Connect with us

DAKSHINA KANNADA

ಮಂಗಳೂರು : ಕಾಂತಾರ ಸಿನಿಮಾ ನಟನ ಹೊಸ ಫಿಲ್ಮ್ ಶೂಟ್ ಸೆಟ್‌ನಲ್ಲಿ ಅ*ಗ್ನಿ ಅವಘಡ

Published

on

ಮಂಗಳೂರು : ಮೂವಿ ಶೂಟಿಂಗ್‌ ಸೆಟ್‌ನಲ್ಲಿ ಅ*ಗ್ನಿ ಅವಘಡ ಸಂಭವಿಸಿರುವ ಘಟನೆ ಇಂದು (ಜ.28) ಮಂಗಳೂರು ನಗರದ ಹೊರವಲಯದಲ್ಲಿ ನಡೆದಿದೆ.

ಕಾಂತಾರ ಸಿನಿಮಾ ಖ್ಯಾತಿಯ ʼಗುರುವʼ ಸ್ವರಾಜ್‌ ಶೆಟ್ಟಿ ಈ ಸಿನಿಮಾದಲ್ಲಿ ನಟನೆ ಜೊತೆಗೆ ಚಿತ್ರಕಥೆ, ನಿರ್ದೇಶನ ಮಾಡುತ್ತಿದ್ದು, ಬಹುನಿರೀಕ್ಷಿತ ಮೂವಿ ‘ನೆತ್ತರಕೆರೆ’ ಯಾಗಿದೆ.

ಇದನ್ನೂ ಓದಿ : ಶಿಲ್ಪಾ ಶೆಟ್ಟಿಗೆ ಪ್ರೀತಿಯಲ್ಲಿ ಮೋಸಹೋಗಲು ಕಾರಣವಾದ ಆ ನಟ ಯಾರು ಗೊತ್ತಾ ?

‘ನೆತ್ತರಕೆರೆʼ ಎಂಬ ಸಿನಿಮಾವು ತುಳು ಮತ್ತು ಕನ್ನಡ ಭಾಷೆಯಲ್ಲಿ ಬರುತ್ತಿದ್ದು,  ಇದರ ಚಿತ್ರೀಕರಣದಲ್ಲಿ ಹಾಕಿದ್ದ ಸೆಟ್‌ನ ಅಡುಗೆ ಕೋಣೆಯಲ್ಲಿ ಬೆಂ*ಕಿ ಕಾಣಿಸಿಕೊಂಡಿದೆ. ಅದನ್ನು ಕಂಡು ಕಂಗಾಲಾದ ತಂಡ ಏನು ಮಾಡಬೇಕೆಂದು ತೋಚದೆ, ತಕ್ಷಣವೇ ಟ್ಯಾಂಕರ್‌ ಮೂಲಕ ನೀರು ತಂದು ಬೆಂ*ಕಿ ಆರಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅದೃಷ್ಟವಶಾತ್ ಭಾರೀ ಅನಾಹುತ ತಪ್ಪಿದೆ ಎನ್ನಲಾಗಿದೆ.

DAKSHINA KANNADA

ಶಿರಾಡಿ ಕೊಡ್ಯಕಲ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿ; ಚಾಲಕನಿಗೆ ಗಂಭೀರ ಗಾಯ

Published

on

ಪುತ್ತೂರು: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಕೊಡ್ಯಕಲ್ ಬಳಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿ, ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ನಡೆದಿದೆ.

ಗಾಯಗೊಂಡ ಚಾಲಕನನ್ನು ಉತ್ತರಪ್ರದೇಶದ ನಿವಾಸಿ ರಾಕೇಶ್ ಯಾದವ್ (45) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಬೆಂಗಳೂರು ಕಡೆಗೆ ಗ್ಯಾಸ್ ಸಾಗಿಸುತ್ತಿದ್ದ ಟ್ಯಾಂಕರ್, ಕೊಡ್ಯಕಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ.

ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು. ಪ್ರಾಥಮಿಕ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಎಜೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಇದನ್ನೂ ಓದಿ: ಪುತ್ತೂರು: ಟೆಂಪೊ ಟ್ರಾವೆಲರ್‌ ಮತ್ತು ಕಾರು ಮುಖಾಮುಖಿ ಢಿಕ್ಕಿ

ಸದ್ಯಕ್ಕೆ ಟ್ಯಾಂಕರ್ ನಿಂದ ಯಾವುದೇ ಅನಿಲ ಸೋರಿಕೆ ಸಂಭವಿಸಿಲ್ಲ. ಆದರೆ ಸುರಕ್ಷತೆ ದೃಷ್ಟಿಯಿಂದ ಹೆದ್ದಾರಿಯ ಒಂದು ಬದಿಯಲ್ಲಿ ಮಾತ್ರ ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಯಿತು. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆಯ ಪೊಲೀಸರು ಭೇಟಿ ನೀಡಿದ್ದಾರೆ.

