Connect with us

DAKSHINA KANNADA

ಮಂಗಳೂರು : ದಕ್ಷಿಣಕ್ಕೆ ಲೋಬೊ, ಉತ್ತರಕ್ಕೆ ಇನಾಯತ್ ಅಲಿ-ಪುತ್ತೂರಿಗೆ ಶಕುಂತಲಾ ಶೆಟ್ಟಿ ಫೈನಲ್..!!?

Published

on

ಕಾಂಗ್ರೆಸ್ ಎರಡು ಬಾರಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದರೂ ಪ್ರಮುಖ ಕ್ಷೇತ್ರಗಳಾದ ಮಂಗಳೂರು ದಕ್ಷಿಣ , ಮಂಗಳೂರು ಉತ್ತರ ಮತ್ತು ಪುತ್ತೂರು ವಿಧಾನ ಸಭಾ ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡದೆ ಉಳಿಸಿಕೊಂಡಿದೆ.

ಮಂಗಳೂರು : ಮುಂಬರುವ ವಿಧಾನ ಸಭಾ ಚುನಾವಣೆಗೆ ದಿನ ನಿಗದಿಯಾಗಿ ಮುಹೂರ್ತ ಹತ್ತಿರ ಬರುತ್ತಿದ್ದು ಚುನಾವಣಾ ಕಾವು ಬಿರು ಬೇಸಿಗೆಯ ಸುಡು ಬಿಸಿಲಿನ ಮಧ್ಯೆ ಏರುತ್ತಲೇ ಇದೆ.

ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ಪಕ್ಷ ಪರವಾಗಿ ಮತ ಬೇಟೆಯಲ್ಲಿ ತೊಡಗಿಕೊಂಡಿವೆಯಾದ್ರೂ ಆನೇಕ ಕಡೆಗಳಲ್ಲಿ ತಮ್ಮ ಅಭ್ಯರ್ಥಿಗಳ ಆಯ್ಕೆ ಕುರಿತು ಸ್ಪಷ್ಟ ತೀರ್ಮಾನ ಕೈಗೊಳ್ಳಲಾಗದೆ ಇನ್ನೂ ಗೊಂದಲದಲ್ಲಿವೆ,

ಇದರಲ್ಲಿ ಕರಾವಳಿ ಜಿಲ್ಲೆ ದಕ್ಷಿಣ ಕನ್ನಡ ಕೂಡ ಒಂದಾಗಿದೆ. ಬಿಜೆಪಿ ಭದ್ರ ಕೋಟೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನ ಸಭಾ ಕ್ಷೇತ್ರಗಳಲ್ಲಿ 7 ಬಿಜೆಪಿ ಶಾಸಕರು ಮತ್ತು ಒಂದು ಕ್ಷೇತ್ರ ಕಾಂಗ್ರೆಸ್ ಶಾಸಕರ ಹಿಡಿತದಲ್ಲಿವೆ.

ಆದರೆ ಈ ಬಾರಿ ಇಲ್ಲಿಯೂ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿಯೇ ಉಳಿದಿದೆ. ಜಿಲ್ಲೆಯಲ್ಲಿ ಬಿಜೆಪಿ ಇನ್ನು ಕೂಡ ಆಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ. ಕಾಂಗ್ರೆಸ್ ಪಟ್ಟಿ ನೋಡಿ ಬಿಜೆಪಿ ಮುಂದಡಿಯಿಡಲು ನಿರ್ಧರಿಸಿದೆ.

ಕಾಂಗ್ರೆಸ್ ಎರಡು ಬಾರಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದರೂ ಪ್ರಮುಖ ಕ್ಷೇತ್ರಗಳಾದ ಮಂಗಳೂರು ದಕ್ಷಿಣ , ಮಂಗಳೂರು ಉತ್ತರ ಮತ್ತು ಪುತ್ತೂರು ವಿಧಾನ ಸಭಾ ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡದೆ ಉಳಿಸಿಕೊಂಡಿದೆ.

ಜಿಲ್ಲೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಟಿಕೆಟ್‌ನ್ನು ರಕ್ಷಿತಾ ಶಿವರಾಂ ಪಡೆದಿದ್ದಾರೆ. ಬಂಟ್ವಾಳದಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಮತ್ತು ಮೂಡಬಿದ್ರೆಯಲ್ಲಿ ಮಿಥುನ್ ರೈಗೆ ಸಿಕ್ಕಿದೆ.

