Connect with us

LATEST NEWS

ಪ್ರಕಾಶ್ ಶೆಟ್ಟಿ, ರೊನಾಲ್ಡ್‌ ಕೊಲಾಸೋರಿಗೆ ಗೌರವ ಡಾಕ್ಟರೇಟ್ ಪ್ರದಾನ

Published

on

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ 42ನೇ ವಾರ್ಷಿಕ ಘಟಿಕೋತ್ಸವ ಶನಿವಾರ ವಿ.ವಿ.ಯ ಆವರಣದಲ್ಲಿರುವ ಮಂಗಳಾ ಸಭಾಂಗಣದಲ್ಲಿ ಶನಿವಾರ ಜರಗಿತು.

ಮಂಗಳೂರು ವಿವಿ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿದರು. ಎಂ.ಆರ್.ಜಿ. ಗ್ರೂಪ್ ಸ್ಥಾಪಕಾಧ್ಯಕ್ಷ ಕೆ. ಪ್ರಕಾಶ್ ಶೆಟ್ಟಿ, ಅನಿವಾಸಿ ಭಾರತೀಯ ಉದ್ಯಮಿ ಡಾ। ರೊನಾಲ್ಡ್‌ ಕೊಲಾಸೋ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನಿಸಿದರು. ತುಂಬೆ ಗ್ರೂಪ್ ಸ್ಥಾಪಕಾಧ್ಯಕ್ಷ ಡಾ। ತುಂಬೆ ಮೊಯ್ದೀನ್ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದರು.

155 ಮಂದಿಗೆ ಪಿಎಚ್‌ಡಿ, 58 ಚಿನ್ನದ ಪದಕ ಮತ್ತು 57 ನಗದು ಬಹುಮಾನ ಪ್ರದಾನ ಮಾಡಿದರು.

ಉನ್ನತ ಶಿಕ್ಷಣ ಸಚಿವ, ಸಹಕುಲಾಧಿಪತಿ ಡಾ। ಎಂ.ಸಿ.ಸುಧಾಕರ್ ಉಪಸ್ಥಿತರಿದ್ದರು. ನವದೆಹಲಿಯ ಅಭಿವೃದ್ಧಿಶೀಲ ರಾಷ್ಟ್ರಗಳ ಸಂಶೋಧನೆ ಮತ್ತು ಮಾಹಿತಿ ವ್ಯವಸ್ಥೆ ಮಹಾನಿರ್ದೇಶಕ ಪ್ರೊ। ಸಚಿನ್ ಚತುರ್ವೇದಿ ಅವರು ಘಟಿಕೋತ್ಸವ ಭಾಷಣ ಮಾಡಿದರು.

ವಿ.ವಿ. ಕುಲಪತಿ ಪ್ರೊ। ಪಿ.ಎಲ್. ಧರ್ಮ ಪ್ರಸ್ತಾವಿಸಿದರು. ಕುಲಸಚಿವ (ಆಡಳಿತ) ರಾಜು ಮೊಗವೀರ, ಕುಲಸಚಿವ (ಪರೀಕ್ಷಾಂಗ) ಡಾ। ದೇವೇಂದ್ರಪ್ಪ, ವಿ.ವಿ.ಯ, ಸಿಂಡಿಕೇಟ್ ಸದಸ್ಯರು, ವಿದ್ಯಾವಿಷಯ ಪರಿಷತ್ ಸದಸ್ಯರು, ವಿವಿಧ ನಿಕಾಯಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

LATEST NEWS

ಮಣಿಪಾಲದ ಅಪಾರ್ಟ್‌ಮೆಂಟ್‌ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ; ಸೆಕ್ಯೂರಿಟಿ ಗಾರ್ಡ್ ಬಂಧನ

Published

on

ಮಣಿಪಾಲ: ಮಣಿಪಾಲದ ಅಪಾರ್ಟ್ಮೆಂಟ್ ಒಂದರಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಅದೇ ಅಪಾರ್ಟ್ಮೆಂಟ್ ನ ಸೆಕ್ಯೂರಿಟಿ ಗಾರ್ಡ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗಣೇಶ್ ಗಣಪ ನಾಯ್ಕ್ ಬಂಧಿತ ಆರೋಪಿಯಾಗಿದ್ದಾನೆ. ಮಾಲಕರು ನೀಡಿದ ಮನೆಯ ಕೀಯನ್ನು ಬಳಸಿಕೊಂಡು ಈತ ಮಹಿಳೆಯನ್ನು ಬಲವಂತವಾಗಿ ಇರಿಸಿ ಅಕ್ರಮ ಲಾಭಕ್ಕಾಗಿ ವೇಶ್ಯಾವಾಟಿಕೆ ವ್ಯವಹಾರ ಮಾಡುತ್ತಿದ್ದ.

