Connect with us

DAKSHINA KANNADA

ಮಂಗಳೂರು ಜ್ಯುವೆಲ್ಲರ್ಸ್‌ ಸಿಬ್ಬಂದಿ ಕೊಲೆ ಪ್ರಕರಣ: ಕ್ಲೂ ಕೊಟ್ಟ ಬ್ಯಾಗ್‌-ಕಿಲ್ಲರ್‌ನ ಹಿಸ್ಟರಿ ಬಿಚ್ಚಿಟ್ಟ ಕಮೀಷನರ್‌..!

Published

on

ಮಂಗಳೂರು: ತಿಂಗಳ ಹಿಂದೆ ಮಂಗಳೂರು ನಗರದ ಚಿನ್ನಾಭರಣ ಅಂಗಡಿಯ ಸಿಬ್ಬಂದಿಯ ಕೊಲೆ ಪ್ರಕರಣದ ಆರೋಪಿಯನ್ನು ಕೇರಳ ಪೊಲೀಸರ ಸಹಾಯದಿಂದ ಬಂಧಿಸಿದ್ದೇವೆ ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಕುಲದೀಪ್ ಕುಮಾರ್‌ ಜೈನ್‌ ತಿಳಿಸಿದ್ದಾರೆ.


ನಗರದ ಪೊಲೀಸ್‌ ಆಯಕ್ತರ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಫೆ.3 ರಂದು ಮಂಗಳೂರು ಜ್ಯುವೆಲರ್ಸ್ ಹೆಸರಿನ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ರಾಘವೇಂದ್ರ ಆಚಾರ್ಯ ಎಂಬುವರನ್ನು ಅಪರಿಚಿತ ವ್ಯಕ್ತಿಯೊಬ್ಬರು ಹತ್ಯೆ ಮಾಡಿ, ಪರಾರಿಯಾಗಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿದ ಪೊಲೀಸರು ಕೊಚ್ಚಿ ಮೂಲದ ಶಿಫಾಝ್‌(31)ನನ್ನು ಕಾಸರಗೋಡು ಜಿಲ್ಲಾ ಪೊಲೀಸರ ಸಹಕಾರದಿಂದ ಬಂಧಿಸಿದ್ದಾರೆ.

ಕೊಲೆಗೈದು ನಡೆದುಕೊಂಡೇ ಹೋಗಿದ್ದ ಆರೋಪಿ
ಆರೋಪಿ ಶಿಫಾಝ್‌ ಮಂಗಳೂರು ಜ್ಯುವೆಲರ್ಸ್ ಅಂಗಡಿ ಸಿಬ್ಬಂದಿ ರಾಘವೇಂದ್ರ ಆಚಾರ್ಯನನ್ನು ಕೊಲೆಗೈದು ಒಂದಷ್ಟು ದೂರ ನಡೆದುಕೊಂಡೇ ಹೋಗಿ ಅಲ್ಲಿಂದ ರಿಕ್ಷಾ ಬಳಸಿ ನಗರದ ಹೊರವಲಯಕ್ಕೆ ತಲುಪಿ ಬಸ್‌ ಮೂಲಕ ಕಾಸರಗೋಡಿಗೆ ಹೋಗಿದ್ದನು.

ಕಾಸರಗೋಡಿನಿಂದ ರೈಲಿನ ಮೂಲಕ ಕೊಚ್ಚಿಗೆ ಕಾಲ್ಕಿತ್ತಿದ್ದನು ಎಂದು ಪೊಲೀಸ್‌ ತನಿಖೆ ವೇಳೆ ಬಯಲಾಗಿದೆ. ಸದ್ಯ ಈ ಬಂಧಿತ ಆರೋಪಿಯ ವಿರುದ್ದ ಪ್ರಕರಣಗಳು ದಾಖಲಾದ ಬಗ್ಗೆ ಮಾಹಿತಿಯಿಲ್ಲ. ಇದೀಗ ಈ ಬಗ್ಗೆ ನೆರೆರಾಜ್ಯ ಹಾಗೂ ಉಳಿದ ಜಿಲ್ಲೆಯ ಪೊಲೀಸರಿಗೆ ಮಾಹಿತಿ ನೀಡಲಾಗಿದೆ.

