Connect with us

DAKSHINA KANNADA

ಮಂಗಳೂರು ವಿವಿ ಗಣೇಶೋತ್ಸವ: ಮಂಗಳಾ ಸಭಾಂಗಣದಲ್ಲಿ ಅನುಮತಿ ನೀಡಿದಕ್ಕಾಗಿ ಶಾಸಕ ಕಾಮತ್ ಸಂತಸ

Published

on

ಮಂಗಳೂರು ವಿಶ್ವ ವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿಯೇ ಗಣೇಶೋತ್ಸವ ಆಚರಣೆಗೆ ಅನುಮತಿ ಸಿಕ್ಕಿರುವುದು ಹಿಂದೂ ಸಮಾಜದ ಹೋರಾಟಕ್ಕೆ ಸಿಕ್ಕ ಜಯ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಮಂಗಳೂರು: ಮಂಗಳೂರು ವಿಶ್ವ ವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿಯೇ ಗಣೇಶೋತ್ಸವ ಆಚರಣೆಗೆ ಅನುಮತಿ ಸಿಕ್ಕಿರುವುದು ಹಿಂದೂ ಸಮಾಜದ ಹೋರಾಟಕ್ಕೆ ಸಿಕ್ಕ ಜಯ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.

ಯಾವುದೇ ಗೊಂದಲಕ್ಕೂ ಆಸ್ಪದ ನೀಡದೇ ಈ ಹಿಂದಿನಂತೆ ಗಣೇಶೋತ್ಸವ ನಡೆಸುವ ಬಗ್ಗೆ  ಆದೇಶ ಬಂದಿರುವ ಸಂತಸ ತಂದಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಸರ್ಕಾರ ಸದಾ ಹಿಂದೂ ಧರ್ಮದ ಆಚರಣೆಗಳಿಗೆ ಮಾತ್ರ ನಿರ್ಬಂಧಗಳನ್ನು ಹೇರುವ ಮೂಲಕ ಗೊಂದಲ ಸೃಷ್ಟಿಸುವ ಕೆಲಸವನ್ನು ಹಿಂದೆಯೂ ಮಾಡಿತ್ತು, ಈಗಲೂ ಅದನ್ನೇ ಮುಂದುವರಿಸುತ್ತಿದೆ ಎಂದರು.

ಕೆಲವರು ವೇದವ್ಯಾಸ್ ಕಾಮತ್ ಅವರು ಹೊರಗಿನಿಂದ ಬಂದು ಈ ಸಮಸ್ಯೆಯನ್ನು ಸೃಷ್ಟಿಸಿದರು ಎಂದು ಹೇಳುತ್ತಿದ್ದಾರೆ, ಆದರೆ ಆರಂಭದಲ್ಲಿಯೇ ಈ ಹಿಂದಿನಂತೆ ಗಣೇಶೋತ್ಸವ ಮುಂದುವರಿಸಿಕೊಂಡು ಹೋಗಿದ್ದರೆ ನಾನೂ ಸೇರಿದಂತೆ ಯಾವ ಹೊರಗಿನ ವ್ಯಕ್ತಿಗಳೂ ಸಹ ಈ ವಿಷಯದಲ್ಲಿ ವಿಶ್ವವಿದ್ಯಾನಿಲಯಕ್ಕೆ ಬರುವ ಪ್ರಮೇಯವೇ ಇರುತ್ತಿರಲಿಲ್ಲ,ಇಷ್ಟೊಂದು ಚರ್ಚೆಗಳ ಅಗತ್ಯವೂ ಇರುತ್ತಿರಲಿಲ್ಲ.