ಇದನ್ನೂ ಓದಿ: ಉಪ್ಪಿನಂಗಡಿ: ಪತ್ನಿಯನ್ನು ಚೂ*ರಿಯಿಂದ ಇ*ರಿದು ಕೊಂ*ದ ಪತಿ

ಮಹಿಳೆಯನ್ನು ರಕ್ಷಿಸಿ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇನ್ನೊಬ್ಬ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು ಆತನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Continue Reading

LATEST NEWS

ಸಿಎಂ ಹೊಡೆಯಲು ಕೈಯೆತ್ತಿದ್ದ ASP ಭರಮನಿಗೆ ಜಾಕ್‌ಪಾಟ್

Published

on

ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾರ್ವಜನಿಕವಾಗಿ ತಮ್ಮ ಮೇಲೆ ಕೈ ಎತ್ತಿ ಹೊಡೆಯಲು ಯತ್ನಿಸಿದ್ದರಿಂದ ತೀವ್ರ ಅವಮಾನಕ್ಕೊಳಗಾಗಿ ಸ್ವಯಂ ನಿವೃತ್ತಿ ಪಡೆಯುವ ಇಂಗಿತ ವ್ಯಕ್ತಪಡಿಸಿದ್ದ ಧಾರವಾಡ ಹಿರಿಯ ಪೊಲೀಸ್ ಅಧಿಕಾರಿ ನಾರಾಯಣ ಬರಮನಿ ಅವರಿಗೆ ಈಗ ಜಾಕ್‌ಪಾಟ್ ಹೊಡೆದಿದೆ.


ಹೌದು, ಕೆಲವು ಸಮಯದ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ ಭರಮನಿ ಅವರಿಗೆ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದರು. ಇದರಿಂದ ತೀವ್ರವಾಗಿ ಮನನೊಂದಿದ್ದ ಬರಮನಿ ಅವರು ಸ್ವಯಂ ನಿವೃತ್ತಿಗೆ ಮನವಿ ಮಾಡಿ ಸರ್ಕಾರಕ್ಕೆ ಪತ್ರ ಬರೆದಿದ್ದರು.

ಈ ಸಂಬಂಧ ರಾಜ್ಯ ಸರ್ಕಾರ ಭಾರೀ ಟೀಕೆ ಗುರಿಯಾಗಿತ್ತು. ಕೊನೆಗೆ ನಾರಾಯಣ ಬರಮನಿ ಅವರನ್ನು ಹಿರಿಯ ಅಧಿಕಾರಿಗಳು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದರು. ನಂತರ ನಾರಾಯಣ ಬರಮನಿ ಅವರು ಕೆಲಸಕ್ಕೆ ಹಾಜರಾಗಿದ್ದರು. ಇದರ ಬೆನ್ನಲ್ಲೇ ಇದೀಗ ನಾರಾಯಣ ಬರಮನಿ ಅವರಿಗೆ ಮುಂಬಡ್ತಿ ನೀಡಿರುವುದು ಅಚ್ಚರಿಗೆ ಕಾರಣವಾಗಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯರಿಂದ ಅವಮಾನ: ಪತ್ರ ಬರೆದು ಸ್ವಯಂ ನಿವೃತ್ತಿಗೆ ಮುಂದಾದ ಎಎಸ್ಪಿ

ಧಾರವಾಡ ಎಎಸ್‌ಪಿ ಆಗಿದ್ದ ಬರಮನಿ ಅವರಿಗೆ ಈಗ ಬೆಳಗಾವಿ ಕಾನೂನು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್‌ ಆಯುಕ್ತ(ಡಿಸಿಪಿ) ಹುದ್ದೆಗೆ ಬಡ್ತಿ ನೀಡಿ ಆದೇಶ ಹೊರಡಿಸಲಾಗಿದೆ. ಈ ಮೂಲಕ ಸರ್ಕಾರ ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾಗಿದೆ.

