Connect with us

DAKSHINA KANNADA

ಮಂಗಳೂರು: ಗೂಡ್ಸ್ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ 23 ಜಾನುವಾರುಗಳ ದಫನ ಕಾರ್ಯ

Published

on

ಮಂಗಳೂರಿನ ಜೋಕಟ್ಟೆ ಅಂಗರಗುಂಡಿ ಬಳಿ ಗೂಡ್ಸ್ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ 23 ಜಾನುವಾರುಗಳ ದಫನ ಕಾರ್ಯ ಪೂರ್ಣಗೊಳಿಸಿದ್ದು, ಮಂಗಳೂರು ನಗರ ಪಾಲಿಕೆ ಅಧಿಕಾರಿಗಳ ಅಸಡ್ಡೆ ನೀತಿಯನ್ನು ಸ್ಥಳೀಯ ಸಾಮಾಜಿಕ ಸೇವಾ ಸಂಘಟನೆ ಕಾರ್ಯಕರ್ತರು ಖಂಡಿಸಿದ್ದಾರೆ.

ಮಂಗಳೂರು: ಮಂಗಳೂರಿನ ಜೋಕಟ್ಟೆ ಅಂಗರಗುಂಡಿ ಬಳಿ ಗೂಡ್ಸ್ ರೈಲು ಡಿಕ್ಕಿ ಹೊಡೆದು ಸಾವನ್ನಪ್ಪಿದ 23 ಜಾನುವಾರುಗಳ ದಫನ ಕಾರ್ಯ ಪೂರ್ಣಗೊಳಿಸಿದ್ದು, ಮಂಗಳೂರು ನಗರ ಪಾಲಿಕೆ ಅಧಿಕಾರಿಗಳ ಅಸಡ್ಡೆ ನೀತಿಯನ್ನು ಸ್ಥಳೀಯ ಸಾಮಾಜಿಕ ಸೇವಾ ಸಂಘಟನೆ ಕಾರ್ಯಕರ್ತರು ಖಂಡಿಸಿದ್ದಾರೆ.

ರೈಲು ಡಿಕ್ಕಿ ಹೊಡೆದು ಇಷ್ಟೊಂದು ಜಾನುವಾರುಗಳು ಅಮಾನುಷವಾಗಿ ಸಾವನ್ನಪ್ಪಿದ್ದರೂ ಮಂಗಳೂರು ನಗರ ಪಾಲಿಕೆ ಅಧಿಕಾರಿಗಳಾಗಲೀ, ರೈಲ್ವೆ ಇಲಾಖೆ ಅಧಿಕಾರಿಗಳಾಗಲೀ ತಕ್ಷಣ ಆಗಮಿಸಿ ಅದನ್ನು ವಿಲೇವಾರಿ ಮಾಡಲು ಮುಂದಾಗಿಲ್ಲ.

ಸಾರ್ವಜನಿಕರು ಪ್ರತಿಭಟನೆ ನಡೆಸಿದ್ದು, ಕೊನೆಗೆ ರೈಲ್ವೇ ಅಧಿಕಾರಿಗಳು ಆಗಮಿಸಬೇಕೆಂದು ಪಟ್ಟು ಹಿಡಿದಾಗ ಸ್ಥಳಕ್ಕೆ ಭೇಟಿ ನೀಡಿದ ಪಾಲಕ್ಕಾಡ್‌ ರೈಲ್ವೇ ಇಲಾಖೆ ಇನ್‌ಸ್ಪೆಕ್ಟರ್‌, ಸ್ಥಳೀಯ ಅಧಿಕಾರಿಗಳಿಗೆ ಘೇರಾವ್‌ ಹಾಕಿದ್ದಾರೆ.

ಈ ಸಂದರ್ಭ ಮಾತನಾಡಿದ ಸಾಮಾಜಿಕ ಹೋರಾಟಗಾರ ಬಿ ಕೆ ಇಮ್ತಿಯಾಝ್‌ ಅವರು, ಯುವಕರ ಮೂಲಕ ನಾವೇ ಮೃತ ಜಾನುವಾರುಗಳ ಮೇಲೆತ್ತಿ ವಿಲೇವಾರಿಗೆ ಮುಂದಾಗಿದ್ದೇವೆ.

ಒಂದೊಂದು ಎಮ್ಮೆ 400 ಕೇಜಿ ಭಾರ ಇದ್ದು, ಅದನ್ನು ಕೊಂಡು ಹೋಗುವುದೇ ಭಾರೀ ಕಷ್ಟಕರವಾಗಿತ್ತು.

23 ಜಾನುವಾರುಗಳನ್ನು ಯುವಕರೇ ಮುಂದೆ ನಿಂತು ವಿಲೇವಾರಿ ಮಾಡಿದ್ದಾರೆ ಎಂದರು.

