುರದಲ್ಲಿ ಯುವಕನೋರ್ವ ಹೃದಯಾಘಾತಕ್ಕೆ ಬಲಿಯಾಗಿದ್ದಾನೆ.  ಡ್ಯಾನ್ಸ್ ಮಾಡುವಾಗಲೇ ಯುವಕನೊಬ್ಬ ಹೃದಯಾ*ಘಾತದಿಂದ ಸಾ*ವನ್ನಪ್ಪಿದ್ದಾನೆ. ವಿಜಯಪುರ ನಗರದ ಚಪ್ಪರಬಂದ ಕಾಲೋನಿಯಲ್ಲಿ ಈ ದು*ರಂತ ಸಂಭವಿಸಿದೆ.

28 ವರ್ಷದ ಮಹಮ್ಮದ್ ಪೈಗಂಬರ್ ಗಂಗನಹಳ್ಳಿ ಮೃ*ತ ಯುವಕ. ಮಹಮ್ಮದ್ ಪೈಗಂಬರ್ ಆಲ್ಯೂಮೀನಿಯಂ ಕಿಟಕಿ, ಬಾಗಿಲು ಕೆಲಸ ಮಾಡುತ್ತಿದ್ದ. ಸಂಬಂಧಿಕರ ಮದುವೆಯಲ್ಲಿ ಡ್ಯಾನ್ಸ್ ಮಾಡುವಾಗ  ಹೃ*ದಯಾಘಾತಕ್ಕೊಳಗಾಗಿ ಕು*ಸಿದು ಬಿದ್ದಿದ್ದಾನೆ.

ಇದನ್ನೂ ಓದಿ : ಕೋವಿಡ್‌ ಕುರಿತು ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ

ಕೂಡಲೇ ಯುವಕನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟುಹೊತ್ತಿಗಾಗಲೇ ಆತ ಮೃತಪಟ್ಟಿದ್ದಾನೆ. ಯುವಕನ ಕೊನೆಯ ಕ್ಷಣದ ವೀಡಿಯೋ ಮೊಬೈಲ್‌ ನಲ್ಲಿ ಸೆರೆಯಾಗಿದ್ದು, ವೈರಲ್ ಆಗುತ್ತಿದೆ.

 

Continue Reading

LATEST NEWS

ಕೋವಿಡ್‌ ಕುರಿತು ಸ್ಫೋಟಕ ಭವಿಷ್ಯ ನುಡಿದ ಕೋಡಿಶ್ರೀ

Published

on

ಮಂಗಳೂರು/ಬೆಳಗಾವಿ: ಮಹಾಮಾರಿ ಕೋವಿಡ್ ಕುರಿತು ಕೋಡಿಮಠದ ಡಾ.ಶಿವಯೋಗಿ ಶಿವಾನಂದ ಸ್ವಾಮಿಜಿಯವರು ಸ್ಪೋಟಕ ಭವಿಷ್ಯ ನುಡಿದಿದ್ದಾರೆ.

ಕೊವಿಡ್ ಕುರಿತು ಸ್ವಾಮೀಜಿ ಅವರು, ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿ ಇರಿ. ಉಸಿರಾಟಕ್ಕೆ ತೊಂದರೆಯಾಗಿ ಸಾ*ವು ಸಂಭವಿಸುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಬೆಳಗಾವಿಯಲ್ಲಿ ಮಾತನಾಡಿದ ಅವರು, ‘ಐದು ವರ್ಷ ಮಹಾಮಾರಿ ಬೇರೆ ಬೇರೆ ರೂಪದಲ್ಲಿ ಇರಲಿದೆ. ಜನರು ಹುಷಾರಾಗಿರೋದು ಒಳ್ಳೆಯದು. ಉಸಿರಾಟಕ್ಕೆ ತೊಂದರೆಯಾಗಿ ಸಾವು ಬರುವ ಸಾಧ್ಯತೆಗಳಿವೆ. ಲೋಕಕ್ಕೆ ವಾಯು, ಜಲದಿಂದ ಐದು ವರ್ಷ ಗಂಡಾಂತರವಿದೆ. ಹಿಮಾಲಯ ಕರಗಿ ದೆಹಲಿವರೆಗೆ ತಲುಪಲಿದೆ. ಮೇಘಸ್ಪೋಟ ಆಗುವ ಸಾಧ್ಯತೆಗಳಿವೆ. ಭೂಕಂಪ ಸಂಭವಿಸಲಿದೆ. ಮತೀಯ ಗಲಭೆಗಳು ಹೆಚ್ಚಾಗಲಿವೆ’ ಎಂದರು.

ಇದನ್ನೂ ಓದಿ: ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ; ಮೋಹಕ ತಾರೆ ಬೇಸರ

‘ಯುದ್ಧದ ಭೀತಿ ಮತ್ತೆ ಪ್ರಾರಂಭ ಆಗಲಿದೆ. ಜನರಲ್ಲಿ ಅಶಾಂತಿ ಇದೆ. ಕೆಲವು ದೇಶಗಳು ಅಳಿದು ಹೋಗಲಿವೆ. ಹೊಸ ಹೊಸ ದೇಶಗಳು ಉತ್ಪತ್ತಿಯಾಗುತ್ತವೆ. ಅನೇಕ ರಾಜಕೀಯ ಮುಖಂಡರಿಗೆ ಸಾವಿದೆ ಹಾಗೂ ಭಯವಿದೆ. ಸಂಕ್ರಾಂತಿಯವರೆಗೂ ರಾಜ್ಯ ಸರ್ಕಾರಕ್ಕೆ ಅಪಾಯವಿಲ್ಲ. ಸಂಕ್ರಾಂತಿಯ ನಂತರ ಎನಾಗುತ್ತೆ ನೋಡಬೇಕು’ ಎಂದು ಸ್ವಾಮೀಜಿ ಹೇಳಿದ್ದಾರೆ.

