Connect with us

LATEST NEWS

mangaluru : ಕಾನೂನು ವಿದ್ಯಾರ್ಥಿನಿ ಲೈಂಗಿಕ ಕಿರುಕುಳ ಪ್ರಕರಣ: ವಕೀಲ KSN ರಾಜೇಶ್‌ ರಿಟ್ ಅರ್ಜಿ ಹೈಕೋರ್ಟ್ ವಜಾ..!

Published

on

ಕಾನೂನು ವಿದ್ಯಾರ್ಥಿನಿಯ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ವಕೀಲ ಕೆ ಎಸ್‌ ಎನ್ ರಾಜೇಶ್ ವಿರುದ್ಧ ದಾಖಲಾಗಿರುವ ಪ್ರಕರಣ ಮತ್ತು ಅದಕ್ಕೆ ಸಂಬಂಧಿಸಿದಂತೆ ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣೆ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

ಮಂಗಳೂರು: ಕಾನೂನು ವಿದ್ಯಾರ್ಥಿನಿಯ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ವಕೀಲ ಕೆ ಎಸ್‌ ಎನ್ ರಾಜೇಶ್ ವಿರುದ್ಧ ದಾಖಲಾಗಿರುವ ಪ್ರಕರಣ ಮತ್ತು ಅದಕ್ಕೆ ಸಂಬಂಧಿಸಿದಂತೆ ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣೆ ರದ್ದುಪಡಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

ಮಂಗಳೂರು ಮಹಿಳಾ ಠಾಣೆಯ ಪೊಲೀಸರು ದಾಖಲಿಸಿದ ಎಫ್‌ಐಆರ್ ಮತ್ತು 3ನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯದ ವಿಚಾರಣೆ ರದ್ದುಪಡಿಸಲು ಕೋರಿ ವಕೀಲ ಕೆ.ಎಸ್‌.ಎನ್ ರಾಜೇಶ್ ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ವಜಾ ಮಾಡಿದೆ.

ಅತ್ಯಾಚಾರ,  ಅತ್ಯಾಚಾರ ಯತ್ನ ಮತ್ತು ಅತ್ಯಾಚಾರಕ್ಕೆ ತಯಾರಿ ಬಗ್ಗೆ ನ್ಯಾಯಾಲಯದಲ್ಲಿ  ವಿಚಾರಣಾ ವೇಳೆಯಲ್ಲಿ ಕಂಡು ಬಂದಿದೆ.

ತನಿಖಾಧಿಕಾರಿಗಳು ವಶಪಡಿಸಿಕೊಂಡ ಸಿಸಿಟಿವಿ ದೃಶ್ಯಾವಳಿಗಳು, ಆರೋಪಿ ಮತ್ತು ದೂರುದಾರರ ನಡುವೆ ನಡೆದ ಮಾತುಕತೆಯ ವೈಜ್ಞಾನಿಕ ವರದಿಗಳು ಮತ್ತು ಘಟನಾ ಸಂದರ್ಭ  ಆರೋಪಿಯ ಉದ್ದೇಶ, ಅತ್ಯಾಚಾರಕ್ಕೆ ಯತ್ನ ಮತ್ತಯ ಅತ್ಯಾಚಾರ ನಡೆದಿದೆಯೋ ಇಲ್ಲಾವೋ ಎಂಬ ವಿಷಯಕ್ಕೆ  ಸಾಕ್ಷ್ಯ ವಿಚಾರಣೆ ವೇಳೆ ತಿಳಿಯುವುದೆಂದು ಮತ್ತು ನ್ಯಾಯಾಲ ಈ ವಿಷಯದಲ್ಲಿ ಮಧ್ಯ ಪ್ರವೇಶಿಸಿದರೆ ಕಾನೂನು ವಿದ್ಯಾರ್ಥಿನಿಯರಿಗೆ ರಕ್ಷಣೆ ಇಲ್ಲಾದಂತಾಗುತ್ತೆ.

ಜೊತೆಗೆವಿದ್ಯಾರ್ಥಿನಿಯ ಮೇಲೆ ನಡೆಸಿದರೆ ಅದು ಆಕೆಯ ವೃತ್ತಿ ಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ.

ಹೀಗಾಗಿ, ವಿಚಾರಣಾಧೀನ ನ್ಯಾಯಾಲಯದ ಸಂಪೂರ್ಣ ವಿಚಾರಣೆ ಎದುರಿಸಿ, ಆರೋಪಿಯು ದೋಷಮುಕ್ತರಾಗಿ ಬರಬೇಕು” ಎಂದು ಅಭೀಪ್ರಾಯಪಟ್ಟಯ ರಿಟ್ ಅರ್ಜಿಯನ್ನು ತಿರಸ್ಕರಿಸಿದೆ.