ಸುಳ್ಯ ಮೀಸಲು ಕ್ಷೇತ್ರದಿಂದ ಜಿ ಕೃಷ್ಣಪ್ಪ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆಯಾದ್ರೂ ಅಲ್ಲೂ ಬಂಡಾಯ ಆರಂಭವಾಗಿದೆ.

ಉಳ್ಳಾಲದಲ್ಲಿ ಹಾಲಿ ಶಾಸಕರಾಗಿದ್ದ ಯು ಟಿ ಖಾದರ್ ಮತ್ತೆ ಮಂಗಳೂರು ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿಯಾಗಿ ಘೋಷಣೆಯಾಗಿದ್ದಾರೆ.

ಮಂಗಳೂರು ಉತ್ತರದಲ್ಲಿ ಕಾಂಗ್ರೆಸ್ ಮಾಜಿ ಶಾಸಕರಾಗಿದ್ದ ಮೊಯಿದಿನ್ ಬಾವ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ,ಉದ್ಯಮಿ ಇನಾಯತ್ ಆಲಿ ಅವರ ಮಧ್ಯೆ ಸೀಟಿಗಾಗಿ ತೀವ್ರ ಪೈಪೋಟಿ ಇದ್ದು, ಇಬ್ಬರು ಕೂಡ ಪ್ರಬಲ ನಾಯಕರಾಗಿದ್ದರಿಂದ ಯಾರಿಗೆ ಟಿಕೆಟ್ ಕೊಡುವುದು ಎಂಬ ಗೊಂದಲದಲ್ಲಿದೆ ಕಾಂಗ್ರೆಸ್ ಹೈಕಮಾಂಡ್.

ಇನ್ನು ಮತ್ತೊಂದು ಪ್ರಮುಖ ಕ್ಷೇತ್ರ ಮಂಗಳೂರು ದಕ್ಷಿಣ ಕೂಡ ಇದಕ್ಕೆ ಭಿನ್ನವಾಗಿಲ್ಲ .

ಮಾಜಿ ಶಾಸಕ ಜೆ ಆರ್ ಲೋಬೊ ಮತ್ತು ಗುರು ಬೆಳದಿಂಗಳು ಸೇವಾ ಬಳಗದ ಅಧ್ಯಕ್ಷರಾದ ಯುವ ನ್ಯಾಯವಾದಿ ಪದ್ಮರಾಜ್ ಆರ್ ಅವರ ಹೆಸರುಗಳು ಮುಂಚೂಣಿಯಲ್ಲಿದ್ದು ತೀವ್ರ ಪೈಪೋಟಿ ಏರ್ಪಟ್ಟಿದೆ.

ಜೊತೆಯಲ್ಲಿ ಈ ಬಾರಿ ಪುತ್ತೂರು ಹೆಸರು ಕೂಡ ಚಾಲ್ತಿಯಲ್ಲಿದ್ದು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ, ಇತ್ತೀಚೆಗೆ ಕಾಂಗ್ರೆಸ್ ಸೇರ್ಪಡೆಗೊಂಡ ಉದ್ಯಮಿ ಅಶೋಕ್ ರೈ ಕೋಡಿಂಬಳ ಜೊತೆಗೆ ಮಾಜಿ ಬ್ಲಾಕ್ ಅಧ್ಯಕ್ಷರಾಗಿದ್ದ  ಕಳೆದ ಕೆಲ ವರ್ಷಗಳಿಂದ ಟಿಕೆಟ್ ಅಕಾಂಕ್ಷಿಯಾಗಿದ್ದ ಕಾವು ಹೇಮನಾಥ ಶೆಟ್ಟಿ ಹೆಸರುಗಳು ಚಾಲ್ತಿಯಲ್ಲಿದ್ದು ತೀವ್ರ ಲಾಭಿ ನಡೆಯುತ್ತಿದ್ದು ಒಮ್ಮತ ಮೂಡದೆ ಇದ್ದುದ್ದರಿಂದ ಕಗ್ಗಾಂಟಾಗಿದೆ.

ಈ ಬಾರಿ ರಾಜ್ಯದಲ್ಲಿ ಕಮಲವನ್ನು ಮಣಿಸಿ ಕೈ ಆಡಳಿತವನ್ನು ತರಲೇಬೇಕೆಂಬ ಮಹದಾಸೆ ಇಟ್ಟುಕೊಂಡಿರುವ ಕಾಂಗ್ರೆಸ್ ಹೈಕಮಾಂಡ್ ತೀವ್ರ ಲೆಕ್ಕಾಚಾರವನ್ನು ಇಟ್ಟುಕೊಂಡಿದ್ದು ಯಾವುದೇ ಲೋಪಗಳನ್ನು ಎಸಗದಂತೆ ಕಾರ್ಯಪ್ರವೃತ್ತವಾಗಿದೆ.

