Connect with us

DAKSHINA KANNADA

Mangaluru: ವೆಂಕಟರಮಣ ದೇವಸ್ಥಾನದ ಶಾರದಾ ಮಹೋತ್ಸವ ಸಂಪನ್ನ

Published

on

ಮಂಗಳೂರು: ಮಂಗಳೂರಿ಼ನ ರಥಬೀದಿಯ ಶ್ರೀ ವೆಂಕಟರಮಣ ದೇವಸ್ಥಾನ ಆಚಾರ್ಯ ಮಠದ ವತಿಯಿಂದ ನಡೆದ 101 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವ ನಿನ್ನೆ ರಾತ್ರಿ ವೈಭವದ ಶೋಭಾ ಯಾತ್ರೆಯೊಂದಿಗೆ ಸಂಪನ್ನಗೊಂಡಿದೆ.

ಅ.19ರಿಂದ ಆಚಾರ್ಯಮಠ ವಠಾರದಲ್ಲಿ ಪೂಜಿಸಲ್ಪಟ್ಟ ಶಾರದಾ ಮಾತೆಯನ್ನು ಸರ್ವಾಲಂಕೃತಗೊಳಿಸಿ, ಬುಧವಾರ ಸಂಜೆ ದರ್ಶನಕ್ಕೆ ಅನುವು ಮಾಡಿಕೊಡಲಾಗಿದ್ದು, ಸಹಸ್ರಾರು ಮಂದಿ ಭಕ್ತರು ಶಾರದಾ ಮಾತೆಯನ್ನು ವೀಕ್ಷಿಸಿ ಕಣ್ತುಂಬಿಕೊಂಡು ಪ್ರಸಾದ ಸ್ವೀಕರಿಸಿದರು.

ರಾತ್ರಿ ಭಕ್ತರಿಂದ ದುರ್ಗಾ ಶ್ಲೋಕದ ಸಾಮೂಹಿಕ ಪಠಣದ ನಡುವೆ ಗೋವಿಂದಾ ಅನ್ನಿ ಗೋವಿಂದಾ ಎನ್ನುವ ಘೋಷಗಳೊಂದಿಗೆ ಮಹಾ ಮಂಗಳಾರತಿ ನೆರವೇರಿತು.

ಬಳಿಕ ಶ್ರೀ ಶಾರದಾ ಮಾತೆಯ ವಿಸರ್ಜನಾ ಶೋಭಾಯಾತ್ರೆಯು ಉತ್ಸವ ಸ್ಥಾನದಿಂದ ಹೊರಟಿತು. ಶ್ರೀ ಮಹಾಮಾಯಿ ದೇವಸ್ಥಾನ, ಗದ್ದೆಕೇರಿ, ಕೆನರಾ ಹೈಸ್ಕೂಲ್‌ ಹಿಂಬದಿ ರಸ್ತೆಯಿಂದ ನವಭಾರತ ವೃತ್ತ, ಅಮ್ಮೆಂಬಳ ಸುಬ್ಬರಾವ್‌ ಪೈ ರಸ್ತೆ, ಡೊಂಗರಕೇರಿ, ನ್ಯೂಚಿತ್ರಾ ಟಾಕೀಸ್‌, ಬಸವನ ಗುಡಿ, ಚಾಮರಗಲ್ಲಿ, ರಥಬೀದಿಯಾಗಿ ಶ್ರೀ ಮಹಾಮಾಯಾ ತೀರ್ಥದಲ್ಲಿ ವಿಸರ್ಜನೆ ನಡೆಯಿತು.

 

ಸ್ವಯಂಸೇವಕರು ಭುಜ ಸೇವೆಯ ಮೂಲಕ ಶ್ರೀ ಮಾತೆಯ ವಿಗ್ರಹದ ಶೋಭಾಯಾತ್ರೆಯಲ್ಲಿ ಪಾಲ್ಗೊಂಡರು. ವಿವಿಧ ವೇಷಧಾರಿಗಳಿಂದ ವಿಶೇಷ ಟ್ಯಾಬ್ಲೋಗಳು, ಹರಕೆಯ ಶಾರದಾ ಹುಲಿವೇಷದ ಸ್ತಬ್ದ ಚಿತ್ರಗಳು ಶೋಭಾ ಯಾತ್ರಗೆ ಮೆರುಗು ನೀಡಿದವು.

