Connect with us

DAKSHINA KANNADA

ಉಳ್ಳಾಲ: ಮೆಹಂದಿ ಶಾಸ್ತ್ರ ದಿನವೇ ನಾಪತ್ತೆಯಾದ ಯುವಕ- ಬಳ್ಳಾರಿಯಲ್ಲಿ ಪತ್ತೆ

Published

on

ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಮದುಮಗ, ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಪುತ್ರ ಕಿಶನ್‌ ಶೆಟ್ಟಿ ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆ.

ಉಳ್ಳಾಲ: ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಮದುಮಗ, ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಪುತ್ರ ಕಿಶನ್‌ ಶೆಟ್ಟಿ ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆ.

ಭಾನುವಾರ ಮಧ್ಯಾಹ್ನ ತನ್ನ ತಂಗಿಗೆ ಮೊಬೈಲ್ ಸಂದೇಶ ಕಳುಹಿಸಿರುವ ಕಿಶನ್‌ ಶೆಟ್ಟಿ ನಾನು ಬಳ್ಳಾರಿಯಲ್ಲಿದ್ದೇನೆ.

ಇನ್ನುಮುಂದೆ ಎಂದಿಗೂ ಮನೆಗೆ ಬರುವುದಿಲ್ಲ ಎಂದು ತಿಳಿಸಿದ್ದಾರೆ.

ಈ ಮೂಲಕ ಪುತ್ರನ ಜೀವಕ್ಕೆ ಯಾವುದೇ ಅಪಾಯ ಇಲ್ಲ ಎಂದು ತಿಳಿದು ಬಂದಿದೆ.

ಮೇ 31ರಂದು ರಾತ್ರಿ ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲೆಂದು ಹೋಗಿದ್ದ ಕಿಶನ್‌ ಶೆಟ್ಟಿ ನಾಪತ್ತೆಯಾಗಿದ್ದರು.

ಇದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು. ಈತ ಭಾನುವಾರ ಮಧ್ಯಾಹ್ನ ಸಹೋದರಿ ಮೊಬೈಲ್‌ಗೆ ಸಂದೇಶ ಕಳುಹಿಸಿದ್ದಾನೆ.

ನಾನು ಬಳ್ಳಾರಿಯಲ್ಲಿ ಇದ್ದೇನೆ. ಸ್ಕೂಟರ್ ಮೆಲ್ಕಾರ್ ಆರ್‌ಟಿಒ ಕಚೇರಿ ಮುಂದೆ ಇಟ್ಟಿದ್ದೇನೆ.

ಆದರೆ ಇನ್ನು ಮುಂದೆ ಎಂದಿಗೂ ಮನೆಗೆ ಬರುವುದಿಲ್ಲ ಎಂದು ಹೇಳಿದ್ದಾನೆ. ತಂಗಿ ಕರೆ ಮಾಡಲು ಯತ್ನಿಸಿದ್ದಾರೆ.

ಆದರೆ ಕಿಶನ್‌ ಶೆಟ್ಟಿ ಮೊಬೈಲ್‌ ಸ್ವಿಚ್ ಆಫ್ ಮಾಡಿದ್ದಾನೆ.

ತಂಗಿ ತಂದೆಗೆ ಮಾಹಿತಿ ನೀಡಿದ್ದು, ಐತಪ್ಪ ಶೆಟ್ಟಿ ಅವರು ಕೊಣಾಜೆ ಠಾಣೆಗೆ ಹೋಗಿ ಕರೆ ಬಂದ ಬಗ್ಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಟವರ್ ಲೊಕೇಶನ್‌ ಸರ್ಚ್‌ ಮಾಡಿದಾಗ ಬಳ್ಳಾರಿಯ ಗ್ರಾಮಾಂತರ ಭಾಗವೊಂದರ ಟವರ್‌ ಲೊಕೇಶನ್‌ ತೋರಿಸಿದೆ.

ಅರ್ಧಗಂಟೆಗೊಮ್ಮೆ ಕೆಲವು ಕಿಲೋಮೀಟರ್‌ ಅಂತರ ಲೊಕೇಶನ್‌ ತೋರಿಸುತ್ತಿದ್ದು, ಪೊಲೀಸರು ಆತನ ಪತ್ತೆಗೆ ನಿರಂತರ ಯತ್ನ ಮುಂದುವರಿಸಿದದ್ದಾರೆ.

