Connect with us

DAKSHINA KANNADA

ಶಾರದಾ ವಿದ್ಯಾಲಯದ ‘ಹೊನಲು ಬೆಳಕಿನ ಕ್ರೀಡೋತ್ಸವ’ಕ್ಕೆ ಅದ್ದೂರಿ ತೆರೆ

Published

on

ಮಂಗಳೂರು: ಶಾರದಾ ವಿದ್ಯಾಸಂಸ್ಥೆಯಲ್ಲಿ ಅಚ್ಚುಕಟ್ಟು ವ್ಯವಸ್ಥೆಯೊಂದಿಗೆ ಧರ್ಮ ಪಾಲನೆ- ಸಂಸ್ಕೃತಿ ರಕ್ಷಣೆ, ದೇಸಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಮೂಲಕ ಮಕ್ಕಳಲ್ಲಿ ಜಾಗೃತಿ, ದೇಶಾಭಿಮಾನ ಮೂಡಿಸುವ ಕೆಲಸ ನಡೆಯುತ್ತಿರುವುದು ಅಭಿನಂದನಾರ್ಹ ಎಂದು ಮೈಸೂರು ರಾಜವಂಶಸ್ಥ ಹಾಗೂ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು.

ನಗರದ ಕೊಡಿಯಾಲ್‌ಬೈಲ್‌ ಶಾರದಾ ವಿದ್ಯಾಲಯದ ಭೂವರಾಹ ಬಯಲು ಸಭಾಂಗಣದಲ್ಲಿ ಭಾನುವಾರ ಶಾರದಾ ಸಮೂಹ ಸಂಸ್ಥೆಗಳ ‘ಹೊನಲು ಬೆಳಕಿನ ಕ್ರೀಡೋತ್ಸವ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಒಲಂಪಿಕ್‌ ಕ್ರೀಡಾಕೂಟವನ್ನು ಭಾರತದಲ್ಲೇ ನಡೆಸುವ ಸುಯೋಗ ಒದಗಿಬರಲಿ’ ಎಂದ ಯದುವೀರ್‌ ಒಡೆಯರ್‌

ಪ್ರಧಾನಿ ನರೇಂದ್ರ ಮೋದಿ ಅವರು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಉಂಟುಮಾಡಿದ್ದರೂ ಇಂದಿಗೂ ಅನೇಕ ಕಡೆಗಳಲ್ಲಿ ಶಿಕ್ಷಣ ಕ್ಷೇತ್ರ ಮೂಲಸೌಕರ್ಯ ಕೊರತೆಯನ್ನು ಎದುರಿಸುತ್ತಿದೆ. ಕೇಂದ್ರ ಸರ್ಕಾರ ಕ್ರೀಡೆಗೆ ಸರ್ವ ಪ್ರೋತ್ಸಾಹ ನೀಡುತ್ತಿದೆ. ಒಲಿಂಪಿಕ್ಸ್‌ನಲ್ಲಿ ಇನ್ನಷ್ಟು ಪದಕಗಳನ್ನು ಗೆಲ್ಲುವುದರೊಂದಿಗೆ ವಿಶ್ವ ಮಟ್ಟದಲ್ಲಿ ಭಾರತ ಇನ್ನಷ್ಟು ಮುಂದುವರಿಯಬೇಕಿದೆ. ನಮ್ಮ ದೇಶದಲ್ಲಿ ಕಾಮನ್‌ವೆಲ್ತ್‌ ಕ್ರೀಡೆ ಆಯೋಜನೆಗೆ ಈಗಾಗಲೇ ಸಿದ್ಧತೆ ನಡೆಯುತ್ತಿದ್ದು, ಮುಂದೆ ಒಲಂಪಿಕ್‌ ಕ್ರೀಡಾಕೂಟವನ್ನು ಭಾರತದಲ್ಲೇ ನಡೆಸುವ ಸುಯೋಗ ಒದಗಿಬರಲಿ ಎಂದು ಆಶಿಸಿದರು.

