Connect with us

DAKSHINA KANNADA

ಮಂಗಳೂರು: ಕುಡುಕನಿಗೆ ಸಿಕ್ಕಿದ ಲಕ್ಷ ರೂಪಾಯಿಗಳ ನೋಟಿನ ಬಂಡಲ್ ಪ್ರಕರಣದಲ್ಲಿ ಪೊಲೀಸ್ ಕಮಿಷನರ್ ಹೇಳಿದಿಷ್ಟು..!

Published

on

ಪಂಪ್‌ವೆಲ್ ಬಳಿ ಕೆಲವು ದಿನಗಳ ಹಿಂದೆ ಮೆಕ್ಯಾನಿಕ್ ಶಿವರಾಜ್ ಎಂಬವರಿಗೆ ಸಿಕ್ಕಿದ್ದ ವಾರಿಸುದಾರರಿಲ್ಲದ ಹಣದ ಬಂಡಲ್‌ಗೆ ಸಂಬಂಧಿಸಿ ಸದ್ಯ 3.5 ಲಕ್ಷ ರೂಪಾಯಿ ಹಣ ಪೊಲೀಸರ ವಶದಲ್ಲಿದ್ದು ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ.

ಮಂಗಳೂರು: ಪಂಪ್‌ವೆಲ್ ಬಳಿ ಕೆಲವು ದಿನಗಳ ಹಿಂದೆ ಮೆಕ್ಯಾನಿಕ್ ಶಿವರಾಜ್ ಎಂಬವರಿಗೆ ಸಿಕ್ಕಿದ್ದ ವಾರಿಸುದಾರರಿಲ್ಲದ ಹಣದ ಬಂಡಲ್‌ಗೆ ಸಂಬಂಧಿಸಿ 3.5 ಲಕ್ಷ ಪೊಲೀಸರ ವಶದಲ್ಲಿದ್ದು ಈ ಬಗ್ಗೆ ತನಿಖೆ ಮುಂದುವರೆದಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ.

ತನ್ನನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈವರೆಗೂ ಈ ಹಣ ಯಾರದ್ದು, ದಾರಿ ಮಧ್ಯೆ ಹೇಗೆ ಬಿದ್ದು ಸಿಕ್ಕಿತು ? ಇನ್ನು ಸ್ಪಷ್ಟವಾಗಿಲ್ಲ.

ಈ ಅನಾಮಧೇಯ ಹಣದ ಕಟ್ಟುಗಳ ವಾರಿಸುದಾರರು ಇದ್ದಲ್ಲಿ, ಸಂಬಂಧಪಟ್ಟ ಠಾಣೆಗೆ ಸೂಕ್ತ ಮಾಹಿತಿಯೊಂದಿಗೆ ಭೇಟಿ ನೀಡಿದರೆ ವಾಪಾಸು ನೀಡುವ ಪ್ರಕ್ರಿಯೆ ನಡೆಯಲಿದೆ ಎಂದರು.

ನ. 26ರಂದು ಶಿವರಾಜ್ ಎಂಬವರಿಗೆ ಬೆಳಗ್ಗಿನ ಹೊತ್ತು ಪಂಪ್‌ವೆಲ್ ಬಳಿ ಬಾಕ್ಸ್ ಹಾಗೂ ಪ್ಲಾಸ್ಟಿಕ್ ಚೀಲದಲ್ಲಿ ಹಣದ ಬಂಡಲ್‌ಗಳು ಸಿಕ್ಕಿತ್ತು.

ಅದರಲ್ಲಿ ಎಷ್ಟು ಹಣ ಇತ್ತೆಂಬ ಬಗ್ಗೆ ಸ್ಪಷ್ಟವಾಗಿ ಅವನು ಹೇಳುತ್ತಿಲ್ಲ. ಮಾಧ್ಯಮದಲ್ಲಿ 10 ಲಕ್ಷ ರೂ. ಹಣದ ಕವರ್ ಸಿಕ್ಕಿರುವುದಾಗಿ ವರದಿಯಾಗಿರುವ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.

