Connect with us

LATEST NEWS

ವಿವಿಗೆ ದೊರೆಯಿತು ಮೊದಲ ಪೇಟೆಂಟ್‌: ಕಿಲ್ಲರ್‌ ಕ್ಯಾನ್ಸರ್‌ ಮದ್ದಿಗೆ ಪೇಟೆಂಟ್‌ ಪಡೆದ ಮಂಗಳೂರು ಯುನಿವರ್ಸಿಟಿ

Published

on

ಮಂಗಳೂರು: ಹಿತ್ತಲಗಿಡವೇ ಮದ್ದು ಅಂತಾ ಮಂಗಳೂರು ವಿವಿಯ ಸಸ್ಯ ವಿಜ್ಞಾನಿಗಳು ಸಾಧಿಸಿ ತೋರಿಸಿದ್ದಾರೆ.
ಸಾಮಾನ್ಯವಾಗಿ ಅರಣ್ಯ ಪ್ರದೇಶಗಳಲ್ಲಿ, ಕೃಷಿ ತೋಟಗಳಲ್ಲಿ ಸಿಗುವ ಹಡೆ ಬಳ್ಳಿಯನ್ನು ಸಂಶೋಧನೆ ಮಾಡಿ, ಅದನ್ನು ಶುದ್ಧೀಕರಣ ಮಾಡಿ ಕ್ಯಾನ್ಸರ್​​​ಗೆ ರಾಮಬಾಣವಾಗುವ ಅಂಶವನ್ನು ಮಂಗಳೂರಿನ ವಿಜ್ಞಾನಿಗಳು ಪತ್ತೆ ಹಚ್ಚಿದ್ದಾರೆ.

ಈ ಅಂಶಕ್ಕೆ ಭಾರತ ಸರ್ಕಾರದಿಂದ ಪೇಟೆಂಟ್ ಪಡೆದಿದ್ದಾರೆ.
ಮಂಗಳೂರು ವಿವಿ ವಿಜ್ಞಾನಿಗಳು 2014-15ರಲ್ಲಿ ಮೊದಲ ಬಾರಿಗೆ ಟೆಂಟ್ರಾಡ್ರೈನ್ ಬಗ್ಗೆ ಸಂಶೋಧನೆ ಕೈಗೊಂಡಾಗ ಹಡೆಬಳ್ಳಿಯಲ್ಲಿ ಟೆಂಟ್ರಾಡ್ರೈನ್ ಅಂಶ ಇರುವುದನ್ನು ಗೊತ್ತು ಮಾಡಿದ್ದಾರೆ.

ಅಲ್ಲದೇ, ಈ ಬಳ್ಳಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಇದು ಕ್ಯಾನ್ಸರ್ ಶಮನಕಾರಿ ಎಂಬ ಮಹತ್ವದ ಅಂಶ ಬೆಳಕಿಗೆ ಬಂದಿದೆ.


2017ರಲ್ಲಿ ಪೇಟೆಂಟ್​​​ಗೆ ಸಲ್ಲಿಸಲಾಗಿದ್ದು, ಇದೀಗ 20 ವರ್ಷಗಳ ಅವಧಿಗೆ ಪೇಟೆಂಟ್ ಪ್ರಮಾಣ ಲಭಿಸಿದೆ. ಇದು ಮಂಗಳೂರು ವಿವಿಗೆ ದೊರೆತ ಮೊದಲ ಪೇಟೆಂಟ್ ಕೂಡಾ ಆಗಿದೆ. ಈ ಪ್ರಯೋಗದ ಮೂಲಕ ಸುಲಭವಾಗಿ ಬೇರೆ ಕಾಂಪ್ಲೆಕ್ಸ್ ಮಿಕ್ಸ್​​​ಚರ್​​ನಿಂದ ಬೇರ್ಪಡಿಸಲು ಸಾಧ್ಯವೇ ಎಂದು ವಿವಿ ಪ್ರಯೋಗಾಲಯದಲ್ಲಿಯೇ ಶುದ್ಧೀಕರಣ (ಪ್ಯೂರಿಟಿ) ಪರೀಕ್ಷೆ ಮಾಡಲಾಗಿದೆ.

