Connect with us

DAKSHINA KANNADA

ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಿಂದ ಸಿಎಂ ಭೇಟಿ – ಬೇಡಿಕೆಗೆ ಸಕರಾತ್ಮಕ ಸ್ಪಂದನೆ..!

Published

on

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕಚೇರಿಗೆ ಕರೆಸಿ ಬಂಟ ಸಮುದಾಯದ ಎಲ್ಲಾ ವಿಚಾರಗಳ ಬಗ್ಗೆ  ಸಿಎಂ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದರು.

ಮಂಗಳೂರು : ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರನ್ನು ಬೆಂಗಳೂರಿನ ಮುಖ್ಯಮಂತ್ರಿಗಳ ನಿವಾಸ ಕಚೇರಿಗೆ ಕರೆಸಿ ಬಂಟ ಸಮುದಾಯದ ಎಲ್ಲಾ ವಿಚಾರಗಳ ಬಗ್ಗೆ  ಸಿಎಂ ಬಸವರಾಜ ಬೊಮ್ಮಾಯಿ ಮಾತುಕತೆ ನಡೆಸಿದರು.

ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ್ ಶೆಟ್ಟಿ, ಕೋಶಾಧಿಕಾರಿ  ಉಳ್ತೂರು ಮೋಹನ್ ದಾಸ್ ಶೆಟ್ಟಿ ಈ ಸಂದರ್ಭ ಉಪಸ್ಥಿತರಿದ್ದರು.

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿಯ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಮುದಾಯ ಭವನ ಮತ್ತು ಇತರ ಯೋಜನೆಗಳಿಗೆ ಸರಕಾರದ ಅನುದಾನವನ್ನೂ ಬಿಡುಗಡೆಗೊಳಿಸಿದರು.

ಬಂಟ ಸಮುದಾಯವನ್ನು 2A ಕೆಟಗರಿಗೆ ಸೇರಿಸುವ ಬಗ್ಗೆ ಆಶ್ವಾಸನೆಯನ್ನು ನೀಡಿ,  ಬಂಟರ ಯಾನೆ ನಾಡವರ ಎಲ್ಲಾ ಆಶೋತ್ತರಗಳನ್ನು ಈಡೇರಿಸುವುದಾಗಿ ಒಕ್ಕೂಟದ ಅಧ್ಯಕ್ಷರಿಗೆ ಭರವಸೆಯನ್ನು ನೀಡುವ ಮೂಲಕ ಸಮುದಾಯದ ಹೋರಾಟಕ್ಕೆ ಒಂದು ಹಂತದ ಜಯ ದೊರಕಿದೆ ಎಂದು ಐಕಳ ಹರೀಶ್ ಶೆಟ್ಟಿ ಪತಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ದಿನಾಂಕ 07.03.2023 ರಂದು ಮುಖ್ಯಮಂತ್ರಿಗಳ ನಿವಾಸದಲ್ಲಿ ತಡರಾತ್ರಿ 11 ಗಂಟೆಗೆ  ಐಕಳ ಹರೀಶ್ ಶೆಟ್ಟಿ ಯವರ ಜೊತೆ ನಡೆಸಿದ ವಿಸ್ತೃತವಾದ ಮಾತುಕತೆಯ ನಡೆಸಿ ಐಕಳ ಅವರು ಬಂಟ ಸಮಾಜದ ಎಲ್ಲಾ ವಿಚಾರಗಳನ್ನು ಮನದಟ್ಟು ಮಾಡುವ ಮೂಲಕ ಬಂಟ ಸಮುದಾಯದ ಅಭಿವೃದ್ಧಿಗಾಗಿ ನಿಗಮ ಸ್ಥಾಪನೆ ಯ ಅವಶ್ಯಕತೆ ಮನಗಂಡು ಅವರು ಬಂಟ ನಾಡವರ ನಿಗಮ ಸ್ಥಾಪನೆಗೆ ತನ್ನ ಒಪ್ಪಿಗೆ ನೀಡಿ ಮುಖ್ಯಮಂತ್ರಿಗಳಾದ  ಬಸವರಾಜ ಬೊಮ್ಮಾಯಿ ಅವರು ಬಲವನ್ನು ತುಂಬಿದ್ದಾರೆ.

ಈ ಮೂಲಕ ಇಡೀ ಬಂಟ ಸಮುದಾಯಕ್ಕೆ ಮುಂದಿನ ದಿನಗಳಲ್ಲಿ ಸಹಕಾರಿಯಾಗಲಿದೆ ಮಾನ್ಯ ಮುಖ್ಯಮಂತ್ರಿಗಳ ಸಹಕಾರದಿಂದ ಸಮುದಾಯದ ಪರವಾಗಿ ಒಕ್ಕೂಟದ ಅಧ್ಯಕ್ಷರ ಹೋರಾಟಕ್ಕೆ ಸಂದ ಜಯವಾಗಿದೆ.

