Connect with us

DAKSHINA KANNADA

ಮಂಗಳೂರು ಕಮೀಷನರ್‌ ಮುಂದಿದೆ ಹೊಸ ಸವಾಲು: ಬೇಕಿದೆ ‘ನೇರ ಫೋನ್‌ ಇನ್‌ ಕಾರ್ಯಕ್ರಮ’..!

Published

on

ರಾಜ್ಯದಲ್ಲೇ ಮೊದಲ ಬಾರಿಗೆ ಜನಸ್ನೇಹಿ ಪೊಲೀಸ್‌ ವ್ಯವಸ್ಥೆ ಜಾರಿಗೆ ತಂದು ಮಾದರಿಯಾಗಿದ್ದ ಮಂಗಳೂರು ನಗರ ಪೊಲೀಸ್‌ ಆಯುಕ್ತರ ‘ನೇರ ಫೋನ್‌ ಇನ್‌ ಕಾರ್ಯಕ್ರಮ’ ಹೇಳ ಹೆಸರಿಲ್ಲದಂತೆ ಕಾಣೆಯಾಗಿದೆ.

ಮಂಗಳೂರು: ರಾಜ್ಯದಲ್ಲೇ ಮೊದಲ ಬಾರಿಗೆ ಜನಸ್ನೇಹಿ ಪೊಲೀಸ್‌ ವ್ಯವಸ್ಥೆ ಜಾರಿಗೆ ತಂದು ಮಾದರಿಯಾಗಿದ್ದ ಮಂಗಳೂರು ನಗರ ಪೊಲೀಸ್‌ ಆಯುಕ್ತರ ‘ನೇರ ಫೋನ್‌ ಇನ್‌ ಕಾರ್ಯಕ್ರಮ’ ಹೇಳ ಹೆಸರಿಲ್ಲದಂತೆ ಕಾಣೆಯಾಗಿದೆ.

ಮಂಗಳೂರಿಗೆ ಇದೀಗ ನೂತನ ಪೊಲೀಸ್ ಕಮೀಷನರ್‌ ಆಗಿ ಅಧಿಕಾರ ವಹಿಸಿರುವ ಕುಲ್‌ದೀಪ್‌ ಕುಮಾರ್‌ ಆರ್‌. ಜೈನ್‌ ಮರುಜೀವ ಕೊಟ್ಟು ಜನಸಾಮಾನ್ಯರಿಗೆ ಕಿವಿಯಾಗಬೇಕೆಂಬುವುದು ಪ್ರಜ್ಞಾವಂತ ನಾಗರೀಕರ ಆಶಯವಾಗಿದೆ.

ಕುಲ್‌ದೀಪ್‌ ಕುಮಾರ್‌ ಆರ್‌. ಜೈನ್‌

ರಾಜ್ಯದಲ್ಲೇ ಮೊದಲ ಬಾರಿಗೆ ಜಾರಿಯಾಗಿದ್ದ ವಿನೂತನವಾಗಿ ‘ನೇರ ಫೋನ್‌ ಇನ್‌ ಕಾರ್ಯಕ್ರಮ’ ಮಾದರಿಯನ್ನು ಬೆಂಗಳೂರು ನಗರ ಸೇರಿದಂತೆ ಇತರ ಜಿಲ್ಲಾ ಪೊಲೀಸ್‌ ಅಧಿಕಾರಿಗಳು ಜಾರಿಗೆ ತರುವ ಮೂಲಕ ಪೊಲೀಸರು ಹೇಗೆ ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬಹುದೆಂಬುವುದನ್ನು ತೋರಿಸಿಕೊಟ್ಟವರು ಹೆಮ್ಮೆಯ ಮಂಗಳೂರು ಪೊಲೀಸರು.

100ಕ್ಕೂ ಅಧಿಕ ಸಂಚಿಕೆಗಳನ್ನು ಯಶಸ್ವಿಯಾಗಿ ಪೂರೈಸಿದ್ದ ಇದೇ ಫೋನ್‌ ಇನ್‌ ಕಾರ್ಯಕ್ರಮ ಇದೀಗ ನಿಂತು ಬರೋಬ್ಬರಿ 3 ವರ್ಷಗಳೇ ಸಂದಿವೆ.