ಹಿಂದೂ ಸಮಾಜದ ತೀವ್ರ ವಿರೋಧ ಹಾಗೂ ಪ್ರತಿಭಟನೆಗೆ ಮಣಿದು ಕೊನೆಗೂ ಇದೀಗ ಬಂದಿರುವ ಆದೇಶದಂತೆ  ವಿಶ್ವವಿದ್ಯಾನಿಲಯದ ಕುಲಪತಿಗಳು ಈ ಹಿಂದಿನಂತೆ ಮಂಗಳಾ ಸಭಾಂಗಣದಲ್ಲಿಯೇ ಗಣೇಶೋತ್ಸವ ಆಚರಿಸುತ್ತೇವೆಂದು ನಿರ್ಣಯಿಸಿದ್ದಾರೆ.

ಹಿಂದೂ ಸಮಾಜದ ಧಾರ್ಮಿಕ ಆಚರಣೆಗಳಿಗೆ ಯಾವುದೇ ಧಕ್ಕೆ ಉಂಟಾಗದ ರೀತಿಯಲ್ಲಿ ಭಾರತೀಯ ಜನತಾ ಪಾರ್ಟಿ ಸದಾ ಹೋರಾಟಕ್ಕೆ ಸಿದ್ಧವಾಗಿರುತ್ತದೆ ಎಂಬ ಸ್ಪಷ್ಟ ಸಂದೇಶವನ್ನು ರಾಜ್ಯದ ಕಾಂಗ್ರೆಸ್ ಸರ್ಕಾರಕ್ಕೆ ಹಾಗೂ ಸಂಬಂಧಪಟ್ಟವರಿಗೆ ನೀಡ ಬಯಸುತ್ತೇನೆಂದು ಎಂದರು.

DAKSHINA KANNADA

ಚಾರ್ಮಾಡಿ: ಕಾಡಾನೆ ಜತೆ ಸೆಲ್ಪಿ ಕ್ಲಿಕ್ಕಿಸಲು ಮುಂದಾದ ಪ್ರಯಾಣಿಕರು

Published

on

ಬೆಳ್ತಂಗಡಿ: ಚಾರ್ಮಾಡಿ ಘಾಟ್‌ ರಸ್ತೆಯಲ್ಲಿ ಮತ್ತೆ ಕಾಡಾನೆಯೊಂದು ಪ್ರತ್ಯಕ್ಷವಾಗಿದ್ದು, ಪ್ರಯಾಣಿಕರು ಸೆಲ್ಫಿ ಕ್ಲಿಕ್ಕಿಸುವುದಕ್ಕಾಗಿ ಅದರತ್ತ ಧಾವಿಸಿದ್ದಾರೆ.

ಹೌದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿ ರಸ್ತೆಯ ನಾಲ್ಕನೇ ತಿರುವಿನಲ್ಲಿ ಕಾಡನೆಯೊಂದು ಪ್ರತ್ಯಕ್ಷವಾಗಿದೆ. ಈ ವೇಳೆ ಪ್ರಯಾಣಿಕರು ಸೆಲ್ಪಿಗಾಗಿ ಆನೆಯ ಸಮೀಪ ಧಾವಿಸಿದ್ದಾರೆ. ಇದರಿಂದ ಕಾಡಾನೆ ರೊಚ್ಚಿಗೆದ್ದಿದೆ.

ಇದನ್ನೂ ಓದಿ: ಚಾರ್ಮಾಡಿ ರಸ್ತೆಯಲ್ಲಿ ಮತ್ತೆ ಕಾಣಿಸಿಕೊಂಡ ಒಂಟಿ ಸಲಗ 

ರಸ್ತೆಯಲ್ಲಿ ಕಾಡಾನೆ ನಿಂತಿದ್ದರಿಂದ ಘಾಟ್ ರಸ್ತೆಯಲ್ಲಿ ಸುಮಾರು ಹೊತ್ತು ಟ್ರಾಫಿಕ್ ಜಾಮ್ ಉಂಟಾಯಿತು. ಸದ್ಯ, ಕಾಡಾನೆ ಜತೆ ವ್ಯಕ್ತಿಯೊಬ್ಬರು ಸೆಲ್ಪಿ ತೆಗೆಯುತ್ತಿರುವ ಹಾಗೂ ಅಷ್ಟರಲ್ಲಿ ಆನೆ ರೊಚ್ಚಿಗೆದ್ದ ವಿಡಿಯೋ ವೈರಲ್ ಆಗಿದೆ.