ದ.ಕ. ಜಿಲ್ಲೆಯ ಮೂರು ಪ್ರಮುಖ ಕ್ಷೇತ್ರಗಳಲ್ಲಿ ಮಂಗಳೂರು ನಗರ ದಕ್ಷಿಣದಲ್ಲಿ ಮಾಜಿ ಶಾಸಕ ಜೆ.ಆರ್.ಲೋಬೊ ಅವರಿಗೆ ಟಿಕೆಟ್ ಬಹುತೇಕ ಖಚಿತ ಎನ್ನಲಾಗುತ್ತದೆ.

ಉಳಿದಂತೆ ಉತ್ತರ ಕ್ಷೇತ್ರಕ್ಕೆ ಇನಾಯತ್ ಆಲಿ ಮತ್ತು ಪುತ್ತೂರು ಕ್ಷೇತ್ರದಲ್ಲಿ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಅವರನ್ನೇ ಕಣಕ್ಕಿಳಿಸಲು ತೀರ್ಮಾನಿಸಿದೆ ಎಂದು ಹೇಳಲಾಗಿದೆ.

DAKSHINA KANNADA

ಸ್ಕೂಟರ್‌ಗೆ ಅಡ್ಡ ಬಂದ ಕಾಡುಹಂದಿ; ರಸ್ತೆಗೆಸೆಯಲ್ಪಟ್ಟು ಹಿಂಬದಿ ಸವಾರೆ ಸಾ*ವು

Published

on

ಉಳ್ಳಾಲ : ವ್ಯಕ್ತಿಯ ಸ್ಕೂಟರ್‌ಗೆ ಕಾಡು ಹಂದಿಯೊಂದು ದಿಢೀರನೆ ಅಡ್ಡ ಬಂದ ಪರಿಣಾಮ ರಸ್ತೆಗೆಸೆಯಲ್ಪಟ್ಟು ಹಿಂಬದಿ ಸವಾರೆ ಮೃ*ತಪಟ್ಟ ಘಟನೆ ಹರೇಕಳ ಗ್ರಾಮದ ಖಂಡಿಗ ಎಂಬಲ್ಲಿ ಸಂಭವಿಸಿದೆ. ಹರೇಕಳ ಗ್ರಾಮದ ಪೊಲ್ಕೆ ಮೇಗಿನಮನೆ ನಿವಾಸಿ ದೇವಕಿ ಮಾಣೈ(72) ಮೃತ ಹಿಂಬದಿ ಸವಾರೆ.

ಶನಿವಾರ ರಾತ್ರಿ(ಮಾ.15) ವರದರಾಜ್ ಮಾಣೈ ತನ್ನ ತಾಯಿ ದೇವಕಿ ಮಾಣೈ ಅವರ ಜೊತೆ ಬಜಾಲಿನ ಸಂಬಂಧಿಕರ ಮನೆಯಿಂದ ಸ್ಕೂಟರಲ್ಲಿ ಅಡ್ಯಾರು-ಪಾವೂರು ಮಾರ್ಗವಾಗಿ ಹರೇಕಳದ ಮನೆಗೆ ಮರಳುತ್ತಿದ್ದರು. ಈ  ವೇಳೆ ದಾರಿ ಮಧ್ಯೆ ಖಂಡಿಗ ಎಂಬಲ್ಲಿನ ಹಳೇ ಪಂಚಾಯತ್ ಕಚೇರಿ ಕಟ್ಟಡದ ಬಳಿಯ ಗುಡ್ಡಕಾಡು ಪ್ರದೇಶದಿಂದ ಕಾಡು ಹಂದಿಯೊಂದು ದಿಢೀರನೆ ರಸ್ತೆ ಕಡೆ ಧಾವಿಸಿದೆ.

ಈ ವೇಳೆ ಸ್ಕೂಟರ್ ಚಲಾಯಿಸುತ್ತಿದ್ದ ವರದರಾಜ್ ಅವರು ವಿಚಲಿತರಾಗಿ ಹಠಾತ್ತನೆ ಬ್ರೇಕ್ ಹಾಕಿದ ಪರಿಣಾಮ ತಾಯಿ ಮತ್ತು ಮಗ ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡ ದೇವಕಿ ಅವರಿಗೆ ಹರೇಕಳದ ಕ್ಲಿನಿಕ್ ಒಂದರಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾ*ವನ್ನಪ್ಪಿದ್ದಾರೆ.