ಹಣ ದೊರೆತಿರುವ ಪ್ರದೇಶದ ಸಿಸಿ ಕ್ಯಾಮರಾ ಕೂಡಾ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

ಶಿವರಾಜ್ ಹಣದ ಕಟ್ಟು ಸಿಕ್ಕಿದ ತನ್ನ ಜತೆ ಮದ್ಯಪಾನ ಮಾಡುವ ವ್ಯಕ್ತಿ ತುಕರಾಂ ಎಂಬವರಿಗೆ 500 ರೂ.ಗಳ ಆರು ಕಟ್ಟು ಹಣವನ್ನು ನೀಡಿದ್ದಾಗಿ ಹೇಳಿಕೊಂಡಿದ್ದ. ಈ ಬಗ್ಗೆ ಮಾದ್ಯಮದಲ್ಲಿ ಮಾಹಿತಿ ಬಂದ ಹಿನ್ನೆಲೆಯಲ್ಲಿ ತುಕರಾಂ 2,99,500 ರೂ.ಗಳನ್ನು ಠಾಣೆಗೆ ತಂದು ನೀಡಿದ್ದಾನೆ.

ಶಿವರಾಜ್

ಶಿವರಾಜ್‌ನಿಂದ ಹಣದ ಕಟ್ಟುಗಳನ್ನು ಪಡೆದಿದ್ದ ತುಕಾರಾಂ ಒಂದು ಕಟ್ಟಿನಿಂದ 500 ರೂ. ತೆಗೆದು ಮದ್ಯಪಾನ ಮಾಡಿರುವುದಾಗಿ ಹೇಳಿಕೊಂಡಿದ್ದಾನೆ.

ಈ ಬಗ್ಗೆ ಶಿವರಾಜ್ “ಹಣದ ಕಟ್ಟು ಹಿಡಿದುಕೊಂಡು ಮಲಗಿದ್ದೆ. ತನ್ನದಲ್ಲಿದ್ದ ಹಣದ ಒಂದು ಕಟ್ಟಿನಿಂದ ಒಂದು ನೋಟು ತೆಗೆದು ಮದ್ಯಪಾನ ಮಾಡಿ ಮಲಗಿದ್ದೆ. ಬಳಿಕ ಎಚ್ಚರವಾದಾಗ ಒಂದು ನೋಟು ತೆಗೆದ ಕಟ್ಟು ಬಿಟ್ಟು ಬೇರೆ ಯಾವುದೇ ಹಣ ಇರಲಿಲ್ಲ” ಎನ್ನುತ್ತಾನೆ.

ಒಟ್ಟು ಇದೀಗ ತುಕರಾಂ ತಂದು ಕೊಟ್ಟ 2,99,500 ಮತ್ತು 49,000 ರೂ. ಪೊಲೀಸರ ವಶದಲ್ಲಿದೆ. ಅದನ್ನು ಸೂಕ್ತ ದಾಖಲೀಕರಣದೊಂದಿಗೆ ಪೊಲೀಸರ ವಶದಲ್ಲಿರಿಸಲಾಗಿದೆ.

ವಾರಿಸುದಾರರು ಬಾರದಿದ್ದಲ್ಲಿ ಮುಂದಿನ ಕ್ರಮ ವಹಿಸಲಾಗುವುದು. ಈಗಾಗಲೇ ಅದರಲ್ಲಿ 10 ಲಕ್ಷ ಇತ್ತೆಂದು ಹೇಳಲಾಗಿರುವಂತೆ, ಯಾರಾದರೂ ಶಿವರಾಜ್ ಬಳಿ ಇದ್ದ ಹಣವನ್ನು ಕೊಂಡು ಹೋಗಿದ್ದಲ್ಲಿ ಅದನ್ನು ಠಾಣೆಗೆ ಒಪ್ಪಿಸಿದರೆ ಅವರ ಮೇಲೆ ಯಾವುದೇ ರೀತಿಯ ಪ್ರಕರಣ ದಾಖಲಿಸಲಾಗುವುದಿಲ್ಲ.

ಒಂದು ವೇಳೆ ತನಿಖೆಯ ವೇಳೆ, ಸಿಸಿ ಕ್ಯಾಮರಾ ಫೂಟೇಜ್ ತಪಾಸಣೆಯ ಸಂದರ್ಭ ಯಾರಾದರೂ ಶಿವರಾಜ್ ಬಳಿ ಇದ್ದ ಹಣ ಕದ್ದುಕೊಂಡು ಹೋಗಿರುವುದು ಕಂಡು ಬಂದಲ್ಲಿ ಅಂತಹವರ ವಿರುದ್ಧ ಸುಲಿಗೆ, ದರೋಡೆ ಪ್ರಕರಣ ದಾಖಲಾಗುತ್ತದೆ.