Continue Reading

DAKSHINA KANNADA

ಪ್ರಿಯಾಂಕ್ ಖರ್ಗೆ ಅವರಿಗೆ ಸರ್ವಜ್ಙ ಸಿಂಡ್ರೋಮ್ ಇದೆ: ಶಾಸಕ ಭರತ್ ಶೆಟ್ಟಿ

Published

on

ಮಂಗಳೂರು: ಗೃಹಸಚಿವರು ಮಂಗಳೂರನ್ನು ಉಡ್ತಾ ಪಂಜಾಬ್ ಆಗ್ಲಿಕ್ಕೆ ಬಿಡೋದಿಲ್ಲ ಎಂಬುವುದಾಗಿ ಹೇಳಿಕೆ ನೀಡಿದ್ದರು. ವಿಧಾನಸಭೆಯಲ್ಲಿ ಪ್ರತೀ ಬಾರಿ ನಮ್ಮ ಕೋರಿಕೆ ಇದ್ದದ್ದು ಕೂಡಾ ಅದೇ. ಜಿಲ್ಲೆಯಲ್ಲಿ ಡ್ರಗ್ಸ್ ಪೂರೈಕೆಗೆ ಕಡಿವಾಣ ಹಾಕಬೇಕು ಅಂತ. ಪೊಲೀಸರು ಡ್ರಗ್ಸ್ ಸೀಜ್ ಮಾಡ್ತಾರೆ. ಆರೋಪಿಗಳನ್ನು ಅರೆಸ್ಟ್ ಮಾಡ್ತೀರಿ. ಆದರೆ 6 ತಿಂಗಳ ಬಳಿಕ ಮತ್ತೆ ಸೀಜ್ ಬಗ್ಗೆ ಸುದ್ದಿ ಇರೋದಿಲ್ಲ. ಡ್ರಗ್ಸ್ ಸಪ್ಲೈ ನಿರಂತರವಾಗಿ ಆಗ್ತಾನೇ ಇದೆ ಎಂದು ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ಅವರು ವಾಗ್ದಾಳಿಯನ್ನು ನಡೆಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗೆದ್ದ ಕೂಡಲೇ ಬಿಜೆಪಿಗರಿಗೆ, ಆರೆಸ್ಸೆಸ್ ನವರಿಗೆ ಬೈಯ್ಯೋದನ್ನು ಪ್ರಿಯಾಂಕ್ ಖರ್ಗೆ ಅವರು ಅಭ್ಯಾಸ ಮಾಡಿಕೊಂಡಿದ್ದಾರೆ. ಅವರಿಗೆ ಸ್ವಲ್ಪ ಸರ್ವಜ್ಞ ಸಿಂಡ್ರೋಮ್ ಇದೆ. ಅಂದ್ರೆ ಎಲ್ಲಾ ತಿಳಿದವರು ಅನ್ನೋ ಭಾವನೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಲಿಂಗರಾಜು ಕಣ್ಣಿ ಅವರನ್ನು ಡ್ರಗ್ಸ್ ವ್ಯವಹಾರದ ಆರೋಪದಲ್ಲಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಪ್ರಿಯಾಂಕ್ ಖರ್ಗೆ ಅವರ ಡ್ರಗ್ಸ್ ಕೇಸನ್ನು ಡೈವರ್ಟ್ ಮಾಡಲು ಕಾಂಗ್ರೆಸ್ ಸರ್ಕಾರದಿಂದ ವಿವಿಧ ರೀತಿಯ ಪ್ರಯತ್ನ ಮಾಡುತ್ತಿದೆ. ಪ್ರಿಯಾಂಕ್ ಖರ್ಗೆ ಅವರು ಸಾಧ್ಯವಾದರೆ ತನಿಖೆಗೆ ಸಹಕರಿಸಲಿ ಇಲ್ಲವಾದಲ್ಲಿ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

ಪ್ರಕರಣದ ಹಿಂದೆ ಸ್ಥಾಪಿತ ಹಿತಾಸಕ್ತಿಗಳು, ದೊಡ್ಡವರ ಕೈವಾಡವಿದೆ. ಪ್ರಕರಣವನ್ನು ಸರಕಾರ ಲಘುವಾಗಿ ಪರಿಗಣಿಸಿದೆ. ಇಷ್ಟು ದೊಡ್ಡ ಪ್ರಕರಣವನ್ನು ವಿಷಯಾಂತರ ಮಾಡಲು ಮಾಜಿ ಸಚಿವ ಬೈರತಿ ಬಸವರಾಜ್ ಅವರನ್ನು ಪ್ರಕರಣವೊಂದರಲ್ಲಿ ಫಿಕ್ಸ್ ಮಾಡಲಾಗಿದೆ ಎಂದು ಆರೋಪಿಸಿದರು. ಮಂಗಳೂರಿನಲ್ಲಿ ಐಟಿ ಪಾರ್ಕ್ ಸ್ಥಾಪಿಸುತ್ತೇವೆ ಎಂದು ಭರವಸೆ ನೀಡಿದ ಪ್ರಿಯಾಂಕ್ ಖರ್ಗೆ ಇದುವರೆಗೆ ಕ್ರಮ ಕೈಗೊಂಡಿಲ್ಲ ಎಂದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಮುಖಂಡ ವಿಕಾಸ್ ಪುತ್ತೂರು, ಜಿಲ್ಲಾ ವಕ್ತಾರ ರಾಜಗೋಪಾಲ ರೈ, ಕಾರ್ಯಾಲಯ ಕಾರ್ಯದರ್ಶಿ ಗುರುಚರಣ್ ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page