ಮಂಗಳೂರು ಮಾದರಿಯನ್ನು ಇಟ್ಟುಕೊಂಡು ಬೇರೆ ಬೇರೆ ಜಿಲ್ಲೆಗಳಲ್ಲಿ ಪ್ರಾರಂಭಿಸಿದ ಈ ಕಾರ್ಯಕ್ರಮ ಇಂದಿಗೂ ಯಶಸ್ವಿಯಾಗಿ ಮುಂದುವರಿಯುತ್ತಿದೆ.

ಮಂಗಳೂರಿಗರು ಈಗಲೂ ನೆನಪಿಡುವ ಅಂದಿನ ನಗರ ಪೊಲೀಸ್‌ ಆಯುಕ್ತರಾದ ಡಾ. ಎಂ.ಚಂದ್ರಶೇಖರ್‌ 2016ರ ಆ.5 ರಂದು ಮೊದಲ ಫೋನ್‌ ಇನ್‌ ಕಾರ್ಯಕ್ರವನ್ನು ಆರಂಭಿಸಿದ್ದರು.

ಪ್ರತೀ ಶುಕ್ರವಾರ ಬೆಳಗ್ಗೆ 10 ರಿಂದ 11 ಗಂಟೆವರೆಗಿನ ಒಂದು ಗಂಟೆ ಸಮಯವನ್ನು ಸಾರ್ವಜನಿಕರ ಅಹವಾಲು ಕೇಳಲು ಮೀಸಲಿರಿಸಿದ್ದರು.

ಈ ಮೂಲಕ ಜನಸಾಮಾನ್ಯನ ದುಗುಡ ದುಮ್ಮಾನವನ್ನು ದೊರೆ ಸಮಾನವಾಗಿರುವ ಪೊಲೀಸ್‌ ಆಯುಕ್ತರೇ ಖುದ್ದು ಕೇಳಿ ಅದಕ್ಕೆ ಸೂಕ್ತ ಪರಿಹಾರವನ್ನು ಆನ್‌ ದಿ ಸ್ಪಾಟ್‌ ನೀಡುವುದು ಇದರ ಮುಖ್ಯ ಉದ್ದೇಶವಾಗಿತ್ತು.

ಜನ ಸ್ನೇಹಿಯಾಗಿದ್ದ ಈ ಉದ್ದೇಶವು ಬಹುತೇಕ ಯಶಸ್ವಿಯಾಗಿ ಮಂಗಳೂರು ನಾಗರೀಕರ ಹಲವು ಸಮಸ್ಯೆಗಳಿಗೆ ಪರಿಹಾರ ಕಾಣುವ ಪ್ರಮುಖ ವೇದಿಕೆಯಾಗಿ ಮಾರ್ಪಟ್ಟಿತ್ತು.

ಜನ ಸಾಮಾನ್ಯ ತನ್ನ ದುಗುಡ ದುಮ್ಮಾನಗಳನ್ನು ಫೋನ್ ಮೂಲಕ ನಿರ್ಭಿತಿಯಿಂದ ನೇರವಾಗಿ ಪೊಲೀಸ್ ಆಯುಕ್ತರಿಗೆ ತಿಳಿಸುವ ಮತ್ತು ಆ ಮೂಲಕ ಅದಕ್ಕೇ ಸೂಕ್ತ ಪರಿಹಾರ ನೀಡುವ ಅಥವಾ ದೂರಿನ ಆಧಾರದಲ್ಲಿ ಪರಿಹಾರ ಕೊಡುವ ಅತ್ಯಂತ ಯಶಸ್ವಿ ಕಾರ್ಯಕ್ರಮ ಅದಾಗಿತ್ತು.

