Connect with us

DAKSHINA KANNADA

ಮಂಗಳೂರು ವಿಮಾನ ನಿಲ್ದಾಣದಲ್ಲಿ 1.69 ಕೋಟಿ ಮೌಲ್ಯದ ವಜ್ರದ ಹರಳುಗಳು ವಶ – ಒರ್ವನ ಬಂಧನ..!

Published

on

ಬಜಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಕಳ್ಳಸಾಗಣೆಯಾಗುತ್ತಿದ್ದ 1.69 ಕೋಟಿ ಮೌಲ್ಯದ ಒಟ್ಟು 306.21 ಕ್ಯಾರೆಟ್ ವಜ್ರಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಮಂಗಳೂರು: ಬಜಪೆ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಕಳ್ಳಸಾಗಣೆಯಾಗುತ್ತಿದ್ದ 1.69 ಕೋಟಿ ಮೌಲ್ಯದ ಒಟ್ಟು 306.21 ಕ್ಯಾರೆಟ್ ವಜ್ರಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಕಳ್ಳಸಾಗಣೆ ಮಾಡಿದ ಕುರಿತು ಬೆಂಗಳೂರಿನ ಕಸ್ಟಮ್ಸ್ ಇಲಾಖೆ ಕಚೇರಿಯು ಟ್ವೀಟ್ ಮಾಡಿದೆ.

ಮೇ 25ರಂದು ದುಬೈಗೆ ತೆರಳಬೇಕಿದ್ದ ಪ್ರಯಾಣಿಕನೊರ್ವ ವಜ್ರಗಳನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ್ದ ಆತನನ್ನು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ದುಬೈಗೆ ತೆರಳಲಿದ್ದ ಪ್ರಯಾಣಿಕನನ್ನು ಸಿಐಎಸ್ಎಫ್ ಸಿಬ್ಬಂದಿ ತಪಾಸಣೆ ನಡೆಸುವಾಗ ಆತನ ಪ್ಯಾಂಟ್ ಒಳಗೆ ಒಳ ಉಡುಪಿನಲ್ಲಿ ಬಚ್ಚಿಟ್ಟಿದ್ದ ಎರಡು ಪೊಟ್ಟಣಗಳಲ್ಲಿ ಹರಳುಗಳಿದ್ದುದು ಕಂಡುಬಂದಿತ್ತು.

ಆರೋಪಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಕಸ್ಟಮ್ಸ್ ಇಲಾಖೆ ತಿಳಿಸಿದೆ.

ದುಬೈಗೆ ತೆರಳಲಿದ್ದ ಪ್ರಯಾಣಿಕನನ್ನು ಸಿಐಎಸ್ಎಫ್ ಸಿಬ್ಬಂದಿ ತಪಾಸಣೆ ನಡೆಸುವಾಗ ಆತನ ಪ್ಯಾಂಟ್ ಒಳಗೆ ಒಳ ಉಡುಪಿನಲ್ಲಿ ಬಚ್ಚಿಟ್ಟಿದ್ದ ಎರಡು ಪೊಟ್ಟಣಗಳಲ್ಲಿ ಹರಳುಗಳಿದ್ದುದು ಕಂಡುಬಂದಿದೆ ಎನ್ನಲಾಗಿದೆ.

ಆ ಎರಡು ಪೊಟ್ಟಣಗಳನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಅದರೊಳಗೆ 13 ಸಣ್ಣ ಪೊಟ್ಟಣಗಳಲ್ಲಿ ವಜ್ರದ ಹರಳುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದದ್ದು ಪತ್ತೆಯಾಗಿತ್ತು.

ಭದ್ರತಾ ಸಿಬ್ಬಂದಿ ಕಾಸರಗೋಡಿನ ಆ ಪ್ರಯಾಣಿಕನನ್ನು ವಶಕ್ಕೆ ಪಡೆದು, ಕಸ್ಟಮ್ಸ್ ಅಧಿಕಾರಿಗಳ ಸುಪರ್ದಿಗೆ ಒಪ್ಪಿಸಿದ್ದರು.

ಬಳಿಕ ಆರೋಪಿಯನ್ನು ಬಂಧಿಸಿದ ಕಸ್ಟಮ್ಸ್ ಅಧಿಕಾರಿಗಳು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ‌.

ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

DAKSHINA KANNADA

ಉಳ್ಳಾಲ ಸೋಮೇಶ್ವರ ಕ್ಷೇತ್ರದಲ್ಲಿ ಸ್ಥಳವಕಾಶದ ಕೊರತೆ; ಸರಕಾರಿ ಜಾಗ ನೀಡುವಂತೆ ಸಂಸದರಿಗೆ ಮನವಿ

Published

on

ಉಳ್ಳಾಲ : ಉಳ್ಳಾಲ ತಾಲೂಕಿನ ಇತಿಹಾಸ ಪ್ರಸಿದ್ಧ ಸೋಮೇಶ್ವರ ಶ್ರೀ ಸೋಮನಾಥ ಕ್ಷೇತ್ರದಲ್ಲಿ ಪ್ರವಾಸೋದ್ಯಮ,ಗೋಶಾಲೆ ಹಾಗೂ ಇನ್ನಿತರ ಅಭಿವೃದ್ಧಿ ಕಾರ್ಯಗಳನ್ನ ನಡೆಸಲು ಸ್ಥಳವಕಾಶದ ಕೊರತೆ ಎದುರಾಗಿದ್ದು, ಆ ನಿಟ್ಟಿನಲ್ಲಿ ದೇವಸ್ಥಾನದ ಅಂಗಣದ ರೈಲ್ವೇ ಇಲಾಖೆಯ ಅಧೀನದಲ್ಲಿರುವ ಒಟ್ಟು 3 ಎಕರೆ 66 ಸೆಂಟ್ಸ್ ಸರಕಾರಿ ಜಾಗವನ್ನ ಸೋಮನಾಥ ಕ್ಷೇತ್ರಕ್ಕೆ ಪಹಣಿ ಮಾಡಿಸುವಂತೆ ಕೋಟೆಕಾರಿನ‌ ಸನಾತನ ಧರ್ಮ ಜಾಗೃತಿ ಸಮಿತಿ ವತಿಯಿಂದ ಸಂಸದ ಬೃಜೇಶ್ ಚೌಟ ಮತ್ತು ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್ ಅವರಿಗೆ ಶನಿವಾರ(ಮಾ.15) ಮನವಿ ಸಲ್ಲಿಸಲಾಯಿತು.

ಸೋಮನಾಥೇಶ್ವರ ಕ್ಷೇತ್ರದ ಹೆಸರಲ್ಲಿ ಮುಂದಕ್ಕೆ ಪ್ರಸಾದ್ ಯೋಜನೆಯಡಿಯಲ್ಲಿ ಪ್ರವಾಸೋದ್ಯಮ, ಗೋಶಾಲೆ ನಿರ್ಮಾಣ ಹಾಗೂ ಇನ್ನಿತರ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಬೇಕೆಂಬ ಉದ್ದೇಶವಿದ್ದು,ಇದಕ್ಕೆ ಸ್ಥಳಾವಕಾಶದ ಕೊರತೆ ಎದುರಾಗಿದೆ. ಸೋಮನಾಥ ಕ್ಷೇತ್ರದ ಮುಂದುಗಡೆಯ ಸೋಮೇಶ್ವರ ಗ್ರಾಮಕ್ಕೊಳಪಟ್ಟ ಸರ್ವೆ ನಂಬ್ರ 74/12ಎ ಯಲ್ಲಿ 1 ಎಕರೆ 35 ಸೆಂಟ್ಸ್ ಹಾಗೂ ಸರ್ವೆ ನಂಬ್ರ 206/5ಸಿ ಯಲ್ಲಿ 2 ಎಕರೆ 31 ಸೆಂಟ್ಸ್ (ಒಟ್ಟು 3 ಎಕರೆ 66 ಸೆಂಟ್ಸ್) ಸರಕಾರಿ ಜಾಗವು ರೈಲ್ವೆ ಇಲಾಖೆಯ ಅಧೀನದಲ್ಲಿದೆ. ಈ ಎರಡು ಸರಕಾರಿ ಜಾಗದಲ್ಲಿ ಸಾಧಾರಣ 75 ವರ್ಷಕ್ಕಿಂತಲೂ ಹಿಂದೆ ರೈಲ್ವೆ ಇಲಾಖೆಗೆ ಜಲ್ಲಿ ಕಲ್ಲು ತೆಗೆಯಲಿಕ್ಕಾಗಿ ಭೂಮಾಪನ ಇಲಾಖೆಯಿಂದ ಪರವಾನಗಿ ನೀಡಲಾಗಿತ್ತು. ಸದ್ರಿ ಆ ಪರವಾನಗಿಯು ರದ್ದಾಗಿ ಸಾಧಾರಣ 35 ವರ್ಷ ಮೇಲ್ಪಟ್ಟಿದೆ. ಸೋಮೇಶ್ವರ ಕ್ಷೇತ್ರದ ಅಭಿವೃದ್ಧಿಗೆ ಸ್ಥಳದ ಕೊರತೆ ಇರುವ ಕಾರಣ, ನಾವು ತಿಳಿಸಿರುವ ಸರಕಾರಿ ಜಾಗವನ್ನು ರೈಲ್ವೆ ಇಲಾಖೆಯ ಹೆಸರಿನಿಂದ ಪಹಣಿ ಪತ್ರ ರದ್ದುಪಡಿಸಿ, ದೇವಸ್ಥಾನದ ಹೆಸರಿಗೆ ಮಾಡಿಸಿಕೊಡಬೇಕಾಗಿ ಕೋರಲಾಗಿದೆ.