DAKSHINA KANNADA

ಮೇ 23 ರಿಂದ ತುಳುನಾಡಿನಾದ್ಯಂತ “ಗಂಟ್ ಕಲ್ವೆರ್’ ತುಳು ಚಿತ್ರ ತೆರೆಗೆ

Published

on

ಮಂಗಳೂರು: ಸ್ನೇಹ ಕೃಪಾ ಮೂವೀಸ್ ಲಾಂಛನದಲ್ಲಿ ತಯಾರಾದ ಕಲಾಸಾರ್ವಭೌಮ ಸುಧಾಕರ ಬನ್ನಂಜೆ ಕತೆ ಚಿತ್ರಕತೆ ಸಂಭಾಷಣೆ ಹಾಡು ಬರೆದು ನಿರ್ಮಿಸಿ ನಿರ್ದೇಶಿಸಿರುವ “ಗಂಟ್ ಕಲ್ವೆರ್” ತುಳು ಚಿತ್ರ ಮೇ 23 ರಂದು ತುಳುನಾಡಿನಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ಹೇಳಿಕೊಂಡಿದೆ.

ನಗರದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಚಿತ್ರ ನಿರ್ಮಾಪಕರು, ಮಂಗಳೂರಿನಲ್ಲಿ ಭಾರತ್ ಸಿನಿಮಾಸ್, ಸಿನಿಪೋಲಿಸ್ ಪಿವಿ ಆರ್ ,ರೂಪವಾಣಿ , ಉಡುಪಿಯಲ್ಲಿ ಭಾರತ್ ಸಿನಿಮಾಸ್, ಕಲ್ಪನಾ, ಮಣಿಪಾಲ, ಪಡುಬಿದ್ರೆ ಪುತ್ತೂರು, ದೇರಳಕಟ್ಟೆಯ ಭಾರತ್ ಸಿನಿಮಾಸ್, ಮಣಿಪಾಲದ ಐನಾಕ್ಸ್, ಕಾರ್ಕಳದ ರಾಧಿಕಾ, ಪ್ಲಾನೆಟ್ ಬೆಳ್ತಂಗಡಿಯ ಭಾರತ್, ಸುರತ್ಕಲ್ ನ ನಟರಾಜ್ ಹಾಗೂ ಸಿನಿ ಗ್ಯಾಲಕ್ಸಿ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೊಳ್ಳಲಿದೆ ಎಂದರು.

ಇದನ್ನೂ ಓದಿ: 35 ವರ್ಷದ ನಟಿಯನ್ನು ವರಿಸಲಿದ್ದಾರೆ ವಿಶಾಲ್..! ಅಷ್ಟಕ್ಕೂ ಹುಡುಗಿ ಯಾರು ಗೊತ್ತಾ..?

ತುಳು ಚಿತ್ರರಂಗದ ಖ್ಯಾತ ನಟರು ಇದರಲ್ಲಿ ನಟಿಸಿದ್ದಾರೆ ಎಂದು ವಿವರಿಸಿದರು. ವೇದಿಕೆಯಲ್ಲಿ ರಾಕೇಶ್ ಆಚಾರ್ಯ, ಸುಧಾಕರ್, ಪ್ರಶಾಂತ್ ಆಚಾರ್ಯ, ತಮ್ಮ ಲಕ್ಷ್ಮಣ ಮೊದಲಾದವರಿದ್ದರು.

Continue Reading

DAKSHINA KANNADA

ಶಾಸಕ ಹರೀಶ್ ಪೂಂಜಾ ವಿರುದ್ದ ಕೋರ್ಟ್‌ಗೆ ಚಾರ್ಜ್‌ಶೀಟ್ ಸಲ್ಲಿಕೆ

Published

on

ಉಪ್ಪಿನಂಗಡಿ : ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಹರೀಶ್ ಪೂಂಜಾ ವಿರುದ್ದ ಪ್ರಕರಣ ದಾಖಲಾಗಿತ್ತು. ಇಂದು(ಮೇ 20) ಪೊಲೀಸರು ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಎಫ್ಐಆರ್ ರದ್ದುಗೊಳಿಸುವಂತೆ ಹರೀಶ್ ಪೂಂಜಾಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಈ ಬಗ್ಗೆ ತಕ್ಷಣಕ್ಕೆ ಯಾವುದೇ ಕ್ರಮಕೈಗೊಳ್ಳದ ಹೈಕೋರ್ಟ್ ದೂರುದಾರರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು.

ಇದನ್ನೂ ಓದಿ : ಶಿಶಿಲದ ಶ್ರೀ ಶಿಶಿಲೇಶ್ವರನಿಗೆ ವಿಭಿನ್ನ ಶೈಲಿಯಲ್ಲಿ ತೆಪ್ಪೋತ್ಸವ

ಈ ನಡುವೆ ಪೊಲೀಸರು ಶಾಸಕ ಪೂಂಜಾ ವಿರುದ್ದ ಹೈಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಸಿದ್ದು, ಶಾಸಕ ಹರೀಶ್ ಪೂಂಜಾಗೆ ಮತ್ತೊಂದು ಹಿನ್ನಡೆಯಾಗಿದೆ.