ಸಾರ್ವಜನಿಕರ ಅಹವಾಲನ್ನು ಸ್ವತಃ ಪೊಲೀಸ್‌ ಕಮೀಷನರೇ ಕೇಳುತ್ತಿದ್ದುದು ಈ ಕಾರ್ಯಕ್ರಮದ ವಿಶೇಷ.

ಇವರ ಜೊತೆ ಡಿಸಿಪಿ, ಎಸಿಪಿ, ಸಂಚಾರಿ ವಿಭಾಗದ ಹಿರಿಯ ಅಧಿಕಾರಿಗಳು, ಬಸ್‌ ಮಾಲಕರ ಸಂಘದ ಪದಾಧಿಕಾರಿಗಳು, ಆರ್‌ಟಿಓ ಅಧಿಕಾರಿಗಳು ಸೇರಿ ವಿವಿಧ ಅಧಿಕಾರಿಗಳ ಸಮ್ಮುಖದಲ್ಲೇ ಸಮಸ್ಯೆಗಳು ಆನ್‌ ದಿ ಸ್ಪಾಟ್‌ ಪರಿಹಾರ ಕಾಣುತ್ತಿದ್ದವು.


ಡಾ. ಚಂದ್ರಶೇಖರ್‌ ಯಾವ ಬದ್ದತೆಯೊಂದಿಗೆ ಕಾರ್ಯಕ್ರಮವನ್ನು ಪ್ರಾರಂಭಿಸಿದರೋ ಅದೇ ಬದ್ದತೆಯಿಂದ ತನ್ನ ವರ್ಗಾವಣೆಯವರೆಗೆ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿಕೊಟ್ಟಿದ್ದರು.
ತದನಂತರ ಬಂದ ಪೊಲೀಸ್‌ ಆಯುಕ್ತರುಗಳಾದ ಟಿ. ಆರ್‌. ಸುರೇಶ್‌, ಸಂದೀಪ್‌ ಪಾಟೀಲ್‌, ಪಿ.ಎಸ್‌ ಹರ್ಷವರೆಗೂ ಈ ಕಾರ್ಯಕ್ರಮ ಚೆನ್ನಾಗಿ ಮೂಡಿಬಂದಿತ್ತು.

ಈ ಸಂದರ್ಭದಲ್ಲಿ ಮಂಗಳೂರು ಪೊಲೀಸ್‌ ಕಮೀಷನರೇಟ್‌ ವ್ಯಾಪ್ತಿಯಲ್ಲಿ ಕಾನೂನು ಸುವ್ಯವಸ್ಥೆ ಹೆಚ್ಚು ಕಡಿಮೆ ಸಂಪೂರ್ಣ ಹತೋಟಿಯಲ್ಲಿತ್ತು.

ಮತ್ತು ಜನರ ನೈಜ ದೂರುಗಳಿಗೆ ಪೊಲೀಸ್‌ ಆಯುಕ್ತರೇ ಖುದ್ದಾಗಿ ಕೇವಲ ಒಂದು ಫೋನ್‌ ಮೂಲಕ ಪರಿಹಾರ ಸೂಚಿಸುತ್ತಿದ್ದರು. ಈ ಕಾರ್ಯಕ್ರಮ ಪೊಲೀಸ್‌ ಇಲಾಖೆ ಮತ್ತು ನಾಗರಿಕರ ಮಧ್ಯೆ ವಿಶ್ವಾಸದ ಕೊಂಡಿಯಾಗಿ ಕಾರ್ಯ ನಿರ್ವಹಿಸುತ್ತಿತ್ತು.

ಪ್ರತೀ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಕೇವಲ ಒಂದು ಘಂಟೆಯಲ್ಲೇ ಕಡಿಮೆ ಪಕ್ಷ 30 ರಿಂದ 50 ಕರೆಗಳು ಬರುತ್ತಿತ್ತು. ಜೊತೆಗೆ ಅದಕ್ಕೆ ಅಧಿಕಾರಿಗಳು ಕೂಡಾ ಉತ್ತಮ ಸ್ಪಂದನೆ ನೀಡುತ್ತಿದ್ದರು.