ಇದನ್ನೂ ಓದಿ  : ಒಂದೇ ವಾರದಲ್ಲಿ ಶನಿಗ್ರಹದ 124 ಹೊಸ ಉಪಗ್ರಹ ಪತ್ತೆ; ಮಾ.23 ರಂದು ನಡೆಯಲಿದೆ ವಿಸ್ಮಯ

ಮೃತ ದೇವಕಿ ಅವರ ಪತಿ ಭೋಜ ಮಾಣೈ ಅವರು ಕಳೆದ ಆರು ತಿಂಗಳ ಹಿಂದಷ್ಟೇ ಅಲ್ಪ ಕಾಲದ ಅನಾರೋಗ್ಯದಿಂದ ಮೃ*ತಪಟ್ಟಿದ್ದರು. ದೇವಕಿ ಅವರು ಓರ್ವ ಪುತ್ರ, ಇಬ್ಬರು ಪುತ್ರಿಯರು ಮತ್ತು ಮೊಮ್ಮಕ್ಕಳನ್ನ ಅಗಲಿದ್ದಾರೆ.

ಘಟನೆ ಕುರಿತು ದೇವಕಿ ಮಾಣೈ ಅವರ ಅಳಿಯ(ಮಗಳ ಗಂಡ) ರವೀಂದ್ರ ಭಂಡಾರಿ ನೀಡಿದ ದೂರಿನಂತೆ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Continue Reading

DAKSHINA KANNADA

ಮಲೀನವಾದ ನೇತ್ರಾವತಿಯ ಸ್ವಚ್ಚತಾ ಕಾರ್ಯ..! ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ನೇತೃತ್ವ..!

Published

on

ಬೆಳ್ತಂಗಡಿ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ಉಜಿರೆ, ರೋಟರಿ ಕ್ಲಬ್ ಬೆಳ್ತಂಗಡಿ, ಶ್ರೀ ಧ.ಮಂ. ಕಾಲೇಜು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಶ್ರೀ ಧ.ಮಂ. ಸ್ಪೋಟ್ಸ್ ಕ್ಲಬ್ ಉಜಿರೆ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ (ರಿ.) ಬೆಳ್ತಂಗಡಿ ಇದರ ನೇತೃತ್ವದಲ್ಲಿ ಬೆಳ್ತಂಗಡಿ ತಾಲೂಕು ಆರಕ್ಷಕ ಠಾಣ ಸಿಬ್ಬಂದಿಗಳ ಉಪಸ್ಥಿತಿಯಲ್ಲಿ ಸುಮಾರು 650 ಮಂದಿಯಿಂದ ‘ವಂದೇ ಮಾತರಂ’ ನನ್ನ ಸೇವೆಗಾಗಿ.. ನೇತ್ರಾವತಿ ನದಿ ಸಂವತ್ಸರ ಕಾರ್ಯಕ್ರಮ ಮಾ.16ರಂದು ಧರ್ಮಸ್ಥಳ ನೇತ್ರಾವತಿ ಸ್ನಾನ ಘಟ್ಟದಲ್ಲಿ ಆರಂಭಗೊಂಡಿತು.


ಬೆಳ್ತಂಗಡಿ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ದೀಪ ಬೆಳಗಿಸಿ ಧರ್ಮಸ್ಥಳದ ನೇತ್ರಾವತಿ ನದಿ ಪ್ರವಾಹ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ನೇತ್ರಾವತಿ ಪುಣ್ಯ ನದಿಯಲ್ಲಿ ತಮ್ಮ ಪಾಪವನ್ನು ಕಳೆಯಲು ಸ್ನಾನ ಮಾಡುತ್ತಾರೆ. ಆದರೆ ಬಟ್ಟೆ ಬರೆಗಳನ್ನು ನದಿಗೆ ಎಸೆದು ಅಂಧಾನುಕರಣೆ ಮಾಡುತ್ತಾರೆ. ಇದು ಸರಿಯಲ್ಲ. ಬದುಕು ಕಟ್ಟೋಣ ಬನ್ನಿ ತಂಡ ಕಾಯ೯ಕ್ರಮ ಸಮಾಜಕ್ಕೆ ಮಾದರಿ ಹೇಳಿದರು.

