Connect with us

DAKSHINA KANNADA

ಮಂಗಳೂರು : 4 ಪ್ರತ್ಯೇಕ ಅಪರಾಧ ಪ್ರಕರಣ ಬೇಧಿಸಿದ ಬಜ್ಪೆ ಪೊಲೀಸರು : ತಲೆಮರೆಸಿಕೊಂಡಿದ್ದ ಆರೋಪಿಗಳ ಹಡೆಮುರಿ ಕಟ್ಟಿದ ಅಧಿಕಾರಿಗಳು.!

Published

on

ಮಂಗಳೂರಿನ ಬಜ್ಪೆ ಠಾಣೆಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ನಾಲ್ಕು ಪ್ರತ್ಯೇಕ ಅಪರಾಧ ಪ್ರಕರಣಗಳನ್ನು ಬೇಧಿಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.

ಮಂಗಳೂರು : ಮಂಗಳೂರಿನ ಬಜ್ಪೆ ಠಾಣೆಯ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿ ನಾಲ್ಕು ಪ್ರತ್ಯೇಕ ಅಪರಾಧ ಪ್ರಕರಣಗಳನ್ನು ಬೇಧಿಸಿದ್ದು, ಆರೋಪಿಗಳನ್ನು ಬಂಧಿಸಿದ್ದಾರೆ.

2020ನೇ ಇಸವಿಯಲ್ಲಿ ದಾಖಲಾದ ಬೈಕ್ ಕಳವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮಂಗಳೂರು ಉಳಾಯಿಬೆಟ್ಟು ನಿವಾಸಿ 27 ವರ್ಷದ ಪ್ರದೀಪ್ ಪೂಜಾರಿ ಎಂಬಾತನನ್ನು ಫೆಬ್ರವರಿ 16ರಂದು ನಗರದ ಕುಳಾಯಿ ಎಂಬಲ್ಲಿ ಬಂಧಿಸಲಾಗಿದೆ.

ಈತನ ವಿರುದ್ಧ ಕೊಲೆಗೆ ಯತ್ನ, ಪೊಲೀಸರ ಮೇಲೆ ಹಲ್ಲೆ ಮತ್ತು ಬೈಕ್ ಕಳವಿಗೆ ಸಂಬಂಧಿಸಿದಂತೆ ಮಂಗಳೂರು ಮತ್ತು ದ.ಕ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ಬಜ್ಪೆ ಪೊಲೀಸ್ ಠಾಣೆಯಲ್ಲಿ 2012ನೇ ಇಸವಿಯಲ್ಲಿ ದಾಖಲಾದ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮಂಗಳೂರು ಬೋಳೂರು ಕಟ್ಟೆಯ ನಿವಾಸಿ 39 ವರ್ಷದ ಪ್ರಶಾಂತ್ ಎಂಬಾತನನ್ನು ಫೆಬ್ರವರಿ 15ರಂದು ಉಡುಪಿ ಕುಂದಾಪುರದಲ್ಲಿ ಬಂಧಿಸಲಾಗಿದೆ.

ಬಜ್ಪೆ ಪೊಲೀಸ್ ಠಾಣೆಯಲ್ಲಿ 2019ನೇ ಇಸವಿಯಲ್ಲಿ ದಾಖಲಾದ ದರೋಡೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ನಿವಾಸಿ 33 ವರ್ಷದ ತಾರ್ಹಿಬ್ ಅಫ್ನಾನ್ ಪಟೇಲ್ ಎಂಬಾತನನ್ನು ಫೆಬ್ರವರಿ 15ರಂದು ಭಟ್ಕಳದಲ್ಲಿ ಬಂಧಿಸಲಾಗಿದೆ.

ಬಜ್ಪೆ ಪೊಲೀಸ್ ಠಾಣೆಯಲ್ಲಿ 2021ನೇ ಇಸವಿಯಲ್ಲಿ ದಾಖಲಾದ MMRD ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಉಡುಪಿಯ ಶಿವಳ್ಳಿಯ ನಿವಾಸಿ 38 ವರ್ಷದ ಸುರೇಶ್ ಕುಮಾರ್ ಎಂಬಾತನನ್ನು ಫೆಬ್ರವರಿ 15ರಂದು ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬಂಧಿಸಲಾಗಿದೆ.

ಬಜ್ಪೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 4 ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯದ ಮುಂದೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗಳ ಪತ್ತೆಗೆ ಬಲೆ ಬಿಸಿದ ಬಜ್ಪೆ ಠಾಣೆಯ ಪೊಲೀಸ್ ನಿರೀಕ್ಷಕರಾದ ಪ್ರಕಾಶ್ ರವರ ತಂಡ ವಿಳಾಸ ಬದಲಿಸಿ ಬೇರೆ ಬೇರೆ ಕಡೆಗಳಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪತ್ತೆ ಮಾಡಿ ನ್ಯಾಯಾಲಯದ ಮುಂದೆ ಹಾಜರುಪಡಿಸಿದೆ.

ಆರೋಪಿಗಳಿಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

DAKSHINA KANNADA

ಮೂಡುಬಿದಿರೆ : ಸ್ವಂತ ಉದ್ಯಮದ ಸಿದ್ಧತೆಯಲ್ಲಿದ್ದ ಯುವಕ ಆ*ತ್ಮಹ*ತ್ಯೆ

Published

on

ಮೂಡುಬಿದಿರೆ : ಸ್ವಂತ ಉದ್ಯಮ ಸ್ಥಾಪಿಸುವ ಕನಸು ಹೊತ್ತು ಸಿದ್ಧತೆ ನಡೆಸುತ್ತಿದ್ದ ಯುವಕನೋರ್ವ ಆ*ತ್ಮಹ*ತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಮೂಡುಬಿದಿರೆಯ ರಿಂಗ್‌ರೋಡ್ ಬಳಿ ನಡೆದಿದೆ.  ಮೂಡುಬಿದಿರೆ ರಿಂಗ್ ರೋಡ್‌ನ ನಾಗರಕಟ್ಟೆ-ಒಂಟಿಕಟ್ಟೆ ಕ್ರಾಸ್ ಬಳಿ ಕಬ್ಬಿನ ಜ್ಯೂಸ್ ವ್ಯಾಪಾರ ಮಾಡುತ್ತಿರುವ ಶ್ರೀನಿವಾಸ್ ಎಂಬುವವರ ಪುತ್ರ ದೀಕ್ಷಿತ್ (35) ಮೃ*ತಪಟ್ಟ ಯುವಕ.

ಹಲವು ವರ್ಷಗಳ ಕಾಲ ದುಬೈನಲ್ಲಿ ಉದ್ಯೋಗದಲ್ಲಿದ್ದ ದೀಕ್ಷಿತ್, ಒಂದೂವರೆ ವರ್ಷದ ಹಿಂದೆ ತವರಿಗೆ ಮರಳಿದ್ದರು. ಮೂಡುಬಿದಿರೆಯ ರಿಂಗ್‌ರೋಡ್ ಬಳಿ ಹೋಟೆಲ್ ಉದ್ಯಮ ಪ್ರಾರಂಭಿಸಬೇಕೆಂಬ ಹಂಬಲ ಹೊಂದಿದ್ದ ಅವರು, ಅದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದರು. ಆದರೆ ಶನಿವಾರ(ಜ.17) ಮಧ್ಯಾಹ್ನ, ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮಲಗಿದ್ದ ಸಮಯದಲ್ಲಿ, ಮನೆಯ ಕೋಣೆಯ ಕಿಟಕಿಗೆ ನೇ*ಣು ಬಿಗಿದುಕೊಂಡು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : ರಸ್ತೆ ವಿಭಜಕಕ್ಕೆ ಎಸ್ ಯುವಿ ಡಿ*ಕ್ಕಿ; 5 ಮಂದಿ ಸಾ*ವು

ದೀಕ್ಷಿತ್ ಅವರ ಈ ತೀವ್ರ ನಿರ್ಧಾರಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಉತ್ತಮ ಭವಿಷ್ಯದ ಕನಸು ಕಂಡಿದ್ದ ಯುವಕನ ಆ*ತ್ಮಹ*ತ್ಯೆಯು ಕುಟುಂಬಸ್ಥರಲ್ಲಿ ಮತ್ತು ಸ್ನೇಹಿತರಲ್ಲಿ ಭಾರೀ ಶೋಕವನ್ನುಂಟು ಮಾಡಿದೆ.

 

 

Continue Reading

DAKSHINA KANNADA

ಡಾ. ಬಿ. ವಿ. ಮಂಜುನಾಥ್ ಅವರಿಗೆ FRCP (ಗ್ಲಾಸ್ಗೋ–ಯುಕೆ) ಪ್ರಶಸ್ತಿ

Published

on

ಮಂಗಳೂರು : ಯುನೈಟೆಡ್ ಕಿಂಗ್ಡಮ್‌ನ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್ ಅಂಡ್ ಸರ್ಜನ್ಸ್ ಆಫ್ ಗ್ಲಾಸ್ಗೋ ಸಂಸ್ಥೆಯು ಹೃದಯರೋಗ ಕ್ಷೇತ್ರದಲ್ಲಿ ವಿಶಿಷ್ಟ ವೈದ್ಯಕೀಯ ಮತ್ತು ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ, ಕಾರ್ಡಿಯಾಲಜಿ ವಿಭಾಗದ ಪ್ರಾಧ್ಯಾಪಕ,  ಮುಖ್ಯಸ್ಥರ ಹಾಗೂ ಮುಖ್ಯ ಇಂಟರ್ವೆನ್ಶನಲ್ ಕಾರ್ಡಿಯಾಲಜಿಸ್ಟ್ ಆಗಿರುವ ಡಾ. ಬಿ. ವಿ. ಮಂಜುನಾಥ್ ಅವರಿಗೆ ಅತ್ಯಂತ ಗೌರವಾನ್ವಿತ “ಆನರರಿ FRCP” (ಫೆಲೋ ಆಫ್ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್) ಪ್ರಶಸ್ತಿಯನ್ನು ಪ್ರದಾನಿಸಿದೆ.

