Connect with us

DAKSHINA KANNADA

ಮಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿಯತ್ತ ದೃಷ್ಟಿಯಿತ್ತ ಭಜರಂಗದಳ-ರಾತ್ರಿ 11ರೊಳಗೆ ಪಾರ್ಟಿ ಮುಗಿಸಲು ಮನವಿ

Published

on

ಮಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಹೊಸ ವರ್ಷ ಸಮೀಪಿಸುತ್ತಿದೆ. ಹೊಸ ವರ್ಷವನ್ನು ಸಂಭ್ರಮದಿಂದ ಬರಮಾಡಿಕೊಳ್ಳಲು ಯುವಜನತೆ ಕೂಡಾ ಸಜ್ಜಾಗುತ್ತಿದೆ. ಆದರೆ ಇದೀಗ ಮಂಗಳೂರಿನಲ್ಲಿ ನ್ಯೂ ಇಯರ್ ಪಾರ್ಟಿಗಳ ಮೇಲೆ ಬಜರಂಗದಳ ಕೆಂಗಣ್ಣು ನೆಟ್ಟಿದೆ.


ಡಿಸೆಂಬರ್ 31ರಂದು ನಡೆಯುವ ಪಾಶ್ಚಿಮಾತ್ಯ ಸಂಸ್ಕೃತಿಯನ್ನು ಬಿಂಬಿಸುವ ಪಾರ್ಟಿಗಳಿಗೆ ಬಜರಂಗದಳ ವಿರೋಧ ವ್ಯಕ್ತಪಡಿಸಿದೆ. ಈಗಾಗಲೇ ಪಾರ್ಟಿಗಳನ್ನು ರಾತ್ರಿ 11ರೊಳಗೆ ಮುಗಿಸುವಂತೆ ಬಜರಂಗದಳ ಪೊಲೀಸ್ ಕಮಿಷನರ್ ಅವರಿಗೆ ಮನವಿ ಮಾಡಿದೆ. ಇಲ್ಲದಿದ್ದಲ್ಲಿ ಬಜರಂಗದಳದ ಕಾರ್ಯಕರ್ತರೇ ಪಾರ್ಟಿಗಳನ್ನು ಬಂದ್ ಮಾಡಿಸುತ್ತದೆ ಎಂದು ಎಚ್ಚರಿಕೆ ನೀಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಬಜರಂಗದಳ ಮುಖಂಡ ಪುನೀತ್ ಅತ್ತಾವರ ಮಾತನಾಡಿ, ಪಾರ್ಟಿ ನೆಪದಲ್ಲಿ ಹೋಟೆಲ್, ಪಬ್‌ಗಳಲ್ಲಿ ಲವ್ ಜಿಹಾದ್, ಡ್ರಗ್ಸ್ ಜಿಹಾದ್ ನಡೆಯುತ್ತಿದೆ. ಈ ಮೂಲಕ ದುಶ್ಚಟಗಳಿಗೆ ಪ್ರೇರಣೆ ನೀಡುವ ಘಟನೆಗಳು ನಡೆಯುತ್ತಿವೆ. ಇಸ್ಲಾಂ ಧರ್ಮವನ್ನು ಪಾಲಿಸುವ ಮುಸಲ್ಮಾನ ಯುವಕರು ಅವರ ಜಮಾಅತ್ ಅನ್ನು ಮಾತ್ರ ಒಪ್ಪುತ್ತಾರೆ. ಇಸ್ಲಾಂ ಪ್ರಕಾರ ಅವರಿಗೆ ಪಾರ್ಟಿಗಳು, ಸಂಗೀತ ನಿಷಿದ್ಧವರಿರುತ್ತದೆ. ಆದರೆ ಮಂಗಳೂರಿನ ಎಲ್ಲಾ ಪಬ್‌ಗಳಲ್ಲೂ ಯುವಕ, ಯುವತಿಯರು ಸಿಗುತ್ತಾರೆ. ಆದ್ದರಿಂದ ಎಲ್ಲಾ ಪಬ್, ಹೋಟೆಲ್ ಮಾಲೀಕರು ಯಾವುದೇ ಹೊಸ ವರ್ಷಾಚರಣೆಯ ಪಾರ್ಟಿಗಳಿಗೆ ಯುವಕ, ಯುವತಿಯರಿಗೆ ಅವಕಾಶ ನೀಡದಂತೆ ಆಗ್ರಹಿಸಿದರು.


