Connect with us

DAKSHINA KANNADA

ರಾಷ್ಟ್ರ ಮಟ್ಟದ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

2023-24ನೇ ಸಾಲಿಗೆ ರಾಷ್ಟ್ರ ಮಟ್ಟದ ಶೌರ್ಯ ಪ್ರಶಸ್ತಿಗೆ 6ರಿಂದ 18ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗು ತೊರೆದು ಸಾಮಾಜಿಕ ಪಿಡುಗುಗಳ ನಿವಾರಣೆಗಾಗಿ, ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ನಿಸ್ವಾರ್ಥ ಸೇವೆಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಮಂಗಳೂರು: 2023-24ನೇ ಸಾಲಿಗೆ ರಾಷ್ಟ್ರ ಮಟ್ಟದ ಶೌರ್ಯ ಪ್ರಶಸ್ತಿಗೆ 6ರಿಂದ 18ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗು ತೊರೆದು ಸಾಮಾಜಿಕ ಪಿಡುಗುಗಳ ನಿವಾರಣೆಗಾಗಿ, ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಸಾಹಸ ಪ್ರದರ್ಶಿಸಿದ ನಿಸ್ವಾರ್ಥ ಸೇವೆಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳು ಶೌರ್ಯ ಪ್ರದರ್ಶಿಸಿದ ಅವಧಿ 2022ರ ಜು. 1ರಿಂದ 2023ರ ಸೆ. 30ರೊಳಗೆ ನಡೆದಿರಬೇಕು.

ಈ ಬಗ್ಗೆ ಪೊಲೀಸ್ ಇಲಾಖೆಯಲ್ಲಿ ದಾಖಲಾದ ಪ್ರಥಮ ವರ್ತಮಾನ ವರದಿ, ಛಾಯಾಚಿತ್ರ, ಜನ್ಮ ದಾಖಲೆ (ಆಯಾ ವ್ಯಾಪ್ತಿಯ ಪ್ರಾಂಶುಪಾಲರು ಮುಖ್ಯೋಪಾಧ್ಯಾಯರು ಮತ್ತು ಠಾಣಾಧಿಕಾರಿ ದೃಢೀಕರಿಸಿದ) ಹಾಗೂ ಶೌರ್ಯ ಪ್ರದರ್ಶಿಸಿದ ಬಗೆಗಿನ ಪತ್ರಿಕಾ ವರದಿ ಇನ್ನಿತರ ಪೂರಕ ದಾಖಲೆಗಳನ್ನು ಅರ್ಜಿ ಜೊತೆಗೆ ಲಗತ್ತಿಸಿರಬೇಕು.

ಅರ್ಜಿಯನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಸ್ತ್ರೀಶಕ್ತಿ ಭವನ, ಎರಡನೇ ಮಹಡಿ, ಮೆಸ್ಕಾಂ ಬಳಿ ಬಿಜೈ, ಮಂಗಳೂರು ಈ ಕಚೇರಿಗೆ ಆಂಗ್ಲ ಭಾಷೆಯಲ್ಲಿ ದ್ವಿಪ್ರತಿಯಲ್ಲಿ 2023ರ ಅ.10 ರೊಳಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ ವಿಳಾಸ: www.iccw.co.in ಅಥವಾ ದೂ.ಸಂ.0824-2451254 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BELTHANGADY

ಭಾರೀ ಮಳೆಗೆ ಬೆಳ್ತಂಗಡಿಯಲ್ಲಿ ಧರೆಗುರುಳಿದ 131 ವಿದ್ಯುತ್ ಕಂಬಗಳು

Published

on

ಬೆಳ್ತಂಗಡಿ: ಕಳೆದ ಒಂದು ವಾರದಿಂದ ವಾತಾವರಣದ ಉಷ್ಣತೆಯು ವಿಪರೀತ ಏರಿಕೆಯಾಗಿತ್ತು. ಆದರೆ ಬಿಸಿಯ ಗಾಳಿಗೆ ತತ್ತರಿಸಿ ಹೋಗಿದ್ದ ಜನರಿಗೆ ಇದೀಗ ವರುಣದೇವ ತಂಪೆರೆದಿದ್ದಾನೆ. ರಾಜ್ಯದ ಹಲವು ಭಾಗಗಳಲ್ಲಿ ಈಗ ಮಳೆಯ ಆರ್ಭಟ ಜೋರಾಗಿದೆ.