ಉಜಿರೆಯ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ (ರಿ) ನ ಅಧ್ಯಕ್ಷ. ಕೆ. ಧನಂಜಯ ರಾವ್ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕ ಬಿ.ಜಿ. ಸುಬ್ಬಾಪುರ ಮಠ, ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಅರ್ಜುನ್, ಧರ್ಮಸ್ಥಳ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಕಿಶೋರ್ ಪಿ. ವೇಣೂರು ಪೊಲೀಸ್ ಠಾಣೆಯ ಉಪ ನಿರೀಕ್ಷಕಿ ಶೈಲಾ ಡಿ. ಮುರುಗೋಡು, ಬೆಳ್ತಂಗಡಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ, ಏಣಿಂಜೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಉಜಿರೆಯ ಎಸ್.ಡಿ.ಎಂ. ಕ್ರೀಡಾ ಸಂಘದ ಕಾರ್ಯದರ್ಶಿ ರಮೇಶ್ ಕೆ. ಭಾಗವಹಿಸಿ ಶುಭ ಕೋರಿದರು. ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ಉದ್ದೇಶಗಳನ್ನು ಪ್ರಕಟಿಸಿದರು.

ಉಜಿರೆ ಶ್ರೀ ಧ.ಮಂ. ಕಾಲೇಜಿನ ರಾ.ಸೇ.ಯೋ. ಘಟಕದ ಯೋಜನಾಧಿಕಾರಿ ಡಾ. ಮಹೇಶ್ ಕುಮಾರ್ ಶೆಟ್ಟಿ ಹೆಚ್. ಸ್ವಾಗತಿಸಿದರು. ಎಸ್.ಕೆ.ಡಿ.ಆರ್.ಡಿ.ಪಿ. ಯೋಜನಾಧಿಕಾರಿ ತಿಮ್ಮಯ್ಯ ನಾಯ್ಕ ಕಾರ್ಯಕ್ರಮ ನಿರೂಪಿಸಿದರು. ರೋಟರಿ ಕ್ಲಬ್ ಕಾರ್ಯದರ್ಶಿ ಸಂದೇಶ್ ವಂದಿಸಿದರು.

Continue Reading

DAKSHINA KANNADA

ಓವರ್ ಟೇಕ್ ಮಾಡುವ ಭರದಲ್ಲಿ ಒಮ್ನಿಗೆ ಗುದ್ದಿದ ಬೈಕ್ ; ಸಹೋದರರಿಬ್ಬರು ಗಂಭೀರ

Published

on

ಉಳ್ಳಾಲ : ಬೈಕ್ ಸವಾರನ ನಿರ್ಲಕ್ಷ್ಯ ಚಾಲನೆ ಉಳ್ಳಾಲ ತಾಲೂಕಿನ ಹರೆಕಳ ಸಮೀಪದ ಬಾವಲಿಗುಳಿ ಎಂಬಲ್ಲಿ ಭೀಕರ ಅಪಘಾತದಲ್ಲಿ ಸಹೋದರರಿಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಈ ಭೀಕರ ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು, ಎದ್ದು ಕಂಡಿದೆ. ನಿಧಾನವಾಗಿ ಹೋಗುತ್ತಿದ್ದ ಅಂಬ್ಯುಲೆನ್ಸ್ ಒಂದನ್ನು ತಿರುವಿನಲ್ಲಿ ಬೈಕ್ ಸವಾರ ಓವರ್ ಟೇಕ್ ಮಾಡಿದ್ದಾನೆ. ಈ ವೇಳೆ ಎದುರಿನಿಂದ ಮಾರುತಿ ಒಮ್ನಿ ವಾಹನ ಬಂದಿದ್ದು, ಅದನ್ನು ತಪ್ಪಿಸಲು ರಸ್ತೆಯ ಬದಿಗೆ ಬೈಕ್ ಚಲಾಯಿಸಿದ್ದಾರೆ.

ಆದ್ರೆ ಈ ವೇಳೆ ಮಾರುತಿ ಒಮ್ನಿ ವಾಹನ ಚಾಲಕ ಕೂಡಾ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ವಾಹನವನ್ನು ರಸ್ತೆಯ ಬದಿಗೆ ಚಲಾಯಿಸಿದ್ದಾನೆ. ಈ ವೇಳೆ ಬೈಕ್ ಹಾಗೂ ಮಾರುತಿ ಓಮ್ನಿ ವಾಹನ ಮುಖಾ ಮುಖಿ ಡಿಕ್ಕಿಯಾಗಿದೆ. ಬೈಕ್ ಸವಾರ ಹಾಗೂ ಸಹ ಸವಾರನಾಗಿದ್ದ ಆತನ ಸಹೋದರ ಇಬ್ಬರೂ ಹೆಲ್ಮೆಟ್ ಕೂಡಾ ಧರಿಸಿಲ್ಲದ ಕಾರಣ ಇಬ್ಬರಿಗೂ ತೀವೃ ಸ್ವರೂಪದ ಗಾಯಗಳಾಗಿದೆ. ಅಪಘಾತ ನಡೆದ ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page