ಇನ್ನು ಭಜರಂಗದಳದ ಎಚ್ಚರಿಕೆ ವಿರೋಧಿಸಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಪ್ರತಿಕ್ರಿಯೆ ನೀಡಿ, ಈ ರೀತಿ ಎಚ್ಚರಿಕೆ ನೀಡಲು ಬಜರಂಗದಳದವರು ಯಾರು?.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರ್ಕಾರ ಇಲ್ಲ. ಕಾನೂನು ಸುವ್ಯವಸ್ಥೆಯಂತೂ ಇಲ್ಲವೇ ಇಲ್ಲ. ಪೊಲೀಸ್ ಇಲ್ಲ ಅನ್ನುವಂತಹದ್ದೇ ಇದರ ಹಿಂದಿರುವ ಅರ್ಥವಾಗಿದೆ. ಪೊಲೀಸ್ ಇಲಾಖೆ ನ್ಯೂ ಈಯರ್ ಪಾರ್ಟಿಯ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿ. ಸಂವಿಧಾನ ಎಲ್ಲರಿಗೂ ಅವರದ್ದೇ ಆದ ಸ್ವಾತಂತ್ರ್ಯ ನೀಡಿದೆ.

ಸಂವಿಧಾನ ನೀಡಿರುವ ಸ್ವಾತಂತ್ರ್ಯ ಹಾಗೂ ಹಕ್ಕನ್ನು ಕಾಪಾಡುವುದು ಪೊಲೀಸ್ ಇಲಾಖೆಯ ಜವಾಬ್ದಾರಿಯಾಗಿದೆ.

ಕಾನೂನು ಸುವ್ಯವಸ್ಥೆಯನ್ನು ಹದಗೆಡಿಸುವಂತಹ ಹೇಳಿಕೆ ನೀಡುವ ಬಜರಂಗದಳದವರ ಮೇಲೆ ಪ್ರಕರಣ ದಾಖಲು ಮಾಡಿ ಮುಂಜಾಗ್ರತಾ ಕ್ರಮವಾಗಿ ಅವರನ್ನು ಬಂಧಿಸಲಿ ಎಂದು ಆಗ್ರಹಿಸಿದರು.

 

BANTWAL

ಎರಡನೇ ವರ್ಷದ ಮೂಳೂರು-ಅಡ್ಡೂರು ಕಂಬಳದ ಆಹ್ವಾನ ಪತ್ರಿಕೆ ಬಿಡುಗಡೆ

Published

on

ಮಂಗಳೂರು: ಎರಡನೇ ವರ್ಷದ ಮೂಳೂರು-ಅಡ್ಡೂರು ಜೋಡು ಕರೆ ಕಂಬಳ ಎಪ್ರಿಲ್ 12 ರ ಶನಿವಾರ ನಡೆಯಲಿದೆ.


ಸಮಾಜ ಸೇವಕ ಹಾಗೂ ರಾಜಕೀಯ ನಾಯಕ ಇನಾಯತ್ ಅಲಿಯವರ ನೇತೃತ್ವದಲ್ಲಿ ಈ ಕಂಬಳ ಆಯೋಜನೆಯಾಗಿದೆ. ವಿಜೃಂಭಣೆಯಿಂದ ನಡೆಯುವ ಮೂಳುರು-ಅಡ್ಡೂರು ಜೋಡುಕರೆ ಕಂಬಳದ ಆಹ್ವಾನ ಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ.

ನಗರದ ಖಾಸಗಿ ಹೊಟೇಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗಣ್ಯರ ಸಮಕ್ಷಮದಲ್ಲಿ ಅಮಂತ್ರಣ ಪತ್ರಿಕೆ ಬಿಡುಗಡೆ ಮಾಡಲಾಗಿದೆ. ಎರಡನೇ ವರ್ಷದ ಕಂಬಳವನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಮಾಡಲಿದ್ದಾರೆ.

