Connect with us

LATEST NEWS

ಪಂಚಭೂತಗಳಲ್ಲಿ ಲೀನರಾದ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್…..ಗಣ್ಯರಿಂದ ಅಂತಿಮ ನಮನ

Published

on

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನರಾಗಿದ್ದು ಅವರ ಅಂತ್ಯಕ್ರಿಯೆ ಇಂದು ಕದ್ರಿ ಚಿತಾಗಾರದಲ್ಲಿ ನಡೆಸಲಾಗಿದೆ. ಅನಾರೋಗ್ಯದಿಂದ ಇಹಲೋಕ ತ್ಯಜಿಸಿದ ಮನೋಹರ್ ಪ್ರಸಾದ್ ಅವರ ಸಾವಿನ ಸುದ್ದಿ ಕೇಳಿ ಹಲವಾರು ಅಭಿಮಾನಿಗಳು ಅವರ ಮನೆಗೆ ಭೇಟಿ ನೀಡಿದ್ದಾರೆ. ಶಾಸಕರು , ಸಂಸದರು, ಹಾಗೂ ಹಲವು ಗಣ್ಯರು ಆಗಮಿಸಿ ಪಾರ್ಥಿವ ಶರೀರದ ದರ್ಶನ ಪಡೆದು ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

ಅಂತಿಮ ನಮನ :
ಲೋಬೋ ಲೈನ್‌ನ ನಿವಾಸದಲ್ಲಿ ಕುಟುಂಬಸ್ಥರಿಂದ ಧಾರ್ಮಿಕ ವಿಧಿವಿಧಾನ ಮುಗಿದ ಬಳಿಕ ಮಂಗಳೂರು ಪತ್ರಿಕಾ ಭವನದಲ್ಲಿ ಮೃತರಿಗೆ ಅಂತಿಮ ಗೌರವ ಸಲ್ಲಿಸಲಾಗಿದೆ. ಜಿಲ್ಲಾ ಪತ್ರಕರ್ತ ಸಂಘ ಹಾಗೂ ಪ್ರೆಸ್‌ಕ್ಲಬ್‌ ಮತ್ತು ಪತ್ರಿಕಾ ಭವನ ಟ್ರಸ್ಟ್‌ ವತಿಯಿಂದ ಮನೋಹರ್ ಪ್ರಸಾದ್ ಅವರಿಗೆ ಭಾವಪೂರ್ಣ ಶೃದ್ಧಾಂಜಲಿ ಸಲ್ಲಿಸಲಾಗಿದೆ.

ಸ್ಪೀಕರ್ ಖಾದರ್, ಸಂಸದ ನಳೀನ್ ಕುಮಾರ್ ಕಟೀಲ್‌, ಮಾಜಿ ಶಾಸಕ ವಿನಯಕುಮಾರ್ ಸೊರಕೆ, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ ಸೇರಿದಂತೆ ಹಲವು ರಾಜಕೀಯ ನಾಯಕರು ಆಗಮಿಸಿ ಅಂತಿಮ ಗೌರವ ಸಲ್ಲಿಸಿದ್ದಾರೆ. ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಆಧ್ಯಕ್ಷ ಡಾ.ಮೋಹನ್ ಆಳ್ವಾ ಸಹಿತ ನಾಡಿನ ಹಲವು ಗಣ್ಯರು ಆಗಮಿಸಿ ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.


ನಮ್ಮ ಕುಡ್ಲ ವಾಹಿನಿಯಲ್ಲಿ ಜನಮನ ಕಾರ್ಯಕ್ರಮ ನೀಡಿ ಮನೆ ಮಾತಾಗಿದ್ದ ಮಾತುಗಾರನಿಗೆ ನಮ್ಮ ಕುಡ್ಲ ಸಂಸ್ಥೆಯ ನಿರ್ದೇಶಕ ಲೀಲಾಕ್ಷ ಕರ್ಕೇರಾ ಹಾಗೂ ಸಿಬ್ಬಂದಿ ಅಂತಿಮ ನಮನ ಸಲ್ಲಿಸಿದ್ದಾರೆ. ಪತ್ರಿಕಾ ಭವನದಲ್ಲಿ ಅಂತಿಮ ಗೌರವದ ಬಳಿಕ ಕದ್ರಿ ಚಿತಾಗಾರದಲ್ಲಿ ಸಂಪ್ರದಾಯದಂತೆ ಮೃತರ ಅಂತ್ಯಕ್ರಿಯೆ ನೆರವೇರಿಸಲಾಗಿದೆ.