ಕಾರ್ಯಕ್ರಮದಲ್ಲಿ ದೂರು ನೀಡಿದ ವ್ಯಕ್ತಿಯ ಗೌಪ್ಯತೆಯನ್ನು ಕಾಪಾಡುತ್ತಿದ್ದುದು ಇದರ ಮತ್ತೊಂದು ವಿಶೇಷ.

ಜೊತೆಗೆ ಈ ಕಾರ್ಯಕ್ರಮ ಪಾರದರ್ಶಕವಾಗಿದ್ದು, ಸಮಸ್ಯೆಗಳು ಮತ್ತು ಪರಿಹಾರವನ್ನು ಸ್ಥಳೀಯ ಹಾಗೂ ರಾಜ್ಯಮಟ್ಟದ ಪತ್ರಿಕೆ- ಮಾದ್ಯಮಗಳು ಬಿತ್ತರಿಸುತ್ತಿದ್ದುದರಿಂದ ವಿಶೇಷ ಮಹತ್ವ ಪಡೆದಿತ್ತು.

ಇದಕ್ಕಾಗಿ ಸಾರ್ವಜನಿಕರು ನಿರ್ಭೀತಿಯಿಂದ ಆಯುಕ್ತರಿಗೆ ತಮ್ಮ ದೂರುಗಳನ್ನು ಸಲ್ಲಿಸುತ್ತಿದ್ದರು.

ಆದರೆ ಕಳೆದ 3 ವರ್ಷದಿಂದ ಈ ಕಾರ್ಯಕ್ರಮ ನಿಂತು ಸಾರ್ವಜನಿಕರ ದೂರುಗಳಿಗೆ ಅದರಲ್ಲೂ ಹಿರಿಯ ನಾಗರಿಕರಿಗೆ, ಅಶಕ್ತರಿಗೆ, ನೊಂದವರಿಗೆ ಸ್ಪಂದನೆಯೇ ಇಲ್ಲದಂತಾಗಿದೆ.

ಇಂದು ತಮ್ಮ ಹಾಗೂ ಸಮಾಜದ ಪ್ರತಿಯೊಂದು ಸಮಸ್ಯೆಗೂ ಪೊಲೀಸ್‌ ಕಚೇರಿಗಳನ್ನು ತಡಕಾಡಬೇಕಿದೆ. ಕೆಲವು ದೂರುಗಳು ಠಾಣೆಯ ಫೈಲ್‌ ಸೇರುವ ಬದಲು ಕಸದ ಬುಟ್ಟಿಗೆ ಸೇರುತ್ತಿದೆ.

ಆದ್ದರಿಂದ ಮತ್ತೆ ಪೊಲೀಸ್‌ ಆಯುಕ್ತರು ಜನಸ್ನೇಹಿ ಕಾರ್ಯಕ್ರಮವಾಗಿರುವ ಫೋನ್‌ ಇನ್‌ ಅನ್ನು ಮತ್ತೆ ಆರಂಭಿಸಬೇಕು ಎಂದು ಸಾರ್ವಜನಿಕರ ಆಗ್ರಹವಾಗಿದೆ.
ಕೇವಲ ಸೋಷಿಯಲ್‌ ಮೀಡಿಯಾಗಳಿಂದ ಜನಸ್ನೇಹಿ ಪೊಲೀಸ್‌ ಆಗಲು ಸಾಧ್ಯವಿಲ್ಲ ಎಂಬುವುದನ್ನು ಹಿರಿಯ ಅಧಿಕಾರಿಗಳು ಮನಗಾಣಬೇಕು.

