Connect with us

LATEST NEWS

ನಡುರಾತ್ರೀಲಿ ಕಾರಲ್ಲಿದ್ದುದನ್ನು ಕಂಡು ದಂಗಾದ ಸಿಸಿಬಿ ಪೊಲೀಸರು..!

Published

on

ನಡುರಾತ್ರೀಲಿ ಕಾರಲ್ಲಿದ್ದುದನ್ನು ಕಂಡು ದಂಗಾದ ಸಿಸಿಬಿ ಪೊಲೀಸರು..!

ಬೆಂಗಳೂರು :  ಸಿಸಿಬಿ ಪೊಲೀಸರು ಭಾರಿ ಕಾರ್ಯಾಚರಣೆ ನಡೆಸಿದ್ದು, ರಾಜಧಾನಿಯಲ್ಲಿ ಎರಡು ಗುಂಪುಗಳ ನಡುವೆ ನಡೆಯಬೇಕಿದ್ದ ಗ್ಯಾಂಗ್ ವಾರ್ ತಡೆದಿದ್ದಾರೆ.

ಮಂಗಳೂರು ರೌಡಿಶೀಟರ್ ಕಿರಣ್ ಗೌಡ, ಮಂಗಳೂರು ಉಳ್ಳಾಲ ರೌಡಿ ವಿಶ್ವನಾಥ ಭಂಡಾರಿ ಸೇರಿ 11 ಜನರ ನಟೋರಿಯಸ್ ಗ್ಯಾಂಗ್ ಅರೆಸ್ಟ್ ಆಗಿದೆ.  ಇವರಿಂದ ಭಾರೀ ಪ್ರಮಾಣದಲ್ಲಿ ಮಾರಕಾಸ್ತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ಬರೋಬ್ಬರಿ 18 ಮಚ್ಚು ಹಾಗೂ ಲಾಂಗುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಬಗ್ಗೆ ಮಾರತ್ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸಿಸಿಬಿಯಿಂದ ತನಿಖೆ ಮುಂದುವರೆದಿದೆ.

ರೋಹಿತ್ ಹಾಗೂ ಕಾಡುಬೀಸಲಹಳ್ಳಿ ಸೋಮು ಗ್ಯಾಂಗ್ ನಡುವೆ ನಡೆಯಬೇಕಿದ್ದ ಗ್ಯಾಂಗ್ ವಾರ್ ಬಗ್ಗೆ ಮಾಹಿತಿ ಪಡೆದ ತಕ್ಷಣವೇ ಕಾರ್ಯಪ್ರವೃತ್ತರಾದ ಸಿಸಿಬಿ ಪೊಲೀಸರು ವಿಶೇಷ ತಂಡ ರಚನೆ ಮಾಡಿ 11 ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರ ಮೇಲೆ ಈಗಾಗಲೇ ದರೋಡೆ, ಡಕಾಯತಿ ಸೇರಿದಂತೆ ಹಲವು ಪ್ರಕರಣಗಳಿವೆ. ಸದ್ಯ ಮಾರತ್ ಹಳ್ಳಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ಮೇಲೆ ಎಫ್ಐಆರ್ ದಾಖಲಾಗಿದೆ.

ಸ್ಥಳೀಯ ರೌಡಿಸಂಗೆ ಮಂಗಳೂರು ರೌಡಿಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದ ಕಾಡುಬಿಸನಹಳ್ಳಿ ಸೋಮ ಮತ್ತು ಕಾಡುಬಿಸನಹಳ್ಳಿ ರೋಹಿತ್ ನಡುವೆ ಹಳೇ ದ್ವೇಷವಿತ್ತು.

ಹೀಗಾಗಿ, ಕಾಡುಬಿಸನಹಳ್ಳಿ ಸೋಮ ಗ್ಯಾಂಗ್ ವಾರ್ಗೆ ಟಾರ್ಗೆಟ್ ಆಗಿದ್ದ. ಇದಕ್ಕೆಲ್ಲ ಮಾಸ್ಟರ್ ಪ್ಲಾನ್ ಮಾಡಿದ್ದು ರೌಡಿ ಕಾಡುಬಿಸನಹಳ್ಳಿ ರೋಹಿತ್.