ಪ್ರಸ್ತುತ ಆರೋಗ್ಯ ಸಮಸ್ಯೆಗಳಿಗೆ ವ್ಯಾಯಾಮ ರಹಿತ ಜೀವನ ಶೈಲಿಯೇ ಮುಖ್ಯ ಕಾರಣ. ಎಳೆ ವಯಸ್ಸಿನಲ್ಲೇ ಕ್ರೀಡೆಯತ್ತ ಮಕ್ಕಳ ಮನಸ್ಸನ್ನು ಸೆಳೆದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೊಡುಗೆ ನೀಡಬೇಕು ಎಂದು ಯದುವೀರ್ ಕರೆ ನೀಡಿದರು. ರಾಜ್ಯದ ಪರಂಪರೆಗೆ ಮೈಸೂರು ಹೃದಯವಾದರೆ, ಕರಾವಳಿ ಬೆನ್ನೆಲುಬು ಇದ್ದಂತೆ. ಕರಾವಳಿಯಲ್ಲಿ ರಾಜ್ಯದ ಪರಂಪರೆಯ ರಕ್ಷಣೆಯ ಕಾರ್ಯ ನಡೆಯುತ್ತಿದೆ. ನಮ್ಮ ಶಕ್ತಿ ಮೀರಿ ನಾವು ಕೆಲಸ ಮಾಡಿದರೆ ಅದು ರಾಷ್ಟ್ರಕ್ಕೆ ದೊಡ್ಡ ಕೊಡುಗೆಯಾಗಲಿದೆ. ಈ ನಿಟ್ಟಿನಲ್ಲಿ ಎಲ್ಲರೂ ಕಾರ್ಯೋನ್ಮುಖರಾಗಬೇಕು ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾರದಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ.ಎಂ.ಬಿ. ಪುರಾಣಿಕ್‌ ಮಾತನಾಡಿ, ಈ ಕ್ರೀಡೋತ್ಸವದಲ್ಲಿ 2 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಹಿಸಿ ಪ್ರತಿಭೆ ಪ್ರದರ್ಶಿಸುತ್ತಿದ್ದಾರೆ. ಶಾರದಾ ವಿದ್ಯಾಲಯ ಆರಂಭವಾಗಿ 33 ವರ್ಷಗಳು ಸಂದಿದ್ದು, ಮೆಕಾಲೆ ಶಿಕ್ಷಣ ಪದ್ಧತಿಗೆ ಪರ್ಯಾಯವಾಗಿ ಭಾರತೀಯ ಜೀವನ ಮೌಲ್ಯ, ಸಂಸ್ಕಾರಗಳನ್ನು, ಭಾರತೀಯ ಚಿಂತನೆಗಳಿಗೆ ಅವಕಾಶ ಕೊಡುವ ಕೆಲಸ ಮಾಡಲಾಗುತ್ತಿದೆ. ಶಾರದಾ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ 8 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ ಎಂದು ತಿಳಿಸಿದರು.

ಇದೇ ಸಂದರ್ಭ ಶಾರದಾ ಸಮೂಹ ಸಂಸ್ಥೆ ವತಿಯಿಂದ ಯದುವೀರ್‌ ಅವರಿಗೆ ಆರತಿ ಬೆಳಗಿ ಗೌರವಾರ್ಪಣೆ ಸಲ್ಲಿಸಲಾಯಿತು. ಶಾಲೆಯ ವಿದ್ಯಾರ್ಥಿನಿ ಚಿನ್ಮಯಿ ರಚಿಸಿದ ಕಲಾಕೃತಿಯನ್ನು ಕೊಡುಗೆಯಾಗಿ ನೀಡಲಾಯಿತು.

