Connect with us

DAKSHINA KANNADA

ಬಂಟ್ವಾಳ : ಶ್ರೀ ದೇವಕಿಕೃಷ್ಣ ರವಳನಾಥ ಮಂದಿರದಲ್ಲಿ ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು

Published

on

ಬಂಟ್ವಾಳ : ದೇವಾಲಯದ ಬಾಗಿಲಿನ ಚಿಲಕ ಮುರಿದು ಒಳ ಪ್ರವೇಶಿಸಿದ ಕಳ್ಳರ ದಂಡು, ನೂರಾರು ವರ್ಷಗಳ ಇತಿಹಾಸವಿದ್ದ ದೇವರಿಗೆ ಸಂಬಂಧಿಸಿದ ಲಕ್ಷಾಂತರ ರೂ ಮೌಲ್ಯ ಬೆಲೆಬಾಳುವ ಚಿನ್ನ ಹಾಗೂ ಬೆಳ್ಳಿಯ ವಸ್ತುಗಳನ್ನು ದೋಚಿಕೊಂಡು ಹೋದ ಘಟನೆ ಫರಂಗಿಪೇಟೆ ಶ್ರೀ ದೇವಕಿಕೃಷ್ಣ ರವಳನಾಥ ಮಂದಿರದಲ್ಲಿ ಸೋಮವಾರ (ನ.04) ಮುಂಜಾನೆ ನಡೆದಿದೆ.

ದೇವಳಕ್ಕೆ ಸಂಬಂಧಿಸಿದಂತೆ ಹಿರಿಯರು ಮಾಡಿಸಿದಂತ ಸುಮಾರು ಒಂದುವರೆ ಕೆ.ಜಿ‌ ತೂಕದ ಬೆಳ್ಳಿಯ ದೇವರ ಪೀಠ ಹಾಗೂ ಬಂಗಾರದ ದೇವರ ಮೂಗುತಿ ದೇವರ ಕೊಡೆ ಸೇರಿದಂತೆ ಒಟ್ಟು 2 ಕೆ.ಜಿ.ಯಷ್ಟು ಬೆಳ್ಳಿ ಹಾಗೂ 3 ಪವನ್ ಚಿನ್ನ ಕಳವಾಗಿದೆ. ಇದರ ಜೊತೆಗೆ ಕಾಣಿಕೆ ಹುಂಡಿಯಲ್ಲಿರುವ ನಗದನ್ನು ಕೊಂಡುಹೋಗಿದ್ದಾರೆ.

ಆದಿತ್ಯವಾರ ಮಂದಿರದಲ್ಲಿ ವಿಶೇಷವಾದ ಪೂಜಾ ಕಾರ್ಯಕ್ರಮವಿದ್ದ ಕಾರಣ ಕಾಣಿಕೆ ಹುಂಡಿಯಲ್ಲಿ ಸುಮಾರು ಹತ್ತು ಸಾವಿರಕ್ಕೂ ಅಧಿಕ ಹಣವಿರಬಹುದು ಎಂದು ಹೇಳಲಾಗುತ್ತಿದೆ.

ಸಿ.ಸಿ.ಕ್ಯಾಮರಾದಲ್ಲಿ ದೃಶ್ಯ ಸೆರೆ :

ಸುಮಾರು 5 ಜನರ ತಂಡ ಈ ಕಳ್ಳತನದಲ್ಲಿ ಭಾಗಿಯಾಗಿರುವುದು ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ. ವಾಹನದ ಮೂಲಕ ಬಂದ ಕಳ್ಳರ ತಂಡ ಸುಮಾರು 3.30 ರ ಸಮಯದಲ್ಲಿ ದೇವಸ್ಥಾನದ ಹಿಂಬದಿಯ ಬಾಗಿಲಿನ ಚಿಲಕ ಮುರಿದು ಒಳಪ್ರವೇಶ ಮಾಡಿದ್ದಾರೆ. ಬಳಿಕ ದೇವಸ್ಥಾನದ ಸುತ್ತಲೂ ತಿರುಗಾಡಿ ಮಾಹಿತಿ ಪಡೆದುಕೊಂಡು, ಗರ್ಭಗುಡಿಯ ಒಳಗೆ ಪ್ರವೇಶ ಮಾಡಿದ್ದಾರೆ. ಅಲ್ಲಿ ಬೆಳ್ಳಿಯ ದೇವರ ಪೀಠ ಹಾಗೂ ಬಂಗಾರದ ವಸ್ತುಗಳನ್ನು ಗೋಣಿಯಲ್ಲಿ ತುಂಬಿಸಿಕೊಂಡು ದೇವಳದ ಗೋಪುರಕ್ಕೆ ಬಂದು, ಕಳ್ಳತನ ಮಾಡಿದ ಎಲ್ಲಾ ಬೆಳೆಬಾಳುವ ವಸ್ತುಗಳನ್ನು ಒಂದೇ ಚೀಲದಲ್ಲಿ ಭದ್ರಗೊಳಿಸಿ ವಾಪಸು ಹೋಗುವ ದೃಶ್ಯ ಕಂಡು ಬಂದಿದೆ.