ಶ್ರೀ ಶಾರದಾ ಮಹೋತ್ಸವ ಸಮಿತಿ ಅಧ್ಯಕ್ಷ ಡಾ. ಉಮಾನಂದ ಮಲ್ಯ, ಕಾರ್ಯದರ್ಶಿ ಅಡಿಗೆ ಬಾಲಕೃಷ್ಣ ಶೆಣೈ, ಶತಮಾನೋತ್ಸವ ಸಮಿತಿಯ ಪದಾಧಿಕಾರಿಗಳು, ಆಚಾರ್ಯ ಮಠದ ಪಂಡಿತ್‌ ನರಸಿಂಹ ಆಚಾರ್ಯ, ಶ್ರೀ ವೆಂಕಟರಮಣ ದೇವಳದ ಮೊಕ್ತೇಸರರಾದ ಸಾಹುಕಾರ್‌ ಕಿರಣ್‌ ಪೈ, ಸತೀಶ್‌ ಪ್ರಭು, ಗಣೇಶ್‌ ಕಾಮತ್‌ ಉಪಸ್ಥಿತರಿದ್ದರು.

DAKSHINA KANNADA

ಯುವಕನ ಬರ್ಬರ ಹತ್ಯೆ ಬಗ್ಗೆ ಅಪಪ್ರಚಾರ ಸಲ್ಲದು : ಅನುಪಮ್ ಅಗರ್ವಾಲ್

Published

on

ಮಂಗಳೂರು : ಅಪರಿಚಿತ ಯುವಕನ ಮೃತದೇಹ ಪತ್ತೆಯಾದ ಘಟನೆಯು ಮಂಗಳೂರು ಹೊರವಲಯದ ಕುಡುಪು ಸಮೀಪ ನಿನ್ನೆ (ಏ.27) ಸಂಜೆ ನಡೆದಿದೆ. ಮೇಲ್ನೋಟಕ್ಕೆ ಇದೊಂದು ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ಯಾವುದೇ ರೀತಿಯಿಂದನೂ ಮೃತ ಯುವಕನ ಗುರುತು ಪತ್ತೆಯಾಗಿಲ್ಲ. ಸುಮಾರು 35 ರಿಂದ 40 ವರ್ಷ ಪ್ರಾಯದ ಹೊರ ರಾಜ್ಯದ ಈ ಯುವಕನನ್ನು ಕಲ್ಲಿನಿಂದ ಜಜ್ಜಿ ಕೊಲೆಗೈಯಲಾಗಿದೆ ಎಂದು ಹೇಳಲಾಗುತ್ತಿದೆ.

ಕುಡುಪು ಕಟ್ಟೆ ಸಮೀಪದ ಗದ್ದೆಯಲ್ಲಿ ಯುವಕರ ಗುಂಪೊಂದು 6 ತಂಡಗಳ ಕ್ರಿಕೆಟ್ ಮ್ಯಾಚ್ ಆಯೋಜಿಸಿತ್ತು. ಸಂಜೆ ವೇಳೆ ಕ್ರಿಕೆಟ್ ಪಂದ್ಯಾಟ ನಡೆಯುತ್ತಿದ್ದ ಗದ್ದೆಗೆ ಅಪರಿಚಿತ ಯುವಕನೊಬ್ಬ ತೆರಳಿದ್ದು, ಯಾವುದೋ ಕಾರಣಕ್ಕೆ ಈ ಯುವಕ ಮತ್ತು ಕ್ರಿಕೆಟ್ ಆಟಗಾರರ ಮಧ್ಯೆ ಮಾತಿಗೆ ಮಾತು ಬೆಳೆದಿದೆ. ಆಕ್ರೋಶಗೊಂಡ ಯುವಕರ ತಂಡವು ಈ ಯುವಕನಿಗೆ ಹಲ್ಲೆಗೈದಿದ್ದು, ಗಂಭೀರ ಗಾಯಗೊಂಡ ಯುವಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಮೃತಪಟ್ಟ ಯುವಕನ ಗುರುತು ಇನ್ನೂ ಪತ್ತೆಯಾಗಿಲ್ಲ. ಪೊಲೀಸರು ಆತನ ಗುರುತು ಪತ್ತೆಗಾಗಿ ಪ್ರಯತ್ನ ಸಾಗಿಸಿದ್ದಾರೆ. ಪ್ರಾಥಮಿಕ ವರದಿಯ ಬಳಿಕ ಸಾವಿಗೆ ಕಾರಣ ಏನು ಎಂದು ತಿಳಿಯಬಹುದಾಗಿದೆ. ಈ ಬಗ್ಗೆ ಹರಡುತ್ತಿರುವ ವದಂತಿಗಳಿಗೆ ಕಿವಿಗೊಡದಿರಿ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮನವಿ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ನಗರ ಉಪ ಆಯುಕ್ತ ಸಿದ್ದಾರ್ಥ್ ಗೋಯಲ್, ನಗರ ದಕ್ಷಿಣ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತೆ ಧನ್ಯಾ ನಾಯಕ್, ಮಂಗಳೂರು ಗ್ರಾಮಾಂತರ ಠಾಣಾ ಇನ್‌ಸ್ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈತ ಕೂಲಿ ಕಾರ್ಮಿಕ ಎಂದು ಹೇಳಲಾಗುತ್ತಿದೆ. ಘಟನೆಯ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Continue Reading