ಇದನ್ನೂ ಓದಿ: ಈ ದಿನದಂದು ನಿಮ್ಮ ಖಾತೆಗೆ ಸೇರಲಿದೆ 2 ತಿಂಗಳ ಗೃಹಲಕ್ಷ್ಮೀ ಹಣ 

ಸರ್ವ ಧರ್ಮಗಳ ಪ್ರಮುಖರ ಶುಭಾಶೀರ್ವಾದದೊಂದಿಗೆ ಕಾರ್ಯಕ್ರಮ ಉದ್ಘಾಟನೆಯಾಗಲಿದ್ದು, ಸಂಜೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸ್ಪೀಕರ್ ಯು.ಟಿ. ಖಾದರ್, ಸಚಿವ ದಿನೇಶ್ ಗುಂಡೂರಾವ್ ಅವರು ಭಾಗವಹಿಸಲಿದ್ದಾರೆ. ಹಲವಾರು ಚಲನ ಚಿತ್ರ ನಟ ನಟಿಯರು ಕೂಡಾ ಸಂಜೆಯ ಸಭಾ ಕಾರ್ಯಕ್ರಮಕ್ಕೆ ಆಗಮಿಸಲಿರುವುದಾಗಿ ಕಂಬಳ ಸಮಿತಿಯ ಅಧ್ಯಕ್ಷ ಇನಾಯತ್ ಅಲಿ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

SSLC ಪರೀಕ್ಷಾ ಕೇಂದ್ರದಲ್ಲಿ ಸಿನಿಮಾ ಶೂಟಿಂಗ್; ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರ ಆಕ್ರೋಶ

Published

on

ಪುತ್ತೂರು : ಎಸ್ಎಸ್ಎಲ್‌ಸಿ ಪರೀಕ್ಷಾ ಕೇಂದ್ರವಾಗಿರುವ ಸೈಂಟ್ ವಿಕ್ಟರ್ಸ್ ಪ್ರೌಢ ಶಾಲೆಯ ಆವರಣದಲ್ಲಿ ಕನ್ನಡ ಸಿನಿಮಾವೊಂದಕ್ಕೆ ಶೂಟಿಂಗ್‌ಗೆ ಅವಕಾಶ ಕೊಟ್ಟು ಶಾಲಾ ಆಡಳಿತ ಮಂಡಳಿ ಎಡವಟ್ಟು ಮಾಡಿಕೊಂಡಿದೆ.

ನಟ ಆರ್ಯನ್ ಅಭಿನಯದ `ಲವ್ ಟು ಲಸ್ಸಿ’ ಎಂಬ ಕನ್ನಡ ಚಲನಚಿತ್ರದ ಶೂಟಿಂಗ್ ಶಾಲಾ ಆವರಣದಲ್ಲಿ ನಡೆಯುತ್ತಿತ್ತು. ಇದಕ್ಕೆ ಕಳೆದ ಒಂದುವರೆ ತಿಂಗಳ ಹಿಂದೆಯೇ ಶಾಲಾ ಸಂಚಾಲಕರಿಂದ ಅನುಮತಿ ಪಡೆಯಲಾಗಿತ್ತು. ಆದರೆ, ಈ ಬಗ್ಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಯಾವುದೇ ಮಾಹಿತಿ ಇರಲಿಲ್ಲ. ಜೊತೆಗೆ ಪರೀಕ್ಷಾ ಕೇಂದ್ರವಾಗಿದ್ದ ಪ್ರೌಢಶಾಲೆಯಲ್ಲಿ ಪರೀಕ್ಷಾ ದಿನದಂದೇ ಶೂಟಿಂಗ್‌ಗೆ ಅವಕಾಶ ಮಾಡಿಕೊಟ್ಟದ್ದು ಎಷ್ಟು ಸರಿ? ಎಂಬ ಪ್ರಶ್ನೆ ಪೋಷಕರಿಂದ ವ್ಯಕ್ತವಾಗಿದೆ. ಇದಕ್ಕೆ ಕಾರಣ ಬೆಳಗ್ಗೆ ಶೂಟಿಂಗ್ ನಡೆಯುತ್ತಿದ್ದ ಸಂದರ್ಭ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಶಾಲಾ ಗೇಟು ಬಳಿ ಬಂದಾಗ ಗೇಟು ತೆರೆಯಲು ಪೊಲೀಸರು, ಗೇಟ್ ಕೀಪರ್ ನಿರಾಕರಿಸಿದ್ದಾರೆ.