ಶಾಸಕರಾದ ವೇದವ್ಯಾಸ ಕಾಮತ್‌, ಹರೀಶ್‌ ಪೂಂಜ, ಕಬಡ್ಡಿ ಕ್ರೀಡಾಪಟು ಧನಲಕ್ಷ್ಮೀ ಪೂಜಾರಿ, ಉದ್ಯಮಿ ನಾಗಾರ್ಜುನ್‌, ಶಾರದಾ ವಿದ್ಯಾಸಂಸ್ಥೆಗಳ ನಿರ್ದೇಶಕ ಹಾಗೂ ಟ್ರಸ್ಟಿ ಸಮೀರ್‌ ಪುರಾಣಿಕ್‌, ಕರ್ಣಾಟಕ ಬ್ಯಾಂಕ್‌ ಆಡಳಿತ ನಿರ್ದೇಶಕ ಹಾಗೂ ಸಿಇಒ ರಾಘವೇಂದ್ರ ಭಟ್‌, ಸುನಂದಾ ಪುರಾಣಿಕ್, ಕರ್ನಾಟಕ ಹೈಕೋರ್ಟ್‌ನ ವಕೀಲ ಅರುಣ್ ಶ್ಯಾಮ್, ಪ್ರಮುಖರಾದ ಪ್ರದೀಪ್ ಕುಮಾರ ಕಲ್ಕೂರ, ರಘುನಾಥ ಸೋಮಯಾಜಿ, ಸುಧಾಕರ ರಾವ್ ಪೇಜಾವರ, ಪ್ರೊ. ಲೀಲಾ ಉಪಾಧ್ಯಾಯ, ಸೀತಾರಾಮ ಭಟ್, ಪ್ರಕಾಶ್ ಇಳಂತಿಲ, ಪ್ರಾಂಶುಪಾಲರಾದ ಪ್ರಕಾಶ್ ನಾಯಕ್, ದಯಾನಂದ ಕಟೀಲ್, ಸತ್ಯ ನಾರಾಯಣ ಭಟ್ ವಿದ್ಯಾ ಭಾರತಿಯ ಹಿರಿಯರಾದ ವಸಂತ ಮಾಧವ ಮತ್ತಿತರರು ಉಪಸ್ಥಿತರಿದ್ದರು. ರಮೇಶ್ ಆಚಾರ್ಯ ನೇತೃತ್ವದ ತಂಡ ಕಾರ್ಯಕ್ರಮ ನಿರೂಪಿಸಿತು.

ಮೆರವಣಿಗೆ ಮೂಲಕ ಯದುವೀರ್‌ ಒಡೆಯರ್‌ಗೆ ಭವ್ಯ ಸ್ವಾಗತ
ಕಾರ್ಯಕ್ರಮಕ್ಕೂ ಮೊದಲು ನವಭಾರತ ವೃತ್ತ ಬಳಿಯಿಂದ ಆಕರ್ಷಕ ಮೆರವಣಿಗೆ ಮೂಲಕ ಯದುವೀರ್‌ ಅವರನ್ನು ಕರೆತರಲಾಯಿತು.
ನಮ್ಮ ಪೂರ್ವಜರು ಧರ್ಮ ಪಾಲನೆ ಮಾಡುತ್ತಿದ್ದುದರಿಂದ ಉತ್ತಮ ಕೆಲಸ ಕಾರ್ಯಗಳನ್ನು ಅವರು ಮಾಡುವಂತಾಯಿತು. ರಾಜಪ್ರಭುತ್ವ ಈಗ ಇಲ್ಲದಿದ್ದರೂ ಅವರೆಲ್ಲರ ಹೆಸರು ಶಾಶ್ವತವಾಗಿರಲು ಧರ್ಮ ಪಾಲನೆಯೇ ಮುಖ್ಯ ಕಾರಣ. ಭಾರತೀಯ ಶಿಕ್ಷಣ ವ್ಯವಸ್ಥೆಯಲ್ಲಿ ಧರ್ಮದ ತತ್ವಗಳನ್ನು ಅಳವಡಿಸುವ ಕಾರ್ಯ ಆಗಬೇಕಿದೆ. ಪ್ರಸ್ತುತ ಶಿಕ್ಷಣ ವ್ಯವಸ್ಥೆಯಲ್ಲಿ ಧರ್ಮದ ತತ್ವಗಳನ್ನು ಅಳವಡಿಸುವ ಸವಾಲು ದೊಡ್ಡದಿದ್ದರೂ, ಆ ಕಾರ್ಯ ಆಗಲೇಬೇಕಾದ ಅನಿವಾರ್ಯತೆಯಿದೆ ಎಂದು ಯದುವೀರ್ ಪ್ರತಿಪಾದಿಸಿದರು.