ಡಾ. ಮಂಜುನಾಥ್ ಅವರಿಗೆ 36 ವರ್ಷಗಳಿಗಿಂತ ಹೆಚ್ಚು ಹೃದಯರೋಗ ಚಿಕಿತ್ಸಾ ಅನುಭವವಿದ್ದು, ಅನೇಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಂಶೋಧನಾ ಲೇಖನಗಳು ಮತ್ತು ಪ್ರಸ್ತುತಿಗಳು, ಪಿಎಚ್‌ಡಿ ಮಾರ್ಗದರ್ಶಕರಾಗಿ ಹಾಗೂ ವಿಶ್ವವಿದ್ಯಾಲಯದ ಪರೀಕ್ಷಕರಾಗಿ ಸೇವೆ, ಮತ್ತು ಅನೇಕ ಪದವಿ, ಸ್ನಾತಕೋತ್ತರ ಹಾಗೂ ಡಿಎಂ ಕಾರ್ಡಿಯಾಲಜಿ ಫೆಲೋಶಿಪ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಶ್ರೇಷ್ಠ ಸೇವೆ ಸಲ್ಲಿಸಿದ್ದಾರೆ. ಇದಲ್ಲದೆ, ಅವರು ಹೃದಯ ಕ್ಯಾಥ್ ಲ್ಯಾಬ್‌ನಲ್ಲಿ ಅನೇಕ ಸಂಕೀರ್ಣ ಇಂಟರ್ವೆನ್ಶನಲ್ ಪ್ರಕ್ರಿಯೆಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ.

ಆನರರಿ FRCP ಪದವಿ ಪರೀಕ್ಷಾಧಾರಿತ ಪದವಿಯಿಂದ ಭಿನ್ನವಾಗಿದ್ದು, ಇದು ಅನುಭವಿ ವೈದ್ಯರಿಗೆ ನೀಡಲಾಗುವ ಅತ್ಯಂತ ಅಪರೂಪದ ಹಾಗೂ ಗೌರವಾನ್ವಿತ ಅಂತಾರಾಷ್ಟ್ರೀಯ ಫೆಲೋಶಿಪ್ ಆಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ವೈದ್ಯಕೀಯ, ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರಗಳಿಗೆ ಮಹತ್ವದ ಕೊಡುಗೆ ನೀಡಿದವರಿಗೆ ಈ ಗೌರವ ಲಭಿಸುತ್ತದೆ ಮತ್ತು ಇದು ಅಂತಾರಾಷ್ಟ್ರೀಯ ಮಟ್ಟದ ಸಹೋದ್ಯೋಗಿ ಮಾನ್ಯತೆಯನ್ನು ನೀಡುತ್ತದೆ.

ಇದನ್ನೂ ಓದಿ : ಅಂತ್ಯ ಅಲ್ಲ….ಇದು ಹೊಸ ಆರಂಭ..ಧ್ರುವಂತ್ ಗೆಟಪ್ ಚೇಂಜ್

ಈ ಗೌರವವನ್ನು ವಿಶ್ವದಾದ್ಯಂತ ಆಯ್ಕೆಯಾದ ಕೆಲವೇ ವೈದ್ಯರಿಗೆ (ವಾರ್ಷಿಕವಾಗಿ ಗರಿಷ್ಠ 15 ಜನರಿಗೆ ಮಾತ್ರ) ರಾಯಲ್ ಕಾಲೇಜ್ ಸದಸ್ಯರ ಮತದಾನದ ಮೂಲಕ ಪ್ರದಾನಿಸಲಾಗುತ್ತದೆ.

 

Continue Reading

DAKSHINA KANNADA

ಸಜೀಪ ಮೂಡ ವಲಯ  ಕಾಂಗ್ರೆಸ್ ಸಮಿತಿ :  ನೂತನ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ

Published

on

ಬಂಟ್ವಾಳ : ಪಾಣೆಮಂಗಳೂರು  ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಜೀಪಮೂಡ ವಲಯ  ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆಯವರನ್ನು ನೇಮಕ ಮಾಡಲಾಗಿದೆ.

ಮಾಜಿ ಸಚಿವ ಬಿ.ರಮಾನಾಥ ರೈ ಶಿಫಾರಸ್ಸಿನ ಮೇರೆಗೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಚಂದ್ರಶೇಖರ ಭಂಡಾರಿ ನೇಮಕಾತಿ ಆದೇಶ ಪತ್ರವನ್ನು ನೀಡಿದರು.

ಇದನ್ನೂ ಓದಿ : ಅಂತ್ಯ ಅಲ್ಲ….ಇದು ಹೊಸ ಆರಂಭ..ಧ್ರುವಂತ್ ಗೆಟಪ್ ಚೇಂಜ್

ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ  ಕಾರ್ಮಿಕ ಘಟಕದ ಅಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಹಾಗೂ ಸಜೀಪ ಮೂಡ ವಲಯ ಕಾಂಗ್ರೆಸ್‌ನ ಅಧ್ಯಕ್ಷ ಎನ್.ಕರೀಂ  ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page