ಕಾಡುಬಿಸನಹಳ್ಳಿ ಸೋಮ ಗ್ಯಾಂಗ್‌ನ್ನು ಮುಗಿಸಲು ಮಂಗಳೂರಿನ ರೌಡಿಶೀಟರ್‌ ಕಿರಣ್‌ ಗೌಡ ಹಾಗೂ ವಿಶ್ವನಾಥ್‌ ಭಂಡಾರಿಯನ್ನು ಕರೆಸಿದ್ದರು.

ರಾತ್ರಿ ಅಟ್ಯಾಕ್‌ ನಡೆಸಲು ಮಾರಕಾಸ್ತ್ರಗಳ ಸಮೇತ ರಸ್ತೆಯಲ್ಲಿ ಕಾಯುತ್ತಿದ್ದ ವೇಳೆ ಪೊಲೀಸರು ಇವರನ್ನ ಅರೆಸ್ಟ್ ಮಾಡಿದ್ದಾರೆ.

ಆನೇಕಲ್ ರೌಡಿಶೀಟರ್ ಹರೀಶ್, ಸರ್ಜಾಪುರ ರೌಡಿ ಶೀಟರ್ ವೆಂಕಟೇಶ್, ಮಂಗಳೂರು ರೌಡಿಶೀಟರ್ ಕಿರಣ್ ಗೌಡ, ಮಂಗಳೂರು ಉಳ್ಳಾಲ ರೌಡಿ ವಿಶ್ವನಾಥ ಭಂಡಾರಿ ಸೇರಿ 11 ಜನರ ನಟೋರಿಯಸ್ ಗ್ಯಾಂಗ್ ಅರೆಸ್ಟ್ ಆಗಿದೆ.

LATEST NEWS

ಇವನೆಂಥಾ ಸೈಕೋ ಕಾಮಿ..! ಪಬ್ಲಿಕ್ ಟಾಯ್ಲೆಟ್ ನಲ್ಲಿ ನಾಯಿ ಮರಿಯ ಮೇಲೆ ಅತ್ಯಾಚಾರ..!

Published

on

ಮುಂಬೈ: ಇವನೆಂಥಾ ಕಾಮ ಪಿಶಾಚಿ. ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಈ ಕಾಮುಕನೊಬ್ಬ ಸಾರ್ವಜನಿಕ ಶೌಚಾಲಯದಲ್ಲಿ ಅತ್ಯಾಚಾರವೆಸಗಿರುವ ಘಟನೆ ಮುಂಬೈನ ಮಲಾಡ್ ಪ್ರದೇಶದಲ್ಲಿ ನಡೆದಿದೆ. ಅರೆಬೆತ್ತಲೆಯಾಗಿ ಮತ್ತು ಶಾರ್ಟ್ಸ್ ಧರಿಸಿ ಕಾಣಿಸಿಕೊಂಡ ಆರೋಪಿಯನ್ನು  ವಶಕ್ಕೆ ತೆಗೆದುಕೊಳ್ಳಲಾಗಿದೆ.

ರಕ್ಷಣಾ ಕಾರ್ಯಾಚರಣೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.ವೀಡಿಯೋದಲ್ಲಿ ಆ ವ್ಯಕ್ತಿ ಆರಂಭದಲ್ಲಿ ಬಾಗಿಲು ತೆರೆಯಲು ನಿರಾಕರಿಸುವುದನ್ನು ಕಾಣಬಹುದು. ನಂತರ ಪೊಲೀಸರು ಬಲವಂತವಾಗಿ ಒಳಗೆ ಪ್ರವೇಶಿಸಿ ಆತನನ್ನು ವಶಕ್ಕೆ ಪಡೆದರು.

ನಾಯಿಮರಿಯನ್ನು ತಕ್ಷಣವೇ ರಕ್ಷಿಸಿ ವೈದ್ಯಕೀಯ ಚಿಕಿತ್ಸೆಗೆ ಒಳಪಡಿಸಲಾಯಿತು. ನಾಯಿಮರಿ ಈಗ ವೈದ್ಯಕೀಯ ಆರೈಕೆಯಲ್ಲಿದೆ ಮತ್ತು ಗಂಭೀರ ಸ್ಥಿತಿಯಲ್ಲಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ದೃಢಪಡಿಸಿದ್ದಾರೆ.