ಮಧ್ಯಾಹ್ನದ ವೇಳೆ ಒಂಟಿ ಸಿಬ್ಬಂದಿಯಿದ್ದ ಅಂಗಡಿಗಳೇ ಈತನ ಟಾರ್ಗೆಟ್‌
ಆರೋಪಿ ಶಿಫಾಝ್‌ ಮಧ್ಯಾಹ್ನದ ವೇಳೆಯಲ್ಲಿ ಅತ್ಯಂತ ವಿರಳ ಗ್ರಾಹಕರಿರುವ ಜ್ಯುವೆಲ್ಲರಿ ಶಾಪ್‌ಗಳನ್ನು ಟಾರ್ಗೆಟ್‌ ಮಾಡುತ್ತಿದ್ದ.

ಇದೇ ವೇಳೆ ಒಬ್ಬರೇ ಸಿಬ್ಬಂದಿ ಇರುವ ಶಾಪ್‌ಗಳನ್ನು ನೋಡಿಕೊಂಡು ಗ್ರಾಹಕನ ಸೋಗಿನಲ್ಲಿ ಅಂಗಡಿಯೊಳಗೆ ನುಗ್ಗುತ್ತಿದ್ದ. ಅದರಂತೆ ಫೆ.3 ರಂದು ರಾಘವೇಂದ್ರ ಅವರು ಒಬ್ಬಂಟಿಯಾಗಿದ್ದನ್ನು ಖಾತ್ರಿ ಮಾಡಿಕೊಂಡಿದ್ದ ಆರೋಪಿ ಜ್ಯುವೆಲ್ಲರಿ ಒಳಗೆ ಹೋಗಿದ್ದ.

ಅಲ್ಲಿ ಸ್ವಲ್ಪ ಹೊತ್ತು ಗ್ರಾಹಕನಂತೆ ವರ್ತಿಸಿ ರಾಘವೇಂದ್ರ ಅವರು ಬೆನ್ನು ಹಾಕಿ ಒಳಹೋಗುತ್ತಿದ್ದಂತೆ ಅವರನ್ನು ಚಾಕು ಮೂಲಕ ಬೆದರಿಸಿ ಚಿನ್ನಾಭರಣ ಎಗರಿಸಲು ಮುಂದಾಗಿದ್ದಾನೆ. ಅಷ್ಟರದಲ್ಲಿ ಹೊರಗಿನಿಂದ ಜ್ಯುವೆಲ್ಲರಿ ಮಾಲಕ ಒಳಗೆ ಬರುತ್ತಿರುವುದನ್ನು ಕಂಡು ರಾಘವೇಂದ್ರ ಅವರನ್ನು ಕೊಲೆಗೈದು ನಿಮಿಷಗಳಲ್ಲಿ ಪರಾರಿಯಾಗಿದ್ದಾನೆ.

ಕ್ಲೂ ಕೊಟ್ಟ ಬ್ಯಾಗ್‌
ಕೊಲೆ ಪ್ರಕರಣ ಬಯಲಾಗುತ್ತಿದ್ದಂತೆ ತನಿಖೆಗಿಳಿದ ಪೊಲೀಸರು ಸಿಸಿಟಿವಿಯ ಆಧಾರದಲ್ಲಿ ಆರೋಪಿಯ ಚಹರೆಯನ್ನು ಪತ್ತೆ ಹಚ್ಚಿದ್ದರು. ಈ ಫೋಟೋವನ್ನು ಕಾಸರಗೋಡು ಜಿಲ್ಲೆ ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಛಾಯಾಚಿತ್ರದ ಭಿತ್ತಿಪತ್ರ ಹಚ್ಚಿದ್ದರು.

ಇದರ ಆಧಾರದಲ್ಲಿ ಕೇರಳ ಪೊಲೀಸರು ಕಾಸರಗೋಡು ಪೇಟೆಯಲ್ಲಿ ಇದೇ ಬ್ಯಾಗ್‌ ಹಾಕಿ ತಿರುಗಾಡುತ್ತಿದ್ದ ಹಾಗೂ ಭಿತ್ತಿಪತ್ರದಲ್ಲಿರುವ ಚಹರೆಯನ್ನು ಹೋಲುವಂತಹ ಆರೋಪಿಯ ವಿಚಾರಣೆಗೊಳಪಡಿಸಿದಾಗ ಕೊಲೆ ಕೃತ್ಯ ಬಯಲಾಗಿದೆ.