Watch video

Continue Reading

DAKSHINA KANNADA

ಮಂಗಳೂರು ವಿಮಾನ ದುರಂತಕ್ಕೆ 15 ವರ್ಷ ಪೂರ್ಣ; ಸಂತ್ರಸ್ತರ ನೆನಪಿನ ಪಾರ್ಕ್‌ ಬಳಿ ಶ್ರದ್ಧಾಂಜಲಿ ಸಲ್ಲಿಕೆ

Published

on

ಮಂಗಳೂರು: ಮಂಗಳೂರು ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ವಿಮಾನ ದುರಂತ ಸಂಭವಿಸಿ ಇದೀಗ 15 ವರ್ಷ ತುಂಬುತ್ತಿದೆ.

ವಿಮಾನ ದುರಂತದಲ್ಲಿ ಮೃತಪಟ್ಟವರಲ್ಲಿ ಹಲವರ ಮೃತದೇಹದ ಗುರುತು ಪತ್ತೆಯಾಗದೆ ಉಳಿದಿದ್ದು, ಅವುಗಳನ್ನು ಕೂಳೂರಿನ ಫಲ್ಗುಣಿ ನದಿ ಕಿನಾರೆಯಲ್ಲಿ ದಫನ ಮಾಡಲಾಗಿತ್ತು. ಅದೇ ಜಾಗದಲ್ಲಿ ಸಂತ್ರಸ್ತರ ನೆನಪಿನ ಪಾರ್ಕ್‌ ನಿರ್ಮಿಸಲಾಗಿದೆ.

ಗುರುವಾರ ಜಿಲ್ಲಾಡಳಿತ ವತಿಯಿಂದ ದಕ್ಷಿಣ ಕನ್ನಡ ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ.ಆನಂದ್ ನೇತೃತ್ವದಲ್ಲಿ ಪುಷ್ಪ ಗುಚ್ಛ ಇರಿಸಿ ಶ್ರದ್ದಾಂಜಲಿ ಸಲ್ಲಿಸಿದರು. ಈ ಸಂದರ್ಭ ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್, ಪಣಂಬೂರು ಎಸಿಪಿ ಕೆ ಶ್ರೀಕಾಂತ್ , ತಹಶೀಲ್ದಾರ್ ನವೀನ್ ಕುಮಾರ್ ಉಪಸ್ಥಿತರಿದ್ದರು.

ಏನಿದು ಘಟನೆ?

2010ರ ಮೇ 22ರಂದು ಬೆಳಗ್ಗೆ 6.20ಕ್ಕೆ ದುಬೈನಿಂದ ಮಂಗಳೂರಿಗೆ ಬಂದ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಎಲ್ಲ ಸುರಕ್ಷಾ ಸಂಕೇತಗಳನ್ನು ಆಧರಿಸಿಯೇ ಇಳಿದಿತ್ತು. ಆದರೆ ರನ್‌ವೇಯಲ್ಲಿ ನಿಲ್ಲಬೇಕಾದ ವಿಮಾನವು ನೇರವಾಗಿ ಮುಂದಕ್ಕೆ ಚಲಿಸುತ್ತಲೇ ಸೂಚನಾ ಗೋಪುರದ ಕಂಬಗಳಿಗೆ ಡಿಕ್ಕಿಯಾಗಿ, ಅದನ್ನು ತುಂಡರಿಸಿ ಆಳ ಪ್ರದೇಶಕ್ಕೆ ಉರುಳಿ ಬಿತ್ತು.

