Connect with us

LATEST NEWS

ಮಂಗಳೂರು ಅಗ್ನಿಶಾಮಕ ಠಾಣೆಯ 7 ಮಂದಿ ಸಿಬ್ಬಂದಿಗೆ ಕೊರೋನ ಪಾಸಿಟಿವ್ : ಒರ್ವ ಸಾವು..!

Published

on

ಮಂಗಳೂರು :ಮಂಗಳೂರಿನ ಅಗ್ನಿಶಾಮಕ ದಳದಕ್ಕೂ ಕೊರೊನಾ ಬಿಸಿ ತಟ್ಟಿದ್ದು ಒರ್ವ ಸಿಬಂದಿ ಕೊರೊನಾ ಉಲ್ಭಣಿಸಿದ ಪರಿಣಾಮ ಸಾವನ್ನಪ್ಪಿದ್ದಾರೆ.

ನಗರದ ಪ್ರಮುಖ ಅಗ್ನಿಶಾಮಕ ದಳದ ಕೇಂದ್ರಗಳಲ್ಲಿ ಒಂದಾದ ಕದ್ರಿ ಅಗ್ನಿಶಾಮಕ ಠಾಣೆಯ 7 ಮಂದಿ ಸಿಬ್ಬಂದಿಗೆ ಕೊರೋನ ಪಾಸಿಟಿವ್ ಆಗಿದೆ ಎಂದು ತಿಳಿದು ಬಂದಿದೆ.

ಇದರಲ್ಲಿ ನವೀನ್ ಚಂದ್ರ (54) ಎಂಬ ಸಿಬಂದಿ ಕೋವಿಡ್ ಗೆ ಬಲಿಯಾಗಿದ್ದಾರೆ. 54 ವರ್ಷದ ನವೀನ್ ಅವರು ಅತ್ಯುತ್ತಮ ಫೈರ್ ಫೈಟರ್ ಆಗಿದ್ದರು ಅಲ್ಲದೆ ಸಾಂಸ್ಕೃತಿಕ, ಸಾಮಾಜಿಕ ಮತ್ತು ಸಂಗೀತದಂತಹ ಕಾರ್ಯಕ್ರಮಗಳಲ್ಲೂ ಸದಾ ಮುಂಚೂಣಿಯಲ್ಲಿರುತ್ತಿದ್ದರು.

ಉಳ್ಳಾಲ ಕೋಟೆಕಾರ್ ನಿವಾಸಿಯಾಗಿರುವ ನವೀನ್ ಅವರು ಹೆಂಡತಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕೆಲ ದಿನಗಳ ಹಿಂದೆಯಷ್ಟೇ ಆಸ್ಪತ್ರೆಗೆ ದಾಖಲಾಗಿದ್ದರು ಆದರೆ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.

ಉಳಿದ ಆರು ಮಂದಿ ಸಿಬಂದಿಗಳು ಹೋಂ ಕ್ವಾರಂಟೈನ್ ನಲ್ಲಿದ್ದಾರೆ ಎಂದು ತಿಳಿದುಬಂದಿದೆ,

ತೌಕ್ತೆ ಚಂಡಮಾರುತದ ಪರಿಣಾಮ ಸುರಿದ ಭಾರೀ ಮಳೆಯ ವೇಳೆ ಬಿಡುವಿಲ್ಲದೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡ ಸಂದರ್ಭ ಅಗ್ನಿಶಾಮಕ ದಳದ ಸಿಬಂದಿಗಳು ಕೊರೋನ ಸೋಂಕಿಗೊಳಗಾಗಿರಬಹುದು ಎಂದು ಶಂಕಿಸಲಾಗಿದೆ‌.

LATEST NEWS

ಮಂಗನಕಾಯಿಲೆಗೆ ರಾಜ್ಯದಲ್ಲಿ ಮೊದಲ ಬಲಿ

Published

on

ಚಿಕ್ಕಮಗಳೂರು: ಕಳೆದ ಕೆಲ ದಿನಗಳಿಂದ ಮಂಗನಕಾಯಿಲೆಯ ಭೀತಿ ಉಲ್ಬಣಗೊಳ್ಳುತ್ತಿದ್ದು, ಇದೀಗ ಈ ಕಾಯಿಲೆಗೆ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ 65 ವರ್ಷದ ಮಹಿಳೆಯೊಬ್ಬಳು ಮಂಗನಕಾಯಿಲೆಯಿಂದಾಗಿ ಸಾವನ್ನಪ್ಪಿದ್ದಾಳೆ.