ಇಲ್ಲಿ ಶೂಟಿಂಗ್ ನಡೆಯುತ್ತಿದೆ ಎಂದು ಅಸಮರ್ಪಕ ಉತ್ತರ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಕೆರಳಿದ ಪೋಷಕರು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕೇಂದ್ರದಲ್ಲಿ ಸೆಕ್ಷನ್ ಇರುವಾಗ ಯಾವ ರೀತಿ ಅವಕಾಶ ಮಾಡಿ ಕೊಟ್ಟಿದ್ದೀರಿ ಎಂದು ಶಾಲಾ ಆಡಳಿತ ಮಂಡಳಿಯವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ : ಮುಂಜಾನೆ ಎದ್ದ ಕೂಡಲೇ ಹಲ್ಲು ಉಜ್ಜಬೇಡಿ ; ಆಯುರ್ವೇದವು ಹೀಗೆನ್ನಲು ಕಾರಣವೇನು ..?

ಇದಾದ ಬಳಿಕ ಸುದ್ದಿ ತಿಳಿದ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಶೂಟಿಂಗ್ ಸ್ಪಾಟ್‌ಗೆ ಬಂದು ಸಿನಿಮಾ ಚಿತ್ರೀಕರಣ ನಿಲ್ಲಿಸುವಂತೆ ಸೂಚಿಸಿದರು. ಜೊತೆಗೆ ಪೊಲೀಸರ ಮುಖಾಂತರ ಚಲನಚಿತ್ರ ತಂಡಕ್ಕೆ ಶಾಲಾ ಬಳಿಯಿಂದ ತೆರಳುವಂತೆ ಸೂಚನೆ ನೀಡಿದರು. ಇಷ್ಟೆಲ್ಲ ಆದ್ರೂ ಪರೀಕ್ಷಾ ಕೇಂದ್ರದ 200 ಮೀಟರ್ ಒಳಗಡೆ, ಹಾಗೆಯೇ ಸೆಕ್ಷನ್ 144 ಜಾರಿ ಇರುವಾಗ ಶಾಲಾ ಆಡಳಿತ ಮಂಡಳಿಯ ಶೂಟಿಂಗ್‌ಗೆ ಹೇಗೆ ಅವಕಾಶ ಕೊಟ್ಟಿದ್ದಾರೆ ಎಂಬುದು ಪೋಷಕರ ವಾದ.

Continue Reading

DAKSHINA KANNADA

ಖಾಸಗಿ ಬಸ್‌ಗಳಿಗೆ ಎಚ್ಚರಿಕೆ ನೀಡಿದ ಪೊಲೀಸ್ ಇಲಾಖೆ; ನಿಯಮ ಮೀರಿದ್ರೆ ಬೀಳುತ್ತೆ FIR

Published

on

ಮಂಗಳೂರು : ಮಂಗಳೂರು ನಗರದಲ್ಲಿ ಸಂಚರಿಸುತ್ತಿರುವ ಬಸ್‌ಗಳ ಅಟಾಟೋಪಕ್ಕೆ ಕಡಿವಾಣ ಹಾಕಲು ಪೊಲೀಸ್ ಇಲಾಖೆ ಈ ಹಿಂದೆ ಸಾಕಷ್ಟು ಎಚ್ಚರಿಕೆಯನ್ನು ನೀಡಿದೆ. ಆದರೆ, ಪೊಲೀಸರು ನೀಡಿದ ಎಚ್ಚರಿಕೆಗೆ ಕ್ಯಾರೇ ಅನ್ನದ ಖಾಸಗಿ ಬಸ್ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ.