ಉಳಿದಂತೆ ಶಿವರಾಜ್ ಅಥವಾ ತುಕರಾಂ ಮೇಲೆ ಯಾವುದೇ ರೀತಿಯ ಅಪರಾಧ ಪ್ರಕರಣ ದಾಖಲಿಸಲಾಗಿಲ್ಲ.

ಪೊಲೀಸರು ತಡವಾಗಿ ಈ ಪ್ರಕರಣದಲ್ಲಿ ಮಾಡಿದ ಬಗ್ಗೆ ವರದಿ ತರಿಸುತ್ತೇನೆ ಈ ವಿಚಾರದಲ್ಲಿ 75KP ಆಕ್ಟ್ ನಡಿ ವಾರೀಸುದಾರರಿಲ್ಲದ ಹಣದ ಪ್ರಕರಣ ಮಾಡಿದ್ದೇವೆ ಎಂದು ಆಯಕ್ತರು ಸ್ಪಷ್ಟಪಡಿಸಿದ್ದಾರೆ.

DAKSHINA KANNADA

ಪುತ್ತೂರು: 33ನೇ ವರ್ಷದ ಕೋಟಿ-ಚೆನ್ನಯ ಜೋಡುಕೆರೆ ಕಂಬಳ

Published

on

ಪುತ್ತೂರು: ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ 33ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳ ಜನವರಿ 24 ಮತ್ತು 25ರಂದು ನಡೆಯಲಿದೆ.


ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಕಂಬಳ ಕೂಟಗಳ ಪೈಕಿ ಹಲವು ಪ್ರಥಮಗಳನ್ನು ಸ್ಥಾಪಿಸಿದ ಕೂಟವೆಂಬ ಹೆಗ್ಗಳಿಕೆ ಪುತ್ತೂರು ಕಂಬಳಕ್ಕಿದ್ದು, ಈ ಬಾರಿ 200ಕ್ಕಿಂತಲೂ ಹೆಚ್ಚು ಜೋಡಿ ಕೋಣಗಳು ಭಾಗವಹಿಸಲಿವೆ ಎಂದು ಕಂಬಳ ಸಮಿತಿ ಅಧ್ಯಕ್ಷ ಎನ್ ಚಂದ್ರಹಾಸ ಶೆಟ್ಟಿ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 10.32ಕ್ಕೆ ಶ್ರೀ ಮಹಾಲಿಂಗೇಶ್ವರ ದೇವಳದ ದೇವರಮಾರು ಗದ್ದೆಯ ಜೋಡುಕರೆಯಲ್ಲಿ ಕಂಬಳವನ್ನು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ವಹಿಸಲಿದ್ದಾರೆ ಎಂದರು.

ಇದನ್ನೂ ಓದಿ: ಪಡುಬಿದ್ರೆಗೆ ಆಗಮಿಸಿದ ಬಿಗ್ಬಾಸ್ ರನ್ನರ್ ಅಪ್ ರಕ್ಷಿತಾ, ಕೈಯಲ್ಲಿ ಬಂಗುಡೆ ಹಿಡಿದು ಭರ್ಜರಿ ಡ್ಯಾನ್ಸ್

ಸಂಜೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಅಶೋಕ್ ರೈ ವಹಿಸಲಿದ್ದಾರೆ ಹಲವು ಮಂದಿ ಗಣ್ಯರು ಭಾಗವಹಿಸಲಿರುವರು ಎಂದರು.

ಸುದ್ದಿಗೋಷ್ಠಿಯಲ್ಲಿ ಕಂಬಳ ಸಮಿತಿಯ ಪ್ರಧಾನ ಕಾರ್ಯದರ್ಶಿ ದಿನೇಶ್ ಕುಲಾಲ್ ಪಿ.ವಿ., ಕೋಶಾಕಾರಿ ಪಂಜಿಗುಡ್ಡೆ ಈಶ್ವರ ಭಟ್, ಉಪಾಧ್ಯಕ್ಷರಾದ ನಿರಂಜನ ರೈ ಮಠಂತಬೆಟ್ಟು ಮೊದಲಾದವರಿದ್ದರು.

