Connect with us

DAKSHINA KANNADA

ಮಂಗಳೂರು: ಮೇ 13ರಂದು 144 ಸೆಕ್ಷನ್ ಜಾರಿ – ರವಿಕುಮಾರ್ ಎಂ. ಆರ್

Published

on

ಕರ್ನಾಟಕ ವಿಧಾನ ಸಭೆ ಚುನಾವಣೆ 2023 ರ ಮತ ಎಣಿಕೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮಾನ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ರವಿಕುಮಾರ್ ಎಂ ಆರ್. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮೇ 13ರಂದು ನಿಷೇಧಾಜ್ಞೆ ಜಾರಿ ಗೊಳಿಸಿ ಆದೇಶ ಮಾಡಿದ್ದಾರೆ.

ಮಂಗಳೂರು: ಕರ್ನಾಟಕ ವಿಧಾನ ಸಭೆ ಚುನಾವಣೆ 2023 ರ ಮತ ಎಣಿಕೆ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮಾನ್ಯ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ರವಿಕುಮಾರ್ ಎಮ್ ಆರ್    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಮೇ 13ರಂದು ನಿಷೇಧಾಜ್ಞೆ ಜಾರಿ ಗೊಳಿಸಿ ಆದೇಶ ಮಾಡಿದ್ದಾರೆ.

ಮೇ13 ರಂದು ಬೆಳಿಗ್ಗೆ 5.00 ಗಂಟೆಯಿಂದ ಮಧ್ಯರಾತ್ರಿ 12.00ಗಂಟೆ ವರೆಗೆ ಆದೇಶ ಹೋರಾಡಿಸಿದ್ದಾರೆ.

1) ಜಿಲ್ಲೆಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು, ವಿಜಯೋತ್ಸವ ಆಚರಿಸುವುದನ್ನು ನಿಷೇಧಿಸಿದೆ.

2)ಯಾವುದೇ ರೀತಿಯ ಮಾರಕಾಸ್ತ್ರಗಳನ್ನು, ಕಲ್ಲು, ಕ್ಷಾರಕ ವಸ್ತುಗಳು, ಸ್ಫೋಟಕಗಳನ್ನು ಸಂಗ್ರಹಿಸುವುದು, ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ.

3)ಯಾವುದೇ ಪ್ರತಿಕೃತಿ ಪ್ರದರ್ಶನ ಅಥವಾ ಸುಡುವುದನ್ನು ನಿಷೇಧಿಸಲಾಗಿದೆ.

4)ಯಾವುದೇ ಬಹಿರಂಗ ಘೋಷಣೆ ಕೂಗುವುದು, ವಾದ್ಯ ಬಾರಿಸುವುದು, ಪದ ಹಾಡುವುದು, ನಕಲಿ ಪ್ರದರ್ಶನ,
ಪ್ರಚೋದನಕಾರಿ ಘೋಷಣೆ ಕೂಗುವುದು, ವ್ಯಕ್ತಿಗಳ ತೆಜೋವಧೆ ಮಾಡುವ ಕೃತ್ಯಗಳು ಇತ್ಯಾದಿಗಳನ್ನು ನಿಷೇಧಿಸಿದೆ.

5)ಸಾರ್ವಜನಿಕ ಗಾಂಭಿರ್ಯ, ನೈತಿಕತೆ, ಕಾನೂನು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯದಲ್ಲಿ ತೊಡಗುವುದನ್ನು ನಿಷೇಧಿಸಿದೆ.

ಈ ಮೇಲ್ಕಂಡ ಆದೇಶವನ್ನು ಉಲ್ಲಂಘಸಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು.

ಈ ಆದೇಶ ಜಾರಿ ಮಾಡುವಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಲು ಮನವಿ ಮಾಡಿದ್ದಾರೆ.