ಕ್ರೀಡೋತ್ಸವದಲ್ಲಿ ಕಮಾಲ್ ಮಾಡಿದ ವಿದ್ಯಾರ್ಥಿ- ವಿದ್ಯಾರ್ಥಿನಿಯರು
ಶಾರದಾ ವಿದ್ಯಾಲಯದ ಹೊನಲು ಬೆಳಕಿನ ಕ್ರೀಡೋತ್ಸವದಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಪ್ರದರ್ಶಿಸಿದ ಮಲ್ಲಕಂಬ ಕಸರತ್ತು, ಸಮೂಹ ನೃತ್ಯ, ಸಮೂಹ ಗಾಯನ, ಸ್ಕೌಟ್ಸ್‌ ಗೈಡ್ಸ್‌, ತಾಲೀಮು ಪ್ರದರ್ಶನ ಇತ್ಯಾದಿ ನೋಡುಗರ ಮನಸೂರೆಗೊಳಿಸಿತು. ಸುಮಾರು ನಾಲ್ಕು ಗಂಟೆಗಳ ಕಾಲ ನಡೆದ ದೈಹಿಕ ಕಸರತ್ತುಗಳು ವೀಕ್ಷಕರನ್ನು ರೋಮಾಂಚನಗೊಳಿಸಿತು. ಬೆಂಕಿಯೊಂದಿಗಿನ ಸರಸದ ಆಟಗಳು, ಸಾಹಸ ಪ್ರದರ್ಶನಗಳು ವಿದ್ಯಾರ್ಥಿಗಳ ಕಲಾ ನೈಪುಣ್ಯತೆಗೆ ಸಾಕ್ಷಿಯಾದವು. ಗ್ರಾಮೀಣ ವಿದ್ಯಾರ್ಥಿಗಳಿಗೆ ಕಡಿಮೆ ಇಲ್ಲದಂತೆ ನಗರದ ಮಕ್ಕಳು ತಮ್ಮ ಸಾಮರ್ಥ್ಯ ಪ್ರದರ್ಶಿಸಿದರು.

DAKSHINA KANNADA

ಡಾ. ಬಿ. ವಿ. ಮಂಜುನಾಥ್ ಅವರಿಗೆ FRCP (ಗ್ಲಾಸ್ಗೋ–ಯುಕೆ) ಪ್ರಶಸ್ತಿ

Published

on

ಮಂಗಳೂರು : ಯುನೈಟೆಡ್ ಕಿಂಗ್ಡಮ್‌ನ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್ ಅಂಡ್ ಸರ್ಜನ್ಸ್ ಆಫ್ ಗ್ಲಾಸ್ಗೋ ಸಂಸ್ಥೆಯು ಹೃದಯರೋಗ ಕ್ಷೇತ್ರದಲ್ಲಿ ವಿಶಿಷ್ಟ ವೈದ್ಯಕೀಯ ಮತ್ತು ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ, ಕಾರ್ಡಿಯಾಲಜಿ ವಿಭಾಗದ ಪ್ರಾಧ್ಯಾಪಕ,  ಮುಖ್ಯಸ್ಥರ ಹಾಗೂ ಮುಖ್ಯ ಇಂಟರ್ವೆನ್ಶನಲ್ ಕಾರ್ಡಿಯಾಲಜಿಸ್ಟ್ ಆಗಿರುವ ಡಾ. ಬಿ. ವಿ. ಮಂಜುನಾಥ್ ಅವರಿಗೆ ಅತ್ಯಂತ ಗೌರವಾನ್ವಿತ “ಆನರರಿ FRCP” (ಫೆಲೋ ಆಫ್ ರಾಯಲ್ ಕಾಲೇಜ್ ಆಫ್ ಫಿಸಿಷಿಯನ್ಸ್) ಪ್ರಶಸ್ತಿಯನ್ನು ಪ್ರದಾನಿಸಿದೆ.

ಡಾ. ಮಂಜುನಾಥ್ ಅವರಿಗೆ 36 ವರ್ಷಗಳಿಗಿಂತ ಹೆಚ್ಚು ಹೃದಯರೋಗ ಚಿಕಿತ್ಸಾ ಅನುಭವವಿದ್ದು, ಅನೇಕ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಂಶೋಧನಾ ಲೇಖನಗಳು ಮತ್ತು ಪ್ರಸ್ತುತಿಗಳು, ಪಿಎಚ್‌ಡಿ ಮಾರ್ಗದರ್ಶಕರಾಗಿ ಹಾಗೂ ವಿಶ್ವವಿದ್ಯಾಲಯದ ಪರೀಕ್ಷಕರಾಗಿ ಸೇವೆ, ಮತ್ತು ಅನೇಕ ಪದವಿ, ಸ್ನಾತಕೋತ್ತರ ಹಾಗೂ ಡಿಎಂ ಕಾರ್ಡಿಯಾಲಜಿ ಫೆಲೋಶಿಪ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ಶ್ರೇಷ್ಠ ಸೇವೆ ಸಲ್ಲಿಸಿದ್ದಾರೆ. ಇದಲ್ಲದೆ, ಅವರು ಹೃದಯ ಕ್ಯಾಥ್ ಲ್ಯಾಬ್‌ನಲ್ಲಿ ಅನೇಕ ಸಂಕೀರ್ಣ ಇಂಟರ್ವೆನ್ಶನಲ್ ಪ್ರಕ್ರಿಯೆಗಳನ್ನು ಯಶಸ್ವಿಯಾಗಿ ನಡೆಸಿದ್ದಾರೆ.