Continue Reading

DAKSHINA KANNADA

ಪುತ್ತೂರು: ಟೆಂಪೊ ಟ್ರಾವೆಲರ್‌ ಮತ್ತು ಕಾರು ಮುಖಾಮುಖಿ ಢಿಕ್ಕಿ

Published

on

ಪುತ್ತೂರು: ಟೆಂಪೊ ಟ್ರಾವೆಲರ್‌ ವಾಹನ ಮತ್ತು ಕಾರು ಮುಖಾಮುಖಿ ಢಿಕ್ಕಿಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ಬೊಳುವಾರು ಸಮೀಪ ತಡ ರಾತ್ರಿ ವೇಳೆ ಸಂಭವಿಸಿದ್ದು ಪ್ರಯಾಣಿಕರು ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಂಗಳೂರಿನಿಂದ ಮೈಸೂರು ಕಡೆಗೆ ಸಂಚರಿಸುತ್ತಿದ್ದ ಟೆಂಪೊ ಟ್ರಾವೆಲರ್‌ ಮತ್ತು ಪುತ್ತೂರಿನಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಬಲೇನೋ ಕಾರು ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಹಲವು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಆದರೆ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಮಾವಿನ ಹಣ್ಣು ತಿನ್ನುವಾಗ ಗಂಟಲಲ್ಲಿ ವಾಟೆ ಸಿಲುಕಿ ವ್ಯಕ್ತಿ ಸಾ*ವು

ಪುತ್ತೂರಿನ ಬೈಪಾಸ್‌ ರಸ್ತೆಯ ಅಪಾಯಕಾರಿ ತಿರುವಿನಲ್ಲಿ ಅಪಘಾತ ನಡೆದಿದೆ. ಢಿಕ್ಕಿಯ ರಭಸಕ್ಕೆ ಟೆಂಪೊ ಟ್ರಾವೆಲರ್‌ 50 ಮೀಟರ್ ದೂರಕ್ಕೆ ಖಾಸಗಿ ರಸ್ತೆಯಲ್ಲಿ ಮುಂದಕ್ಕೆ ಸಾಗಿ ನಿಂತಿದೆ.

Continue Reading

DAKSHINA KANNADA

ಭೌತಿಸ್ ಟೈಲರ್ ಖ್ಯಾತಿಯ ಬ್ಯಾಪ್ಟಿಸ್ಟ್ ಡಿ’ಕುನ್ಹಾ ಇನ್ನಿಲ್ಲ

Published

on

ಮಂಗಳೂರು: ಬಂಟ್ವಾಳ ಮೂಲದವರಾಗಿದ್ದು, ಪ್ರಸ್ತುತ ಮಂಗಳೂರಿನ ಬಿಕರ್ನಕಟ್ಟೆ ಜಯಶ್ರೀ ಗೇಟ್‌ನಲ್ಲಿ ವಾಸ್ತವ್ಯ ಮಾಡುತ್ತಿದ್ದ ಬ್ಯಾಪ್ಟಿಸ್ಟ್ ಡಿ’ಕುನ್ಹಾ (85) ಅವರು ನಿನ್ನೆ ಖಾಸಗಿ ಆಸ್ಪತ್ರೆಯಲ್ಲಿ ನಿಧ*ನ ಹೊಂದಿದರು.

ಮೃತರು ಪತ್ನಿ, ಇಬ್ಬರು ಪುತ್ರಿಯರು ಮತ್ತು ಮಹಾರಾಷ್ಟ್ರದ ಕನ್ನಡಿಗ ಪತ್ರಕರ್ತರ ಸಂಘದಅಧ್ಯಕ್ಷ ರೋನ್ಸ್ ಬಂಟ್ವಾಳ್‌ ಸಹಿತ ಮೂವರು ಪುತ್ರರನ್ನು ಅಗಲಿದ್ದಾರೆ.

ಬಂಟ್ವಾಳದ ಪಾಣೆಮಂಗಳೂರಿನಲ್ಲಿ ಟೈಲರಿಂಗ್‌ ವೃತ್ತಿ ನಡೆಸುತ್ತಿದ್ದ ಅವರು ಭೌತಿಸ್ ಟೈಲರ್ ಎಂದೇ ಪ್ರಸಿದ್ಧಿ ಪಡೆದಿದ್ದರು. ಸರ್ವ ಜನೋಪಕಾರಿಯಾಗಿದ್ದರು. ಬಂಟ್ವಾಳ ತಾಲೂಕಿನ ಮೊಗರ್ನಾಡ್ ಚರ್ಚಿನ ಪಾಲನಾ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮೆಲ್ಕಾರ್ ಯುವಕ ಸಂಘದ ಅಧ್ಯಕ್ಷರಾಗಿ ‘ಮೆಲ್ಕಾರ್ ದಸರಾ ಟ್ಯಾಬ್ಲೋ ರೂವಾರಿ’ ಯಾಗಿ ಎಲ್ಲಾ ಸಮುದಾಯದವರ ಗೌರವಕ್ಕೆ ಪಾತ್ರರಾಗಿದ್ದರು. ಸಾಮರಸ್ಯದ ಬದುಕಿಗೆ ಪ್ರೇರಕರಾಗಿದ್ದರು.

ಇದನ್ನೂ ಓದಿ: ಪುತ್ತೂರು ಪುರಸಭೆಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಬಿ.ಎ.ರಹಿಮಾನ್ ಅನಾರೋಗ್ಯದಿಂದ ವಿಧಿವಶ

ಐವತ್ತು ವರ್ಷಗಳ ಹಿಂದೆಯೇ ಸುಮಾರು 37 ಬಡ ಮಕ್ಕಳ ಪೋಷಕರಾಗಿಯೂ ಸೇವೆ ಸಲ್ಲಿಸಿದ್ದರು. ಬಳಿಕ ಬಂಟ್ವಾಳದ ಮೊಡಂಕಾಪು ಇನ್ಫೆoಟ್ ಜೀಸಸ್ ಚರ್ಚ್ ನಲ್ಲಿ ಪಾಲನಾ ಸಮಿತಿ ಸದಸ್ಯರಾಗಿ, ‘ತಿಸ್ರಿ ಓಡ್ದ್’ ಸಂಸ್ಥೆಯ ಅಧ್ಯಕ್ಷರಾಗಿ, ಕ್ಯಾಥೋಲಿಕ್ ಸಭಾ ಸದಸ್ಯರಾಗಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page