ಇದರಲ್ಲಿ ಶೇ.98 ಶುದ್ಧೀಕರಣ ಬರುತ್ತದೆ ಎಂದು ಸಾಬೀತಾಗಿದೆ. ಮಂಗಳೂರು ವಿವಿ ಸಸ್ಯಶಾಸ್ತ್ರ ವಿಭಾಗದ ಸಂಶೋಧಕರಾಗಿದ್ದ ಪ್ರೊ.ಕೆ.ಆರ್.ಚಂದ್ರಶೇಖರ್ ಮತ್ತು ಪ್ರೊ.ಭಾಗ್ಯ ನೆಕ್ರಕಲಾಯ ಅವರ ‘A Process For The Extraction And Purification Of Tetrondine’ ಎಂಬ ಸಂಶೋಧನಾ ಪ್ರಕ್ರಿಯೆಗೆ ಪೇಟೆಂಟ್ ದೊರಕಿದೆ.

ಈ ಪ್ರಕ್ರಿಯೆಯು ಕ್ಯಾನ್ಸರ್‌ಗೆ ಔಷಧಿಯ ಮೂಲ ಎಂದು ಗುರುತಿಸಿಕೊಂಡಿದೆ. ಪ್ರೊ.ಕೆ.ಆರ್.ಚಂದ್ರಶೇಖರ್ ಅವರು ಮಂಗಳೂರು ವಿವಿಯಲ್ಲಿ ನಿವೃತ್ತಿಯಾದ ಬಳಿಕ ಇದೀಗ ಖಾಸಗಿ ವಿವಿಯಲ್ಲಿ ವಿಜ್ಞಾನಿಯಾಗಿ ಹಾಗೂ ಆಂತರಿಕ ಗುಣಮಟ್ಟದ ಖಾತರಿ ಸಲಹೆಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಪ್ರೊ.ಭಾಗ್ಯ ನೆಕ್ರಕಲಾಯ ಅವರು ಖಾಸಗಿ ವಿವಿಯ ಸಂಶೋಧನಾ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ‌.ಪ್ರೊ.ಕೆ.ಆರ್.ಚಂದ್ರಶೇಖರ್ ಅವರು ಮಾತನಾಡಿ, ಈ ಬಗ್ಗೆ ಮುಂದಿನ ಸಂಶೋಧನೆ ಕೈಗೊಳ್ಳಲು‌ ಸಾಕಷ್ಟು ಹಣದ ಅಗತ್ಯವಿದೆ.

ಆದ್ದರಿಂದ ಯಾವುದಾದರೂ ಫಾರ್ಮಾಸಿಟಿಕಲ್ ಕಂಪೆನಿ ಕೈಜೋಡಿಸಿದಲ್ಲಿ ಮುಂದೊಂದಿನ ಕೇಂದ್ರ ಸರ್ಕಾರದ ಆತ್ಮನಿರ್ಭರ ಯೋಜನೆಯಂತೆ ಕ್ಯಾನ್ಸರ್ ನಿರೋಧಕ ಔಷಧಿಯಾಗಿ ಹೊರಬರುವ ಸಾಧ್ಯತೆ ಇದೆ ಎಂದರು.
ಈ ಹಿಂದೆ ಚೀನಾದಲ್ಲೂ ಈ ರೀತಿಯ ಬಳ್ಳಿಯ ಸಂಶೋಧನೆಯನ್ನು ಅಲ್ಲಿನ ವಿಜ್ಞಾನಿಗಳು ಮಾಡಿದ್ದರು. ಅಲ್ಲಿನ ಬಳ್ಳಿಯಲ್ಲೂ ಟೆಂಟ್ರಾಡ್ರೈನ್ ಅಂಶವನ್ನು ಪತ್ತೆ ಮಾಡಿದ್ದರು.

ಇದಾದ ಬಳಿಕ ಭಾರತದಲ್ಲಿ ಮೊದಲ ಬಾರಿಗೆ ಮಂಗಳೂರಿನ ವಿಜ್ಞಾನಿಗಳು ಸಂಶೋಧನೆ ಮಾಡಿದ್ದಾರೆ.