ಕಣ್ಣೀರಾದ ಜನಾರ್ದನ ಪೂಜಾರಿ :


ಪತ್ರಿಕಾ ಭವನಕ್ಕೆ ಆಗಮಿಸಿದ ಜಿಲ್ಲೆಯ ಹಿರಿಯ ರಾಜಕಾರಣಿ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರು ಮನೋಹರ್ ಪ್ರಸಾದ್ ಅವರ ಅಂತಿಮ ದರ್ಶನ ಪಡೆದಿದ್ದಾರೆ. ತನ್ನ ರಾಜಕೀಯ ಜೀವನದ ಕಾಲದಲ್ಲಿ ಸಾಕಷ್ಟು ಆತ್ಮೀಯರಾಗಿದ್ದ ಮನೋಹರ್ ಪ್ರಸಾದ್ ಅವರನ್ನು ನೆನೆದು ಪೂಜಾರಿಯವರು ಕಣ್ಣೀರಿಟ್ಟಿದ್ದಾರೆ.

ವೃತ್ತಿ ಜೀವನದಲ್ಲಿ ಅಪಾರ ಸ್ನೇಹಿತರನ್ನು ಸಂಪಾದಿಸಿದ್ದ ಮನೋಹರ್ ಪ್ರಸಾದ್ ಅವರ ಅಂತಿಮ ಯಾತ್ರೆಯಲ್ಲೂ ಸಾಕಷ್ಟು ಜನ ಭಾಗವಹಿಸಿ ಗೌರವ ಸಲ್ಲಿಸಿದ್ದಾರೆ. ಈ ವೇಳೆ ಜಿಲ್ಲಾ ಪತ್ರಕರ್ತ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ, ಪ್ರೆಸ್‌ಕ್ಲಬ್‌ ಪಿ.ಬಿ. ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್‌ ರಾಮಕೃಷ್ಣ ಸೇರಿದಂತೆ ಹಲವು ಪತ್ರಕರ್ತರು ಉಪಸ್ಥಿತರಿದ್ದು, ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರಿಗೆ ಅಂತಿಮ ಗೌರವ ಸಲ್ಲಿಸಿ ಶೃದ್ಧಾಂಜಲಿ ಕೋರಿದ್ದಾರೆ.

 

 

 

 

kerala

ಇಂದಿನಿಂದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇಗುಲದ ಬ್ರಹ್ಮಕಲಶೋತ್ಸವ ಆರಂಭ

