Connect with us

DAKSHINA KANNADA

Mangalore: ರಕ್ತದಾನಕ್ಕಿಂತ ದೊಡ್ಡ ಪುಣ್ಯದಾನ ಇನ್ನೊಂದಿಲ್ಲ : ಕರಣ್‌ ಜ್ಯೋತಿಷಿ

Published

on

ನಗರದ ಶ್ರೀದೇವಿ ಪ್ರತ್ಯಂಗಿರಾ ಮಹಾಭದ್ರಕಾಳ್ಯೈ ದೇವಸ್ಥಾನದ ಧರ್ಮಾಧಿಕಾರಿ, ಜ್ಯೋತಿಷ್ಯ ವಿದ್ವಾನ್ ದೈವಜ್ಞ ಶ್ರೀ ಕರಣ್ ಜ್ಯೋತಿಷಿ ಅವರ ತಾಯಿ ಶುಭವತಿಯವರ ಸ್ಮರಣಾರ್ಥ ಕೆ ಎಮ್ ಸಿ ಆಸ್ಪತ್ರೆಯ ಸಹಯೋಗದೊಂದಿಗೆ ಜೂ.18ರಂದು ನಗರದ ಅತ್ತಾವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ತದಾನ ಶಿಬಿರ ನಡೆಯಿತು.

ಮಂಗಳೂರು: ನಗರದ ಶ್ರೀದೇವಿ ಪ್ರತ್ಯಂಗಿರಾ ಮಹಾಭದ್ರಕಾಳ್ಯೈ ದೇವಸ್ಥಾನದ ಧರ್ಮಾಧಿಕಾರಿ, ಜ್ಯೋತಿಷ್ಯ ವಿದ್ವಾನ್ ದೈವಜ್ಞ ಶ್ರೀ ಕರಣ್ ಜ್ಯೋತಿಷಿ ಅವರ ತಾಯಿ ಶುಭವತಿಯವರ ಸ್ಮರಣಾರ್ಥ ಕೆ ಎಮ್ ಸಿ ಆಸ್ಪತ್ರೆಯ ಸಹಯೋಗದೊಂದಿಗೆ ಜೂ.18ರಂದು ನಗರದ ಅತ್ತಾವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಕ್ತದಾನ ಶಿಬಿರ ನಡೆಯಿತು.

ದೀಪ ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಜ್ಯೋತಿಷಿ ವಿದ್ವಾನ್ ದೈವಜ್ಞ ಶ್ರೀ ಕರಣ್ ಜ್ಯೋತಿಷಿ ಅವರು ಮಾತನಾಡಿ, ಒಬ್ಬರಿಗೆ ರಕ್ತ ಕೊಟ್ಟು ಜೀವ ಉಳಿಸುವುದು ಅತ್ಯಂತ ಪುಣ್ಯದ ಕೆಲಸ.

ಇದಕ್ಕಿಂತ ದೊಡ್ಡ ಪುಣ್ಯದ ಕೆಲಸ ಬೇರೆ ಯಾವುದೂ ಇಲ್ಲ. ರಕ್ತದಾನಿಗಳು ಒಮ್ಮೆ ರಕ್ತ ಕೊಟ್ಟು ಹೋಗುತ್ತಾರೆ.

ಆದರೆ ಅದು ಅದೆಷ್ಟೋ ಮಂದಿಗೆ ಜೀವದಾನ ಆಗುತ್ತದೆ. ಇಂತಹ ರಕ್ತಾನ ಮಾಡಲು ಪಾಲ್ಗೊಂಡಿರುವ ನಮಗೆ ಇದೊಂದು ಭಾಗ್ಯ ಎಂದರು.

ರಕ್ತದಾನ ಕಾರ್ಯಕ್ರಮ ಯಶಸ್ವಿಯಾಗಬೇಕಾದರೆ ಅಲ್ಲಿ ರಕ್ತದಾನಿಗಳು ಕೂಡಾ ಅತ್ಯಂತ ಅಗತ್ಯ ಎಂದರು.

ಕಾರ್ಯಕ್ರಮದಲ್ಲಿ ಕೆಎಂಸಿ ಹಿರಿಯ ವೈದ್ಯ ಡಾ ಆತ್ಮಾನಂದ ಹೆಗಡೆ, ಆಟೋಟ್ರೇಡ್‌ ಮಾಲಕರಾದ ಜೆ ದಯಾನಂದ ರಾವ್ ಸೇರಿದಂತೆ ಅನೇಕ ಮಂದಿ ಉಪಸ್ಥಿತರಿದ್ದರು.

ಸುಮಾರು 100ಕ್ಕೂ ಅಧಿಕ ಮಂದಿ ರಕ್ತದಾನ ಮಾಡುವ ಮೂಲಕ ಜೀವದಾನಿಗಳಾದರು.

ರಕ್ತದಾನಿಗಳಿಗೆ ಪ್ರಶಂಸಾ ಪತ್ರ ನೀಡಿ ಅಭಿನಂದಿಸಲಾಯಿತು.

BELTHANGADY

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ; ಮೂವರು ಗಂಭೀರ

Published

on

ಬೆಳ್ತಂಗಡಿ : ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ಸಮಿಪದ ಗುರುವಾಯನಕೆರೆ-ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ನಿನ್ನೆ (ಏ.21) ಸಂಜೆ ನಡೆದಿದೆ.