ಮೂರು ಪದರದ ಬಟ್ಟೆ ಹಾಕುತ್ತಿದ್ದ ಶಿಫಾಝ್‌
ಆರೋಪಿಯ ಯಾವಾಗಲೂ ಮೂರು ಪದರದ ವಸ್ತ್ರಗಳನ್ನು ಧರಿಸುತ್ತಿದ್ದ. ಕಾರಣ ಯಾವುದೇ ಕೊಲೆ ಕೃತ್ಯ ಸಂದರ್ಭ ರಕ್ತದ ಕಲೆಗಳು ಆದಾಗ ತಕ್ಷಣ ಬಟ್ಟೆ ಬದಲಿಸಲು ಹಾಗೂ ಕೃತ್ಯ ನಡೆಸಿ ಪರಾರಿಯಾಗುವ ವೇಳೆ ತನ್ನ ಗುರುತು ಸಿಗಬಾರದೆಂದು ಬೇರೆ ಬೇರೆ ಬಣ್ಣದ ಮೂರು ಬಟ್ಟೆಗಳನ್ನು ಒಂದರ ಮೇಲೊಂದರಂತೆ ಧರಿಸುತ್ತಿದ್ದ ಎಂಬ ಅಂಶ ತನಿಖೆ ವೇಳೆ ಬಯಲಾಗಿದೆ. ಜೊತೆಗೆ ಕಾಸರಗೋಡು ಪೊಲೀಸರು ಬಂಧಿಸುವ ವೇಳೆಯೂ ಆತ ಮೂರು ಪದರ ವಸ್ತ್ರ ಧರಿಸಿ ದರೋಡೆಗೆ ಹೊಂಚು ಹಾಕಿದ್ದ ಎಂದು ತನಿಖೆಯಲ್ಲಿ ಬಾಯಿಬಿಟ್ಟಿದ್ದಾನೆ.

ಆರೋಪಿ ಕೈಯಲ್ಲಿತ್ತು ಆಟಿಕೆ ಪಿಸ್ತೂಲ್‌
ಆರೋಪಿ ಶಿಫಾಝ್‌ ಕೊಲೆ ಕೃತ್ಯಕ್ಕೆ ಆಟಿಕೆ ಪಿಸ್ತೂಲ್‌ ಹಾಗೂ ಪೆಪ್ಪರ್‌ ಸ್ಪ್ರೇ ಬಳಸುತ್ತಿದ್ದ ಎಂಬ ಅಂಶವೂ ವಿಚಾರಣೆ ವೇಳೆ ಬಯಲಾಗಿದೆ.

ಮಂಗಳೂರಿನಲ್ಲೇ ಎಂಜನಿಯರಿಂಗ್‌ ಮಾಡಿದ್ದ ಆರೋಪಿ
ಶಿಫಾಯ್‌ ಮಂಗಳೂರು ಹೊರವಲಯದ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್‌ ಮಾಡಿದ್ದ, ತದನಂತರ ವಿದೇಶಕ್ಕೆ ತೆರಳಿ ಅಲ್ಲೇ ಉದ್ಯೋಗ ಮಾಡಿ ಮತ್ತೆ ಊರಿಗೆ ವಾಪಾಸಾಗಿದ್ದ ಎಂದು ತನಿಖೆ ವೇಳೆ ತಿಳಿದು ಬಂದಿದೆ.

ಕೇರಳ ಪೊಲೀಸರಿಗೆ ಪ್ರಶಂಸನಾ ಪತ್ರದ ಮೂಲಕ ಗೌರವಿಸಿದ ಮಂಗಳೂರು ನಗರ ಪೊಲೀಸ್‌

ಈ ಪ್ರಕರಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕೇರಳ ಪೊಲೀಸ್‌ ಸಿಬ್ಬಂದಿಗೆ ಪ್ರಶಂಸನಾ ಪತ್ರ ನೀಡಿ ಮಂಗಳೂರು ನಗರ ಪೊಲೀಸ್‌ ಆಯುಕ್ತ ಗೌರವಿಸಿದ್ದಾರೆ. ಜೊತೆಗೆ ಈ ತನಿಖೆಯಲ್ಲಿ ಭಾಗವಹಿಸಿದ್ದ ಮಂಗಳೂರು ನಗರ ಪೊಲೀಸರಿಗೆ 25 ಸಾವಿರ ರೂ ನಗದು ಬಹುಮಾನ ಘೋಷಿಸಿದರು. ಈ ಪ್ರಕರಣದ ತನಿಖೆಗಾಗಿ 8 ತಂಡಗಳನ್ನು ರಚಿಸಿದ್ದರು.