ಕರಾವಳಿಯಲ್ಲೂ ಮಳೆಯ ಸಿಂಚನವಾಗಿದ್ದು, ತಾಲೂಕಿನಾದ್ಯಂತ ಭರ್ಜರಿ ಮಳೆಯಾಗಿದೆ. ಮಳೆಯ ಆರ್ಭಟಕ್ಕೆ ಕೆಲ ತಾಲೂಕಿನಲ್ಲಿ ಅಪಾರ ಪ್ರಮಾಣದ ಹಾನಿ ಉಂಟಾಗಿದೆ. ಬೆಳ್ತಂಗಡಿ ತಾಲೂಕಿನಲ್ಲಿ ಮಳೆಯ ರಭಸಕ್ಕೆ 131 ವಿದ್ಯುತ್ ಕಂಬಗಳು ಧರೆಗುರುಳಿದೆ.

ರಭಸದ ಗಾಳಿಯೊಂದಿಗೆ ಆರ್ಭಟಿಸಿದ ವರ್ಷದ ಮೊದಲ ಮಳೆಗೆ ಬೆಳ್ತಂಗಡಿಯಲ್ಲಿ ಒಟ್ಟು 131 ವಿದ್ಯುತ್ ಕಂಬಗಳು ನೆಲಕ್ಕುರುಳಿದೆ. ಹೀಗಾಗಿ ತಾಲೂಕಿನೆಲ್ಲೆಡೆ ಕರೆಂಟ್ ಇಲ್ಲದೇ ಜನರು ಪರದಾಡುವಂತೆ ಆಗಿದೆ. ಅಪಾರ ಸಂಖ್ಯೆಯಲ್ಲಿ ಅಡಿಕೆ, ತೆಂಗು, ಬಾಳೆ ಗಿಡಗಳು ತುಂಡಾಗಿ ಅಪಾರ ಪ್ರಮಾಣದ ಕೃಷಿನಷ್ಟ ಉಂಟಾಗಿದೆ.

Continue Reading

DAKSHINA KANNADA

ಭಗತ್ ಸಿಂಗ್ ಆರ್ಮಿ ಮಂಗಳೂರು : ಎಪ್ರಿಲ್ 25 ರಂದು ಉರ್ವದಲ್ಲಿ ‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ; ಆಮಂತ್ರಣ ಪತ್ರಿಕೆ ಬಿಡುಗಡೆ

Published

on

ಮಂಗಳೂರು : ಭಗತ್ ಸಿಂಗ್ ಆರ್ಮಿ ಮಂಗಳೂರು ವತಿಯಿಂದ ಎಪ್ರಿಲ್ 25 ರ ಶುಕ್ರವಾರದಂದು ಶ್ರೀ ದೇವಿ ಮಹಾತ್ಮೆ ಯಕ್ಷಗಾನವನ್ನು ಆಯೋಜಿಸಲಾಗಿದೆ. ಇದರ ಆಮಂತ್ರಣ ಪತ್ರಿಕೆಯನ್ನು ಇಂದು(ಮಾ.14) ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರದಲ್ಲಿ ಅನಾವರಣ ಮಾಡಲಾಗಿದೆ.

ಕಾರ್ಯಕ್ರಮ ವಿವರ :

ಉರ್ವ ಮೈದಾನದಲ್ಲಿ ‘ಶ್ರೀದೇವಿ ಮಹಾತ್ಮೆ’  ಯಕ್ಷಗಾನ ಬಯಲಾಟ ನಡೆಯಲಿದೆ.  ಸಂಜೆ 5.30 ಕ್ಕೆ ಚೌಕಿ ಪೂಜೆ ನಡೆಯಲಿದೆ. ಅನ್ನ ಸಂತರ್ಪಣೆಯನ್ನೂ ಹಮ್ಮಿಕೊಳ್ಳಲಾಗಿದೆ. ಕಟೀಲು ಶ್ರೀದುರ್ಗಾಪರಮೇಶ್ವರಿ ಪ್ರಸಾದಿತ ದಶವಾತಾರ ಯಕ್ಷಗಾನ ಮಂಡಳಿಯಿಂದ ಪ್ರತಿ ವರ್ಷ ಉರ್ವ ಮೈದಾನದಲ್ಲಿ ದೇವಿ ಮಹಾತ್ಮೆ ಯಕ್ಷಗಾನವನ್ನು ಭಗತ್ ಸಿಂಗ್ ಆರ್ಮಿ ಆಯೋಜಿಸಿಕೊಂಡು ಬಂದಿದೆ. ಈ ವರ್ಷದ ಯಕ್ಷಗಾನ ಎಪ್ರಿಲ್ 25 ರಂದು ನಡೆಯಲಿದೆ. ಮಧ್ಯಾಹ್ನ 3  ಗಂಟೆಗೆ ಸರಿಯಾಗಿ ಶ್ರೀ ಕ್ಷೇತ್ರ ಚಾಮುಂಡೇಶ್ವರಿ ಹೊಯ್ಗೆಬೈಲ್‌ನಿಂದ ಭವ್ಯವಾದ ಮೆರವಣಿಗೆ ಹೊರಡಲಿದೆ.