ನಾಯಿ ನೀಡಿದ ಸುಳಿವು :

ದೇವಸ್ಥಾನದ ಕಂಪೌಂಡ್ ನ ಒಳಗಡೆಯೇ ಅರ್ಚಕರ ಮನೆಯಿದೆ. ಆದರೂ ಕಳ್ಳರು ಕಳ್ಳತನ ಧೈರ್ಯದಿಂದ ಕಳ್ಳತನ ಮಾಡಿದ್ದಾರೆ. ಕಳ್ಳರು ದೇವಸ್ಥಾನದ ಒಳಗೆ ಪ್ರವೇಶ ಮಾಡುವುದನ್ನು ಇವರ ಸಾಕು ನಾಯಿ ಗಮನಿಸಿ ಜೋರಾಗಿ ಬೊಗಳಲು ಆರಂಭಿಸಿದೆ. ನಾಯಿ ಬೊಗಳಿದ್ದರಿಂದ ಅರ್ಚಕರಿಗೆ ಎಚ್ಚರವಾಗಿದೆ. ನಾಯಿ ಯಾಕೆ ಬೊಗಳುತ್ತಿದೆ ಎಂದು ಸಿ.ಸಿ.ಕ್ಯಾಮರಾವನ್ನು ನೋಡಿದಾಗ ದೇವಸ್ಥಾನದ ಒಳಗೆ ಮೂವರು ಕಂಡುಬಂದಿದ್ದಾರೆ. ಕೂಡಲೇ ಅರ್ಚಕರು ದೇವಸ್ಥಾನದ ಮ್ಯಾನೇಜರ್ ಅವರಿಗೆ ವಿಚಾರ ತಿಳಿಸಿದ್ದಾರೆ. ಕೈಯಲ್ಲಿ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಮೂವರು ದೇವಸ್ಥಾನದ ಒಳಗೆ ಇದ್ದು, ನನಗೆ ಒಬ್ಬನಿಗೆ ಹೋಗಲು ಹೆದರಿಕೆ ಆಗುತ್ತಿದ್ದು ಅವರನ್ನು ಬರುವಂತೆ ತಿಳಿಸಿದ್ದಾರೆ. ಕೂಡಲೇ ಅವರು ಇಲ್ಲಿಗೆ ಬಂದರಾದರೂ ಅದಾಗಲೇ ಕಳ್ಳರು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಪ್ರಕರಣ ದಾಕಲು :

ಸಿ.ಸಿ.ಕ್ಯಾಮರಾ ಪರಿಶೀಲಿಸಿದಾಗ ಕಳ್ಳರು ಚಪ್ಪಲಿ ಧರಿಸದೆ ಗರ್ಭಗುಡಿಯೊಳಗೆ ಪ್ರವೇಶ ಮಾಡಿ, ಅಲ್ಲಿಂದ ಚಿನ್ನಾಭರಣಗಳನ್ನು ಕಳವು ಮಾಡುವ ದೃಶ್ಯ ಕಂಡು ಬಂತು. ಇದನ್ನು ಖಚಿತಪಡಿಸಿಕೊಂಡ ಬಳಿಕ ಗ್ರಾಮಾಂತರ ಪೊಲೀಸರಿಗೆ ದೂರು ನೀಡಲಾಗಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಗಳಾದ ಹರೀಶ್ ಮತ್ತು ಮೂರ್ತಿ ಭೇಟಿ ನೀಡಿದ್ದಾರೆ. ಜೊತೆಗೆ ಶ್ವಾನದಳ ಮತ್ತು ಬೆರಳಚ್ಚುತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