Continue Reading

DAKSHINA KANNADA

ದ್ವೇಷ ಭಾಷಣ ಆರೋಪ; ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ದ ಎಫ್‌ಐಆರ್‌

Published

on

ಪುತ್ತೂರು: ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ದ್ವೇಷ ಭಾಷಣ ಮಾಡಿದ ಆರೋಪದ ಮೇಲೆ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರ ವಿರುದ್ಧ ಹಾಗೂ ಆ ಭಾಷಣವನ್ನು ಪ್ರಸಾರ ಮಾಡಿದ ವಾಹಿನಿಯೊಂದರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಕೋಮು ದ್ವೇಷ ಹಾಗೂ ಹಿಂಸೆಗೆ ಪ್ರಚೋದನೆಯಾಗುವ ರೀತಿಯಲ್ಲಿ ಭಾಷಣ ಮಾಡಿದ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಮತ್ತು ಭಾಷಣವನ್ನು ಪ್ರಸಾರ ಮಾಡಿದ ವಾಹಿನಿ ಹಾಗೂ ಕಾರ್ಯಕ್ರಮವನ್ನು ಆಯೋಜಿಸಿದ್ದ ಆಯೋಜಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಂದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

DAKSHINA KANNADA

ನಾಳೆ(ಜ.21) ಕದ್ರಿ ಮ್ಯೂಸಿಕಲ್ ನೈಟ್ಸ್ 2026 : ರಿಷಬ್ ಶೆಟ್ಟಿ ಭಾಗಿ

Published

on

ಮಂಗಳೂರು : ಕದ್ರಿ ಶ್ರೀಮಂಜುನಾಥ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ  ಪ್ರಯುಕ್ತ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಮಾರ್ಗದರ್ಶನದಲ್ಲಿ ಕದ್ರಿ ಈವೆಂಟ್ಸ್ ಅರ್ಪಿಸುವ  ‘ಕದ್ರಿ ಮ್ಯೂಸಿಕಲ್ ನೈಟ್ಸ್ 2026’ ನಾಳೆ(ಜ.21) ಸಂಜೆ 7 ಗಂಟೆಯಿಂದ ಕದ್ರಿ ಮೈದಾನದಲ್ಲಿ ಅದ್ದೂರಿಯಾಗಿ ಜರುಗಲಿದೆ.

ಎಂದಿನಂತೆ ಈ ಬಾರಿಯೂ ತಾರಾ ಮೆರುಗು ಇರಲಿದ್ದು, ಕಾರ್ಯಕ್ರಮಕ್ಕೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಹಾಗೂ ಅವರ ಪತ್ನಿ ಪ್ರಗತಿ ಶೆಟ್ಟಿ ಆಗಮಿಸಲಿದ್ದಾರೆ.

ಆಯೋಜಕ ಜಗದೀಶ್ ಕದ್ರಿ ಈ ಬಗ್ಗೆ ಮಾತನಾಡಿ, ಪ್ರತೀ ವರ್ಷದಂತೆ ಈ ಬಾರಿಯೂ ಕೂಡ ಕದ್ರಿ ಮ್ಯೂಸಿಕಲ್ ನೈಟ್ ಆಯೋಜನೆ ಮಾಡಿದ್ದೇವೆ. ಸಿನಿಮಾ ಸೆಲೆಬ್ರಿಟಿಗಳು, ಗಣ್ಯರು ಸೇರಿದಂತೆ ಹೆಸರಾಂತ ಗಾಯಕರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಂಗಳೂರಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದರು.

ಇದನ್ನೂ ಓದಿ : BBK12: ಟಾಪ್‌ 6ನಲ್ಲಿ ಕಾವ್ಯಾ ಇರಬಾರದಿತ್ತು: ಹೀಗ್ಯಾಕಂದ್ರು ರಕ್ಷಿತಾ..?

ಕನ್ನಡ, ತುಳು ಚಿತ್ರರಂಗದ ಕಲಾವಿದರಾದ ರೂಪೇಶ್ ಶೆಟ್ಟಿ, ದೇವದಾಸ್ ಕಾಪಿಕಾಡ್, ಭೋಜರಾಜ ವಾಮಂಜೂರು, ಅರ್ಜುನ್ ಕಾಪಿಕಾಡ್, ಶನಿಲ್ ಗುರು, ಪ್ರಕಾಶ್ ತೂಮಿನಾಡು, ಸ್ವರಾಜ್ ಶೆಟ್ಟಿ, ದೀಪಕ್ ರೈ ಪಾಣಾಜೆ, ವಿಜೆ ವಿನೀತ್, ಸಮತಾ ಅಮೀನ್ ಸೇರಿದಂತೆ ಹಲವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page