Advertisement
Click to comment

Leave a Reply

Your email address will not be published. Required fields are marked *

DAKSHINA KANNADA

ಮಂಗಳೂರು: ವಿಚ್ಛೇದನಕ್ಕೆ ಬಂದ ಎರಡು ಜೋಡಿಗಳು-ಸಂಧಾನ ಮಾಡಿ ಒಂದಾಗಿಸಿದ ಲೋಕ್ ಅದಾಲತ್

Published

on

ಮಂಗಳೂರು: ವಿಚ್ಛೇದನಕ್ಕೆ ಮುಂದಾಗಿದ್ದ ಎರಡು ಜೋಡಿಗಳು ಮತ್ತೆ ಒಂದಾದ ವಿಶೇಷ ಹಾಗೂ ಹೃದಯಸ್ಪರ್ಶಿ ವಿದ್ಯಮಾನಕ್ಕೆ ಶನಿವಾರ ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ನಡೆದ ಲೋಕ ಅದಾಲತ್ ಬೈಠಕ್‌ ಸಾಕ್ಷಿಯಾಯಿತು.

ಈ ಎರಡು ಜೋಡಿಗಳ ದಾಂಪತ್ಯ ಜೀವನದಲ್ಲಿ ಯಾವುದೋ ಕಾರಣಕ್ಕೆ ಮನಸ್ತಾಪ ಉಂಟಾಗಿದ್ದ ಕಾರಣ ದಂಪತಿಗಳು ವಿಚ್ಛೇದನ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಬಳಿಕ ವಿಚಾರಣೆ ವೇಳೆ ಈ ಪ್ರಕರಣವನ್ನು ನ್ಯಾಯಾಲಯದ ಮಧ್ಯಸ್ಥಿಕೆ ಕೇಂದ್ರದ ಮೂಲಕ ಸರಿಪಡಿಸಲು ಪ್ರಯತ್ನ ನಡೆಯಿತು. ಪತಿ ಮತ್ತು ಪತ್ನಿಯ ಮಧ್ಯೆ ಸಂಧಾನ ಏರ್ಪಡಿಸಿ ಮತ್ತೆ ಒಂದುಗೂಡಿ ದಾಂಪತ್ಯ ಜೀವನ ಮುಂದುವರಿಸುವ ಬಗ್ಗೆ ಉಭಯೇತರರಿಗೂ ಮನವರಿಕೆ ಮಾಡಲಾಗಿತ್ತು.

ಸಂಧಾನದ ವೇಳೆ ದಂಪತಿಗಳು ಮತ್ತೆ ಒಂದುಗೂಡಿ ಜೀವನ ಮುಂದುವರಿಸಲು ಒಪ್ಪಿದ್ದರು. ಅದರಂತೆ ಶನಿವಾರ ಲೋಕ ಅದಾಲತ್ ಗೆ ಆಗಮಿಸಿದ್ದ ಎರಡೂ ಜೋಡಿಗಳು ಕೌಟುಂಬಿಕ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾದ ಲಕ್ಷ್ಮೀ ನಾರಾಯಣ ಭಟ್‌ ಕೆ.  ಅವರ ಸಮಕ್ಷಮದಲ್ಲಿ ಪರಸ್ಪರ ಹಾರ ಬದಲಾಯಿಸುವ ಮುಖೇನ  ಒಂದಾಗುವ ಮೂಲಕ ಪ್ರಕರಣ ಸುಖಾಂತ್ಯ ಕಂಡಿತು.

ಈ ಸಂದರ್ಭದಲ್ಲಿ ಹಿರಿಯ ಸಿವಿಲ್‌ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ, ವಿವಿಧ ನ್ಯಾಯಾಲಯಗಳ ನ್ಯಾಯಾಧೀಶರು ಮತ್ತು ವಕೀಲರು ಉಪಸ್ಥಿತರಿದ್ದು, ಈ ಅಪೂರ್ವ ಕ್ಷಣಕ್ಕೆ ಸಾಕ್ಷಿಯಾದರು.  ಲೋಕ ಅದಾಲತ್ ಅಧಿವೇಶನದಲ್ಲಿ ಭಾಗವಹಿಸಿದ್ದ ಎರಡೂ ಜೋಡಿಗಳು ಮತ್ತೆ ಒಂದಾಗುವ ಮೂಲಕ ತಮ್ಮ ವಿಚ್ಛೇದನದ ಹೋರಾಟವನ್ನು ಕೊನೆಗೊಳಿಸಿದ ಈ ವಿದ್ಯಮಾನ ಮಾದರಿಯಾಗಿದೆ ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಜೈಬುನ್ನೀಸಾ ಅವರು ತಿಳಿಸಿದ್ದಾರೆ.