Published

on

ಕಾಸರಗೋಡು:  ಉತ್ತರ ಕೇರಳದ ಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಮೂಡಪ್ಪ ಸೇವೆಯ ಧಾರ್ಮಿಕ ಕಾರ್ಯಕ್ರಮಗಳು ಇಂದಿನಿಂದ ಆರಂಭಗೊಳ್ಳಲಿವೆ. ಕುಂಬಳೆ ಸೀಮೆಯ ದೇಗುಲದ ಬ್ರಹ್ಮಕಲಶದಲ್ಲಿ ಎ. 7ರ ವರೆಗೆ ಪ್ರತಿ ದಿನವೂ ವಿವಿಧ ವೈದಿಕ, ಧಾರ್ಮಿಕ ಸಭೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಇಂದು ಬೆಳಗ್ಗೆ 8 ರಿಂದ ಬ್ರಹ್ಮಶ್ರೀ ಡಾ| ಶಿವಪ್ರಸಾದ್ ತಂತ್ರಿ ದೇರೇಬೈಲು, ಕ್ಷೇತ್ರ ತಂತ್ರಿವರ್ಯರು ಹಾಗೂ ಋತ್ವಿಜರಿಗೆ ಪೂರ್ಣಕುಂಭ ಸ್ವಾಗತ, ವಾಸ್ತು ಶಿಲ್ಪಿ ಕೃಷ್ಣಪ್ರಸಾದ ಮುನಿಯಂಗಳ ಅವರಿಗೆ ಶಿಲ್ಪಿ ಮರ್ಯಾದೆ, ಪ್ರಾಸಾದ ಪರಿಗ್ರಹ, ಸಾಮೂಹಿಕ ಶ್ರೀ ದೇವತಾ ಪ್ರಾರ್ಥನೆ, ತೋರಣ ಪ್ರತಿಷ್ಠೆ, ಶ್ರೀ ದೇವರ ಉಗ್ರಾಣ ಮುಹೂರ್ತ, ಅನ್ನಸಂತರ್ಪಣೆಯ ಉಗ್ರಾಣ ಮುಹೂರ್ತ, ಆಚಾರ್ಯಾದಿ ಋತ್ವಿಗರಣೆ, ಬ್ರಹ್ಮಕೂರ್ಚ ಹೋಮ, ಕಂಕಣ ಬಂಧ, ಅಥರ್ವಶೀರ್ಷ ಮಹಾ ಗಣಪತಿ ಯಾಗ ನಡೆಯಲಿದೆ. ಬೆಳಗ್ಗೆ 9.30 ಮತ್ತು ಸಂಜೆ 4.30ಕ್ಕೆ ಧಾರ್ಮಿಕ ಸಭೆ ನಡೆಯಲಿದೆ. ಸಂಜೆ 5 ರಿಂದ ಸಪ್ತಶುದ್ಧಿ, ರಾಕ್ಷೆಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜೆ, ವಾಸ್ತುಬಲಿ, ಮೃತ್ತಿಕಾಹರಣ, ಅಂಕುರಾರೋಹಣ ನಡೆದಿದೆ.

 

ಇದನ್ನೂ ಓದಿ : ಕಾಸರಗೋಡು: ಕೊನೆಯ ಹಂತದಲ್ಲಿದೆ ಮಧೂರು ದೇವಾಲಯದ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಿದ್ಧತೆ

ಮೂರು ಕಡೆ ಪಾರ್ಕಿಂಗ್ ವ್ಯವಸ್ಥೆ :

ಬ್ರಹ್ಮಕಲಶೋತ್ಸವಕ್ಕೆ ಆಗಮಿಸುವ ಭಕ್ತರ ವಾಹನಗಳ ಪಾರ್ಕಿಂಗ್ ಗಾಗಿ ಮಧೂರು ಬಯಲು, ಕೊಲ್ಯ ಏರಿಕ್ಕಳ ಬಯಲು, ಚೇನಕ್ಕೋಡು ಬಯಲುಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ವಿಐಪಿ ವಾಹನಗಳಿಗೆ ಪಾಸ್ ನೀಡಲಾಗುತ್ತಿದೆ. ಬಸ್ ಸೌಕರ್ಯ ಪರಕ್ಕಿಲ ತನಕ ಮಾತ್ರ ಇದ್ದು, ಅಲ್ಲಿಂದ ಮುಂದೆ ನಡೆದುಕೊಂಡು ಹೋಗಬಹುದು. ನಡೆದು ಬರಲು ಅಶಕ್ತರಾದವರಿಗೆ ವಿಶೇಷ ವಾಹನ ಸೌಕರ್ಯ ಕಲ್ಪಿಸುವ ಆಲೋಚನೆ ಇದೆ. 1. ಕಾಸರಗೋಡು ಭಾಗದಿಂದ ಬರುವವರು ಮಧೂರು ಬಯಲಿನಲ್ಲಿ ಪಾರ್ಕಿಂಗ್ ಮಾಡಬೇಕು. 2. ಪುತ್ತೂರು, ವಿಟ್ಲ, ಬದಿಯಡ್ಕ, ಪೆರ್ಲ, ನೀರ್ಚಾಲು ಪ್ರದೇಶದಿಂದ ಬರುವವರು ಕೊಲ್ಯ ಏರಿಕ್ಕಳ ಬಯಲಿನಲ್ಲಿ 3. ಮಂಗಳೂರು, ಸುಳ್ಯ, ಕಾಂಞಂಗಾಡ್ ಮೊದಲಾದ ಪ್ರದೇಶಗಳಿಂದ ಬರುವವರಿಗೆ ಚೇನಕ್ಕೋಡ್‌ನಲ್ಲಿ ಪಾರ್ಕಿಂಗ್.