Continue Reading

DAKSHINA KANNADA

ಶಿಶಿಲದ ಶ್ರೀ ಶಿಶಿಲೇಶ್ವರನಿಗೆ ವಿಭಿನ್ನ ಶೈಲಿಯಲ್ಲಿ ತೆಪ್ಪೋತ್ಸವ

Published

on

ಬೆಳ್ತಂಗಡಿ : ಶಿಶಿಲದ ಶ್ರೀಶಿಶಿಲೇಶ್ವರ ದೇವರಿಗೆ 7 ದಿನ ಜಾತ್ರಾಮಹೋತ್ಸವದ ಕಡೆ ದಿನ ಅವಭೃತ ಸ್ನಾನದಂದು ವಿಭಿನ್ನ ಶೈಲಿಯಲ್ಲಿ ತೆಪ್ಪೋತ್ಸವ ನಡೆಯುವುದು ವಿಷಯ. ಬಿದಿರುಗಳನ್ನು ಬಳಸಿ ಸಿದ್ಧಗೊಳಿಸಿದ ತೆಪ್ಪದಿಂದ ಶ್ರೀದೇವರ ಸಮೀಪದಲ್ಲೇ ಹಾದುಹೋಗುವ ಕಪಿಲಾ ನದಿಗೆ ಶಿಶಿಲೇಶ್ವರನನ್ನು ಕಪಿಲೆ ಕಲ್ಲಿಗೆ ಮೂರು ಸುತ್ತು ಬರುವ ಮೂಲಕ ತೆಪ್ಪೋತ್ಸವ ಪೂರ್ಣಗೊಳ್ಳುತ್ತದೆ.

ಬಿದಿರಿನ ತೆಪ್ಪವನ್ನು ದೇವಾಲಯದ ಚಾಕರಿಯವರು ಒಂದೇ ಗಾತ್ರದ ಬಿದಿರನ್ನು ಸಿದ್ಧಗೊಳಿಸಿ ಸಮಾನವಾಗಿ ಜೋಡಣೆ ಮಾಡಿ ಅದಕ್ಕೆ ಬಿಗಿಯಾಗಿ ದಾರ ಕಟ್ಟಿ ಅದರ ಮೇಲೊಂದು ಮರದ ಪೀಠವಿಟ್ಟು ಅದರಲ್ಲಿ ಉತ್ಸವ ದೇವರು ವಿರಾಜಮಾನರಾದರೆ ಅದರ ಅಂದವೇ ಅದ್ಭುತ.

ಇಷ್ಟು ಮಾತ್ರವಲ್ಲದೆ ಮತ್ಸ್ಯತೀರ್ಥವೆಂದೇ ಪ್ರಖ್ಯಾತವಾದ ಈ ಕಪಿಲ ನದಿಯಲ್ಲಿ  ಮಹಶೀರ್ (ಪೆರುವೋಳ್) ಮೀನು ಇದ್ದು, ಈ ಮೀನುಗಳು ಶಿಶಿಲೇಶ್ವರ ದೇವರ ರೀತಿಯೇ ಉದ್ಭವಾಗಿದೆ ಎಂದು ಭಕ್ತ ಸಮೂಹ ನಂಬಿದೆ. ಈ ಮೀನುಗಳು ತೆಪ್ಪೋತ್ಸವ ನಡೆಯುವ ಸಂದರ್ಭದಲ್ಲಿ ಅತ್ತಿಂದ ಇತ್ತ – ಇತ್ತಿಂದ ಅತ್ತ ಓಡಾಡುವ ದೃಶ್ಯ ವಿಸ್ಮಯ.

ಇದನ್ನೂ ಓದಿ : ಸಾಲೂರು ಬೃಹನ್ಮಠದ ಶ್ರೀ ಪಟ್ಟದ ಗುರುಸ್ವಾಮಿಗಳು ಲಿಂಗೈಕ್ಯ

ಶಿಶಿಲದ ತೆಪ್ಪೋತ್ಸವದಲ್ಲಿ ತೆಪ್ಪವನ್ನು ಸುಮಾರು 6 ಮಂದಿ ಚಾಕರಿಯವರು 3 ಸುತ್ತು ಕೊಂಡೊಯ್ಯುವ ದೈವಿಶಕ್ತಿ ನೋಡಲು ಜನಸಾಗರವೇ ಶಿಶಿಲದ ಕಪಿಲಾ ನದಿಯ ದಂಡೆಯಲ್ಲಿ ಸೇರಿರುತ್ತದೆ.

Continue Reading
Advertisement

Trending

Copyright © 2025 Namma Kudla News

You cannot copy content of this page