Connect with us

LATEST NEWS

ನಡುರಾತ್ರೀಲಿ ಕಾರಲ್ಲಿದ್ದುದನ್ನು ಕಂಡು ದಂಗಾದ ಸಿಸಿಬಿ ಪೊಲೀಸರು..!

Published

on

ನಡುರಾತ್ರೀಲಿ ಕಾರಲ್ಲಿದ್ದುದನ್ನು ಕಂಡು ದಂಗಾದ ಸಿಸಿಬಿ ಪೊಲೀಸರು..!

ಬೆಂಗಳೂರು :  ಸಿಸಿಬಿ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದು, ರಾಜಧಾನಿಯಲ್ಲಿ ಎರಡು ಗುಂಪುಗಳ ನಡುವೆ ನಡೆಯಬೇಕಿದ್ದ ಗ್ಯಾಂಗ್ ವಾರ್ ತಡೆದಿದ್ದಾರೆ.

ಮಂಗಳೂರು ರೌಡಿಶೀಟರ್ ಕಿರಣ್ ಗೌಡ, ಮಂಗಳೂರು ಉಳ್ಳಾಲ ರೌಡಿ ವಿಶ್ವನಾಥ ಭಂಡಾರಿ ಸೇರಿ 11 ಜನರ ನಟೋರಿಯಸ್ ಗ್ಯಾಂಗ್ ಅರೆಸ್ಟ್ ಆಗಿದೆ.  ಇವರಿಂದ ಭಾರೀ ಪ್ರಮಾಣದಲ್ಲಿ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ಬರೋಬ್ಬರಿ 18 ಮಚ್ಚು ಹಾಗೂ ಲಾಂಗುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಮಾರತ್ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಿಸಿಬಿಯಿಂದ ತನಿಖೆ ಮುಂದುವರೆದಿದೆ.

ರೋಹಿತ್ ಹಾಗೂ ಕಾಡುಬೀಸಲಹಳ್ಳಿ ಸೋಮು ಗ್ಯಾಂಗ್ ನಡುವೆ ನಡೆಯಬೇಕಿದ್ದ ಗ್ಯಾಂಗ್ ವಾರ್ ಬಗ್ಗೆ ಮಾಹಿತಿ ಪಡೆದ ತಕ್ಷಣವೇ ಕಾರ್ಯಪ್ರವೃತ್ತರಾದ ಸಿಸಿಬಿ ಪೊಲೀಸರು ವಿಶೇಷ ತಂಡ ರಚನೆ ಮಾಡಿ 11 ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರ ಮೇಲೆ ಈಗಾಗಲೇ ದರೋಡೆ, ಡಕಾಯತಿ ಸೇರಿದಂತೆ ಹಲವು ಪ್ರಕರಣಗಳಿವೆ. ಸದ್ಯ ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ಮೇಲೆ ಎಫ್ಐಆರ್ ದಾಖಲಾಗಿದೆ.

ಸ್ಥಳೀಯ ರೌಡಿಸಂಗೆ ಮಂಗಳೂರು ರೌಡಿಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದ ಕಾಡುಬಿಸನಹಳ್ಳಿ ಸೋಮ ಮತ್ತು ಕಾಡುಬಿಸನಹಳ್ಳಿ ರೋಹಿತ್ ನಡುವೆ ಹಳೇ ದ್ವೇಷವಿತ್ತು.

ಹೀಗಾಗಿ, ಕಾಡುಬಿಸನಹಳ್ಳಿ ಸೋಮ ಗ್ಯಾಂಗ್ ವಾರ್ಗೆ ಟಾರ್ಗೆಟ್ ಆಗಿದ್ದ. ಇದಕ್ಕೆಲ್ಲ ಮಾಸ್ಟರ್ ಪ್ಲಾನ್ ಮಾಡಿದ್ದು ರೌಡಿ ಕಾಡುಬಿಸನಹಳ್ಳಿ ರೋಹಿತ್.