ಈ ಐತಿಹಾಸಿಕ ಕ್ಷಣಕ್ಕೆ ಕಾರಣಕರ್ತರಾದ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಮುಂಬೈ ಸಂಸದ ಗೋಪಾಲ್ ಶೆಟ್ಟಿ, ಜಗತ್ತಿನ ಎಲ್ಲಾ ಬಂಟರ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳು, ಎಲ್ಲಾ ಬಂಟರ ಮುಖಂಡರುಗಳಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರು ಹೇಳಿಕೆಯಲ್ಲಿ  ತಿಳಿಸಿದ್ದಾರೆ.

DAKSHINA KANNADA

ಕರಾವಳಿ ಜಿಲ್ಲೆಗಳಲ್ಲಿ ಮುಂದುವರಿದ ಮಳೆಯ ಆರ್ಭಟ; ಅಲ್ಲಲ್ಲಿ ಹಾನಿ

Published

on

ಮಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯು ಭಾರ ಕುಸಿತ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಎರಡನೇ ದಿನವಾದ ಇಂದು ಕೂಡಾ ಮುಂದುವರಿದಿದೆ. ಇದರಿಂದ ಸಾಮಾನ್ಯ ಜನ ಜೀವನ ಅಸ್ತವ್ಯಸ್ತಗೊಂಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ನೆರೆ ರಾಜ್ಯ ಕೇರಳದ ಕಾಸರಗೋಡು ಜಿಲ್ಲೆಯಲ್ಲೂ ಮಳೆ ತೀವ್ರವಾಗಿದೆ. ಹವಾಮಾನ ಇಲಾಖೆಯು ನಾಲ್ಕೂ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್ ಘೋಷಿಸಿದೆ. ರಸ್ತೆ ಕಾಮಗಾರಿ, ಅವೈಜ್ಙಾನಿಕ ಚರಂಡಿ ಕೆಲಸ ಇತ್ಯಾದಿ ಕಾರಣಗಳಿಂದಾಗಿ ಮಳೆ ನೀರು ಸರಾಗವಾಗಿ ಹರಿಯದೆ ಕೃತಕ ನೆರೆ ಬಂದು ಅನೇಕ ಕಡೆಗಳಲ್ಲಿ ನಾಶ ನಷ್ಟ ಸಂಭವಿಸಿದೆ. ಸಂಚಾರ ಅಸ್ತವ್ಯಸ್ತವಾಗಿದೆ.

ಇದನ್ನೂ ಓದಿ: ಬೆಳ್ತಂಗಡಿ: ಪಂಜಾಬ್‌ ನಲ್ಲಿ ಆಕಾಂಕ್ಷ ಆತ್ಮಹತ್ಯೆ ಪ್ರಕರಣ; ಮನೆಗೆ ತಲುಪಿದ ಮೃತದೇಹ

ಗಾಳಿ ಮಳೆಗೆ ಮರಗಳು ಬಿದ್ದು ವಿದ್ಯುತ್‌ ಸಂಪರ್ಕ ಹಲವಾರು ಕಡೆಗಳಲ್ಲಿ ಕಡಿತಗೊಂಡಿದೆ. ಮಂಗಳೂರು ನಗರ, ಉಡುಪಿ ನಗರ, ಮಣಿಪಾಲಗಳಲ್ಲಿ ಅಲ್ಲಲ್ಲಿ ಕೃತಕ ನೆರೆಯಿಂದ ಹಾನಿ ಸಂಭವಿಸಿದೆ. ಇಂದು ಮುಂಜಾನೆಯಿಂದ ಬಿಟ್ಟು ಬಿಟ್ಟು ಭಾರೀ ಮಳೆ ಬರುತ್ತಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

Continue Reading

BELTHANGADY

ಬೆಳ್ತಂಗಡಿ: ಪಂಜಾಬ್‌ ನಲ್ಲಿ ಆಕಾಂಕ್ಷ ಆತ್ಮಹತ್ಯೆ ಪ್ರಕರಣ; ಮನೆಗೆ ತಲುಪಿದ ಮೃತದೇಹ

Published

on

ಬೆಳ್ತಂಗಡಿ: ಪಂಜಾಬ್​​ನಲ್ಲಿ ನಿಗೂಢವಾಗಿ ಮೃತಪಟ್ಟ ಬೆಳ್ತಂಗಡಿಯ ನಿವಾಸಿ ಆಕಾಂಕ್ಷಾ ಎಸ್ ನಾಯರ್ ಮೃತದೇಹವನ್ನು ಬುಧವಾರ ಹುಟ್ಟೂರಿಗೆ ತರಲಾಯಿತು. ಬೆಂಗಳೂರು ವಿಮಾನ ನಿಲ್ದಾಣದಿಂದ ಆ್ಯಂಬುಲೆನ್ಸ್ ಮೂಲಕ ಮೃತದೇಹವನ್ನು ಮನೆಗೆ ತರಲಾಯಿತು.