ಆನರರಿ FRCP ಪದವಿ ಪರೀಕ್ಷಾಧಾರಿತ ಪದವಿಯಿಂದ ಭಿನ್ನವಾಗಿದ್ದು, ಇದು ಅನುಭವಿ ವೈದ್ಯರಿಗೆ ನೀಡಲಾಗುವ ಅತ್ಯಂತ ಅಪರೂಪದ ಹಾಗೂ ಗೌರವಾನ್ವಿತ ಅಂತಾರಾಷ್ಟ್ರೀಯ ಫೆಲೋಶಿಪ್ ಆಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ವೈದ್ಯಕೀಯ, ಶೈಕ್ಷಣಿಕ ಮತ್ತು ಸಂಶೋಧನಾ ಕ್ಷೇತ್ರಗಳಿಗೆ ಮಹತ್ವದ ಕೊಡುಗೆ ನೀಡಿದವರಿಗೆ ಈ ಗೌರವ ಲಭಿಸುತ್ತದೆ ಮತ್ತು ಇದು ಅಂತಾರಾಷ್ಟ್ರೀಯ ಮಟ್ಟದ ಸಹೋದ್ಯೋಗಿ ಮಾನ್ಯತೆಯನ್ನು ನೀಡುತ್ತದೆ.

ಇದನ್ನೂ ಓದಿ : ಅಂತ್ಯ ಅಲ್ಲ….ಇದು ಹೊಸ ಆರಂಭ..ಧ್ರುವಂತ್ ಗೆಟಪ್ ಚೇಂಜ್

ಈ ಗೌರವವನ್ನು ವಿಶ್ವದಾದ್ಯಂತ ಆಯ್ಕೆಯಾದ ಕೆಲವೇ ವೈದ್ಯರಿಗೆ (ವಾರ್ಷಿಕವಾಗಿ ಗರಿಷ್ಠ 15 ಜನರಿಗೆ ಮಾತ್ರ) ರಾಯಲ್ ಕಾಲೇಜ್ ಸದಸ್ಯರ ಮತದಾನದ ಮೂಲಕ ಪ್ರದಾನಿಸಲಾಗುತ್ತದೆ.

 

Continue Reading

DAKSHINA KANNADA

ಸಜೀಪ ಮೂಡ ವಲಯ  ಕಾಂಗ್ರೆಸ್ ಸಮಿತಿ :  ನೂತನ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ

Published

on

ಬಂಟ್ವಾಳ : ಪಾಣೆಮಂಗಳೂರು  ಬ್ಲಾಕ್ ಕಾಂಗ್ರೆಸ್ ಸಮಿತಿಯ ಸಜೀಪಮೂಡ ವಲಯ  ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆಯವರನ್ನು ನೇಮಕ ಮಾಡಲಾಗಿದೆ.

ಮಾಜಿ ಸಚಿವ ಬಿ.ರಮಾನಾಥ ರೈ ಶಿಫಾರಸ್ಸಿನ ಮೇರೆಗೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಚಂದ್ರಶೇಖರ ಭಂಡಾರಿ ನೇಮಕಾತಿ ಆದೇಶ ಪತ್ರವನ್ನು ನೀಡಿದರು.

ಇದನ್ನೂ ಓದಿ : ಅಂತ್ಯ ಅಲ್ಲ….ಇದು ಹೊಸ ಆರಂಭ..ಧ್ರುವಂತ್ ಗೆಟಪ್ ಚೇಂಜ್

ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಅಸಂಘಟಿತ  ಕಾರ್ಮಿಕ ಘಟಕದ ಅಧ್ಯಕ್ಷ ಅಬ್ಬಾಸ್ ಆಲಿ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್ ಹಾಗೂ ಸಜೀಪ ಮೂಡ ವಲಯ ಕಾಂಗ್ರೆಸ್‌ನ ಅಧ್ಯಕ್ಷ ಎನ್.ಕರೀಂ  ಉಪಸ್ಥಿತರಿದ್ದರು.