ಎಷ್ಟೋ ಹಿರಿಯ ನಾಗರಿಕರಿಗೆ ಸಾಮಾಜಿಕ ಜಾಲತಾಣಗಳ ಅರಿವೇ ಇಲ್ಲ. ಜಿಲ್ಲಾ ಹಾಗೂ ನಗರ ಮಟ್ಟದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ತುರ್ತು ಸಂದರ್ಭಗಳಲ್ಲಿ ಕರೆ ಮಾಡಬಹುದಾಗಿದ್ದ ಡಯಲ್‌ 100 ಇದೀಗ ಸರಕಾರದ ನಿರ್ದೇಶದನ್ವಯ ಡಯಲ್‌ 112 ಆಗಿದ್ದು, ಈ ವ್ಯವಸ್ಥೆಯನ್ನು ಏಕಗವಾಕ್ಷಿ ಯೋಜನೆಯನ್ನಾಗಿ ರೂಪಿಸಿ ರಾಜ್ಯ ಮಟ್ಟದಲ್ಲಿ ಜಾರಿಗೊಳಿಸಿದ್ದಾರೆ.

ಆದರೆ ಈ ಸಂಖ್ಯೆಗೆ ಕರೆ ಮಾಡಿದಾಗ ಅದು ಬೆಂಗಳೂರು ಪೊಲೀಸ್‌ ಇಲಾಖೆ ನಿರ್ವಹಿಸುವ ಕಾಲ್‌ ಸೆಂಟರ್‌ಗೆ ತಲುಪಿ ಬಳಿಕ ಆಯಾಯ ಜಿಲ್ಲಾ ವ್ಯಾಪ್ತಿಗೆ ವರ್ಗಾವಣೆಯಾಗುತ್ತಿದೆ.

ಈ ವ್ಯವಸ್ಥೆ ಜನಸಾಮಾನ್ಯನಿಗೆ ತೀರಾ ತ್ರಾಸದಾಯಕವಾಗಿದೆ ಎಂಬುವುದು ಕೂಡ ಅಷ್ಟೇ ಸತ್ಯ.

ಆದ್ದರಿಂದ ತಮ್ಮ ಅಹವಾಲುಗಳನ್ನು ನೇರವಾಗಿ ಪೊಲೀಸ್‌ ಆಯುಕ್ತರಿಗೆ ತಿಳಿಸುವ ನೇರ ಫೋನ್‌ ಕಾರ್ಯಕ್ರಮದಂತಹ ವೇದಿಕೆ ಮಂಗಳೂರಿನಂತಹ ಸೂಕ್ಷ್ಮ ಪ್ರದೇಶಕ್ಕೆ ಅತ್ಯಗತ್ಯ.
ಸದ್ಯ ಕರ್ನಾಟಕ ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದೆ ಜೊತೆಗೆ ಒಂದಷ್ಟು ಸಮಸ್ಯೆಗಳನ್ನು ಅದು ಹೊತ್ತು ತರುತ್ತಿದೆ.

ಇದರೊಟ್ಟಿಗೆ ನಗರದಲ್ಲಿ ಸಮಸ್ಯೆಗಳ ರಾಶಿ ಇದೆ. ಬಸ್‌ ಸಂಚಾರ, ಟ್ರಾಫಿಕ್‌, ಫುಟ್‌ಪಾತ್‌, ಅಪರಾಧ, ಡ್ರಗ್‌ ಮಾಫಿಯಾ, ಕಳ್ಳತನ, ಅಕ್ರಮ ಗೋಸಾಟ ಪ್ರಕರಣಗಳು ಹೆಚ್ಚಾಗುತ್ತಿದೆ.

ಇದನ್ನು ತಡೆಗಟ್ಟುವ ಉದ್ದೇಶದಿಂದ ನೂತನ ಆಯುಕ್ತರು ಈ ಕಾರ್ಯಕ್ರಮವನ್ನು ಮುಂದುವರೆಸಬೇಕಾಗಿ ಪ್ರಜ್ಞಾವಂತ ನಾಗರೀಕರ ಒತ್ತಾಯವಾಗಿದೆ.