DAKSHINA KANNADA

ಕುಂಭದ್ರೋಣ ಮಳೆಗೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಅಸ್ತವ್ಯಸ್ತ

Published

on

ಬಂಟ್ವಾಳ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಾಗಾರಿ ಆರಂಭಗೊಂಡು ಹಲವು ವರ್ಷವಾದ್ರೂ ಇನ್ನೂ ಕೂಡಾ ಪೂರ್ಣಗೊಂಡಿಲ್ಲ. ಕೆಲವಡೆ ಸಂಚಾರಕ್ಕೆ ಯೋಗ್ಯವಾದ ರಸ್ತೆ ಏನೋ ನಿರ್ಮಾಣ ಮಾಡಲಾಗಿದೆಯಾದರೂ ಮಳೆಗಾಲದಲ್ಲಿ ನೀರು ಹರಿದು ಹೋಗುವ ವ್ಯವಸ್ಥೆಯೇ ಮಾಡಿಲ್ಲ.

 

ಕಳೆದ ವರ್ಷ ಇದೇ ಸಮಸ್ಯೆಯಿಂದ ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರು ಸಾಕಷ್ಟು ಸಮಸ್ಯೆ ಅನುಭವಿಸಿದ್ದರು. ಇದೀಗ ಮಳೆಗಾಲ ಸಮೀಪಿಸ್ತಾ ಇದ್ದು , ಅಕಾಲಿಕ ಮಳೆ ಕೂಡಾ ಆರಂಭವಾಗಿದೆ. ಭಾನುವಾರ ಬಂಟ್ವಾಳ ತಾಲೂಕಿನಲ್ಲಿ ಧಾರಾಕಾರವಾಗಿ ಮಳೆ ಸುರಿದಿದ್ದು, ಮತ್ತೆ ಹೆದ್ದಾರಿ ಪ್ರಯಾಣಿಕರಿಗೆ ಸಂಕಷ್ಟ ತಂದೊಡ್ಡಿದೆ. ಮಳೆಯಿಂದಾಗಿ ಹೆದ್ದಾರಿಯಲ್ಲಿ ನೀರು ತುಂಬಿಕೊಂಡು ವಾಹನ ಸವಾರರು ಪರದಾಡಿದ್ದಾರೆ.

ಬಂಟ್ವಾಳ ತಾಲೂಕಿ ಕಲ್ಲಡ್ಕ ಸಮೀಪದ ಸೂರಿಕುಮೇರು ಎಂಬಲ್ಲಿ ಹೆದ್ದಾರಿಯಲ್ಲಿ ನೀರು ತುಂಬಿಕೊಂಡು ಇಡೀ ರಸ್ತೆಯೇ ನದಿಯಂತಾಗಿ ಹೋಗಿದೆ. ಇದರ ನಡುವೆ ಸಣ್ಣಪುಟ್ಟ ವಾಹನಗಳು ಸಂಚರಿಸಲು ಅಸಾಧ್ಯವಾದ ಸ್ಥಿತಿ ನಿರ್ಮಾಣವಾಗಿದ್ದು, ವಾಹನ ಸವಾರರು ಹೆದ್ದಾರಿ ಕಾಮಗಾರಿಗೆ ಹಿಡಿ ಶಾಪ ಹಾಕಿದ್ದಾರೆ.