DAKSHINA KANNADA

ಡಿ.6ರಂದು ಸಹಕಾರ ರತ್ನ ಭಾಸ್ಕರ್ ಎಸ್. ಕೋಟ್ಯಾನ್‌ ಅವರಿಗೆ ನಾಗರಿಕ ಪೌರ ಸನ್ಮಾನ

Published

on

ಮಂಗಳೂರು: ಕರ್ನಾಟಕ ಸರಕಾರದ 2025 ನೇ ಸಾಲಿನ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಕೊಳಕೆ ಇರ್ವತ್ತೂರು ಭಾಸ್ಕರ್ ಎಸ್. ಕೋಟ್ಯಾನ್‌ ಅವರಿಗೆ ನಾಗರಿಕ ಪೌರ ಸನ್ಮಾನ ಡಿಸೆಂಬರ್ 6 ರಂದು ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಭಾಸ್ಕರಾಭಿನಂದನಾ ಸಮಿತಿ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಭಾಸ್ಕರ್ ಎಸ್. ಕೋಟ್ಯಾನ್‌ ಅವರು ಸಹಕಾರ, ಕಂಬಳ, ಕೃಷಿ, ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರಗಳಿಗೆ ಕೊಡುಗೆ ನೀಡಿದ ದಕ್ಷಿಣ ಕನ್ನಡ ಜಿಲ್ಲೆಯ ಅಪರೂಪದ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ಈ ವರ್ಷ ರಾಜ್ಯ ಸರಕಾರ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ. ಈ ಹಿನ್ನೆಲೆಯಲ್ಲಿ ಅವರ ಅಭಿಮಾನಿಗಳೆಲ್ಲ ಸೇರಿ ಸಾರ್ವಜನಿಕವಾಗಿ ಅವರನ್ನು ಅಭಿನಂದಿಸಲು ತೀರ್ಮಾನಿಸಿದ್ದಾರೆ ಎಂದು ಭಾಸ್ಕರಾಭಿನಂದನಾ ಸಮಿತಿಯ ಸಂಚಾಲಕ ಚಿತ್ತರಂಜನ್ ಬೋಳಾರ್‌ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಪುರಭವನದಲ್ಲಿ ಡಿಸೆಂಬರ್ 6 ರಂದು ಅಪರಾಹ್ನ 3 ಗಂಟೆಗೆ ಚಿತ್ರನಟ ಮಂಜು ರೈ ಮೂಳೂರು ಅವರ ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಸಮಾರಂಭಕ್ಕೆ ಚಾಲನೆ ಸಿಗಲಿದೆ. 3.45 ಕ್ಕೆ ಸಭಾ ಕಾರ್ಯಕ್ರಮ ಆರಂಭವಾಗಲಿದೆ.

 

ಸೋಲೂರು ಮಠದ ಆರ್ಯ ಈಡಿಗ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡುವರು. ಶಾಸಕ ಸುನಿಲ್ ಕುಮಾರ್ ಅಧ್ಯಕ್ಷತೆಯಲ್ಲಿ  ಸಂಸದ ಬ್ರಿಜೇಶ್ ಚೌಟ ದೀಪ ಬೆಳಗಿಸುವರು. ಸ್ಪೀಕರ್ ಯು.ಟಿ. ಖಾದರ್ ಭಾಸ್ಕರಾಭಿನಂದನೆಯನ್ನು ನೆರವೇರಿಸಲಿದ್ದಾರೆ. ಜಿಲ್ಲೆಯ ಜನ ಪ್ರತಿನಿಧಿಗಳು ಮತ್ತು ಗಣ್ಯರು ಅತಿಥಿಗಳಾಗಿ ಉಪಸ್ಥಿತರಿರುವರು ಎಂದು ವಿವರಿಸಿದರು.

ಸುದ್ದಿಗೋಷ್ಟಿಯಲ್ಲಿ ಭಾಸ್ಕರಾಭಿನಂದನಾ ಸಮಿತಿಯ ಪ್ರಧಾನ ಸಂಚಾಲಕ ಸದಾನಂದ ಪೂಜಾರಿ, ಸಂಚಾಲಕ ಕೆ.ಟಿ. ಸುವರ್ಣ ಮತ್ತಿತರರು ಇದ್ದರು.