Continue Reading

DAKSHINA KANNADA

ಕರಾವಳಿಯಲ್ಲಿ ‘ಸಿಲ್ವರ್ ವುಡ್’ ಮರಗಳ ಹೊಸ ಪ್ರಯೋಗ!

Published

on

ಪುತ್ತೂರು: ಕೊಡಗು ಮತ್ತು ಚಿಕ್ಕಮಗಳೂರಿನಂತಹ ತಂಪಾದ ಹವಾಗುಣದಲ್ಲಿ ಬೆಳೆಯುವ ಸಿಲ್ವರ್ ವುಡ್ ಮರಗಳನ್ನು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಬೆಳೆಸಲು ನಡೆಸಿದ ಮೊದಲ ಪ್ರಯತ್ನ ಯಶಸ್ವಿಯಾಗಿದೆ.


ಫ್ಲೈವುಡ್ ಮತ್ತು ಇತರ ಪೀಠೋಪಕರಣಗಳ ತಯಾರಿಕೆಗಾಗಿ ಬಳಸುವ ಈ ಮರಗಳನ್ನು ದೊಡ್ಡ ಮಟ್ಟದಲ್ಲಿ ಬೆಳೆಸಲು ಪುತ್ತೂರಿನ ಕೃಷಿಕರೊಬ್ಬರು ಮುಂದಾಗಿದ್ದು, ದಾರಂದಕುಕ್ಕ ಕಾಯರ್ತಡಿ ನಿವಾಸಿ ಅಜಿತಪ್ರಸಾದ್ ರೈ ತಮ್ಮ ಬಳಿ ಇರುವ ಸುಮರು 20 ಎಕರೆ ಕೃಷಿಭೂಮಿಯಲ್ಲಿ ಈ ಸಿಲ್ವರ್ ವುಡ್ ಬೆಳೆಯಲು ನಿರ್ಧರಿಸಿದ್ದರು.

ಉಷ್ಣಾಂಶ ಹೆಚ್ಚಾಗಿರುವ ದಕ್ಷಿಣಕನ್ನಡ ಜಿಲ್ಲೆಯ ವಾತಾವರಣದಲ್ಲಿ ಈ ಮರಗಳು ಉಳಿಯುತ್ತದೋ ಎನ್ನುವ ಪ್ರಶ್ನೆಗಳ ಮಧ್ಯೆ ಸುಮಾರು 3 ಸಾವಿರದಷ್ಟು ಸಿಲ್ವರ್ ವುಡ್ ಸಸಿಗಳನ್ನು ನಾಟಿ ಮಾಡಿದ್ದಾರೆ. ಗಿಡಗಳನ್ನು ನಾಟಿ ಮಾಡಿ ಎರಡು ವರ್ಷಗಳಾಗುತ್ತಿದ್ದಂತೆ ಉತ್ತಮ ರೀತಿಯಲ್ಲಿ ಬೆಳೆದು ನಿಂತಿವೆ.

ಇದನ್ನೂ ಓದಿ: ಮಂಗಳೂರಿನ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕಾಗಮಿಸಿದ ಆದಿ ಯೋಗಿ ರಥದ ಶಿವ ಯಾತ್ರೆ

ಜಿಲ್ಲೆಯ ಹವಾಗುಣದಲ್ಲೂ ಸಿಲ್ವರ್ ವುಡ್ ಮರಗಳನ್ನು ಬೆಳೆಸಬಹುದು ಅನ್ನೋದನ್ನ ತೋರಿಸಿಕೊಟ್ಟಿದ್ದಾರೆ. ಸಿಲ್ವರ್ ವುಡ್ ಮರದಿಂದ ಎರಡು ಆದಾಯವನ್ನು ಪಡೆದುಕೊಳ್ಳುತ್ತಿದ್ದಾರೆ. ಗಿಡ ಬೆಳೆಯುತ್ತಿದ್ದಂತೆ ಈ ಗಿಡಗಳಿಗೆ ಕಾಳುಮೆಣಸಿನ ಬಳ್ಳಿಯನ್ನು ಬಿಡುತ್ತಿದ್ದು, ಈ ಬಳ್ಳಿಗಳಿಗೆ ಈ ಗಿಡಗಳು ಉತ್ತಮ ರೀತಿಯ ಆಸರೆಯನ್ನು ನೀಡುವ ಹಿನ್ನಲೆಯಲ್ಲಿ ಕಾಳುಮೆಣಸಿನ‌ ಗಿಡಗಳಲ್ಲೂ ಉತ್ತಮ‌ ಬೆಳೆ ಪಡೆಯುತ್ತಿದ್ದಾರೆ.