ಕಾಡುಬಿಸನಹಳ್ಳಿ ಸೋಮ ಗ್ಯಾಂಗ್‌ನ್ನು ಮುಗಿಸಲು ಮಂಗಳೂರಿನ ರೌಡಿಶೀಟರ್‌ ಕಿರಣ್‌ ಗೌಡ ಹಾಗೂ ವಿಶ್ವನಾಥ್‌ ಭಂಡಾರಿಯನ್ನು ಕರೆಸಿದ್ದರು.

ರಾತ್ರಿ ಅಟ್ಯಾಕ್‌ ನಡೆಸಲು ಮಾರಕಾಸ್ತ್ರಗಳ ಸಮೇತ ರಸ್ತೆಯಲ್ಲಿ ಕಾಯುತ್ತಿದ್ದ ವೇಳೆ ಪೊಲೀಸರು ಇವರನ್ನ ಅರೆಸ್ಟ್ ಮಾಡಿದ್ದಾರೆ.

ಆನೇಕಲ್ ರೌಡಿಶೀಟರ್ ಹರೀಶ್, ಸರ್ಜಾಪುರ ರೌಡಿ ಶೀಟರ್ ವೆಂಕಟೇಶ್, ಮಂಗಳೂರು ರೌಡಿಶೀಟರ್ ಕಿರಣ್ ಗೌಡ, ಮಂಗಳೂರು ಉಳ್ಳಾಲ ರೌಡಿ ವಿಶ್ವನಾಥ ಭಂಡಾರಿ ಸೇರಿ 11 ಜನರ ನಟೋರಿಯಸ್ ಗ್ಯಾಂಗ್ ಅರೆಸ್ಟ್ ಆಗಿದೆ.

FILM

ರೀಲ್ಸ್ ರಾಣಿ ರೇಷ್ಮಾ ಆಂಟಿ ಕಿಡ್ನಾಪ್

Published

on

ಮಂಗಳೂರು/ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ‘ಹಾಯ್ ಫ್ರೆಂಡ್ಸ್ ಏನ್ ಗೊತ್ತಾ’ ಅಂತ ಹೇಳುತ್ತಲೇ ವಿಡಿಯೋ ಮಾಡಿ ಫೇಮಸ್ ಆಗಿದ್ದ ರೇಷ್ಮಾ ಯಾಸಿನ್ ಸಖತ್ ಸುದ್ದಿಯಲ್ಲಿದ್ದಾರೆ. ಆದರೆ ಇದೀಗ ಕಿಡ್ನಾಪ್ ಆಗಿರೋ ರೀತಿಯಲ್ಲಿ ರೀಲ್ಸ್ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.