 

Continue Reading

DAKSHINA KANNADA

ಡಿ.7ರಂದು ಶಾರದಾ ವಿದ್ಯಾಲಯದಲ್ಲಿ ಹೊನಲು ಬೆಳಕಿನ ಕ್ರೀಡೋತ್ಸವ, ಸಾಂಸ್ಕೃತಿಕ ವೈಭವ

Published

on

ಮಂಗಳೂರು: ಮಕ್ಕಳಲ್ಲಿ ಶಿಸ್ತು, ಧೈರ್ಯ ಹಾಗೂ ಸಾಹಸ ಮನೋಭಾವವನ್ನು ಬೆಳೆಸುವ ನಿಟ್ಟಿನಲ್ಲಿ ಸಾಹಸ ಕ್ರೀಡೆ, ನೃತ್ಯ, ಸಂಗೀತ ಇವೆಲ್ಲವುಗಳನ್ನೊಳಗೊಂಡ ಹೊನಲು ಬೆಳಕಿನ ಕ್ರೀಡೋತ್ಸವ ಡಿ7ರ ಭಾನುವಾರದದಂದು ಶಾರದಾ ವಿದ್ಯಾಲಯದ ಭೂವರಾಹ ಬಯಲು ಸಭಾಂಗಣದಲ್ಲಿ ನಡೆಯಲಿದೆ ಎಂದು ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಪ್ರೊ. ಎಂ.ಬಿ ಪುರಾಣಿಕ್ ಹೇಳಿದರು.

ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಈ ಬಾರಿಯ ಕ್ರೀಡೋತ್ಸವ ಸಮಾರಂಭವನ್ನು ಮೈಸೂರಿನ ಸಂಸದ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರು ಆಗಮಿಸಲಿದ್ದಾರೆ. ಸಾಹಸ ಕ್ರೀಡೆ, ಸಾಂಸ್ಕೃತಿಕ ಪ್ರದರ್ಶನದಲ್ಲಿ ಸುಮಾರು 2000 ಮಂದಿ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಶಾರದಾ ಸಮೂಹ ಶಿಕ್ಷಣ ಸಂಸ್ಥೆಗಳ ಸಿಇಒ ಸಮೀರ್ ಪುರಾಣಿಕ್ ಮಾತನಾಡಿ 4ನೇ ತರಗತಿಯಿಂದ ಪಿಯುಸಿವರೆಗಿನ ವಿದ್ಯಾರ್ಥಿಗಳು ಈ ಕ್ರೀಡೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಲ್ಲಕಂಬ, ಫೈರ್ ಜಂಪ್, ಯೋಗಾಸನ ಸೇರಿದಂತೆ ಪಿರಮಿಡ್ ರಚನೆಯ ಕ್ರೀಡಾ ಪ್ರದರ್ಶನ ಪ್ರೇಕ್ಷಕರನ್ನು ರಂಜಿಸಲಿದೆ ಎಂದು ಹೇಳಿದರು.

ಇದನ್ನೂ ಓದಿ: WATCH : ಉಡುಪಿ: ಶಾಲೆಯ ರೋಡ್ ಸರಿ ಇಲ್ಲ…ನಗರಸಭೆ ಆಯುಕ್ತರಿಗೆ ದೂರು ಕೊಟ್ಟ ಪುಟ್ಟ ವಿದ್ಯಾರ್ಥಿ

ಸಂಸ್ಥೆಯ ಪ್ರಾಂಶುಪಾಲ ದಯಾನಂದ ಕಟೀಲ್ ಶೋಭಾಯಾತ್ರೆಯಲ್ಲಿ ಒಡೆಯರನ್ನು ಕಾರ್ಯಕ್ರಮಕ್ಕೆ ಬರಮಾಡಿಕೊಳ್ಳಲಾಗುತ್ತದೆ. ಈ ಕ್ರೀಡೋತ್ಸವಕ್ಕೆ ಮಕ್ಕಳನ್ನು ತಯಾರು ಮಾಡಲು ಯಾವುದೇ ತರಬೇತುದಾರರಿಲ್ಲ. ಶಾರದಾ ಕುಟುಂಬ ಜೊತೆಯಾಗಿ ಸೇರಿಕೊಂಡೇ ಮಕ್ಕಳನ್ನು ಸಿದ್ಧಪಡಿಸಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಟ್ರಸ್ಟಿ ಸುಧಾಕರ್ ಪೇಜಾವರ, ಶಾರದಾ ಪಿಯು ಕಾಲೇಜು ಪ್ರಾಂಶುಪಾಲ ಪ್ರಕಾಶ್ ನಾಯಕ್ ಉಪಸ್ಥಿತರಿದ್ದರು.