ಭಾರೀ ಮಳೆಯ ಹಿನ್ನಲೆ ಮನೆಗೆ ಸಾಗುವ ದಾರಿಯಲ್ಲಿ ಆ್ಯಂಬುಲೆನ್ಸ್ ಮಣ್ಣಿನಲ್ಲಿ ಹೂತಗೊಂಡ ಘಟನೆಯೂ ನಡೆಯಿತು. ನಂತರ ಸ್ಥಳೀಯರು ಆ್ಯಂಬುಲೆನ್ಸ್ ಟೈರ್ ಅನ್ನು ಮಣ್ಣಿನಿಂದ ಹೊರತೆಗೆದರು.

ಇದನ್ನೂ ಓದಿ: ಆಕಾಂಕ್ಷ ಸಾ*ವು ಪ್ರಕರಣ: ಪ್ರೊಫೆಸರ್ ಅರೆಸ್ಟ್; ಮೇ.21 ರಂದು  ಮೃ*ತದೇಹ ಬೆಳ್ತಂಗಡಿಗೆ

ಸದ್ಯ ಆಕಾಂಕ್ಷಾ ಮೃತದೇಹ ಬೋಳಿಯಾರ್​​ನಲ್ಲಿರುವ ಮನೆಗೆ ತಲುಪಿದೆ. ಮೃತದೇಹ ಕಂಡು ಕುಟುಂಬಸ್ಥರ ಆಕ್ರಂದನ ಹೆಚ್ಚಾಗಿದೆ. ಮೃತದೇಹದ ಅಂತ್ಯ ಸಂಸ್ಕಾರ ಇಂದೇ ನೆರವೇರುವ ಸಾಧ್ಯತೆ ಇದೆ.

Continue Reading

BANTWAL

ವಿಟ್ಲ: ಪೆಟ್ರೋಲ್ ಹಾಕಿಸಿ ಹಣ ನೀಡದೆ ಪರಾರಿಯಾದ ಕಾರು; ಆಕ್ಟಿವಾ, ಪಿಕಪ್ ಗೆ ಢಿಕ್ಕಿ

Published

on

ಬಂಟ್ವಾಳ: ಬಿ.ಸಿ.ರೋಡ್ ಪೆಟ್ರೋಲ್ ಬಂಕ್ ನಲ್ಲಿ ಪೆಟ್ರೋಲ್ ಹಾಕಿಸಿಕೊಂಡು ಹಣ ನೀಡದೆ ಪರಾರಿಯಾಗುತ್ತಿದ್ದ ಆಲ್ಟೋ ಕಾರೊಂದು ಮುಂದೆ ಆಕ್ಟಿವಾ ಮತ್ತು ಪಿಕಪ್ ಗೆ ಡಿಕ್ಕಿ ಹೊಡೆದ ಘಟನೆ ಸಾಲೆತ್ತೂರು ಸಮೀಪದ ಪಾಲ್ತಾಜೆಯಲ್ಲಿ ನಡೆದಿದೆ.

ಕಾರಿನಲ್ಲಿ ಇಬ್ಬರು ಇದ್ದು, ಅವರು ಸಾಲೆತ್ತೂರು ಮೂಲಕ ಪರಾರಿಯಾಗಲು ಯತ್ನಿಸಿದಾಗ ಪಾಲ್ತಾಜೆಯಲ್ಲಿ ಆಕ್ಟಿವಾ ಮತ್ತು ಪಿಕಪ್ ವಾಹನಕ್ಕೆ ಢಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಆಕ್ಟಿವಾ ಸವಾರ ಕಟ್ಟತ್ತಿಲ ನಿವಾಸಿ ಅಬೂಬಕ್ಕರ್ ಗಂಭೀರ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಜೈಲಿನಲ್ಲಿ ಮತ್ತೆ ಕೈದಿಗಳ ನಡುವೆ ಹೊಡೆದಾಟ

ಸ್ಥಳಕ್ಕೆ ಗಸ್ತು ಪೊಲೀಸರು ಮತ್ತು ವಿಟ್ಲ ಪೊಲೀಸರು ಆಗಮಿಸಿ ಕಾರು ಹಾಗೂ ಮದ್ಯದ ನಶೆಯಲ್ಲಿ ತೇಲಾಡುತ್ತಿದ್ದ ಯುವಕರಿಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಯುವಕರಿಬ್ಬರೂ ಹಿಂದಿಯಲ್ಲಿ ಮಾತನಾಡುತ್ತಿದ್ದು, ಹೊರರಾಜ್ಯದಿಂದ ಬಂದವರೆನ್ನಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page