ಬೆಂಕಿ ಹತ್ತಿಕೊಂಡ ವಿಮಾನದಲ್ಲಿ ಪೈಲಟ್, ಸಿಬ್ಬಂದಿ ಸಹಿತ 158 ಮಂದಿ ಮೃ*ತರಾಗಿದ್ದರು. ಈ ಪೈಕಿ 19 ಮಕ್ಕಳು ಹಾಗೂ 6 ಮಂದಿ ಶಿಶುಗಳು, 6 ವಿಮಾನ ಸಿಬ್ಬಂದಿ ಸಹಿತ 166 ಮಂದಿ ಪ್ರಯಾಣಿಸುತ್ತಿದ್ದರು. ಅಪ*ಘಾತದಲ್ಲಿ 8 ಮಂದಿ ಮಾತ್ರ ಬದುಕುಳಿದಿದ್ದರು.

ಮುಖ್ಯ ಪೈಲಟ್‌ನ ನಿರ್ಲಕ್ಷ್ಯ, ಸಹ ಪೈಲಟ್‌ನ ಸಲಹೆ ಪಾಲಿಸದೆ ಇದ್ದದ್ದೇ ಈ ದುರ್ಘಟನೆಗೆ ಕಾರಣ ಎಂದು ನಂತರ ನಡೆದ ತನಿಖೆಯಲ್ಲಿ ಪತ್ತೆಯಾಯಿತು.

Continue Reading

DAKSHINA KANNADA

ಕಡಬ: ಅಪಘಾತದ ಗಾಯಾಳು ವಾರದ ಬಳಿಕ ಚಿಕಿತ್ಸೆ ಫಲಿಸದೆ ಸಾವು

Published

on

ಕಡಬ: ಸುಬ್ರಹ್ಮಣ್ಯ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೊಯ್ಲ ಗ್ರಾಮದ ಗಂಡಿಬಾಗಿಲು ಎಂಬಲ್ಲಿ ಒಂದು ವಾರದ ಹಿಂದೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಳೆನೇರೆಂಕಿ ಗ್ರಾಮದ ಮಾಡೆಂಜಿಮಾರು ನಿವಾಸಿ ಪದ್ಮನಾಭ (48) ಎಂಬವರು ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆ.

ಮೇ 11 ರಂದು ರಾತ್ರಿ ಪದ್ಮನಾಭ ಅವರು ತಮ್ಮ ಸಹೋದರ ಸುದರ್ಶನ್ ಮತ್ತು ಸ್ನೇಹಿತರಾದ ಚೇತನ್ ಹಾಗೂ ಸತೀಶ್ ಎಂಬವರ ಜತೆ ಉಪ್ಪಿನಂಗಡಿ ಬಳಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಕಾರಿನಲ್ಲಿ ಮನೆಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿತ್ತು.

ಪದ್ಮನಾಭ ಮತ್ತು ಸಂಗಡಿಗರು ಸಂಚರಿಸುತ್ತಿದ್ದ ಕಾರು ಮತ್ತು ಧರ್ಮಸ್ಥಳ, ಸುಬ್ರಹ್ಮಣ್ಯ ಮತ್ತಿತರ ಕ್ಷೇತ್ರಗಳಿಗೆ ಭೇಟಿ ನೀಡಿ ಶಿವಮೊಗ್ಗಕ್ಕೆ ವಾಪಸಾಗುತ್ತಿದ್ದ ಯಾತ್ರಿಕರನ್ನು ಹೊತ್ತೊಯ್ಯುತ್ತಿದ್ದ ಮಿನಿ ಬಸ್ಸು ನಡುವೆ ಢಿಕ್ಕಿ ಸಂಭವಿಸಿ ಅಪಘಾತ ನಡೆದಿತ್ತು. ಈ ಅವಘಡದಲ್ಲಿ ಪದ್ಮನಾಭ ಅವರಿಗೆ ತೀವ್ರ ಸ್ವರೂಪದ ಗಾಯಗಳಾಗಿದ್ದವು.

ಇದನ್ನೂ ಓದಿ: ಮುಂದಿನ 5 ದಿನ ಭಾರಿ ಮಳೆ, ಬಿಸಿ ಗಾಳಿಯ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ; ಎಲ್ಲೆಲ್ಲೆ?

ಅವರನ್ನು ತಕ್ಷಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಮೃತರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕಡಬ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page