DAKSHINA KANNADA

ಮಂಗಳೂರು: ವಿಚ್ಛೇದನಕ್ಕೆ ಬಂದ ಎರಡು ಜೋಡಿಗಳು-ಸಂಧಾನ ಮಾಡಿ ಒಂದಾಗಿಸಿದ ಲೋಕ್ ಅದಾಲತ್

Published

on

ಮಂಗಳೂರು: ವಿಚ್ಛೇದನಕ್ಕೆ ಮುಂದಾಗಿದ್ದ ಎರಡು ಜೋಡಿಗಳು ಮತ್ತೆ ಒಂದಾದ ವಿಶೇಷ ಹಾಗೂ ಹೃದಯಸ್ಪರ್ಶಿ ವಿದ್ಯಮಾನಕ್ಕೆ ಶನಿವಾರ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್ ಬೈಠಕ್‌ ಸಾಕ್ಷಿಯಾಯಿತು.

ಈ ಎರಡು ಜೋಡಿಗಳ ದಾಂಪತ್ಯ ಜೀವನದಲ್ಲಿ ಯಾವುದೋ ಕಾರಣಕ್ಕೆ ಮನಸ್ತಾಪ ಉಂಟಾಗಿದ್ದ ಕಾರಣ ದಂಪತಿಗಳು ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಬಳಿಕ ವಿಚಾರಣೆ ವೇಳೆ ಈ ಪ್ರಕರಣವನ್ನು ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರದ ಮೂಲಕ ಸರಿಪಡಿಸಲು ಪ್ರಯತ್ನ ನಡೆಯಿತು. ಪತಿ ಮತ್ತು ಪತ್ನಿಯ ಮಧ್ಯೆ ಸಂಧಾನ ಏರ್ಪಡಿಸಿ ಮತ್ತೆ ಒಂದುಗೂಡಿ ದಾಂಪತ್ಯ ಜೀವನ ಮುಂದುವರಿಸುವ ಬಗ್ಗೆ ಉಭಯೇತರರಿಗೂ ಮನವರಿಕೆ ಮಾಡಲಾಗಿತ್ತು.

ಸಂಧಾನದ ವೇಳೆ ದಂಪತಿಗಳು ಮತ್ತೆ ಒಂದುಗೂಡಿ ಜೀವನ ಮುಂದುವರಿಸಲು ಒಪ್ಪಿದ್ದರು. ಅದರಂತೆ ಶನಿವಾರ ಲೋಕ ಅದಾಲತ್ ಗೆ ಆಗಮಿಸಿದ್ದ ಎರಡೂ ಜೋಡಿಗಳು ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಲಕ್ಷ್ಮೀ ನಾರಾಯಣ ಭಟ್‌ ಕೆ.  ಅವರ ಸಮಕ್ಷಮದಲ್ಲಿ ಪರಸ್ಪರ ಹಾರ ಬದಲಾಯಿಸುವ ಮುಖೇನ  ಒಂದಾಗುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿತು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್‌ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ, ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು ಮತ್ತು ವಕೀಲರು ಉಪಸ್ಥಿತರಿದ್ದು, ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.  ಲೋಕ ಅದಾಲತ್ ಅಧಿವೇಶನದಲ್ಲಿ ಭಾಗವಹಿಸಿದ್ದ ಎರಡೂ ಜೋಡಿಗಳು ಮತ್ತೆ ಒಂದಾಗುವ ಮೂಲಕ ತಮ್ಮ ವಿಚ್ಛೇದನದ ಹೋರಾಟವನ್ನು ಕೊನೆಗೊಳಿಸಿದ ಈ ವಿದ್ಯಮಾನ ಮಾದರಿಯಾಗಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ ಅವರು ತಿಳಿಸಿದ್ದಾರೆ.

Continue Reading

DAKSHINA KANNADA

ಕರಾವಳಿಯಲ್ಲಿ ‘ಸಿಲ್ವರ್ ವುಡ್’ ಮರಗಳ ಹೊಸ ಪ್ರಯೋಗ!