ಇದನ್ನೂ ಓದಿ: ಉಡುಪಿ : ಹುಲಿ ವೇಷದಾರಿ ಹೃದಯಾಘಾತಕ್ಕೆ ಬಲಿ

ಹೆದ್ದಾರಿಯ ಇಕ್ಕೆಲೆಯಲ್ಲಿ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಮಾಡದೇ ಇರುವುದು ಈ ಅವ್ಯವಸ್ಥೆಗೆ ಕಾರಣವಾಗಿದ್ದು, ತಕ್ಷಣವೇ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.

Continue Reading

DAKSHINA KANNADA

ರೈಲ್ವೇ ಇಲಾಖೆ ಪರೀಕ್ಷೆಯಲ್ಲೂ ಎಡವಟ್ಟು; ಜನಿವಾರದ ಜೊತೆ ತಾಳಿಗೂ ಕಂಟಕ

Published

on

ಮಂಗಳೂರು : ಇತ್ತಿಚೆಗೆ ಸಿಇಟಿ ಪರೀಕ್ಷೆಯ ವೇಳೆ ಜನಿವಾರ ತೆಗೆಸಿದ ವಿಚಾರವಾಗಿ ಬ್ರಾಹ್ಮಣ ಸಮೂದಾಯ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಹಿಂದೂ ಸಂಘಟನೆಗಳೂ ಕೂಡ ಪರೀಕ್ಷಾರ್ಥಿಗಳಿಗೆ ಜನಿವಾರ ತೆಗೆಸಿದ ವಿಚಾರವಾಗಿ ಪ್ರತಿಭಟನೆ ನಡೆಸಿತ್ತು. ಇದೀಗ ರೈಲ್ವೇ ಇಲಾಖೆ ಕೂಡಾ ಇಂತಹದೇ ಒಂದು ಯಡವಟ್ಟು ಮಾಡಿದೆ. ಅದೇನು ಗೊತ್ತಾ ? ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.

ಜನಿವಾರ ಪ್ರಕರಣ ತೀವ್ರ ಸುದ್ಧಿಯಾಗುತ್ತಿರುವ ಬೆನ್ನಲ್ಲೇ ಇದೀಗ ಪರೀಕ್ಷೆ ಬರೆಯಲು ಜನಿವಾರ ಮತ್ತು ಮಂಗಳ ಸೂತ್ರ ತೆಗೆದು ಬರುವಂತೆ ಸೂಚಿಸಿದೆ. ರೈಲ್ವೇ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಏಪ್ರಿಲ್ 29 ರಂದು ಪರೀಕ್ಷೆ ನಡೆಯಲಿದ್ದು, ಹಾಲ್ ಟಿಕೇಟ್ ನಲ್ಲೇ ಈ ಸೂಚನೆಯನ್ನು ನೀಡಿದೆ.

ಮಂಗಳೂರು ನಗರದ ಬೋಂದೇಲ್‌ ಸಮೀಪದ ಮಣೇಲ್ ಶ್ರೀನಿವಾಸ್ ನಾಯಕ್ ಬೆಸೆಂಟ್ ವಿದ್ಯಾಕೇಂದ್ರದಲ್ಲಿ ರೈಲ್ವೇ ಇಲಾಖೆಯ ನರ್ಸಿಂಗ್ ಸುಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ನಡೆಯಲಿದ್ದು, ಹಾಲ್ ಟಿಕೇಟ್ ನಲ್ಲಿ ನಮೂದಿಸಿದ ವಿಚಾರ ಧಾರ್ಮಿಕ ಸ್ವಾತಂತ್ರ್ಯಕ್ಕೆ ದಕ್ಕೆ ತರುವ ವಿಚಾವಾಗಿದೆ. ಹೀಗಾಗಿ ಈ ಸೂಚನೆಯನ್ನು ರದ್ದು ಪಡಿಸುವಂತೆ ರೈಲ್ವೇ ಇಲಾಖೆಗೆ ಸೂಚಿಸಬೇಕು ಎಂದು ಹಿಂದೂ ಸಂಘಟನೆಯ ಪ್ರಮುಖರು ಒತ್ತಾಯಿಸಿದ್ದಾರೆ.

Continue Reading
Advertisement

Trending

Copyright © 2025 Namma Kudla News

You cannot copy content of this page