ಹಡೆಬಳ್ಳಿ ದ.ಕ., ಉಡುಪಿ, ಕಾಸರಗೋಡು ಭಾಗಗಳಲ್ಲಿ ಸಾಮಾನ್ಯವಾಗಿ ದೊರಕುವ ಸಣ್ಣ ಬಳ್ಳಿಯಾಗಿದ್ದು, ಇದರ ಎಲೆಯನ್ನು ಹಿಂದೆ ಹಳ್ಳಿಗಳಲ್ಲಿ ನುಣ್ಣಗೆ ಅರೆದು ಪೇಸ್ಟ್ ರೂಪದಲ್ಲಿ ತಲೆ ತಣ್ಣಗಾಗಲು ಹಚ್ಚುತ್ತಿದ್ದರು.

ಅಲ್ಲದೆ ಇದನ್ನು ವಿಷ ನಿವಾರಕವಾಗಿಯೂ ಬಳಸಲಾಗುತ್ತಿತ್ತು. ಸಾಮಾನ್ಯವಾಗಿ ಈ ಹಡೇ ಬಳ್ಳಿ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಭಾಗದಲ್ಲಿ ಯಥೇಚ್ಛವಾಗಿ ಕಂಡುಬರುತ್ತದೆ.

ಗ್ರಾಮೀಣ ಭಾಗದ ಜನರು ಈ ಬಳ್ಳಿಯನ್ನು ಅರೆದು ದೇಹ ತಂಪಾಗಲು ಹಣೆಗೆ ಹಚ್ಚುತ್ತಿದ್ದರು. ನೆಗಡಿ ಜ್ವರ ಶೀತ,ಮಧುಮೇಹ ಸೇರಿದಂತೆ ಕೆಲ ರೋಗಗಳಿಗೆ ಇದು ರಾಮಬಾಣವಾಗಿದೆ.

LATEST NEWS

ಬಹುನಿರೀಕ್ಷಿತ “ಫುಲ್ ಮೀಲ್ಸ್” ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಬಿಡುಗಡೆಗೆ ಮುಹೂರ್ತ

Published

on

ಮಂಗಳೂರು: ಟೈಟಲ್ ನಿಂದಲೇ ಕುತೂಹಲ ಕೆರಳಿಸಿರುವ ಬಹುನಿರೀಕ್ಷಿತ “ಫುಲ್ ಮೀಲ್ಸ್” ಸಿನಿಮಾ ನ.21ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಾಯಕ ನಟರಾದ ಲಿಖಿತ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ತಿಳಿಸಿದ್ದಾರೆ.


ಮೂರು ವರ್ಷಗಳ ಕಾಲ ಈ ಸಿನಿಮಾಕ್ಕೆ ದುಡಿದಿದ್ದು ಕಥೆ ತುಂಬಾ ಚೆನ್ನಾಗಿದೆ. ಒರಿಯರ್ದೊರಿ ಅಸಲ್, ಮದಿಮೆ ಸಿನಿಮಾದಲ್ಲಿ ನಾಯಕ ನಟನಾಗಿ ಕಾಣಿಸಿ ಚಿತ್ರರಂಗದ ಜೀವನದಲ್ಲಿ ಇದೀಗ ನನ್ನ ಹೊಸ ಚಿತ್ರ ಹೊರಬರಲು ತಯಾರಾಗಿದೆ ಎಂದರು.

ರಂಗಕರ್ಮಿ ವಿಜಯ್ ಕುಮಾರ್ ಕೊಡಿಯಾಲ್ ಬೈಲ್ ಮಾತನಾಡಿ ”ಲಿಖಿತ್ ಶೆಟ್ಟಿ ಕಷ್ಟಪಟ್ಟು ಈ ಸಿನಿಮಾ ಮಾಡಿದ್ದಾರೆ. ತುಳುನಾಡಿನಿಂದ ಕನ್ನಡ ಸಿನಿಮಾ ರಂಗದಲ್ಲಿ ಅನೇಕ ಮಂದಿ ಸಾಧನೆ ಮಾಡಿದ ಕಲಾವಿದರಿದ್ದಾರೆ. ಕನ್ನಡಿಗರು ಮತ್ತು ತುಳುವರು ಒಟ್ಟು ಸೇರಿ ಸಿರ್ಮಿಸಿರುವ ಸಿನಿಮಾ ಇದಾಗಿದ್ದು ಎಲ್ಲರೂ ಹೊಸಬರ ಪ್ರಯತ್ನಕ್ಕೆ ಸಹಕಾರ ನೀಡಬೇಕು ಎಂದರು.