ಪ್ರಕರಣದ ಹಿನ್ನೆಲೆ

ನಗರದ ಕಾನೂನು ಕಾಲೇಜೊಂದರಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ, ವಕೀಲ ಕೆ ಎಸ್ ಎನ್. ರಾಜೇಶ್ ಅವರ ಕಚೇರಿಯಲ್ಲಿ ಇಂಟರ್ನ್‌ಶಿಪ್ ಮಾಡುತ್ತಿದ್ದರು.

ಈ ಸಂದರ್ಭ ತನ್ನ ಮೇಲೆ ವಕೀಲ ರಾಜೇಶ್ ಅತ್ಯಾಚಾರಕ್ಕೆ ಯತ್ನಿಸಿದ್ದಲ್ಲದೆ, ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿ ದೂರು ನೀಡಿದ್ದರು. ಈ ಸಂಬಂಧ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.

ಪೊಲೀಸರು ತನಿಖೆ ಪೂರ್ಣಗೊಳಿಸಿ ಅತ್ಯಾಚಾರ, ಲೈಂಗಿಕ ಕಿರುಕುಳ, ಮಹಿಳೆಯ ಘನತೆಗೆ ಧಕ್ಕೆ ತಂದಿರುವುದು ಸೇರಿದಂತೆ ಹಲವು ಆರೋಪಗಳ ಸಂಬಂಧ ಆರೋಪ ಪಟ್ಟಿ ಸಲ್ಲಿಸಿದ್ದರು.

ಈ ಮಧ್ಯೆ ಆರೋಪಿ ತಲೆಮರೆಸಿಕೊಂಡಿದ್ದರು. ಕೊನೆಗೆ ಪೊಲೀಸರು ಕೋರ್ಟ್‌ಗೆ ಹಾಜರುಪಡಿಸಿದ್ದರು. ಆರೋಪಿಗೆ ಕೋರ್ಟ್‌ ನ್ಯಾಯಾಂಗ ಬಂಧನ ವಿಧಿಸಿತ್ತು.

 

BELTHANGADY

ಕಾಲೇಜು ವಿದ್ಯಾರ್ಥಿನಿ ಅಪಹರಣ ಯತ್ನ ಪ್ರಕರಣಕ್ಕೆ ರಾಜ್ಯ ಗೃಹ ಇಲಾಖೆ ವೈಫಲ್ಯ ಕಾರಣ-ಶಾಸಕ ಪೂಂಜಾ

Published

on

ಬೆಳ್ತಂಗಡಿ: ಕೇವಲ ಬೆಳ್ತಂಗಡಿ ಮಾತ್ರವಲ್ಲ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಗೃಹ ಇಲಾಖೆ ಸೋತಿದೆ. ಈ ಘಟನೆ ಸಣ್ಣ ಘಟನೆಯೇನಲ್ಲ. ಇದರಿಂದ ಜನ ಆತಂಕಕ್ಕೊಳಗಾಗಿದ್ದಾರೆ. ಇದರ ಹಿಂದಿರುವವರನ್ನು ಪತ್ತೆ ಹಚ್ಚಿ ಜನರ ಆತಂಕವನ್ನು ನಿವಾರಿಸುವ ಕೆಲಸವನ್ನು ಗೃಹ ಇಲಾಖೆ ಮಾಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿದರು.

ಬೆಳ್ತಂಗಡಿ ತಾಲೂಕಿನ ವ್ಯಾಪ್ತಿಯಲ್ಲಿ ಇಂದು ಬೆಳಿಗ್ಗೆ ನಡೆದ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು ಪೊಲೀಸ್ ಇಲಾಖೆಯ ನಿಷ್ಟ್ರಿಯತೆಯನ್ನು ಗೃಹ ಇಲಾಖೆ ಸರಿಪಡಿಸದೇ ಇದ್ದಲ್ಲಿ ಇಂತಹ ಕಾನೂನು ಉಲ್ಲಂಘಿತ ದುಷ್ಕೃತ್ಯಗಳು ಹೆಚ್ಚಾಗುತ್ತಲೇ ಹೋಗುತ್ತದೆ.