ರೈಲ್ವೇ ಇಲಾಖಾಧಿಕಾರಿ ಸಂಜಯ್ ಪಾನಿಕ್ಕರ್ ಸಾರ್ವಜನಿಕರ ಅಹವಾಲು ಸ್ವೀಕರಿಸಿದ್ದಾರೆ.

ನಮ್ಮ ಕಾರ್ಯಾಚರಣೆಗೆ ಪೊಲೀಸರು ಕೂಡಾ ಸಹಕಾರ ನೀಡಿದ್ದಾರೆ ಎಂದರು.

DAKSHINA KANNADA

ಗುಂಡ್ಯದಲ್ಲಿ ಮತ್ತೆ ಕೆಎಸ್ಆರ್ಟಿಸಿ ಬಸ್ಸು ಮತ್ತು ಲಾರಿ ಅಪಘಾತ

Published

on

ಕೆಎಸ್‌ಆರ್‌ಟಿಸಿ ಅಶ್ವಮೇಧ ಬಸ್ಸು ಹಾಗೂ ಸರಕು ಸಾಗಣೆ ಲಾರಿಯ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಮೇ 20 ಮಂಗಳವಾರ ಬೆಳಿಗ್ಗೆ ಜಾವ ನಡೆದಿದೆ.

ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಲಿ ಅಥವಾ ಪ್ರಾಣಹಾನಿಯಾಗಲಿ ಸಂಭವಿಸಿಲ್ಲ ಎಂದು ವರದಿಯಾಗಿದೆ. ಈ ಘಟನೆಯಿಂದ ಹೆದ್ದಾರಿಯಲ್ಲಿ ಕೆಲಹೊತ್ತು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.

ಆತಂಕಕಾರಿ ಸಂಗತಿಯೆಂದರೆ ಎರಡು ದಿನಗಳ ಹಿಂದೆಯಷ್ಟೇ (ಮೇ.18) ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಈ ಘಟನೆಯಲ್ಲಿ ಎರಡೂ ವಾಹನಗಳ ಚಾಲಕರು ಸೇರಿ ನಾಲ್ವರು ವ್ಯಕ್ತಿಗಳು ಗಾಯಗೊಂಡ ಘಟನೆ ನಡೆದಿತ್ತು. ಇದೀಗ ಅದೇ ಜಾಗದಲ್ಲಿ ಮತ್ತೆ ಅಪಘಾತ ಸಂಭವಿಸಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮಳೆಯ ಆರ್ಭಟ; ಮಂಗಳೂರು ನಿವಾಸಿ ಸಹಿತ ಇಬ್ಬರ ಸಾವು

ಈ 2 ಅಪಘಾತಗಳು ಸಾರ್ವಜನಿಕರಲ್ಲಿ ತೀವ್ರ ಕಳವಳ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ, ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮಗಳನ್ನು ಹೆಚ್ಚಿಸುವುದರ ಜೊತೆಗೆ, ಚಾಲಕರಿಗೆ ಸೂಕ್ತ ತರಬೇತಿ ಮತ್ತು ಎಚ್ಚರಿಕೆ ನೀಡುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

Continue Reading

DAKSHINA KANNADA

ಉಳ್ಳಾಲ: ತಾನು ಕಲಿತ ಶಾಲೆಯಲ್ಲೇ ನೇಣುಹಾಕಿಕೊಂಡು ಯುವಕ ಆತ್ಮಹ*ತ್ಯೆ

Published

on

ಉಳ್ಳಾಲ: ಯುವಕನೋರ್ವ ತಾನು ಕಲಿತ ಶಾಲೆಯಲ್ಲೇ ನೇಣು ಬಿಗಿದು ಆತ್ಮಹ*ತ್ಯೆಗೆ ಶರಣಾದ ಘಟನೆ ಕುರ್ನಾಡು ದತ್ತಾತ್ರೇಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಮೇ 19ರಂದು ನಡೆದಿದೆ.

ಕುರ್ನಾಡು ಹೂವಿನಕೊಪ್ಪಲ ನಿವಾಸಿ ಸುಧೀರ್ (32) ಆತ್ಮಹತ್ಯೆ ಮಾಡಿಕೊಂಡ ಯುವಕ.