ಸಂಗೀತ ನಿರ್ದೇಶಕ ಗುರುಕಿರಣ್ ಮಾತನಾಡಿ, ”ಫುಲ್ ಮೀಲ್ಸ್ ಸಿನಿಮಾ ಹೆಸರೇ ಹೇಳುವಂತೆ ಹಾಸ್ಯ, ಸುಮಧುರ ಪ್ರೇಮಕತೆ ಮತ್ತು ಮನೋರಂಜನೆಯ ಫುಲ್ ಮೀಲ್ಸ್ ಆಗಿದೆ. ಸಿನಿಮಾದ ಹಾಡುಗಳು ಮುದ ನೀಡುತ್ತಿದ್ದು ಸಿನಿಮಾವನ್ನು ಪ್ರೇಕ್ಷಕ ಇಷ್ಟಪಡಲು ಬೇಕಾದ ಎಲ್ಲ ಅಂಶಗಳು ಇದರಲ್ಲಿವೆ ಎಂದರು.

ಇದನ್ನೂ ಓದಿ: ಇನ್ಮುಂದೆ ಖುಷಿ ಶಿವು ಅಲ್ಲ….ಹೆಸರು ಬದಲಿಸಿಕೊಂಡ ‘ನೀನಾದೆ ನಾ’ ನಟಿ..!

ನಿರ್ದೇಶಕ ಎನ್.ವಿನಾಯಕ, ನಾಯಕಿ ಖುಷಿ ರವಿ ಮತ್ತು ತೇಜಸ್ವಿನಿ ಶರ್ಮಾ ಸಿನಿಮಾ ಚಿತ್ರೀಕರಣದ ಕುರಿತು ತಮ್ಮ ಅನುಭವ ಹಂಚಿಕೊಂಡರು.

Continue Reading

DAKSHINA KANNADA

ಡಾ.ಹರಿಕೃಷ್ಣ ಪುನರೂರು , ಮಾಜಿ ಸಚಿವ ರಮಾನಾಥ ರೈಗೆ ಸಾರ್ವಜನಿಕ ಅಭಿನಂದನಾ ಸಮಾರಂಭ

Published

on

ಬಂಟ್ವಾಳ :  ಸಾಮಾಜಿಕವಾಗಿ, ಧಾರ್ಮಿಕವಾಗಿ ತೊಡಗಿಸಿಕೊಂಡು ಸಮಾಜದ ಉನ್ನತಿಗೆ ಶ್ರಮಿಸಿದ ಮಹನೀಯರನ್ನು ಗೌರವಿಸುವುದು ಇಂದು ಪ್ರಸ್ತುತ. ಸಮಾಜವನ್ನು ಒಂದುಗೂಡಿಸುವ ಕಾರ್ಯ ಇಬ್ಬರ ಅಭಿನಂದನೆಯಿಂದ ನಡೆದಿದೆ ಎಂದು ಎಡನೀರು ಮಠದ ಶ್ರೀಸಚ್ಚಿದಾನಂದ ಭಾರತಿ ಸ್ವಾಮೀಜಿ ನುಡಿದರು.

ಮಂಗಳವಾರ (ನ.18) ಬಿ.ಸಿ.ರೋಡ್‌ನ ಸ್ಪರ್ಶ ಕಲಾಮಂದಿರದಲ್ಲಿ ಧರ್ಮದರ್ಶಿ ಹಾಗೂ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ.ಹರಿಕೃಷ್ಣ ಪುನರೂರು ಹಾಗೂ ಮಾಜಿ ಸಚಿವ ಬೆಳ್ಳಿಪ್ಪಾಡಿ ರಮಾನಾಥ ರೈ ಅವರಿಗೆ ನಡೆದ ಸಾರ್ವಜನಿಕ ಅಭಿನಂದನಾ ಸಮಾರಂಭದಲ್ಲಿ ಅವರು ಅರ್ಶೀವಚನಗೈದರು.