Continue Reading

LATEST NEWS

ವೃದ್ಧ ದಂಪತಿ ದುರಂತ ಅಂತ್ಯಕ್ಕೆ ಬಿಗ್ ಟ್ವಿಸ್ಟ್, ಮುಹೂರ್ತ ಇಟ್ಟಿದ್ದ ತಮ್ಮನ ವೈದ್ಯ ಮಗ ಅರೆಸ್ಟ್..!

Published

on

ಶಿವಮೊಗ್ಗ: ಇಲ್ಲಿನ ಭದ್ರಾವತಿ ನಗರದ ಭೂತನಗುಡಿ ಬಡಾವಣೆಯಲ್ಲಿ ವಯೋವೃದ್ದ ದಂಪತಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹಣ ಮತ್ತು ಚಿನ್ನಾಭರಣಕ್ಕಾಗಿ ಕಿರಾತಕ ವೈದ್ಯನೊಬ್ಬ ತನ್ನ ದೊಡ್ಡಪ್ಪ, ದೊಡ್ಡಮ್ಮನನ್ನೇ  ಕೊಲೆಗೈದ ವಿಚಾರ ಬೆಳಕಿಗೆ ಬಂದಿದೆ.

ವಿಐಎಸ್‌ಎಲ್ ನಿವೃತ್ತ ನೌಕರ ಚಂದ್ರಪ್ಪ (78) ಮತ್ತು ಅವರ ಪತ್ನಿ ಜಯಮ್ಮ  (75) ಹತ್ಯೆಗೀಡಾದ ಮೃತ ದುರ್ದೈವಿಗಳು. ಮೃತ ಚಂದ್ರಪ್ಪ ಅವರ ಸಹೋದರ ಫಾಲಾಕ್ಷಪ್ಪ ಅವರ ಪುತ್ರ ಡಾ.ಮಲ್ಲೇಶ್ ಬಂಧಿತ ಆರೋಪಿ.

ವಿಶೇಷವೆಂದರೆ ವೃದ್ಧ ದಂಪತಿಗೆ ಯಾವುದೇ ಆರೋಗ್ಯ ಸಮಸ್ಯೆ ಬಂದಾಗ ಈತನ ಬಳಿಯೇ ಚಿಕಿತ್ಸೆ ಪಡೆಯುತ್ತಿದ್ದರು. ದಂಪತಿಯ ನಂಬಿಕೆಯನ್ನೇ ಬಂಡವಾಳ ಮಾಡಿಕೊಂಡ ವೈದ್ಯ, ಅವರಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಯಾವುದೇ ಗಾಯ ಮಾಡದೆ ಅತ್ಯಂತ ಚಾಣಾಕ್ಷತನದಿಂದ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ.

ವೃದ್ಧ ದಂಪತಿ ಕೊಲೆಯಾದ ಬಳಿಕ ನಾಪತ್ತೆಯಾಗಿದ್ದ ಚಿನ್ನಾಭರಣಗಳ ಜಾಡು ಹಿಡಿದ ಭದ್ರಾವತಿ ಓಲ್ಡ್ ಟೌನ್ ಪೊಲೀಸರು, ತನಿಖೆಯ ಸಂದರ್ಭದಲ್ಲಿ ಡಾ. ಮಲ್ಲೇಶ್ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಸದ್ಯ ಆರೋಪಿ ವೈದ್ಯನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಕೇವಲ ಹಣ ಮತ್ತು ಚಿನ್ನದ ಆಸೆಗಾಗಿ ಸ್ವಂತ ದೊಡ್ಡಪ್ಪ-ದೊಡ್ಡಮ್ಮನನ್ನೇ ಕೊಲ್ಲಲು ಈತ ಮುಂದಾಗಿದ್ದು ನಾಗರಿಕ ಸಮಾಜ ತಲೆತಗ್ಗಿಸುವಂತೆ ಮಾಡಿದೆ.