ಎನ್​.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ನಿವಾಸಿ ಕಮಲಾ (65 ವರ್ಷ) ಮೃತಪಟ್ಟ ಮಹಿಳೆ. ಪ್ರತಿನಿತ್ಯವೂ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಇವರು ಮಂಗನಕಾಯಿಲೆಗೆ ತುತ್ತಾಗಿದ್ದರು. ಕೊಪ್ಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಕಾಫಿತೋಟದಲ್ಲಿ ಕೆಲಸ ಮಾಡುವ ಜನರಿಗೆ ಈ ಕಾಯಿಲೆ ಹೆಚ್ಚಾಗಿ ಬರುತ್ತಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 51 ಜನರಿಗೆ ಮಂಗನಕಾಯಿಲೆ ದೃಢಪಟ್ಟಿದೆ. ಮಂಗನ ಕಾಯಿಲೆಗೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಕೂಡ​ ತೆರದಿದೆ.

ಕಳೆದ‌ ವರ್ಷ ಚಿಕ್ಕಮಗಳೂರು ಜಿಲ್ಲೆಯಲ್ಲಿ 132 ಜನರಲ್ಲಿ ಕಾಯಿಲೆ ಕಾಣಿಸಿಕೊಂಡು ನಾಲ್ವರನ್ನು ಬಲಿ ಪಡೆದಿತ್ತು. ಹೀಗಾಗಿ ಮಂಗನ ಕಾಯಿಲೆ ತನ್ನ ರುದ್ರರೂಪ ತಾಳುವ ಮುನ್ನ ಅರೋಗ್ಯ ಇಲಾಖೆ ಇನ್ನಷ್ಟು ಅಲರ್ಟ್ ಆಗಬೇಕಿದೆ.

Continue Reading

LATEST NEWS

20 ವಿದ್ಯಾರ್ಥಿಗಳಿಗೆ ಮರಣದಂಡನೆ; ಕೆಳ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದ ಬಾಂಗ್ಲಾ ಹೈಕೋರ್ಟ್

Published

on

ಮಂಗಳೂರು/ಢಾಕಾ: 2019ರಲ್ಲಿ ರಾಜಕೀಯ ನಂಟು ಹೊಂದಿದ್ದಾನೆ ಎಂದು ಆರೋಪಿಸಿ ಎರಡನೇ ವರ್ಷದ ಪದವಿ ವಿದ್ಯಾರ್ಥಿಯನ್ನು ಕೊಂ*ದಿದ್ದ 20 ವಿದ್ಯಾರ್ಥಿಗಳಿಗೆ ಮರಣದಂಡನೆ ವಿಧಿಸಿರುವ ಕೆಳ ನ್ಯಾಯಾಲಯದ ತೀರ್ಪನ್ನು ಬಾಂಗ್ಲಾದೇಶ ಹೈಕೋರ್ಟ್ ಭಾನುವಾರ ಎತ್ತಿಹಿಡಿದಿದೆ.


ನ್ಯಾಯಮೂರ್ತಿಗಳಾದ ಎಕೆಎಂ ಅಸಾದುಜ್ಜಮಾನ್ ಮತ್ತು ನ್ಯಾಯಮೂರ್ತಿ ಸೈಯದ್ ಎನಾಯೆತ್ ಹೊಸೈನ್ ಅವರ ದ್ವಿ ಸದಸ್ಯ ಪೀಠವು, ಕೆಳ ಹಂತದ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಹಾಗೂ ಮರಣದಂಡನೆ ಉಲ್ಲೇಖ ಕುರಿತು ವಿಚಾರಣೆಯನ್ನು ಒಟ್ಟಿಗೆ ನಡೆಸಿ ತೀರ್ಪು ಪ್ರಕಟಿಸಿದ ಕುರಿತು ಅಧಿಕಾರಿಗಳು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ಏನಿದೂ ಪ್ರಕರಣ?
ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಎಲ್ಲರೂ, ಬಾಂಗ್ಲಾದೇಶದ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದ (ಬಿಯುಇಟಿ) ವಿದ್ಯಾರ್ಥಿಗಳಾಗಿದ್ದು, ಸದ್ಯ ನಿಷೇಧಗೊಂಡಿರುವ ‘ಬಾಂಗ್ಲಾದೇಶ ಛತ್ರ ಲೀಗ್‌’ಗೆ (ಬಿಸಿಎಲ್) ಸೇರಿದವರಾಗಿದ್ದಾರೆ. ಇದು, ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರ ‘ಅವಾಮಿ ಲೀಗ್‌’ ಪಕ್ಷದ ವಿದ್ಯಾರ್ಥಿ ಘಟಕವಾಗಿದೆ.