ದ.ಕ.ಜಿಲ್ಲಾ  ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅವರು ಧರ್ಮದರ್ಶಿ , ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಡಾ. ಹರಿಕೃಷ್ಣ ಪುನರೂರು ಕುರಿತು ಅಭಿನಂದನಾ ಭಾಷಣ ಮಾಡಿದರು. ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಜಗನ್ನಾಥ ಚೌಟ ಬದಿಗುಡ್ಡೆ ಅವರು ಮಾಜಿ ಸಚಿವ ಬಿ.ರಮಾನಾಥ ರೈ ಅವರ ಕುರಿತು ಅಭಿನಂದನಾ ಭಾಷಣ ಮಾಡಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಹರಿಕೃಷ್ಣ ಪುನರೂರು, ಬಡವರ ಸೇವೆಗಾಗಿ ಜೀವನವನ್ನು ಸಮರ್ಪಿಸಿದ್ದೇವೆ. ಭಾಷಣ ಮಾಡುವ ಬದಲು ಕೆಲಸ ಮಾಡುವುದು ಮುಖ್ಯ  ಎಂದರು. ಮಾಜಿ ಸಚಿವ ರಮಾನಾಥ ರೈ ಮಾತನಾಡಿ, ಸಾರ್ವಜನಿಕ ಬದುಕಿನಲ್ಲಿ ನನ್ನ ಕರ್ತವ್ಯದ ಭಾಗವನ್ನು ಮಾಡಿದ್ದೇನೆ. ಎಲ್ಲ ಜಾತಿ, ಮತ, ಭಾಷೆ ಮೀರಿ ಮನುಷ್ಯರಾಗಿ ಬಾಳಬೇಕು ಎಂದರು.

ಅಭಿನಂದನಾ ಸಮಿತಿ ಅಧ್ಯಕ್ಷ  ಕೈಯ್ಯೂರು ನಾರಾಯಣ ಭಟ್ ಸಭಾಧ್ಯಕ್ಷತೆ ವಹಿಸಿದ್ದರು. ಬಡಗಬೆಳ್ಳೂರು ಕಾವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ  ರಘು ಎಲ್. ಶೆಟ್ಟಿ, ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ದ.ಕ. ನಿರ್ದೇಶಕ ದಿನೇಶ್ ಅತಿಥಿಗಳಾಗಿ ಭಾಗವಹಿಸಿ ಶುಭಹಾರೈಸಿದರು.

ಉದ್ಯಮಿ ರಘುನಾಥ ಸೋಮಯಾಜಿ, ಸಮಿತಿಯ ಗೌರವಾಧ್ಯಕ್ಷ ಶಿವಪ್ರಸಾದ ಅಜಿಲ ಅಳದಂಗಡಿ, ಅಭಿನಂದನಾ ಗ್ರಂಥದ ಸಂಪಾದಕ ಪ್ರೊ.ರಾಜಮಣಿ ರಾಮಕುಂಜ, ಕೋಶಾಧಿಕಾರಿ ರಾಮಗಣೇಶ್ ಪ್ರಭು  ಉಪಸ್ಥಿತರಿದ್ದರು.

ಇದನ್ನೂ ಓದಿ : ಇನ್ಮುಂದೆ ಖುಷಿ ಶಿವು ಅಲ್ಲ….ಹೆಸರು ಬದಲಿಸಿಕೊಂಡ ‘ನೀನಾದೆ ನಾ’ ನಟಿ..!

ಅಭಿನಂದನಾ ಸಮಿತಿಯ ಮಹಾಲಿಂಗ ಭಟ್, ಹರಿಕೃಷ್ಣ ಪುನರೂರು ಅವರ ಅಭಿನಂದನಾ ಪತ್ರ ವಾಚಿಸಿದರು. ಬೆಳಗ್ಗೆ 8 ರಿಂದ ಮಹಾಗಣಪತಿ ಹೋಮ, ಮಧ್ಯಾಹ್ನ ಭೋಜನದ ಬಳಿಕ ಶಾಂಭವಿ ವಿಜಯ ಯಕ್ಷಗಾನ ಬಯಲಾಟ ನಡೆಯಿತು. ಸಮಿತಿ ಪ್ರಧಾನ ಕಾರ್ಯದರ್ಶಿ ದೇವಪ್ಪ ಕುಲಾಲ್ ವಂದಿಸಿದರು. ಎಚ್.ಕೆ.ನಯನಾಡು ಕಾರ್ಯಕ್ರಮ ನಿರೂಪಿಸಿದರು

Continue Reading

BIG BOSS

BBK12: ‘ಆ ಜಾಗದಲ್ಲಿ ಒಂದು ಸೆಕೆಂಡ್ ಇರಬೇಕು ಅನಿಸುತ್ತಿಲ್ಲ’ ಎಂದ ಅಶ್ವಿನಿ ಗೌಡ..! ಹೊರಹೋಗುವ ಸುಳಿವು ನೀಡಿದ್ರ ರಾಜಾಮಾತಾ..?