Continue Reading

FILM

ಮೈಸೂರು ಸ್ಯಾಂಡಲ್‌ ಸೋಪ್‌ಗೆ ಮಿಲ್ಕಿ ಬ್ಯೂಟಿ ರಾಯಭಾರಿ; ಮೋಹಕ ತಾರೆ ಬೇಸರ

Published

on

ಮಂಗಳೂರು/ಬೆಂಗಳೂರು: ಮೈಸೂರು ಸ್ಯಾಂಡಲ್ ಸೋಪ್‌ಗೆ ತೆಲುಗು ನಟಿ ತಮನ್ನಾ ಭಾಟಿಯಾ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಿರುವುದರಿಂದ ಎದ್ದಿರುವ ವಿವಾದದ ಬೆನ್ನಲ್ಲೇ, ಮೋಹಕ ತಾರೆ ರಮ್ಯಾ ಇನ್‌ಸ್ಟಾಗ್ರಾಮ್‌ನಲ್ಲಿ ಸ್ಟೋರಿ ಹಂಚಿಕೊಳ್ಳುವ ಮೂಲಕ ಬೇಸರ ಹಂಚಿಕೊಂಡಿದ್ದಾರೆ.

ಕರ್ನಾಟಕ ಡಿಟರ್ಜೆಂಟ್ಸ್ ಕಂಪನಿಯು ತನ್ನ ಉತ್ಪನ್ನಗಳತ್ತ ಗ್ರಾಹಕರನ್ನು ಸೆಳೆಯುವ ನಿಟ್ಟಿನಲ್ಲಿ ತೆಲುಗು ನಟಿ ತಮನ್ನಾ ಭಾಟಿಯಾ ಅವರನ್ನು ಆಯ್ಕೆ ಮಾಡಲಾಗಿತ್ತು. ಅದಕ್ಕಾಗಿ ಅವರಿಗೆ ಎರಡು ವರ್ಷಗಳಿಗೆ 6.2 ಕೋಟಿ ರೂ. ಸಂಭಾವನೆಯನ್ನು ಗೊತ್ತುಪಡಿಸಿದೆ. ತಮನ್ನಾ, ಸಂಸ್ಥೆಯ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಇದಕ್ಕೆ ರಾಜ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದರ ಬೆನ್ನಲ್ಲೇ ನಟಿ ರಮ್ಯಾ ಕೂಡ ಪೋಸ್ಟ್‌ ಮಾಡಿದ್ದು, ಸಂಚಲನ ಮೂಡಿಸಿದೆ.

ಇದನ್ನೂ ಓದಿ: ಮೈಸೂರು ಸ್ಯಾಂಡಲ್‌ ಸೋಪ್ ರಾಯಭಾರಿಯಾಗಿ ಬಾಲಿವುಡ್ ನಟಿ! ಸಂಭಾವನೆ ಎಷ್ಟು?

‘ರಾಯಭಾರಿಗಳನ್ನು ನೇಮಿಸುವುದು ಹಳೆಯ ಸಂಪ್ರದಾಯ. ಇದರಿಂದ ತೆರಿಗೆ ಪಾವತಿದಾರರ ಹಣ ವ್ಯರ್ಥಮಾಡಿದಂತಾಗುತ್ತದೆ. ಒಂದು ಉತ್ಪನ್ನಕ್ಕೆ ಜನ ಗ್ರಾಹಕರಾಗಲು, ಆ ಉತ್ಪನ್ನ ಉತ್ತಮವಾಗಿರಬೇಕು. ನಮ್ಮ ಮೈಸೂರು ಸ್ಯಾಂಡಲ್‌ ಸೋಪ್ ಉತ್ತಮ ಉತ್ಪನ್ನವಷ್ಟೇ ಅಲ್ಲ, ಅದು‌ ನಮ್ಮ ಪರಂಪರೆಯಾಗಿದೆ. ಮೈಸೂರು ಸ್ಯಾಂಡಲ್ ಸೋಪ್ ಬಳಸಿದ ಪ್ರತಿಯೊಬ್ಬ ವ್ಯಕ್ತಿಯು ಅದರ ರಾಯಭಾರಿ. ಪ್ರತಿಯೊಬ್ಬ ಕನ್ನಡಿಗ ಸಹ ಅದರ ರಾಯಭಾರಿ, ಅದನ್ನು ಪ್ರತಿಯೊಬ್ಬ ಕನ್ನಡಿಗನು ಉಚಿತವಾಗಿ ಜಗತ್ತಿಗೆ ಪರಿಚಯ ಮಾಡಿಕೊಡುವ ಕೆಲಸ ಮಾಡುತ್ತಾನೆ’ ಎಂದು ಅವರು ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

‘ಜಗತ್ತಿನ ಯಶಸ್ವಿ ಬ್ರಾಂಡ್‌ಗಳಲ್ಲಿ ಒಂದಾದ ಆ್ಯಪಲ್ ಸಂಸ್ಥೆ ಬ್ರಾಂಡ್ ಅಂಬಾಸಿಡರ್ ಹೊಂದಿಲ್ಲ. ರಾಯಭಾರಿಗಾಗಿ ಆ ಕಂಪನಿ ಹಣ ವ್ಯಯಿಸುವುದಿಲ್ಲ. ಹಾಗೆಯೇ, ಡವ್‍ ಸೋಪ್‍ ಪ್ರಚಾರ ಬಹಳ ಚೆನ್ನಾಗಿರುತ್ತದೆ’ ಎಂದು ಹೇಳಿಕೊಂಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page