ಸೋಮೇಶ್ವರ ಕ್ಷೇತ್ರದಲ್ಲಿ ಪ್ರಕೃತಿ ರಮಣೀಯ ಬೀಚ್, ವಿಶಾಲವಾದ ರುದ್ರಪಾದೆ, ಪಾದೆಕಲ್ಲಿನ ಮೇಲೆ ಕಾರಣೀಕ ಸೋಮನಾಥ ದೇವಸ್ಥಾನವಿದ್ದು, ಪವಿತ್ರವಾದ”ಗಧಾ ತೀರ್ಥ” ಕೆರೆಯೂ ಇಲ್ಲಿದೆ. ಈ ಕ್ಷೇತ್ರವನ್ನ ಕೇಂದ್ರ ಸರಕಾರದ ಪ್ರಸಾದ್ ಯೋಜನೆ ಹಾಗೂ ಸ್ವದೇಶ್ ದರ್ಶನ್ ಯೋಜನೆಯ ಪಟ್ಟಿಗೆ ಸೇರಿಸುವಂತೆ ಸನಾತನ ಧರ್ಮ‌ ಜಾಗೃತಿ ಸಮಿತಿಯು ಸಂಸದರು ಮತ್ತು ಅಪರ ಜಿಲ್ಲಾಧಿಕಾರಿಯವರಿಗೆ ಲಿಖಿತ ಮನವಿ ನೀಡಿ ವಿನಂತಿಸಿದೆ.

ಇದನ್ನೂ ಓದಿ : ಕಿನ್ನಿಗೋಳಿ ಸಮೀಪದ ಉಳೆಪಾಡಿಯಲ್ಲಿ ಚಿರತೆಯ ಶ*ವ ಪತ್ತೆ!

ಈ ಸಂದರ್ಭ ಕೋಟೆಕಾರು ಸನಾತನ ಧರ್ಮ ಜಾಗೃತಿ ಸಮಿತಿ ಅಧ್ಯಕ್ಷ ರಮೇಶ್ ಕೊಲ್ಯ, ಉಪಾಧ್ಯಕ್ಷ ಸುರೇಂದ್ರನ್ ಪಿ.ಬೀರಿ, ಕೋಶಾಧಿಕಾರಿ ಗಣೇಶ್ ಕೊಲ್ಯ, ಪ್ರ.ಕಾರ್ಯದರ್ಶಿ ಕೃಷ್ಣರಾಜ್ ಕೆ.ಆರ್, ಜೊತೆ ಕಾರ್ಯದರ್ಶಿ ಜಯಂತ್ ಸಂಕೋಳಿಗೆ, ಸದಸ್ಯರಾದ ಕೃಷ್ಣ ಶೆಟ್ಟಿ ತಾಮಾರ್,ರಾಘವೇಂದ್ರ ಮಾಸ್ಟರ್, ಪವಿತ್ರ ಗಟ್ಟಿ,ರಾಘವನ್ ಬೀರಿ, ಪದ್ಮನಾಭ ಗಟ್ಟಿ, ಕೃಷ್ಣ ಬಿ.ಎಮ್, ರೇವತಿ ಟೀಚರ್, ಪ್ರದೀಪ್ ಚಂದ್ರ ಶೆಟ್ಟಿ ಅಡ್ಕಗುತ್ತು, ವಸಂತ ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.

Continue Reading

DAKSHINA KANNADA

ಕಿನ್ನಿಗೋಳಿ ಸಮೀಪದ ಉಳೆಪಾಡಿಯಲ್ಲಿ ಚಿರತೆಯ ಶ*ವ ಪತ್ತೆ!

Published

on

ಮಂಗಳೂರು : ಚಿರತೆಯೊಂದು ಅಸಹಜ ರೀತಿಯಲ್ಲಿ ಸಾ*ವನ್ನಪ್ಪಿದ ಘಟನೆ ಕಿನ್ನಿಗೋಳಿ ಸಮೀಪದ ಉಳೆಪಾಡಿಯಲ್ಲಿ ನಡೆದಿದೆ. ಉಳೆಪಾಡಿ ಸಾನದ ಬಳಿ ಇಂದು ಬೆಳಗ್ಗೆ(ಮಾ.16) ಚಿರತೆಯ ಶ*ವ ಕಂಡು ಬಂದಿದೆ.

ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿನ್ನಿಗೋಳಿ ಸುತ್ತಮುತ್ತ  ಹಲವು ಬಾರಿ ಚಿರತೆ ಕಂಡು ಬಂದಿದ್ದು, ಅನೇಕ ಕಡೆಗಳಲ್ಲಿ ಸಾಕು ನಾಯಿಗಳು ಚಿರತೆಗೆ ಆಹಾರವಾಗಿವೆ.

ಇದನ್ನೂ ಓದಿ  : ರಾಜ್ಯದಲ್ಲೇ ಅತೀ ದೊಡ್ಡ ಕಾರ್ಯಾಚರಣೆ; ಮಂಗಳೂರು ಸಿಸಿಬಿ ಪೊಲೀಸರಿಂದ ವಿದೇಶಿ ಡ್ರಗ್ ಪೆಡ್ಲರ್‌ಗಳ ಬಂಧನ

ಹಲವು ಕಡೆಗಳಲ್ಲಿ ಚಿರತೆ ಓಡಾಡುವ ದೃಶ್ಯಗಳು ಸಿ.ಸಿ. ಟಿವಿಯಲ್ಲಿ ದಾಖಲಾಗಿದ್ದು, ಕೆಲ ತಿಂಗಳ ಹಿಂದೆ ಮೂಲ್ಕಿಯಲ್ಲಿ ಮನೆಯೊಳಗೆ ಚಿರತೆ ನುಗ್ಗಿ ಸಮಸ್ಯೆಯುಂಟಾಗಿತ್ತು.

Continue Reading

DAKSHINA KANNADA

ಅಕ್ರಮ ಪಿಸ್ತೂಲ್ ಸಹಿತ ಅಂತಾರಾಜ್ಯ ಕ್ರಿಮಿನಲ್ ಬಂಧನ

Published

on

ಮಂಗಳೂರು : ಎರಡು ದಿನಗಳ ಹಿಂದೆ ಎರಡು ದಿನಗಳ ಹಿಂದೆ ಕೊಣಾಜೆ ಹಾಗೂ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಐವರು ಡ್ರಗ್ ಮಾರಾಟಗಾರ ಬಂಧನವಾಗಿತ್ತು. ಅವರಿಂದ 3 ಪಿಸ್ತೂಲ್, 6 ಸಜೀವ ಮದ್ದುಗುಂ*ಡುಗಳನ್ನು, ಕಾರುಗಳು ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಗಳ ಬೆನ್ನು ಹತ್ತಿರುವ ಪೊಲೀಸರು, ಈ ಪೈಕಿ ಓರ್ವನನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಅಬ್ದುಲ್ ಫೈಜಲ್.ಎಂ ಅಲಿಯಾಸ್ ಫೈಜು (26) ಬಂಧಿತ ಆರೋಪಿ. ಈತನನ್ನು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ಬಳಿಯ ಮೊರ್ತಾನಾ ಎಂಬಲ್ಲಿ ಮಾರ್ಚ್ 15 ರಂದು ಬಂಧಿಸಲಾಗಿದೆ.

ಇದನ್ನೂ ಓದಿ : ರಾಜ್ಯದಲ್ಲೇ ಅತೀ ದೊಡ್ಡ ಕಾರ್ಯಾಚರಣೆ; ಮಂಗಳೂರು ಸಿಸಿಬಿ ಪೊಲೀಸರಿಂದ ವಿದೇಶಿ ಡ್ರಗ್ ಪೆಡ್ಲರ್‌ಗಳ ಬಂಧನ

ಆತನಿಂದ 1 ಪಿಸ್ತೂಲ್, 1 ಸಜೀವ ಮದ್ದು ಗುಂಡು ಹಾಗೂ ಮೊಬೈಲ್ ಫೋನ್‌ನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಅಂದಾಜು ಮೌಲ್ಯ 2,10,000 ರೂ. ಆರೋಪಿಯನ್ನು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ. ಆರೋಪಿಯ ವಿರುದ್ಧ ಈ ಹಿಂದೆ ಮಂಜೇಶ್ವರ ಪೊಲೀಸ್‌ ಠಾಣೆಯಲ್ಲಿ ಎರಡು ಹ*ಲ್ಲೆ ಪ್ರಕರಣಗಳು ದಾಖಲಾಗಿವೆ.

Continue Reading
Advertisement

Trending

Copyright © 2025 Namma Kudla News

You cannot copy content of this page