ನೇರವಾಗಿ, ಎತ್ತರವಾಗಿ‌ ಬೆಳೆಯವ ಈ ಮರಕ್ಕೆ ಭಾರೀ ಬೇಡಿಕೆಯೂ ಇದೆ. ಹೆಚ್ಚಾಗಿ ಪ್ಲೈವುಡ್ ತಯಾರಿಕೆಗೆ, ಪೀಠೋಪಕರಣಗಳ ತಯಾರಿಕೆಯಲ್ಲೂ ಈ ಮರವನ್ಮು ಬಳಸುತ್ತಾರೆ. ಎಲ್ಲಾ ಸಿಲ್ವರ್ ವುಡ್ ಮರಗಳು ಹುಲುಸಾಗಿ ಬೆಳೆಯುತ್ತಿದ್ದು, ಮುಂದಿನ ಎರಡು-ಮೂರು ವರ್ಷದ ಒಳಗೆ ಕಟಾವು ಮಾಡಿದಲ್ಲಿ, ಮರದಿಂದ ಉತ್ತಮ ಆದಾಯ ಬರುವ ನಿರೀಕ್ಷೆಯಿದೆ.

Continue Reading

DAKSHINA KANNADA

ತಾವರೆ ಬೆಳೆದ ನೀರಿನ ಟ್ಯಾಂಕ್ ಗೆ ಬಿದ್ದು ಮಗು ಸಾ*ವು

Published

on

ಪುತ್ತೂರು : ಮಕ್ಕಳ ವಿಚಾರದಲ್ಲಿ ಎಷ್ಟು ಜಾಗೃತೆ ವಹಿಸಿದರೂ ಸಾಲದು. ಪುಟ್ಟ ಮಕ್ಕಳ ಬಗ್ಗೆ ಸದಾ ಕಣ್ಣಿಡುವುದು ಅತೀ ಅಗತ್ಯ. ಇಲ್ಲವಾದಲ್ಲಿ ಅನಾಹುತವೇ ಸಂಭವಿಸಬಹುದು. ಇದೀಗ ಪುತ್ತೂರಿನಲ್ಲಿ ದುರಂ*ತ ಸಂಭವಿಸಿದೆ.

ತಾವರೆ ಬೆಳೆದ ನೀರಿನ ಟ್ಯಾಂಕ್‌ಗೆ ಒಂದೂವರೆ ವರ್ಷದ ಮಗು ಬಿದ್ದು ಸಾ*ವನ್ನಪ್ಪಿದೆ. ಪುತ್ತೂರಿನ ಬನ್ನೂರು ನೀರ್ಪಾಜೆಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ : ಸುದೀಪ್ ಸಿನಿಮಾದಲ್ಲಿದ್ದಾರೆ ದಕ್ಷಿಣ ಭಾರತದ ಖ್ಯಾತ ನಟರು! ಪೋಸ್ಟರ್ ಬಿಡುಗಡೆ

ಮನೆಯಂಗಳದಲ್ಲಿ ಮಗುವಿಗೆ ಊಟ ಕೊಡುತ್ತಿದ್ದ ತಾಯಿ ಮನೆಯೊಳಗೆ ಹೋಗಿ ಬರುತ್ತಿದ್ದಂತೆ ಮಗು ನಾಪತ್ತೆಯಾಗಿದೆ. ಹುಡುಕಾಡಿದಾಗ ಮನೆಯಂಗಳದ ತಾವರೆ ನೀರಿನ ಟ್ಯಾಂಕ್‌ಗೆ ಬಿದ್ದಿರುವುದು ಗಮನಕ್ಕೆ ಬಂದಿದೆ. ತಕ್ಷಣ ಮಗುವನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಮಗು ಮೃ*ತಪಟ್ಟಿದೆ ಎಂದು ತಿಳಿದುಬಂದಿದೆ.

 

Continue Reading
Advertisement

Trending

Copyright © 2025 Namma Kudla News

You cannot copy content of this page