Continue Reading

LATEST NEWS

ಪಡುಬಿದ್ರೆಗೆ ಆಗಮಿಸಿದ ಬಿಗ್ಬಾಸ್ ರನ್ನರ್ ಅಪ್ ರಕ್ಷಿತಾ, ಕೈಯಲ್ಲಿ ಬಂಗುಡೆ ಹಿಡಿದು ಭರ್ಜರಿ ಡ್ಯಾನ್ಸ್

Published

on

ಪಡುಬಿದ್ರೆ: ತಮ್ಮ ವಿಶಿಷ್ಟ ಮಾತುಗಳಿಂದ ಮನೆ ಮಾತಾಗಿರುವ , ಈ ಬಾರಿಯ ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಇದೇ ಮೊದಲ ಬಾರಿಗೆ ತವರೂರಿಗೆ ಆಗಮಿಸಿದ್ದು, ರಕ್ಷಿತಾ ಶೆಟ್ಟಿಗೆ ಅಭಿಮಾನಿಗಳು ಮುತ್ತಿಗೆ ಹಾಕಿ ತಮ್ಮ ಅಭಿಮಾನವನ್ನು ಪ್ರದರ್ಶಿಸಿದರು. ಚೆಂಡೆ ನಾದದೊಂದಿಗೆ ರಕ್ಷಿತಾಳನ್ನು ತೆರೆದ ಜೀಪಿನಲ್ಲಿ ಮೆರವಣಿಗೆ ಮಾಡಲಾಯಿತು.

ತುಳುನಾಡಿನ ಬಾಲೆಗೆ ತುಳುನಾಡ ಶಾಲು ಹಾಕಿ ಗೌರವಿಸಲಾಯಿತು. ಉಡುಪಿ ಜಿಲ್ಲೆಯ ಗಡಿಭಾಗವಾದ ಹೆಜಮಾಡಿ ಟೋಲ್ ಪ್ರವೇಶಿಸಿದ ರಕ್ಷಿತಾಳಿಗೆ ಅಭಿಮಾನಿಗಳು ಅದ್ದೂರಿ ಸ್ವಾಗತವನ್ನೇ ನೀಡಿದರು. ರಕ್ಷಿತಾ ಅಭಿಮಾನಿಗಳು, ಕುಟುಂಬಿಕರು ಭಾರೀ ಸಂಖ್ಯೆಯಲ್ಲಿ ನೆರೆದಿದ್ದರು. ಇನ್ನು ರಕ್ಷಿತಾಳ ಜೊತೆ ತಮ್ಮ ಸೆಲ್ಫೀ ತೆಗೆದುಕೊಳ್ಳಲು ಮುಗಿಬಿದ್ದರು. ರಕ್ಷಿತಾ ಕುಡಾ ಅಭಿಮಾನಿಗಳನ್ನು ನಿರಾಶೆ ಮಾಡಲಿಲ್ಲ.

ಅವರ ಜೊತೆ ಸೆಲ್ಫೀ ಕ್ಲಿಕ್ಕಿಸಿಕೊಂಡರು. ಸಾಲದಕ್ಕೆ ಚೆಂಡೆ ಧ್ವನಿಗೆ ನೃತ್ಯ ಮಾಡಿ ಮನರಂಜಿಸಿದರು. ಹೆಜಮಾಡಿ ಟೋಲ್‌ನಿಂದ ಪಡುಬಿದ್ರಿ ಪೇಟೆ ತನಕ ಮೆರವಣಿಗೆ ಮಾಡಲಾಯಿತು. ಜಾತಿ, ಧರ್ಮವೆನ್ನದೇ ಎಲ್ಲರೂ ಬಂದು ರಕ್ಷಿತಾಳಿಗೆ ಶುಭ ಹಾರೈಸಿದರು. ಬಿಗ್ ಬಾಸ್ ರಕ್ಷಿತಾಳಿಗೆ ಜೈ ಮುಗಿಲು ಮುಟ್ಟಿತ್ತು. ಪಟಾಕಿ ಸಿಡಿಸಿ ಸಂಭ್ರಮಿಸಿದರು.

ವೀಡಿಯೊ ನೋಡಿ:

 

Continue Reading
Advertisement

Trending

Copyright © 2025 Namma Kudla News

You cannot copy content of this page