ಈ ಹಿಂದೆ ಹಲವಾರು ಬಾರಿ ಎಚ್ಚರಿಕೆ ನೀಡಿದ ಹೊರತಾಗಿಯೂ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡ ಹಿನ್ನಲೆಯಲ್ಲಿ ಸುಮಾರು 1,527 ಕೇಸ್‌ಗಳನ್ನು ಹಾಕಲಾಗಿತ್ತು. ಆದಾಗ್ಯೂ ಖಾಸಗಿ ಬಸ್ ತನ್ನ ಎಂದಿನ ಚಾಳಿ ಮುಂದುವರಿಸಿದ್ದ ಹಿನ್ನೆಲೆಯಲ್ಲಿ ಕಳೆದ ವಾರ ಪೊಲೀಸರು ಮತ್ತೊಂದು ಸುತ್ತಿನ ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮತ್ತೆ ಕಾನೂನು ಉಲ್ಲಂಘಿಸಿ ಸಂಚರಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 489 ಕೇಸ್ ದಾಖಲು ಮಾಡಿದ್ದಾರೆ.

ವಿಶೇಷವಾಗಿ ಬಸ್‌ಗಳಲ್ಲಿ ನಿಗದಿ ಪಡಿಸಿರುವುದಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರನ್ನು ತುಂಬಿಸಿರುವುದಕ್ಕೆ 234 ಕೇಸ್‌ಗಳನ್ನು ಹಾಕಲಾಗಿದೆ. ಫುಟ್ ಬೊರ್ಡ್ ನಲ್ಲಿ ಪ್ರಯಾಣಿಸಿದ್ದಕ್ಕೆ 71 ಹಾಗೂ ಕರ್ಕಶ ಹಾರ್ನ್ ಬಳಕೆ ಮಾಡಿರುವ 62 ಪ್ರಕರಣಗಳು ಮತ್ತು ಟ್ರಾಫಿಕ್ ರೂಲ್ಸ್ ಉಲ್ಲಂಘನೆಯ 59 ಕೇಸ್ ಗಳು ದಾಖಲು ಮಾಡಲಾಗಿದೆ.

ಇದನ್ನೂ ಓದಿ : ಮುಂಬರುವ ಅಮವಾಸ್ಯೆಯಂದು ಹೀಗೆ ಮಾಡಿ ..! ಶನಿ ದೋಷದಿಂದ ಮುಕ್ತಿ ಪಡೆಯಿರಿ ..!

2025 ರಲ್ಲಿ ದಾಖಲಾದ ಒಟ್ಟು 1,527 ಪ್ರಕರಣಗಳಲ್ಲಿ ಅಧಿಕ ಕೇಸ್ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ತುಂಬಿಸಿದಕ್ಕೆ 643 ಕೇಸ್ ಹಾಗೂ ಟ್ರಾಫಿಕ್ ರೂಲ್ಸ್ ಉಲ್ಲಂಘನೆಗೆ 316 ಕೇಸ್ ಫುಟ್ ಬೋರ್ಡ್ ಪ್ರಯಾಣಕ್ಕೆ 138 ಕೇಸ್ ಗಳನ್ನು ದಾಖಲಿಸಿಕೊಳ್ಳಲಾಗಿದೆ. ಬಸ್ ಮಾಲಕರ ಸಭೆ ಕರೆದು ಎಚ್ಚರಿಕೆ ನೀಡಿದ ಬಳಿಕವೂ ನಿಯಮ ಉಲ್ಲಂಘನೆ ಮಾಡುವುದು ನಿಲ್ಲದ ಕಾರಣ ಮುಂದಿನ ದಿನಗಳಲ್ಲಿ ಬಸ್‌ಗಳ ಮೇಲೆ ಬಿಎನ್‌ಎಸ್ ಕಾಯ್ದೆ ಕಲಂ 281 ರ ಜೊತೆಗೆ ಸಂಚಾರ ನಿಯಮ ಉಲ್ಲಂಘನೆಯ ಕುರಿತು ಎಫ್ಐಆರ್ ದಾಖಲಿಸಿ ನ್ಯಾಯಾಲಯಕ್ಕೆ ನಿವೇದಿಸುವುದಾಗಿ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page