ಅಳದಂಗಡಿಯಿಂದ ಗುರುವಾಯನಕೆರೆ ಕಡೆ ಹೋಗುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳದತ್ತ ಪ್ರಯಾಣ ಮಾಡುತ್ತಿದ್ದ ಕಾರುಗಳು ಪರಸ್ಪರ ಡಿಕ್ಕಿ ಹೊಡೆದಿದೆ.

ಈ ಘಟನೆಯಲ್ಲಿ ಗೇರುಕಟ್ಟೆಯ ಕುಸುಮಾವತಿ (75), ಭಾಗ್ಯವತಿ (50), ವೈಭವ್‌ (23) ಎಂಬುವವರು ಗಂಭೀರ ಗಾಯಗೊಂಡಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಉಡುಪಿ : ಪತ್ರಕರ್ತ ರಾಮ್ ಅಜೆಕಾರ್ ದತ್ತಿನಿಧಿ ಪ್ರಶಸ್ತಿಗೆ ಆಯ್ಕೆ

Published

on

ಉಡುಪಿ : ಕನ್ನಡ ರಿಪೋರ್ಟರ್ ರಾಮ್ ಅಜೆಕಾರ್‌ ಕಾಸರಗೋಡು ಜಿಲ್ಲೆಯ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿಗೆ ಆಯಕೆಯಾಗಿದ್ದಾರೆ.

ಹಿರಿಯ ಉದ್ಯಮಿ ಅಶ್ರಫ್ ಷಾ ಮಂತೂರು ಅವರ ದತ್ತಿನಿಧಿಯಿಂದ ನೀಡಲಾಗುವ ಪ್ರಶಸ್ತಿಗೆ ಪತ್ರಕರ್ತ ರಾಮ್ ಅಜೆಕಾರ್ ವರ ‘ಭಗೀರಥ ಅಪ್ಪಿಯಣ್ಣನ ಹೋರಾಟಕ್ಕೆ ಜಯ ಸಿಕ್ಕೀತೇ?’ ಶೀರ್ಷಿಕೆಯಡಿಯ ಸುದ್ಧಿ ಆಯ್ಕೆಯಾಗಿದೆ. ಕನ್ನಡಪ್ರಭ ಪತ್ರಿಕೆಯಲ್ಲಿ ಈ ಸುದ್ಧಿ ಬಿಡುಗಡೆಯಾಗಿತ್ತು.

ದತ್ತಿನಿಧಿಯಿಂದ ನೀಡಲಾಗುವ ಈ ಪ್ರಶಸ್ತಿಯು ನಗದು ಪುರಸ್ಕಾರ, ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಮೇ ೩ರಂದು ಸೀತಾಂಗೋಳಿಯ ಎಲೈನ್ಸ್ ಸಭಾಂಗಣದಲ್ಲಿ ನಡೆಯಲಿದೆ.

Continue Reading

DAKSHINA KANNADA

ಮಂಗಳೂರು : ವಕ್ಫ್ ಕಾಯ್ದೆ ವಿರುದ್ಧ ನಡೆಯಬೇಕಿದ್ದ ಪ್ರತಿಭಟನೆ ಮುಂದೂಡಿಕೆ

Published

on

ಮಂಗಳೂರು :ಈಗಾಗಲೇ ವಕ್ಫ್ ತಿದ್ದುಪಡಿಯನ್ನು ಕೇಂದ್ರ ಸರಕಾರ ಜಾರಿಗೊಳಿಸಿದ್ದು, ಈ ಮಸೂದೆಯ ವಿರುದ್ಧ ಮುಸ್ಲಿಮ್ ಸೆಂಟ್ರಲ್ ಕಮಿಟಿಯು ಎ.29ರಂದು ಕೂಳೂರು ಡೆಲ್ಟಾ ಮೈದಾನದಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಿತ್ತು. ಆದರೆ ಈಗ ಅಚಾನಕ್‌ ಆಗಿ ಆ ಪ್ರತಿಭಟನೆಯನ್ನು ಮುಂದೂಡಲಾಗಿದೆ.

ಅಧ್ಯಕ್ಷ ಹಾಜಿ ಕೆ.ಎಸ್.ಮುಹಮ್ಮದ್ ಮಸೂದ್‌ರ ನಿವಾಸದಲ್ಲಿ ಶನಿವಾರ ನಡೆದ ಸಭೆಯಲ್ಲಿ ಮೇ 16ರ ಶುಕ್ರವಾರ ಪ್ರತಿಭಟನೆ ನಡೆಸಲು ನಿರ್ಧರಿಸಲಾಸಲಾಗಿದೆ ಎಂದು ಉಪಾಧ್ಯಕ್ಷ ಕೆ.ಅಶ್ರಫ್ ಪ್ರಕಟನೆೆಯಲ್ಲಿ ತಿಳಿಸಿದ್ದಾರೆ.

ಸಭೆಯಲ್ಲಿ ಮುಸ್ಲಿಮ್ ಸೆಂಟ್ರಲ್ ಕಮಿಟಿಯ ಕಾರ್ಯಕಾರಿ ಸಮಿತಿ ಸದಸ್ಯರು ಮತ್ತು ವಿವಿಧ ಸಂಘಟನೆಗಳ ಮುಖಂಡರು ಹಾಗೂ ಸಲಹೆಗಾರರು ಪಾಲ್ಗೊಂಡಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page