Continue Reading

DAKSHINA KANNADA

ಕುದ್ರೋಳಿ ಭಗವತಿ ಕ್ಷೇತ್ರಕ್ಕೆ ವರ್ಕಳ ಶಿವಗಿರಿ ಮಠದ ಶ್ರೀಗಳ ಭೇಟಿ

Published

on

ಮಂಗಳೂರು: ಬ್ರಹ್ಮಶ್ರೀ ನಾರಾಯಣ ಗುರು ಮತ್ತು ಮಹಾತ್ಮ ಗಾಂಧೀಜಿಯವರ ನಡುವಿನ ಐತಿಹಾಸಿಕ ವರ್ಕಳ ಶಿವಗಿರಿ ಸಂವಾದವು ಮಂಗಳೂರು ವಿವಿಯಲ್ಲಿ ನಡೆದಿದ್ದು, ಕಾರ್ಯಕ್ರಮಕ್ಕೆ ಆಶೀರ್ವಚನವನ್ನು ನೀಡಲು ಆಗಮಿಸಿದ್ದ ಶಿವಗಿರಿ ಮಠದ ಪೀಠಾಧಿಪತಿ ಬ್ರಹ್ಮಶ್ರೀ ಸಚ್ಚಿದಾನಂದ ಸ್ವಾಮಿ ಇಂದು ಕುದ್ರೋಳಿ ಶ್ರೀ ಭಗವತೀ ಕ್ಷೇತ್ರಕ್ಕೆ ಭೇಟಿ ನೀಡಿದರು.

ಈ ಸಂದರ್ಭ ಕುದ್ರೋಳಿ ಕ್ಷೇತ್ರಾಡಳಿತ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದು, ಯತಿವರೇಣ್ಯರನ್ನು ಸ್ವಾಗತಿಸಿದರು. ಮಹಿಳಾ ಸಮಿತಿ ಸದಸ್ಯರು ಅವರ ಆಗಮನದುದ್ದಕ್ಕೂ ಪೂರ್ಣಕುಂಭ ಸ್ವಾಗತಿಸಿದರು.

ಇದೇ ವೇಳೆ ಶ್ರೀಗಳು ಬ್ರಹ್ಮಶ್ರೀ ನಾರಾಯಣ ಗುರುಗಳ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಆರತಿ ಬೆಳಗಿದರು. ಅಲ್ಲದೆ ಮಂತ್ರಪಠಣ ಮಾಡಿದರು. ಭಕ್ತರನ್ನು ಉದ್ದೇಶಿಸಿ ಆಶೀರ್ವಚನ ನೀಡಿದರು. ಬಳಿಕ ಭಗವತಿ ಕ್ಷೇತ್ರದಲ್ಲಿ ಶ್ರೀಗಳಿಗೆ ವಿಶೇಷ ಗೌರವಾರ್ಪಾಣೆ ಕ್ಷೇತ್ರದ ವತಿಯಿಂದ ನೀಡಲಾಯಿತು. ಪ್ರಾರ್ಥನೆ ನೆರವೇರಿಸಿದ ಪ್ರಸಾದ ವಿತರಿಸಲಾಯಿತು.

ಇದೇ ವೇಳೆ ಶ್ರೀ ಭಗವತಿ ಕ್ಷೇತ್ರಕ್ಕೆ ವರ್ಕಳ ಶಿವಗಿರಿ ಮಠದ ಶ್ರೀ ಜ್ಞಾನಾನಂದ ತೀರ್ಥ ಸ್ವಾಮೀಜಿ ಅವರೂ ಭೇಟಿ ನೀಡಿದ್ದು, ಅವರನ್ನೂ ಕ್ಷೇತ್ರಾಡಳಿತ ಮಂಡಳಿ ಸಮಿತಿ ಪದಾಧಿಕಾರಿಗಳು ಸ್ವಾಗತಿಸಿ, ಗೌರವಿಸಿದರು.

ಮೊಕ್ತೇಸರರಾದ ರವೀಂದ್ರ, ರಾಜ್ ಗೋಪಾಲ್, ವೈಬಿ ಸುಂದರ್, ಉಷಾ ಪ್ರಭಾಕರ್, ಕಾರ್ಯದರ್ಶಿ ಸುಧೀರ್ ಬಿ, ಆಶಾ ಚಂದ್ರಮೋಹನ್, ದಿನೇಶ್ ಕುಂಪಲ, ರಾಕೇಶ್, ಶಿವ ಪ್ರಸಾದ್, ಆಚಾರಪಟ್ಟವರು, ಗುರಿಕಾರರು, ಮಹಿಳಾ ಸೇವಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Continue Reading
Advertisement

Trending

Copyright © 2025 Namma Kudla News

You cannot copy content of this page