‘ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್’ ವಿಷಯದ 2ನೇ ವರ್ಷದ ವಿದ್ಯಾರ್ಥಿಯಾಗಿದ್ದ ಅಬ್ರಾರ್ ಫಹಾದ್ ಹಸೀನಾ ಸರ್ಕಾರದ ವಿರುದ್ದ ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಂಚಿಕೊಂಡ ಎಂಬ ಕಾರಣಕ್ಕೆ ಫಹಾದ್ ಮೇಲೆ ದಾಳಿ ಮಾಡಲಾಗಿತ್ತು.

ಫಹಾದ್ ಅವರ ಶವ ವಿವಿಯ ವಿದ್ಯಾರ್ಥಿನಿಲಯದಲ್ಲಿ 2019ರ ಅಕ್ಟೋಬರ್ 8ರಂದು ಬೆಳಿಗ್ಗೆ ಪತ್ತೆಯಾಗಿತ್ತು. ಆತನ ಮೇಲೆ, ಕ್ರಿಕೆಟ್ ಬ್ಯಾಟ್ ಹಾಗೂ ಇತರ ವಸ್ತುಗಳಿಂದ ಸುಮಾರು 6 ಗಂಟೆಗಳ ಕಾಲ, 25 ವಿದ್ಯಾರ್ಥಿಗಳು ಹ*ಲ್ಲೆ ಮಾಡಿದ್ದರು ಎಂಬುದು ತನಿಖೆಯ ನಂತರ ಬೆಳಕಿಗೆ ಬಂದಿತ್ತು.

ಇದನ್ನೂ ಓದಿ: ಆಟವಾಡಲೆಂದು ಕೆರೆಗೆ ಹಾರಿ ಸಾವನ್ನಪ್ಪಿದ 9 ವರ್ಷದ ಬಾಲಕಿ

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ, ಈ ಕೊಲೆ ಪ್ರಕರಣದಲ್ಲಿ ಭಾಗಿಯಾದ ವಿದ್ಯಾರ್ಥಿಗಳನ್ನು ಬಾಂಗ್ಲಾದೇಶ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ವಿಶ್ವವಿದ್ಯಾನಿಲಯ (ಬಿಯುಇಟಿ) ಕೂಡಲೇ ಹೊರಹಾಕಿದ್ದವು.
ಢಾಕಾ ನ್ಯಾಯಾಲಯ, ಅವಾಮಿ ಲೀಗ್ ಅಧಿಕಾರದಲ್ಲಿದ್ದಾಗಲೇ (2021ರ ಡಿಸೆಂಬರ್ 8ರಂದು) 20 ವಿದ್ಯಾರ್ಥಿಗಳಿಗೆ ಮರಣದಂಡನೆ ವಿಧಿಸಿ ತೀರ್ಪು ನೀಡಿತ್ತು. ಹೈಕೋರ್ಟ್ ಈ ಆದೇಶವನ್ನು ಎತ್ತಿಹಿಡಿದಿರುವುದಷ್ಟೇ ಅಲ್ಲದೆ, ‘ಬಿಯುಇಟಿ ವಿದ್ಯಾರ್ಥಿಗಳಾಗಿದ್ದ ಇತರ ಐವರಿಗೂ ಜೀವಾವಧಿ ಶಿಕ್ಷೆ ವಿಧಿಸಿದೆ’ ಎಂದು ಅಟಾರ್ನಿ ಜನರಲ್ ಎಂ. ಅಸಾದುಜ್ಜಮಾನ್ ಹೇಳಿದ್ದಾರೆ ಎಂದು ವರದಿಯಾಗಿದೆ.

ಶಿಕ್ಷೆಗೆ ಗುರಿಯಾದವರ ಪೈಕಿ, ಮುನ್ತಾಸಿರ್ ಅಲ್ ಜಮೀ ಎಂಬಾತ ಕಾಶಿಮುರ್ ಕಳೆದ ವರ್ಷ (2024) ಕೇಂದ್ರ ಕಾರಾಗೃಹದ ಜೈಲಿನಿಂದ ಪರಾರಿಯಾಗಿದ್ದಾನೆ.

ದೇಶದಾದ್ಯಂತ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ತೀವ್ರಗೊಳ್ಳುತ್ತಿದ್ದಂತೆ ಶೇಖ್ ಹಸೀನಾ ಅವರು ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ 2024ರ ಆಗಸ್ಟ್ 5ರಂದು ದೇಶದಿಂದ ಪಲಾಯನ ಮಾಡಿದ್ದರು. ಮರುದಿನ (ಆಗಸ್ಟ್ 6ರಂದು) ಮುನ್ತಾಸಿರ್ ಸೇರಿದಂತೆ 86 ಕೈದಿಗಳು ಜೈಲಿನಿಂದ ತಪ್ಪಿಸಿಕೊಂಡಿದ್ದಾರೆ.