Continue Reading

DAKSHINA KANNADA

ಮಂಗಳೂರಿಗೆ ಮೊದಲ ‘ಅಮೃತ್ ಭಾರತ್ ಎಕ್ಸ್ ಪ್ರೆಸ್’ ರೈಲು; ಎಲ್ಲಿಂದ ಎಲ್ಲಿಗೆ?

Published

on

ಮಂಗಳೂರು: ತಮಿಳುನಾಡಿನ ನಾಗರಕೋಯಿಲ್ ನಿಂದ ಮಂಗಳೂರಿಗೆ ‘ಅಮೃತ್ ಭಾರತ್ ಎಕ್ಸ್ ಪ್ರೆಸ್’ ಆರಂಭಿಸಲು ರೈಲ್ವೇ ಇಲಾಖೆ ಚಿಂತನೆ ನಡೆಸಿದೆ.

ಈ ರೈಲು ಆರಂಭಗೊಂಡರೆ ಮಂಗಳೂರಿಗೆ ಮೊದಲ ಅಮೃತ ಭಾರತ್ ಎಕ್ಸ್ ಪ್ರೆಸ್ ಲಭ್ಯವಾಗಲಿದೆ ಮತ್ತು ಇದು ತಮಿಳುನಾಡು, ಕೇರಳ ಮತ್ತು ಕರ್ನಾಟಕ ನಡುವಿನ ರೈಲು ಸಂಪರ್ಕವನ್ನು ಮತ್ತಷ್ಟು ಬಲಗೊಳಿಸಲಿದೆ.

ಈ ಪ್ರಸ್ತಾವಿತ ರೈಲಿನ ಸೇವೆಯನ್ನು ಮಂಗಳೂರು ತನಕ ಮಾತ್ರ ಸೀಮಿತಗೊಳಿಸಿದೆ, ಸುಬ್ರಹ್ಮಣ್ಯ ರೋಡ್ ಅಥವಾ ಕಬಕ ಪುತ್ತೂರು ತನಕ ವಿಸ್ತರಿಸಬೇಕೆಂಬ ಬೇಡಿಕೆ ವ್ಯಕ್ತವಾಗಿದೆ. ಈ ರೈಲು ಸುಬ್ರಹ್ಮಣ್ಯ ತನಕ ಓಡಿಸಿದರೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ತೆರಳುವ ಭಕ್ತರಿಗೆ ಪ್ರಯೋಜನವಾಗಲಿದೆ.

ಪ್ರಸ್ತುತ ಸುಬ್ರಹ್ಮಣ್ಯದಿಂದ ತಿರುವನಂತಪುರ ಮತ್ತು ದಕ್ಷಿಣ ಕೇರಳದ ಕಡೆಗೆ ಯಾವುದೇ ನೇರ ರೈಲು ಸಂಪರ್ಕವಿಲ್ಲ. ಕೇರಳ ಭಾಗಕ್ಕೆ ಬೆಂಗಳೂರು- ಕಣ್ಣೂರು ರೈಲು ಮಾತ್ರವೇ ಸುಬ್ರಹ್ಮಣ್ಯ ರೋಡ್ ಮೂಲಕ ಸಂಚರಿಸುತ್ತಿದೆ.

ಇದನ್ನೂ ಓದಿ: ಬಿಗ್‌ ಬಾಸ್‌ ಫಿನಾಲೆ ವೀಕ್‌ನಲ್ಲಿ ಸ್ಪರ್ಧಿಯಿಂದ ಇದೆಂತಾ ನಿರ್ಧಾರ; ಸಹಸ್ಪರ್ಧಿಗಳಿಗೆ ಬಿಗ್‌ ಶಾಕ್..!

ಹಾಗಾಗಿ ನಾಗರಕೋಯಿಲ್- ಮಂಗಳೂರು ಅಮೃತ್ ಭಾರತ್‌ಎಕ್ಸ್‌ಪ್ರೆಸ್ ರೈಲನ್ನು ಸುಬ್ರಹ್ಮಣ್ಯ ರೋಡ್ ತನಕ ವಿಸ್ತರಿಸ ಬೇಕು. ಈ ಬಗ್ಗೆ ಕೇಂದ್ರ ರೈಲ್ವೇ ಸಚಿವರು, ಸಂಸದರ ಗಮನ ಸೆಳೆಯಲಾಗಿದೆ ಎಂದು ರೈಲ್ವೆ ಬಳಕೆದಾರರ ಸಂಘದವರು ಮಾಹಿತಿ ನೀಡಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page