ಗಿಚ್ಚಿ ಗಿಲಿಗಿಲಿ ಸೀಸನ್ 3ರ ಸ್ಪರ್ಧಿಯಾಗಿ ಇಡೀ ಕರ್ನಾಟಕಕ್ಕೆ ಫೇಮಸ್ ಆಗಿರುವ ರೇಷ್ಮಾ ಯಾಸಿನ್ ಅವರು ತಮ್ಮ ವೈರಲ್ ವಿಡಿಯೋಗಳಿಂದಲೇ ಇಂದು ಸೆಲಿಬ್ರಿಟಿಯಾಗಿದ್ದಾರೆ. ಜನರು ಸಹ ರೇಷ್ಮಾ ಅವರ ವಿಡಿಯೋಗಳಿಗೆ ಪ್ರೀತಿಯನ್ನು ನೀಡುತ್ತಿದ್ದು, ಅಧಿಕ ವ್ಯೂವ್ಸ್ ಪಡೆದುಕೊಳ್ಳುತ್ತಿರುತ್ತವೆ. ಇದೀಗ ಕಿಡ್ನಾಪ್ ಆಗಿರೋ ರೀತಿಯಲ್ಲಿ ರೀಲ್ಸ್ ಮಾಡಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ಕೆಆರ್‌ಎಸ್ ಡ್ಯಾಂಗೆ ಎತ್ತಿ ಹಾಕುವೆ ಎಂದ ರವಿ ಮಂಡ್ಯ
ಸದ್ಯ ವೈರಲ್ ವಿಡಿಯೋದಲ್ಲಿ ಹಾಯ್ ಫ್ರೆಂಡ್ಸ್. ನೀವು ನನ್ನನ್ನು ಎಷ್ಟು ಬೆಳೆಸಿದ್ದೀರಿ ಅಂದ್ರೆ ರವಿ ಮಂಡ್ಯ ಅವರನ್ನು ನಾನು ಪರ್ಸನಲ್ ಮೇಕಪ್ ಮ್ಯಾನ್ ಆಗಿ ಇಟ್ಕೊಂಡಿದ್ದೇನೆ ಎಂದು ರೇಷ್ಮಾ ಆಂಟಿ ಹೇಳುತ್ತಾರೆ. ಇದಕ್ಕೆ ಕೋಪಗೊಳ್ಳುವ ರವಿ ಮಂಡ್ಯ, ಒಮಿನಿ ವ್ಯಾನ್ ಡಿಕ್ಕಿ ಓಪನ್ ಮಾಡುತ್ತಾರೆ. ನಂತರ ರೇಷ್ಮಾ ಕೈ-ಕಾಲುಗಳನ್ನು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಡಿಕ್ಕಿಯೊಳಗೆ ಹಾಕುತ್ತಾರೆ. ಬಿದ್ಕೋ ಕಪಿ ಮುಂಡೆದೆ, ಇನ್ನೊಂದ್ ಸಾರಿ ಆ ಕಟ್ಟಪ್ಪನ ಜೊತೆ ನೀನು ವಿಡಿಯೋನೇ ಮಾಡಬಾರದು. ನಿನ್ನನ್ನು ಕೆಆರ್‌ಎಸ್ ಡ್ಯಾಂಗೆ ಎತ್ತಿ ಹಾಕುವೆ ಎಂದು ವ್ಯಾನ್ ಚಾಲನೆ ಮಾಡಿಕೊಂಡು ಹೋಗುತ್ತಾರೆ.

ಇದನ್ನೂ ಓದಿ: ಶ್ರೀಲೀಲಾ ಅಭಿನಯದ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಆಸ್ಟ್ರೇಲಿಯಾದ ದಿಗ್ಗಜ ಕ್ರಿಕೆಟರ್!

ಈ ರೀಲ್ಸ್‌ ನೋಡಿದ ನೆಟ್ಟಿಗರು, ಅಣ್ಣ ತುಂಬಾ ಉಪಕಾರ ಮಾಡಿದ್ರಿ, ಫಸ್ಟ್ ತಗೊಂಡ್ ಹೋಗಿ ಕೆಆರ್‌ಎಸ್ ಡ್ಯಾಮ್‌ಗೆ ಆಕ್ಬಿಡು ದೇವರು ಒಳ್ಳೇದ್ ಮಾಡ್ತಾನೆ ನಿನಗೆ ಎಂದು ತಮ್ಮ ಗೋಳು ತೋಡಿಕೊಂಡಿದ್ದಾರೆ. ಇವ್ಳ ಕರ್ಕೊಂಡು ಹೋಗಿ ಕಾಡಲ್ಲಿ ಬಿಟ್ ಬಂದ್ಬಿಡು ಇಲ್ಲಿ ಇವರ ಕಾಟ ತಡೆಯೋಕೆ ಆಗ್ತಿಲ್ಲ ಎಂದು ಕಾಮೆಂಟ್ ಮಾಡುತ್ತಿದ್ದಾರೆ.

Continue Reading

FILM

ಉಡುಪಿ ಶ್ರೀಕೃಷ್ಣ ಮಠಕ್ಕೆ ಲವ್ಲಿ ಸ್ಟಾರ್ ಪ್ರೇಮ್, ನಟಿ ಶರಣ್ಯ ಭೇಟಿ

Published

on

ಉಡುಪಿ :  ಶ್ರೀ ಕೃಷ್ಣ ಮಠಕ್ಕೆ  ಲವ್ಲಿ ಸ್ಟಾರ್ ಪ್ರೇಮ್ ಭೇಟಿ ನೀಡಿದರು. ಪ್ರಾತಃ ಕಾಲದಲ್ಲಿ ನಡೆಯುವ ವಿಶೇಷ ಪೂಜೆಯನ್ನು ಕಣ್ತುಂಬಿ ಕೊಂಡರು.  ಈ ವೇಳೆ ನಟಿ ಶರಣ್ಯ ಶೆಟ್ಟಿ ಕೂಡ ಜೊತೆಗಿದ್ದರು.