Continue Reading

DAKSHINA KANNADA

ಪುತ್ತೂರು: ರೈಲಿನಿಂದ ಜಾರಿ 25 ಅಡಿ ಆಳಕ್ಕೆ ಬಿದ್ದ ಯುವಕ

Published

on

ಪುತ್ತೂರು: ರೈಲಿನಿಂದ ಜಾರಿ ಯುವಕನೊಬ್ಬ 25 ಅಡಿ ಆಳಕ್ಕೆ ಬಿದ್ದು ಬಳಿಕ ಪವಾಡ ಸದೃಶವಾಗಿ ಬದುಕುಳಿದ ಘಟನೆ ಕಡಬದ ಸವಣೂರು ಎಂಬಲ್ಲಿ ನಡೆದಿದೆ.

ಉದಯ್ ಕುಮಾರ್ ರೈಲಿನಿಂದ ಬಿದ್ದ ಯುವಕ. ಈತ ಮಂಗಳೂರಿನಿಂದ ಬೆಂಗಳೂರು ಕಡೆಗೆ ರೈಲಿನಲ್ಲಿ ಹೊರಟಿದ್ದನು. ಆದರೆ ಬಾಗಿಲ ಬಳಿ ನಿಂತಿದ್ದರಿಂದ ಆಕಸ್ಮತ್‌ ಆಗಿ ರೈಲಿನಿಂದ 25 ಅಡಿ ಆಳಕ್ಕೆ ಜಾರಿ ಮೋರಿ ಬಳಿ ಬಿದ್ದಿದ್ದ. ರಾತ್ರಿ ವೇಳೆ ಈತ ಬಿದ್ದಿದ್ದರಿಂದ ಸಹ ಪ್ರಯಾಣಿಕರಿಗೆ ಮಾತ್ರ ತಿಳಿದಿತ್ತು.

ನಂತರ ರೈಲು ಮುಂದಿನ ನಿಲ್ದಾಣ ತಲುಪಿದಾಗ ರೈಲ್ವೇ ಮಾಸ್ಟರ್ಗೆ ವಿಷಯವನ್ನು ತಿಳಿಸಿದರು. ಆದರೆ ಯುವಕ ಎಲ್ಲಿ ಬಿದ್ದ ಎಂಬುದಾಗಿ ಯಾರಿಗೂ ತಿಳಿದಿರಲಿಲ್ಲ. ರಾತ್ರಿಯಾದ್ದರಿಂದ ಹುಡುಕಲು ಸಹ ಸಾಧ್ಯವಾಗಲಿಲ್ಲ.

ಆದರೆ ಮರುದಿನ ಬೆಳಗ್ಗೆ ಯುವಕ ಮೋರಿಯ ಬಳಿ ನರಳಾಡುವುದನ್ನು ಸ್ಥಳೀಯರು ಗಮನಿಸಿ ಕೂಡಲೇ ಆತನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವಕನ ಮುಖ ಹಾಗೂ ಕಾಲಿಗೆ ಗಂಭೀರ ಗಾಯಗಳಾಗಿವೆ. ಹೀಗೆ 15 ಗಂಟೆಯ ಬಳಿಕ ಈತ ಪತ್ತೆಯಾಗಿರುವುದು ವಿಶೇಷವೇ ಸರಿ.

Continue Reading

LATEST NEWS

ದೇಶದಲ್ಲಿ ಸಹಕಾರ ಟ್ಯಾಕ್ಸಿ ಸೇವೆ ಆರಂಭ: ಅಮಿತ್ ಶಾ ಘೋಷಣೆ

Published

on

ಮಂಗಳೂರು/ನವದೆಹಲಿ: ಓಲಾ ಮತ್ತು ಊಬರ್ ರೀತಿ ಸಹಕಾರಿ ಟ್ಯಾಕ್ಸಿಯನ್ನು ಶೀಘ್ರದಲ್ಲೇ ಆರಂಭಿಸಲಾಗುವುದು ಎಂದು ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಸಂಸತ್ತಿನಲ್ಲಿ ಹೇಳಿದ್ದಾರೆ.