DAKSHINA KANNADA

ಆಸ್ಪತ್ರೆಯಿಂದ ಜೈಲಿಗೆ ಶಿಫ್ಟ್‌ ಆದ ಕೋಟೆಕಾರ್ ಬ್ಯಾಂಕ್ ದರೋಡೆ ಆರೋಪಿ

Published

on

ಉಳ್ಳಾಲದ ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಸಂಘದ ಬ್ಯಾಂಕ್ ದರೋಡೆ ಪ್ರಕರಣದ ಆರೋಪಿ ಮುರುಗನ್ ಡಿ ಇದೀಗ ಆಸ್ಪತ್ರೆಯಿಂದ ಜೈಲು ಸೇರಿದ್ದಾನೆ.

ಪೊಲೀಸರ ವಶದಲ್ಲಿದ್ದ ವೇಳೆ ಸ್ಥಳ ಮಹಜರು ವೇಳೆ ಬಾಲ ಬಿಚ್ಚಲು ಹೋಗಿ ಪೊಲೀಸರ ಗುಂಡೇಟು ತಿಂದು ಆಸ್ಪತ್ರೆ ಸೇರಿದ್ದ. ಕರ್ನಾಟಕ ಕೇರಳ ಗಡಿ ಭಾಗದ ಗ್ರಾಮವಾಗಿರುವ ಅಜ್ಜಿನಡ್ಕ ಎಂಬಲ್ಲಿ ಸ್ಥಳ ಮಹಜರು ವೇಳೆ ಆರೋಪಿ ತಪ್ಪಿಸಿಕೊಳ್ಳಲು ಯತ್ನಿಸಿದ್ದ. ಈ ವೇಳೆ ಉಳ್ಳಾಲ ಠಾಣಾಧಿಕಾರಿ ತಪ್ಪಿಸಿಕೊಳ್ಳುತ್ತಿದ್ದ ಆರೋಪಿ ಮುರುಗನ್ ಡಿ ಕಾಲಿಗೆ ಗುಂಡು ಹಾರಿಸಿದ್ದರು.

ಇದೀಗ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರುವ ಆರೋಪಿ ಮುರುಗನ್ ಡಿ ಯನ್ನು ಜಿಲ್ಲಾ ಕಾರಾಗ್ರಹಕ್ಕೆ ಕಳುಹಿಸಲಾಗಿದೆ. ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಇನ್ನೂ ಆರೋಪಿಗಳ ಬಂಧನವಾಗಬೇಕಾಗಿದ್ದು, ಆರೋಪಿಗಳಿಗೆ ಸಹಕರಿಸಿದ ಸ್ಥಳೀಯ ವ್ಯಕ್ತಿ ಯಾರು ಎಂಬುವುದು ಕೂಡಾ ಬಯಲಾಗಬೇಕಾಗಿದೆ.

Continue Reading

DAKSHINA KANNADA

ಹರಿಪಾದೆ ಜಾರಂದಾಯ ವಾರ್ಷಿಕ ನೇಮೋತ್ಸವದಲ್ಲಿ ಭಾಗಿಯಾದ ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್

Published

on

ಮುಲ್ಕಿ : ತಮಿಳು ಚಿತ್ರರಂಗದ ಖ್ಯಾತ ನಟ ವಿಶಾಲ್ ತುಳುನಾಡಿನ ನೇಮೋತ್ಸವದಲ್ಲಿ ಭಾಗಿಯಾದರು.

ಮಂಗಳವಾರ ರಾತ್ರಿ ಪಕ್ಷಿಕೆರೆ ಸಮೀಪದ ಹರಿಪಾದೆ ಜಾರಂದಾಯ ವಾರ್ಷಿಕ ನೇಮ ನಡೆದಿದ್ದು, ದೈವಕ್ಕೆ ಮಲ್ಲಿಗೆ ಹೂವು ಅರ್ಪಿಸಿ, ಸುಮಾರು ಮೂರು ಗಂಟೆಗಳ ಕಾಲ ಭಕ್ತಿಯಿಂದ ಜಾರಂದಾಯ ನೇಮವನ್ನು ವೀಕ್ಷಿಸಿದರು.