ಪ್ರಾತ:ಕಾಲದಲ್ಲಿ ಉಡುಪಿ ಶ್ರೀ ಕೃಷ್ಣನ ವಿಶ್ವರೂಪದರ್ಶನ ಪಡೆದು ಸಂತೋಷ ವ್ಯಕ್ತಪಡಿಸಿದರು. ಪರ್ಯಾಯ ಪುತ್ತಿಗೆ ಶ್ರೀ  ಶ್ರೀ ಸುಗುಣೇಂದ್ರತೀರ್ಥರಿಂದ  ಕೋಟಿಗೀತಾಲೇಖನ ಯಜ್ಞ ದೀಕ್ಷೆಯನ್ನು ಸ್ವೀಕರಿಸಿದರು.

ಈ ವೇಳೆ ಮಠದ ವತಿಯಿಂದ ಪ್ರೇಮ್ ಅವರನ್ನು ಗೌರವಿಸಲಾಯಿತು.

Continue Reading

DAKSHINA KANNADA

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ನಟ ಪ್ರಭುದೇವ

Published

on

ಕಡಬ : ಇತ್ತೀಚೆಗೆ ಕರಾವಳಿಯ ದೇಗುಲಗಳಿಗೆ ಸೆಲೆಬ್ರಿಟಿಗಳು ಭೇಟಿ ನೀಡುತ್ತಿದ್ದಾರೆ. ಇತ್ತೀಚೆಗಷ್ಟೆ ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಕ್ಷೇತ್ರಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ಇಂದು (ಮಾ.15) ಖ್ಯಾತ ನಟ ಪ್ರಭುದೇವ ಕುಟುಂಬ ಸಮೇತ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿದರು.

ಪತ್ನಿ ಹಾಗೂ ಕುಟುಂಬ ವರ್ಗದವರ ಜೊತೆಗೂಡಿ ಆಗಮಿಸಿದ್ದ ಪ್ರಭುದೇವ ಮಹಾಭಿಷೇಕ ಪೂಜೆಯನ್ನು ನೆರವೇರಿಸಿ, ಶ್ರೀ ದೇವರ ಮುಖ್ಯ ಅರ್ಚಕರಿಂದ ಪ್ರಸಾದ ಸ್ವೀಕರಿಸಿದರು. ಬಳಿಕ ಶ್ರೀ ಸಂಪುಟ ನರಸಿಂಹಸ್ವಾಮಿ ಮಠಕ್ಕೆ ಭೇಟಿ ನೀಡಿದರು.

ಇದನ್ನೂ ಓದಿ : “ಗೋಲ್ಡನ್ ಮ್ಯಾಜಿಷಿಯನ್” ರಾಷ್ಟ್ರೀಯ ಜಾದೂ ಪ್ರಶಸ್ತಿ ಪಡೆದ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್‌

ಈ ಸಂದರ್ಭ ದೇವಳದ ಕಚೇರಿಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅರವಿಂದ ಅಯ್ಯಪ್ಪ  ಸುತಗುಂಡಿ ಅವರು ಪ್ರಭುದೇವ ದಂಪತಿಯನ್ನು ಶಾಲು ಹೊಂದಿಸಿ ಫಲಪುಷ್ಪ ನೀಡಿ ಗೌರವಿಸಿದರು. ಈ ವೇಳೆ ಸಹಾಯಕ ಕಾರ್ಯನಿರ್ವಾಹಕ ಅಧಿಕಾರಿ ಯೇಸುರಾಜ್, ಶಿಷ್ಟಾಚಾರ ಅಧಿಕಾರಿ ಜಯರಾಮ್ ರಾವ್ ಮುಂತಾದವರು ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page