ಈ ಹೊಸ ಸೇವೆಯು ಓಲಾ, ಊಬರ್ ರೀತಿಯಲ್ಲಿ ಕೆಲಸ ಮಾಡಲಿದ್ದು ಇದರ ಎಲ್ಲಾ ಬೆನಿಫಿಟ್‌ಗಳು ನೇರವಾಗಿ ಚಾಲಕರಿಗೆ ಸಿಗಲಿದೆ ಎಂದು ಅಮಿತ್‌ ಶಾ ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಟ್ಯಾಕ್ಸಿ ಚಾಲಕರಿಗಾಗಿ ರಾಷ್ಟ್ರೀಯ ಮಟ್ಟದ ಸಹಕಾರಿ ಸಂಘಟನೆಯನ್ನು ಸ್ಥಾಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಓಲಾ ಮತ್ತು ಉಬರ್‌ ನಂತಹ ರೈಡ್-ಹೇಲಿಂಗ್ ಪ್ಲಾಟ್‌ಫಾರ್ಮ್‌ಗಳ ಮಾದರಿಯನ್ನು ಅನುಸರಿಸಿ ಚಾಲಕರಿಗೆ ಉತ್ತಮ ಉದ್ಯೋಗ ಭದ್ರತೆ, ನ್ಯಾಯಯುತ ವೇತನ ಮತ್ತು ರಚನಾತ್ಮಕ ಪ್ರಯೋಜನಗಳನ್ನು ಒದಗಿಸುವ ಗುರಿಯನ್ನು ಈ ಉಪಕ್ರಮ ಹೊಂದಿದೆ.

ಜೊತೆಗೆ ಭಾರತದ ಮೊದಲ ಸಹಕಾರಿ ವಿಶ್ವವಿದ್ಯಾಲಯವನ್ನು ಶೀಘ್ರದಲ್ಲೇ ಆರಂಭಿಸುವುದಾಗಿ ಘೋಷಿಸಿದ್ದಾರೆ. ಈ ಟ್ಯಾಕ್ಸಿ ಸೇವೆಯ ಲಾಭ ನೇರವಾಗಿ ಚಾಲಕರಿಗೆ ಹೋಗುತ್ತದೆ ಎಂದು ಅಮಿತ್‌ ಶಾ ಹೇಳಿದ್ದಾರೆ. ಅಲ್ಲದೆ ಶೀಘ್ರದಲ್ಲೇ ಸಹಕಾರಿ ವಿಮಾ ಕಂಪನಿಯನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಹಾಲು ಮತ್ತು ನೀರಿನ ದರ ಏರಿಕೆ ಬಗ್ಗೆ ಇಂದು ಸಂಪುಟ ನಿರ್ಧಾರ

ಸಹಕಾರಿ ಚೌಕಟ್ಟನ್ನು ಬಳಸಿಕೊಳ್ಳುವ ಮೂಲಕ, ಈ ಸಂಸ್ಥೆಯು ಭಾರತದಾದ್ಯಂತ ಚಾಲಕರಿಗೆ ಹೆಚ್ಚಿನ ಆರ್ಥಿಕ ಸ್ಥಿರತೆ ಮತ್ತು ಕಲ್ಯಾಣವನ್ನು ಖಚಿತಪಡಿಸುತ್ತದೆ. ಸಹಕಾರಿ ವಲಯವನ್ನು ವಿವಿಧ ಅಗತ್ಯ ಸೇವೆಗಳಾಗಿ ವಿಸ್ತರಿಸುವ ಸರ್ಕಾರದ ಬದ್ದತೆಯನ್ನು ಅಮಿತ್ ಶಾ ಒತ್ತಿ ಹೇಳಿದ್ದಾರೆ. ಇದರಲ್ಲಿ ಪೆಟ್ರೋಲ್ ಪಂಪ್‌ಗಳು, ಅನಿಲ ವಿತರಣೆ, ಪಡಿತರ ಅಂಗಡಿಗಳು, ಔಷಧ ಅಂಗಡಿಗಳು, ಗೋದಾಮುಗಳು, ನೀರಿನ ನಿರ್ವಹಣೆ, ಬೀಜ ಉತ್ಪಾದನೆ ಮತ್ತು ಸಾವಯವ ಕೃಷಿಯು ಸೇರಿವೆ.

Continue Reading
Advertisement

Trending

Copyright © 2025 Namma Kudla News

You cannot copy content of this page