ಇದನ್ನೂ ಓದಿ : ಕಟೀಲು ಕ್ಷೇತ್ರಕ್ಕೆ ಖ್ಯಾತ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಭೇಟಿ

ಭಕ್ತಾದಿಗಳು ತನು ಮನ, ಧನದಿಂದ ಸಹಕರಿಸಿ ದೇವಿಯ ಗಂಧ ಪ್ರಸಾದ ಸ್ವೀಕರಿಸುವಂತೆ ಸಂಘಟಕರು ಮನವಿ ಮಾಡಿದ್ದಾರೆ.

Continue Reading

DAKSHINA KANNADA

ತುಳು ಕಲಾವಿದ ವಿವೇಕ್ ಮಾಡೂರು ನಿ*ಧನ

Published

on

ಮಂಗಳೂರು : ತುಳು ನಟ ವಿವೇಕ್ ಮಾಡೂರು ಶುಕ್ರವಾರ ಬೆಳಿಗ್ಗೆ ಮಾಡೂರಿನ ಸ್ವಗೃಹದಲ್ಲಿ ನಿ*ಧನರಾದರು. ಅವರಿಗೆ 52 ವರ್ಷ ವಯಸ್ಸಾಗಿತ್ತು. ಗುರುವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಅವರನ್ನು ಇಂದು ಬೆಳಿಗ್ಗೆ ಮನೆ ಮಂದಿ ಎಬ್ಬಿಸಲು ಹೋದಾಗ ಮೃ*ತಪಟ್ಟಿರುವುದು ತಿಳಿದುಬಂದಿದೆ.

ಈ ಹಿಂದೆ ಟೆಲಿಫೋನ್ ಎಸ್ ಟಿಡಿ ಬೂತ್ ನಡೆಸುತ್ತಿದ್ದ ವಿವೇಕ್ ಬೂತ್ ಮುಚ್ಚಿದ ಬಳಿಕ ಅಣ್ಣನ ದಿನಸಿ ಅಂಗಡಿಯಲ್ಲಿ ಪ್ಲಾಸ್ಟಿಕ್ ಮನೆ ಬಳಕೆಯ ಸಾಮಾಗ್ರಿಗಳನ್ನು ಮಾರಾಟ ಮಾಡುತ್ತಿದ್ದರು. ಕಳೆದ ಹಲವು ವರ್ಷಗಳಿಂದ ತುಳು ರಂಗಭೂಮಿಯಲ್ಲಿ ಮಾತ್ರವಲ್ಲದೇ, ತುಳು ಚಿತ್ರರಂಗದಲ್ಲೂ ಅಭಿನಯಿಸಿದ್ದರು.

ಇದನ್ನೂ ಓದಿ : ಮಹತ್ವ ಪಡೆದುಕೊಂಡ ಅಮೆರಿಕ ಉಪಾಧ್ಯಕ್ಷರ ಭಾರತ ಭೇಟಿ?

ತನ್ನ ಕುಬ್ಜ ದೇಹದಿಂದಲೇ ಮನರಂಜಿಸುತ್ತಿದ್ದ, ವೃತ್ತಿಪರ ಹಾಸ್ಯ ಕಲಾವಿದ ವಿವೇಕ್, ಹೆಸರಾಂತ ನಾಟಕ ತಂಡಗಳಲ್ಲಿ ಅಭಿನಯಿಸಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಹಲವು, ಸಂಘ, ಸಂಸ್ಥೆಗಳು ಸನ್ಮಾನಿಸಿವೆ.  ಅಕಾಲಿಕವಾಗಿ ಅ*ಗಲಿದ ಕಲಾವಿದನಿಗೆ ತುಳು ರಂಗಭೂಮಿ ಹಾಗೂ ಚಿತ್ರರಂಗ ಕಂಬನಿ ಮಿಡಿದಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page