Published

on

BBK12: ಬಿಗ್‌ ಬಾಸ್‌ನಲ್ಲಿ ಟಾಸ್ಕ್‌ಗಳ ವಿಚಾರದಲ್ಲಿ ಸ್ಪರ್ಧಿಗಳ ನಡುವೆ ಜಟಾಪಟಿಯೇ ನಡೆದಿದೆ. ಅದರಲ್ಲೂ ಅಶ್ವಿನಿ ಗೌಡ-ಗಿಲ್ಲಿ ನಟನ ನಡುವೆ ನಡೆದಿರುವ ಜಗಳ ವಿಕೋಪಕ್ಕೆ ತಿರುಗಿದೆ. ಹೀಗಾಗಿ ಅಶ್ವಿನಿ ಗೌಡ ಕಣ್ಣೀರಾಕಿದ್ದು, ಹೊರಹೋಗುವ ಸುಳಿವು ನೀಡಿದ್ರ ರಾಜಾಮಾತಾ ಎಂದು ವೀಕ್ಷಕರು ಅಚ್ಚರಿ ವ್ಯಕ್ತಪಡಿಸಿದ್ದಾರೆ.


ಟಾಸ್ಕ್‌ ಇರಲಿ.. ಚರ್ಚೆಯೇ ಇರಲಿ ಮಾತಿನಲ್ಲೇ ಚಾಟಿ ಬೀಸುತ್ತಿದ್ದ ಅಶ್ವಿನಿ ಗೌಡ ಇಂದು ಟಾಸ್ಕ್ ವಿಚಾರಕ್ಕೆ ನಡೆದ ವಾಗ್ವಾದದಲ್ಲಿ ಕಣ್ಣೀರಾಕಿದ್ದಾರೆ. ಅಷ್ಟಕ್ಕೂ ಇದರ ಅಸಲಿಯತ್ತೇನು..?

ಏಕವಚನದಲ್ಲಿ ಬೈದಾಡಿಕೊಂಡ ಅಶ್ವಿನಿ-ಗಿಲ್ಲಿ!

ಇಂದು ನಡೆಯುವ ಟಾಸ್ಕ್‌ವೊಂದಕ್ಕೆ ಅಶ್ವಿನಿ ಗೌಡ ಹಾಗೂ ಗಿಲ್ಲಿ ನಟ ಉಸ್ತುವಾರಿಗಳಾಗಿದ್ದಾರೆ. ಬಕೆಟ್‌ನ ಅಭಿಷೇಕ್ ತಳ್ಳಿದಾಗ ಉಸ್ತುವಾರಿ ಗಿಲ್ಲಿ ನಟ ಪ್ರಶ್ನೆ ಮಾಡಿದರು. ಈ ವೇಳೆ ಎದುರಾಳಿ ತಂಡದ ಉಸ್ತುವಾರಿ ಆದ ಅಶ್ವಿನಿ ಗೌಡ ಕ್ಯಾತೆ ತೆಗೆದಿದ್ದಾರೆ. ಪರಿಣಾಮ, ಇಬ್ಬರ ಮಧ್ಯೆ ಏಕವಚನದಲ್ಲಿ ಮಾತಿನ ಚಕಮಕಿ ನಡೆದಿದೆ.

ಅಶ್ವಿನಿ ಅವರು, ʻಸರಿಯಾಗಿ ಉಸ್ತುವಾರಿ ಮಾಡುʼ ಎಂದು ಗಿಲ್ಲಿ ಮೇಲೆ ಮೊದಲಿಗೆ ಕೂಗಾಡಿದ್ದಾರೆ. ಇದಕ್ಕೆ ಪ್ರತಿಯಾಗಿ ಗಿಲ್ಲಿ ಅವರು, ʻನೀನು ಕರೆಕ್ಟ್‌ ಆಗಿ ಉಸ್ತುವಾರಿ ಮಾಡೊಮ್ಮೋʼ ಅಂತ ಕಿರುಚಾಡಿದ್ದಾರೆ. ಗಿಲ್ಲಿ ಏಕವಚನದಲ್ಲಿ ಮಾತನಾಡಿದ ಬಳಿಕ ಅಶ್ವಿನಿ ಪಿತ್ತ ನೆತ್ತಿಗೇರಿದೆ.