ವೃತ್ತಿಯಲ್ಲಿ ಪೇಂಟರ್‌ ಆಗಿದ್ದ ಸುಧೀರ್, ನಸುಕಿನ ಜಾವ ಬೈಕ್‌ನಲ್ಲಿ ಹಾಲು ತರಲು ಮನೆಯಿಂದ ತೆರಳಿದ್ದರು. ತಡವಾದರೂ ಮಗ ಬಾರದ ಕಾರಣ ಅವರ ತಾಯಿ ಸುಧೀರ್ ಅವರನ್ನು ಹುಡುಕಿಕೊಂಡು ಹೋದಾಗ ಮನೆಯ ಸಮೀಪದ ಶಾಲೆಯ ಹೊರಗಡೆ ಬೈಕ್ ಕೀ ಸಮೇತ ಪತ್ತೆಯಾಗಿತ್ತು.

ಬಳಿಕ ಶಾಲೆಯೊಳಗೆ ಗಮನಿಸುವಾಗ ಸುಧೀರ್ ಅವರು ಶಾಲೆಯ ಮಹಡಿಗೆ ನೇಣು ಹಾಕಿಕೊಂಡು ಆತ್ಮಹ*ತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ.

ಇದನ್ನೂ ಓದಿ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹ*ತ್ಯೆ

ಅವಿವಾಹಿತರಾಗಿದ್ದ ಸುಧೀರ್ ಅವರ ಸಹೋದರಿಯ ಪತಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅವರಿಗೆ ತನ್ನ ಕಿಡ್ನಿ ದಾನ ಮಾಡುವಂತೆ ಹಾಗೂ ಮೇ 29ರಂದು ನಿಗದಿಯಾಗಿರುವ ಸಹೋದರನ ವಿವಾಹವನ್ನು ನಿಲ್ಲಿಸದಂತೆ ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.

ಘಟನೆ ಸಂಬಂಧ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

Continue Reading

DAKSHINA KANNADA

ಬೆಂಗಳೂರಿನಲ್ಲಿ ಮಳೆಯ ಆರ್ಭಟ; ಮಂಗಳೂರು ನಿವಾಸಿ ಸಹಿತ ಇಬ್ಬರ ಸಾವು

Published

on

ಬೆಂಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ನಿನ್ನೆಯ ದಿನ (ಮೇ.19) ಗೋಡೆ ಕುಸಿದು ಓರ್ವ ಮಹಿಳೆ ಮೃತಪಟ್ಟಿದ್ದಳು. ಇದೀಗ ಭಾರೀ ಮಳೆಗೆ ಮತ್ತಿಬ್ಬರು ಬಲಿಯಾದ ಘಟನೆ ಸಿಲಿಕಾಸ್ ಸಿಟಿಯ ಬಿಟಿಎಂ ಲೇಔಟ್‌ನ ಎರಡನೇ ಹಂತದ ಎನ್.ಎಸ್ ಪಾಳ್ಯದಲ್ಲಿ ನಡೆದಿದೆ.

ಮನಮೋಹನ್ ಕಾಮತ್ (63), ದಿನೇಶ್ (12) ಮೃತಪಟ್ಟವರು ಎಂದು ತಿಳಿದು ಬಂದಿದೆ. ಮಂಗಳೂರು ಮೂಲದ ಮನಮೋಹನ್ ಕಾಮತ್ ಹಾಗೂ ನೇಪಾಳ ಮೂಲದ ಭರತ್ ಅವರು ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದರು. ಭಾರೀ ಮಳೆಗೆ ಅಪಾರ್ಟ್‌ಮೆಂಟ್‌ ಬೇಸ್‌ಮೆಂಟ್‌ನಲ್ಲಿ ನೀರು ತುಂಬಿತ್ತು. ನಿನ್ನೆ ಸಂಜೆ 6.30ಕ್ಕೆ ಇಬ್ಬರು ಮೋಟಾರ್ ಮೂಲಕ ಮಳೆ ನೀರು ತೆರವು ಮಾಡಲು ಹೋಗಿದ್ದರು.

ಇದನ್ನೂ ಓದಿ: ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ಮೇಲೆ ಜೈಲಲ್ಲೇ ಹಲ್ಲೆ

ಮೋಟಾರ್ ಮೂಲಕ ಮಳೆ ನೀರು ತೆರವು ಮಾಡುವಾಗ ಎಲೆಕ್ಟ್ರಿಕ್ ಶಾಕ್ ಹೊಡೆದು ಮನಮೋಹನ್ ಕಾಮತ್ ಮತ್ತು ದಿನೇಶ್ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಮೈಕೋ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಾರ್ಟ್‌ಮೆಂಟ್‌ ನಲ್ಲಿ ಪವರ್ ಕಟ್ ಮಾಡಲಾಗಿದ್ದು, ಬ್ಯಾರಿಕೇಡ್ ಕೂಡ ಹಾಕಲಾಗಿದೆ. ಇಬ್ಬರ ಮೃತದೇಹವನ್ನು ಸೆಂಟ್ ಜಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page