ಹೈಕೋರ್ಟ್ ತೀರ್ಪಿನ ಕುರಿತು ಮಾತನಾಡಿದ ಫಹಾದ್ ತಂದೆ, ‘ತೀರ್ಪು ಸಮಾಧಾನ ತಂದಿದೆ. ಇದು ಶೀಘ್ರದಲ್ಲೇ ಜಾರಿಯಾಗಬೇಕು’ ಎಂದಿದ್ದಾರೆ. ಫಹಾದ್ ಸಹೋದರ ಫೈಯಾಜ್, ‘ಇಷ್ಟು ಶೀಘ್ರದಲ್ಲೇ ತೀರ್ಪು ಪ್ರಕಟವಾಗಲಿದೆ ಎಂದು ನಿರೀಕ್ಷಿಸಿರಲಿಲ್ಲ. ಇನ್ನೂ ಅನೇಕ ಕಾನೂನು ಕಾರ್ಯವಿಧಾನಗಳು ಉಳಿದಿದ್ದರೂ, ಈ ತೀರ್ಪು ನಮಗೆ ಸಮಾಧಾನ ತಂದಿದೆ’ ಎಂದು ಹೇಳಿದ್ದಾರೆ.

Continue Reading

LATEST NEWS

ಜಗ್ಗೇಶ್ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಪ್ರಧಾನಿ ಮೋದಿ

Published

on

ಬೆಂಗಳೂರು: ನವರಸ ನಾಯಕ ಜಗ್ಗೇಶ್ ಅವರು ಇಂದು ತಮ್ಮ 62ನೇ ಹುಟ್ಟುಹಬ್ಬವನ್ನು ಆಚರಿಸುತ್ತಿದ್ದಾರೆ. ಜಗ್ಗೇಶ್ ಹಾಗೂ ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬ ಒಂದೇ ದಿನವಾದ್ದರಿಂದ ಅವರಿಬ್ಬರ ನಡುವೆ ಒಳ್ಳೆಯ ನಂಟು ಇತ್ತು. ಇದೀಗ ಕಾಮಿಡಿಯನ್ ಸ್ಟಾರ್ ಜಗ್ಗೇಶ್ ಗೆ ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.

ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಕೂಡ ವಿಶ್ ಮಾಡಿದ್ದು ಇದು ಜಗ್ಗೇಶ್ ಗೆ ತುಂಬಾನೇ ಸಂತಸ ತಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ ಮಾಡಿದ ಪತ್ರವನ್ನು ತಮ್ಮ ಸೋಷಿಯಾಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ತಮ್ಮ ಸೋಷಿಯಾಲ್ ಮೀಡಿಯಾದಲ್ಲಿ, “ಸ್ನೇಹಿತರೆ ಇಂದು ನನ್ನ ತಂದೆತಾಯಿ ದೇಣಿಗೆ ನೀಡಿದ ಈ ದೇಹಕ್ಕೆ 62ನೆ ಜನ್ಮದಿನ. ನನಗೆ ಮತ್ತೊಂದು ಸಂತೋಷ ವಿಶ್ವ ನಾಯಕರು @narendramodi ರವರು ಪ್ರೀತಿಯಿಂದ ಹರಸಿ ಕಳಿಸಿದ ಅಕ್ಕರೆಯ ಹಾರೈಕೆ ಪತ್ರ. ಕಾಲ ನಿಲ್ಲದೆ ಓಡುತ್ತದೆ ನಾವು ಅದರೊಟ್ಟಿಗೆ ಸುಮ್ಮನೆ ಓಡದೆ ಹೋದಮೇಲು ನೆನಪಿಡುವ ಸಾಧನೆಯ ಓಟ ಆಗಿರಬೇಕು. ನನ್ನ ಸಲಹುತ್ತಿರುವ ಸರ್ವರಿಗು ನಮನಗಳು”ಎಂದು ಬರೆದುಕೊಂಡಿದ್ದಾರೆ.

ಇನ್ನು ಚಿತ್ರರಂಗದಲ್ಲಿ ಸದಾ ಆಕ್ಟೀವ್ ಆಗಿರುವ ಇವರು ಹೀರೋ ಆಗಿ, ಕಾಮಿಡಿಯನ್ ಆಗಿ, ವಿಲನ್ ಆಗಿ ಹೀಗೆ ಹಲವು ರೀತಿಯ ಪಾತ್ರಗಳ ಮೂಲಕ ಜನರ ಮನಸ್ಸಿನಲ್ಲಿ ಅವರು ಉಳಿದುಕೊಂಡಿದ್ದಾರೆ. ಇತ್ತೀಚೆಗೆ ರಾಜಕೀಯ ಕ್ಷೇತ್ರದಲ್ಲೂ, ತೊಡಗಿಕೊಂಡಿದ್ದು, ಪ್ರಧಾನಿ ಮೋದಿ ಪರಿಚಯ ಆಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page