ವಿಶಾಲ್ ಅವರ ಆರೋಗ್ಯದಲ್ಲಿ ಏರು ಪೇರಾಗಿದ್ದು, ಇದಕ್ಕಾಗಿ ದೈವಕ್ಕೆ ಪ್ರಾರ್ಥನೆ ಸಲ್ಲಿಸಿದ್ದು, ಸಂಪೂರ್ಣ ಗುಣಮುಖವಾಗಿ ಬಂದು ಶ್ರೀ ಕ್ಷೇತ್ರದಲ್ಲಿ ತುಲಾಭಾರ ಸೇವೆ ಕೊಡಲು ಅರ್ಚಕರು ಸೂಚಿಸಿದ ಹಿನ್ನೆಲೆಯಲ್ಲಿ ಅವರು ಒಪ್ಪಿಕೊಂಡರು. ಮಾದ್ಯಮದೊಂದಿಗೆ ಮಾತನಾಡಿದ ವಿಶಾಲ್ ಕಾಂತಾರ ನಿನಿಮಾದಲ್ಲಿ ದೈವ ಮತ್ತು ಇಲ್ಲಿನ ನೇಮೋತ್ಸವದ ಬಗ್ಗೆ ತಿಳಿದಿದ್ದೇನೆ.

ಇದನ್ನೂ ಓದಿ: ಅಯೋಧ್ಯೆ ಶ್ರೀರಾಮ ಮಂದಿರದ ಪ್ರಧಾನ ಅರ್ಚಕ ನಿಧನ

ಇದೀಗ ಪ್ರಥಮ ಬಾರಿಗೆ ತುಳುನಾಡಿನ ನೇಮೋತ್ಸವವನ್ನು ನೋಡುತ್ತಿದ್ದೇನೆ ತುಂಬಾ ಖುಷಿ ನೀಡಿದೆ. ನಿನ್ನೆ ಕೊಲ್ಲೂರು ಮುಕಾಂಬಿಕೆ ದರ್ಶನ ಪಡೆದು ಇದೀಗ ಇಲ್ಲಿಗೆ ಭೇಟಿ ನೀಡಿದ್ದೇನೆ, ಬೆಳೆಯುತ್ತಿರುವ ತುಳು ಚಿತ್ರರಂಗದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು, ತಮಿಳಿನಲ್ಲಿ ಹಲವು ಸಿನಿಮಾಗಳ ಮಾತುಕಥೆ ನಡೆಯುತ್ತಿದೆ ಎಂದರು.

Continue Reading

BANTWAL

ತುಂಬೆ: ಚಾಲಕನಿಗೆ ಮೂರ್ಛೆ ರೋಗ ಬಂದು ಡಿವೈಡರ್ ಮೇಲೇರಿದ ಲಾರಿ

Published

on

ಬಂಟ್ವಾಳ: ಚಾಲಕನಿಗೆ ಮೂರ್ಛೆ ರೋಗ ಬಂದು ಡಿವೈಡರ್ ಮೇಲೆ ಲಾರಿ ಹತ್ತಿ ಸುಮಾರು 100 ಮೀ ನಷ್ಟು ಚಲಿಸಿ ನಿಂತಿದ್ದು, ಬಳಿಕ ಡ್ರೈವರ್ ಸೀಟಿನಲ್ಲಿ ಬಿದ್ದ ಘಟನೆ ಬಂಟ್ವಾಳ ತಾಲೂಕಿನ ರಾ.ಹೆ.75ರ ತುಂಬೆ ಸಮೀಪ ನಡೆದಿದೆ.

ಲಾರಿ ಚಾಲಕನನ್ನು ಕೂಡಲೇ ಸ್ಥಳೀಯರು ತುಂಬೆ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇಂದು ಬೆಳಗ್ಗೆ 7.45 ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಡಿವೈಡರ್ ಮೇಲೆ ಹಾಕಿದ್ದ ರಸ್ತೆ ಸೂಚಕಾ ಫಲಕಕ್ಕೆ ಹಾನಿಯಾಗುವುದು ಬಿಟ್ಟರೆ ಬೇರೆ ಯಾವೂದೇ ರೀತಿಯ ತೊಂದರೆ ಆಗಲಿಲ್ಲ.

ಲಾರಿಯು ಬೆಂಗಳೂರಿನಿಂದ ಮಂಗಳೂರು ಕಡೆಗೆ ಚಲಿಸುತ್ತಿತ್ತು. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page