‘ನಿನ್ ಯೋಗ್ಯತೆಗಿಷ್ಟು’ ಅಂತ ಗಿಲ್ಲಿ ನಟನಿಗೆ ಕೈ ತೋರಿಸಿ ಅಶ್ವಿನಿ ಗೌಡ ಬೈದಿದ್ದಾರೆ. ಇದಕ್ಕೆ ಪ್ರತಿಯಾಗಿ ಗಿಲ್ಲಿ, ʻವಟ ವಟ ಅಂತ ಬಿಪಿ ರೈಸ್‌ ಮಾಡ್ಕೋಬೇಡʼ ಎಂದಿದ್ದಾರೆ.

ಇದನ್ನೂ ಓದಿ: ಗಿಲ್ಲಿ ನಟ-ಅಶ್ವಿನಿ ಗೌಡ ನಡುವೆ ವಾಕ್ಸಮರ; ಏಕವಚನದಲ್ಲಿ ಬೈದಾಡಿಕೊಂಡ ಉಸ್ತುವಾರಿಗಳು!

ಕಣ್ಣೀರಿಟ್ಟ ಅಶ್ವಿನಿ ಗೌಡ!
ಟಾಸ್ಕ್‌ನಲ್ಲಿ ನಡೆದ ವಾಕ್ಸಮರದ ಬಗ್ಗೆ ಅಶ್ವಿನಿ ಗೌಡ ಬೇಸರಗೊಂಡಿದ್ದು, ಗಾರ್ಡನ್ ಏರಿಯಾದಲ್ಲಿ ಸಹ ಸ್ಪರ್ಧಿಗಳೊಂದಿಗೆ ಚರ್ಚಿಸುತ್ತಾರೆ. ಈ ವೇಳೆಯೂ ಗಿಲ್ಲಿ ಅಶ್ವಿನಿ ಅವರಿಗೆ ಮಾತಿನಲ್ಲೇ ತಿವಿಯುತ್ತಾರೆ. ಗಿಲ್ಲಿ ‘ಎಲ್ಲಾ ವೃದ್ದಾಪ್ಯದವರು ಸೇರಿಕೊಂಡು ಕಷ್ಟ-ಸುಖ ಮಾತನಾಡುತ್ತಿದ್ದಾರೆ’ ಎಂದು ಗೇಲಿ ಮಾಡುತ್ತಾರೆ. ಇದು ಅಶ್ವಿನಿ ಅವರಿಗೆ ಹರ್ಟ್ ಆದಂತೆ ಕಾಣಿಸುತ್ತಿದೆ.

ಇನ್ನೂ ‘ನಮ್ಮನ್ನು ಒಬ್ಬರು ಅಷ್ಟು ಅಗೌರವದಿಂದ ನೋಡುತ್ತಿದ್ದಾರೆ ಎಂದಾಗ ಆ ಜಾಗದಲ್ಲಿ ಒಂದು ಸೆಕೆಂಡ್ ಇರಬೇಕು ಅಂತ ಅನಿಸುತ್ತಿಲ್ಲ’ ಎಂದು ಗಿಲ್ಲಿಯ ಮಾತಿನ ಚಾಟಿಗೆ ಅಶ್ವಿನಿ ಗೌಡ ಕಂಗಲಾಗಿ ಕಣ್ಣೀರು ಹಾಕಿದ್ದಾರೆ. ಒಟ್ಟಿನಲ್ಲಿ ಗಿಲ್ಲಿ ಆಡಿದ ಮಾತಿನಿಂದಾಗಿ ಅಶ್ವಿನಿ ಗೌಡ ಹೊರಹೋಗುವ ನಿರ್ಧಾರ ಮಾಡಿದ್ರ ಎಂದು ವೀಕ್ಷಕರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page