Published

on

ಪುತ್ತೂರು: ಕೊಡಗು ಮತ್ತು ಚಿಕ್ಕಮಗಳೂರಿನಂತಹ ತಂಪಾದ ಹವಾಗುಣದಲ್ಲಿ ಬೆಳೆಯುವ ಸಿಲ್ವರ್ ವುಡ್ ಮರಗಳನ್ನು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬೆಳೆಸಲು ನಡೆಸಿದ ಮೊದಲ ಪ್ರಯತ್ನ ಯಶಸ್ವಿಯಾಗಿದೆ.


ಫ್ಲೈವುಡ್ ಮತ್ತು ಇತರ ಪೀಠೋಪಕರಣಗಳ ತಯಾರಿಕೆಗಾಗಿ ಬಳಸುವ ಈ ಮರಗಳನ್ನು ದೊಡ್ಡ ಮಟ್ಟದಲ್ಲಿ ಬೆಳೆಸಲು ಪುತ್ತೂರಿನ ಕೃಷಿಕರೊಬ್ಬರು ಮುಂದಾಗಿದ್ದು, ದಾರಂದಕುಕ್ಕ ಕಾಯರ್ತಡಿ ನಿವಾಸಿ ಅಜಿತಪ್ರಸಾದ್ ರೈ ತಮ್ಮ ಬಳಿ ಇರುವ ಸುಮರು 20 ಎಕರೆ ಕೃಷಿಭೂಮಿಯಲ್ಲಿ ಈ ಸಿಲ್ವರ್ ವುಡ್ ಬೆಳೆಯಲು ನಿರ್ಧರಿಸಿದ್ದರು.

ಉಷ್ಣಾಂಶ ಹೆಚ್ಚಾಗಿರುವ ದಕ್ಷಿಣಕನ್ನಡ ಜಿಲ್ಲೆಯ ವಾತಾವರಣದಲ್ಲಿ ಈ ಮರಗಳು ಉಳಿಯುತ್ತದೋ ಎನ್ನುವ ಪ್ರಶ್ನೆಗಳ ಮಧ್ಯೆ ಸುಮಾರು 3 ಸಾವಿರದಷ್ಟು ಸಿಲ್ವರ್ ವುಡ್ ಸಸಿಗಳನ್ನು ನಾಟಿ ಮಾಡಿದ್ದಾರೆ. ಗಿಡಗಳನ್ನು ನಾಟಿ ಮಾಡಿ ಎರಡು ವರ್ಷಗಳಾಗುತ್ತಿದ್ದಂತೆ ಉತ್ತಮ ರೀತಿಯಲ್ಲಿ ಬೆಳೆದು ನಿಂತಿವೆ.

ಇದನ್ನೂ ಓದಿ: ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕಾಗಮಿಸಿದ ಆದಿ ಯೋಗಿ ರಥದ ಶಿವ ಯಾತ್ರೆ

ಜಿಲ್ಲೆಯ ಹವಾಗುಣದಲ್ಲೂ ಸಿಲ್ವರ್ ವುಡ್ ಮರಗಳನ್ನು ಬೆಳೆಸಬಹುದು ಅನ್ನೋದನ್ನ ತೋರಿಸಿಕೊಟ್ಟಿದ್ದಾರೆ. ಸಿಲ್ವರ್ ವುಡ್ ಮರದಿಂದ ಎರಡು ಆದಾಯವನ್ನು ಪಡೆದುಕೊಳ್ಳುತ್ತಿದ್ದಾರೆ. ಗಿಡ ಬೆಳೆಯುತ್ತಿದ್ದಂತೆ ಈ ಗಿಡಗಳಿಗೆ ಕಾಳುಮೆಣಸಿನ ಬಳ್ಳಿಯನ್ನು ಬಿಡುತ್ತಿದ್ದು, ಈ ಬಳ್ಳಿಗಳಿಗೆ ಈ ಗಿಡಗಳು ಉತ್ತಮ ರೀತಿಯ ಆಸರೆಯನ್ನು ನೀಡುವ ಹಿನ್ನಲೆಯಲ್ಲಿ ಕಾಳುಮೆಣಸಿನ‌ ಗಿಡಗಳಲ್ಲೂ ಉತ್ತಮ‌ ಬೆಳೆ ಪಡೆಯುತ್ತಿದ್ದಾರೆ.