ಅಶಾಂತಿ ನಿರ್ಮಾಣವಾಗುತ್ತದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಜೊತೆ ಈ ಪ್ರಕರಣದ ಬಗ್ಗೆ ಮಾತನಾಡಿದ್ದೇನೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸುತ್ತೇನೆ ಎಂದು ಹೇಳಿದರು.

Continue Reading

BELTHANGADY

ಬೆಳ್ತಂಗಡಿ: ಪಿಯುಸಿ ವಿದ್ಯಾರ್ಥಿನಿಯ ಕಿಡ್ನ್ಯಾಪ್ ತಪ್ಪಿಸಿ ಬಾಲಕಿಯನ್ನು ರಕ್ಷಿಸಿದ ಅಬ್ಬುಸಾಲಿ !

Published

on

ಬೆಳ್ತಂಗಡಿ: ಸ್ಕೂಟರ್ ನಲ್ಲಿ ಕಾಲೇಜಿಗೆ ಹೋಗುತ್ತಿದ್ದ 16 ವರ್ಷದ ಪ್ರಥಮ ಪಿಯುಸಿ ವಿದ್ಯಾರ್ಥಿನಿಯನ್ನು ಇಕೋ ಕಾರಿನಲ್ಲಿ ಬಂದು ಅಡ್ಡಗಟ್ಟಿದ ದುಷ್ಕರ್ಮಿಗಳ ತಂಡವೊಂದು, ಸಿನಿಮೀಯ ಶೈಲಿಯಲ್ಲಿ ಅಪಹರಣಕ್ಕೆ ಯತ್ನಿಸಿದ ಆತಂಕಕಾರಿ ಘಟನೆ ಇಂದು ಬೆಳ್ತಂಗಡಿಯಲ್ಲಿ  ನಡೆದಿದೆ. ಈ ಘಟನೆ ಊರಿನ ಜನತೆಯನ್ನು ತಲ್ಲಣಗೊಳಿಸಿದೆ.

ಆಕೆಯನ್ನು ಕಾರಿಗೆ ತಳ್ಳಿ ಅಪಹರಣ ಮಾಡಲು ಸಾಧ್ಯವಾಗದೇ ಇದ್ದಾಗ ಕೈಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಮುಖಕ್ಕೆ ಮಾಸ್ಕ್ ಧರಿಸಿದ್ದರು. ಇದೇ ವೇಳೆ ಅದೇ ದಾರಿಯಾಗಿ ಬರುತ್ತಿದ್ದ ಅಬ್ಬುಸಾಲಿ ಎಂಬವರು ಬಾಲಕಿಯ ಪಾಲಿಗೆ ಆಪತ್ಭಾಂದವರಾಗಿದ್ದಾರೆ.

ಅಬ್ಬುಸಾಲಿಯನ್ನು ಕಂಡ ಮೂವರು ದುಷ್ಕರ್ಮಿಗಳು ಬಾಲಕಿಯನ್ನು ಬಿಟ್ಟು ಪರಾರಿಯಾಗಿದ್ದಾರೆ. ಕೂಡಲೇ ಅಬ್ಬುಸಾಲಿ  ಭಯಭೀತಗೊಂಡಿದ್ದ ಮತ್ತು ಗಾಯಗೊಂಡಿದ್ದ ವಿದ್ಯಾರ್ಥಿನಿಯನ್ನು ರಕ್ಷಿಸಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.

ಸಮಯ ಪ್ರಜ್ಞೆ ಮೆರೆದ ಅಬ್ಬುಸಾಲಿ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಬೆಳ್ತಂಗಡಿ ಠಾಣಾ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯ ಹೇಳಿಕೆ ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದ್ದು, ಇದು ಪೂರ್ವನಿಯೋಜಿತ ಕೃತ್ಯವೇ ಅಥವಾ ದರೋಡೆ ಉದ್ದೇಶವಿತ್ತೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ.

 

Continue Reading

kerala

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

Published

on

ಕಾಸರಗೋಡು: ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದ ಕಾಸರಗೋಡಿನ ಯುವತಿ ಅಡೂರು ಮೂಲದ ಚಿನ್ನು ಪಾಪು ಎಂಬಾಕೆ ಸಾವನ್ನಪ್ಪಿದ್ದಾರೆ.

ಅವರ ಬಾಡಿಗೆ ಮನೆಯಲ್ಲಿ ಸೋಮವಾರ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕೌಟುಂಬಿಕ ಸಮಸ್ಯೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Continue Reading
Advertisement

Trending

Copyright © 2025 Namma Kudla News

You cannot copy content of this page