ನೇರವಾಗಿ, ಎತ್ತರವಾಗಿ‌ ಬೆಳೆಯವ ಈ ಮರಕ್ಕೆ ಭಾರೀ ಬೇಡಿಕೆಯೂ ಇದೆ. ಹೆಚ್ಚಾಗಿ ಪ್ಲೈವುಡ್ ತಯಾರಿಕೆಗೆ, ಪೀಠೋಪಕರಣಗಳ ತಯಾರಿಕೆಯಲ್ಲೂ ಈ ಮರವನ್ಮು ಬಳಸುತ್ತಾರೆ. ಎಲ್ಲಾ ಸಿಲ್ವರ್ ವುಡ್ ಮರಗಳು ಹುಲುಸಾಗಿ ಬೆಳೆಯುತ್ತಿದ್ದು, ಮುಂದಿನ ಎರಡು-ಮೂರು ವರ್ಷದ ಒಳಗೆ ಕಟಾವು ಮಾಡಿದಲ್ಲಿ, ಮರದಿಂದ ಉತ್ತಮ ಆದಾಯ ಬರುವ ನಿರೀಕ್ಷೆಯಿದೆ.

Continue Reading

DAKSHINA KANNADA

ತಾವರೆ ಬೆಳೆದ ನೀರಿನ ಟ್ಯಾಂಕ್ ಗೆ ಬಿದ್ದು ಮಗು ಸಾ*ವು

Published

on

ಪುತ್ತೂರು : ಮಕ್ಕಳ ವಿಚಾರದಲ್ಲಿ ಎಷ್ಟು ಜಾಗೃತೆ ವಹಿಸಿದರೂ ಸಾಲದು. ಪುಟ್ಟ ಮಕ್ಕಳ ಬಗ್ಗೆ ಸದಾ ಕಣ್ಣಿಡುವುದು ಅತೀ ಅಗತ್ಯ. ಇಲ್ಲವಾದಲ್ಲಿ ಅನಾಹುತವೇ ಸಂಭವಿಸಬಹುದು. ಇದೀಗ ಪುತ್ತೂರಿನಲ್ಲಿ ದುರಂ*ತ ಸಂಭವಿಸಿದೆ.

ತಾವರೆ ಬೆಳೆದ ನೀರಿನ ಟ್ಯಾಂಕ್‌ಗೆ ಒಂದೂವರೆ ವರ್ಷದ ಮಗು ಬಿದ್ದು ಸಾ*ವನ್ನಪ್ಪಿದೆ. ಪುತ್ತೂರಿನ ಬನ್ನೂರು ನೀರ್ಪಾಜೆಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ : ಸುದೀಪ್ ಸಿನಿಮಾದಲ್ಲಿದ್ದಾರೆ ದಕ್ಷಿಣ ಭಾರತದ ಖ್ಯಾತ ನಟರು! ಪೋಸ್ಟರ್ ಬಿಡುಗಡೆ

ಮನೆಯಂಗಳದಲ್ಲಿ ಮಗುವಿಗೆ ಊಟ ಕೊಡುತ್ತಿದ್ದ ತಾಯಿ ಮನೆಯೊಳಗೆ ಹೋಗಿ ಬರುತ್ತಿದ್ದಂತೆ ಮಗು ನಾಪತ್ತೆಯಾಗಿದೆ. ಹುಡುಕಾಡಿದಾಗ ಮನೆಯಂಗಳದ ತಾವರೆ ನೀರಿನ ಟ್ಯಾಂಕ್‌ಗೆ ಬಿದ್ದಿರುವುದು ಗಮನಕ್ಕೆ ಬಂದಿದೆ. ತಕ್ಷಣ ಮಗುವನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಮಗು ಮೃ*ತಪಟ್ಟಿದೆ ಎಂದು ತಿಳಿದುಬಂದಿದೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page